Connect with us

ದಿನದ ಸುದ್ದಿ

ಸಂತೇಬೆನ್ನೂರು | ರಾಷ್ಟ್ರಪತಿ ಪದಕ ಪ್ರಶಸ್ತಿ ವಿಜೇತ ನಿವೃತ್ತ ಎ.ಸಿ.ಪಿ ರುದ್ರಪ್ಪ ಎಮ್ ಎನ್. ಅವರಿಗೆ ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನಾ ಕಾರ್ಯಕ್ರಮ

Published

on

ಹಿರಿಯ ಕಿರಿಯ ಅಧಿಕಾರಿಗಳು ಹಾಗೂ ಕುಟುಂಬದವರ ಸಹಕಾರ ಮತ್ತು ಸ್ವಂತ ಜ್ಞಾನವೆ ಕಾರಣ ಡಿವೈಎಸ್ಪಿ ಪ್ರಶಾಂತ್ ಜಿ ಮುನ್ನೂಳಿ ಅಭಿಮತ 

ಸುದ್ದಿದಿನ,ಚನ್ನಗಿರಿ/ಸಂತೇಬೆನ್ನೂರು:ಕುಟುಂಬಸ್ಥರ ಹಾಗೂ ಸಹಪಾಠಿ ಸ್ನೇಹಿತರನ್ನೊಳಗೊಂಡು ತಾನು ಓದಿದ ಶಾಲೆಯಲ್ಲಿ ಗ್ರಾಮಸ್ಥರಿಂದ ಸನ್ಮಾನವನ್ನು ಸ್ವೀಕರಿಸುವುದು ಅತ್ಯಂತ ಉನ್ನತ ಮಟ್ಟದ ಸನ್ಮಾನವಾಗಿದೆ, ಇದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಚನ್ನಗಿರಿ ಉಪವಿಭಾಗದ ಉಪಾದೀಕ್ಷರಾದ ಪ್ರಶಾಂತ್ ಜಿ ಮುನ್ನೂಳಿರವರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರಪತಿ ಪದಕ ಪ್ರಶಸ್ತಿ ಪಡೆಯಲು ಹಿರಿಯ -ಕಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸ್ವಂತ ಕುಟುಂಬದವರ ಸಹಕಾರ ಹಾಗೂ ಸ್ವಂತ ಜ್ಞಾನೇ ಕಾರಣ ಎಂದರು.

ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು
ಗ್ರಾಮದವರಾದ ಎಮ್,ಎನ್ ರುದ್ರಪ್ಪ ನಿವೃತ್ತ
ಪೋಲೀಸ್  ಉಪ ಆಯುಕ್ತರು ಸಂತೇಬೆನ್ನೂರು ಇವರು ಇತ್ತೀಚಿಗೆ ರಾಷ್ಟ್ರಪತಿ ಪದಕ  ಸ್ವೀಕರಿಸಿದ್ದರು.

ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪುರಸ್ಕೃತರಿಗೆ ಏರ್ಪಡಿಸಿದ್ದ ಅಭಿನಂದನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು. ಇಲಾಖೆಯ ಮೇಲಾಧಿಕಾರಿಗಳಿಂದ ಸಿಗುವ ಪ್ರಶಸ್ತಿಗಳು ದೊರೆತರೆ ತುಂಬಾನೆ ಖುಷಿ ಪಡುತ್ತೇವೆ ರಾಷ್ಟ್ರಪತಿಗಳ ಪದಕ ದೊರೆಯುವುದು ಸಾಕಷ್ಠು ಶ್ರಮ ಬೇಕಾಗುತ್ತದೆ.

ಸಂತೇಬೆನ್ನೂರು ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ವಿಶೇಷತೆಯನ್ನೊಳಗೊಂಡಿದ್ದವರಾಗಿದ್ದಾರೆ, ಇಲ್ಲಿನ ಪ್ರತಿಭೆಗಳು, ವ್ಯಕ್ತಿತ್ವಗಳು, ಸಾಧನೆಗಳು ಹಾಗೂ ಐತಿಹಾಸಿಕ ಕೊಡುಗೆಗಳು ಮತ್ತು ಈ ಊರಿನ ಜನರು ವಿಶೇಷತೆಯುಳ್ಳವರಾಗಿದ್ದಾರೆ. 15 ದಿನಗಳೊಳಗೆ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕ ಕಾರ್ಯಕ್ರಮ ರೂಪಿಸಲು ಗ್ಯಾಲಕ್ಸಿ ತಂಡದ ಸದಸ್ಯರಿಗೆ ಈ ಸಂದರ್ಭದಲ್ಲಿ ಸೂಚಿಸಿದರು.

ನಿವೃತ್ತ ಎ,ಸಿ,ಪಿ ರುದ್ರಪ್ಪ ಎಂ,ಎನ್ ನನ್ನ ಗುರುಗಳು  ಸಿ,ಪಿ,ಐ ಆರ್.ಆರ್. ಪಾಟೀಲ್ .
1978-79 ರಲ್ಲಿ ನಾನು ಧಾರಾವಾಡದ ವಿಧ್ಯಾರಣ್ಯ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ರುದ್ರಪ್ಪ ಎಮ್ ಎನ್ ಧೈಹಿಕ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು ಇವರು ಕ್ರೀಡಾಪಟುವಾಗಿ ಉನ್ನತ ಶಿಖರದಲ್ಲಿದ್ದರು, ಇವರ ಆಟದ ವೈಖರಿಯನ್ನ ನನ್ನ ಜೀವನದಲ್ಲಿ ಅಳವಡಿಸಿಕೊಂಡು ನಾನೊಬ್ಬ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲಿಕ್ಕೆ ಇವರ ಹಿತನುಡಿಗಳು , ನನ್ನ ಜೀವನದಲ್ಲಿ ಪರಿಣಾಮ ಬೀರಿದೆ ನನ್ನ ಗುರುಗಳ ಜನನ ಸ್ಥಳದಲ್ಲಿ ನಾನು ವೃತ್ತ ನಿರೀಕ್ಷಕನಾಗಿ ಸೇವೆ ಸಲ್ಲಿಸಲ್ಲಿಸುತ್ತಿರುವುದು ನನಗೆ ತುಂಭಾ ಹೆಮ್ಮೆಎನಿಸುತಿದೆ ಎಂದರು.

ಮುಖ್ಯಮಂತ್ರಿ ಪದಕ ಪ್ರಶಸ್ತಿ ವಿಜೇತರಾದ ಚನ್ನಗಿರಿ ವೃತ್ತ ನಿರೀಕ್ಷಕರಾದ ಆರ್ ಆರ್ ಪಾಟೀಲ್ ಮಾತನಾಡಿದರು. ನಂತರ ಸಂತೇಬೆನ್ನೂರು ಪಿಎಸ್ಐ ಎಸ್ ಎಸ್ ಮೇಟಿ ಮಾತನಾಡಿ ಸಂತೇಬೆನ್ನೂರು ಪೋಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿರುವುದು ನನ್ನ ಭಾಗ್ಯವಾಗಿದೆ ಎಂದರು. ಇಲ್ಲಿನ ಜನರ ಪ್ರೀತಿ ವಿಶ್ವಾಸ ಪ್ರೋತ್ಸಹ ಶ್ಲಾಘನೀಯವಾದುದು.

ಇಲ್ಲಿನ ಜನ ಶ್ರೇಯೋಬಿವೃದ್ದಿಗೆ ಗ್ಯಾಲಕ್ಸಿ ಟೀಮ್ ಹಾಗೂ ತಂಡ ಇಲಾಖೆಯೊಂದಿಗೆ ಸಹಕರಿಸಿರುತ್ತಾರೆ ಸಂತೇಬೆನ್ನೂರು ವಾಲಿಬಾಲ್ ಆಟದ ತವರೂರಾಗಿದೆ. ನೋಬೆಲ್ ಸನ್ಮಾನಕ್ಕಿಂತ ದೊಡ್ಡದಾದ ಹುಟ್ಟೂರಲ್ಲಿ ಕುಟುಂಬಸ್ಥರ ಜೊತೆ  ಸನ್ಮಾನ ಸ್ವಿಕರಿಸಿರು ಅತ್ಯುನ್ನತವಾಗಿದ್ದು ಬೆಳೆಯುವ ನಮ್ಮಂತ ಕಿರಿಯ ಅಧಿಕಾರಿಗಳಿಗೆ ನಿಮ್ಮ ಮಾರ್ಗದರ್ಶನ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿರೇಶ್ ಪ್ರಸಾದ್ ಕೆಎಸ್.ಪ್ರಜಾವಾಣಿ ವರದಿಗಾರರು ವಹಿಸಿ ಪ್ರಸ್ತಾವಿಕ ನುಡಿಯನ್ನು ನುಡಿದರು,  ಚಂದ್ರಶೇಖರ್ ಲೋಕಯುಕ್ತ ಡಿವೈಎಸ್ಪಿ ಗಂಗಾವತಿ, ಬಾಷಾ. ಅಬ್ದುಲ್ ರೆಹಮಾನ್ ನಿ,ಪೋಲೀಸ್ ಅಧೀಕ್ಷರು,ಬಸವರಾಜ ಮುಖಂಡರು. ಮೋಹನ್ ಕುಮಾರ್ ಪೋಲೀಸ್ ಉಪನಿರೀಕ್ಷಕರು ಮಾಯಕೊಂಡ. ಸಿದ್ದಪ್ಪ ಎಂ ಗ್ರಾಮದ ಹಿರಿಯ ಮುಖಂಡರು, ರಂಗನಾಥ್ ಜೆ, ಶಿವರುದ್ರಪ್ಪ .ಏಜೀಜ್ ಅಹಮದ್. ಮಹೇಶ್. ಗ್ರಾಮಸ್ಥರು ಮುಖಂಡರು,ಗ್ಯಾಲಕ್ಸಿ ತಂಡದ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


  • ಪ್ರಶಸ್ತಿ ವಿಜೇತ ನಿವೃತ್ತ ಎ.ಸಿ.ಪಿ ರುದ್ರಪ್ಪ ಎಮ್ .ಎನ್ ಮಾತು

ಸನ್ಮಾನ ಸ್ವೀಕರಿಸಿ ಮನದಾಳದ ಮಾತನಾಡಿದ  ರಾಷ್ಟ್ರಪತಿ ಪದಕ ಪ್ರಶಸ್ತಿ  ವಿಜೇತ ನಿವೃತ ಎ,ಸಿ,ಪಿ, ರುದ್ರಪ್ಪ ಎಮ್,ಎನ್ ನಾನು ಪೋಲಿಸ್ ಇಲಾಖೆಯ ವೃತ್ತಿಯಿಂದ ನಿವೃತ್ತಿ ಹೊಂದಿದಾಗ ಪುನಃ ನಾಲ್ಕು ದಿನಗಳ ವರೆಗೆ ಪೋಲೀಸ್ ಸಮವಸ್ತ್ರ ದರಿಸುವ ಬಾಗ್ಯ ಎಲ್ಲರಿಗೂ ಸಿಗುವುದಿಲ್ಲಾ ಇದು ನನ್ನ ಅದೃಷ್ಠ, ಇದಕ್ಕೆ ಕಾರಣ ನನ್ನ ತಂದೆ ತಾಯಿಗಳ ಆಶೀರ್ವಾದವೆ ಕಾರಣ ಎಂದರು.

ನನ್ನ ಸ್ನೇಹಿತರ ಜೊತೆ ಸೇರದೆ ಇದ್ದರೆ  ನಾನು ಎಸ್ ಎಸ್ ಎಲ್ ಸಿ ವರೆಗೆ ಅಷ್ಟೇ ವಿಧ್ಯಾಭ್ಯಾಸಕ್ಕೆ ಕೊನೆಗೊಳ್ಳುತಿತ್ತು. ಈ ಪ್ರಶಸ್ತಿಗೆ ಮೇಲಾಧಿಕಾರಿಗಳ ಮಾರ್ಗದರ್ಶನ, ಸಹದ್ಯೋಗಿಗಳ ಸಹಕಾರ ಇರದೆ ಎನನ್ನು ಸಾದಿಸಲಾಗುವುದಿಲ್ಲಾ. ನನ್ನ ವೃತ್ತಿಯ ಜೀವನದಲ್ಲಿ ಸಮಸ್ಯೆಗಳಿರುವ ಸ್ಥಳಗಳಿಗೆ ವರ್ಗಾಹಿಸುತಿದ್ದರು.

ನಾನು ಯಾವುದಕ್ಕೂ ಅಂಜದೆ ಕರ್ತವ್ಯವನ್ನು ನಿರ್ವಹಿಸುತ್ತ ಬಂದಿದ್ದೇನೆ, ನನ್ನ ಮಡದಿ ನನ್ನ ವರ್ಗ ಆದ ಕೂಡಲೆ ಲಗೇಜ್ ಕಟ್ಟಿ ಕಟ್ಟಿ ತುಂಬಾನೆ ನೊಂದಿದ್ದಾರೆ ಎಂದರು. ಕರ್ತವ್ಯೆವನ್ನು ನಿರ್ವಹಿಸಿದ್ದ ಸ್ಥಳಗಳ ಬಗ್ಗೆ ಈ ಸಂದರ್ಭದಲ್ಲಿ ಮೆಲುಕು ಹಾಕಿದರು.


ಸುದ್ದಿದಿನ.ಕಾಂ|ವಾಟ್ಸಾಪ್|9980346243 

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending