Connect with us

ಬಹಿರಂಗ

ಕಾಶ್ಮೀರದ ವಿಶೇಷ ಸ್ಥಾನಮಾನದ ಅಂತ್ಯವೂ, ಅಮಿತ್ ಷಾ “ಅಭಿವೃದ್ಧಿ” ಅರ್ಥಶಾಸ್ತ್ರವೂ

Published

on

 

-ಪ್ರೊ. ಪ್ರಭಾತ್ ಪಟ್ನಾಯಕ್

ಅನು:ಕೆ.ಎಂ.ನಾಗರಾಜ್

  • ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ಮತ್ತು 35ಎ ವಿಧಿಗಳೇ ಆ ರಾಜ್ಯದಲ್ಲಿ ಅಭಿವೃದ್ಧಿಯಾಗದಿರಲು ಕಾರಣ ಎಂದು ಗೃಹಮಂತ್ರಿ ಅಮಿತ್ ಷಾ ಈ ವಿಧಿಗಳನ್ನು ಕೊನೆಗೊಳಿಸುವುದನ್ನು ಸಮರ್ಥಿಸಿಕೊಳ್ಳುತ್ತ ಹೇಳಿದ್ದಾರೆ. ಬಿಜೆಪಿಯ ಮುಖಂಡರುಗಳೆಲ್ಲರೂ ಈಗ ಜಪಿಸುತ್ತಿರುವ ಇದನ್ನು ದೇಶದ ಬಹಳಷ್ಟು ಮಂದಿ ನಂಬಿರುವಂತೆಯೂ ಕಾಣುತ್ತದೆ.
    ಆದರೆ ಇದು ನಿಜವಲ್ಲ, ಇದು ಕಾಶ್ಮೀರಿ ಯುವಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿತಗೊಳಿಸುತ್ತದೆ. ಜತೆಗೆ, ಇದು, ದೇಶದಲ್ಲಿ ಪಾಳೇಗಾರಿ-ವಿರೋಧಿ ಭೂಸುಧಾರಣೆಗಳಿಗೆ ಮುನ್ನುಡಿ ಬರೆದ ರಾಜ್ಯಕ್ಕೆ ಒದಗಿರುವ ಈ ದುರ್ವಿಧಿಯನ್ನೇ ಅಮಿತ್‌ ಷಾ ಹೇಳುವ “ಅಭಿವೃದ್ಧಿ” ಎನ್ನುತ್ತಾರೆ ದೇಶದ ಹಿರಿಯ ಅರ್ಥಶಾಸ್ತ್ರಜ್ಞ ಪ್ರೊ. ಪ್ರಭಾತ್ ಪಟ್ನಾಯಕ್.

ಕಾಶ್ಮೀರದ ವಿಶೇಷ ಸ್ಥಾನಮಾನ ಕೊನೆಗೊಳಿಸುವ ನಡೆಯನ್ನು ಸಮರ್ಥಿಸಿಕೊಳ್ಳುವ ಸಂದರ್ಭದಲ್ಲಿ ರಾಜ್ಯ ಸಭೆಯಲ್ಲಿ ಗೃಹ ಮಂತ್ರಿ ಅಮಿತ್‌ ಷಾ ಕಾಶ್ಮೀರದ “ಅಭಿವೃದ್ಧಿ”ಯ ಪ್ರಶ್ನೆಯನ್ನು ತಮ್ಮ ಭಾಷಣದಲ್ಲಿ ತಂದರು. ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಗಾಢವಾಗಿ ಸಮಗ್ರಗೊಳಿಸುವುದರಿಂದ ಆ ಪ್ರದೇಶದಲ್ಲಿ ಹೂಡಿಕೆ ಹೆಚ್ಚುತ್ತದೆ ಎಂದು ವಾದಿಸಿದರು. ಕಾಶ್ಮೀರದ ಯುವಕರಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಭರವಸೆಯ ಮೂಲಕ ತಮ್ಮ ಸರ್ಕಾರದ ಕ್ರಮವನ್ನು ಬೆಂಬಲಿಸುವಂತೆ ಅಮಿತ್‌ ಷಾ ವಿಶೇಷವಾಗಿ ಕಾಶ್ಮೀರದ ಯುವಕರಿಗೆ ಮನವಿ ಮಾಡಿದರು.

ಕಳೆದ 45 ವರ್ಷಗಳಲ್ಲೇ ನಿರುದ್ಯೋಗದ ಪರಿಸ್ಥಿತಿ ಅತಿ ಹೆಚ್ಚು ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಭಾರತದ ಉಳಿದ ಭಾಗಗಳೊಂದಿಗೆ ಕಾಶ್ಮೀರವು ಗಾಢವಾಗಿ ಬೆಸೆದುಕೊಂಡರೆ ಅಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತವೆ ಎಂಬುದಾಗಿ ಹೂಡಿರುವ ದಾವೆಯು ಒಂದು ವಿಡಂಬನೆಯೇ ಸರಿ. ಆದರೂ, ಉದ್ಯೋಗಾವಕಾಶಗಳ ಬಗ್ಗೆ ಅಮಿತ್‌ ಷಾ ಅವರ ವಾದನ್ನು ಸೂಕ್ಷ್ಮವಾಗಿ ಪರಿಶೀಲಿಸೋಣ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇದೆಯೋ ಅಥವಾ ಇಲ್ಲವೋ ಎಂಬುದು ಒತ್ತಟ್ಟಿಗಿರಲಿ, ಸ್ಥಳಿಯವಾಗಿ ದೊರೆಯುವ ಕಚ್ಚಾ ಪದಾರ್ಥಗಳ ಸಂಸ್ಕರಣೆಗೆ ಸಂಬಂಧವಿಲ್ಲದ ಬೃಹತ್‌ ಕೈಗಾರಿಕೆಗಳು ಕಾಶ್ಮೀರಕ್ಕೆ ಹರಿದು ಬರುತ್ತವೆ ಎನ್ನುವುದೇ ಒಂದು ಅತ್ಯಂತ ಹಾಸ್ಯಾಸ್ಪದವಾದ ಸಂಗತಿ (ಅಮಿತ್‌ ಷಾರವರೇನೋ ಬೃಹತ್‌ ಕೈಗಾರಿಕೆಗಳು ಕಾಶ್ಮೀರಕ್ಕೆ ಹರಿದು ಬರಲಿವೆ ಎಂದಿದ್ದಾರೆ). ಒಂದು ಕಾರ್ಖಾನೆಯ ಸ್ಥಾಪನೆಗೆ ಸಂಬಂಧಿತ ಸಾಗಣೆ ವೆಚ್ಚಗಳು ಕಾಶ್ಮೀರದಲ್ಲಿ ವಿಪರೀತ ದುಬಾರಿಯಾಗುತ್ತವೆ. ಮತ್ತು, ಕಾಶ್ಮೀರದಲ್ಲಿ “ಹೊರಗಿನವರು” ಭೂಮಿ ಕೊಳ್ಳುವುದನ್ನು ನಿರ್ಬಂಧಿಸುವ 35A ವಿಧಿಯನ್ನು ರದ್ದು ಮಾಡಿರುವುದರಿಂದಾಗಿ ಭೂಮಿಯ ಬೆಲೆ ಏರುತ್ತದೆ – ಭವಿಷ್ಯದಲ್ಲಿ ಇದೊಂದು “ಸಕಾರಾತ್ಮಕ” ಬೆಳವಣಿಗೆಯಾಗಲಿದೆ ಎಂಬ ಅಂಶವನ್ನು ಸ್ವತಃ ಷಾ ಹೇಳಿದರು. ಹಾಗಾಗಿ, ಯಾರಾದರೂ ಮನಬಂದಂತೆ ಬೃಹತ್‌-ಕೈಗಾರಿಕೆಗಳನ್ನು ಕಾಶ್ಮೀರದಲ್ಲಿ ತೆರೆಯುತ್ತಾರೆ ಎಂಬುದು ಕೇವಲ ಒಂದು ಅಸಂಬದ್ಧವೇ. ಅಷ್ಟೇ ಏಕೆ, ಅದೇ ರೀತಿಯಲ್ಲಿ, ಯಾರಾದರೂ ಅಲ್ಲಿ ಮನಬಂದಂತೆ ಸಣ್ಣ-ಕೈಗಾರಿಕೆಗಳನ್ನು ತೆರೆಯುತ್ತಾರೆ ಎಂಬುದೂ ಅಷ್ಟೇ ಅಸಂಬದ್ಧ ಮಾತು.

ಆದ್ದರಿಂದ, ಕಾಶ್ಮೀರ ಕಣಿವೆಯಲ್ಲಿ ಉತ್ಕೃಷ್ಟವಾಗಿ ಬೆಳೆಯಬಹುದಾದ ಚಟುವಟಿಕೆಗಳೆಂದರೆ, ಅಲ್ಲಿ ಸ್ಥಳೀಯವಾಗಿ ದೊರೆಯುವ ಕಚ್ಚಾ ಪದಾರ್ಥಗಳನ್ನೇ ಬಳಸುವ ಚಟುವಟಿಕೆಗಳು ಮಾತ್ರ – ಅದು ಉಣ್ಣೆ ಇರಬಹುದು, ಅಥವಾ ಹಣ್ಣುಗಳೇ ಇರಬಹುದು, ಅಥವಾ ಮರಮಟ್ಟುಗಳೇ ಇರಬಹುದು, ಅಥವಾ ಮಾಂಸವೇ ಇರಬಹುದು. ಅಂತಹ ಚಟುವಟಿಕೆಗಳು ಕಾಶ್ಮೀರ ಕಣಿವೆಯಲ್ಲಿ ಈಗಾಗಲೇ ಸಧೃಢವಾಗಿ ನೆಲೆಗೊಂಡಿವೆ. ಈ ಚಟುವಟಿಕೆಗಳಿಗೆ ಈಗ ಬೇಕಿರುವುದು ಒಂದು ಒಳ್ಳೆಯ ಉತ್ತೇಜನವಷ್ಟೇ. ಅಂತಹ ಉತ್ತೇಜನ ದೊರೆಯಬೇಕಾದರೆ ರಾಜ್ಯದಲ್ಲಿ ಸಹಾನುಭೂತಿಯುಳ್ಳ ಒಂದು ಸರ್ಕಾರ ಇರಬೇಕಾಗುತ್ತದೆಯೇ ಹೊರತು, ವಿಶೇಷ ಸ್ಥಾನಮಾನ ಕೊನೆಗೊಳಿಸುವುದಲ್ಲ ಅಥವಾ “ಹೊರಗಿನವರು” ಭೂಮಿ ಕೊಳ್ಳುವುದರ ಮೇಲೆ ಇರುವ ನಿರ್ಬಂಧವನ್ನು ರದ್ದು ಮಾಡುವುದೂ ಅಲ್ಲ.
ನಿಜ, ಕಾಶ್ಮೀರವು ಉಳಿದ ಭಾರತದೊಂದಿಗೆ ಹೆಚ್ಚಿನ ಮಟ್ಟದಲ್ಲಿ ಮುಕ್ತವಾಗಿ ತೆರೆದುಕೊಂಡರೆ ಬಹುರಾಷ್ಟ್ರೀಯ ಕಂಪೆನಿಗಳೊ ಅಥವಾ ಭಾರತದ ದೊಡ್ಡ ದೊಡ್ಡ ಉದ್ದಿಮೆಗಳೋ ಅಲ್ಲಿ ಸ್ಥಾಪನೆಯಾಗಿ, ಇಂತಹ ಚಟುವಟಿಕೆಗಳನ್ನೇ ಅಭಿವೃದ್ಧಿಪಡಿಸುವ ಮೂಲಕ ಕಣಿವೆಯ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಬಹುದು ಎಂಬುದಾಗಿಯೂ ಯೋಚಿಸಬಹುದು. ಆದರೆ, ದೊಡ್ಡ ಬಂಡವಾಳವು, ಅದು ಭಾರತದ್ದೇ ಆಗಿರಲಿ ಅಥವಾ ವಿದೇಶದ್ದೇ ಆಗಿರಲಿ, ಸ್ಥಳೀಯ ಉತ್ಪಾದಕರು ತೊಡಗಿರುವ ಚಟುವಟಿಕೆಗಳಲ್ಲೇ ಕಾಲಿಟ್ಟಾಗ ಉದ್ಯೋಗಗಳು ಸ್ವಲ್ಪವೂ ಹೆಚ್ಚುವುದಿಲ್ಲ. ಬದಲಿಗೆ, ಸ್ಥಳೀಯ ಉತ್ಪಾದಕರ ಸ್ಥಾನವನ್ನು ಆಕ್ರಮಿಸುವುದರಿಂದ ಉದ್ಯೋಗಗಳು ಕುಗ್ಗುತ್ತವೆ. ಕಾಲಕ್ರಮದಲ್ಲಿ ಇಂತಹ ಚಟುವಟಿಕೆಗಳನ್ನು ವೃದ್ಧಿಸುವ ಅವಕಾಶಗಳಿದ್ದರೆ, ಅಂತಹ ಅವಕಾಶಗಳನ್ನು ಸ್ಥಳೀಯ ಉತ್ಪಾದಕರೇ ಬಳಸಿಕೊಳ್ಳುವಂತೆ ರಾಜ್ಯ ಸರ್ಕಾರವು ಅವರಿಗೆ ಸಹಾಯ ಮಾಡಬಹುದು. ಇಂತಹ ಸ್ಥಳೀಯ ಉತ್ಪನ್ನಗಳಿಗೆ ದೊಡ್ಡ ಉದ್ದಿಮೆಗಳು ಬಂದರೆ ಕ್ರಮೇಣ ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆಯೇ ಹೊರತು ಖಂಡಿತವಾಗಿಯೂ ಹೆಚ್ಚುವುದಿಲ್ಲ.

ಆದರೆ, ಅಮಿತ್‌ ಷಾ ಅವರ ಪ್ರಕಾರ ಕಾಶ್ಮೀರಿಗಳ ನಿಜವಾದ “ನಿರೀಕ್ಷೆ” ಹೊರಗಿನವರು ಭೂಮಿ ಕೊಳ್ಳಲು ಕಾಶ್ಮೀರ ಕಣಿವೆಯಲ್ಲಿ ಪ್ರವೇಶಿಸುವುದರಲ್ಲೇ ಅಡಗಿದೆ. ಹಿಮಾಚಲ ಪ್ರದೇಶ ಮತ್ತು ಇತರ ಗಡಿ ಭಾಗದ ಬೆಟ್ಟ-ಗುಡ್ಡಗಳ ರಾಜ್ಯಗಳಲ್ಲಿ ಹೊರಗಿನವರು ಭೂಮಿ ಕೊಳ್ಳುವುದರ ಮೇಲೆ ನಿರ್ಬಂಧ ಇರುವಾಗ, “ಅಭಿವೃದ್ಧಿ”ಯ ಹೆಸರಿನಲ್ಲಿ ಕಾಶ್ಮೀರ ಕಣಿವೆಯಲ್ಲಿ ಮಾತ್ರ ಭೂಮಿ ಕೊಳ್ಳುವುದರ ಮೇಲೆ ಇರುವ ನಿರ್ಬಂಧವನ್ನು ತೆಗೆಯಬೇಕು ಎನ್ನುವುದು ವಿಚಿತ್ರವೇ ಸರಿ. ಕೇವಲ ಭೂಮಿ ವ್ಯವಹಾರಗಳ ಉಬ್ಬರದಿಂದ ಕಾಶ್ಮೀರ ಕಣಿವೆಯ ಅಭಿವೃದ್ಧಿಯಾಗುತ್ತದೆಯೇ?

ಒಬ್ಬ ವ್ಯಕ್ತಿಯು ಭೂಮಿ ಕೊಳ್ಳುವಾಗ, ತಾನು ಹೊಂದಿರುವ ಯಾವುದೊ ಒಂದು ಆಸ್ತಿಯನ್ನು ಇನ್ನೊಂದು ಆಸ್ತಿ (ಭೂಮಿ) ಹೊಂದುವತ್ತ ಚಲಿಸುತ್ತಾನೆ. ಭೂಮಿ ಮಾರುವವನ ಪರಿಸ್ಥಿತಿಯೂ ಅದೇ ರೀತಿಯಲ್ಲಿಯೇ ಇರುತ್ತದೆ. ಹಾಗಾದರೆ, ಆ ಯಾವುದೊ ಒಂದು ಎಂದು ಹೇಳುವ ಆಸ್ತಿ ಯಾವುದು? ಕಾಶ್ಮೀರ ಕಣಿವೆಯಲ್ಲಿ ಭೂಮಿ ಕೊಳ್ಳುವ ಹೊರಗಿನವನು ತಾನು ಹೊಂದಿರುವ ಉತ್ಪಾದಕ ಆಸ್ತಿಯಿಂದ ಭೂಮಿ ಹೊಂದುವತ್ತ ಚಲಿಸಿದರೆ, ಉಳಿದ ಭಾರತಕ್ಕೆ ಆ ವ್ಯವಹಾರವು ಒಂದು ಹಿಮ್ಮುಖ ನಡೆಯಾಗುತ್ತದೆ. ಆ ವ್ಯವಹಾರವು ಆ ರೀತಿಯದೇ ಅಲ್ಲ ಎಂದು ಭಾವಿಸಿ, ಅಮಿತ್‌ ಷಾ ಅವರ ಕಲ್ಪನೆಗೆ ಹೊಂದುವಂತಹ ಒಂದು ಉದಾಹರಣೆ ತೆಗೆದುಕೊಳ್ಳೋಣ: ಭೂಮಿ ಕೊಳ್ಳುವವನು ತಾನು ಹೊಂದಿರುವ ನಗದು ಹಣದಿಂದ ಭೂಮಿ-ಆಸ್ತಿಯತ್ತ ಚಲಿಸುತ್ತಾನೆ. ಇದು ಉಳಿದ ಭಾರತದಲ್ಲಿ ಆಗುವ ಹೂಡಿಕೆಯಲ್ಲಿ ಕಡಿತವಾಗುವುದಿಲ್ಲ ಎಂದು ಮೊದಲ ನೋಟದಲ್ಲಿ ತೋರುತ್ತದೆ. ಕಾಶ್ಮೀರ ಕಣಿವೆಯಲ್ಲಿ ಭೂಮಿ ಕೊಳ್ಳುವವನು ಬ್ಯಾಂಕಿಂಗ್‌ ವ್ಯವಸ್ಥೆಯಿಂದ ಸಾಲ ಪಡೆಯುತ್ತಾನೆ, ಆತನಿಗೆ ಸಾಲ ಒದಗಿಸುವಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಯಾವುದೇ ಅಡಚಣೆಯಿಲ್ಲ ಎಂಬ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ.
ಈಗ ಒಂದು ಪ್ರಶ್ನೆ: ಭೂಮಿ ಮಾರಿದವರು ತಮಗೆ ಬಂದ ಹಣವನ್ನು ಏನು ಮಾಡುತ್ತಾರೆ? ಈಗ ತಾನೇ ಚರ್ಚಿಸಿರುವ ಕಾರಣಗಳಿಂದಾಗಿ, ಕಾಶ್ಮೀರ ಕಣಿವೆಯಲ್ಲಿ ಭೂಮಿ ಮಾರಿದವರು, ಕಣಿವೆಯಲ್ಲೇ ಹೂಡಿಕೆ ಮಾಡುವ ಸಂಭವ ಕಡಿಮೆಯೇ, ಬಹುಷಃ ಸ್ಥಳೀಯ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸುವುದಕ್ಕೆ ಮಾಡುವ ಹೂಡಿಕೆಯನ್ನು ಹೊರತುಪಡಿಸಿದರೆ. ಆದರೆ, ಸ್ಥಳೀಯ ಸರಕುಗಳ ಉತ್ಪಾದನೆ ಹೆಚ್ಚಿಸುವ ಉದ್ದೇಶಕ್ಕಾಗಿ ಹೂಡಿಕೆ ಮಾಡಲು ಹಣಕಾಸಿನ ಕೊರತೆಯಂತಹ ಯಾವುದೇ ತೊಂದರೆಯಿತ್ತು ಎಂಬುದನ್ನು ನಂಬಲು ಕಾರಣವೇ ಇಲ್ಲ. ಸ್ಥಳೀಯ ಸರಕುಗಳ ಉತ್ಪಾದನೆಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವಂತಹ ಅವಕಾಶ ಇರಬಹುದು. ಅದಕ್ಕೆ ರಾಜ್ಯ ಸರ್ಕಾರದ ಉತ್ಸಾಹಪೂರ್ಣ ಭಾಗವಹಿಸುವಿಕೆ ಇರಬೇಕಾಗುತ್ತದೆ. ಆದ್ದರಿಂದ, ಭೂಮಿ ಮಾರಿ ಕೈಯಲ್ಲಿ ಹಣ ಇಟ್ಟುಕೊಳ್ಳುವುದೇ ಉತ್ಪಾದನೆ ಹೆಚ್ಚಿಸುವತ್ತ ಕೊಂಡೊಯ್ಯುವುದಿಲ್ಲ. ಉತ್ಪಾದನೆ ಹೆಚ್ಚಿಸುವಂತಹ ಅವಕಾಶ ಇದ್ದಿದ್ದರೆ ಭೂಮಿಯ ವ್ಯಾಪಾರ ಇಲ್ಲದಿದ್ದರೂ ಹೂಡಿಕೆಯಾಗುತ್ತಿತ್ತು. ಹಾಗಾಗಿ, ಭೂಮಿ ಮಾರಿದ ಹಣವನ್ನು, ಬಹುತೇಕವಾಗಿ, ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕಾಗುತ್ತದೆ.

ಇಂತಹ ಹಣ ಬ್ಯಾಂಕ್‌ನಲ್ಲಿ ಠೇವಣಿಯಾದಾಗ ಅದು ಸಾಮಾನ್ಯವಾಗಿ ಸ್ಥಳೀಯವಾಗಿ ಸಾಲ ಕೊಡಲು ಬಳಕೆಯಾಗುವುದಿಲ್ಲ ಎಂಬುದು ಒಂದು ದಿನ ನಿತ್ಯದ ಸತ್ಯ. ಒಂದೋ ಅದು ಕಾಶ್ಮೀರದ ಹೊರಗೆ ಸಾಲ ಕೊಡಲು ಬಳಕೆಯಾಗುತ್ತದೆ ಇಲ್ಲವೇ, ಹೆಚ್ಚೆಂದರೆ, ಸ್ಥಳಿಯ ಬ್ಯಾಂಕ್‌ಗಳಲ್ಲಿ ನಿಷ್ಕ್ರಿಯವಾಗಿ ಬಿದ್ದಿರುತ್ತದೆ. ಆದ್ದರಿಂದ, ಇಲ್ಲಿ ಆಗಬಹುದಾದದ್ದು ಏನೆಂದರೆ, ಪುಡಿಗಾಸಿಗಾಗಿ ಅತ್ತ ಹೊರಗಿನವರಿಗೆ ಕಣಿವೆ ಭೂಮಿ ಮಾರಿ ಇದ್ದದ್ದನ್ನು ಕಳೆದುಕೊಳ್ಳುವ ಮತ್ತು ಆ ಪುಡಿಗಾಸು ಇತ್ತ ಕಣಿವೆಯಿಂದ ಸೋರಿ ಹೋಗುವ ಒಂದೇ ಒಂದು ಬದಲಾವಣೆ. ಹಾಗಾಗಿ, ಇಂತಹ ಬದಲಾವಣೆಯಿಂದಾಗಿ ಅತ್ತ ಕಿಂಚಿತ್‌ “ಅಭಿವೃದ್ಧಿ”ಯೂ ಇಲ್ಲ, ಇತ್ತ ಉದ್ಯೋಗಗಳೂ ಹೆಚ್ಚುವುದಿಲ್ಲ.
ಇನ್ನೊಂದು ಕಡೆಯಲ್ಲಿ, ಎಷ್ಟು ಭೂಮಿ ಕೈ ಬದಲಾಯಿಸಿತೊ ಅದರಲ್ಲಿ, ಈ ಬದಲಾವಣೆಗೆ ಮೊದಲು ನಡೆಯುತ್ತಿದ್ದ ಅಷ್ಟೊ ಇಷ್ಟೊ ಚಟುವಟಿಕೆಗಳು ಕೈ ಬದಲಾವಣೆಯ ಕಾರಣದಿಂದಾಗಿ ನಿಂತು ಹೋಗುತ್ತವೆ. ಏಕೆಂದರೆ, ಹೊರಗಿನ ಖರೀದಿದಾರರು ಭೂಮಿಯ ಬೆಲೆ ಏರಿದಾಗ ಮಾರುವ, ಇಲ್ಲವೇ, ಕಣಿವೆಯ ಆ ಭೂಮಿಲ್ಲಿ ತಮಗೊಂದು ಬೇಸಿಗೆ ವಿಶ್ರಾಂತಿ ಧಾಮ ನಿರ್ಮಿಸಿಕೊಳ್ಳುವ ಹವಣಿಕೆಯಲ್ಲಿರುತ್ತಾರೆ.

ಹೀಗೆ ಯಾವ ರೀತಿಯಲ್ಲಿ ನೋಡಿದರೂ, ಕಾಶ್ಮೀರದ ವಿಶೇಷ ಸ್ಥಾನಮಾನ ಕೊನೆಗೊಳಿಸುವ ಮತ್ತು ಹೊರಗಿನವರು ಭೂಮಿ ಕೊಳ್ಳುವುದರ ಮೇಲೆ ಇದ್ದ ನಿರ್ಬಂಧವನ್ನು ರದ್ದು ಮಾಡುವ ಕ್ರಮಗಳಿದಿಂದಾಗಿ ಅಲ್ಲಿ ಉದ್ಯೋಗಾವಕಾಶಗಳು ಕಿಂಚಿತ್ತೂ ಹೆಚ್ಚುವುದಿಲ್ಲ. ಬದಲಾಗಿ, ಕಣಿವೆಯ ಭೂಮಿಯು ದಿಲ್ಲಿಯ ಅಥವಾ ಮುಂಬೈನ ಶ್ರೀಮಂತರ ಕೈಗೆ ಹಸ್ತಾಂತರವಾಗುತ್ತಿದ್ದಂತೆಯೇ ಕಣಿವೆಯಲ್ಲಿ ಉದ್ಯೋಗಾವಕಾಶಗಳು ಬಹುತೇಕ ಕುಸಿಯುತ್ತವೆ.

ವಿಶೇಷ ಸ್ಥಾನಮಾನ ರದ್ದು ಮಾಡುವ ಕ್ರಮದಿಂದ ಕಾಶ್ಮೀರದ ಅಭಿವೃದ್ಧಿ ನಿಜಕ್ಕೂ ಯಶಸ್ವಿಯಾಗುವ ಸಂಭವ ಇತ್ತು ಎನ್ನುವುದಾದರೆ, ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ರದ್ದು ಮಾಡುವ ಮೊದಲೇ ಇಬ್ಬರು ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ ರಾಜ್ಯದ ರಾಜಕೀಯ ನಾಯಕರನ್ನು ಬಂಧಿಸುವುದು ಅಗತ್ಯವೆಂದು ಭಾವಿಸುತ್ತಿರಲಿಲ್ಲ. ಹಾಗಾಗಿ, ವಿಶೇಷ ಸ್ಥಾನಮಾನದ ರದ್ದತಿಯನ್ನು ಅನಿವಾರ್ಯವಾಗಿ ಹಿಂಬಾಲಿಸುವ ಹಿಂಸೆಯಿಂದಾಗಿ ಅಲ್ಲಿ ಜನರಿಗೆ ಅನ್ನ ಒದಗಿಸುವ ಪ್ರಧಾನ ಚಟುವಟಿಕೆಯಾಗಿದ್ದ ಪ್ರವಾಸೋದ್ಯಮವೂ ಬಹಳ ದಿನಗಳವರೆಗೆ ಕುಂಠಿತಗೊಳ್ಳುವುದರಿಂದ ಕಾಶ್ಮೀರಿ ಯುವಕರಿಗೆ ಉದ್ಯೋಗ ಲಭಿಸುವುದು ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಈಗ “ಅಭಿವೃದ್ಧಿ”ಯ ಘೋಷಣೆ ಮೊಳಗುತ್ತಿದೆ. ಹಾಗಾದರೆ, ಕೇಂದ್ರ ಸರ್ಕಾರವು ಈಗ ಏನನ್ನು ಮಾಡಿದೆಯೋ ಅದನ್ನು ಮಾಡಿರುವುದಾದರೂ ಏಕೆ? ಸಾಮಾನ್ಯವಾದ ಒಂದು ಉತ್ತರವೆಂದರೆ, ಆದು, ಹಿಂದುತ್ವವಾದಿಗಳ ಬಹಳ ವರ್ಷಗಳ ಬೇಡಿಕೆ. ಅವರ ಕಣ್ಣು ದೇಶದ ಏಕ ಮಾತ್ರ ಮುಸ್ಲಿಂ ಬಾಹುಳ್ಯದ ರಾಜ್ಯದ ಜನ ಸಂಖ್ಯೆಯ ಸಂಯೋಜನೆಯನ್ನು ಇಸ್ರೇಲ್‌ ಪ್ಯಾಲೆಸ್ತೀನಿಯರ ಜಮೀನು ಕಬಳಿಸುತ್ತಿರುವ ರೀತಿಯಲ್ಲಿ ಬದಲಿಸುವತ್ತ ನೆಟ್ಟಿದೆ.

ಇದು ನಿಜವಿದೆಯಾದರೂ ಸಹ, ಮತ್ತೊಂದು ಸಂಭವನೀಯ ಉದ್ದೇಶವನ್ನು ನಾವು ಕಡೆಗಣಿಸುವಂತಿಲ್ಲ. ವಾಸ್ತವವಾಗಿ, ಈ ಸರ್ಕಾರವು ಹಿಂದುತ್ವ-ಕಾರ್ಪೋರೇಟ್‌ಗಳ ಒಂದು ಮೈತ್ರಿ ಕೂಟವೇ. ಹಾಗಾಗಿ, ಅದು ಕೈಗೊಳ್ಳುವ ಎಲ್ಲ ಕಾರ್ಯಗಳೂ ಕಾರ್ಪೋರೇಟ್‌ಗಳ ಹಿತಾಸಕ್ತಿಯನ್ನು ಈಡೇರಿಸುವ ಉದ್ದೇಶದಿಂದ ಕೂಡಿವೆ. ಕಾಶ್ಮೀರ ಕಣಿವೆಯ ಬಾಗಿಲನ್ನು ಕಾರ್ಪೋರೇಟ್‌ ಆಶ್ರಯದಾತರಿಗೆ ತೆರೆದಿರುವುದು ಅಲ್ಲಿ ಉತ್ಪಾದನೆ ಸಂಬಂಧಿತ ಆರ್ಥಿಕ ಚಟುವಟಿಕೆ ಹೆಚ್ಚಿಸುವುದಕ್ಕಲ್ಲ, ಬದಲಿಗೆ ರಿಯಲ್ ಎಸ್ಟೇಟ್ ಬೆಳೆಸಲಿಕ್ಕೆ ಅಥವಾ ಕೇವಲ ಭೂಮಿಯ ಬೆಲೆಗಳಲ್ಲಿ ಜೂಜುಗಾರಿಕೆಯೂ ಒಂದು ಹೆಚ್ಚುವರಿ ಉತ್ತೇಜನೆಯಾಗಿದೆ. ಇಂತಹ ರಿಯಲ್ ಎಸ್ಟೇಟ್ ಚಟುವಟಿಕೆಗಳು ಉದ್ಯೋಗಾವಕಾಶಗಳ ಮಟ್ಟವನ್ನೇನೂ ಹೆಚ್ಚಿಸುವುದಿಲ್ಲ. ಮಾರುವ ಮುನ್ನ ಆ ಭೂಮಿ ಉತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದರಂತೂ ಅದು ಉದ್ಯೋಗಾವಕಾಶವನ್ನು ಕಡಿತ ಮಾಡುತ್ತದೆ.

ಈ ರೀತಿಯಾಗಿ, ಕಣಿವೆಯ ಬಾಗಿಲನ್ನು ಕೆಲವು ಜೂಜುಕೋರ ಭೂಮಿ ವ್ಯವಹಾರಿಗಳಿಗೆ ಮತ್ತು ರಿಯಲ್ ಎಸ್ಟೇಟ್ ಮಂದಿಗೆ ತೆರೆಯುವುದರಿಂದ, ಅದರಿಂದಾಗುವ ಪರಿಸರ ಮಾಲಿನ್ಯವನ್ನು ವಿವರಿಸುವ ಅಗತ್ಯವಿಲ್ಲ, ಜತೆಗೆ, ಈ ಮಂದಿ ಕಾಶ್ಮೀರದ ಮುಖವನ್ನು ಅಂದ, ಚೆಂದದಿಂದಾಗಿಯೇ ಶಾಶ್ವತವಾಗಿ ವಿರೂಪಗೊಳಿಸುತ್ತಾರೆ. ಇದರಿಂದ ಕೆಲವು ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಕಾಶ್ಮೀರದ ಅರ್ಥವ್ಯವಸ್ಥೆಯು ಜೂಜುಕೋರರ ಮತ್ತು ಭೂಗಳ್ಳ ಕದೀಮರ ಬೇಟೆಯ ತಾಣವಾಗಿ ಪರಿವರ್ತನೆಗೊಂಡು, ಇಂತಹ ಧಂಧೆಗಳಿಗೆ ಅಂಟಿಕೊಂಡಿರುವ ಕೊಲೆ ಸುಲಿಗೆ ಮುಂತಾದ ಅಪರಾಧಗಳಲ್ಲಿ ತೀವ್ರ ಉಬ್ಬರವೂ ಅನಿವಾರ್ಯವಾಗಿ ಬರುತ್ತದೆ. ಈಗಾಗಲೇ ತಾಳಲಾರದ ಮಟ್ಟದಲ್ಲಿರುವ ಭಯೋತ್ಪಾದಕರ ಹಾವಳಿ ಮತ್ತಷ್ಟು ಹೆಚ್ಚುವುದರೊಂದಿಗೆ, ಅದಕ್ಕೆ ಈ ರಿಯಲ್ ಎಸ್ಟೇಟ್ ಸಂಬಂಧಿತ ಅಪರಾಧಗಳು ತುಪ್ಪ ಸುರಿಯುತ್ತವೆ. ನಿಜ ಹೇಳಬೇಕೆಂದರೆ, ಈ ಎರಡೂ ರೀತಿಯ ಹಿಂಸಾಚಾರಗಳು ಒಂದಕ್ಕೊಂದು ಪೂರಕವಾಗುತ್ತವೆ, ಬೇರೆ ಸಂದರ್ಭಗಳಲ್ಲಿ ಮಾದಕ ಪದಾರ್ಥಗಳ ವ್ಯವಹಾರಗಳು ಮತ್ತು ಭಯೋತ್ಪಾದನೆಗಳು ಒಂದಕ್ಕೊಂದು ಪೂರಕವಾಗಿರುವ ರೀತಿಯಲ್ಲಿ ಇದು, ದೇಶದಲ್ಲಿ ಪಾಳೇಗಾರಿ-ವಿರೋಧಿ ಭೂಸುಧಾರಣೆಗಳಿಗೆ ಮುನ್ನುಡಿ ಬರೆದ ರಾಜ್ಯಕ್ಕೆ ಒದಗಿರುವ ಒಂದು ದುರ್ವಿಧಿ. ಆದರೆ ಅಮಿತ್‌ ಷಾ ಖಂಡಿತವಾಗಿಯೂ ಈ ದುರ್ವಿಧಿಯನ್ನೇ “ಅಭಿವೃದ್ಧಿ” ಎನ್ನುತ್ತಾರೆ!

(ಜನಶಕ್ತಿಯ ಈ ವಾರದ ಸಂಚಿಕೆಯಲ್ಲಿ ಪ್ರಕಟವಾಗಲಿರುವ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending