ದಿನದ ಸುದ್ದಿ
ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನ ತೇವಾಂಶದ ಹದ ನೋಡಿ ಶೇಂಗಾ ಬಿತ್ತನೆ ಮಾಡಬಹುದಾಗಿದೆ. ಶೇಂಗಾ ಒಂದು ಪ್ರಮುಖ ದ್ವಿದಳ ಎಣ್ಣೆಕಾಳು ಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂ ಬೆಳೆಯಬಹುದಾಗಿದೆ.
ಸುಧಾರಿತ ಬೇಸಾಯ ಕ್ರಮಗಳು ಹಾಗೂ ಆಯಾ ಪ್ರದೇಶಕ್ಕೆ ಹೊಂದಿಕೊಳ್ಳುವಂತಹ ತಳಿಗಳ ಆಯ್ಕೆಯನ್ನು ರೈತರು ಅಳವಡಿಸಿಕೊಂಡಲ್ಲಿ ಉತ್ತಮ ಇಳುವರಿಯ ಜೊತೆಗೆ ಒಳ್ಳೆಯ ಲಾಭ ಪಡೆಯಬಹುದಾಗಿದೆ.
2020 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 13,285 ಹೆಕ್ಟೇರ್ ಪ್ರದೇಶದಲ್ಲಿ ನೆಲಗಡಲೆ ಬೆಳೆಯುವ ಗುರಿ ಹೊಂದಲಾಗಿದ್ದು, ಜಗಳೂರು, ಹೊನ್ನಾಳಿ, ನ್ಯಾಮತಿ, ದಾವಣಗೆರೆ ಭಾಗದಲ್ಲಿ ಬೆಳೆಯಲಾಗುವುದು.
ಬಿತ್ತನೆ ಕಾಲ
ಮುಂಗಾರು ಮಳೆಯಾಶ್ರಿತ ನೆಲಗಡಲೆಯನ್ನು ಮೇ ತಿಂಗಳ ಎರಡನೇ ವಾರದಿಂದ ಜುಲೈ ತಿಂಗಳ ಎರಡನೇ ವಾರದೊಳಗೆ ಬಿತ್ತನೆ ಮಾಡಬಹುದು.
ಸುಧಾರಿತ ತಳಿಗಳ ಆಯ್ಕೆ: ತಳಿಗಳು
ಟಿ.ಎಂ.ವಿ-2, ಜಿ.ಪಿ.ಬಿ.ಡಿ-4 & 5, ಜಿ-252, ಕೆ-6. ಪ್ರಮಾಣಿತ ಬಿತ್ತನೆ ಬೀಜವನ್ನು ಪ್ರತಿ ಮೂರು ಹಂಗಾಮಿನಲ್ಲೊಮ್ಮೆ ಬಳಸಬೇಕು. ಪ್ರಮಾಣಿತ ಬಿತ್ತನೆ ಬಳಸಿದ ಮಾದರಿ ಬೆಳೆ ತಾಕಿನಿಂದ ಬಿತ್ತನೆ ಬೀಜ ಆಯ್ಕೆ ಮಾಡಬಹುದಾಗಿದೆ.
ಬೀಜೋಪಚಾರ
ಬೀಜ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 2.5 ಗ್ರಾಂ ಥೈರಾಮ್ ಪುಡಿಯನ್ನು ಬೆರಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ & 400 ಗ್ರಾಂ. ಪಿ.ಎಸ್.ಬಿ. ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು.
ಗೊಣ್ಣೆ ಹುಳು – ಗೆದ್ದಲು ಹುಳುಗಳ ಬಾಧೆ ಇದ್ದಲ್ಲಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 15 ಮಿ.ಲೀ. ಕ್ಲೊರೋಫೈರಿಫಾಸ್ನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡುವುದು. ಬೀಜೋಪಚಾರದ ಸಮಯದಲ್ಲಿ ಮೊದಲು ಕೀಟನಾಶಕದಿಂದ ಉಪಚರಿಸಿ ನಂತರ ಜೈವಿಕ ಗೊಬ್ಬರದಿಂದ ಉಪಚರಿಸಬೇಕು.
ಬೀಜ ಪ್ರಮಾಣ – ಅಂತರ
ಪ್ರತಿ ಎಕರೆಗೆ 45 ಕಿ.ಗ್ರಾಂ ಬಿತ್ತನೆ ಬೀಜವನ್ನು 30 ಸೆಂ.ಮೀ x 15 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತ ಬಹುದಾಗಿದೆ.
ಅಂತರ ಬೆಳೆ
ಶೇಂಗಾ ಬೆಳೆಯಲ್ಲಿ 4 ರಿಂದ 6 ಸಾಲಿಗೆ ಒಂದು ಸಾಲು ತೊಗರಿ ಬೆಳೆಯಬಹುದು. ಇಡಿ ಶೇಂಗಾ ಬೆಳೆ ಬಿತ್ತನೆ ಮಾಡುವಾಗ ಕೊತ್ತುಂಬರಿ, ಹೆಸರು, ಅಲಸಂದೆ, ಉದ್ದು, ನವಣೆ, ಸಾಸುವೆ ಬೆಳೆಗಳನ್ನು ಶೇಂಗಾ ಸಾಲಿನಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯುವುದರಿಂದ ಉತ್ಪಾದಕತೆ ಮತ್ತು ಆದಾಯ ಹೆಚ್ಚಿಸಬಹುದಾಗಿದೆ.
ಪೋಷಕಾಂಶ ನಿರ್ವಹಣೆ
ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಶಿಫಾರಸ್ಸು ಮಾಡಿದ 4 ಟನ್ ಸಾವಯವ ಗೊಬ್ಬರವನ್ನು ಬಿತ್ತನೆಗೆ 2-3 ವಾರ ಮೊದಲು ಬಿತ್ತನೆ ಸಮಯದಲ್ಲಿ ಬಳಸಬೇಕು ಹಾಗೂ ರಸಾಯನಿಕ ಗೊಬ್ಬರಗಳಾದ 10 ಕಿ.ಗ್ರಾಂ
ಸಾರಜನಕ
20 ಕಿ.ಗ್ರಾಂ ರಂಜಕ, 10 ಕಿ.ಗ್ರಾಂ ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ಹಾಕುವುದು.ಎಕರೆಗೆ 4 ಕಿ.ಗ್ರಾಂ ಸತುವಿನ ಸಲ್ಫೇಟ್ ಹಾಗೂ 4 ಕಿ.ಗ್ರಾಂ ಬೋರಾಕ್ಸ್ನ್ನು ಸಾವಯವ ಗೊಬ್ಬರಗದೊಂದಿಗೆ ಮಿಶ್ರಣ ಮಾಡಿ ಬಿತ್ತುವ ಸಂದರ್ಭದಲ್ಲಿ ಎರಚಬೇಕು.
ಸಾಮಾನ್ಯವಾಗಿ ರೈತರು ಸಾರಜನಕ, ರಂಜಕ, ಪೊಟ್ಯಾಷ್ ಗೊಬ್ಬರವನ್ನು ಬಳಸುತ್ತಾರೆ. ಆದರೆ ಎಣ್ಣೆಕಾಳು ಬೆಳೆಯಾದ ನೆಲಗಡಲೆಗೆ ಕ್ಯಾಲ್ಸಿಯಂ ಮತ್ತು ಗಂಧಕದ ಅವಶ್ಯಕತೆ ಅಗತ್ಯವಾಗಿರುವುದರಿಂದ ರೈತ ಬಾಂಧವರು ಇತರೆ ಗೊಬ್ಬರಗಳ ಜೊತೆಗೆ ಜಿಪ್ಸಂನ್ನು ಬೆಳೆಗೆ ಪೂರೈಸುವುದು ಅತ್ಯವಶ್ಯಕವಾಗಿದೆ. ಇದರಿಂದಾಗಿ ಕಾಯಿ ಗಟ್ಟಿಯಾಗುವಿಕೆ, ಎಣ್ಣೆ ಅಂಶ ಜಾಸ್ತಿಯಾಗುವುದರಿಂದ ಜೊಳ್ಳು ಬೀಜಗಳು ಕಡಿಮೆಯಾಗಿ ಶೇ. 18 ರಿಂದ 20 ರಷ್ಟು ಇಳುವರಿ ಹೆಚ್ಚಾಗುವುದು.
ಬಿತ್ತನೆ ಸಮಯದಲ್ಲಿ ಎಕರೆಗೆ 2 ಕ್ವಿಂಟಾಲ್ ಜಿಪ್ಸಂ ಅನ್ನು ಸಾಲಿನ ಮಧ್ಯೆ ಹಾಕುವುದು. ಅಥವಾ 40 ರಿಂದ 45 ದಿನದ ಬೆಳೆಗೆ / ಹೂ ಬಿಡುವ ಹಂತದ ಸಮಯದಲ್ಲಿ 2 ಸಾಲುಗಳ ಮಧ್ಯೆ ಹಾಕಿ ಎಡೆ ಹೊಡೆಯುವುದು. ಮೂಟೆ ಲೆಕ್ಕದಲ್ಲಿ ರಸಗೊಬ್ಬರ ಬಳಸದೇ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರ ಬಳಸಬೇಕು. ರಸಗೊಬ್ಬರಗಳನ್ನು ಅಧಿಕೃತ ಮಾರಾಟಗಾರರಿಂದ ನಿಗಧಿತ ಬಿಲ್ಲು ಪಡೆದು ಖರೀದಿಸಬೇಕು.
ಕಳೆ ನಿರ್ವಹಣೆ
ಬಿತ್ತಿದ ದಿವಸ – ಮಾರನೆ ದಿವ ಎಕರೆಗೆ 1 ಲೀಟರ್ ಅಲಾಕ್ಲೋರ್ 50 ಇ.ಸಿ. ಅಥವಾ 800 ಮು.ಲೀ.ಮೆಟಾಲ್ಕ್ಲೋರ್ 50 ಇ.ಸಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರಸಿ ಸಿಂಪರಣೆ ಮಾಡಬೇಕು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು.
ಅಂತರ ಬೇಸಾಯ
ಬಿತ್ತಿದ 15 ದಿವಸಗಳ ನಂತರ, 10 ದಿವಸಗಳ ಅಂತರದಲ್ಲಿ 3 ಬಾರಿ ಕುಂಟೆ ಹಾಯಿಸಬೇಕು. ಯಾವುದೇ ಕಾರಣಕ್ಕೂ ಬಿತ್ತಿದ 45 ದಿವಸಗಳ ನಂತರ ಕುಂಟೆ ಹಾಯಿಸಬಾರದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ