ರಾಜಕೀಯ
ವಿದ್ಯಾವಂತರಾದ ನಾವು ಬಹುಜನ ಚಳವಳಿಗೆ ಮಾಡುತ್ತಿರುವುದಾದರೂ ಏನು?

ಮಾನ್ಯ ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಬಂಧುಗಳೇ ಇತ್ತೀಚಿನ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷದ ಬಲವರ್ಧನೆಯು ಸಮೃದ್ಧವಾಗಿದೆ. ಈ ನಿಟ್ಟಿನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಸದ್ದಿಲ್ಲದೆ ಘೀಳಿಟ್ಟಿದೆ.
ಈ ಚುನಾವಣೆಯಲ್ಲಿ ಆನೆಯ ಮೇಲೆ ರಾಜ್ಯಧಿಕಾರವನ್ನು ಏರಲು ಮುನ್ನುಗುತ್ತಿರುವವರು ಯುವಕರ ಕಣ್ಮಣಿ, ನಾಡಿನ ಖ್ಯಾತ ಹೆಸರಾಂತ ಕನ್ನಡ ವಿದ್ವಾಂಸರು, ಪ್ರಗತಿಪರ ಚಿಂತಕರು ಹಾಗು ಎರಡನೇ ತಲೆಮಾರಿನ ಫುಲೆ-ಅಂಬೇಡ್ಕರ್ವಾದವನ್ನು ನಾಡಿನಾದ್ಯಂತ ಪಸರಿಸುತ್ತಿರುವ ಡಾ. ಶಿವಕುಮಾರರವರು. ಇವರು ಬಹುಜನ ಸಮಾಜ ಪಾರ್ಟಿ ಚಾಮರಾಜನಗರ ಲೋಕಸಬಾ ಕ್ಷೇತ್ರ (ಮೀಸಲು)ದಿಂದ ಸ್ಪರ್ಧಿಸಿದ್ದಾರೆ. ನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಇವರು ೨೦೧೯ರ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಮುನ್ನುಗುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಧರ್ಮಿಯ, ಜಾತಿಯ ಜನರು ಕಾಂಗ್ರೆಸ್, ಬಿಜೆಪಿ ಆಡಳಿತದಿಂದ ಬೇಸತ್ತು ಹೊಸ ಮುಖದತ್ತ ಒಲವು ತೋರುತ್ತಿದ್ದಾರೆ.ಈ ಸಮಯದಲ್ಲಿ ಬಹುಜನ ಚಳವಳಿಯ ಯುವಕರು, ನೌಕರರರು ಪ್ರಗತಿಪರರು ಡಾ. ಶಿವಕುಮಾರರವರನ್ನು ತಮ್ಮ ತನು-ಮನ-ಧನವನ್ನು ಉದಾರ ಮನೋಭಾವದಿಂದ ಅರ್ಪಿಸಿ ಇವರ ಬೆನ್ನೆಲುಬಾಗಿ ನಿಲ್ಲಬೇಕಿದೆ.
ಬಂಧುಗಳೇ ನಾವೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ಕಳೆದ 20 ವರ್ಷಗಳಿಂದ ಚಳವಳಿಯ ಒಂದು ಭಾಗವಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಲಕ್ಷಾಂತರ ವಿದ್ಯಾರ್ಥಿಗಳು ಸಾವಿರಾರು ನೌಕರರು, ಕೆಲವು ಜನಪ್ರತಿನಿಧಿಗಳು, ಕಲಾವಿದರು ಚಳವಳಿಯಿಂದ ಸೃಷ್ಠಿಯಾಗಿದ್ದಾರೆ. ನಾವೆಲ್ಲರೂ ಸೇರಿ ವರ್ಷಪೂರ್ತಿ ಚಳವಳಿಯ ರಥವನ್ನು ಎಳೆದು ಚುನಾವಣೆಗಳು ಬಂದಾಗ ಎಷ್ಟು ಜನರು ನಿಷ್ಕ್ರೀಯರಾಗುವುದು ಅಥವ ಕೆಲಸವನ್ನು ಚುರುಕುಗೊಳಿಸದಿರುವುದು ಅಥವ ತಮ್ಮ ತಮ್ಮ ಬೂತುಗಳಲ್ಲಿ ಮತಬ್ಯಾಂಕ್ ಭದ್ರಪಡಿಸದಿರುವುದು ನಾನಾ ಕಾರಣಗಳಿಂದ ರಾಜಕಾರಣ ಮಾಡದಿರುವ ಕಾರಣ ಗಾಂಧಿವಾದಿ ಕಾಂಗ್ರೆಸ್, ಕೋಮುವಾದಿ ಬಿಜೆಪಿ, ಬಂಡವಾಳಶಾಹಿ ಜೆ.ಡಿ.ಎಸ್ ಪಕ್ಷಗಳು ದೇಶದಲ್ಲಿ ರಾರಾಜಿಸುತ್ತಿವೆ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆ ಫಲಿತಾಂಶ ಕಾಣುವವರೆಗೂ ಮೈಮರೆಯದೆ ಕೆಲಸ ಮಾಡಬೇಕಿದೆ.
ಮತ್ತೊಂದು ವಿಷಯವನ್ನು ತಮ್ಮ ಗಮನಕ್ಕೆ ತಿಳಿಯಪಡಿಸಿಸುವುದೇನೆಂದರೆ ಈ 5 ವರ್ಷಗಳ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಹೆಚ್ಚಾಗಿ ಪ್ರಶ್ನಿಸುತ್ತಿರುವವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗು ವಿದ್ಯಾರ್ಥಿ ಸಂಘಟನೆಗಳು. ಉದಾಹರಣೆಗೆ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ, ದಲಿತ ಹೆಣ್ಣು ಮಕ್ಕಳಾದ ದಾನಮ್ಮ ಪ್ರಕರಣ, ಅನಿತಾಳ ಆತ್ಮಹತ್ಯೆ ಪ್ರಕರಣ, ಎಸ್.ಸಿ/ಎಸ್.ಟಿ ತಿದ್ದುಪಡಿ ವಿಧೇಯಕ, ಊನಾ ದೌರ್ಜನ್ಯ ಪ್ರಕರಣ, ಮುಸ್ಲಿಂ ವಿದ್ಯಾರ್ಥಿ ನಜೀಬ್ ನಾಪತ್ತೆ, ಬ್ಯಾಕ್ಲಾಗ್ ಭರ್ತಿ ಮಾಡಿ, ನಿರುದ್ಯೋಗ ನಿವಾರಿಸಿ ಎಂಬ ಹೋರಾಟ, ಆರ್.ಎಸ್.ಎಸ್ ಬಂಧುತ್ವದ ವಿರೋಧಧ ಹೋರಾಟ, ಸಂಶೋಧನಾ ವಿದ್ಯಾರ್ಥಿಗಳ ಫೆಲೋಷಿಪ್ ಗಾಗಿ, ಕೆಲವು ಸಚಿವರನ್ನು ವಜಾಗೊಳಿಸಿದಾಗ ಅವರ ಪರವಾಗಿ ಬೀದಿಗಿಳಿದಿದ್ದು, ಸಂವಿಧಾನವನ್ನು ಬದಲಾಯಿಸಬೇಕೆಂದಾಗ ಪ್ರಜಾಪ್ರಭುತ್ವವಾದಿಗಳಿಗೆ ಅಪ್ಪ-ಅಮ್ಮ ಇಲ್ಲ ಎಂದು ಚೀಡಿಸಿದಾಗ ಹೋರಾಟ ರೂಪಿಸಿದ್ದು, ಇಂತಹ ೧೦ ಹಲವು ಹೋರಾಟಗಳನ್ನು ವಿದ್ಯಾವಂತರಾದ ನಾವು ರೂಪಿಸಿದ್ದು ಯಾರ ವಿರುದ್ಧ? ಯಾವ ಸರ್ಕಾರದ ವಿರುದ್ಧ?
ವಿದ್ಯಾವಂತ ಬಂಧುಗಳೇ ದಯಮಾಡಿ ಒಮ್ಮೆ ಸೂಕ್ಷ್ಮಮತಿಯರಾಗಿ ಯೋಚಿಸಿ. ಇಂತಹ ಸಾವಿರಾರು ಹೋರಾಟಗಳನ್ನು ಮಾಡಿದ್ದು ಕೇಂದ್ರದ ಬಿಜೆಪಿ ಮತ್ತು ರಾಜ್ಯ ಕಾಂಗ್ರೆಸ್ ಮತ್ತು ಜೆ.ಡಿಎಸ್ ಸರ್ಕಾರದ ವಿರುದ್ಧವಲ್ಲವೇ? ಜಾಗೃತರಾಗಿ. ದಾದಾಸಾಹೇಬ್ ಕಾನ್ಷಿರಾಮ್ಜೀ ಹೇಳುವ ಹಾಗೆ ಅನ್ಯಾಯ, ದೌರ್ಜನ್ಯ-ದಬ್ಬಾಳಿಕೆಗಳು ಆಳುವ ವರ್ಗದ ಮೇಲೆ ನಡೆಯುವುದಿಲ್ಲ. ಬದಲಾಗಿ ಗುಲಾಮರ ಮೇಲೆ ನಡೆಯುತ್ತಿದೆ. ಈ ಮಾತು ಈ ಸಂದರ್ಭದಲ್ಲಿ ನಾವು ನೆನೆಯಬೇಕಲ್ಲವೇ? ನಾವೆಲ್ಲ ಇಷ್ಟೊಂದು ದೊಡ್ಡ ಪ್ರತಿಭಟನೆ, ಹೋರಾಟ, ಉಪವಾಸಗಳನ್ನು 5 ವರ್ಷಗಳ ಕಾಲ ಕಾಂಗ್ರೆಸ್ ಬಿಜೆಪಿ ಸರ್ಕಾರಗಳ ವಿರುದ್ಧ ತೊಡೆ ತಟ್ಟಿ ನಿಂತು ನಮ್ಮಗಳ ಬುದ್ಧಿಶಕ್ತಿಯನ್ನು ವರ್ಷವಿಡಿ ಇಂತಹ ಹೋರಾಟಗಳಿಗೆ ವ್ಯಯಿಸಿ, ಚುನಾವಣೆ ಇನ್ನೂ (ಏಪ್ರಿಲ್) ಒಂದು ತಿಂಗಳು ಇದ್ದು, ಈ ಸಮಯದಲ್ಲಿ ಕಾಂಗ್ರೆಸ್-ಬಿಜೆಪಿಯ ಪರವಾಗಿ ಕೆಲಸ ಮಾಡುವುದು ನ್ಯಾಯವೇ? ಇದು ಅನ್ಯಾಯವಲ್ಲದೇ ಮತ್ತೇನು? ಮಾನ್ಯ ಶೈಕ್ಷಣಿಕ ಮಿತ್ರರೇ ನಮ್ಮಗಳ ವಿರೋಧಾಭಾಸವನ್ನು ಕಾಂಗ್ರೆಸ್ ಬಿಜೆಪಿ ಮಿತ್ರರಿಗೆ ತಿಳಿಸಿ ಜಾಗೃತಗೊಳಿಸಿ ಅವರೆಲ್ಲರನ್ನು ಬಾಬಾಸಾಹೇಬ್ ಅಂಬೇಡ್ಕರ್ರವರ ಚಳವಳಿಯ ರಥದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾದ ಡಾ.ಶಿವಕುಮಾರರವರನ್ನು ಜಯಶೀಲರನ್ನಾಗಿಸುವುದು ನಮ್ಮ ನಿಮ್ಮೇಲರ ಆದ್ಯ ಕರ್ತವ್ಯವವಲ್ಲವೇ? ಚಿಂತಿಸಿ.
ಜೈ ಭೀಮ್ ಜೈ ಭಾರತ್
–ಡಾ. ನವೀನ್ ಮೌರ್ಯ
ಸಂಶೋಧಕರು, ಮೈಸೂರು ವಿಶ್ವವಿದ್ಯಾನಿಲಯ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.
ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.
ಸಾರಜನಕ, ರಂಜಕ ಮತ್ತು ಪೊಟ್ಯಾಷ್ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ— Siddaramaiah (@siddaramaiah) April 9, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್
ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ6 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ6 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್3 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ5 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021