Connect with us

ರಾಜಕೀಯ

ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!

Published

on

  • ಬಿಂದು‌ ಗೌಡ

ತ್ತೀಚೆಗೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ದ್ವೇಷದಿಂದ 4 ದಿನಗಳ ವಿಚಾರಣೆ ನಡೆಸಿದ ಇಡಿ ಸಂಸ್ಥೆ ಬಂಧಿಸಿತು. ರಾಜ್ಯಾದಾದ್ಯಂತ ಪ್ರತಿಕಾರದ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಯಿತು ಈಗಲೂ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ, ಅವಹೇಳನಕಾರಿ ಪದಗಳಿಂದ ನಿಂದಿಸಲು ಪ್ರೋತ್ಸಾಹ ನೀಡುವ ತನ್ನ ಪವಿತ್ರವಾದ ವೃತ್ತಿಗೆ ಅವಮಾನ ಮಾಡುವ ಮಹಿಳೆಯೊಬ್ಬರು ವಿಡಿಯೋ ಒಂದನ್ನು ಮಾಡಿದ್ದಾರೆ. ಅವರಿಗೆ ತಾವು ಸಮರ್ಥಿಸುವ ಬಿಜೆಪಿ ಪಕ್ಷದ ಎಡಿಯೂರಪ್ಪ ಬಂಧನವಾಗಿದ್ದು ಲೋಕಾಯುಕ್ತ ನ್ಯಾಯಾಲಯದಲ್ಲಿ ವಕೀಲರೊಬ್ಬರು CRPC ಸೆಕ್ಷನ್ 200 ರ ಪ್ರಕಾರ ಸಲ್ಲಿಸಿದ ಖಾಸಗಿ ದೂರನ್ನ ಆಧರಿಸಿ ಅಕ್ರಮ ಡಿನೋಟಿಫಿಕೇಷನ್ ಆರೋಪದಲ್ಲಿ ಎಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದ್ದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರೇ ಹೊರತು ಆಗಿನ UPA ಸರ್ಕಾರ ಅಲ್ಲ.

ಇನ್ನು ಆಧುನಿಕ ಕೃಷ್ಣ ದೇವರಾಯನ ಹಾಗೆ ಬಿಂಬಿಸಿಕೊಳ್ಳುತ್ತಿದ್ದ ಜನಾರ್ಧನ ರೆಡ್ಡಿ ಜೈಲಿಗೆ ಹೋಗಲು ಕಾರಣ ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಹಾಗೂ ಪ್ರಾಮಾಣಿಕ ಅಧಿಕಾರಿ ಯು.ವಿ. ಸಿಂಗ್ ಅವರು ಅಕ್ರಮ ಗಣಿಗಾರಿಕೆ ವರದಿ ಆಧಾರದ ಮೇಲೆ ಲೋಕಾಯುಕ್ತ ಸಂಸ್ಥೆ ಪ್ರಕರಣ ದಾಖಲಿಸಿಕೊಂಡ ಕಾರಣ ರಾಜ್ಯದಲ್ಲಿ ಆಡಳಿತದಲ್ಲಿದ್ದಿದ್ದು ಬಿಜೆಪಿ ಸರ್ಕಾರ ಎಂಬುದನ್ನು ಮರೆಯಬೇಡಿ. ಇನ್ನೂ ಗಣಿಗಾರಿಕೆ ಕುರಿತು ವರದಿ ತಯಾರಿಸಲು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಯು.ವಿ ಸಿಂಗ್ ಇಬ್ಬರಿಗೂ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗಣಿ ಪ್ರದೇಶಗಳಿಗೆ ತೆರಳದಂತೆ ರೆಡ್ಡಿ ಅಂಡ್ ಟೀಮ್ ಜೀವ ಬೆದರಿಕೆ ಹಾಕಿದ್ದನ್ನು ಮರೆತು ಬಿಟ್ರ ಕ್ರಿಮಿನಲ್ ಗಳ ಸಮರ್ಥಕಿ. ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ

ಮುಟ್ಟುಗೋಲು ಹಾಕಿಕೊಂಡಿದ್ದ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ರಾತ್ರೋರಾತ್ರಿ ವಿದೇಶಕ್ಕೆ ಮಾರಿದ ಲೂಟಿಕೊರ ರೆಡ್ಡಿ ಗ್ಯಾಂಗ್ ವಿರುದ್ಧ CBI ತನಿಖೆ ಮಾಡದೆ ನೀವು ಮಾನಸಿಕ ಅಸ್ವಸ್ಥರಿಗೆ ಮಾಡಿದಂತೆ ಕರೆದು ಸನ್ಮಾನ ಮಾಡಬೇಕಿತ್ತ ವಕೀಲರೆ?
ಡಿಕೆಶಿ ರವರ ಮೇಲೆ ರೆಡ್ಡಿ ಮೇಲಿರುವ ಅರಣ್ಯ ಭೂಮಿಯನ್ನು ಬಗೆದು ಸರ್ವನಾಶ ಮಾಡಿದ ಗಂಭೀರ ಆರೋಪ ಇಲ್ಲ. ಎಡಿಯೂರಪ್ಪ ಹಾಗೂ ಜನತಾ ಬಜಾರ್ ಸೋಮಣ್ಣರಂತೆ ಸರ್ಕಾರಿ ಭೂಮಿಗಳನ್ನು ಕಬಳಿಸಿ ಡಿನೋಟಿಫಿಕೇಷನ್ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಆರೋಪ ಡಿಕೆಶಿ ಮೇಲೆ ಇಲ್ಲ.
ಅಂದು ಎಡ್ಡಿ , ರೆಡ್ಡಿ , ಸೋಮಣ್ಣ , KGF ಸಂಪಂಗಿ, ಕಟ್ಟ ಸುಬ್ರಮಣ್ಯ ನಾಯ್ಡು ಇವರೆಲ್ಲರನ್ನು ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದ UPA ಸರ್ಕಾರ IT , ED , CBI ಸಂಸ್ಥೆಗಳನ್ನು ಈಗ ದುರುಪಯೋಗ ಮಾಡಿಕೊಂಡಂತೆ ಮಾಡಿ ಇವರನ್ನು ಜೈಲಿಗೆ ಪಾಲು ಮಾಡಿಲ್ಲ, ಬದಲಾಗಿ ನಮ್ಮ ರಾಜ್ಯದ ಪ್ರಾಮಾಣಿಕ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿಗಳು ಈ ಭ್ರಷ್ಟರನ್ನು ಜೈಲಿಗೆ ಕಳಿಸಿದ್ದು.

ಸಂತೋಷ್ ಹೆಗ್ಡೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ನಿಮ್ಮ ಬಿಜೆಪಿಗರಿಗೆ ಇದೆಯೇ ?
ಇವತ್ತು ಡಿಕೆಶಿ ಅವರ ವಿಚಾರದಲ್ಲಿ ಅವರು ಮಾಡಿದ ಘೋರ ಅಪರಾಧ ನಿಮ್ಮ ಡಿಸಿಎಂ ಕಾರಜೋಳ ಹೇಳಿದಂತೆ ಗುಜುರಾತ್ ಶಾಸಕರನ್ನ ರಾಜ್ಯ ಸಭಾ ಚುನಾವಣೆ ವೇಳೆ ಬೆಂಗಳೂರಿನಲ್ಲಿ ಮೋದಿ ಮತ್ತು ಅಮಿತ್ ಶಾ ರವರ ಒತ್ತಡದಿಂದ ಬಚಾವ್ ಮಾಡಿದ್ದು. ರಾಜ್ಯದ ಶಾಸಕರನ್ನು ಮುಂಬೈನಲ್ಲಿ ಬಚ್ಚಿಟ್ಟಿದ್ದರ ವಿರುದ್ಧ ಬಂಡೆಯಂತೆ ಅಡ್ಡ ನಿಂತಿದ್ದು. ದೇಶದ ಸಂವಿಧಾನದ ಪ್ರಕಾರ ಆಸ್ತಿ ಮಾಡುವುದು ತಪ್ಪಲ್ಲ , ಅದೇ ಬಿಜೆಪಿ ಯ ಎಡ್ಡಿ ರೆಡ್ಡಿ ಗ್ಯಾಂಗ್‌ಗಳು ಮಾಡಿದಂತೆ ಸರ್ಕಾರದ ಬೊಕ್ಕಸವನ್ನು, ನೆಲದ ಸಂಪತ್ತನ್ನು ಲೂಟಿ ಮಾಡುವುದು ಅಪರಾಧ.

ನಿಂಬೆ ಹಣ್ಣು ಮಾರುತ್ತಿದ್ದ ಎಡ್ಡಿ , LIC ಏಜೆಂಟ್ ಆಗಿದ್ದ ಶೋಭಾ ಕರಂದ್ಲಾಜೆ , ಜನತಾ ಬಜಾರ್ ನ D ಗ್ರೂಪ್ ನೌಕರ ಸೋಮಣ್ಣ , ಇವರೆಲ್ಲ ಇವತ್ತು ಶಿಕ್ಷಣ ಸಂಸ್ಥೆಗಳನ್ನು , ಕಾಫಿ ತೋಟವನ್ನು ಕಾನೂನು ಪ್ರಕಾರ ಸಂಪಾದಿಸಿದ್ದ? ಭ್ರಷ್ಟಾಚಾರಿಗಳು ಇವತ್ತು ಹಗಲು ದರೋಡೆ ಮೂಲಕ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿದಿದ್ದಾರೆ, ಮಂತ್ರಿ ಪದವಿ ಸಿಗದ ಕಾರಣಕ್ಕೆ ಶ್ರೀರಾಮುಲು , ಜಗದೀಶ್ ಶೆಟ್ಟರ್ ಬೆಂಬಲಿಗರು ಸಾರ್ವಜನಿಕರ ಆಸ್ತಿಯನ್ನ ಸುಟ್ಟು ಹಾಕಿದಾಗ ತಾವ್ಯಾಕೆ ಮೌನವಾಗಿ ಇದ್ದಿರಿ? ಮಹದಾಯಿ , ಕಾವೇರಿ , ರೈತರ ಮತ್ತು ನೆರೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿರುವುದು ಕಾಂಗ್ರೆಸ್ ಪಕ್ಷ ಮತ್ತು ಆ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು ಇಲ್ಲಿನ ಪ್ರಾದೇಶಿಕ ಪಕ್ಷ JDS.
ಆದರೆ ಮಹದಾಯಿ ವಿಚಾರವನ್ನ ಮೋದಿ ಬಗೆಹರಿಸಲಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಿಲ್ಲ ಆದರೂ ತಾವೆಲ್ಲ ಮೋದಿ ಭಜನೆ ಮಾಡುವುದನ್ನ ನಿಲ್ಲಿಸಲಿಲ್ಲ, ರಾಜ್ಯದ ಹಿತಾಸಕ್ತಿಗೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸದಾಕಾಲ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಕೆಶಿ ಮೇಲೆ ಕೇಂದ್ರ ಸರ್ಕಾರ ದ್ವೇಷದಿಂದ IT ಮತ್ತು ED ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. 8 ಕೋಟಿ ಸಿಕ್ಕಿದ್ರೆ ಅದರ ಆದಾಯದ ಮೂಲವನ್ನು ಪರಿಶೀಲಿಸಿ ಅಕ್ರಮ ಕಂಡು ಬಂದ್ರೆ ದಂಡ ವಿಧಿಸಬಹುದು, ಅದನ್ನ ಬಿಟ್ಟು ಜೈಲಲ್ಲಿ ಇಟ್ಟು ಮುಂಬರುವ ಉಪ ಚುನಾವಣೆಯಲ್ಲಿ ಅವರು ಪಕ್ಷದ ಪರ ಕೆಲಸ ಮಾಡಬಾರದೆನ್ನುವ ದುರುದ್ದೇಶ ಇದರ ಹಿಂದೆ ಇದೆ.

ಒಟ್ಟಾರೆ ಭ್ರಷ್ಟರಾದ ಬಿಜೆಪಿಯ ಬೆಂಬಲಿಗರೇ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ. ಬ್ಲೂ ಫಿಲ್ಮ್ ನೋಡಿದವರು DCM , 800 ಕೋಟಿ ಬಿಬಿಎಂಪಿ ಹಗರಣ ಮಾಡಿದ ಅಶ್ವಥ್ ನಾರಾಯಣ್ ಮತ್ತೊಬ್ಬ ಡಿಸಿಎಂ , ಸರ್ಕಾರಿ ಜಮೀನು ಡಿನೋಟಿಫಿಕೇಷನ್ ಮೂಲಕ ಕಬಳಿಸಿದ ಮತ್ತೊಬ್ಬ ಮಹಾನ್ ಭ್ರಷ್ಟ ರಾಜ್ಯದ ಮುಖ್ಯಮಂತ್ರಿ ಇಂತವರನ್ನ ನಿಮ್ಮ ಮೋದಿ ಅಧಿಕಾರದಿಂದ ಹೊರ ಇಟ್ಟು ನೈತಿಕತೆ ತೋರಿಸಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ6 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending