Connect with us

ದಿನದ ಸುದ್ದಿ

ಭಾರತದ ದಿವ್ಯ ಮೌನವೇ ಗಟ್ಟಿಯಾದ ಧ್ವನಿ

Published

on

  • ಮೂಲ : ಗೋಪಾಲಕೃಷ್ಣ ಗಾಂಧಿ (ದ ಹಿಂದೂ 15-9-20),ಅನುವಾದ : ನಾ ದಿವಾಕರ

1918-20ರ ಸ್ಪಾನಿಷ್ ಫ್ಲೂ, 1958, 66, 73 ಮತ್ತು 1980ರ ಆರ್ಥಿಕ ಹಿಂಜರಿತ ಮತ್ತು 1962ರ ಭಾರತ-ಚೀನಾ ಯುದ್ಧ ಇವೆಲ್ಲವೂ ಮತ್ತೊಮ್ಮೆ ಭಾರತವನ್ನು, ಭಾರತೀಯರನ್ನು ಕಾಡುತ್ತಿದೆ. ಈ ಬಹುಮುಖಿ ಸಮಸ್ಯೆಯನ್ನು ಹೇಗೆ ನಿಭಾಯಿಸುವುದು ಎಂದು ಬಹುಶಃ ಯಾರಿಗೂ ತಿಳಿಯುತ್ತಿಲ್ಲ. ವಾಸ್ತವ ಎಂದರೆ ವಸ್ತುಸ್ಥಿತಿ ಹೇಗಿದೆ ಎಂದೂ ಯಾರಿಗೂ ಸ್ಪಷ್ಟವಾಗಿ ತಿಳಿದಿಲ್ಲ.

ಕೋವಿದ್ 19 ಕುರಿತಂತೆ ನಮಗೆ ಕರಾರುವಾಕ್ಕಾಗಿ, ವಸ್ತುನಿಷ್ಠವಾಗಿ, ಅಧಿಕಾರಯುತವಾಗಿ, ಸಮಾಧಾನಕರವಾಗಿ ನಿರ್ದಿಷ್ಟ ಮಾಹಿತಿಯನ್ನು ನಮಗೆ ಯಾರೂ ನೀಡುತ್ತಿಲ್ಲ. ಸಾಂಕ್ರಾಮಿಕ ರೋಗಗಳ ತಜ್ಞ ಡಾ ಟಿ ಜಾಕಬ್ ಜಾನ್ ಅವರು ಹೇಳುವಂತೆ ಭಾರತ ಬ್ರೆಜಿಲ್ ಮತ್ತು ಅಮೆರಿಕವನ್ನೂ ಹಿಂದಿಕ್ಕಿ , ವಿಶ್ವದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ದೇಶವಾಗಿ ಹೊರಹೊಮ್ಮುತ್ತಿದೆ.

ದಿನನಿತ್ಯ ವರದಿಯಾಗುವ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ ಈ ಕುರಿತು ಸವಿವರವಾಗಿ ತಿಳಿದುಕೊಳ್ಳುವುದು ಸಾಕಷ್ಟಿದೆ. ಸರ್ಕಾರಿ ಮೂಲಗಳಿಂದ ಅಧಿಕೃತ ಮಾಹಿತಿಯನ್ನು ಈ ದೇಶದ ನಾಗರಿಕರು ಪಡೆಯಬೇಕಿದೆ. ಇದು ಸಾಧ್ಯವಾಗುತ್ತಿಲ್ಲ.

ಭಾರತದಲ್ಲಿ ಕೋವಿದ್ 19 ಸಾಮುದಾಯಿಕವಾಗಿ ಹರಡುತ್ತಿದೆಯೇ? (ಸಮುದಾಯ ಪ್ರಸರಣ ಏಪ್ರಿಲ್ ತಿಂಗಳಲ್ಲೇ ಆರಂಭವಾಗಿದೆ ಎಂದು ಆಗಲೇ ತಜ್ಞರು, ವೈದ್ಯರು ಎಚ್ಚರಿಸಿದ್ದರು-ಅನು) ಇದು ಹೌದಾದರೆ ದಿನನಿತ್ಯದ ಪರೀಕ್ಷೆ ಮತ್ತು ತಪಾಸಣೆಯ ಪ್ರಮಾಣವನ್ನು ಹೆಚ್ಚಿಸಬೇಕು. ಅವಶ್ಯಕತೆಗೆ ಅನುಗುಣವಾಗಿ ಆಸ್ಪತ್ರೆಯಲ್ಲಿ ಹಾಸಿಗೆ ಸೌಲಭ್ಯಗಳು ಮತ್ತು ವೆಂಟಿಲೇಟರ್‍ಗಳನ್ನು ಒದಗಿಸಬೇಕು.

ಅಥವಾ ಜನರು ತಮ್ಮ ಮನೆಯಲ್ಲಿದ್ದುಕೊಂಡೇ ತಾವೇ ಪರೀಕ್ಷೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದು ಈ ವೈರಾಣುವಿನಿಂದ ಪಾರಾಗಬೇಕು ಎಂದು ಅಪೇಕ್ಷಿಸಲಾಗುತ್ತಿದೆಯೇ ? ಈಗ ಕೊರೋನಾ ವೈರಾಣು ನಗರ ಪ್ರದೇಶಗಳನ್ನು ತೊರೆದು ಭಾರತದ ಹಳ್ಳಿ ಹಳ್ಳಿಗಳನ್ನು ತಲುಪುತ್ತಿದೆಯೇ ? ಇದು ಹೌದಾದರೆ ಗ್ರಾಮೀಣ ಭಾರತದ ಜನತೆಗೆ ತಮ್ಮ ಮೇಲೆ ಎರಗಿರುವ ಈ ಅಪಾಯದ ಅರಿವು ಇದೆಯೇ ? ಭಾರತದ ಗ್ರಾಮಗಳು ಈ ಸೋಂಕಿನ ಪರಿಣಾಮವನ್ನು ಎದುರಿಸಲು ಕನಿಷ್ಟ ಮಟ್ಟದ ತಯಾರಿ ನಡೆಸಿವೆಯೇ ?

ಈ ಸವಾಲನ್ನು ಸಮರ್ಥವಾಗಿ ಎದುರಿಸಲು ಆರೋಗ್ಯ ಕೇಂದ್ರಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿವೆಯೇ ? ನಮ್ಮ ಆಲೋಚನೆಯಾದರೂ ಏನು ? ಏನಾದರೂ ಯೋಚಿಸಿರಲೇಬೇಕಲ್ಲವೇ ? ಸೋಂಕಿನ ಪ್ರಮಾಣ ಮತ್ತು ಪ್ರಸರಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಎಲ್ಲ ರೀತಿಯ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವ ಅಧಿಕಾರ ವರ್ಗದಲ್ಲಿ ಈ ಆಲೋಚನೆ ಬಂದಿರಬೇಕಲ್ಲವೇ ? ಇದಕ್ಕೆ ತಾರ್ಕಿಕ ವಿವರಣೆ ಖಂಡಿತವಾಗಿಯೂ ಬೇಕಿದೆ.

ಶೋಧಿಸಬೇಕಾದ ಪ್ರಶ್ನೆಗಳು ಹಲವು

ಇದೇ ರೀತಿ ಲಾಕ್ ಡೌನ್ ಪರಿಣಾಮದಿಂದ ಮತ್ತು ಆರ್ಥಿಕ ಹಿಂಜರಿತದ ಪರಿಣಾಮ ದೇಶಾದ್ಯಂತ ವೇತನ ಪಡೆಯುವಂತಹ ನೌಕರರ ಮತ್ತು ಕೂಲಿಯಿಲ್ಲದ ಜನರ ಜೀವನೋಪಾಯ ಸತತವಾಗಿ ಕುಸಿಯುತ್ತಿರುವುದರ ಪರಿಣಾಮ ಏನು ಎನ್ನುವುದು ನಮಗೆ ತಿಳಿದಿಲ್ಲ. ದೇಶದಲ್ಲಿ ಜನಸಾಮಾನ್ಯರ ಕೊಳ್ಳುವ ಸಾಮರ್ಥ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ರಫ್ತು ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ರೈತರು ಮತ್ತು ಕೃಷಿ ಕಾರ್ಮಿಕರು ತಮ್ಮ ಫಸಲನ್ನು ಏನು ಮಾಡಬಹುದು ಎನ್ನುವುದೂ ನಮಗೆ ತಿಳಿದಿಲ್ಲ.

ನಮ್ಮ ಗೋದಾಮುಗಳಲ್ಲಿ ಭರ್ತಿ ದವಸ ಧಾನ್ಯಗಳು ತುಂಬಿದ್ದರೂ ಇತ್ತ ಜನಸಾಮಾನ್ಯರು ಹಸಿವಿನಿಂದ ಸಾಯುತ್ತಿರುವ ವಿಡಂಬನೆಯನ್ನು ನಾವು ಕಾಣಲಿದ್ದೇವೆಯೇ ? ನಗರಗಳಲ್ಲಿರುವ ಹಿತವಲಯದ ಜನರು ನಿತ್ಯ ಹಾಲು ಖರೀದಿಸುತ್ತಿದ್ದಾರೆ ಆದರೆ ಹಾಲು ಪೂರೈಸುವವರಿಗೆ ಸೂಕ್ತ ಬೆಲೆಯಲ್ಲಿ ಹಣ ಪಾವತಿಸಲಾಗುತ್ತಿದೆಯೇ ? ಈ ವಿಚಾರದಲ್ಲಿ ನಾಗರಿಕರಿಗೆ ಮನದಟ್ಟಾಗುವಂತೆ ತಿಳಿಸಿ ಹೇಳುವ ಹಣಕಾಸು ತಜ್ಞರು ಸರ್ಕಾರದಲ್ಲಿ ಇಲ್ಲವೇ ಇಲ್ಲ.

ಇನ್ನೂ ಮುಖ್ಯವಾದ ಸಂಗತಿ ಎಂದರೆ, ನಮ್ಮ ನಡುವೆ ವಿಶ್ಲೇಷಕರು ಮತ್ತು ಚರ್ಚಾಪಟುಗಳು ಹೇರಳವಾಗಿ ಲಭ್ಯವಿದ್ದರೂ, ವಿದ್ವತ್ ಪೂರ್ಣ ಎನ್ನಬಹುದಾದ ಸಾಮಾಜಿಕ ತತ್ವಶಾಸ್ತ್ರಜ್ಞರು ಇಲ್ಲ. ಭಾರತ ಇಂದು ಎದುರಿಸುತ್ತಿರುವ ವೈದ್ಯಕೀಯ, ಆರ್ಥಿಕ ಮತ್ತು ಪರಿಸರ ಸಂಬಂಧಿತ ಬಿಕ್ಕಟ್ಟಿನ ಎಲ್ಲ ಅಂಶಗಳನ್ನೂ ಪರಸ್ಪರ ಸಂಪರ್ಕಿಸಿ ಇದರ ಜಾಗತಿಕ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ಭಾರತದ ಪ್ರಜೆಗಳಿಗೆ ಸಾಧ್ಯವಾಗುತ್ತಿಲ್ಲ.

ದೇಶದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು, ಮಾನವ ಸಂಪನ್ಮೂಲಗಳನ್ನು ಏಕಸ್ವಾಮ್ಯ ಕಾರ್ಪೋರೇಟ್ ಉದ್ಯಮಿಗಳ ಲಾಭಗಳಿಕೆಗಾಗಿ ಲೂಟಿ ಮಾಡಲಾಗುತ್ತಿರುವುದರಿಂದಲೇ ಭಾರತದ ಪ್ರಜೆಗಳು ಕೋವಿದ್ 19ನಿಂದ ಹೆಚ್ಚಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ ಎಂದು ಸುಸ್ಪಷ್ಟವಾಗಿ, ಧೈರ್ಯದಿಂದ ಹೇಳಲು ನಮ್ಮ ನಡುವೆ ದಿ. ಅನಿಲ್ ಅಗರ್ವಾಲ್ ಅವರಂತಹ ತಜ್ಞರು ಇಲ್ಲ.

ಈ ಬಿಕ್ಕಟ್ಟು ಎಲ್ಲರನ್ನೂ ಬಾಧಿಸಿದೆ. ಸರ್ಕಾರಕ್ಕೂ ಇದರ ಬಿಸಿ ತಟ್ಟಿದೆ. ಸಿಡಿಲಿನಂತೆ ಎರಗಿದೆ. ಎಲ್ಲರೂ ಸಹ, ವಿಶೇಷವಾಗಿ ಆಡಳಿತಾರೂಢ ಸರ್ಕಾರ ದಿನನಿತ್ಯ ಇದರಿಂದ ಪಾಠ ಕಲಿಯುವಂತಾಗಿದೆ. ಆದರೆ ಜ್ಞಾನದ ಕೊರತೆ ನಮ್ಮೊಳಗಿನ ಪೊಳ್ಳುತನವನ್ನು ಹೊರಗೆಡಹುತ್ತಿದೆ.

ಕುತೂಹಲಕಾರಿ ಸಂಗತಿ ಎಂದರೆ ಕೋವಿದ್ 19 ನಿವಾರಣೆಗೆ ಲಸಿಕೆ ಕಂಡುಹಿಡಿಯುವ ಬಗ್ಗೆ ಪುಂಖಾನುಪುಂಖವಾಗಿ ಊಹೆಗೂ ನಿಲುಕದಂತಹ ವಿಚಾರಗಳನ್ನು ಹಂಚಿಕೊಳ್ಳಲಾಗುತ್ತಿದೆ. 6 ರಿಂದ 12 ತಿಂಗಳಲ್ಲಿ ಲಸಿಕೆ ಸಿದ್ಧವಾಗುತ್ತಿದೆ ಎಂದವರೇ ಈಗ ಭಾರತದ 130 ಕೋಟಿ ಜನರನ್ನು ತಲುಪುವಷ್ಟು ಲಸಿಕೆಗೆ ಇನ್ನೂ ಐದಾರು ವರ್ಷ ಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ. ಬಹುಶಃ ನಾವು ಕೊರೋನಾ ಯುಗದಲ್ಲಿ ಊಹೆಗಳಲ್ಲೇ ಬದುಕುತ್ತೇವೆ ಎನಿಸುತ್ತದೆ.

ನಮ್ಮನ್ನು ರಕ್ಷಿಸುವವರು ಎಂದು ಅವತರಿಸುತ್ತಾರೋ ಎನ್ನುವ ಕುತೂಹಲ ಸಮಸ್ತ ಜನತೆಯಲ್ಲೂ ಕಂಡುಬರುತ್ತಿದೆ. ಆದರೆ ಅಂತಹ ಸಂರಕ್ಷಕನೊಬ್ಬ ಅವತರಿಸುತ್ತಾನೆ ಎಂಬ ನಿರೀಕ್ಷೆಯಲ್ಲಿರುವುದು ಮಾನವ ಸಮಾಜದ ಜ್ಞಾನ ಪರಂಪರೆಗೆ ಮತ್ತು ಆತ್ಮಗೌರವಕ್ಕೆ ಸಲ್ಲುವುದಲ್ಲ. ಸಾಂಕ್ರಾಮಿಕ ಪಿಡುಗಿನ ಕಬಂಧ ಬಾಹುಗಳಲ್ಲಿ ಸಿಲುಕಿ, ಆರ್ಥಿಕ ಹಿಂಜರಿತವನ್ನು ಎದುರಿಸಿ, ಯುದ್ಧದ ವಾತಾವರಣವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಈ ದೇಶದ ನಾಗರಿಕರಾದ ನಾವು ಏನು ಮಾಡಬೇಕು ?

ಪ್ರಭುತ್ವದ ಆಧಾರ ಸ್ತಂಭಗಳು

ವಸ್ತುಸ್ಥಿತಿಯನ್ನು ಅರಿಯುವುದೆಂದರೆ ಪರಿಸ್ಥಿತಿಯನ್ನು ನಿಯಂತ್ರಿಸಲು ಶಕ್ತರಾಗಿರುವುದು ಎಂದರ್ಥ. ಈಗಿನ ವಾಸ್ತವ ಸನ್ನಿವೇಶ, ಪರಿಸ್ಥಿತಿ ಹೇಗಿದೆ ಎಂದು ನಮಗೆ ತಿಳಿಯಬೇಕಿದೆ ಎಂದು ನಾವು ಆಗ್ರಹಿಸಲು ಇದು ಸಕಾಲ. ಕೊರೋನಾ ವೈರಾಣು ಮತ್ತು ಅದರ ಪರಿಣಾಮವನ್ನು ಮುಚ್ಚಿಟ್ಟಿದ್ದಕ್ಕಾಗಿ ಚೀನಾ ತೀವ್ರ ಖಂಡನೆಗೊಳಗಾಗಿದೆ.

ನಾವೂ ಸಹ ಇದೇ ಆರೋಪವನ್ನು ಎದುರಿಸಬೇಕಿಲ್ಲ. ಪ್ರಭುತ್ವದ ಮೂರು ಪ್ರಮುಖ ಆಧಾರ ಸ್ತಂಭಗಳ ಪೈಕಿ ಜ್ಞಾನವನ್ನು ಹಂಚಿಕೊಳ್ಳುವ ಹೊಣೆಗಾರಿಕೆ ಕಾರ್ಯಾಂಗದ ಮೇಲಿರುತ್ತದೆ. ಇದು ಕಾರ್ಯಾಂಗದ ಕರ್ತವ್ಯವೂ ಹೌದು. ದೇಶವನ್ನು ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ಪಿಡುಗಿನ ಬಗ್ಗೆ, ಆರ್ಥಿಕ ಕುಸಿತ ಮತ್ತು ಹಿಂಜರಿತದ ಬಗ್ಗೆ ಹಾಗೂ ಗಡಿ ಪ್ರದೇಶದಲ್ಲಿ ಚೀನಾದೊಡನೆ ನಡೆಯುತ್ತಿರುವ ಸಂಘರ್ಷದ ಬಗ್ಗೆ , ಭಾರತದ ಪ್ರಜೆಗಳಾದ ನಾವು ಸಮಗ್ರ ಮಾಹಿತಿ ಪಡೆಯುವ ಹಕ್ಕು ಹೊಂದಿದ್ದೇವೆ, ಪಡೆಯಬೇಕಿದೆ.

ಇದಕ್ಕೆ ಈ ದೇಶ ಸಿದ್ಧವಾಗಿದೆಯೇ ? ಅಥವಾ ವೈರಾಣು ಮತ್ತು ಯುದ್ಧ ಎರಡೂ ಅಪಾಯಗಳನ್ನು, ಸವಾಲುಗಳನ್ನು ಎದುರಿಸಲು ದೇಶ ಸಜ್ಜಾಗಿದೆಯೇ ? ಸೆಪ್ಟಂಬರ್ 11ರಂದು ನಮ್ಮ ವಿದೇಶಾಂಗ ಸಚಿವರಾದ ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ಏರ್ಪಟ್ಟಿರುವ ಒಪ್ಪಂದ ನಿಜಕ್ಕೂ ಶ್ಲಾಘನೀಯವಾದುದು. ಇದು ಉಭಯ ದೇಶಗಳನ್ನು ಯುದ್ಧದ ಸನ್ನಿವೇಶದಿಂದ ಮುಕ್ತಗೊಳಿಸಿದೆ.

ಆದರೆ ಈ ಮಾಸ್ಕೋ ಒಮ್ಮತದ ಒಪ್ಪಂದವನ್ನು ಉಲ್ಲಂಘಿಸುವ ಸನ್ನಿವೇಶ ಎದುರಾದರೆ, ಗಡಿಯಲ್ಲಿ ಕ್ಷಿಪಣಿಗಳು ಸದ್ದುಮಾಡಲಾರಂಭಿಸುತ್ತವೆ. ಯುದ್ಧ ಮತ್ತು ಕೊರೋನಾ ವೈರಾಣು ಭಾರತಕ್ಕೆ ಮಾರಣಾಂತಿಕವಾಗಿ ಪರಿಣಮಿಸುತ್ತದೆ. ಮೊದಲ ವಿಶ್ವ ಮಹಾ ಯುದ್ಧ ಸಂಭವಿಸಿದ ಬೆನ್ನಲ್ಲೇ 1918-20ರ ಸ್ಪಾನಿಷ್ ಫ್ಲೂ ಭಾರತವನ್ನು ಹಿಂಡಿ ಹಿಪ್ಪೇಕಾಯಿ ಮಾಡಿದ್ದನ್ನು ಕಂಡಿದ್ದೇವೆ. ಯುದ್ಧಭೂಮಿಯಿಂದ ಸೋಂಕು ಹೊತ್ತುಕೊಂಡೇ ಹಿಂದಿರುಗಿದ ಭಾರತದ ಯೋಧರು ಸಾಂಕ್ರಾಮಿಕ ಸೋಂಕನ್ನು ಹಳ್ಳಿ ಹಳ್ಳಿಗೂ ವ್ಯಾಪಿಸಲು ಕಾರಣರಾಗಿಬಿಟ್ಟರು. 1 ಕೋಟಿ 70 ಲಕ್ಷ ಭಾರತೀಯರು ಬಲಿಯಾಗಬೇಕಾಯಿತು.

ಒಂದು ವೇಳೆ ಈ ಯುದ್ಧ ಸಂಭವಿಸಿದ್ದೇ ಆದಲ್ಲಿ ಅದರಿಂದ ಸಾರ್ವಜನಿಕ ಆರೋಗ್ಯ, ಸಾರ್ವಜನಿಕ ಹಣಕಾಸು ಪರಿಸ್ಥಿತಿಯ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಎಂದು ಕಾರ್ಯಾಂಗ ಈ ದೇಶದ ಪ್ರಜೆಗಳಿಗೆ ಸ್ಪಷ್ಟಪಡಿಸಬೇಕು. ಭಾರತ ಚೀನಾ ಗಡಿ ವಿವಾದಕ್ಕೆ ಇಂದು ಅಗತ್ಯವಾಗಿ ಬೇಕಿರುವುದು ದೇಶಪ್ರೇಮದ ಯುದ್ಧೋನ್ಮಾದವಲ್ಲ ಬದಲಾಗಿ ರಾಜತಾಂತ್ರಿಕ ಮಾತುಕತೆಗಳು ಬೇಕಿವೆ. ಈ ನಿಟ್ಟಿನಲ್ಲಿ ದೇಶದ ಸಮಸ್ತ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಕಾರ್ಯಾಂಗದ ಕರ್ತವ್ಯ.

ಸಂಸತ್ತಿನಲ್ಲಿ ವಾತಾವರಣ

ಇಲ್ಲಿ ಪ್ರಭುತ್ವದ ಎರಡನೆ ಆಧಾರ ಸ್ತಂಭ, ಶಾಸಕಾಂಗದ ಪಾತ್ರ ಮುಖ್ಯವಾಗುತ್ತದೆ. ಅರ್ಧ ಹೆಜ್ಜೆ ಮುಂದಿಟ್ಟಿರುವ ಭಾರತದ ಸಂಸತ್ತಿನ ಕಲಾಪ ನಡೆಯುತ್ತಿದೆ. ಹದಿನೈದು ದಿನಗಳ ಕಾಲ ಸಂಸದರು ಖುದ್ದು ಹಾಜರಾಗಲಿದ್ದಾರೆ. ಇದು ಸಾಮಾನ್ಯವಾಗಿ ನಡೆಯುವ ಅವಧಿಯಲ್ಲಿ ಅರ್ಧದಷ್ಟು ಅವಧಿ ಮಾತ್ರ ನಡೆಯುವ ಕಲಾಪವಾಗಲಿದೆ.

ಕೊರೋನಾ ಕುರಿತ ನಮ್ಮ ಕಾಳಜಿಯ ಹಿನ್ನೆಲೆಯಲ್ಲಿ ಇದು ಉತ್ತಮ ಹೆಜ್ಜೆ. ಆದರೆ ಸಂಸತ್ತಿನ ಕಲಾಪವೇ ಬೇರೆ, ಸಂಸತ್ತಿನ ಉತ್ಸಾಹ ಮತ್ತು ಕಾಳಜಿಯೇ ಬೇರೆ. ಸಂಸತ್ ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯನ್ನು ರದ್ದುಪಡಿಸುವ ಮೂಲಕ, ಸರ್ಕಾರದಿಂದ ಮಾಹಿತಿ ಪಡೆಯಲು ಸಂಸದರಿಗೆ ಇರುವ ಬ್ರಹ್ಮಾಸ್ತ್ರವೊಂದನ್ನು ಕಸಿದುಕೊಂಡಿರುವುದು ದುರಂತ. ಇದಕ್ಕೂ ಹೆಚ್ಚಿನ ದುರಂತಗಳನ್ನು ನಾವು ಸಂಸತ್ತಿನಲ್ಲಿ ಕಾಣುವ ಸಾಧ್ಯತೆಗಳಿವೆ.

ಬ್ರಿಟೀಷರ ಆಳ್ವಿಕೆಯಲ್ಲಿ ಶಾಸಕಾಂಗವೇ ಇರಲಿಲ್ಲ. ಆದರೂ ದೆಹಲಿಯಲ್ಲಿದ್ದ ಇಂಪೀರಿಯಲ್ ಶಾಸಕಾಂಗ ಸಮಿತಿ ಈ ದೇಶದ ಜನಕ್ಕೆ ಅನ್ಯಾಯ ಮಾಡಿತ್ತು. 1919ರ ಅರಾಜಕತೆ ಹಾಗೂ ಕ್ರಾಂತಿಕಾರಿ ಅಪರಾಧಗಳ ಕಾಯ್ದೆ, ರೌಲಟ್ ಕಾಯ್ದೆಯೆಂದು ಜನಪ್ರಿಯವಾಗಿದೆ, ಈ ಸಮಿತಿಯಲ್ಲಿ 1919ರ ಮಾರ್ಚ್ 18ರಂದು ಅಂಗೀಕೃತವಾಗಿತ್ತು. ಇದು ಮೂಲತಃ ಮಹಾಯುದ್ಧಕ್ಕೆ ನೆರವಾಗಲು ರೂಪಿಸಲಾದ ಕಾಯ್ದೆಯಾಗಿತ್ತು.

ಆದರೆ ಇದರ ಪರಿಣಾಮ ದೇಶದಲ್ಲಿ ವ್ಯಕ್ತಿಗತ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. ವಾಕ್ ಸ್ವಾತಂತ್ರ್ಯ ಮತ್ತು ಸಭೆ ಸೇರುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. 1975-77ರ ತುರ್ತುಪರಿಸ್ಥಿತಿ ಹೇರುವ ಸಂದರ್ಭದಲ್ಲೂ ಸಹ ಸಂಸತ್ತಿನ ಅನುಮೋದನೆ ಪಡೆಯಲಾಗಿತ್ತು.

ಈ ಹಿನ್ನೆಲೆಯಲ್ಲಿ ನೋಡಿದಾಗ ಪ್ರಸಕ್ತ ಸಂಸತ್ತಿನಿಂದ ಹೆಚ್ಚಿನ ಎಚ್ಚರಿಕೆ ಮತ್ತು ವಿವೇಕಯುತ ನಡೆಯನ್ನು ನಿರೀಕ್ಷಿಸಬೇಕಾಗುತ್ತದೆ. ದೇಶ ಒಂದು ಮಾರಣಾಂತಿಕ ವೈರಾಣುವಿನ ಅಪಾಯ ಎದುರಿಸುತ್ತಿರುವಾಗ, ಎಂದೂ ಕಾಣದಂತಹ ಆರ್ಥಿಕ ಹಿನ್ನಡೆ ಎದುರಿಸುತ್ತಿರುವಾಗ, ಯುದ್ಧದ ಕಾರ್ಮೋಡ ಕವಿಯುತ್ತಿರುವಾಗ ರೌಲಟ್ ಕಾಯ್ದೆಯ ಚಿಂತನೆಗಳು ಸರ್ಕಾರದ ಕಲ್ಪನೆಯಲ್ಲೂ ಇರಕೂಡದು.

ಇಲ್ಲಿ ಪ್ರಭುತ್ವದ ಮೂರನೆಯ ಆಧಾರ ಸ್ತಂಭ ನ್ಯಾಯಾಂಗದ ಪಾತ್ರ ಮುನ್ನೆಲೆಗೆ ಬರುತ್ತದೆ. ವಿಧಿ 370, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಜಮ್ಮು ಕಾಶ್ಮೀರ ಹೈಕೋರ್ಟಿನಲ್ಲಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ಸಂದರ್ಭದಲ್ಲಿ ಭಾರತದ ನ್ಯಾಯಾಂಗ ತನ್ನ ಸ್ವಾಯತ್ತತೆಯನ್ನು ಸಾಧಿಸಿ ತೋರಿಸಬಹುದಿತ್ತು.

ತನ್ನ ಸ್ವಾತಂತ್ರ್ಯ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಸಾಮಥ್ರ್ಯವನ್ನು ಪ್ರದರ್ಶಿಸಬಹುದಿತ್ತು. ಏನು ಹೇಳಬೇಕಾಗಿದೆಯೋ, ಏನನ್ನು ಮನದಟ್ಟು ಮಾಡಬೇಕಾಗಿದೆಯೋ ಅದನ್ನು ಹೇಳಲು ಕೆಲವೇ ಪದಗಳು ಸಾಕಾಗುತ್ತವೆ. ನ್ಯಾ ಚಂದ್ರಚೂಡ್ ಹೇಳಿರುವಂತೆ “ ಪ್ರತಿರೋಧ ಎನ್ನುವುದು ಪ್ರಜಾತಂತ್ರ ವ್ಯವಸ್ಥೆಯ ರಕ್ಷಣಾ ಕವಚ ಇದ್ದಂತೆ ”.

ಇಂದು ಪ್ರಭುತ್ವದ ಸಾಂಸ್ಥಿಕ ನೆಲೆಯ ಸುತ್ತ ಜಡತ್ವದ ಲಕ್ಷಣಗಳು ಗೋಚರಿಸುತ್ತಿವೆ. ಇದು ಈ ಸಾಂಸ್ಥಿಕ ನೆಲೆಯ ಉಸಿರನ್ನು ಕಟ್ಟಿಸುತ್ತದೆ, ಹಾಗೆಯೇ ನಮ್ಮ ಉಸಿರನ್ನೂ ಸಹ. ಮಾಧ್ಯಮಗಳು ನಮ್ಮನ್ನು, ಅಂದರೆ ಭಾರತದ ಪ್ರಜೆಗಳನ್ನು, ಮುನ್ನಡೆಸುತ್ತಿರುವ ಸಂದರ್ಭದಲ್ಲಿ ನಾವು ಸ್ವಾತಂತ್ರ್ಯಕ್ಕೆ ಜೀವ ಕೊಡುವ ಸಾಧನಗಳಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending