Connect with us

ರಾಜಕೀಯ

ರಾಜಕೀಯ ಪ್ರಜ್ಞೆ : ಭಾರತೀಯ ವಾಸ್ತವಿಕತೆ

Published

on

ಪ್ರಾಥಮಿಕ ಹಂತದಲ್ಲಿ ಓದುತ್ತಿರುವ ಮಕ್ಕಳನ್ನು ಆಕರ್ಷಿಸುವವರು ಸಿನಿಮಾ ನಟ-ನಟಿಯರು. ಸ್ಟಾರ್ ನಟರುಗಳ ಫೈಟ್‍ಗಳನ್ನೇ ನೋಡಿ ಬಣಗಳನ್ನು ಕಟ್ಟಿಕೊಂಡು ‘ನಮ್ಮ ಹೀರೋ ಹೀಗೆ, ಹಾಗೆ’ ಅಂತೆಲ್ಲಾ ಅವರು ಮಾತನಾಡಿಕೊಳ್ಳುತ್ತಾರೆ. ಹಿಂದಿನ ದಿನ ಸಿನಿಮಾ ನೋಡಿದ ನಂತರ ಮರುದಿನ ಆ ಬಗ್ಗೆ ಹೇಳಿಕೊಳ್ಳುವುದೆಂದರೆ ಅವರಿಗೆ ಪ್ರತಿಷ್ಠೆ. ಕಥೆಗಿಂತ ಫೈಟ್‍ಗಳ ವರ್ಣನೆಗೇ ಉತ್ಸಾಹ ಮೀಸಲು. ಒಬ್ಬ ಹೀರೋ ಫೈಟ್ ಬಗ್ಗೆ ಹೇಳಿಕೊಳ್ಳುವಾಗಲೇ ಇನ್ನೊಬ್ಬ ಹೀರೋನ ಅಭಿಮಾನಿ ಸ್ನೇಹಿತ ತಕರಾರು ಎತ್ತಿ ‘ನಮ್ಮ ಹೀರೋ ಮುಂದೆ ನಿಮ್ಮ ಹೀರೋ ಜೀರೋ’ ಎಂದ ಕೂಡಲೇ ಜಗಳ ತಾರಕಕ್ಕೇರುತ್ತದೆ. ಮಾತು ಬಿಡುವುದು, ಎಷ್ಟೋ ದಿವಸಗಳ ನಂತರ ಮತ್ತೆ ಮಾತನಾಡುವುದು, ಒಂದಷ್ಟು ಮುನಿಸು, ದ್ವೇಷ, ಸ್ನೇಹಗಳ ಮೂಲಗಳಾಗಿ ಆ ದಿನಗಳು ಕಳೆದುಹೋಗುತ್ತವೆ. ಅವರೊಳಗಿನ ಮುಗ್ಧತೆಯ ಕಾರಣಕ್ಕಾಗಿಯೇ ಅವರು ಮತ್ತೆ ಮಾತನಾಡಿಕೊಳ್ಳುತ್ತಾರೆ. ಸ್ನೇಹವನ್ನು ಉಳಿಸಿಕೊಳ್ಳುತ್ತಾರೆ. ಆ ಮುಗ್ಧತೆಯೊಂದಿಗೇ ಬೆಳವಣಿಗೆಯ ವಿವಿಧ ಹಂತಗಳು ದಾಟಿಕೊಂಡರೆ ಅವರು ಸರಿಯಾಗಿ ಆಲೋಚಿಸುವುದರ ಕಡೆಗೆ ವಾಲಿಕೊಳ್ಳುತ್ತಾರೆ. ಹಾಗಿದ್ದಾಗಲೇ ಪ್ರಶ್ನಿಸುವ ಸಹಜ ಪ್ರವೃತ್ತಿ ಜೀವಂತವಾಗಿರುತ್ತದೆ. ಮುಕ್ತಚಿಂತನೆಯ ಕಡೆಗಿನ ಹಾದಿ ತೆರೆದುಕೊಳ್ಳುತ್ತದೆ. ಆದರೆ, ಸಿನಿಮಾದೊಂದಿಗಿನ ಭಾವುಕ ನಂಟು ಕ್ರಮೇಣ ಅವರೊಳಗೆ ಅಂಧಾಭಿಮಾನ ಸೃಷ್ಟಿಸಿಬಿಡುತ್ತದೆ.

ಕಟೌಟ್, ಅದರ ಮೇಲೆ ಕ್ಷೀರಧಾರೆ ಎರೆಯುವ ಆರಾಧನಾ ಮನಸ್ಥಿತಿಯೂ ಹೀಗೆಯೇ ರೂಪುಗೊಳ್ಳುತ್ತದೆ. ಸಿನಿಮಾಭಿಮಾನ ಮತ್ತು ಸ್ಟಾರ್ ನಟರುಗಳನ್ನು ಆರಾಧಿಸುವ ಅಂಧಾಭಿಮಾನದ ಈ ಬಗೆಯ ಅತಿರೇಕದ ಮನೋಭಾವವನ್ನೇ ಜನಸಮೂಹದ ಆದ್ಯಗುಣಲಕ್ಷಣವಾಗಿಸಿಬಿಡುವ ಚಾಣಾಕ್ಷ ತಂತ್ರಗಾರಿಕೆಯನ್ನು ಭಾರತದ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪ್ರಯೋಗಿಸುತ್ತಿದೆ. ಮುಗ್ಧತೆ ಮತ್ತು ಸ್ನೇಹದ ವೈಶಾಲ್ಯತೆಯನ್ನು ಮೊಟಕುಗೊಳಿಸಿ ದೊಡ್ಡವರನ್ನು ಸಂಕುಚಿತರನ್ನಾಗಿಸುವ ರಾಜಕೀಯ ಸನ್ನಿವೇಶವನ್ನು ಅದು ಉದ್ದೇಶಪೂರ್ವಕವಾಗಿ ಸೃಷ್ಟಿಸುತ್ತಿದೆ. ಸರಿಯಾದ ರಾಜಕೀಯ ಪ್ರಜ್ಞೆಯನ್ನು ಆವಾಹಿಸಿಕೊಳ್ಳುವ ತುಡಿತವನ್ನೇ ಇಲ್ಲವಾಗಿಸಿಬಿಡುತ್ತಿದೆ. ತಮ್ಮ ಪ್ರಭಾವದ ಭರಾಟೆಯ ಅಲೆಯೊಂದಿಗೆ ಇಡೀ ಸಮಾಜದೊಳಗಿನ ಜನರ ಮನೋಶಿಲ್ಪವನ್ನು ಸಡಿಲಗೊಳಿಸಿ ದುರ್ಬಲಗೊಳಿಸುತ್ತಿರುವ ಮೂರು ಜನಪ್ರಿಯ ಕ್ಷೇತ್ರಗಳೆಂದರೆ ಸಿನಿಮಾ, ರಾಜಕಾರಣ ಮತ್ತು ಕ್ರಿಕೆಟ್. ಜನಪ್ರಿಯ ಸಿನಿಮಾಗಳು ಮತ್ತು ಕ್ರಿಕೆಟ್ ಉದ್ಯಮ ಇವೆರಡೂ ಉಂಟುಮಾಡುವ ಪ್ರಭಾವದ ಆವರಣದ ನಡುವೆಯೇ ರಾಜಕಾರಣ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುವ ತಂತ್ರಗಳನ್ನು ಹೆಣೆದುಕೊಳ್ಳುತ್ತದೆ. ಆ ತಂತ್ರಗಳು ಯಶಸ್ವಿಯಾಗಲೇಬೇಕು ಎಂಬ ಹಠದೊಂದಿಗೇ ಹೆಜ್ಜೆಯಿರಿಸುತ್ತದೆ. ಎದುರುಗೊಳ್ಳುವವರನ್ನು ಹಣಿಯುವ ನಿಗೂಢ ಕಾರ್ಯಸೂಚಿಗಳನ್ನು ಸಂದರ್ಭಕ್ಕೆ ಅನುಗುಣವಾಗಿ ರೂಪಿಸಿಕೊಂಡುಬಿಡುತ್ತದೆ. ಪರ್ಯಾಯ ನಾಯಕತ್ವದ ಉದಾತ್ತ ಅವಕಾಶಗಳನ್ನು ಹೊಸಕಿಹಾಕಿ ಜನರಿಂದ ಆಯ್ಕೆಯ ಐಚ್ಛಿಕತೆಯನ್ನೇ ಕಿತ್ತುಕೊಂಡುಬಿಡುತ್ತದೆ. ‘ಇವರಿಲ್ಲದಿದ್ದರೆ ಮತ್ತಿನ್ಯಾರು ಆಳುವವರು’ ಎಂಬ ಅವಲಂಬನಾ ದೃಷ್ಟಿಕೋನವನ್ನು ಅದೇ ಜನವಲಯದಲ್ಲಿಯೇ ನೆಲೆಗೊಳಿಸಿಬಿಡುತ್ತದೆ. ನಾಯಕರಲ್ಲದ ನಾಯಕರೆನ್ನಿಸಿಕೊಂಡವರನ್ನು ಆರಾಧಿಸುವವರ ಸಂಖ್ಯಾಬಾಹುಳ್ಯ ಹೆಚ್ಚಿಸಿಕೊಳ್ಳುತ್ತಲೇ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿರುತ್ತದೆ. ಆಗಲೇ ಜನರು ಮುಗ್ಧವಾಗಿ ನಂಬುತ್ತಲೇ ತಮ್ಮ ಯೋಚನೆಯ ಶಕ್ತಿಯನ್ನೇ ತ್ಯಜಿಸಿಬಿಡುತ್ತಾರೆ.

ತಾರ್ಕಿಕವೆನ್ನಿಸುವ ಪ್ರಜಾಸತ್ತಾತ್ಮಕ ವೈಚಾರಿಕ ಎಚ್ಚರದಲ್ಲಿ ರಾಜಕಾರಣವನ್ನು ಗ್ರಹಿಸುವ ಬದಲು ಹೊಗಳಿಕೆಗಳ ಅಭಿಪ್ರಾಯಗಳನ್ನು ಹೇಳಿಕೊಳ್ಳುವುದಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳುತ್ತಾರೆ.
ಉನ್ನತ ಹುದ್ದೆಯಲ್ಲಿರುವ ಇಬ್ಬರು ಸ್ನೇಹಿತರ ನಡುವೆ ರಾಜಕಾರಣದ ಬಗ್ಗೆ ಚರ್ಚೆ ಶುರುವಾಗುತ್ತದೆ. ಒಬ್ಬರು ಸರ್ಕಾರವನ್ನು ಆರಾಧಿಸಿ ಮಾತನಾಡಿದರೆ ಮತ್ತೊಬ್ಬರು ಪ್ರಶ್ನೆಗಳನ್ನೆತ್ತಿ ಪ್ರತಿರೋಧದ ಮಾತುಗಳನ್ನಾಡುತ್ತಾರೆ.ಪ್ರತಿರೋಧವನ್ನೊಡ್ಡಿದವರು ಯಾರೇ ಅಧಿಕಾರಕ್ಕೆ ಬರಲಿ, ಅವರನ್ನು ಪ್ರಶ್ನಿಸುವ ಹಕ್ಕನ್ನು ನಾವೆಲ್ಲರೂ ಉಳಿಸಿಕೊಳ್ಳಲೇಬೇಕು ಎಂಬ ಅನಿವಾರ್ಯತೆಯನ್ನು ಮನಗಾಣಿಸಲು ಪ್ರಯತ್ನಿಸುತ್ತಾರೆ. ಆದರೆ, ಸರ್ಕಾರದ ಬಗ್ಗೆ ಆರಾಧನಾ ಮನೋಭಾವವಿರುವ ಸ್ನೇಹಿತ ಮಾತನಾಡುತ್ತಾ ಆಡುತ್ತಾ ಭಾವುಕ ವ್ಯಗ್ರತೆಯನ್ನು ಪ್ರದರ್ಶಿಸಲಾರಂಭಿಸುತ್ತಾನೆ. ಪ್ರತಿರೋಧಧ ವಿಚಾರಗಳನ್ನು ಪ್ರಸ್ತಾಪಿಸಿದ ಮಿತ್ರನ ಸಂಯಮದ ಸಂವಾದಕ್ಕೆ ಪ್ರತಿಯಾಗಿ ವಿತಂಡವಾದ ಮುಂದಿಡಲಾರಂಭಿಸುತ್ತಾನೆ. ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ವ್ಯಕ್ತಿಗತ ಆರೋಪಗಳನ್ನು ಹೊರಿಸುವ ತಂತ್ರ ಅನುಸರಿಸುತ್ತಾನೆ. ಆ ಮೂಲಕ ತಾರ್ಕಿಕ ವೈಚಾರಿಕತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾನೆ. ಆ ಹೊತ್ತಿಗೆ ಇಬ್ಬರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯ ದ್ವೇಷಕ್ಕೆ ತಿರುಗುತ್ತದೆ. ಆ ದ್ವೇಷವು ಮುಂದುವರೆದು ಸ್ನೇಹ ಕೊನೆಗೊಳ್ಳುತ್ತದೆ. ರಾಜಕೀಯ ಪಕ್ಷಗಳು ತಮ್ಮೊಳಗಿನ ಅಧಿಕಾರದ ಹಸಿವನ್ನು ನೀಗಿಸಿಕೊಳ್ಳಲು ಇಂಥದ್ದೇ ಆದ ಮನೋವೈಕಲ್ಯವನ್ನು ನಿರೀಕ್ಷಿಸುತ್ತವೆ. ಇದನ್ನು ಸಾಮೂಹಿಕ ಗುಣಲಕ್ಷಣವಾಗಿಸಿ ತಮ್ಮ ಅಧಿಕಾರದ ಫಸಲು ತೆಗೆಯುವ ಉದ್ದೇಶ ಈಡೇರಿಸಿಕೊಳ್ಳುತ್ತವೆ. ನಿಜವಾದ ರಾಜಕೀಯ ಪ್ರಜ್ಞೆಯನ್ನು ಕೊಲೆಗೈದು ತಮ್ಮನ್ನು ವಿಜೃಂಭಿಸಿಕೊಳ್ಳುತ್ತವೆ.

ಪ್ರಸಕ್ತ ರಾಜಕೀಯ ವ್ಯವಸ್ಥೆಯ ಎಲ್ಲ ಮಿತಿಗಳನ್ನು ರಂಜನೀಯ ನೆಲೆಯಲ್ಲಿ ಸ್ವೀಕರಿಸುವ ವಿಚಿತ್ರವಾದ ಸಮೂಹಕೇಂದ್ರಿತ ಊನ ( Mass Syndrome)ಈಗಾಗಲೇ ವ್ಯಾಪಕವಾಗಿಬಿಟ್ಟಿದೆ. ನಮ್ಮಲ್ಲಿ ಅಧಿಕಾರ ರಾಜಕಾರಣದ ಕುರಿತಾದ ಚರ್ಚೆಗಳು ಇದರ ಸಂಕುಚಿತ ಜಾಲದ ಪರಿಧಿಯನ್ನು ದಾಟಿಕೊಳ್ಳುವುದೇ ಇಲ್ಲ. ಹಾಗೆ ದಾಟಿಕೊಳ್ಳದ ಹಾಗೆ ವಿತಂಡವಾದಿ ದೃಷ್ಟಿಕೋನಗಳು ಕಡಿವಾಣ ಬಿಗಿದುಬಿಡುತ್ತವೆ. ರಾಜಕಾರಣದೊಳಗಿನ ಊನಗಳೊಂದಿಗಿನ ಸಾಂಪ್ರದಾಯಿಕತೆಯನ್ನೇ ಮೌಲ್ಯವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೇರೂರಿಸಿಬಿಡುತ್ತವೆ. ದೇಶವೊಂದರೊಳಗೆ ಸಾಮಾಜಿಕ ವ್ಯವಸ್ಥೆಯೊಂದಿರುತ್ತದೆ. ಆಡಳಿತಾರೂಢ ಸರ್ಕಾರವು ಜಪಿಸುವ ಅಭಿವೃದ್ಧಿಯ ಮಂತ್ರದೊಂದಿಗೆ ತಳುಕು ಹಾಕಿಕೊಂಡ ಆರ್ಥಿಕತೆಯು ಈ ಸಾಮಾಜಿಕ ವ್ಯವಸ್ಥೆಯ ರೂಪು-ರೇಷೆಗಳಿಗೆ ಅನುಗುಣವಾಗಿರಬೇಕು ಎಂಬ ಕನಿಷ್ಠ ಪ್ರಜ್ಞೆಯನ್ನು ಆಧರಿಸಿಯೇ ಇರುವುದಿಲ್ಲ. ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಹೆಚ್ಚಿಸುವಂತೆಯೇ ಆ ಆರ್ಥಿಕ ವ್ಯವಸ್ಥೆ ಬಲಿಷ್ಠವಾಗುತ್ತ ಸಾಗುತ್ತದೆ.
ಉಳ್ಳವರ ಪರವಾದ ಅರ್ಥವ್ಯವಸ್ಥೆಯ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಕಡೆಗೆ ರಾಜಕಾರಣ ತನ್ನ ಗಮನವನ್ನು ಕೇಂದ್ರೀಕರಿಸುತ್ತದೆ. ಇಲ್ಲಿ ವ್ಯಕ್ತಿಗತ ಮಾನವ ಸಂಪನ್ಮೂಲದ ಸಮಗ್ರ ಅನ್ವಯಿಸುವಿಕೆಯ ಪರಿಕಲ್ಪನೆಗಳಿಗೆ ಆದ್ಯತೆ ಇರುವುದೇ ಇಲ್ಲ. ಸಾಮಾಜಿಕ ವ್ಯವಸ್ಥೆಯೊಳಗಿನ ಧಾರ್ಮಿಕತೆ ಮತ್ತು ಅದಕ್ಕನುಗುಣವಾಗಿಯೇ ಬೇರೂರಿಬಿಟ್ಟಿರುವ ಜಾತಿ-ಪಂಗಡಗಳ ಸಂಕೀರ್ಣ ಆವೃತ್ತಿಗಳು ಸಾಮಾಜಿಕ ಉದ್ಯಮಗಳಾಗಿಯೇ ಬೆಳೆಯುತ್ತಿರುತ್ತವೆ. ಅವುಗಳ ಸಮಾಜೋ-ಧಾರ್ಮಿಕ ಔದ್ಯಮಿಕತೆಯು ಮಠೀಯತೆ, ಮಠಾಧೀಶ ಮುಂದಾಳತ್ವ, ನಮ್ಮ ಜಾತಿಯವರಿಷ್ಟಿದ್ದೇವೆ ಎಂದು ತೋರಿಸಿಕೊಳ್ಳುವ ಬೃಹತ್ ಸಮಾವೇಶಗಳು, ಅವುಗಳಲ್ಲಿ ಭಾಗವಹಿಸಿ ತಮ್ಮ ಟೊಳ್ಳು ಮುಖಂಡತ್ವವನ್ನು ಮತ್ತೊಮ್ಮೆ ನವೀಕರಿಸಿಕೊಳ್ಳುವವರ ಉತ್ಸಾಹ ಮತ್ತು ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ಸದಾ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಘೋಷಿಸುವ ಜನಪ್ರಿಯ ವಾಂಛೆಗಳ ಮೂಲಕ ದೃಢಪಡುತ್ತದೆ. ಆ ಮೂಲಕ ಧಾರ್ಮಿಕ ಜಡತ್ವ ಮತ್ತು ಜಾತಿ ವ್ಯವಸ್ಥೆ ಮತ್ತಷ್ಟು ನಿಚ್ಛಳವಾಗುತ್ತದೆ. ದಾರ್ಶನಿಕರ ವೈಚಾರಿಕ ಆಂದೋಲನಗಳು ಹರಡಿದ ಮನುಷ್ಯತ್ವದ ಪ್ರಭೆಯನ್ನು ತಡೆದು ವಿಚಿತ್ರ ಹಠದೊಂದಿಗೆ ರಾಜಕಾರಣವು ಕತ್ತಲನ್ನೇ ಶಾಶ್ವತವಾಗಿ ಪಸರಿಸಿಬಿಡುತ್ತದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಅಂಶ ಸ್ಪಷ್ಟವಾಗಿಬಿಡುತ್ತದೆ. ಆದರೆ ಹೀಗೆ ಸ್ಪಷ್ಟಪಡಿಸಿಕೊಳ್ಳುವ ಸಾಮೂಹಿಕ ಸಂಯಮ ಈಗ ಕಾಣೆಯಾಗಿದೆ.

ಆ ಸಾಮೂಹಿಕ ಸಂಯಮವಿಲ್ಲದಿದ್ದರೆ ಪ್ರಜೆಗಳೆನ್ನಿಸಿಕೊಂಡವರು ಬೆಲೆ ತೆರಲೇಬೇಕಾಗುತ್ತದೆ. ಸಮಸ್ಯೆಗಳನ್ನು ಸಹಿಸಿಕೊಳ್ಳುವುದಷ್ಟೇ ಅಲ್ಲದೇ ಅವುಗಳ ವರ್ತುಲದೊಳಗೆ ಸಿಲುಕಿಕೊಳ್ಳುವ ಅನಿವಾರ್ಯತೆಯ ಅಸಹಾಯಕತೆಯನ್ನೇ ಸಹಜಗುಣವಾಗಿಸಿಕೊಳ್ಳುವ ಉಮೇದಿನೊಂದಿಗೆ ಗುರುತಿಸಿಕೊಳ್ಳುವ ಒತ್ತಡವೂ ಸೃಷ್ಟಿಯಾಗುತ್ತದೆ. ಈ ಅಸಹಾಯಕತೆ ಎಷ್ಟು ಅಂತಸ್ಥವಾಗುತ್ತದೆ ಎಂದರೆ ಹೊಸದಾದ ಯಾವ ಚಿಂತನೆಯೂ ಒಪ್ಪಿತವೆನ್ನಿಸುವುದಿಲ್ಲ. ದೇಶೋದ್ಧಾರದ ಸಮಗ್ರ ಹೊಣೆಗಾರಿಕೆ ನಿಭಾಯಿಸಬೇಕಾದ ರಾಜಕೀಯ ಪಕ್ಷಗಳು ಜನರನ್ನು ಮತ್ತೆ ಅಸಹಾಯಕತೆಯ ಸಂಕುಚಿತ ಬಾವಿಯೊಳಗೆ ಬಂಧಿಸಿಡುವ ನಡೆಗಳೊಂದಿಗೆ ಇದ್ದುಬಿಡುವುದರ ಕಡೆಗೇ ಒಲವು ತೋರುತ್ತವೆ. ಈ ಕುರಿತ ಸುಳಿವುಗಳನ್ನು ಪಕ್ಷಗಳ ಮುಖಂಡರ ಹೇಳಿಕೆಗಳು, ಪ್ರತಿಹೇಳಿಕೆಗಳು, ಚುನಾವಣಾ ರಣತಂತ್ರಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಗೊತ್ತುಮಾಡಿಕೊಳ್ಳಬಹುದು.
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಡಳಿತಾರೂಢ ಪಕ್ಷ ತಂತ್ರ ಹೆಣೆಯುವುದರ ಕಡೆಗೆ ಆದ್ಯತೆ ನೀಡುತ್ತಿರುವ ವಿವರಗಳು ಗಮನಕ್ಕೆ ಬರುತ್ತಲೇ ಇವೆ. ರಾಷ್ಟ್ರಾದ್ಯಂತ ಪ್ರತಿರೋಧದ ಅಲೆಯನ್ನು ಎಬ್ಬಿಸಬೇಕು ಎಂಬ ಉದ್ದೇಶದೊಂದಿಗೆ ಅಖಾಡಕ್ಕಿಳಿದಿರುವ ವಿರೋಧ ಪಕ್ಷ ಅಸ್ಪಷ್ಟ, ದ್ವಂದ್ವ ನಿಲುವುಗಳೊಂದಿಗೇ ಹೆಜ್ಜೆಯಿರಿಸುತ್ತಿರುವ ಸಂಗತಿಯೂ ಗೊತ್ತಾಗುತ್ತಿದೆ. ವಿರೋಧ ಪಕ್ಷದ ಯುವನೇತಾರನಿಗೆ ಸಂಬಂಧಿಸಿದಂತಹ ವಾಟ್ಸ್ಯಾಪ್ ವೀಡಿಯೋವೊಂದು ಹಲವರಿಗೆ ರಂಜನೆ ನೀಡುತ್ತಿದೆ. ಆ ನೇತಾರನ ಬಿಂಬವು ರೈತನೊಬ್ಬನೊಂದಿಗೆ ಸಂಭಾಷಿಸುತ್ತದೆ. ಗದ್ದೆಯಲ್ಲೆಲ್ಲ ಕೆಸರು ಎಂಬ ರೈತನುಡಿಗೆ ಪ್ರತಿಯಾಗಿ ಆ ನೇತಾರಬಿಂಬವು ‘ನಾವು ಅಧಿಕಾರಕ್ಕೆ ಬಂದರೆ ಗದ್ದೆಯಲ್ಲಿ ಟೈಲ್ಸ್ ಹಾಕಿಸುತ್ತೇವೆ’ ಎನ್ನುತ್ತದೆ. ತಮಾಷೆಯೆನ್ನಿಸಿ ಆ ಕ್ಷಣಕ್ಕೆ ಖುಷಿ ಪಡಬಹುದಾದ ಈ ತರಹದ ವಿಡಿಯೋಗಳ ವೀಕ್ಷಿಸುವಿಕೆ ಮತ್ತು ಇನ್ನೊಬ್ಬರಿಗೆ ರವಾನಿಸುವಿಕೆಯ ಕಾರ್ಯಗಳಲ್ಲಿಯೇ ಜನರು ನಿರತರಾಗಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದರೆ ಅಧಿಕಾರದಲ್ಲಿರುವವರು ಮತ್ತು ಅಧಿಕಾರದಲ್ಲಿರದೇ ಇರುವವರು ಪರಸ್ಪರರನ್ನು ಹೀಗೆ ರಂಜನೀಯವಾಗಿ ಕಾಲೆಳೆಯುತ್ತಾ ಜನರಿಗೆ ಖುಷಿ ನೀಡುತ್ತಾ ಈ ದೇಶದ ಬೆಳವಣಿಗೆಗೆ ಅಗತ್ಯವಾಗಿ ಆಗಬೇಕಾಗಿರುವುದು ಏನು ಎಂಬುದರ ಕುರಿತಾದ ತಾತ್ವಿಕ ಚರ್ಚೆಗಳ ಸಾಧ್ಯತೆಯನ್ನು ಉದ್ದೇಶಪೂರ್ವಕವಾಗಿ ತಡೆದುಬಿಡುತ್ತಿದ್ದಾರೆ. ಹೊಸ ಮಾಧ್ಯಮಗಳ ಪ್ರಭಾವ ಅವರ ಈ ಉದ್ದೇಶವನ್ನು ಈಡೇರಿಸಿಬಿಡುತ್ತಿದೆ. ಈ ಹಂತದಲ್ಲಿಯೇ ‘ನೀವ್ಯಾರ ಪರ’ ಎಂಬ ಪ್ರಶ್ನೆ ತಾರ್ಕಿಕತೆಯನ್ನು ಮುನ್ನೆಲೆಗೆ ತರುವ ಬದಲು ಆರಾಧನಾರೂಪದ ನಿಷ್ಠೆಯನ್ನು ನಿರೀಕ್ಷಿಸುತ್ತಿದೆ. ಆಡಳಿತಾರೂಢರ ಪರ ಎಂದರೆ ಸೇಫ್. ಇಲ್ಲದಿದ್ದರೆ ಗುಮಾನಿಗಳೇಳುತ್ತವೆ. ಮುಕ್ತವಾಗಿ ಸಮಸ್ಯೆ ಹೇಳಿಕೊಂಡಾಗಲೂ ಇಂಥವೇ ಗುಮಾನಿಗಳ ದಾಳಿಗೊಳಗಾಗುವ ಅಸಹಾಯಕತೆಗೆ ಪಕ್ಕಾಗಬೇಕಾಗುತ್ತದೆ. ಸಂವಿಧಾನದೊಳಗಿನ ಅಕ್ಷರಗಳು ಮತ್ತು ಅವುಗಳು ದಾಟಿಸುವ ಉದಾತ್ತ ಆಶಯಗಳು ಉಸಿರುಗಟ್ಟಿಸಿಕೊಳ್ಳುತ್ತವೆ. ಶಾಲಾ-ಕಾಲೇಜು ಹಂತಗಳಲ್ಲಿನ ಅಭಿಮಾನಿ ಮನೋಧರ್ಮ ದೊಡ್ಡವರಾದಾಗಲೂ ಉಳಿದುಕೊಂಡು ದೇಶವನ್ನೂ ಮತ್ತೆ ಮತ್ತೆ ಉಸಿರುಗಟ್ಟಿಸುತ್ತಿರುತ್ತದೆ.

(ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ ವಿಳಾಸ:
nkpadmanabh@gmail.com)

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending