ದಿನದ ಸುದ್ದಿ
ಒಂದು ಸುಳ್ಳು ಸುದ್ದಿಗೆ 29 ಪ್ರಾಣ ಬಲಿ..!
ಸುದ್ದಿದಿನ ಡೆಸ್ಕ್ : ಕಳೆದ ಒಂದು ವರ್ಷದಿಂದ ವ್ಯಾಟ್ಸಪ್ ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದ ಒಂದೇ ಒಂದು ಸುಳ್ಳು ಸುದ್ದಿಗೆ 29 ಜೀವಗಳನ್ನು ಬಲಿಯಾಗಿವೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಪ್ರಾಣ ಹಾನಿಯಾಗಿದ್ದರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಸಾವುಗಳ ಪ್ರಕರಣದಲ್ಲಿ ರಾಜಕೀಯ ಕೈವಾಡವಿಲ್ಲ, ಹಿಂದು- ಮುಸ್ಲಿಂ ಡಿಸ್ಪ್ಯುಟ್ ಅಲ್ಲ, ಜಾತಿ ವೈಷಮ್ಯ ಇಲ್ಲ, ಇಂಡಿಯಾ- ಪಾಕಿಸ್ತಾನ, ಬಿಜೆಪಿ- ಕಾಂಗ್ರೆಸ್, ಜಿಹಾದ್, ನಕ್ಸಲ್ ಚಟುವಟಿಕೆ, ಆರೆಸ್ಸೆಸ್, ಕಾಶ್ಮೀರ, ಇದ್ಯಾವುದೇ ವಿಷಯಗಳಿಗೆ ಜೀವಗಳು ಬಲಿಯಾಗಿಲ್ಲ. ಹಾಗಾದ್ರೆ ಯಾವ ವಿಷಯಕ್ಕೆ ಪ್ರಾಣ ಬಲಿಯಾದವು ? ಎಂದರೆ
ದೇಶಾದ್ಯಂತ 29 ಜನರ ಪ್ರಾಣ ಹಾನಿಯಾಗಿದ್ದದರೂ ಏಕೆ ಪ್ರಶ್ನೆ ಕಾಡುತ್ತಿರ ಬಹುದು. ವ್ಯಾಟ್ಸಪ್ ನಲ್ಲಿ ಹರಿಬಿಟ್ಟ ಒಂದೇ ಒಂದು ಸುಳ್ಳು ಸುದ್ದಿ ಎಂದರೆ “ಮಕ್ಕಳ ಕಳ್ಳರು” ಬಂದಿದ್ದಾರೆ ಎಂಬುದು.
ಸದ್ಯ 29 ಜೀವಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಎರಡ್ಮೂರು ತಿಂಗಳಲ್ಲಿ 100ಕ್ಕೆ ತಲುಪ ಬಹುದಾದ ಆತಂಕವಿದೆ.
ಕಾರಣ ಏನಿರಬಹುದು?
ದೇಶದ ತಮಿಳುನಾಡಿನಿಂದ ತ್ರಿಪುರ ರಾಜ್ಯದ ವರೆಗೆ “ಮಕ್ಕಳ ಕಳ್ಳರ ಗ್ಯಾಂಗ್ ಬಂದಿದೆ, ಕದ್ದೊಯ್ಯಲಿದ್ದಾರೆ”. ಎಂಬ ವದಂತಿ ಕಾಳ್ಗಿಚ್ಚಿನಂತೆ ಹಬ್ಬಿದ್ದಕ್ಕೆ ಮುಖ್ಯ ಕಾರಣ ಕಡಿಮೆ ದರದಲ್ಲಿ ಇಂಟರ್ನೆಟ್, ಸ್ಮಾರ್ಟ್ ಫೋನ್ ಗಳು ಪರಿಚರಿಯಿಸಿದ್ದೇ ಆಗಿದೆ. ಸ್ಮಾರ್ಟ್ ಫೋನ್, ಇಂಟರ್ನೆಟ್ ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದು ಕೋಟ್ಯಂತರ ಜನರಿಗೆ ತಲುಪಿ ಭಯದ ವಾತಾವರಣ ನಿರ್ಮಿಸಿತ್ತು.
ಪ್ರಮುಖಾಂಶಗಳು
• ಅಪರಿಚಿತರು, ಅನಾಮಿಕರು, ಹೊರಗಿನವರ ಊರಿಗೆ ಬಂದಾಗ ಅವರನ್ನು ಅನುಮಾನದಿಂದ ನೋಡುವಂತೆ ಮಾಡಿತು.
•ಮಕ್ಕಳ ಕಿಡ್ನಾಪ್ ತಡೆಯುವ ಕುರಿತ ಪಾಕಿಸ್ತಾನದ ಕರಾಚಿಯಲ್ಲಿ ನಿರ್ಮಿಸಿದ ವಿಡಿಯೋ ವೈರಲ್ ಆಗಿತ್ತು.
• ವ್ಯಕ್ತಿಯೊಬ್ಬ ಮಗುವನ್ನು ಬೈಕ್ ನಲ್ಲಿ ಕಿಡ್ನಾಪ್ ಮಾಡುತ್ತಿರುವಂತಹ ದೃಶ್ಯ ವಿಡಿಯೋ ನಲ್ಲಿತ್ತು.
• ಈ ವಿಡಿಯೋವನ್ನು ಎಡಿಟ್ ಮಾಡಿ ದೇಶಾದ್ಯಂತ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಿಸಲಾಗಿತ್ತು.
• ಈ ವಿಡಿಯೋ ಹರಿದಾಡುತ್ತಿರುವ ಬಗ್ಗೆ ತಕ್ಷಣ ಯಾರೂ ಕ್ರಮ ಕೈಗೊಳ್ಳದೇ ಇರುವುದೇ ಜನರ ಪ್ರಾಣಕ್ಕೆ ಕುತ್ತು ತಂದಿತು.
ಈ ಕುರಿತಾಗಿ 2017-18ರ ಘಟನಾವಳಿಗಳು
2017ರ ಘಟನಾವಳಿಗಳು
• ಮೇ: 7 ಜಾರ್ಖಂಡ್ನಲ್ಲಿ ಸಾವನ್ನಪ್ಪಿದ್ದರು.
• ಮೇ 10: ತಮಿಳುನಾಡಿನಲ್ಲಿ 2 ಮಂದಿ ಕೊಲ್ಲಲ್ಪಟ್ಟರು.
• ಮೇ 23: ಈ ಸಂಬಂಧ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಬಂಧಿಸಲಾಗಿದೆ.
2018 ರ ಘಟನೆಗಳು
• ಮೇ: ಪ್ರತ್ಯೇಕ ಘಟನೆಗಳಲ್ಲಿ ಆಂಧ್ರ ಮತ್ತು ತೆಲಂಗಾಣದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
• 8 ಜೂನ್: 2 ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.
• 8 ಜೂನ್: 2 ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಹತ್ಯೆಗೈಯ್ಯಲಾಗಿದೆ.
• ಜೂನ್ 13: ಪಶ್ಚಿಮ ಬಂಗಾಳದ ಮಾಲ್ಟಾದಲ್ಲಿ ವ್ಯಕ್ತಿ ಹತ್ಯೆ ಮಾಡಿದರು.
• ಜೂನ್ 23: ಪಶ್ಚಿಮ ಬಂಗಾಳದ ಈಸ್ಟ್ ಮಿಡ್ನಾಪೋರ್ನಲ್ಲಿ ವ್ಯಕ್ತಿಯನ್ನು ಹತ್ಯೆಗೈಯಲಾಯಿತು.
• ಜೂನ್ 26: ಗುಜರಾತ್ನ ಅಹಮದಾಬಾದ್ನಲ್ಲಿ 45 ವರ್ಷ ವಯಸ್ಸಿನ ಭಿಕ್ಷುಕ ಮಹಿಳೆಯ ಕೊಲೆ.
• 28 ಜೂನ್: ಒಂದೇ ದಿನದಲ್ಲಿ ತ್ರಿಪುರದಲ್ಲಿ ಮೂವರು ಸಾವನ್ನಪ್ಪಿದರು, ವದಂತಿಗಳನ್ನು ವಜಾಗೊಳಿಸಲು ಸರ್ಕಾರದಿಂದ ನೇಮಕಗೊಂಡ ವ್ಯಕ್ತಿ ಸೇರಿದಂತೆ.
• ಜುಲೈ 1: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ 5 ಮಂದಿಯನ್ನು ಈ ಸಂಬಂಧ ಬಂಧಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು