ದಿನದ ಸುದ್ದಿ
ಆಸೆಯೇ ದುಃಖಕ್ಕೆ ಕಾರಣ ಇದು ಎಷ್ಟು ಸರಿ..?
- ಶಿವಸ್ವಾಮಿ,ಬೌದ್ಧ ಉಪಾಸಕರು
ಆಸೆಯೇ ದುಃಖ್ಖಕ್ಕೆ ಕಾರಣ ಎಂದೂ ಯಾರಾದ್ರೂ ಥಟ್!ಅಂತಾ ! ಹೇಳಿದರೆ ಮನಸ್ಸಿಗೆ ಮೊದಲು ಬರುವವರೇ ಬುದ್ಧ. ಹಾಗಾದರೆ ಮನುಷ್ಯನಾದವನು ಆಸೆಗಳನ್ನು ಹೊಂದಾಬಾರದೆ? ಆಸೆಗಳಿಲ್ಲಾದಿದ್ದರೆ ಮನುಷ್ಯ ಜೀವಿಸುವುದಾದರೂ ಏತಕ್ಕೆ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ, ಪ್ರತಿಯೊಬ್ಬರೂ ಬದುಕಬೇಕಾದ ರೇ ತಮ್ಮದೇ ಆದ ಆಸೆಗಳನ್ನು ಹೊಂದುತ್ತಾರೆ.
ಆದರೆ ತಮ್ಮ ಅತಿಯಾದ ಆಸೆಗಳಿಗೆ ಮಿತಿ ಇರಬೇಕಷ್ಟೇ !ಅತಿಯಾದರೆ ಅಮೃತವು ವಿಷವಾಗುತ್ತದೆ ಎಂಬಂತೆ ಜೀವನದಲ್ಲಿ ಸಮಸ್ಥಿತಿಯಿಂದ ಇರಬೇಕಾಗುತ್ತದೆ, ಆಸೆಯೇ ದುಃಖ್ಖಕ್ಕೆ ಕಾರಣವೆಂದು ಭಗವಾನ್ ಬುದ್ಧ ಹೇಳಿದರೆಂದು ಹಲವರು ಹೇಳುತ್ತಲೇ ಬಂದಿದ್ದಾರೆ, ಆದರೆ ಯಾವುದೇ ತ್ರಿಪಿಟಕಗಳಲ್ಲಿ ಕಂಡು ಬರುವುದಿಲ್ಲ, ಆದ್ದರಿಂದ “ಆಸೆಯೇ ದುಃಖ್ಖಕ್ಕೆ ಕಾರಣ” ಇದು ಸಮರ್ಪಕವಾದ ಹೇಳಿಕೆಯಲ್ಲ, ಪಾಳಿ ಭಾಷೆಯಲ್ಲಿ ತನ್ಹಾ ಎಂಬ ಪದವನ್ನು ಬಳಸುತ್ತಾರೆ.
ಇದು ಆಸೆಗೆ ಪರ್ಯಾಯ ಪದವಲ್ಲ ಇದಕ್ಕೆ ಇಂಗ್ಲಿಷ್ನಲ್ಲಿ ಆಸೆಗೆ ಹತ್ತಿರವಾದ Craving ಎಂಬ ಪದವನ್ನು ಬಳಸುತ್ತಾರೆ Craving ಎಂದರೆ ದುರಾಸೆ ಅಥವಾ ತೃಶ್ನೆ ಎಂದಾಗುತ್ತದೆ “ಆದ್ದರಿಂದ ದುರಾಸೆಯೇ ದುಃಖ್ಖಕ್ಕೆ ಕಾರಣವೆನ್ನಬಹುದು” . ಲೋಕದಲ್ಲಿ ದುಃಖ್ಖವಿದೆ, ದುಃಖ್ಖಕ್ಕೆ ಕಾರಣವು ಇದೆ, ದುಃಖ್ಖ ನಿರೋಧ, ದುಃಖ್ಖ ನಿರೋಧ ಮಾರ್ಗ ಎಂಬ ನಾಲ್ಕು ಆರ್ಯ ಸತ್ಯಗಳ ಮೂಲಕ, ನೈತಿಕತೆಯ ಆಧಾರದ ಮೇಲೆ ತನ್ನ ಅನುಭವದ ಮೂಲಕ ಮಾನವ ಪರವಾದ ಸತ್ಯವನ್ನು ಕಂಡು ಹಿಡಿದ ಅದೇ ನಿಜವಾದ ಬುದ್ಧನ ಧಮ್ಮ
4 ಆರ್ಯ ಸತ್ಯಗಳು
1.ದುಃಖ್ಖ
ಲೋಕದಲ್ಲಿ ದುಃಖ್ಖವಿದೆ ಹುಟ್ಟು ದುಃಖ್ಖ, ರೋಗ ದುಃಖ್ಖ, ವಯಸ್ಸಾಗುವುದು ದುಃಖ್ಖ, ಸಾವು ದುಃಖ್ಖ, ಬಯಸಿದ್ದು ಸಿಗದಿದ್ದರೆ ದುಃಖ್ಖ, ನೋವು, ಯಾತನೆ, ಕೊರಗು, ದೈಹಿಕವಾಗಿರಲಿ ಮಾನಸಿಕವಾಗಿರಲಿ ಅದೆಲ್ಲಾ ದುಃಖ್ಖ,.
2.ದುಃಖ್ಖಕ್ಕೆ ಕಾರಣ
ದುರಾಸೆ ಅಥವಾ ತೃಶ್ನೆ ಮೂರು ವಿಧವಾದ ದುರಾಸೆ ಅಥವಾ ತೃಶ್ನೆಗಳಿವೆ.
ಅ. ಕಾಮ ತೃಶ್ನೆ : ಪಂಚ ಇಂದ್ರಿಯಗಳ ವಿಷಯಗಳನ್ನು ಅನುಭವಿಸಬೇಕೆನ್ನುವ ಇಚ್ಛೆಯೇ ಕಾಮ ತೃಶ್ನೆ.
ಬ. ಭವ ತೃಶ್ನೆ : ನಾನು ಶಾಶ್ವತವಾಗಿ ಜೀವಿಸಬೇಕೆಂಬುದೇ ಭವ ತೃಶ್ನೆ, ನಾನು ದೊಡ್ಡ ಶ್ರೀಮಂತನಾಗಬೇಕು, ಸದಾ ಭೋಗಜೀವನದಲ್ಲಿರ ಬೇಕೇಂಬುದೇ ಆಗಿದೆ.
ಕ. ವಿಭವ ತೃಶ್ನೆ : ನಾನು ಈ ಪ್ರಪಂಚದಲ್ಲಿ ಇರಲೇಭಾರದು ಎಂಬ ಹತಾಶೆಯ ಸ್ಥಿತಿ.
3. ದುಃಖ್ಖ ನಿರೋಧ
ಲೋಕದಲ್ಲಿ ದುಃಖ್ಖವಿದೆ, ದುಃಖ್ಖ ಕ್ಕೆ ಕಾರಣವು ಇದೆ, ಎಂದ ಮೇಲೆ ದುಃಖ್ಖ ನಿರೋಧವು ಸಾಧ್ಯವಿದೆ ದುಃಖ್ಖ ನಿರೋಧದ ಮೂಲಗಳಾದ ಅಜ್ಞಾನ ಮತ್ತು ದುರಾಸೆಗಳಿಂದ ಹೊರ ಬಂದರೆ ದುಃಖ್ಖವು ದೂರವಾಗುತ್ತದೆ.
4.ದುಃಖ್ಖ ನಿರೋಧ ಮಾರ್ಗ
ನಾಲ್ಕನೇ ಆರ್ಯ ಸತ್ಯವೇ ದುಃಖ್ಖ ನಿರೋಧ ಮಾರ್ಗ ಅಥವಾ ಅಷ್ಠ ಮಾರ್ಗ ಅಥವಾ ಮದ್ಯಮ ಮಾರ್ಗ, ಪಂಚ ಇಂದ್ರಿಯಗಳ ಸುಖಕ್ಕಾಗಿ ಭೋಗಜೀವನದಲ್ಲಿ ತೊಡಗುವುದು ಮತ್ತು ನೋವಿನಿಂದ ಕೂಡಿದ ಕಠಿಣ ತಪಸ್ಸು ದೇಹ ದಂಡನೆ ಎಂಬ ಎರಡು ಅತೀರೇಖಾ ಮಾರ್ಗಗಳನ್ನು ಬುದ್ಧ ಕೈಬಿಟ್ಟಿದ್ದೆ ಅಲ್ಲದೆ ಸುಖ ಶಾಂತಿ ಪ್ರಜ್ಞೆಯ ಮಾರ್ಗವಾದ ಮನುಷ್ಯರನ್ನು ನಿಬ್ಬಾಣದ ಕಡೆಗೆ ಕರೆದೊಯ್ಯುವ ಮಾರ್ಗ ಕಂಡು ಹಿಡಿದರು ಅದುವೇ ಮದ್ಯಮ ಮಾರ್ಗ ಅಥವಾ ಅಷ್ಟಮಾರ್ಗ.
ದುಃಖ್ಖ ನಿವಾರಣೆಗಾಗಿ ಮದ್ಯಮ ಮಾರ್ಗವು 8 ಅಂಶಗಳನ್ನು ಹೊಂದಿದೆ.
- ಸರಿಯಾದ ದೃಷ್ಟಿ
- ಸರಿಯಾದ ಸಂಕಲ್ಪ
- ಸರಿಯಾದ ಮಾತು
- ಸರಿಯಾದ ಕೆಲಸ
- ಸರಿಯಾದ ಜೀವನೋಪಾಯ
- ಸರಿಯಾದ ಪ್ರಯತ್ನ
- ಸರಿಯಾದ ಅರಿವು
- ಸರಿಯಾದ ಏಕಾಗ್ರೆತೆ
ಪ್ರಕೃತಿಗೆ ಹತ್ತಿರವಾದ, ತಮ್ಮ ಅನುಭವದ ಮೂಲಕ ಕಂಡು ಕೊಂಡ ಬುದ್ಧರ ಅಂತಿಮ ಸತ್ಯವೇ ಅವರ ಧಮ್ಮ, ಧಮ್ಮ ಎಂಬ ಪಾಳಿ ಪದಕ್ಕೆ ಧರ್ಮ ಎಂಬ ಪದವು ಪದವಲ್ಲ, ಧಮ್ಮವೆಂದರೆ ಸರ್ವರ ಹಿತ ಸರ್ವರ ಸುಖ,’ನಾನು ಹೇಳಿದೆ ಎಂದೂ ಒಪ್ಪಿಕೊಳ್ಳಬೇಡಿ, ಬನ್ನೀ… ನಿಮ್ಮ ಅನುಭವದ ಮೂಲಕ ಇಲ್ಲಿ ಈಗಲೇ ಪರೀಕ್ಷಿಸಿ ಇಷ್ಟವಾದರೆ ಒಪ್ಪಿಕೊಳ್ಳಿ, ಇಲ್ಲಾವಾದರೆ ಬಿಟ್ಟುಬಿಡಿ ಎಂಬ ಮಾತನ್ನು ಬುದ್ಧರನ್ನು ಬಿಟ್ಟರೆ ಜಗತ್ತಿನ ಯಾವ ಧರ್ಮಗುರುಗಳು ಹೇಳಿರುವುದು ಕಂಡು ಬರುವುದಿಲ್ಲ.
ಮುಂದುವರಿದು ನಾನು
ದೇವಾಮಾನವನಲ್ಲ, ಯಾವುದೇ ನಾನು ಮುಕ್ತಿಧಾತನಲ್ಲ, ಕೇವಲ ಮಾರ್ಗಧಾತನಷ್ಟೇ, ನಿಮಗೆ ನೀವೇ ಬೆಳಕಾಗಿ, ಎಂದೂ ನೈತಿಕತೆಯ ಸತ್ಯದ ನಡೆ, ಕತ್ತಲಿನಿಂದ ಬೆಳಕಿನಡೆ, ಅಸತ್ಯದಿಂದ ಸತ್ಯದ ಕಡೆಗೆ ಕರೆದೊಯ್ಯುವ ಜ್ಞಾನದ ದೀಪವೇ ಬುದ್ಧರ ಧಮ್ಮ, ಬುದ್ಧರ ನಂತರ ಉತ್ತರಾಧಿಕಾರಿ ಯಾರು? ಎಂಬ ಶಿಷ್ಯ ಆನಂದನ ಪ್ರಶ್ನೆಗೆ ಉತ್ತರವಾಗಿ ಭಗವಾನ್ ಬುದ್ಧರು “ಧಮ್ಮಕ್ಕೆ ಧಮ್ಮವೇ ಉತ್ತರಾಧಿಕಾರಿ”ಎಂದೂ ಇಡೀ ವಿಶ್ವವನ್ನು ಧಮ್ಮವೇ ಮುನ್ನಡೆಸಲಿದೆ ಎಂದರು. ಬಹುಜನರಿಗೆ ಹಿತವಾದ, ಬಹುಜನರಿಗೆ ಸುಖವಾದ, ಲೋಕಕ್ಕೆ ಧಮ್ಮವನ್ನು ನೀಡಿ ಇಡೀ ಜಗತ್ತಿಗೆ ಬೆಳಕಾಗಿ ಇಂದಿಗೂ ಪ್ರಜ್ವಲಿಸುತಿದ್ದಾರೆ. ಬಂಧುಗಳೇ ಇಂದು ಅವರ ಜನ್ಮದಿನ, ಅವರ ತತ್ವ ಸಿದ್ಧಾಂತಗಳು ಸರ್ವರಿಗೂ ದಾರಿ ದೀಪಾವಾಗಿ, ಇಡೀ ವಿಶ್ವವು ಸುಖ ಶಾಂತಿ ನೆಮ್ಮದಿಯಿಂದ ನೆಲಸುವಂತಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243