Connect with us

ಬಹಿರಂಗ

ವೇಶ್ಯೆಯಾಗಿದ್ದವಳು ಬುದ್ಧನ ಶಿಷ್ಯೆ ಆಗಿದ್ದು ಹೇಗೆ..!?

Published

on

  • ಅಂಬಳೆಮಹಾದೇವಸ್ವಾಮಿ,ಸಹಾಯಕ ಪ್ರಾಧ್ಯಾಪಕರು, ಮೈಸೂರು

ಭಾರತ ದೇಶ ಹಲವು ಧರ್ಮ.ಜಾತಿ.ಭಾಷೆ,ಸಂಸ್ಕೃತಿಯ ಆ ದೊಂಬಲವಾಗಿದೆ. ಎಲ್ಲ ಕ್ಷೇತ್ರದಲ್ಲೂ ತನ್ನದೇ ಆದ ಅಸ್ಮಿತೆಯನ್ನು ಹೊಂದಿದೆ.ಈ ಪುಣ್ಯ ಭೂಮಿಯಲ್ಲಿ ಕಾಲ ಕಾಲಕ್ಕೆ ಮಹಾತ್ಮರು ಉದಯಿಸಿ ಸಮಾಜವನ್ನು ಉದ್ಧರಿಸುವ ಪ್ರಯತ್ನ ಮಾಡಿದ್ದಾರೆ…ಹಾಗಾಗಿಯೇ ಎಲ್ಲರ ಎದೆಯಲ್ಲಿ ಇಂದಿಗೂ ನೆಲೆಯೂರಿದ್ದಾರೆ. ಅಂತಹ ಮಹಾಪುರುಷರು ಬದ್ದರಾದವರಿಗೆ ಉದ್ದರದ ಹೆದ್ದಾರಿಯನ್ನು ತೋರಿದ್ದಾರೆ. ಅಂಥ ಉದಾಹರಣೆಗಳು ನಮ್ಮ ಮುಂದಿವೆ.

ಇವತ್ತಿನ ಬಿಹಾರರಾಜ್ಯದಲ್ಲಿ ಕ್ರಿಸ್ತಪೂರ್ವ 500ರಲ್ಲಿ ವೈಶಾಲಿ ಎಂಬ ನಗರವಿತ್ತು. ಆ ನಗರದಲ್ಲಿ ರಾಜಮನೆತನದವರನ್ನು, ನಗರದ ಶ್ರೀಮಂತರನ್ನು ಸಂತುಷ್ಟಪಡಿಸುವುದಕ್ಕಾಗಿ ರಾಜನರ್ತಕಿಯನ್ನು ನಗರವಧುವಾಗಿ (ನಗರದ ವೇಶ್ಯೆ) ನೇಮಿಸುವ ಅಮಾನವೀಯ ಸಂಪ್ರದಾಯವಿತ್ತು. ಈ ನಗರವಧುವಿಗೆ ಅಲ್ಲಿನ ಮಂದಿ ಜನಕಲ್ಯಾಣಿ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ಇಂಥಹ ವಿಚಿತ್ರವಾದ ಮೌಡ್ಯಸಂಪ್ರದಾಯ ಆಚರಣೆ ಇದ್ದ ನಗರದಲ್ಲಿ ಆಮ್ರಪಾಲಿಯ ಜನನವಾಯಿತು.

ಆಮ್ರಪಾಲಿಯ ಹೆತ್ತ ತಂದೆತಾಯಿಗಳ ಬಗ್ಗೆ ನಿಖರವಾದ ಮಾಹಿತಿಯಿಲ್ಲ. ನಾನು ಹೇಳಲಿರುವ ವಿಚಾರಕ್ಕೆ ಅದೇನು ಮುಖ್ಯವೇನಲ್ಲ.ಅದ ಊರಿನಲ್ಲಿ ನೃತ್ಯ ಶಿಕ್ಷಕರಾಗಿದ್ದ ಕುಮಾರಭಟ್ಟ ಎಂಬವರು ನಡೆದು ಬರುತ್ತಿದ್ದಾಗ, ವೈಶಾಲಿ ನಗರದ ಆಮ್ರವನದಲ್ಲಿ (ಮಾವಿನತೋಟ) ಒಂದು ಹೆಣ್ಣು ಮಗು ಸಿಕ್ಕಿತು. ಆಮ್ರವನದಲ್ಲಿ ಸಿಕ್ಕಿದ್ದರಿಂದ ಅವಳಿಗೆ ಆಮ್ರಪಾಲಿ ಎಂದು ಹೆಸರಿಟ್ಟರು.

ಕುಮಾರಭಟ್ಟರ ಮಡದಿಯಾದ ಮಲ್ಲಿಕಾ ಆಮ್ರಪಾಲಿಯನ್ನು ಅತ್ಯಂತ ಪ್ರೀತಿಯಿಂದ ಸಾಕಿ ಸಲುಹಿದರು. ಮಲ್ಲಿಕಾರ ಮೊದಲ ಹೆಸರು ಆವಂತಿಕಾ. ಆವಂತಿಕಾ ಕೂಡ ಓರ್ವ ರಾಜ ನರ್ತಕಿಯಾಗಿದ್ದಲು ನರ್ತಕಿಯ ಕೆಲಸ ಬಿಟ್ಟು ಕುಮಾರಭಟ್ಟರನ್ನ ಮದುವೆಯಾದಾಗ ಆವಂತಿಕಾ ಮಲ್ಲಿಕಾ ಆಗಿ ಬದಲಾದರು.

ಆಮ್ರಪಾಲಿಯು ಕುಮಾರಭಟ್ಟರ ಮನೆಯಲ್ಲಿ ಸಕಲ ಸೌಲಭ್ಯಗಳೊಂದಿಗೆ ಸಂತೋಷವಾಗಿ ಬೆಳೆಯುತ್ತಿದ್ದಳು. ಕುಮಾರಭಟ್ಟರು ಪಲ್ಲವಿ ಎಂಬ ಶಿಷ್ಯೆಗೆ ನೃತ್ಯವನ್ನು ಕಲಿಸುವಾಗ ಆಮ್ರಪಾಲಿ ನೃತ್ಯದ ಕಡೆಗೆ ಆಕರ್ಷಿತಳಾಗಿ ತಾನು ನೃತ್ಯವನ್ನು ಕಲಿಯಬಯಸಿದಳು. ಆದರೆ ಕುಮಾರಭಟ್ಟರಿಗೆ ತಮ್ಮ ಮಗಳಿಗೆ ನೃತ್ಯವನ್ನು ಕಲಿಸಿ ಅವಳನ್ನು ನಗರವಧುವಾಗಿಸಲು ಇಷ್ಟವಿರಲಿಲ್ಲ.

ಆದರೆ ಆಮ್ರಪಾಲಿ ತನ್ನ ಛಲವನ್ನು ಬಿಡಲಿಲ್ಲ. ತಾಯಿ ಮಲ್ಲಿಕಾರನ್ನು ಪೀಡಿಸಿ ಕದ್ದುಮುಚ್ಚಿ ಸಕಲ ಪ್ರಕಾರದ ನೃತ್ಯಗಳನ್ನು ಸಂಪೂರ್ಣವಾಗಿ ಕಲಿತಳು. ಆದರೆ ತಮ್ಮ ಮಗಳು ಆಮ್ರಪಾಲಿ ಮುಂದೆಲ್ಲಿ ನಗರವಧುವಾಗುವಳೋ ಎಂಬ ಭಯದಿಂದ ಆಮ್ರಪಾಲಿಯ ಕೈಯಿಂದ ‘ಯಾವುದೇ ರಾಜನ ಆಸ್ಥಾನದಲ್ಲಿ ಕುಣಿಯುದಿಲ್ಲ’ ಎಂದು ಶಪಥ ಮಾಡಿಸಿಕೊಂಡರು.

ಹೀಗಿರುವಾಗ ವೈಶಾಲಿ ನಗರಕ್ಕೆ ಹೊಸ ನಗರವಧುವಿನ ಅವಶ್ಯಕತೆಯಿತ್ತು. ಅದಕ್ಕಾಗಿ ಒಂದು ನೃತ್ಯದ ಸ್ಪರ್ಧೆಯನ್ನು ಏರ್ಪಡಿಸಿದರು. ಅದರಲ್ಲಿ ವಿಜಯಿಯಾದವರನ್ನು ರಾಜ ನರ್ತಕಿಯಾಗಿ ನೇಮಿಸಿ, ಅವಳನ್ನೇ ನಗರವಧು ಮಾಡುವುದಾಗಿ ಘೋಷಣೆ ಹೊರಡಿಸಿಲಾಯಿತು. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಹಲವಾರು ಭಾಗಗಳಿಂದ ದೇಶದ ಮೂಲೆ ಮೂಲೆಗಳಿಂದ ನರ್ತಕಿಯರು ವೈಶಾಲಿಗೆ ಬಂದಿಳಿದರು.

ವೈಶಾಲಿ ನಗರದಿಂದ ಕುಮಾರಭಟ್ಟರ ಶಿಷ್ಯೆಯಾದ ಪಲ್ಲವಿ ಈ ಸ್ಪರ್ಧೆಯಲ್ಲಿ ಭಾಗವಹಿಸಿ ವೈಶಾಲಿ ನಗರದ ಘನತೆಯನ್ನು ಎತ್ತಿಹಿಡಿಯುವವಳಿದ್ದಳು. ಆದರೆ ಪಲ್ಲವಿ ಹೆಚ್ಚಿನ ಹಣ ಹಾಗೂ ಅಧಿಕಾರದ ಆಸೆಗಾಗಿ ವೈಶಾಲಿಯ ಶತ್ರು ರಾಜ್ಯವಾಗಿದ್ದ ಮಗಧ ರಾಜ್ಯಕ್ಕೆ ಫಲಾಯನಗೈದಳು.ಅಲ್ಲೇ ನೆಲೆಯೂರಲು ನಿರ್ಧರಿಸಿ ಬಿಟ್ಟಳು.

ಕೆಲ ದಿನಗಳ ನಂತರ ನಗರವಧು ಆಯ್ಕೆಯ ನೃತ್ಯ ಸ್ಪರ್ಧೆ ಬಂದೇ ಬಿಟ್ಟಿತು. ಆದರೆ ವೈಶಾಲಿಯ ಸ್ಪರ್ಧಿ ಪಲ್ಲವಿ ಓಡಿಹೋಗಿದ್ದಳು. ವೈಶಾಲಿ ನಗರದ ಮಾನ ಮರ್ಯಾದೆ ಈಗ ಆಮ್ರಪಾಲಿಯ ಕೈಯ್ಯಿಗೆ ಬಂತು. ಆಮ್ರಪಾಲಿಗೆ ನಗರವಧುವಾಗುವ ಆಸೆ ಇರಲಿಲ್ಲ. ಆದರೆ ವೈಶಾಲಿಯ ಘನತೆಯನ್ನು ಕಾಪಾಡುವದಕ್ಕಾಗಿ ಆಮ್ರಪಾಲಿ ನೃತ್ಯಸ್ಪರ್ಧೆಯಲ್ಲಿ ಭಾಗವಹಿಸಿದಳು. ಈ ಸುದ್ದಿ ತಿಳಿದು ಆಮ್ರಪಾಲಿಯ ತಾಯಿ ಮಲ್ಲಿಕಾ ಎದೆಯಾಘಾತದಿಂದ ಮಡಿದರು.

ಎಲ್ಲ ರಾಜ್ಯದ ನರ್ತಕಿಯರು ನೃತ್ಯವನ್ನು ಪ್ರದರ್ಶಿಸಿದ ನಂತರ ಆಮ್ರಪಾಲಿ ನೃತ್ಯ ಮಾಡಲು ವೇದಿಕೆಗೆ ಬಂದಳು. ವೇದಿಕೆಯ ಮೇಲೆ ಆಮ್ರಪಾಲಿಯನ್ನು ನೋಡಿ ಕುಮಾರಭಟ್ಟರಿಗೆ ಆಘಾತವಾಯಿತು. ತಮ್ಮ ಮಗಳು ಕೊನೆಗೂ ನಗರವಧುವಾಗುವಳು ಎಂಬ ಕೊರಗು ಅವರನ್ನು ಕೊರೆಯತೊಡಗಿತು. ಆಮ್ರಪಾಲಿ ನಗರವಧುವಾಗುವುದನ್ನು ನೋಡಲಾಗದೆ ಕುಮಾರಭಟ್ಟರು ವೈಶಾಲಿಯನ್ನು ಬಿಟ್ಟು ದೇಶಾಂತರ ಹೊರಟರು.

ವೇದಿಕೆಯ ಮೇಲೆ ಆಮ್ರಪಾಲಿಯನ್ನು ನೋಡಿ ವೈಶಾಲಿಯ ಜನ ಸ್ತಬ್ಧರಾದರು. ಅವಳ ಸೌಂದರ್ಯವನ್ನು ನೋಡಿ ಮೂಕವಿಸ್ಮೀತರಾದರು. ಆಮ್ರಪಾಲಿಯಷ್ಟು ಸುಂದರವಾಗಿರುವ ಕನ್ಯೆಯನ್ನು ಈ ಮೊದಲು ವೈಶಾಲಿಯಲ್ಲಿ ಯಾರು ನೋಡಿರಲಿಲ್ಲ. ಆಮ್ರಪಾಲಿಯನ್ನು ಜನ ಕಣ್ಣುಕಣ್ಣು ಬಿಟ್ಟು ನೋಡತೊಡಗಿದರು.

ಅವಳ ಮೇಲಿಂದ ದೃಷ್ಟಿ ಬದಲಿಸಲು ಯಾವ ಪುರುಷನಿಗೂ ಮನಸ್ಸಾಗಲಿಲ್ಲ ಜನರ ಕಣ್ಣಿನಿಂದ ಹೊರಟ ಅವರ ನೋಟದ ಬಾಣ ಅವಳಲ್ಲೆ ನೆಟ್ಟಿತ್ತು.ಎಲ್ಲರೂ ಅವಳ ಸೌಂದರ್ಯಕ್ಕೆ ಮಾರು ಹೋಗಿದ್ದರು.ಅವಳ ಅಂಗಾಂಗಗಳು ಕಣ್ಣುಗಳಿಂದ ಅಳತೆ ಮಾಡುತ್ತಿದ್ದರು. ಅವರೆಲ್ಲರ ಕಾಮದ ಕಣ್ಣುಗಳೊಡನೆ ಹೋರಾಡುತ್ತಾ ಆಮ್ರಪಾಲಿ ನೃತ್ಯ ಮಾಡಿದಳು. ಕೊನೆಗೆ ಅವಳೇ ಈ ನೃತ್ಯ ಸ್ಪರ್ಧೆಯಲ್ಲಿ ವಿಜಯಿಯಾದಳು.

ನೃತ್ಯಸ್ಪರ್ಧೆಯಲ್ಲಿ ಗೆದ್ದ ಆಮ್ರಪಾಲಿಯನ್ನು ರಾಜನರ್ತಕಿಯಾಗಿ ನೇಮಿಸಿ, ನಗರವಧುವೆಂದು ಘೋಷಿಸಲಾಯಿತು. ರಾಜನರ್ತಕಿಯಾಗಲು ಆಮ್ರಪಾಲಿ ಸಿದ್ಧಳಿದ್ದಳು. ಆದರೆ ನಗರವಧುವಾಗಿ ಸಾವಿರಾರು ಜನರ ಜೊತೆ ಮಲಗಲು ಅವಳಿಗೆ ಇಷ್ಟವಿರಲಿಲ್ಲ. ಅವಳಿಗೆ ಎಲ್ಲ ಹುಡುಗಿಯರಂತೆ ಕುಲವಧುವಾಗಿ ಗೌರವದ ಜೀವನ ನಡೆಸುವ ಆಸೆಯಿತ್ತು. ಎಲ್ಲರಂತೆ ಅವಳು ಒಂದು ಸುಂದರ ಹಾಗೂ ಸ್ವತಂತ್ರ ಜೀವನವನ್ನು ಅನುಭವಿಸಲು ಮುಂದಾಗಿ ನಗರವಧುವಾಗಲು ನಿರಾಕರಿಸಿದಳು. ಆಮ್ರಪಾಲಿಯ ಈ ನಿರ್ಧಾರದಿಂದ ವೈಶಾಲಿಯ ರಾಜಕುಮಾರ ಕೆರಳಿ ಕೆಂಡಾಮಂಡಲವಾದನು.

ಆಮ್ರಪಾಲಿ ನಗರವಧುವಾಗಲು ನಿರಾಕರಿಸಿದ್ದರಿಂದ ವೈಶಾಲಿಯ ರಾಜಕುಮಾರರಿಗೆ, ಧನಿಕರಿಗೆ ನಿರಾಸೆಯಾಗಿತ್ತು. ಅವಳ ಸೌಂದರ್ಯವನ್ನು ಕತ್ತಲ ಕೋಣೆಯಲ್ಲಿ ಮನಬಂದಂತೆ ಅನುಭವಿಸಿ ಸುಖಪಡಬೇಕು ಎಂಬ ಕನಸಿಗೆ ಕೊಡಲಿ ಏಟು ಬಿದ್ದಿತು. ಎಲ್ಲರೂ ಆಮ್ರಪಾಲಿಯನ್ನು ಮದುವೆಯಾಗಲು ಮುಂದಾದರು. ಅವಳಿಗಾಗಿ ಯುದ್ಧವನ್ನು ಸಹ ಮಾಡಲು ಎಲ್ಲರೂ ತಯಾರಿದ್ದರು. ಎಲ್ಲರೂ ಆಮ್ರಪಾಲಿಯ ಎದುರು ವಿವಾಹದ ಪ್ರಸ್ತಾಪವಿಟ್ಟರು. ಆದರೆ ಆಮ್ರಪಾಲಿ ಇವೆಲ್ಲವನ್ನೂ ತಿರಸ್ಕರಿಸಿ ತನ್ನ ಬಾಲ್ಯದ ಗೆಳೆಯ ಪುಷ್ಪಕುಮಾರನನ್ನು ಮದುವೆಯಾಗಲು ತಿರ್ಮಾನಿಸಿದಳು.

ಆಮ್ರಪಾಲಿಯನ್ನು ನಗರವಧುವಾಗಿ ನೇಮಿಸಬೇಕು ಎಂಬ ಕೂಗು ಜೋರಾಗಿ ಸದ್ದು ಮಾಡತೊಡಗಿತು. ಆಮ್ರಪಾಲಿಯನ್ನು ಮದುವೆಯಾಗದಿದ್ದರೂ, ಅವಳನ್ನು ಆಕ್ರಮಿಸಿ ಅನುಭವಿಸಲು ಸಾಮಂತರು ಮುಂದಾದರು. ಇದರಿಂದ ರಾಜ್ಯದಲ್ಲಿ ದಂಗೆಗಳು ಶುರುವಾದವು. ವೈಶಾಲಿಯಲ್ಲಿ ರಕ್ತದ ಹೊಳೆ ಉಗಮವಾಯಿತು.

ವೈಶಾಲಿಯ ರಾಜ ಆಮ್ರಪಾಲಿಯ ಮದುವೆಯ ದಿನವೇ ಅವಳ ಭಾವಿಪತಿಯನ್ನು ಕೊಂದು ಆಮ್ರಪಾಲಿಯನ್ನು ಆಸ್ಥಾನಕ್ಕೆ ಬಲವಂತವಾಗಿ ಕರೆದುಕೊಂಡು ಬಂದನು. ಕೂಡಲೇ ಒಂದು ನಗರಸಭೆಯನ್ನು ಕರೆದನು. ನಗರಸಭೆಯ ಒಮ್ಮತದ ಅನುಸಾರ ವೈಶಾಲಿ ನಗರದ ಶಾಂತಿಗಾಗಿ ಹಾಗೂ ಗಣತಂತ್ರದ ರಕ್ಷಣೆಗಾಗಿ ಸರ್ವಸಮ್ಮತದಿಂದ ಆಮ್ರಪಾಲಿಯನ್ನು ನಗರವಧುವೆಂದು ಘೋಷಿಸಿದರು.

ಸುಂದರವಾಗಿರುವ ಕನ್ಯೆ ಒಬ್ಬರಿಗೆ ಮಾತ್ರ ಸಿಮೀತವಾಗಿರಬಾರದು. ಎಲ್ಲರನ್ನೂ ಸಂತುಷ್ಟಪಡಿಸಲೇಬೇಕು ಎಂಬ ಹಟಕ್ಕೆ ಆಮ್ರಪಾಲಿ ನಗರವಧುವಾದಳು. ಅವಳ ಸುಂದರ ಕನಸುಗಳು ನೂಚ್ಚು ನೂರಾದವು. ಅವಳ ಸೌಂದರ್ಯವೇ ಅವಳಿಗೆ ಶಾಪವಾಯಿತು. ಅವಳಿಗೆ ಒಂದು ಭವ್ಯವಾದ ಅರಮನೆಯನ್ನು ಉಡುಗೊರೆಯಾಗಿ ನೀಡಲಾಯಿತು. ಅವಳ ಸೇವೆಗೆ ದಾಸಿಯರನ್ನು, ಕಾವಲಿಗೆ ಸೈನಿಕರನ್ನು ನಿಯೋಜಿಸಲಾಯಿತು.

ಆಮ್ರಪಾಲಿಯ ಸಾಂಗತ್ಯಕ್ಕಾಗಿ ಹಲವಾರು ತರುಣರು ಹಾತೊರೆದರು. ಬರೀ ವೈಶಾಲಿ ನಗರವಷ್ಟೇ ಅಲ್ಲದೇ ದೇಶವಿದೇಶಗಳಿಂದ ರಾಜಮಹಾರಾಜರು, ಶ್ರೀಮಂತರು, ಸಾಮಂತರು ಅವಳ ಅರಮನೆಯ ಮುಂದೆ ನಾಯಿಯಂತೆ ಕಾಯುತ್ತಿದ್ದರು. ಅವಳನ್ನು ಅನುಭವಿಸಲು ಅಂಗಲಾಚಿ ಹಣದ ಮಳೆಯನ್ನೇ ಸುರಿಸುತ್ತಿದ್ದರು. ಅವಳ ಬಟ್ಟಲು ಕಣ್ಣುಗಳು, ಬಳ್ಳಿಯಂತೆ ಬಳಕುವ ನಡುವಿಗೆ ಆಕರ್ಷಿತನಾಗದ ಪುರುಷನೇ ಇರಲಿಲ್ಲ. ಅವಳಿಗೆ ಮಧುಪಾನದ ಅವಶ್ಯಕತೆಯಿರಲಿಲ್ಲ. ಅವಳೇ ಒಂದು ನಶೆಯಾಗಿದ್ದಳು. ನೋಡುನೋಡುತ್ತಿದ್ದಂತೆ ಆಮ್ರಪಾಲಿ ಶ್ರೀಮಂತಳಾದಳು.

ಒಂದಿನ ಆಮ್ರಪಾಲಿ ವೈಶಾಲಿಯ ರಾಜಕುಮಾರನೊಂದಿಗೆ ವನವಿಹಾರಕ್ಕೆ ಹೋಗಿದ್ದಾಗ ಅವಳ ಮೇಲೆ ಒಂದು ಹುಲಿ ದಾಳಿ ಮಾಡಿತು. ಅವಳನ್ನು ರಕ್ಷಿಸಬೇಕಿದ್ದ ರಾಜಕುಮಾರ ಹುಲಿಗೆ ಹೆದರಿ ಓಡಿಹೋದನು. ಅದೇ ಸಮಯಕ್ಕೆ ಮಗಧದ ರಾಜಕುಮಾರ ಬಿಂಬಸಾರ ಅವಳನ್ನು ರಕ್ಷಿಸಿ ಅವಳಿಗೆ ಹತ್ತಿರವಾದನು. ಬಿಂಬಸಾರ ವೈಶಾಲಿ ನಗರಕ್ಕೆ ಶತ್ರುವಾಗಿದ್ದನು.

ವೈಶಾಲಿಯ ಮೇಲೆ ಸೇಡು ತೀರಿಸಿಕೊಳ್ಳಲು ಉಜ್ಜೈನಿಯ ವೀಣಾವಾದಕ ಆಮೋಧ ಎಂಬ ಮಾರುವೇಷದಲ್ಲಿ ವೈಶಾಲಿಯಲ್ಲಿದ್ದನು. ಆಮ್ರಪಾಲಿ ಬಿಂಬಸಾರನಿಗೆ ಮರುಳಾದಳು. ಬಿಂಬಸಾರ ವೈಶಾಲಿಯ ಶತ್ರುವಷ್ಟೇ ಅಲ್ಲ, ಅವಳು ನಗರವಧುವಾಗಲು ಮಗಧದ ಕುತಂತ್ರವೇ ಕಾರಣ ಎಂಬ ಸತ್ಯ ಗೊತ್ತಾದರೂ ಅವಳು ಬಿಂಬಸಾರನ ಶಾಂತಿ ನಾಟಕವನ್ನು ನಂಬಿದಳು. ಬಿಂಬಸಾರ ಮತ್ತು ಆಮ್ರಪಾಲಿಯ ಮಧ್ಯೆ ಪ್ರೇಮಾಂಕುರವಾಯಿತು. ಅವರು ಗುಪ್ತವಾಗಿ ಮದುವೆಯಾದರು. ಆಮ್ರಪಾಲಿ ಬಿಂಬಸಾರನೊಡನೆ ವೈಶಾಲಿ ನಗರಕ್ಕೆ ಮರಳಿದಳು.

ಆಮ್ರಪಾಲಿ ಮರಳಿ ಜೀವಂತವಾಗಿ ಬಂದಿರುವುದನ್ನು ಕಂಡು ವೈಶಾಲಿ ನಗರ ಸಂತಸದ ಕಡಲಲ್ಲಿ ತೇಲಾಡಿತು. ಬಿಂಬಸಾರ ವೀಣಾವಾದಕನಾಗಿ ಆಮ್ರಪಾಲಿಯ ಮನೆಯಲ್ಲೇ ಇದ್ದನು. ಆಮ್ರಪಾಲಿಯ ಮನೆಯಲ್ಲಿರುವ ಉಜ್ಜೈನಿಯ ವೀಣಾವಾದಕ ಆಮೋಧ, ತಮ್ಮ ಶತ್ರು ಮಗಧ ರಾಜ್ಯದ ರಾಜಕುಮಾರ ಬಿಂಬಸಾರ ಎಂದು ಗೊತ್ತಾದಾಗ ವೈಶಾಲಿಯ ಜನ ದಂಗೆಯೆದ್ದರು.

ಆಮ್ರಪಾಲಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದರು. “ಆಮ್ರಪಾಲಿ ತಮ್ಮ ಶತ್ರು ಬಿಂಬಸಾರದೊಂದಿಗೆ ಸೇರಿ ವೈಶಾಲಿಯ ಸರ್ವನಾಶಕ್ಕೆ ಸಂಚು ರೂಪಿಸಿದ್ದಾಳೆ” ಎಂಬ ಆಪಾದನೆ ಮೇರೆಗೆ ಅವಳನ್ನು ಬಂಧಿಸಿ ಸೆರೆಮನೆಯಲ್ಲಿಟ್ಟರು. ನಿಸ್ಸಹಾಯಕನಾಗಿದ್ದ ಬಿಂಬಸಾರ ಗುಪ್ತಮಾರ್ಗದ ಮೂಲಕ ತನ್ನ ಮಗಧ ರಾಜ್ಯಕ್ಕೆ ಮರಳಿದನು. ವೈಶಾಲಿಯ ಮೇಲೆ ದಾಳಿ ಮಾಡಲು ಬಲಿಷ್ಟವಾದ ಸೈನ್ಯವನ್ನು ಸಿದ್ದಮಾಡಿದನು.

ವೈಶಾಲಿಯ ಘನತೆಗಾಗಿ, ಗಣತಂತ್ರದ ರಕ್ಷಣೆಗಾಗಿ ತನ್ನ ಕನಸುಗಳನ್ನು ಬಲಿಕೊಟ್ಟು ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ಆಮ್ರಪಾಲಿಗೆ ರಾಜದ್ರೋಹದ ಆರೋಪ ಹೊರಿಸಿ ಸೆರೆಮನೆಗೆ ತಳ್ಳಿದ್ದು ಬಿಂಬಸಾರನಿಗೆ ಸಹಿಸಿಕೊಳ್ಳಲಾಗಲಿಲ್ಲ. ಅದಕ್ಕಾಗಿ ಆತ ವೈಶಾಲಿಯ ಮೇಲೆ ದಾಳಿ ಮಾಡಿದನು. ಗಯಾಸ್ಟ್ರೋಎಂಟರೈಟಿಸ್ ಟೀವಿ ಬಂಧಿಸಿಟ್ಟಿದ್ದ ಸೆರೆಮನೆಯೊಂದನ್ನು ಬಿಟ್ಟು, ಉಳಿದೆಲ್ಲ ನಗರವನ್ನು ಸಂಪೂರ್ಣವಾಗಿ ಸುಟ್ಟು ನಾಶಮಾಡಿ, ಆಮ್ರಪಾಲಿಯನ್ನು ಬಂಧಮುಕ್ತಗೊಳಿಸಿದನು.

ಬಂಧಮುಕ್ತಳಾದ ಆಮ್ರಪಾಲಿಗೆ ಖುಷಿಪಡಬೇಕೊ ಅಥವಾ ಯಾವ ನಗರದ ರಕ್ಷಣೆಗಾಗಿ ತನ್ನ ಶೀಲವನ್ನು ಸಾವಿರಾರು ಜನರಿಗೆ ಹಂಚಿ ನಗರವಧುವಾಗಿದ್ದಳೊ, ಆ ನಗರ ಸುಟ್ಟು ನಾಶವಾಗಿರುವುದರಿಂದ ಸಂಕಟ ಪಡಬೇಕೊ ಎಂಬುದು ತಿಳಿಯದಾಯಿತು. ಬಿಂಬಸಾರ ಹೀಗೆ ಮಾಡುವುದಕ್ಕೆ ವೈಶಾಲಿಯ ಸೇಡಿನ ಜೊತೆಗೆ ಅವಳ ಮೇಲಿನ ಪ್ರೀತಿಯೂ ಕಾರಣ ಎಂಬುದು ಅವಳಿಗೆ ತಿಳಿಯದೇ ಇರಲಿಲ್ಲ.

ಅವಳ ದೇಹ ಮಲಿನವಾಗಿದ್ದರೂ, ಮನಸ್ಸು ಪವಿತ್ರವಾಗಿತ್ತು. ವೈಶಾಲಿಯ ರಕ್ಷಣೆಗಾಗಿ ಅವಳು ತನ್ನನ್ನು ತಾನು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದಳು. ಆದರೆ ಅದೇ ನಗರ ತನ್ನ ಪ್ರಿಯಕರನಿಂದ ನಾಶವಾಗಿರುವುದನ್ನು ಅವಳಿಂದ ಅರಗಿಸಿಕೊಳ್ಳಲಾಗಲಿಲ್ಲ. ಅದಕ್ಕಾಗಿ ಬಿಂಬಸಾರ ಅವಳನ್ನು ಮಗಧಕ್ಕೆ ಬರುವಂತೆ ಅಂಗಲಾಚಿ ಬೇಡಿಕೊಂಡರೂ ಅವಳು ಹೋಗಲಿಲ್ಲ.

“ಬಿಂಬಸಾರನೊಂದಿಗೆ ಸೇರಿ ವೈಶಾಲಿಯ ನಾಶಕ್ಕಾಗಿ ಆಮ್ರಪಾಲಿ ಸಂಚು ರೂಪಿಸಿದ್ದಾಳೆ” ಎಂಬ ಆರೋಪ ನಿಜವಾಗಬಾರದೆಂಬ ಕಾರಣಕ್ಕಾಗಿ ಬಿಂಬಸಾರನ ಪ್ರೀತಿಯನ್ನು ಆಮ್ರಪಾಲಿ ತ್ಯಾಗ ಮಾಡಿದಳು. ಅವನ ಜೊತೆ ಮಗಧಕ್ಕೆ ಹೋಗದೆ, ಅವರಿಬ್ಬರ ಪ್ರೇಮದ ಸಂಕೇತವಾಗಿ ಅವಳ ಹೊಟ್ಟೆಯಲ್ಲಿ ಬೆಳೆಯುತ್ತಿದ್ದ ಮಗುವನ್ನು ಹೆತ್ತುಕೊಟ್ಟು, ಅವನಿಂದ ಶಾಶ್ವತವಾಗಿ ದೂರಾದಳು. ನಂತರ ಬುದ್ಧನ ವಿಚಾರವನ್ನು ಅರಿತು, ಬುದ್ಧನ ತತ್ವ ಉಪದೇಶಗಳಿಂದ ಪ್ರಭಾವಿತಳಾಗಿ, ಬುದ್ಧನ ಶಿಷ್ಯೆಯಾದಳು.

(-ಅಂಬಳೆಮಹಾದೇವಸ್ವಾಮಿ
ಸಹಾಯಕ ಪ್ರಾಧ್ಯಾಪಕ
ಕನ್ನಡ ವಿಭಾಗ
ಸೇಪಿಯಂಟ್ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು.ವಿಜಯನಗರ ಮೈಸೂರು.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending