ರಾಜಕೀಯ
ಸಿದ್ದು ವಿರುದ್ಧ ಹಾಲುಮತ ಸಮಾಜವನ್ನು ಎತ್ತುಕಟ್ಟುವ ಹುನ್ನಾರ

ಸುದ್ದಿದಿನ ವಿಶೇಷ: ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿರೋಧಿಗಳಂತೆ ಕೆಲಸ ಮಾಡಿದ್ದ ಕೆಲ ಮಾಧ್ಯಮಗಳು ಈಗ ಕುರುಬ ಸಮುದಾಯದವನ್ನು ಅವರ ವಿರುದ್ಧ ಎತ್ತುಕಟ್ಟುವ ಪ್ರಯತ್ನ ಮಾಡುತ್ತಿವೆ.
ಸಚಿವ ಸಂಪುಟ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಸಮುದಾಯಕ್ಕೆ ಮಾನ್ಯತೆ ನೀಡಿಲ್ಲ. ಇದರಿಂದ ಇಡಿ ಸಮುದಾಯ ಅವರ ವಿರುದ್ಧ ತಿರುಗಿ ಬಿದ್ದಿದೆ ಎಂದು ಪ್ರಚಾರ ಮಾಡುವ ಮೂಲಕ ಅವರ ಶಕ್ತಿ ಕುಂದಿಸುವ ಸಾಹಸ ಮಾಡುತ್ತಿವೆ.
ಸಂಪಾದಕನ ಹಗೆತನ: ಟಿವಿ ಮಾಧ್ಯಮವೊಂದರ ಸಂಪಾದಕ ಪ್ರತಿನಿತ್ಯ ರಾತ್ರಿ ಒಂಭತ್ತು ಗಂಟೆಗೆ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ಬಹುತೇಕ ಸಿದ್ದರಾಮಯ್ಯ ವಿರುದ್ಧ ಸುಳ್ಳು ವಿಶ್ಲೇಷಣೆ ಮಾಡುತ್ತಿದ್ದು, ಆ ಮೂಲಕ ಸಿದ್ದು ಶಕ್ತಿ ಕುಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆ ಸಂಪಾದಕ ಸಿದ್ದು ವಿರುದ್ಧ ಅಷ್ಟು ರಾಜಾರೋಷವಾಗಿ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಸಿಎಂ ಕುಮಾರಸ್ವಾಮಿ ವಿರುದ್ಧ ಮಾತನಾಡುವುದಿಲ್ಲ.
ಸಮಾಜಮುಖಿ ಚಿಂತನೆ ಅಳವಡಿಸಿಕೊಂಡಿದ್ದ ಸಿದ್ದರಾಮಯ್ಯ ಕುರುಬ ಸಮುದಾಯದ ಧೀಮಂತ ನಾಯಕ ಎಂದು ಗುರುಸಿಕೊಂಡಿದ್ದಾರೆ. ಜನಸಂಖ್ಯೆಯಲ್ಲಿ ಪ್ರಬಲ ಶಕ್ತಿ ಹೊಂದಿದ್ದರೂ ಸಮುದಾಯ ಈ ಹಿಂದೆ ರಾಜಕೀಯ ಕ್ಷೇತ್ರದಲ್ಲಿ ನಗಣ್ಯಕ್ಕೆ ಒಳಗಾಗಿತ್ತು. ಸಿದ್ದರಾಮಯ್ಯ ಅವರು ರಾಜಕೀಯ ಕ್ಷೇತ್ರದಲ್ಲಿ ಬೆಳೆದಾಗ ಅವರನ್ನು ನಮ್ಮ ನಾಯಕ ಎಂದು ಸಮುದಾಯ ಸರ್ವತಃ ಒಪ್ಪಿಕೊಂಡಿತ್ತು. ಈಗಲೂ ಸಿದ್ದರಾಮಯ್ಯ ಅವರ ಬಗೆಗೆ ಹಾಲುಮತ ಸಮುದಾಯ ಅಪಾರ ಗೌರವ ಹೊಂದಿದ್ದು, ಅವರಿಂದ ಬೇರೇನೂ ನಿರೀಕ್ಷೆ ಮಾಡದೇ ನಮ್ಮ ನಾಯಕ ಎಂದು ಒಪ್ಪಿಕೊಂಡಿದೆ.
ಅದರಂತೆ ಕೇವಲ ಒಂದು ವರ್ಗಕ್ಕೆ ಕೆಲಸ ಮಾಡದೇ ಸಾಮಾಜಿಕ ನ್ಯಾಯ ಮೇಲೆ ಆಡಳಿತ ನಡೆಸಿದ ಸಿದ್ದು ಮೇಲೆ ಕೆಲವು ಅತೃಪ್ತ ಮಾಧ್ಯಮಗಳು ಹಗೆ ಸಾಧಿಸಿದವು. ಈಗಲೂ ಅದು ಮುಂದುವರಿದಿದ್ದು, ಸಚಿವ ಸಂಪುಟದ ವಿಚಾರದಲ್ಲಿ ಹಾಲುಮತ ಸಮುದಾಯವನ್ನು ಎತ್ತುಕಟ್ಟುವ ಪ್ರಯತ್ನ ಮಾಡುತ್ತಿವೆ. ಸಮುದಾಯದ ಕೆಲವರಿಗೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸ್ಥಾನ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಪ್ರಚಾರ ಮಾಡುತ್ತಿವೆ.
ಇದಕ್ಕೆ ಪೂರಕವಾಗಿ ಕುರುಬ ಸಮುದಾಯ ಶಾಸಕ ಎಚ್.ಎಂ.ರೇವಣ್ಣ ಕೂಡ ಸಿದ್ದು ವಿರುದ್ಧ ಮಾತನಾಡಿದ್ದಾರೆ. ಹಾಗೆ ನೋಡಿದರೆ ಸಮುದಾಯ ಹೆಸರು ಹೇಳಿಕೊಂಡು ಶಾಸಕ ಸ್ಥಾನ ಪಡೆದ ಹಲವರು ಸಮುದಾಯಕ್ಕೆ ಯಾವುದೇ ಉಪಕಾರ ಮಾಡಿಲ್ಲ ಎಂಬ ಆಪಾದನೆ ಶಾಸಕರ ಮೇಲಿದೆ. ಕುರುಬ ಸಮುದಾಯದ ಧೀಮಂತ ನಾಯಕನಾಗಿ ಬೆಳೆದ ಸಿದ್ದರಾಮಯ್ಯ ತನ್ನದೇ ಸಮುದಾಯಕ್ಕೆ ಲಾಭ ಮಾಡದಿದ್ದರೂ ಸಾಮಾಜಿಕ ನ್ಯಾಯದಡಿ ಕೆಲಸ ಮಾಡಿದ್ದಾರೆ ಎಂಬ ತೃಪ್ತಿ ಸಮುದಾಯದಲ್ಲಿದೆ ಎನ್ನುತ್ತಾರೆ ಸಮಾಜದ ಮುಖಂಡರು.
ಸಿದ್ದರಾಮಯ್ಯ ಅವರ ವಿರುದ್ಧ ಕೆಲ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದು, ಸಮುದಾಯದ ಜನ ಗಮನಿಸುತ್ತಿದ್ದೇವೆ. ಸತ್ಯ ಸಂಗತಿ ಪ್ರಚಾರ ಮಾಡಿದರೆ ನಮ್ಮ ವಿರೋಧಿವಿಲ್ಲ. ಆದರೆ ಅನಗತ್ಯ ಅರ್ಥ ಬರುವ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ನಮ್ಮ ಸಮುದಾಯಕ್ಕೆ ಯಾವುದೇ ಲಾಭ ಆಗದಿದ್ದರೂ ಪರವಾಗಿಲ್ಲ. ಇವತ್ತಿಗೂ ಸಿದ್ದರಾಮಯ್ಯ ನಮ್ಮ ನಾಯಕ.
| ವಿಜಯ್ ಕುಮಾರ್, ಶಿವರಾಜ್ ಇತರರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಅಂತರಂಗ7 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ6 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ7 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್7 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ6 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ಲೈಫ್ ಸ್ಟೈಲ್5 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ6 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು