ದಿನದ ಸುದ್ದಿ
ನಾಟಿ ವ್ಯದ್ಯನ ನಕರಾ ಟ್ರಿಟ್ಮೆಂಟ್ ; ಇವನು ಡಮ್ಮಿ ಡಾಕ್ಟರ್… !
ಸುದ್ದಿದಿನ,ವಿಶೇಷ : ವ್ಯದ್ಯೋ ನಾರಾಯಣ ಹರಿ ಅಂತ ಡಾಕ್ಟರನ ಯಾಕ್ಕೆ ಕರೀತಿವಿ ಅಂದ್ರೆ, ದೇವರು ಬಿಟ್ರೆ ಆ ಸ್ಥಾನವನ್ನು ತುಂಬಬಲ್ಲ ಮತ್ತೊಂದು ಸ್ಥಾನವೇ ಈ ಡಾಕ್ಟರ್.ಅಂತಹ ನಾಮಕ್ಕೆ ಇಲ್ಲೊಬ್ಬ ಡಮ್ಮಿ ಡಾಕ್ಟರ್ ಕಳಂಕತಂದಿಟು ಮುದ್ದಾದ ಮಗುವಿನ ಜೀವನದಲ್ಲಿ ಮುಳ್ಳಾಗಿದ್ದಾನೆ. ಡಾಕ್ಟರ್ ಮಾಡಿದ ಕೆಲಸಕ್ಕೆ ಜೀವನ ಪರೀಯಂತ ಹುಡುಗನ ಕೈ ಇಲದಂತೆ ಮಾಡಿ ಅಂಗವಿಕಲನನಾಗಿ ಮಾಡಿದ್ದಾನೆ.
ಈ ಹುಡುಗನ ಹೆಸರು ಆದರ್ಶ. ನಾಟಿವ್ಯದ್ಯನು ಮಾಡ್ಡಿದ ಅವಾಂತರಗಳಿಂದ.ಜೀವನ ಪರಿಯಂತ ಕೈ ಕಳೆದುಕೊಂಡು ತನ್ನ ಆಸೆ ಆಕಾಂಕ್ಷೆ ಆದರ್ಶಗಳು ಇನ್ನು ಮುಂದೆ ಯುವಕನ ಬಾಳಲ್ಲಿ ಕೇವಲ ಕೈ ಚೀಲದ ಕನಸುಗಳಂತಾಗಿದೆ.ತನ್ನ ಸ್ನೇಹಿತರ ಜೊತೆ ಆಟವಾಡಲು ಸಹ ಇವನಿಗೆ ಆಗುತ್ತಿಲ್ಲ.ಇವನ ತರ್ಲೆ ತುಟಾಂಟಗಳು ಹೆತ್ತವರಿಗೆ ದಿನೇ ದಿನೇ ಕ್ಷಿಣಿಸುತ್ತಿದೆ. ಕೇವಲ ನೆನಪುಗಳಾಗಿ ಕಾಡುತ್ತಿದೆ.ಇನ್ನು ಇವನ ಸ್ನೆಹೀತರಿಗಂತು ಇವನ್ನು ಕೈ ಕಳೆದುಕೊಂಡಿದು ಕಾಣದ ಕನಸಾಗಿದೆ.
ಶಾಲಾ ರಜಾದಿನಗಳಲ್ಲಿ ಮಕ್ಕಳ ಆಟ, ತುಟಾಂಟ. ಗಲಾಟೆ,ಹೆತ್ತವರಿಗಂತು ಸಾಕ್ಕಪ ಸಾಕ್ಕು ಈ ರಜಾ ದಿನಗಳು. ಯಾವಾಗ ಮುಗಿದು ಶಾಲೆ ಪ್ರಾರಂಭವಾಗುತ್ತೆ ಅನಿಸ್ಸಿರುತ್ತೆ. ಹೀಗೆ ಮನೆಯವರ ಕೈ ಗೆ ಸಿಗದೆ ಆಟವಾಡುತ್ತಿದ 8 ವರ್ಷದ ಬಾಲಕ ಆದರ್ಶ ಕಾಲು ಜಾರಿ ಬಿಳುತ್ತಾನೆ. ಕೈ ಗೆ ಬಲವಾದ ಪೆಟ್ಟು ಬಿದಿರುವದರಿಂದ ಆದರ್ಶನನ್ನು ಲಿಂಗಸುಗೂರಿನ ಎಲಬು ಮತ್ತು ಕೀಲು ತಜ್ಞ ಡಾ,ಹರ್ಷವರ್ಧನ ಹತ್ತಿರ ಚಕಿತ್ಸೆ ಕೊಡಿಸುತ್ತಾರೆ.ಯಾವುದೇ ಕಾರಣಕ್ಕು ಕೈಗೆ ಹಾಕ್ಕಿದ ಪಟ್ಟಿಯನ್ನು ಬಿಚ್ಚಬಾರದು ಅಂತಾ ಹೇಳಿರುತ್ತಾರೆ.
ಇನ್ನೇನು ರಜಾ ದಿನಗಳು ಮುಗ್ಗಿದು ಶಾಲೆ ಪ್ರಾರಂಭವಾಗುವ ದಿನ ಬಾಲಕ ಬೇಗ ಚೇತರಿಸಿಕೊಳ್ಳಲ್ಲಿ ಅಂತಾ ಹೆತ್ತವರು ನೆರೆ ಹೊರೆಯರ ಮಾತುಕೇಳಿ ದೇವದುರ್ಗ ತಾಲೂಕಿನ ಚೀಚೊಂಡಿ ಗ್ರಾಮದ ಪರಮಣ್ಣ ಬನಗುಂಡಿ ಎಂಬ ನಾಟಿ ವ್ಯದ್ಯನ ಹತ್ತಿರ ಕರೆದುಕೊಂಡು ಹೊಗುತ್ತಾರೆ.
ಅಲ್ಲಿ ಕಾದಿತ್ತು ನೋಡಿ ಗಂಡಾತಂರ.
ಈ ಹುಡುಗನ ಬಾಳಿನಲ್ಲಿ ಎಲ್ಲಿ ಅಡಗಿ ಕುತ್ತಿದನೋ ಈ ನಾಟಿ ವ್ಯದ್ಯ ಪರಮಣ್ಣ .ಬ್ರಹ್ಮಬರೆದ ವಿಧಿಯನ್ನೆ ಬದಲಾಯಿಸಬಿಟ್ಟ .ಅದು ಯಾವ ವಿಶ್ವ ವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದನೋ ಗೊತ್ತಿಲ್ಲ ಯಾವ ಫಾರಿನ ಟ್ರಿಟ್ಮೆಂಟ್ ಕೊಟ್ಟನೋ ಎನ್ನೋ…ಡಾಕ್ಟರ್ ಹಾಕ್ಕಿದ ಪ್ಲಾಸ್ಟರ್ ಬಿಚ್ಚಿ ಅವನ ನಾಟಿ ಔಷಧಿ ಯನ್ನು ಹಾಕ್ಕಿ ಬೀಗಿಯಾಗಿ ಎಳೆದು ಕಟ್ಟಿದ್ದಾನೆ . 8 ವರ್ಷದ ಎಳೆಯ ಕೈ ಗಳು ಮರುದಿನವೇ ಅಡ್ಡ ಪರಿಣಾಮ ಬೀರಿ ಏಕಾಏಕಿ ಕೈ ಗಳು ಬಾವು,ನೊವು ಕಾಣಿಸಿಕೊಂಡಿದೆ.ಹೆತ್ತವರಿಗೆ ಭಯ ಉಟಾಂಗಿ ನಾಟಿ ವ್ಯದ್ಯನನ್ನು ಸಂಪರ್ಕಿಸಿದ್ದಾರೆ.ನಾಟಿ ವೈದ್ಯ ನಾಟಿ ನಾಟಿಯಾಗಿ ಉತ್ತರಿಸಿದ್ದಾನೆ. ಯಾವುದೇ ಕಾರಣಕ್ಕು 21 ದಿನಗಳವರೆಗೆ ಬಿಚ್ಚಬೇಡಿ ಎಂದಿದ್ದಾನೆ.ಆದ್ದರೆ ಮಗುವಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದೆ. ಇದನ್ನು ಕಂಡ ಹೆತ್ತವರು ಡಾ,ಹರ್ಷವರ್ಧನ ಹತ್ತಿರ ಕರೆದುಕೊಂಡು ಹೊಗಿದ್ದಾರೆ .ಅಲ್ಲಿ ಕಾದಿತ್ತು ನೋಡಿ ನಾಟಿ ವ್ಯದ್ಯ ನ ತರಲೆ ಚಿಕಿತ್ಸೆ. ನಾಟಿ ವ್ಯದ್ಯ ನ ಪಟ್ಟಿಯನ್ನು ಬಿಚ್ಚಿ ನೋಡಿದ ಡಾ,ಹರ್ಷವರ್ಧನಗೆ ಆ ದೃಶ್ಯವನ್ನು ಕಂಡು ಒಂದು ಕ್ಷಣ ಸಿಡಿಲು ಬಡ್ಡಿದಂತಾಗಿದೆ .ಯಾಕಂದ್ರೆ ಕೈ ಗಳು ರಕ್ತ ಚಲನೆ ಇಲ್ಲದೆ ಕಪ್ಪು ಬಣ್ಣಕ್ಕೆ ತಿರುಗಿ ಕೈ ನರಗಳು ಸತ್ತು ಹೋಗಿವೆ.ಇದರಿಂದ ಭಯ ಭಿತ್ತರಾಗಿ ಬಾಲಕನನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಹಾರಾಷ್ಟ್ರ ದ ಮೀರಜ್ ಜೆ.ಎಸ್ ಕೆ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೊಗಿದ್ದಾರೆ.
ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರು ಹೇಳಿದಂತೆ ನಾಟಿ ಔಷಧಿಯ ಅಡ್ಡಪರಿಣಾಮದಿಂದ ಮಗುವಿನ ನರಗಳು ಸತ್ತುಹೊಗಿದೆ.ಹೀಗೆ ಬಿಟ್ಟರೆ ದೇಹದಲ್ಲಿ ಹರಡಿಕೊಳ್ಳುತದೆ.ಇದರಿಂದ ಮಗುವಿನ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ.ಕೈ ಬೇಕು ಅಂದ್ರೆ ಪ್ರಾಣ ಇರಲ್ಲ ಪ್ರಾಣ ಬೇಕು ಅಂದ್ರೆ ಕೈ ಕತ್ತರಿಸಲೆಬೇಕು ಎಂದಾಗ ಅನಿವಾರ್ಯವಾಗಿ ಮಗುವಿನ ಮೋಣ ಕೈ ಕೆಳಗೆ ಕತ್ತರಿಸಲಾಗುತ್ತದೆ.ಮೋದಲೆ ಬಡ ಕುಟುಂಬ ಸುಮಾರ ಎರಡು ಲಕ್ಷ ಕಳೆದುಕೊಂಡು ಸಾಲಗಾರರಾಗಿ ತಿರುಗುತ್ತಿದ್ದಾರೆ.ಇತ್ತಕಡೆ ಜಾಲಹಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾದರು ಪ್ರಯೋಜನವಾಗಿಲ್ಲ. ವೈದ್ಯನಿಂದ ಯಾವುದೇ ಸಹಾಯವು ಇಲ್ಲ. ಘಟನೆ ನಡೆದ ದಿನದಿಂದ ನಾಟಿ ವ್ಯದ್ಯ ಪರಾರಿಯಾಗ್ಗಿದಾನೆ .ಇನ್ನು ಮಗನ ಚಿಕಿತ್ಸೆಗಾಗಿ ಹೆತ್ತವರು ಕಂಡ ಕಂಡವರ ಹತ್ತಿರ ಕೈ ಚಾಚಿದ್ದಾರೆ. ಸಾಲಕ್ಕಾಗಿ ಮೋರೆ ಹೋಗಿದ್ದಾರೆ.
ಇಂತಹ ನಾಟಿ ವ್ಯದ್ಯರಿಂದ ಅದೆಷ್ಟೋ ಬಡ ಕುಟುಂಬಗಳು ಮೋಸಹೋಗಿದ್ದಾರೆ.ಮುಗ್ದಜನರನ್ನು ಮೋಸ ಮಾಡುವ ಇಂತಹ ವ್ಯದ್ಯರನ್ನು ಬಿಟ್ಟು ಇಗಲಾದರು ಎಚ್ಚರಿಕೆಯಿಂದ ಇರಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

ಸುದ್ದಿದಿನ,ಬೆಂಗಳೂರು : ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕ, ಏಟ್ಸ್, ಎಲಿಯಟ್, ಷೇಕ್ಸ್ ಪಿಯರ್ ಕಾವ್ಯಗಳನ್ನು ಅನನ್ಯವಾಗಿ ಕನ್ನಡಕ್ಕೆ ತಂದ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (85) ರು ಇಂದು ಈ ಮುಂಜಾನೆ 4.45ಗಂಟೆಗೆ ,ದೀರ್ಘ ಕಾಲದ ಅಸೌಖ್ಯದ ಕಾರಣ ವಿಧಿವಶರಾಗಿದ್ದಾರೆ.
ಬನಶಂಕರಿಯ ಕವಿಯ ಮನೆಯಲ್ಲಿ ಬೆಳಿಗ್ಗೆ ಹತ್ತು ಮೂವತ್ತರವರೆಗೆ ಅಂತಿಮ ದರ್ಶನ ಪಡೆಯಬಹುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಎಲ್ಲರಿಗೂ ಸಲ್ಲುವ ಕವಿ ಎಂದೇ ಪ್ರಸಿದ್ಧರಾಗಿ, ಕನ್ನಡ ಭಾವಗೀತೆಗಳ ಲೋಕದಲ್ಲಿ ಅಮೂಲ್ಯ ಸಾಧನೆ ಮಾಡಿದ ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು. ಶಿವಮೊಗ್ಗದಲ್ಲಿ ಜನಿಸಿದ ಇವರು ನೀರ ಮೇಲಿನ ಲೀಲೆ, ನಿತ್ಯ ನಿತ್ಯ ಭೂಮಿ, ಮಾಗಿ ಕೊರೆವ ಬಾಳಿಗೆ ಮುಂತಾದ ಪ್ರಸಿದ್ಧ ಭಾವಗೀತೆಗಳನ್ನು ರಚಿಸಿದ್ದಾರೆ. ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ ಇವರ ಕೆಲ ಕವನ ಸಂಕಲನಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಇವರು ಭಾಜನರಾಗಿದ್ದಾರೆ.
ಇದನ್ನೂ ಓದಿ | ಕನ್ನಡವನ್ನ ಕಿತ್ತುಕೊಳ್ಳೋ ಧೈರ್ಯ ಯಾರಿಗಿದೆ..? ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎನ್ನಿ : ಕನ್ನಡ ಪರ ಹೋರಾಟಗಾರರಿಗೆ ಕಿಚ್ಚನ ಸಲಹೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕರ ಸಮಸ್ಯೆಗಳ ಸ್ಪಂದನೆಗೆ ಡಿಜಿಟಲ್ ಮೊರೆ ಹೋದ ಪಾಲಿಕೆ : ವಾಟ್ಸ್ ಆ್ಯಪ್ ನಂಬರ್ ಪೋಸ್ಟರ್ ಬಿಡುಗಡೆ ಮಾಡಿದ ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಗ್ರಾಹಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಮಹಾನಗರಪಾಲಿಕೆ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು, ಗ್ರಾಹಕರು ತಮ್ಮ ಸಮಸ್ಯೆಗಳನ್ನು ತಕ್ಷಣವೇ ತಿಳಿಸಲು ವಾಟ್ಸ್ಆ್ಯಪ್ ನಂಬರ್ನ್ನು ನೀಡಲಾಗಿದೆ.
ಶುಕ್ರವಾರ ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ.ವೀರೇಶ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆ-ಡಿಜಿಟಲ್ ತಂತ್ರಜ್ಞಾನ ವಾಟ್ಸ್ಆ್ಯಪ್ ಚಾಲನೆ ಪೋಸ್ಟರ್ ಬಿಡುಗಡೆ ಮಾಡಿ 8277234444 ವಾಟ್ಸ್ಆ್ಯಪ್ ನಂಬರ್ಗೆ ಚಾಲನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಿದ್ದು, ಸಾಮಾನ್ಯ ಜನರು ಸಹ ಮೊಬೈಲ್ಗಳನ್ನು ಬಳಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಾಟ್ಸ್ಆ್ಯಪ್ ಸಂವಹನ ಮಾಧ್ಯಮವಾಗಿ ವ್ಯಾಪಕ ಬಳಕೆಯಲ್ಲಿದ್ದು, ಗ್ರಾಹಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಲು ಆಧುನಿಕ ತಂತ್ರಜ್ಞಾನದ ಮೊರೆ ಹೋಗಲು ತೀರ್ಮಾನಿಸಿದ್ದೇವೆ ಎಂದರು.
ಮಹಾನಗರಪಾಲಿಕೆಯ ಸ್ಥಿರ ದೂರವಾಣಿ 234444 ಇದ್ದು, ಸಾರ್ವಜನಿಕರ ಚಿರಪರಿಚಿತ ಸಂಖ್ಯೆಯು ಆಗಿದೆ. ಆದ್ದರಿಂದ ಇದೇ ನಂಬರ್ಗೆ 8277 ಎಂಬ ನಾಲ್ಕು ಸಂಖ್ಯೆಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರು ತಮ್ಮ ದೂರುಗಳನ್ನು 8277234444 ನಂಬರ್ಗೆ ವಾಟ್ಸ್ಆ್ಯಪ್ ಮಾಡಬಹುದು ಎಂದು ತಿಳಿಸಿದರು.
ನಗರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು, ಸಾರ್ವಜನಿಕರ ಕುಂದು-ಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ನಗರದಾದ್ಯಂತ ಯಾವುದೇ ಸೌಲಭ್ಯಗಳ ಪೂರೈಕೆ ಸ್ಥಗಿತಗೊಂಡಿದ್ದಲ್ಲಿ ಮಹಾನಗರ ಪಾಲಿಕೆ ನೀಡಿರುವ ವಾಟ್ಸ್ಆ್ಯಪ್ ನಂಬರ್ಗೆ ಮೆಸೇಜ್, ಫೋಟೋಗಳನ್ನು ಕಳಿಸಿಕೊಡಬಹುದು.
ಅಥವಾ ಕರೆ ಮಾಡಿ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು. ಸಾರ್ವಜನಿಕರು ತಿಳಿಸುವ ಸಮಸ್ಯೆಗಳನ್ನು ಪಾಲಿಕೆ ವ್ಯಾಪ್ತಿಯ ಕಂಟ್ರೋಲ್ ರೂಂ ನಿರ್ವಹಿಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಯನ್ನು ಬಗೆಹರಿಸುತ್ತಾರೆ.
ಇದನ್ನೂ ಓದಿ |ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ
ಈಗಾಗಲೇ ಕೆಲ ವಾರ್ಡ್ಗಳಲ್ಲಿ ಇದರ ಪ್ರಯೋಗ ಮಾಡಿದ್ದು ಯಶಸ್ವಿಯಾಗುತ್ತಿರುವುದರ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸುತ್ತಿದ್ದೇವೆÉ. ನಗರದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದು ಮೊದಮೊದಲು ನಿಭಾಯಿಸಲು ಕಷ್ಟವೆನಿಸಬಹುದು. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಸಾರ್ವಜನಿಕರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.
ದಾವಣಗೆರೆ ಜಿಲ್ಲೆಯು ವಾಸಯೋಗ್ಯ ನಗರವೆಂದು ದೇಶದಲ್ಲಿ 9ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಆದರೆ ಉಳಿದ ವಿಚಾರಗಳಲ್ಲಿ ಹಿಂದೆ ಉಳಿದಿದೆ. ಹಾಗೂ ಮಂಗಳೂರಿನಲ್ಲಿ ಸ್ವಚ್ಛ ಅಭಿಯಾನದಡಿ ಸುಮಾರು 440 ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯಶಸ್ವಿಯಾಗಿದ್ದು, ಇದೀಗ ಸ್ವಚ್ಛ ದಾವಣಗೆರೆಯನ್ನು ಮಾಡಲು ಹಿರಿಯ ತಜ್ಞರು, ಆಡಳಿತಾಧಿಕಾರಿಗಳು, ಮಾಧ್ಯಮ ವರ್ಗದವರು,ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ವಾರ್ಡ್ ವಿಸಿಟ್
ವಾರಕ್ಕೆ ನಾಲ್ಕು ಬಾರಿ ಮುಖಂಡರು, ಆಡಳಿತಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಆಯಾ ವಾರ್ಡ್ಗಳ ಕಾರ್ಪೋರೇಟರ್ಗಳು ಖುದ್ದಾಗಿ ಸ್ಥಳ ವೀಕ್ಷಣೆ ಮಾಡಲು ಮುಂದಾಗಿದ್ದು, ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಸ್ಥಳದಲ್ಲೇ ಬಗೆಹರಿಸಲು ಯತ್ನಿಸುತ್ತೇವೆ. ಇಲ್ಲದಿದ್ದಲ್ಲಿ ಸಮಯವಕಾಶ ತೆಗೆದುಕೊಂಡು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
ತಿಂಗಳ ಅಂತ್ಯದಲ್ಲಿ ಬಜೆಟ್ ಮಂಡನೆ
ಮಾರ್ಚ್ ತಿಂಗಳ ಅಂತ್ಯದಲ್ಲಿ ಬಜೆಟ್ ಮಂಡನೆ ಮಾಡಲಿದ್ದು, ಅಧಿಕಾರಿಗಳು ಸೇರಿದಂತೆ ನಗರದ ಸಮಸ್ತ ಜನರು ನಗರಾಭಿವೃದ್ಧಿಗೆ ಸೂಕ್ತ ಸಲಹೆ, ಸೂಚನೆಗಳನ್ನು ವಾಟ್ಸ್ಆ್ಯಪ್ ನಂಬರ್ಗೆ ತಲುಪಿಸಬಹುದು ಅಥವಾ ಬರಹದ ಮೂಲಕ ಕಚೇರಿಗೆ ತಂದು ಕೊಡಬಹುದು. ನಿಮ್ಮ ಸಲಹೆಗಳನ್ನು ಪರಿಶೀಲಿಸಿ ಬಜೆಟ್ನಲ್ಲಿ ಅನುಮೋದಿಸಲು ಯತ್ನಿಸುತ್ತೇವೆ ಎಂದು ತಿಳಿಸಿದರು.
ಸನ್ಮಾನ, ಸಮಾರಂಭಗಳಿಗೆ ಕರೆಯಬೇಡಿ
ಮೇಯರ್ ಅವಧಿ ಒಂದು ವರ್ಷ ಮಾತ್ರ ಇದ್ದು, ಈ ಸಂಪೂರ್ಣ ಅವಧಿಯನ್ನು ಸಾರ್ವಜನಿಕರ ಸೇವೆಗೆ ಮೀಸಲಿಡುತ್ತೇನೆ. ಸಮಯದ ಅಭಾವವಿರುವುದರಿಂದ ಸಮರ್ಪಕ ಸೇವೆ ಸಲ್ಲಿಸಲು ಕಷ್ಟವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಸನ್ಮಾನ, ಸಭೆ-ಸಮಾರಂಭಗಳಿಗೆ ನನ್ನನ್ನು ಕರೆದು ಪ್ರಶಸ್ತಿ-ಪುರಸ್ಕಾರಗಳನ್ನು ನೀಡಬೇಡಿ.
ನನ್ನ ಅವಧಿ ಮುಗಿದ ನಂತರ ನಾನು ಮಾಡಿದ ಸೇವೆಯನ್ನು ಪರಿಶೀಲಿಸಿ ನಂತರ ಸನ್ಮಾನಿಸಿ ಹಾಗೂ ಹಾರ, ಬೊಕ್ಕೆ ಎಂದು ನೀಡುವ ಬದಲು ಪುಸ್ತಕಗಳನ್ನು ಕೊಡಿ ಎಂದು ಮನವಿ ಮಾಡಿದರು. ಈಗಾಗಲೇ 2 ಸಾವಿರ ಪುಸ್ತಕಗಳು ಕಚೇರಿಗೆ ಬಂದಿದ್ದು, ಅವುಗಳನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಕೆ.ಎಂ.ವೀರೇಶ್, ಶಿವಪ್ರಕಾಶ್, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಸುನಿಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ

ಸುದ್ದಿದಿನ,ದಾವಣಗೆರೆ : ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು ಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬ ಯೋಜನೆಯನ್ನು ಜಾರಿಗೊಳಿಸಿದ್ದು, ಅದರಂತೆ ಈಗಾಗಲೇ ಕೆಲವು ಪಡಿತರ ಚೀಟಿದಾರರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಕಾರ್ಯವನ್ನು ಪೂರ್ಣಗೊಳಿಸಿರುತ್ತಾರೆ.
ಇದನ್ನೂ ಓದಿ | ತಾಂಡಾ ರೋಜ್ಗಾರ್ ಮಿತ್ರ : ಅರ್ಜಿ ಆಹ್ವಾನ
ಸರ್ಕಾರವು ಪುನಃ ಈ ಯೋಜನೆಗೆ ಚಾಲನೆ ನೀಡಿರುವುದರಿಂದ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ (ಪ್ರತಿ ಮಾಹೆಯ 1ನೇ ತಾರೀಖಿನಿಂದ 10ನೇ ತಾರೀಖಿನೊಳಗೆ ಮತ್ತು 25ನೇ ತಾರೀಖಿನಿಂದ 30ನೇ ತಾರೀಖೀನೊಳಗಾಗಿ) ತಮ್ಮ ಇ-ಕೆವೈಸಿ ಆಧಾರ್ ಬಯೋದೃಢೀಕರಣ ಕಾರ್ಯವನ್ನು ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ6 days ago
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?
-
ಸಿನಿ ಸುದ್ದಿ6 days ago
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!
-
ಭಾವ ಭೈರಾಗಿ6 days ago
ಕವಿತೆ | ಕಾಮಧೇನು
-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ | ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು..? ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?
-
ನಿತ್ಯ ಭವಿಷ್ಯ6 days ago
ಭಾನುವಾರ ರಾಶಿ ಭವಿಷ್ಯ : ಈ ರಾಶಿಯವರಿಗೆ ಈ ವಾರದ ಒಳಗಡೆ ಹಣಕಾಸಿನ ಸುರಿಮಳೆ ಆಗಲಿದೆ..!
-
ನಿತ್ಯ ಭವಿಷ್ಯ5 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ5 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ5 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ