Connect with us

ಅಸಾಮಾನ್ಯಳು

ಅಪರೂಪದ ಗುರುಮಾತೆ ರಾಜಯೋಗಿನಿ ನಾಗರತ್ನಮ್ಮ

Published

on

ದಾವಣಗೆರೆ ನಗರ ವ್ಯಾಪಾರ, ವಿದ್ಯಾ ಕೇಂದ್ರವಷ್ಟೇ ಅಲ್ಲ ಆಧ್ಯಾತ್ಮಿಕ ಕೇಂದ್ರವೂ ಹೌದು. ಇಲ್ಲಿ ಅದೆಷ್ಟೋ ಸಿದ್ಧಿ ಸಾಧಕರಿದ್ದಾರೆ. ಎಲೆ ಮರೆಯ ಕಾಯಿಯಂತೆ ತಪಗೈಯುತ್ತ ತಮ್ಮ ಬಳಿ ಸಾರಿದವರ ಆತ್ಮೋದ್ಧಾರ ಕಾರ್ಯದಲ್ಲಿ ತೊಡಗಿದ್ದಾರೆ. ಯಾವ ಪ್ರಚಾರದ ಹಂಗು ಇಲ್ಲದೆ ಆತ್ಮಗಳ ಶ್ರೇಯಸ್ಸಿಗಾಗಿ ಶ್ರಮಿಸುತ್ತಿದ್ದಾರೆ. ಇಂತಹ ವಿಶಿಷ್ಠ ಸಾಧಕರ ಸಾಲಿನಲ್ಲಿ ಕಂಡುಬರುತ್ತಾರೆ ದಾವಣಗೆರೆ ವಿನೋಬ ನಗರದ ನಿವಾಸಿ, ಅಪರೂಪದ ಗುರುಮಾತೆ ಶ್ರೀಮತಿ ನಾಗರತ್ನಮ್ಮನವರು.

ಒಂದಷ್ಟು, ನಮಗೆ ತಿಳಿದಷ್ಟು

ದಾವಣಗೆರೆ ಗುರುಸಿದ್ದಪ್ಪ – ಪಾರ್ವತಮ್ಮ ದಂಪತಿಗಳ ದೈವಿ ಸಂಜಾತೆಯಾಗಿ 1945ರಲ್ಲಿ ಜನಿಸಿದ ನಾಗರತ್ನಮ್ಮ ಅವರಿಗೆ ಬಾಲ್ಯದಿಂದಲೂ ಶ್ರದ್ಧಾ ಭಕ್ತಿಯ ಭಾವನೆ ಅಂತರಂಗದಲ್ಲಿ ಅವಿರ್ಭವಿಸಿತ್ತು. ಪೂಜೆ, ಪಾಠ, ಪ್ರವಚನ, ಧ್ಯಾನಾದಿಗಳಲ್ಲಿ ವಿಶೇಷ ಆಸಕ್ತಿ ಮೇಳೈಸಿತ್ತು. ದಾವಣಗೆರೆ ನಿವಾಸಿ, ಕೆಇಬಿ ಸೀನಿಯರ್ ಅಸಿಸ್ಟೆಂಟ್ ಬಿ.ಬಸಪ್ಪ ಅವರೊಡನೆ ದಾಂಪತ್ಯ ಜೀವನಕ್ಕೆ ಅಡಿ ಇಟ್ಟ ಮೇಲೆ ರಾಜ್ಯದ ನಾನಾ ಕಡೆ ವರ್ಗಾವಣೆ ನಿಮಿತ್ಯ ಪತಿಯೊಡನೆ ಸಂಚರಿಸಿದರು. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ 10 ವರ್ಷ ತಂಗಿದ್ದರು. ಆ ವೇಳೆ ಶಾರದಮ್ಮ ಎಂಬ ಸದ್ಭಕ್ತೆಯೊಬ್ಬರಿಂದ ಹಂಪಿ ಸಮೀಪದ ಕಾಳಘಟ್ಟ ಗ್ರಾಮದ ರುದ್ರಾವಧೂತರ ಮಠದ ಚಿದಾನಂದವಧೂತರ ಆಶ್ರಮದ ಬಗ್ಗೆ ಪರಿಚಯವಾಯಿತು.ಅಲ್ಲಿನ ಅಖಂಡ ತಪಸ್ವಿ, ರಾಜಯೋಗಿ, ಸಿದ್ಧಿ ಪುರುಷರಾದ ಶ್ರೀ ಕೆ.ಎನ್ ಸ್ವಾಮಿಗಳ ಮಾರ್ಗದರ್ಶನದಿಂದ ಪ್ರಭಾವಿತರಾಗಿ ಗುರುದೀಕ್ಷೆ ಪಡೆದರು. ಅವರಿಂದ ಬ್ರಹ್ಮ ಜ್ಞಾನ, ಕಾಲ ನಿರ್ಣಯ, ಮೋಕ್ಷ ಮಾರ್ಗದ ಬೋಧೆ ಪಡೆದು ಸಾಧನೆಯಲ್ಲಿ ತೊಡಗಿದರು. ಸಮರ್ಪಕ ಕುಟುಂಬ ನಿರ್ವಹಣೆಯ ಜೊತೆಗೆ ಆಧ್ಯಾತ್ಮಿಕ ಸಾಧನೆಯಲ್ಲೂ ಎತ್ತರಕ್ಕೇರುತ್ತಾ ಬಂದರು. ಕೇವಲ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದರೂ ಪುರಾಣ, ಪುಣ್ಯ ಕಥೆ, ಪ್ರವಚನಗಳನ್ನು ನಿರರ್ಗಳವಾಗಿ ಓದುವುದರ ಜೊತೆ ಅದರ ನಿಜ ಸಾರವನ್ನು ಭೇದಿಸಿ ಅರ್ಥೈಸಿಕೊಳ್ಳಬಲ್ಲ ಚಾಣಕ್ಷ್ಯತನ ಅವರಿಗೆ ಒಲಿದಿತ್ತು.
ಹೃದಯಾಘಾತದಿಂದ ಪತಿ ಮರಣ ಹೊಂದಿದ ನಂತರ ದಾವಣಗೆರೆಗೆ ಮರಳಿದ ಅವರು ಈ ವರೆಗೆ ಇಲ್ಲಿಯೇ ನೆಲೆಸಿದ್ದಾರೆ. ಇದೀಗ ಕಾಳಘಟ್ಟ ಆಶ್ರಮದ ಆಧ್ಯಾತ್ಮಿಕ ಕಾರ್ಯ ಕಲಾಪಗಳು ಮತ್ತು ಸೇವಾ ಕಾರ್ಯಗಳು ಇವರ ಮಾರ್ಗದರ್ಶನದಲ್ಲಿಯೇ ನಡೆಯುತ್ತಿವೆ.

ಸರಳ ಬೋಧನೆ – ಉದಾತ್ತ ಚಿಂತನೆ

ನಾಗರತ್ನಮ್ಮಾಜಿಯವರ ತತ್ವ ಬೋಧೆಗಳು ಅತ್ಯಂತ ಸರಳ ಮತ್ತು ಸಾತ್ವಿಕ. ಸಂಸ್ಕಾರ ದೋಷ ನಿಮಿತ್ಯ ಜೀವನ್ಮರಣದ ಚಕ್ರದಲ್ಲಿ ಸಿಲುಕುವ ಜೀವಾತ್ಮರಿಗೆ ಮುಕ್ತಿ ಮಾರ್ಗ ತೋರುವುದು ಹಾಗೂ ಜೀವಾತ್ಮರು ಮೂಲ ಪರಮಾತ್ಮನ ಕಣ ಸ್ವರೂಪರು ಎಂಬ ಸತ್ಯ ದರ್ಶನ ಮಾಡಿಸುವುದು ಇವರ ಮೂಲ ಗುರಿ. ಎಲ್ಲ ಕರ್ಮಕ್ಕೂ ಮನಸ್ಸೇ ಕಾರಣ. ಎಲ್ಲ ಸಂಸ್ಕಾರಗಳ ಮೂಲ ಬೀಜ ಮನಸ್ಸೇ. ಬಂಧನ ಮತ್ತು ಮುಕ್ತಿ ಕೂಡ ಈ ಮನಸ್ಸಿನಿಂದಲೇ. ಲೌಕಿಕ ಜೀವನಕ್ಕೆ ಮರಳಿ ಬರುವುದು ಅಥವಾ ಮುಕ್ತಿ ಪಡೆಯುವುದು ಸಹ ಈ ಮನಸ್ಸಿನ ಆಲೋಚನೆ ಮತ್ತು ಸಂಸ್ಕಾರಗಳ ಪ್ರಭಾವದಿಂದಲೇ. ಮನಸ್ಸು ಹೇಳಿದಂತೆ ಜೀವಾತ್ಮ ಕೇಳಿದರೆ ಚಂಚಲತೆಗೆ ಒಳಗಾಗಿ ಕಲ್ಮಷ, ಅಶುದ್ಧತೆ, ಪಾಪ, ಕರ್ಮ ಇತ್ಯಾದಿಗಳ ಸುಳಿಗೆ ಸಿಕ್ಕು ನಲುಗಬೇಕಾಗುತ್ತದೆ. ಆದರೆ ಅದೇ ಮನಸ್ಸಿನ ಮೇಲೆ ಅಧಿಕಾರ ಸಾಧಿಸಿದರೆ ಈ ಲೋಕದ ಎಲ್ಲಾ ಸುಖ ಸಿರಿ ಸಂಪತ್ತು, ಇಹ ಪರ ಆನಂದಗಳನ್ನು ಸಾತ್ವಿಕ ಮಾರ್ಗದಲ್ಲಿ ಅನುಭವಿಸಿ ತೃಪ್ತಿ ಹೊಂದಿ ನಂತರ ಜೀವನ್ಮುಕ್ತಿ ಸಹ ಹೊಂದಬಹುದು, ಶಿವನಲ್ಲಿ ಐಕ್ಯವಾಗಬಹುದು ಎಂಬ ಮಾರ್ಮಿಕ ಸತ್ಯವನ್ನು ಸರಳವಾಗಿ ಬೋಧಿಸುತ್ತಾರೆ. ಆಧ್ಯಾತ್ಮಿಕ ಜೀವನ ಎಂದರೆ ಎಲ್ಲಾ ಆಸೆ ಆಕಾಂಕ್ಷೆ ಬಿಟ್ಟು ಬಿಡುವುದು, ಗುಡ್ಡ ಬೆಟ್ಟಕ್ಕೆ ಹೋಗಿ ತಪಗೈಯುವುದು, ಮಠ ಮಂದಿರ ಸೇರುವುದು ಎಂಬ ಹತ್ತು ಹಲವು ಗೊಂದಲ ನಮ್ಮ ಜನರಲ್ಲಿದೆ. ಆದರೆ, ಬೇಕು ಎನಿಸುವ ಎಲ್ಲ ಸುಖ, ಸಿರಿ, ಸಂಪತ್ತು, ಶಾಂತಿ, ನೆಮ್ಮದಿಗಳನ್ನು ಸಾತ್ವಿಕವಾದ ಹಾದಿಯಲ್ಲಿ ತನಗೂ ಪರರಿಗೂ ಹಿತವಾಗುವ ರೀತಿಯಲ್ಲಿ ಪಡೆದುಕೊಳ್ಳಲು ಸಾಧ್ಯವಿದೆ. ಆದರೆಭೌತಿಕವಾಗಿ ಕಣ್ಣಿಗೆ ಕಾಣುವುದನ್ನು ಬಯಸಿ ಪಡೆದ ಮಾತ್ರಕ್ಕೆ ಜೀವನ ಅಂತ್ಯವಾಗಿ ಬಿಡುವುದಿಲ್ಲ. ಇದರ ಆಚೆ ನಮ್ಮ ಗುರಿ ಇನ್ನೂ ಬೇರೇನೋ ಇದೆ. ಆ ಅಗೋಚರವಾದ ಸತ್ಯವೂ ಕೂಡ ಏನೆಂದು ಅರಿತು,ಅದನ್ನು ಸಹ ಸಾಧಿಸಿ ಪಡೆದುಕೊಂಡು ಅಂತಿಮವಾಗಿ ಪರಮ ತೃಪ್ತಿ, ಪರಮಾನಂದ ಹೊಂದಬೇಕಿದೆ. ತಿಳಿಯಲು, ಹೊಂದಲು, ಅನುಭವಿಸಲು ಇನ್ನೇನೂ ಉಳಿದಿಲ್ಲ ಎಂಬ ಅಂತಿಮ ಘಟ್ಟ ತಲುಪಿದಾಗ ಮತ್ತೇ ಮನಸ್ಸು ಮರಳಿ ಲೋಕದ ಗೊಡವೆಗೆ, ಜನನ ಮರಣಗಳ ಸುಳಿಗೆ ಸಿಲುಕಲು ಸಾಧ್ಯವೇ ? ಅದನ್ನೇ ಸುಲಭ ಮಾರ್ಗದಲ್ಲಿ ತಿಳಿಸಿಕೊಡುವುದು ನಮ್ಮ ಧರ್ಮ ಎನ್ನುತ್ತಾರೆ ಗುರುಮಾತೆ.ಸ್ಥೂಲ, ಸೂಕ್ಮ, ಕಾರಣ, ಮಹಾ ಕಾರಣ ಹಾಗೂ ತುರಿಯಾತೀತ ಎಂಬ ವಿವಿಧ ಘಟ್ಟಗಳ ಪರಿಚಯದ ಮೂಲಕ ಜೀವನ್ಮುಕ್ತಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ .ಈ ವಿದ್ಯೆಗೆ ಬ್ರಹ್ಮ ವಿದ್ಯೆ, ಕಾಲ ಜ್ಞಾನ, ಮೋಕ್ಷ ಸಾಧನೆ ಎಂಬಿತ್ಯಾದಿ ಹೆಸರುಗಳುಂಟು. ಈ ವಿದ್ಯೆಯನ್ನು ತಾನು ಅರಿತು ಪರರಿಗೂ ಧಾರೆ ಎರೆಯುವುದೆಂದರೆ ಸುಲಭದ ಮಾತಲ್ಲ. ನರ ಗುರು, ಪಶು ಗುರು, ದೇವಗುರು ಎಂಬ ಹಲವಾರು ಗುರು ಪರಂಪರೆಗಳಿವೆ. ಇದರಲ್ಲಿ ದೇವಗುರು ಪರಂಪರೆಯೇ ಸರ್ವ ಶ್ರೇಷ್ಠ.
ತನ್ನ ಅಮೃತ ಹಸ್ತದಿಂದ ಇತರರನ್ನು ಮುಟ್ಟಿದ ಕೂಡಲೇ ಸಕಲ ಕರ್ಮದೋಷಗಳು ನಿವಾರಣೆಗೊಂಡು ಆ ಕ್ಷಣದಿಂದಲೇ ಮೋಕ್ಷ ಮಾರ್ಗ ತೆರೆದುಕೊಳ್ಳುವಂತೆ ಮಾಡುವ ದಿವ್ಯ ಶಕ್ತಿ ಯಾವ ಗುರುವಿಗೆ ಇದೆಯೋ, ಯಾರಿಗೆ ಪರರ ಕಷ್ಟ ನಿವಾರಿಸಿ ಅವರ ಸಕಲ ಇಷ್ಟಾರ್ಥ ಈಡೇರಿಸಿ ಜೀವನ್ಮುಕ್ತಿಗೆ ಹರಸುವ ಔದಾರ್ಯವಿದೆಯೋ ಆತನೇ ನಿಜವಾದ ಸದ್ಗುರು ಎಂಬ ಮಾತಿದೆ. ಈ ಸಾಲಿಗೆ ಸೇರಿದ್ದಾರೆ ನಾಗರತ್ನಮ್ಮ ಗುರುಮಾತೆ.

ಸಿದ್ದಗಂಗಾ ಸ್ವಾಮಿಯವರೊಂದಿಗೆ ಗುರುಮಾತೆ

ಲವಲವಿಕೆ ಮತ್ತು ಸದಾ ಕ್ರಿಯಾಶೀಲತೆ

76ಕ್ಕೂ ಅಧಿಕ ವರ್ಷದ ವಯೋವೃದ್ಧರಾಗಿರುವ ನಾಗರತ್ನಮ್ಮನವರು ಯುವಕರನ್ನು ಕೂಡ ನಾಚಿಸುವಂತಹ ಲವಲವಿಕೆ ಮತ್ತು ಕ್ರಿಯಾಶೀಲತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸದಾ ಪರರ ಏಳ್ಗೆ ಬಯಸುತ್ತಾ ಉಪಕಾರ – ಸಹಕಾರದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಾಗರತ್ನಮ್ಮನವರದು ಬತ್ತದ ಉತ್ಸಾಹ. ಮಕ್ಕಳು, ಮನೆ, ಮಠದ ಜವಬ್ದಾರಿಗಳನ್ನು ನಿರ್ವಹಿಸುವ ಜೊತೆ ಸಾಮಾಜಿಕ ಮತ್ತು ಅಧ್ಯಾತ್ಮಿಕ ಸೇವೆಯನ್ನು ನಿರಂತರ ಮುಂದುವರೆಸಿಕೊಂಡು ಬಂದಿದ್ದಾರೆ. ಹಾವು – ಚೇಳಿನಂತಹ ವಿಷ ಜಂತು ಕಡಿದವರಿಗೆ ಆಯುರ್ವೇದ ಔಷಧ ನೀಡುವ ಕಾರ್ಯ, ಧ್ಯಾನ, ಪೂಜೆ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸುವ ಜೊತೆ ಕಾಳಘಟ್ಟ ಶ್ರೀಮಠದ ಅವಧೂತ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರಷ್ಟೇ ಅಲ್ಲದೆ ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ರಾಜಯೋಗಿನಿ ನಾಗರತ್ನಮ್ಮ ಅವರ ಪ್ರಯತ್ನ ಮತ್ತು ಅಪಾರ ಕಳಕಳಿಯ ಫಲವಾಗಿ 2018ರ ಏಪ್ರಿಲ್ ತಿಂಗಳಲ್ಲಿ ಟಿವಿ 9 ವಾಹಿನಿಯಲ್ಲೂ ಕೂಡ ಶ್ರೀಮಠದ ಕುರಿತು ಕಾರ್ಯಕ್ರಮ ಪ್ರಸಾರವಾಯಿತು. ಆ ಮೂಲಕ ಆ ಮಠದ ಇತಿಹಾಸ, ಪರಂಪರೆ, ಸೇವೆ ಹಾಗೂ ಕೊಡುಗೆಗಳ ಕುರಿತು ನಾಡಿನಾದ್ಯಂತ ಪ್ರಚಾರ – ಪ್ರಸಾರವಾಗಲು ಅನುವಾಯಿತು. ಅಂತೆಯೇ ಅನೇಕರು ತಮ್ಮ ಜೀವನದ ದುಃಖ – ದುಮ್ಮಾನಗಳಿಗೆ ಪರಿಹಾರ ಪಡೆದುಕೊಂಡು ಸುಖ – ಶಾಂತಿ, ಸಮಾಧಾನದ ಬದುಕಿನೆಡೆಗೆ ಸಾಗಲು ಸಹಕಾರಿಯಾಯಿತು.

ಮುಗಿಸುವ ಮುನ್ನ

ತಾನು ತಿಳಿದಿದ್ದೇ ಸತ್ಯ ಎಂಬ ಭ್ರಮೆಯೊಳಗೆ ಮುಳುಗಿ ತನ್ನ ಬಳಿ ಬಂದವರ ಅದಃ ಪತನಕ್ಕೆ ಕಾರಣವಾಗುವ ಹಾಗೂ ಕಲಿತ ವಿದ್ಯೆಯನ್ನು ಹಣ ಕೀಳುವ ದಂಧೆಯನ್ನಾಗಿ ಮಾಡಿಕೊಳ್ಳುವವರೇ ಹೆಚ್ಚು ತುಂಬಿರುವ ಈ ಕಾಲಘಟ್ಟದಲ್ಲಿ ನಾಗರತ್ನಮ್ಮನವರು ವಿಶೇಷಿಗರಾಗಿ ನಿಲ್ಲುತ್ತಾರೆ. ಅವರ ಸಾತ್ವಿಕತೆ, ರಾಜಯೋಗದ ಪ್ರಭಾವ, ಆತ್ಮಗಳ ಉನ್ನತಿಗೆ ಹಂಬಲಿಸುವ ಮಾತೃ ಹೃದಯದ ವಾತ್ಸಲ್ಯ ಅವರನ್ನು ಹತ್ತಿರದಿಂದ ಕಂಡವರಿಗೆ ಮಾತ್ರ ಅರಿವಿಗೆ ಬರುತ್ತದೆ.
ಜೀವನದಲ್ಲಿ ಕಷ್ಟ ನಷ್ಟ ಸಹಜ. ಆದರೆ ಕಷ್ಟಗಳನ್ನು ಕಂಡು ಕುಗ್ಗಿದ ಮನಸ್ಸುಗಳಿಗೆ, ಬಸವಳಿದು ಬೆಂದ ಹೃದಯಗಳಿಗೆ ಆ ಕಾಠಿಣ್ಯ ಎದುರಿಸುವ ಮಾರ್ಗ, ತಿಳಿವಳಿಕೆ, ಅರಿವು, ಮೆಟ್ಟಿ ನಿಲ್ಲುವ ಧೈರ್ಯ, ಸ್ಥೈರ್ಯ ಸಾಂತ್ವಾನ ನೀಡಿ ಕೈ ಹಿಡಿದು ನಡೆಸುವವರು ಬೇಕಾಗುತ್ತದೆ. ಆ ಕೆಲಸವನ್ನು ಅತ್ಯಂತ ಸುಗಮವಾಗಿ ಮಾಡಬಲ್ಲ ಶಕ್ತಿ ಗುರುವಿಗೆ ಮಾತ್ರ ಇದೆ. ಸರಿಯಾದ ಮಾರ್ಗದರ್ಶನ ತೋರುವ ತಪ ಶಕ್ತಿ ಕೆಲವೇ ಕೆಲವರಿಗೆ ಮಾತ್ರ ಒಲಿದಿರುತ್ತದೆ. ಆ ತಪೋ ಬಲ, ಮನೋ ಬಲ, ದೈವ ಬಲ, ವಾಕ್ ಸಿದ್ಧಿಯ ಬಲ ಗುರುಮಾತೆ ನಾಗರತ್ನಮ್ಮ ಅವರಿಗೆ ಭಗವಂತನ ವರದಾನವಾಗಿ ಲಭಿಸಿದೆ. ಈ ವಿದ್ಯೆ ಕಲಿಯಲು ಬರುವವರ ಸಂಖ್ಯೆ ಅತಿ ವಿರಳ. ಆ ಭಾಗ್ಯ ದೊರೆಯುವುದು ಕೂಡ ಕೆಲವರಿಗೆ ಮಾತ್ರ. ಇದು ಗುರು ಕೃಪೆಯಿಂದ ಮಾತ್ರ ಸಾಧ್ಯ ಎನ್ನುವ ಅವರು ಇಂತಹ ಅಪರೂಪದ ವಿದ್ಯೆಯನ್ನು ಅತ್ಯಂತ ಉತ್ಸಾಹ ಮತ್ತು ಪ್ರೀತಿಯಿಂದ ತಮ್ಮ ಮನೆಯಲ್ಲೇ ಕಲಿಸುತಿದ್ದಾರೆ. ಆಸಕ್ತರು ಅವರ ಮಾರ್ಗದರ್ಶನ ಪಡೆಯಲು ಮೊ.ಸಂ| 9741458905 ಗೆ ಸಂಪರ್ಕಿಸಬಹುದು.

ಅಸಾಮಾನ್ಯಳು

ಭಾರತದ ಕಿರಿಯ ಲೇಖಕಿ ‘ಮಾನ್ಯ ಹರ್ಷ’..!

Published

on

ಮಾನ್ಯ ಹರ್ಷ

ತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ ಕಿರಿಯ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಈಕೆ ಬರೆದಿರುವ “ ನೀರಿನ ಪುಟಾಣಿ ಸಂರಕ್ಷಕರು ” ಮಕ್ಕಳ ಕಾದಂಬರಿಗೆ , ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದಲ್ಲಿ ಪುಸ್ತಕ ಬರೆದಿರುವ ಕಿರಿಯ ಲೇಖಕಿ “ ಎಂಬ ಬಿರುದಿಗೆ ಪಾತ್ರಳಾಗಿದ್ದಾಳೆ ಮಾನ್ಯ.

ಬೆಂಗಳೂರಿನ ಬಿ.ಟಿ.ಎಮ್ ಬಡಾವಣೆ ಯ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವುದು ಮಾನ್ಯ ತಾನು ಅಪ್ಪಟ ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ಚಿಕ್ಕ ವಯಸ್ಸಿನಲ್ಲೇ ಸಾಹಿತ್ಯ ಆಸಕ್ತಿ ಯನ್ನು ಬೆಳಸಿಕೊಂಡಿರುವ ಮಾನ್ಯ, ತನ್ನ ಅಜ್ಜಿಯ ಬಾಯಿಂದ ಕನ್ನಡ ಕಥೆ-ಕವನಗಳನ್ನು ಕೇಳಿ ಬೆಳೆದ ಹುಡುಗಿ. ಕನ್ನಡದಲ್ಲಿ ಪುಸ್ತಕ ಬರೆಯಲು ನನ್ನ ಅಜ್ಜಿಯೇ ನನಗೆ ಸ್ಫೂರ್ತಿ ಎನ್ನುತ್ತಾಳೆ ಮಾನ್ಯ.

ಈಗಾಗಲೇ ” ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಐದು ರೆಕಾರ್ಡ್ ಬುಕ್ಗಳಲ್ಲಿ ಹೆಸರು ಮಾಡಿರುವ ಈ ಪುಟ್ಟ ಲೇಖಕಿ, ವಜ್ರ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಭಾರತದ ಕಿರಿಯ ಕವಿಯಿತ್ರಿ” ಎಂಬ ಬಿರುದನ್ನೂ ಮುಡಿಗೇರಿಸಿಕೊಂಡಿದ್ದಾಳೆ.

ನೀರಿನ ಪುಟಾಣಿ ಸಂರಕ್ಷಕರು” ಈಕೆಯ ಎರಡನೆಯ ಪುಸ್ತಕವಾಗಿದ್ದು , ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಬರೆದಿದ್ದಾಳೆ.
ಆಂಗ್ಲ ಅವತರಣಿಕೆ ” ದಿ ವಾಟರ್ ಹೀರೋಸ್” ಮತ್ತು ಕನ್ನಡದಲ್ಲಿ ” ನೀರಿನ ಪುಟಾಣಿ ಸಂರಕ್ಷಕರು ” ಹೆಸರಲ್ಲಿ ರಚಿತವಾಗಿರುವ ಈ ಪುಸ್ತಕ ಸದ್ಯ ಕಾಡುತ್ತಿರುವ ನೀರಿನ ಕೊರತೆ ಮತ್ತು ಇದರ ಸಂರಕ್ಷಣೆಯ ತೀವ್ರತೆಯ ಮೇಲೆ ಬೆಳಕು ಚೆಲ್ಲುತ್ತದೆ.

ಈ ಪುಸ್ತಕ ಮಾರ್ಚ್ 22 ಕ್ಕೆ , ವಿಶ್ವ ಜಲ ದಿನದಂದು ಬಿಡುಗಡೆ ಆಗಬೇಕಿತ್ತು. ಆದ್ರೆ ವಿಶ್ವವನ್ನು ಕಾಡುತ್ತಿರುವ ಕರೋನ ಕಾಟದಿಂದಾಗಿ ಪುಸ್ತಕ ಬಿಡುಗಡೆ ತುಂಬಾ ಕಷ್ಟ ಆಯ್ತು. ಲಾಕ್ಡೌನ್ ನಡುವೆಯೂ ಪುಸ್ತಕವನ್ನು ಆನ್ಲೈನ್ ನಲ್ಲೇ ಬಿಡುಗಡೆ ಮಾಡಿದೆವು ಎಂದು ತಮ್ಮ ಅಳಲು ವ್ಯಕ್ತ ಪಡಿಸಿದರು.

ಪುಟ್ಟ ಲೇಖಕಿಯು, ದೈನಂದಿನ ಜೀವನದ ಸರಳ ನಿದರ್ಶನಗಳ ಮೂಲಕ ನೀರಿನ ಸಮಸ್ಯೆ ಯನ್ನು ಸ್ವಾರಸ್ಯಕರವಾಗಿ ನಿರೂಪಿಸಲು ಪ್ರಯತ್ನಿಸಿದ್ದಾರೆ.

ನೀರನ್ನು ಉಳಿಸಲು ಪ್ರತಿಯೊಬ್ಬರೂ ಅನುಸರಿಸಬೇಕಾದ ಅತ್ಯಂತ ಸರಳ ಮತ್ತು ಸುಲಭ ನಿಯಮಗಳನ್ನು ಈ ಪುಸ್ತಕ ಒಳಗೊಂಡಿದೆ.

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿ ಅರಿತ ಮಕ್ಕಳು ಹೇಗೆ ತಮ್ಮ ಪುಟ್ಟ ಕೈಗಳಿಂದ ದೊಡ್ಡ ಕೆಲಸ ಮಾಡಿ ತೋರಿಸುತ್ತಾರೆ ಎಂಬುದರ ಕಥಾಸಂಗಮವೇ ” ” ಪುಟಾಣಿ ಸಂರಕ್ಷಕರು ” .

ನೀರು ಪ್ರಕೃತಿಯ ಅಮೂಲ್ಯ ದ್ರವವಾಗಿದೆ. ನೀರು ಇಲ್ಲದೆ ಜೀವನವು ಅಸ್ತಿತ್ವದಲ್ಲಿಲ್ಲ. 3/4 ನೇ ಭಾಗದಷ್ಟು ಭೂಮಿಯ ಮೇಲ್ಮೈ ಜಲಮೂಲಗಳಿಂದ ಆವರಿಸಿದ್ದರೂ, ಈ ನೀರಿನ 97 ಪ್ರತಿಶತ ಉಪ್ಪು ನೀರಿನ ರೂಪದಲ್ಲಿ ಸಾಗರಗಳಲ್ಲಿದೆ, ಮತ್ತು ಮಾನವ ಬಳಕೆಗೆ ಅನರ್ಹವಾಗಿದೆ.

ಕೇವಲ 2.7% ಮಾತ್ರ ಶುದ್ದ ನೀರು ಇದ್ದು ಭ ಇದರಲ್ಲಿ ಸುಮಾರು 70% ರಷ್ಟು ನೀರು
ಹಿಮನದಿಗಳಾಗಿವೆ. ಅದರಲ್ಲಿ ಕೇವಲ 1% ಶುದ್ಧ ನೀರು ಲಭ್ಯವಿದ್ದು ಮಾನವ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಅಮೂಲ್ಯವಾದ ಸಂಪನ್ಮೂಲವನ್ನು ಸಂರಕ್ಷಿಸುವುದು ಬಹಳ ಮುಖ್ಯ ಎಂದು ಸಾರಿ ಹೇಳುತ್ತಿದ್ದಾರೆ ಈ ಪುಟ್ಟ ಲೇಖಕಿ. ಈ ಪುಸ್ತಕವು ಪ್ರಕೃತಿ ತಾಯಿಗೆ ಅರ್ಪಿತವಾಗಿವೆ.

ವಿಶ್ವ ಜಲ ದಿನಾಚರಣೆ, ಮಾರ್ಚ್ 22, 2018 ರಂದು, ಮಾನ್ಯ , 38 ಮಕ್ಕಳು ಮತ್ತು 36 ಪೋಷಕರೊಂದಿಗೆ ನೀರು ಉಳಿಸಿ ಮೆರವಣಿಗೆ ಜಾತಾ ಹಮ್ಮಿಕೊಂಡಿದ್ದಳು. ದೊರೆಸಾನಿ ಅರಣ್ಯ ಪ್ರದೇಶ ದಿಂದ ಪ್ರಾರಂಭವಾದ ಜಾತಾ ಪುಟ್ಟನ್‌ಹಳ್ಳಿ ಕೆರೆ ಯಲ್ಲಿ ಸಸಿಗಳನ್ನು ನೆಡುವ ಮೂಲಕ ಕೊನೆಗೊಂಡಿತು. ಮಕ್ಕಳು ನೀರನ್ನು ಉಳಿಸುವ ವಾಗ್ದಾನ ಮಾಡಿದರು ಮತ್ತು ನೀರು ಸಂರಕ್ಷಣೆ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಮನ್ಯಾ ಕನ್ನಡದಲ್ಲಿ ರಾಪ್ ಹಾಡನ್ನು ಬರೆದು ಹಾಡಿದ್ದಾರೆ. ಪ್ರಕೃತಿಯ ಸಂರಕ್ಷಣೆ ಬಗೆಗಿನ ಈ ರಾಪ್ ಸಂಗ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಬ್ಗಿಯರ್ ಬಿಟಿಎಂ ಶಾಲೆಯ ವಿದ್ಯಾರ್ಥಿಗಳು ಹಾಡಿದ ಸ್ಟ್ರೈಕ್ ಆಫ್ ಪ್ಲಾಸ್ಟಿಕ್ ಗೀತೆಯ ಸಾಹಿತ್ಯವನ್ನೂ ಮಾನ್ಯಾ ಬರೆದಿದ್ದಾರೆ. ಇದೇ ಶಾಲೆಯ ಮ್ಯೂಸಿಕ್ ಸರ್ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು , ದೊಡ್ಡ ಹಿಟ್ ಆಗಿದೆ.

ಭಾರತ ಕೇಂದ್ರ ಸರಕಾರ ಹಮ್ಮಿಕೊಂಡಿದ್ದ #WaterHeroes ಸ್ಪರ್ಧೆ ಯಲ್ಲಿ ಕೂಡ ಮಾನ್ಯಳ ನೀರಿನ ಹೋರಾಟ ಮತ್ತು ಕಳಕಳಿ ಗೆ ಪ್ರಶಸ್ತಿ ಬಂದಿದೆ.

UN -Water ನ ಫೇಸ್ ಬುಕ್ ಖಾತೆಯಲ್ಲಿ ಈ ಪುಟ್ಟ ಬಾಲೆಯ ನೀರಿನ ಹೋರಾಟ ಹಾಗೂ ನೀರಿನ ಸಂರಕ್ಷಣೆ ಕಳಕಳಿ ಬಗ್ಗೆ ಹಂಚಿಕೊಳ್ಳಲಾಗಿದೆ.

ಈ ಕಿರಿಯ ಕವಿಯಿತ್ರಿಯ ಕಿವಿಮಾತು

ನೀವು ಉಪದೇಶ ಮಾಡುವ ಮೊದಲು ಸ್ವಯಂ
ಅಭ್ಯಾಸ ಮಾಡಿ”.

ಅಪ್ರತಿಮ ಪ್ರತಿಭೆಯ ಈ ಪುಟ್ಟ ಬಾಲೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಲಿ. ಮತ್ತಷ್ಟು
ಯಶಸ್ಸ ಈಕೆಯದಾಗಲಿ ಎಂದು ಹಾರೈಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಗ್ರಾಂಡ್ ಮಾಸ್ಟರ್ ಮಾನ್ಯ ಹರ್ಷ ; ಈಕೆ ಭಾರತದ ಅತ್ಯಂತ ಕಿರಿಯ ಕವನಗಾರ್ತಿ..!

Published

on

  • ಸುದ್ದಿದಿನ ಡೆಸ್ಕ್

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾಗಿದ್ದಾಳೆ ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ. ಬೆಂಗಳೂರಿನ ವಿಬ್ಗಯಾರ್ ಹೈ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ , ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತ ವಾಗಿದೆ.

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ “ ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು “ಭಾರತದ ಕಿರಿಯ ಕವನಗಾರ್ತಿ ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ಜುಲೈ 5, 2019ರಂದು ಮುದ್ರಣಗೊಂಡ “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

  1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ “ಭಾರತದ  ಅತ್ಯಂತ ಕಿರಿಯ ಕವನಗಾರ್ತಿ” ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ.
  2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್  ವತಿಯಿಂದ, “ಗ್ರಾಂಡ್ ಮಾಸ್ಟರ್” ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.
  3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ” ಪರಿಸರ ಕುರಿತ ಕವನಗಳು ರಚಿಸಿದ  ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ,” ಥಾಂಕ್ಸ್ ಗಿವಿಂಗ್” ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

ಮೂರು ವರ್ಷಗಳ,  ಪುಸ್ತಕ ಮುದ್ರಿಸುವ,  ಈಕೆಯ ಕನಸು ಈಗ ನನಸಾಗಿದೆ. “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ”ನೀರು ಉಳಿಸಿ” ಆಂದೋಲನ  ನಡೆಸಿದ್ದಳು.

ಅಂತೆಯೇ,ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ. ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ,ಹಾಡು, ಕುಣಿತ,ಈಜುಗಾರಿಕೆಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.

ಇಷ್ಪಕ್ಕೇ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಅರ್ಪಣ ‘ಆರಾಧನ’ಕ್ಕೆ 10ನೇ ವಾರ್ಷಿಕೋತ್ಸವದ ಸಂಭ್ರಮ.!

Published

on

  • ಇದೇ ಆಗಸ್ಟ್ 11 ಆರಾಧನ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವದ ದಿನ ಈ ಎಲ್ಲಾ ಮಹಿಳೆಯರು ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಇನ್ನೂ ಮಹಿಳೆಯರ ಈ ಆಸಕ್ತಿಯನ್ನು ಮನಗಂಡ ಅಪರ್ಣರವರು ಸದ್ಯ ಹನುಮಂತನಗರದಲ್ಲಿ ತಮ್ಮ‌ ನೃತ್ಯ ಶಾಲೆಯ ಇನ್ನೊಂದು ಶಾಖೆಯನ್ನು ತೆರೆದಿದ್ದಾರೆ. ಆ ಮೂಲಕ ‌ಕಲೆ ಮತ್ತು ಕಲಾಸಕ್ತರನ್ನು ಒಂದು ಗೂಡಿಸುವ ಪ್ರಯತ್ನ ಮಾಡ್ತಿದ್ದಾರೆ.

ಲ್ಲರೊಳಗೊಂದು ಕಲೆ ಇರುತ್ತದೆ, ಕಾಲೇಜು ದಿನಗಳು ಮುಗಿದ ನಂತರ ಕೆಲಸ, ಆ ಒಂದು ಅನಿವಾರ್ಯತೆ ಅದನ್ನು ನನ್ನಿಂದ ದೂರ ಮಾಡಿಬಿಡುತ್ತೆ, ಕೆಲವರು ಅದೆಲ್ಲವನ್ನೂ ಮೀರಿ ತಮ್ಮ ಪ್ರತಿಭೆಯನ್ನ ಉಳಿಸಿಕೊಂಡು ಹೋಗುತ್ತಾರೆ, ಕೆಲವರು
ಅದನ್ನು ಮರೆತು ಬಿಡುತ್ತಾರೆ, ಆದ್ರೆ ನಿಜವಾಗಲೂ ಅದರ ಪ್ರೀತಿ ಇರುವವರು ಅದರಲ್ಲಿ ಬದುಕನ್ನು ಕಂಡುಕೊಳ್ಳುತ್ತಾರೆ. ಅಪರ್ಣಾ ಆನಂದ್ ಉತ್ತಮ ಉದಾಹರಣೆ.

ಹಾಡುಗಾರಿಕೆ ಅದು ಆತ್ಮ ತೃಪ್ತಿ

ನಾವು ಮಾಡೋ ಕೆಲಸ ಬಗ್ಗೆ ನಮಗೆ ಆತ್ಮ ತೃಪ್ತಿ ಇದ್ದಾಗಷ್ಟೇ ಅಲ್ಲ… ಯಶಸ್ಸು ಸಾಧಿಸೋದಕ್ಕೆ ಸಾಧ್ಯ. ಇದನ್ನು ಅರಿತುಕೊಂಡಅಪರ್ಣಾ ತಮಗೆ ಆತ್ಮ ಸೃಷ್ಟಿ ನೀಡುವ ಹಾಡುಗಾರಿಕೆ ಮತ್ತು ನೃತ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ, ಇವತ್ತಿನ ಸಮುದಾಯ ಡಿಗ್ರಿ ಮುಗಿಸುತ್ತಲೇ ಸಂಬಳದ ಕಡೆಗೆ ಜಾರುತ್ತಾರೆ, ಆದಕ್ಕಾಗಿಯೇ ಸಾಕಷ್ಟು ಕೋರ್ಸ್ ಗಳನ್ನು ಮಾಡಿಕೊಂಡು ಮುಂದುವರೆಯುತ್ತಾರೆ, ಈ ಹಂತದಲ್ಲೇ ತಮ್ಮೊಳಗಿರುವ ಒಬ್ಬ ಹಾಡುಗಾರ , ನೃತ್ಯ, ಕ್ರೀಡಾ ಪಟು ವನ್ನು ಕಳೆದುಕೊಳ್ಳುತ್ತಾರೆ, ಆದ್ರೆ
ಆ ಅವರ ಹಾದಿ ಮಾತ್ರ ಭಿನ್ನ.

ಬಾಲ್ಯ ಬರೆದಿತ್ತು ಡೆಸ್ಟಿನಿ

ಹಾಡು ಮತ್ತು ನೃತ್ಯವನ್ನು ಜೀವವೆಂದುಕೊಂಡಿದ್ಮ ಹುಡುಗಿ ಅಪರ್ಣ, ಅದಕ್ಕಾಗಿ ಯನ್ನು 5ನೇ ವಯಸ್ಸಿನಲ್ಲಿಯೇ ಹಾಡುಗಾರಿಕೆ ಆರಂಭಿಸಿದರು. 7ನೇ ತರಗತಿ ಯಲ್ಲಿದ್ದಾಗ ಮೊದಲ ಬಾರಿಗೆ ವೇದಿಕೆ ಹತ್ತಿದರು. ಆ ನಂತರ ನೃತ್ಯವನ್ನು ಜೊತೆಜೊತೆಯಲೆ ಅಭ್ಯಾಸ ಮಾಡಿದರು. ಮೂಲತಃ ಮೈಸೂರಿನವರಾದ ಅಪರ್ಣಾ ಅವರ ಕಲೆಗೆ ಕಾಲೇಜಿನಲ್ಲೂ ಒಳ್ಳೆಯ ಪ್ರೋತ್ಸಾಹ ಸಿಕ್ಕಿತು. ಕಾಲೇಜು ದಿನಗಳಲ್ಲಿ, ಸಿ್ಖಕ್ಕ ಈ ಪ್ರೋತ್ಸಾಹಕ್ಕೆ, ಭರತನಾಟ್ಯದಲ್ಲೇ ಎಂ.ಎ ಮುಗಿಸಿದರು. ಈ ಹಂತದಲ್ಲಿ ಸಾಕಷ್ಟು ಸಂಗೀತ ಮತ್ತು ನೃತ್ಯ
ಕಛೇರಿಯನ್ನು ನೀಡುತ್ತಿದ್ದರು. ತಾವು ಸಿರೀಕ್ಷಿಸದಷ್ಟು ಸಂಭಾವನೆ ಸಿಗದಿದ್ದರೂ ಕೆಡಿಸಿಕೊಳ್ಳದಿದರೂ, ಆ ಹಣ ಕೀರ್ತಿ ಗೌರವ ಅವರನ್ನು ಹಿಂಬಾಲಿಸಿತು.

ಆರಾಧನ

ಆರಾಧನದ ಆರಾಧನೆ

ತಮ್ಮ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಬಂದ ಅಪರ್ಣ ಎದೆ ತುಂಬಿ ಹಾಡುವೆನು ಸ್ಪರ್ಧೆಯಲ್ಲಿ ಹೆಸರುಗಳಿಸಿದರು. ನಂತರ
ಬೆಂಗಳೂರಿನಲ್ಲಿಯೇ ತಮ್ಮ ಪತಿ ಆನಂದ್ ಜೊತೆಗೆ ನೆಲೆ ನಿಂತ ಅಪರ್ಣಾ ಗೆ ಸುಮ್ಮನೆ ಮನೆಯಲ್ಲಿ ಕೂರುವುದು ಇಷ್ಟವಿರಲಿಲ್ಲ. ಬದುಕಿನ ಎಲ್ಲ ಹಂತದಂತೆ ಮದುವೆ, ಮಗುವಿನ ಜೊತೆ ಕಲೆಯನ್ನು ಆರಾಧಿಸೋ ತವಕ ಮುಂದುವರೆದಿತ್ತು. ಇದೇ ಇಚ್ಚಾಶಕ್ತಿಯನ್ನು ಪ್ರಭಲವಾಗಿಸಿಕೊಂಡು ತಾವು ನೆಲೆಸಿದ್ದ ಮನೆಯಲ್ಲೇ ಆರಾಧನಾ ಫರ್ಫಾರ್ಮಿಂಗ್ ಸ್ಕೂಲ್ ಆರಂಭಿಸಿದರು. ಮೊದಲು ಸಣ್ಣ ಮಟ್ಟದಲ್ಲೇ ಬೆಳೆದ ಸಂಸ್ಥೆ ಇಂದು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ.

ಗುರು ಶಿಷ್ಯ ಪರಂಪರೆಯ ರಾಯಭಾರಿ

ತಾವು ಗುರು ಶಿಷ್ಯ ಪರಂಪರೆಯಲ್ಲಿ ಕಲಿತಿದ್ದ ಅಪರ್ಣಾ ಆದನ್ನೆ ತಮ್ಮ ಕಲಾಸೇವೆಗೆ ಮೀಸಲಿಟ್ಟರು. ಇಂದಿನ ಯುವ ಜನತೆಗೆ ಕಲೆಯ ಪರಿಚಯ ಸ್ಟೇಜ್, ಕೋ ಆರ್ಡಿನೇಷನ್, ಥಿಯೇಟರ್, ಪರ್ಫಾಮೆನ್ಸ್ ಬಗ್ಗೆ ಹೆಚ್ಚು ಜ್ಞಾನ ನೀಡುವುದು ಮುಖ್ಯ ಉದ್ಮಶವಾಗಿತ್ತು. ಆ
ಹಿನ್ನೆಲೆಯಲ್ಲಿ ಆರಂಭವಾದ ಅರಾಧನಾ ಇಂದು 30 ಜನ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಇಲ್ಲಿ ಬರಲು ಯಾವುದೇ ವಯಸ್ಸಿನ ಮಿತಿ ಇಲ್ಲ. ನಿಮಗೆ ಕಲಿಯೋ ಹುಮ್ಮಸಿದರೆ ಸಾಕು ಅಂತಾರೆ ಅಪರ್ಣಾ. ಇದನ್ನು ಇನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸೋ ಕನಸು
ಹೊಂದಿದ್ದಾರೆ. ಆ ಮೂಲಕ ತಮ್ಮ ಕನಸು ಮತ್ತು ಬದುಕು ಎರಡನ್ನು ನೃತ್ಯದಲ್ಲಿ ಕಟ್ಟಿಕೊಂಡಿದ್ದಾರೆ.

ಇವತ್ತು ಕಲೆ ಅನ್ನೋದು ಕೇವಲ ಮನರಂಜನೆ ಯಾಗಿ ಮಾತ್ರ ಉಳಿದಿಲ್ಲ. ದೇಶದ ಆರ್ಥಿಕ ಪ್ರಗತಿಯಲ್ಲಿ ಇದು ದೊಡ್ಡ ಸ್ಥಾನಗಳಿಸಿಕೊಂಡಿದೆ. ಇದೇ ಹಿನ್ನೆಲೆಯಲ್ಲಿ ಇವತ್ತು ಎಷ್ಟೋ ಜನರು ತಮ್ಮ ಉದ್ಯೋಗಗಳನ್ನು ತೊರೆದು ತಮ್ಮ ಆತ್ಮದ ಕರೆಗೆ ಓಗೊಟ್ಟು ತಮ್ಮ ಕೈಹಿಡಿದಿದ್ದ ಕಲಾ ಸೇವೆಗೆ ಮರಳುತ್ತಿದ್ದಾರೆ. ಇನ್ನೂ ಕೆಲವರು ಕಲೆಯನ್ನು ಉಸಿರಾಗಿಸಿಕೊಂಡ ಅಪರ್ಣಾ ರಂಥ ಯುವ ಮನಸು ಅದರಲ್ಲಿ ತೊಡಗಿಸಿಕೊಂಡು ತಮ್ಮ ಬದುಕನ್ನು ಕಟ್ಟಕೊಂಡಿದ್ದಾರೆ. ಅದಕ್ಕೆ ಹೇಳೋದು ಮನಸ್ಸಿಗೆ ಇಷ್ಟವಾದುದನ್ನು ಮಾಡುತ್ತಾ ಹೋದರೆ ಕೀರ್ತಿ ಹಣ ಮತ್ತು ಯಶಸ್ಸು ನಿಮ್ಮದಾಗುತ್ತದೆ ಅಂತ!

ಆಗಸ್ಟ್ 11ಕ್ಕೆ ‘ಆರಾಧನ’ ವಾರ್ಷಿಕೋತ್ಸವ

ಕಲಿಕೆಗೆ ಯಾವುದೇ ವಯಸ್ಸಿಲ್ಲ. ಅದಕ್ಕೆ ಪೂರಕವಾಗಿ ಉದ್ಯೋಗಸ್ಥ, ಸ್ವ ಉದ್ಯೋಗಸ್ಥ ಮಹಿಳೆಯರು. ತಮಗೆ ಸಿಗುವ ಸ್ವಲ್ಪ ಸಮಯದಲ್ಲೇ ಅಪರ್ಣ ಅವರ ಬಳಿ ನೃತ್ಯ ಕಲಿಯುತ್ತಿದ್ದಾರೆ. ಇದೇ ಆಗಸ್ಟ್ 11 ಆರಾಧನ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವದ ದಿನ ಈ ಎಲ್ಲಾ ಮಹಿಳೆಯರು ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಇನ್ನೂ ಮಹಿಳೆಯರ ಈ ಆಸಕ್ತಿಯನ್ನು ಮನಗಂಡ ಅಪರ್ಣರವರು ಸದ್ಯ ಹನುಮಂತನಗರದಲ್ಲಿ ತಮ್ಮ‌ ನೃತ್ಯ ಶಾಲೆಯ ಇನ್ನೊಂದು ಶಾಖೆಯನ್ನು ತೆರೆದಿದ್ದಾರೆ.

ಆ ಮೂಲಕ ‌ಕಲೆ ಮತ್ತು ಕಲಾಸಕ್ತರನ್ನು ಒಂದು ಗೂಡಿಸುವ ಪ್ರಯತ್ನ ಮಾಡ್ತಿದ್ದಾರೆ. ಇನ್ನೂ ತಿರುಪತಿಯ TTD ,SVBC ಯಲ್ಲಿ ಕಾರ್ಯಕ್ರಮ ‌ನೀಡಿದ್ದಾರೆ. ತಾಂಜವೂರಿನ ಬೃಹದೀಶ್ವರ ದಲ್ಲಿ ನಾಟ್ಯಂಜಲಿ , ವೆಲ್ಲೂರ್ ಜಲಕಂಠೇಶ್ವರಲ್ಲಿ ಕಲಾ ಪ್ರದರ್ಶನ ನೀಡಿದ್ದಾರೆ. ಇನ್ನು ಸಂಸ್ಥೆಯಲ್ಲಿ‌ ಕಲಿಯುತ್ತಿರುವ ಮಕ್ಕಳೆಲ್ಲರೂ ಕರ್ನಾಟಕ ಎಜುಕೇಷನ್ ಬೋರ್ಡ್‌ನಡೆಸುವ ಸಂಗೀತ, ನೃತ್ಯ ಪರೀಕ್ಷೆಯಲ್ಲಿ 90% ಗಿಂತ ಹೆಚ್ಚಿನ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಹೀಗೆ ಅಪರ್ಣ ಆನಂದ್‌ರವರು ನಿರಂತರ ಕಲಾ ಸೇವೆಯನ್ನೇ ಬದುಕಾಗಿಸಿಕೊಂಡಿದ್ದಾರೆ.

ಇದೇ ಆಗಸ್ಟ್ 11 ರಂದು ತಮ್ಮ ಆರಾಧನ ಇನ್ ಸ್ಟಿಟ್ಯೂಟ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಟ್ರಸ್ಟ್ ನ 10 ನೇ ವಾರ್ಷಿಕೋತ್ಸವವನ್ನು , ಕತ್ರಿಗುಪ್ಪೆ, ಬಿ ಎಸ್ ಕೆ 3rd ಸ್ಟೇಜ್ ನಲ್ಲಿರುವ ಪರಂಪರೆ ಆಡಿಟೋರಿಯಂನಲ್ಲಿ‌ ಆಯೋಜಿಸಿದ್ದಾರೆ.‌ಜೊತೆಗೆ ಸಂಸ್ಥೆಯ ‌ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನವು ಇರುತ್ತದೆ. ತಪ್ಪದೇ ಕಲಾಸಕ್ತರು ಭಾಗವಹಿಸಿ. ಆರಾಧನ ಟ್ರಸ್ಟ್ ನ ಈ ಕಾರ್ಯವನ್ನು ಪ್ರೋತ್ಸಾಹಿಸಿ.

ಚೈತ್ರ ಮೈಸೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 weeks ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ3 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ3 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ3 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ3 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ3 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ3 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ3 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ3 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending