ಬಹಿರಂಗ
‘ಸ್ವಾಭಿಮಾನ’ ಕುರಿತು ಅಂಬೇಡ್ಕರರ ಆತ್ಮಕತೆಯ ಪುಟಗಳಿಂದ..!
– ರಘೋತ್ತಮ ಹೊ.ಬ
”ಎಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ” Self respect ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿಗಳಿವು. ಬಹುಶಃ ವ್ಯಕ್ತಿಗೌರವ ಅಥವಾ ಸ್ವಾಭಿಮಾನದ ಬಗ್ಗೆ ಅಂಬೇಡ್ಕರರು ತಲೆಕೆಡಿಸಿಕೊಂಡಷ್ಟು ಈ ವಿಶ್ವದಲ್ಲಿ ಯಾರೂ ತಲೆಕೆಡಿಸಿಕೊಂಡಿರಲಿಕ್ಕಿಲ್ಲ. ಅದರಲ್ಲೂ ದಲಿತರ ಸ್ವಾಭಿಮಾನದ ಪ್ರಶ್ನೆ? ಹಾಗೆಯೇ ದಲಿತ ಮಹಿಳೆಯ ಸ್ವಾಭಿಮಾನದ ಪ್ರಶ್ನೆ? ಇಂತಹ ಪ್ರಶ್ನೆಗಳಿಗೆ ಉತ್ತರ ಹುಡುಕುವುದರಲ್ಲಿಯೇ, ಶೋಷಿತರಿಗೆ ಸ್ವಾಭಿಮಾನದ ಪಾಠ ಕಲಿಸುವುದರಲ್ಲಿಯೇ, ಆತ್ಮಗೌರವ ತಂದುಕೊಡುವುದರಲ್ಲಿಯೇ ಅಂಬೇಡ್ಕರ್ರವರು ತಮ್ಮ ಜೀವನವಿಡೀ ಶ್ರಮಿಸಿದರು. ಒಂದರ್ಥದಲ್ಲಿ ಅವರು ಸ್ವಾಭಿಮಾನದ ಕಿಡಿ.
ಕಿಡಿ ಅಥವಾ ಕೋಪ, ಹಾಗೆಂದಾಕ್ಷಣ ಅಂಬೇಡ್ಕರರು ಇದ್ದಕ್ಕಿದ್ದ ಹಾಗೆಯೇ ದಲಿತರ ಸ್ವಾಭಿಮಾನದ ಬಗ್ಗೆ ಈ ಪರಿ ತಲೆಕೆಡಿಸಿಕೊಂಡರೆ ಅಥವಾ ಯಾರದೋ ಮೇಲಿನ ದ್ವೇಷಕ್ಕೆ ಹಾಗೆ ನಿರ್ಧಾರಕ್ಕೆ ಬಂದರೆ? ಖಂಡಿತ ಇಲ್ಲ. ಹಾಗಿದ್ದರೆ? 1935 ಅಕ್ಟೋಬರ್ 13ರಂದು ನಾಸಿಕ್ನ ಈಯೋಲಾ ಎಂಬಲ್ಲಿ ಅಂಬೇಡ್ಕರರು ಕೇಳುವ ಪ್ರಶ್ನೆಗಳನ್ನು ನೋಡಿ.
- ಈ ಭಾರತದಲ್ಲಿ ನೀವೊಬ್ಬರೇ(ದಲಿತರು) ಯಾಕೆ ಶೋಷಣೆಗೊಳಗಾಗುತ್ತಿದ್ದೀರಿ?
- ಹಿಂದೂ ಧರ್ಮ ನಿಮಗೆ ಕರುಣೆ ತೋರಿಸುತ್ತಿಲ್ಲವೇಕೆ?
- ಹಿಂದುತ್ವದಲ್ಲಿ ನಿಮಗೆ ಸಮಾನತೆ ಇದೆಯೇ?
- ಹಿಂದುತ್ವದಲ್ಲಿ ನಿಮಗೆ ಸ್ವಾತಂತ್ರ್ಯವಿದೆಯೇ?
ಬಹುಶಃ ಈ ಪ್ರಶ್ನೆಗಳು ಹಿಂದೂಗಳಿಗೆ ಎಲ್ಕೆಜಿ ಮಕ್ಕಳ ಪ್ರಶ್ನೆಗಳ ಹಾಗೆ ಕಾಣಬಹುದು. ಆದರೆ ಶೋಷಿತರಿಗೆ? ಅವು ಅಂಬೇಡ್ಕರರ ಸ್ವಾಭಿಮಾನದ ಕಿಡಿಯ ಸಣ್ಣ ಕಣಗಳಂತೆ ಕಂಡರೆ ಅತಿಶಯೋಕ್ತಿಯೇನಲ್ಲ. ಯಾಕೆಂದರೆ ಅಂಬೇಡ್ಕರರಿಂದ ಇಂತಹ ಪ್ರಶ್ನೆಗಳನ್ನು ಎದುರಿಸಿದ ಯಾವುದೇ ದಲಿತನಾದರೂ “ತನ್ನೊಬ್ಬನ ಮೇಲೆ ಯಾಕೆ ದೌರ್ಜನ್ಯ ನಡೆಯುತ್ತಿದೆ? ಯಾಕೆಂದರೆ ನಾನು ಕೀಳು ಜಾತಿಯವನು. ಹಿಂದೂಗಳೆಲ್ಲ ನಮಗೆ ಕರುಣೆ ತೋರಿಸುತ್ತಿಲ್ಲ, ಯಾಕೆಂದರೆ ನಾವು ಕರುಣೆಗೆ ಅರ್ಹರಲ್ಲ. ಹಿಂದೂಗಳೆಲ್ಲ ನಮಗೆ ಸಮಾನತೆ ನೀಡುತ್ತಿಲ್ಲ, ಯಾಕೆಂದರೆ ನಾವು ಸಮಾನತೆಗೆ ಅರ್ಹರಲ್ಲ. ಹಿಂದುತ್ವದಲ್ಲಿ ನಮಗೆ ಸ್ವಾತಂತ್ರ್ಯವಿಲ್ಲ, ಯಾಕೆಂದರೆ ನಾವು ಸ್ವಾತಂತ್ರ್ಯಕ್ಕೂ ಕೂಡ ಅರ್ಹರಲ್ಲ” ಎಂದುಕೊಳ್ಳುತ್ತಾನೆಯೇ? ಖಂಡಿತ ಇಲ್ಲ. ಬದಲಿಗೆ ಆತ ಅಂಬೇಡ್ಕರರ ಪ್ರಶ್ನೆಗಳ ಬಗ್ಗೆ ಗಹನವಾಗಿ ಚಿಂತಿಸುತ್ತಾನೆ. ನಾನು ಯಾರು? ನಾನೇಕೆ ಹೀಗಾದೆ? ನನ್ನ ಹೀನಾಯ ಸ್ಥಿತಿಗೆ ಕಾರಣರಾರು? ಎಂದು ತನ್ನನ್ನೆ ತಾನು ಪ್ರಶ್ನಿಸಿಕೊಳ್ಳುತ್ತಾನೆ. ಒಮ್ಮೆ ಆತ ಪ್ರಶ್ನಿಸಿಕೊಳ್ಳಲು ಪ್ರಾರಂಭಿಸಿದನೆಂದರೆ ಮುಗಿಯಿತು ಆತ ಸ್ವಾಭಿಮಾನಿಯಾದನೆಂದೇ ಅರ್ಥ. ಅಂದಹಾಗೆ ಅಂಬೇಡ್ಕರರು ಬಯಸಿದ್ದು ಇದನ್ನೆ!
ಹಾಗೆ ಹೇಳುವುದಾದರೆ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಪ್ರಶ್ನೆ ಇಲ್ಲಿಗೇ ಮುಗಿಯುವುದಿಲ್ಲ. ಅವರ ಆತ್ಮಕತೆಯ ಪುಟಗಳತ್ತ ಚಿತ್ತಹರಿಸುವುದಾದರೆ, ಅಂಬೇಡ್ಕರರು 1936 ಮೇ 17ರಂದು ಥಾಣೆ ಜಿಲ್ಲೆಯ ಕಲ್ಯಾಣ್ ಎಂಬಲ್ಲಿ ತನ್ನ ಸ್ವಾಭಿಮಾನವನ್ನು ಕೆಣಕಿದ ಬಾಲ್ಯದ ಕೆಟ್ಟ ಘಟನೆಯನ್ನು ಹೀಗೆ ವಿವರಿಸುತ್ತಾರೆ2 “ನಾನು ಇಂಧೋರ್ ಸಮೀಪದ ಮಹೌ ಎಂಬಲ್ಲಿ ಹುಟ್ಟಿದೆ. ನನ್ನ ತಂದೆ ಮಹೌನಲ್ಲಿ ಸೇನೆಯ ಸುಬೇದಾರ್ ಹುದ್ದೆಯಲ್ಲಿದ್ದರು. ನಾವು ಅಲ್ಲಿದ್ದಷ್ಟು ದಿನ ಅಂದರೆ ಸೇನೆಯ ಕ್ವಾರ್ಟರ್ಸ್ನ ಕಾರ್ಯಸ್ಥಾನದಲ್ಲಿಷ್ಟೂ ದಿನ ನಮಗೆ ಅಸ್ಪøಶ್ಯತೆಯ ಗಂಧ ಗಾಳಿಯು ತಿಳಿದಿರಲಿಲ್ಲ. ಆದರೆ ನನ್ನ ತಂದೆ ಸೇನೆಯಿಂದ ನಿವೃತ್ತರಾಗಿ ಸತಾರಕ್ಕೆ ಬಂದಾಗ ನನಗೆ ಅಸ್ಪøಶ್ಯತೆಯ ಪ್ರಥಮ ಅನುಭವವಾಯಿತು.
ಮುಖ್ಯವಾಗಿ ಅದು ಕ್ಷೌರಕ್ಕೆ ಸಂಬಂಧಪಟ್ಟಂತೆ. ಯಾಕೆಂದರೆ ಸತಾರದಲ್ಲಿ ಅಷ್ಟೊಂದು ಕ್ಷೌರಿಕರಿದ್ದರೂ ಯಾವುದೇ ಕ್ಷೌರಿಕನೂ ನಮ್ಮ ತಲೆಕೂದಲು ಕತ್ತರಿಸಲು ಮುಂದೆ ಬರುತ್ತಿರಲಿಲ್ಲ. ಈ ಕಾರಣಕ್ಕಾಗಿ ದುರಂತವೆಂದರೆ ನಮ್ಮ ಹಿರಿಯ ಅಕ್ಕನೇ ನಮ್ಮನ್ನು ಮನೆಯ ಹೊರಗಡೆ ಕೂರಿಸಿ ನಮ್ಮ ತಲೆಗೂದಲನ್ನು ಕತ್ತರಿಸಬೇಕಾಗುತ್ತಿತ್ತು! ಒಂದರ್ಥದಲಿ ಇದು ನನ್ನನ್ನು ವಿಚಲಿತಗೊಳಿಸಿತು. ಯಾಕೆ ಹೀಗೆ ಇಷ್ಟೊಂದು ಕ್ಷೌರಿಕರಿದ್ದರೂ ನಮ್ಮ ಕೂದಲನ್ನು ಕತ್ತರಿಸಲು ಅವರು ಮುಂದೆ ಬರುತ್ತಿಲ್ಲವೇಕೆ? ಎಂಬ ಪ್ರಶ್ನೆ ನನ್ನನ್ನು ಪದೇ ಪದೇ ಕಾಡತೊಡಗಿತು”.
ಮತ್ತೊಂದು ಘಟನೆ : “ನಮ್ಮ ತಂದೆ ಗೋರೆಗಾಂವ್ನಲ್ಲಿರಬೇಕಾದರೆ ಅವರು ಒಮ್ಮೆ ನಮ್ಮನ್ನು ಗೋರೆಗಾಂವ್ಗೆ ಬನ್ನಿ ಎಂದು ಕರೆದರು. ಹಾಗೆಯೇ ಪ್ರಯಾಣದ ಖರ್ಚಿಗೆ ಎಂದು ಅವರು ಸ್ವಲ್ಪ ಹಣವನ್ನೂ ಕಳುಹಿಸಿದ್ದರು. ಆ ಹಣದಿಂದ ಹೊಸಬಟ್ಟೆ ಖರೀದಿಸಿ, ರೈಲಿನಲ್ಲಿ ಪಯಣಿಸುವ ಕನಸು ಕಾಣುತ್ತಾ ಖುಷಿಯಿಂದ ನಾನು, ನನ್ನ ಸಹೋದರ ಮತ್ತು ನನ್ನ ಅಕ್ಕನ ಮಗಳು ಮೂವರು ಗೋರೆಗಾಂವ್ನತ್ತ ಹೊರಟೆವು. ಹಾಗೆಯೇ ನಾವು ಬರುವುದಾಗಿ ಅದಾಗಲೇ ನಮ್ಮ ತಂದೆಯವರಿಗೆ ಪತ್ರವೊಂದನ್ನು ಸಹ ಕಳುಹಿಸಿದ್ದೆವು. ಆದರೆ ಅದು ಅವರಿಗೆ ತಲುಪಿರಲಿಲ್ಲ.
ಆ ಕಾರಣಕ್ಕಾಗಿ ನಾವು ಗೋರೆಗಾಂವ್ ತಲುಪಿದಾಗ ನಮ್ಮ ತಂದೆಯವರು ಕಳುಹಿಸಿರಬಹುದೆನ್ನುವ ಸೇವಕನಿಗಾಗಿ ನಾವು ಹುಡುಕಿದರೂ ಆತ ನಮಗೆ ಕಾಣಲಿಲ್ಲ. ವಿಧಿಯಿಲ್ಲದೆ ಮುಕ್ಕಾಲು ಗಂಟೆ ನಾವು ಸ್ಟೇಷನ್ನಲ್ಲಿಯೇ ಕಳೆದೆವು. ಯಾರಾದರೂ ಬರಬಹುದು ನಮ್ಮನ್ನು ಕರೆದುಕೊಂಡು ಹೋಗಬಹುದು ಎಂದು ಕಾಯುತ್ತಾ ಕುಳಿತೆವು. ಅದೇ ಸಮಯಕ್ಕೆ ಅಲ್ಲಿಗೆ ಬಂದ ಸ್ಟೇಷನ್ ಮಾಸ್ಟರ್ ’ನೀವು ಯಾರಿಗಾಗಿ ಕಾಯುತ್ತಿದ್ದೀರಿ? ಯಾವ ಜಾತಿ? ಎಲ್ಲಿಗೆ ಹೋಗಬೇಕು?’ ಎಂದೆಲ್ಲ ಕೇಳಿದ. ನಾನು ಅವನಿಗೆ ‘ನಾವು ಮಹಾರ್ ಜಾತಿಗೆ ಸೇರಿದವರು’ ಎಂದು ನೇರವಾಗಿಯೇ ಹೇಳಿದೆ. ನಾನು ಹಾಗೆನ್ನುತ್ತಲೇ ಆತ ಆಘಾತಕ್ಕೊಳಗಾದ! ತಕ್ಷಣ ನಮ್ಮಿಂದ ಐದು ಹೆಜ್ಜೆ ಹಿಂದೆ ಸರಿದ! ಆದರೆ ನಾವು ಉತ್ತಮವಾಗಿ ಡ್ರೆಸ್ ಮಾಡಿಕೊಂಡಿದ್ದನ್ನು ನೋಡಿ ಉತ್ತಮ ಕುಲಕ್ಕೆ ಸೇರಿದವರಿರಬಹುದೆಂದುಕೊಂಡು ಎತ್ತಿನಗಾಡಿಯೊಂದನ್ನು ವ್ಯವಸ್ಥೆ ಮಾಡುವುದಾಗಿ ಹೇಳಿದ.
ಆದರೆ ನಾವು ಮಹಾರ್ ಜಾತಿಯವರಾಗಿದ್ದರಿಂದ ಯಾವುದೇ ಎತ್ತಿನಗಾಡಿಯವನು ನಮ್ಮನ್ನು ಕೂರಿಸಿಕೊಂಡು ಹೋಗಲು ಮುಂದೆ ಬರಲಿಲ್ಲ. ಕಡೆಗೂ ಒಬ್ಬ ಒಪ್ಪಿಕೊಂಡನಾದರೂ ಆತನ ಕಂಡೀಷನ್ ಏನೆಂದರೆ ‘ನಾನು ಗಾಡಿ ಚಲಾಯಿಸುವುದಿಲ್ಲ. ನಿಮ್ಮಲ್ಲೆ ಯಾರಾದರೊಬ್ಬರು ಗಾಡಿ ಚಲಾಯಿಸಿ. ನಾನು ನಿಮ್ಮ ಜೊತೆ ಬರುತ್ತೇನೆ’ ಎಂಬುದಾಗಿತ್ತು! ಅಂದಹಾಗೆ ಆತ ಹಾಗೆ ಬರುತ್ತೇನೆ ಎಂದಾಗ ಸಮಯ ಸಂಜೆ ಏಳು ಗಂಟೆಯಾಗಿತ್ತು. ಹಾಗೆಯೇ ಮಿಲಿಟರಿ ಏರಿಯಾದವನಾದ್ದರಿಂದ ನನಗೆ ಗಾಡಿ ಚಲಾಯಿಸುವುದು ಕಷ್ಟವೇನಿರಲಿಲ್ಲ. ಅವನ ಕಂಡೀಷನ್ಗೆ ಒಪ್ಪಿಕೊಂಡು ನಾನು ಮತ್ತು ಉಳಿದ ಮಕ್ಕಳೆಲ್ಲ ಗಾಡಿಯಲ್ಲಿ ಗೋರೆಗಾಂವ್ ಕಡೆ ಹೊರಟೆವು”.
“ಸ್ವಲ್ಪ ದೂರ ಹೋದನಂತರ ಒಂದು ಊರಿನ ಹೊರಗಡೆ ಒಂದು ಕೊಳ ಕಂಡೆವು. ‘ಮುಂದೆ ಎಲ್ಲಿಯೂ ನಿಮಗೆ ನೀರು ಸಿಗುವ ಸಾಧ್ಯತೆ ಇಲ್ಲವಾದ್ದರಿಂದ ನೀವು ಇಲ್ಲಿಯೇ ನಿಮ್ಮ ಊಟವನ್ನು ಮಾಡಬಹುದು’ ಎಂದು ಗಾಡಿಯವನು ನಮಗೆ ಸೂಚಿಸಿದ. ಅವನು ಹೇಳಿದ ಹಾಗೆ ಗಾಡಿಯಿಂದ ಇಳಿದ ನಾವು, ಅಲ್ಲಿಯೇ ನಾವು ತಂದಿದ್ದ ಬುತ್ತಿಯನ್ನು ತಿಂದು ಕೆಸರು ಕೆಸರಾದ ಗಬ್ಬುನಾರುತ್ತಿದ್ದ ಆ ಕೊಳದ ನೀರನ್ನೆ ಕುಡಿದೆವು. ಗಾಡಿಯವ ಗ್ರಾಮದ ಒಳಕ್ಕೆ ಹೋಗಿ ಅಚ್ಚುಕಟ್ಟಾಗಿ ತನ್ನ ಊಟ ಮುಗಿಸಿ ಮತ್ತೆ ನಮ್ಮ ಬಳಿ ಬಂದ”!
“ಇತ್ತ ನಮ್ಮ ಪ್ರಯಾಣ ಮುಂದುವರಿದ ಹಾಗೇ ಕತ್ತಲು ಹೆಚ್ಚಾಗತೊಡಗಿತ್ತು. ಯಾವುದೇ ಬೀದಿ ದೀಪವಾಗಲೀ ಬೆಳಕಿನ ಸಣ್ಣ ತುಣುಕಾಗಲೀ ನಮಗೆ ಕಾಣಲಿಲ್ಲ. ಈ ಕಾರಣಕ್ಕಾಗಿ ಭಯಗೊಂಡ ನಾವು ಕತ್ತಲೆ ಮತ್ತು ಒಂಟಿತನದಿಂದಾಗಿ ಹೆದರಿ ಜೋರಾಗಿ ಅಳಲಾರಂಭಿಸಿದೆವು. ಅಷ್ಟೊತ್ತಿಗಾಗಲೇ ಅರ್ಧರಾತ್ರಿಯಾಗಿತ್ತು. ಆ ಸಂದರ್ಭದಲ್ಲಿ ನಾವು ಎಂತಹ ಸ್ಥಿತಿ ತಲುಪಿದ್ದೆವೆಂದರೆ ‘ನಾವು, ನಮ್ಮಪ್ಪರಾಣೆಗೂ ಗೋರೆಗಾಂವ್ ತಲುಪುವುದಿಲ್ಲ’ ಎಂದು ಹತಾಶೆಗೊಂಡೆವು. ಹಾಗೆ ಮುನ್ನಡೆಯುತ್ತಲೇ ನಾವು ಒಂದು ಚೆಕ್ಪೋಸ್ಟ್ ತಲುಪಿದೆವು. ಚೆಕ್ಪೋಸ್ಟ್ನ ಕಾವಲುಗಾರನನ್ನು ನಾನು ‘ಇಲ್ಲಿ ಎಲ್ಲಾದರೂ, ತಿನ್ನಲು ಏನಾದರೂ ಸಿಗುತ್ತದೆಯಾ?’ ಎಂದು ಕೇಳಿದೆ. ಕಾವಲುಗಾರ ಪರ್ಷಿಯನ್ ಭಾಷೆ ಮಾತನಾಡುತ್ತಿದ್ದನಾದ್ದರಿಂದ ಅವನ ಜೊತೆ ಪರ್ಷಿಯನ್ ಭಾಷೆಯಲ್ಲಿಯೇ ಮಾತನಾಡಿದೆ. ನಮ್ಮ ಹಿನ್ನೆಲೆ ತಿಳಿದ ಆತ ಕೂಡ ಅಷ್ಟೆ, ಅಷ್ಟೆ ಕ್ರೂರವಾಗಿ ಉತ್ತರಿಸಿದ ಹಾಗೂ ಸಮೀಪದಲ್ಲಿ ಬೆಟ್ಟವೊಂದಿದೆ ಅಲ್ಲಿ ನಿಮಗೆ ಏನಾದರೂ ಸಿಗುತ್ತದೆಂಬಂತೆ ಸಮೀಪದಲ್ಲೇ ಇದ್ದ ಬೆಟ್ಟದತ್ತ ಕೈತೋರಿಸಿದ.
ವಿಧಿಯಿಲ್ಲದೆ ಹೇಗೋ ಆ ರಾತ್ರಿಯನ್ನು ನಾವು ಅಲ್ಲೇ ಆ ಬೆಟ್ಟದ ಪಕ್ಕದಲ್ಲಿಯೇ ಇದ್ದ ಕೊರಕಲೊಂದರಲ್ಲಿ ಕಳೆದೆವು! ಹಾಗೆಯೇ ಬೆಳಿಗ್ಗೆಯಾದದ್ದೆ ತಡ ಗೋರೆಗಾಂವ್ನತ್ತ ಮತ್ತೆ ನಮ್ಮ ಪ್ರಯಾಣವನ್ನು ಮುಂದುವರಿಸಿದೆವು. ಹೀಗೆ ಸಾಗಿದ ನಮ್ಮ ಪ್ರಯಾಣ ಕೊನೆಗೊಂಡದ್ದು ಮಧ್ಯಾಹ್ನಕ್ಕೆ. ಏಕೆಂದರೆ ಆ ದಿನ ನಾವು ಗೋರೆಗಾಂವ್ ತಲುಪಿದಾಗ ಮಧ್ಯಾಹ್ನವಾಗಿತ್ತು. ಅದೂ ವಿಪರೀತ ಸುಸ್ತಾಗಿದ್ದೆವು. ಒಂದರ್ಥದಲ್ಲಿ ಅರ್ಧ ಸತ್ತಿದ್ದೆವು ಎಂದರೆ ಅತಿಶಯೋಕ್ತಿಯೆನಲ್ಲ”!”
ಮರದಡಿಯಲ್ಲಿ ಗಳಗಳನೆ ಅತ್ತದ್ದು4! “ಮೂರನೆಯ ಘಟನೆಯೊಂದನ್ನು ಇಲ್ಲಿ ಹೇಳಲೇ ಬೇಕು. ಅದು ನಾನು ಬರೋಡ ರಾಜ್ಯದಲ್ಲಿ ಹುದ್ದೆಯಲ್ಲಿದ್ದ ಸಂದರ್ಭ. ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳುವಾಗ ಬರೋಡ ರಾಜ್ಯದಿಂದ ನಾನು ವಿದ್ಯಾರ್ಥಿ ವೇತನ ಪಡೆದಿದ್ದೆ. ಆ ಸಂಧರ್ಭದಲ್ಲಿ ಆದ ಒಪ್ಪಂದದಂತೆ ಇಂಗ್ಲೆಂಡಿನಿಂದ ಹಿಂದಿರುಗಿ ಬಂದಾಗ ಒಪ್ಪಂದದಂತೆ ಬರೋಡ ಸಂಸ್ಥಾನದಲ್ಲಿ ಅಧಿಕಾರಿಯಾಗಿ ಉದ್ಯೋಗಕ್ಕೆ ಸೇರಿಕೊಂಡೆ. ದುರಂತವೆಂದರೆ ಆ ಸಂದರ್ಭದಲ್ಲಿ ಬರೋಡದಲ್ಲಿ ನನಗೆ ಉಳಿದುಕೊಳ್ಳಲು ಒಂದು ಮನೆ ಕೂಡ ಸಿಗಲಿಲ್ಲ. ಬರೋಡದಂಥ ಆ ಮಹಾನಗರದಲ್ಲಿ ಒಬ್ಬ ಹಿಂದೂವಿರಬಹುದು, ಮುಸಲ್ಮಾನನಿರಬಹುದು ಯಾರೊಬ್ಬರೂ ನನಗೆ ಬಾಡಿಗೆಗೆ ಮನೆ ಕೊಡಲು ಮುಂದೆಬರಲಿಲ್ಲ. ಕಡೆಗೆ ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಉಳಿದುಕೊಳ್ಳಲು ನಿರ್ಧರಿಸಿದೆ.ಅಮೆರಿಕಾ ಮತ್ತು ಇಂಗ್ಲೆಂಡಿನಿಂದ ಹಿಂದಿರುಗಿ ಬಂದಿದ್ದವನಾದ್ದರಿಂದ ನನ್ನ ಮೈ ಬಣ್ಣ ಸುಂದರವಾಗಿತ್ತು! ಹಾಗೆಯೇ ಆಕರ್ಷಕ ವ್ಯಕ್ತಿತ್ವ ಕೂಡ ನನ್ನದಾಗಿತ್ತು. ಆ ಕಾರಣಕ್ಕಾಗಿ ನನಗೆ ನಾನೇ ಒಂದು ಪಾರ್ಸಿ ಹೆಸರನ್ನು ಇಟ್ಟುಕೊಂಡು ಆ ಧರ್ಮಛತ್ರದಲ್ಲಿ ವಾಸಿಸಲು ಪ್ರಾರಂಭಿಸಿದೆ!
ಅಂದಹಾಗೆ ಆಗ ನಾನು ಇಟ್ಟುಕೊಂಡ ಹೆಸರು ‘ಅಡಲ್ಜಿ ಸೊರಾಬ್ಜಿ’ ಎಂಬುದಾಗಿತ್ತು! ನನ್ನನ್ನು ಪಾರ್ಸಿ ಎಂದು ನಂಬಿದ ಆ ಧರ್ಮಛತ್ರದ ಪಾರ್ಸಿ ಜನಾಂಗದ ಮ್ಯಾನೇಜರ್ ನನಗೆ ದಿನವೊಂದಕ್ಕೆ 2ರೂ ಬಾಡಿಗೆಯಂತೆ ಮನೆ ನೀಡಿದ. ಆದರೆ ಸತ್ಯ ಗೊತ್ತಾಗಲೇಬೇಕಲ್ಲವೆ? ಯಾಕೆಂದÀರೆ ಬರೋಡದ ರಾಜಶ್ರೇಷ್ಠ ಗಾಯಕವಾಡ ಮಹಾರಾಜರು ತನ್ನ ಆಸ್ಥಾನದಲ್ಲಿ ಮಹಾರ್ ಹುಡುಗನೊಬ್ಬನನ್ನು ಅಧಿಕಾರಿಯಾಗಿ ನೇಮಿಸಿಕೊಂಡಿರುವ ಸುದ್ದಿ ಅದಾಗಲೇ ಕಾಡ್ಗಿಚ್ಚಿನಂತೆ ಹರಡಿತ್ತು! ಮತ್ತು ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಸುಳ್ಳು ಹೆಸರಿನಲ್ಲಿ ಉಳಿದುಕೊಂಡಿದ್ದು ಕೂಡ ಅನುಮಾನಕ್ಕೆ ಕಾರಣವಾಗಿತ್ತು. ಕಡೆಗೂ ನನ್ನ ಗುಟ್ಟು ಹೊರಬಿತ್ತು”.
“ಏಕೆಂದರೆ ಅಲ್ಲಿ ನಾನು ಉಳಿದುಕೊಂಡಿದÀ್ದ ಎರಡನೇ ದಿನ ನಾನು ತಿಂಡಿ ತಿಂದು ಕಛೇರಿಗೆ ತೆರಳಲು ಪ್ರಾರಂಭಿಸುತ್ತಿದ್ದಂತೆ ದೊಣ್ಣೆಗಳನ್ನು ಹಿಡಿದಿದ್ದ ಹದಿನೈದರಿಂದ ಇಪ್ಪತ್ತು ಜನರಷ್ಟಿದ್ದ ಪಾರ್ಸಿ ಜನರ ಗುಂಪೊಂದು ನನ್ನ ಮೇಲೆ ಧಾಳಿ ಮಾಡಿತು. ನನ್ನನ್ನು ಕೊಲ್ಲುವುದಾಗಿ ಕೂಗಾಡಿದ ಆ ಗುಂಪು ನಾನು ಯಾರೆಂದು ಪ್ರಶ್ನಿಸಿತು. ನಾನು ಸಾವಧಾನವಾಗಿ ’ನಾನೊಬ್ಬ ಹಿಂದೂ’ ಎಂದು ಉತ್ತರಿಸಿದೆ. ಆದರೆ ನನ್ನ ಉತ್ತರದಿಂದ ತೃಪ್ತರಾಗದ ಉದ್ರಿಕ್ತ ಆ ಗುಂಪು ನನ್ನ ಮೇಲೆ ಬೈಗುಳಗಳ ಸುರಿಮಳೆಯನ್ನೇ ಸುರಿಸಿತು ಮತ್ತು ನನ್ನನ್ನು ತಕ್ಷಣವೇ ಕೊಠಡಿ ಖಾಲಿ ಮಾಡುವಂತೆ ಆ ಗುಂಪು ಕೂಗಿ ಹೇಳಿತು. ನಿಜಕ್ಕೂ ಹೇಳುವುದಾದರೆ ನನ್ನ ದೃಢಮನಸ್ಸು ಮತ್ತು ನಾನು ಗಳಿಸಿದ ಜ್ಞಾನ ಆ ಸಂದರ್ಭವನ್ನು ನಾನು ಧೈರ್ಯದಿಂದ ಎದುರಿಸಲು ನನಗೆ ಬಲ ನೀಡಿತು ಎನ್ನಬಹುದು.
ಏಕೆಂದರೆ ನಮ್ರತೆಯಿಂದ ಆ ಗುಂಪನ್ನು ನಾನು ನನಗೆ ಎಂಟು ಗಂಟೆಗಳ ಕಾಲಾವಕಾಶ ನೀಡಬೇಕೆಂದು ಕೇಳಿಕೊಂಡೆ. ಹಾಗೆಯೇ ಆ ದಿನ ಪೂರ್ತಿ ನಾನು ಉಳಿದುಕೊಳ್ಳಲು ಮನೆಯೊಂದನ್ನು ಹುಡುಕುವಲ್ಲಿಯೇ ಕಳೆದೆ. ಆದರೆ ‘ನನ್ನ ತಲೆಯನ್ನು ಅಡಗಿಸಿಕೊಳ್ಳಲು’’ಸ್ಥಳವೊಂದನ್ನು ಪಡೆಯುವಲ್ಲಿ ಕಡೆಗೂ ನಾನು ವಿಫಲನಾದೆ! ನನ್ನ ಬಹುತೇಕ ಸ್ನೇಹಿತರನ್ನು ಈ ಸಂದರ್ಭದಲ್ಲಿ ನಾನು ಸಂಪರ್ಕಿಸಿದೆ. ಆದರೆ ಅವರೆಲ್ಲರೂ ನನ್ನ ಬೇಡಿಕೆಗೆ ನಕಾರಾತ್ಮಕವಾಗಿ ಉತ್ತರ ನೀಡಿದರು. ನನಗೆ ವಸತಿ ಒದಗಿಸಿಕೊಡುವಲ್ಲಿ ತಮ್ಮ ಅಸಹಾಯಕತೆಯನ್ನು ಅವರು ಪ್ರದರ್ಶಿಸಿದರು. ನಾನು ತೀವ್ರವಾಗಿ ನಿರಾಶಗೊಂಡೆ ಮತ್ತು ಒಂದರ್ಥದಲಿ ಹತಾಶನಾದೆ.
ಮುಂದೇನು ಮಾಡಲಿ? ನನಗೆ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ. ನಿರಾಶ ಮತ್ತು ಹತಾಶ ಮನಸ್ಥಿತಿಯಲ್ಲಿ ಒಂದೆಡೆ ಮರದ ನೆರಳಲ್ಲಿ ಕುಳಿತೆ. ನನ್ನ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯುತ್ತಿತ್ತು. ದುಖಃ ತಡೆಯಲಾರದೆ ಗಳಗಳನೆ ಅತ್ತೆ. ಕಡೆಗೆ ಮನೆ ದೊರೆಯುವ ಯಾವ ಭರವಸೆಯೂ ಇಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕೆಲಸ ಬಿಡಲು ನಿರ್ಧರಿಸಿದೆ ಮತ್ತು ನನ್ನ ಹುದ್ದೆಗೆ ರಾಜೀನಾಮೆ ಇತ್ತು ಆ ರಾತ್ರಿಯೇ ರೈಲಿನಲ್ಲಿ ವಾಪಸ್ ಮುಂಬೈಗೆ ಪ್ರಯಾಣ ಬೆಳೆಸಿದೆ”.
ಪರಮಶ್ರೇಷ್ಠ, ಅಪ್ಪಟ ಸ್ವಾಭಿಮಾನಿ ಎದುರಿಸಿದ ಘೋರ ಕ್ಷಣಗಳಿವು. ಯಾವ ಜ್ಞಾನಿ ವಿದೇಶಗಳಿಂದ ಸಾಲು ಸಾಲು ಪದವಿಗಳಿಸಿ ಜ್ಞಾನದ ಹೊರೆಯನ್ನೇ ಹೊತ್ತುತಂದನೋ ಅಂತಹ ವಿಶ್ವಜ್ಞಾನಿಗೆ ಭಾರತದಲ್ಲಿ ಸಂದ ಮರ್ಯಾದೆಯಿದು! ಹಾಗೆಯೇ ಜಾತಿಯ ಕೂಪಕ್ಕೆ ಸಿಕ್ಕು ಸಮಾಜ ತಲುಪಿರುವ ದಯನೀಯ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇದು. ಅಂಬೇಡ್ಕರ್ರಂತಹ ಮಹಾನ್ ಜ್ಞಾನಿಗೇ ಈ ಸಮಾಜ ಮನೆ ಕೊಡಲು ನಿರಾಕರಿಸಿತೆಂದರೆ ಇನ್ನು ನಮ್ಮಂತಹ ಸಾಮಾನ್ಯ ಅಸ್ಪøಶ್ಯರ ಪಾಡೇನಾಗಬೇಡ! ಅದೂ ಅಂಬೇಡ್ಕರರು ಈ ಜಾತಿವಾದಿಗಳಿಗೋಸ್ಕರ ತಮ್ಮ ಹೆಸರನ್ನು ’ಅಡಲ್ಜಿ ಸೊರಾಬ್ಜಿ’ ಎಂದು ಸುಳ್ಳು ಕೂಡ ಹೇಳಬೇಕಾಯ್ತು!
ಅಂದಹಾಗೆ ಈಗ ಬೇರೆ ಏನು? ದಲಿತರಿಗೆ ಮೇಲ್ಜಾತಿಗಳವರು ಮನೆಕೊಡುತ್ತಾರೆಯೇ? ಖಂಡಿತ ಇಲ್ಲ. ಅದೂ ಕೊಟ್ಟರೂ ದಲಿತರು ಸುಳ್ಳು ಜಾತಿ ಹೇಳಬೇಕಷ್ಟೆ. ಮಹದೇವಯ್ಯ ಎಂಬ ತಮ್ಮ ಹೆಸರನ್ನು ಮಹದೇವೇಗೌಡ, ಮಹದೇವಪ್ಪ, ಮಹದೇವಾಚಾರ್, ಮಹದೇವ ಶೆಟ್ಟಿ ಹೀಗೆ ಬದಲಿಸಿಕೊಂಡು ಸುಳ್ಳು ಹೇಳಬೇಕಷ್ಟೆ! ಅಕಸ್ಮಾತ್ ಮೇಲ್ಜಾತಿ ಜನರಿಗೆ ಇವರ ಒರಿಜಿನಲ್ ಜಾತಿ ಗೊತ್ತಾದರೆ? ಇವರ ಪರಿಸ್ಥಿತಿ ಅಂಬೇಡ್ಕರರಿಗಿಂತೇನು ಭಿನ್ನವಾಗಿರಲಿಕ್ಕಿಲ್ಲ. ಒಂದಂತು ನಿಜ, ಸ್ವಾಭಿಮಾನದ ಜ್ಯೋತಿ ಎದುರಿಸಿದ ಕಷ್ಟದ ಕ್ಷಣಗಳವು.
ಗೋರೆಗಾಂವ್ಗೆ ಹೋಗುವಾಗ ಆ ಕಾಡುಗತ್ತಲಲ್ಲಿ ಬಾಬಾಸಾಹೇಬರ ಆ ಸುಂದರ ದೇಹ, ಮಗುವಿನ ಮನಸ್ಸು ಅದೆಷ್ಟು ನೊಂದಿರಬೇಡ? ನೀರು ಆಹಾರ ಇಲ್ಲದೆ ಅದೆಷ್ಟು ದಣಿದಿರಬೇಡ? ಹಿಂದೂ ಜಾತಿವ್ಯವಸ್ಥೆ ಕಂಡರೆ ಸಿಟ್ಟು ಬರುವುದು ಈ ಕಾರಣಕ್ಕೆ. ಮೇಲು-ಕೀಳು ವ್ಯವಸ್ಥೆ ಸೃಷ್ಟಿಸಿ, ಸ್ಪøಶ್ಯ-ಅಸ್ಪøಶ್ಯ ಎಂಬ ಅಂತರ ಸೃಷ್ಟಿಸಿ ತಮ್ಮೊಳಗೇ ಇರುವ ಕೆಲವರನ್ನು ಪ್ರಾಣಿಗಳಿಗಿಂತ ಹೀನಾಯವಾಗಿ ಕಂಡು ನಿರಂತರ ದೌರ್ಜನ್ಯ ಎಸಗುತ್ತಿರುವ ಅಮಾನವೀಯ ಸಂಸ್ಕøತಿಯದು. ಇಂತಹ ಅಮಾನವೀಯ ಸಂಸ್ಕøತಿಯು ಮಾನವೀಯತೆಯ ಸಾಕಾರದಂತಿರುವ ಅಂಬೇಡ್ಕರರ ವಿರುದ್ಧ ನಡೆಸಿರುವ ದೌರ್ಜನ್ಯವಿದೆಯಲ್ಲಾ ಅದು ಎಂದೂ ಕ್ಷಮಿಸಲಾರದಂಥದ್ದು. ಶೋಷಿತ ಸಮುದಾಯ, ತನ್ನ ನಾಯಕನಿಗೆ ಅಪಮಾನ ಎಸಗಿರುವ ಆ ಅನಾಗರೀಕ ಸಮಾಜವನ್ನು ಎಂದಿಗೂ ಕ್ಷಮಿಸುವುದಿಲ್ಲ. ಕ್ಷಮಿಸಲೂ ಬಾರದು.
ಹಾಗಿದ್ದರೆ ಆ ಅನಾಗರೀಕ ಸಮಾಜಕ್ಕೆ, ಅದು ಎಸಗಿರುವ ಪಾಪಕ್ಕೆ ಶಿಕ್ಷೆ? ಶೋಷಿತರು ಸ್ವಾಭಿಮಾನಿಗಳಾಗುವುದು. ಅಂಬೇಡ್ಕರರ ಮಾರ್ಗದಲ್ಲಿ ಉತ್ತಮ ಶಿಕ್ಷಣ ಪಡೆದು ಶೋಷಿತ ಸಮುದಾಯಗಳು ಸ್ವಾಭಿಮಾನದ ಮೇರು ಪರ್ವತಗಳಾಗುವುದು. ಯಾಕೆಂದರೆ ನಮ್ಮನ್ನು ಕಂಡರೆ ಆಗದವರ ಎದುರಲ್ಲಿ ನಾವು ಇನ್ನೂ ಉತ್ತಮ ಮಟ್ಟದಲ್ಲಿ ಬದುಕುವುದಿದೆಯಲ್ಲಾ, ಅವರಿಗಿಂತ ಎಲ್ಲದರಲ್ಲೂ ಒಂದು ಕೈ ಮೇಲೆನಿಸಿಕೊಳ್ಳುವುದಿದೆಯಲ್ಲಾ ದೌರ್ಜನ್ಯಕೋರರನ್ನು ಅದಕ್ಕಿಂತ ಮಾನಸಿಕವಾಗಿ ಕುಗ್ಗಿಸುವ ಅಂಶ ಬೇರೊಂದಿರಲಿಕ್ಕಿಲ್ಲ. ಅವರು ಕುಗ್ಗಿದರೆಂದರೆ ಅಂಬೇಡ್ಕರ್ ಗೆದ್ದರೆಂದೇ ಅರ್ಥ. ಈ ನಿಟ್ಟಿನಲಿ ಶೋಷಿತ ಸಮುದಾಯ ಎಚ್ಚೆತ್ತುಕೊಳ್ಳಲಿ. ತನ್ನ ಎದೆಯಲ್ಲಿ ಅಂಬೇಡ್ಕರರ ಸ್ವಾಭಿಮಾನದ ಕೆಚ್ಚನ್ನು ತುಂಬಿಕೊಳ್ಳಲಿ. ತನ್ಮೂಲಕ ದೌರ್ಜನ್ಯಕೋರರಿಗೆ ತಕ್ಕ ಉತ್ತರ ನೀಡಲಿ.
ಆಕರ ಗ್ರಂಥಗಳು
- Dr.Babasaheb Ambedkar writings and speeches (vol.17. part III, P.120,123,124,127)
- Ibid,P.108
- Ibid,P.108
- Ibid,P.109, 110
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?