Connect with us

ದಿನದ ಸುದ್ದಿ

ಬಹುಜನ ನಾಯಕನ ‘ದಾದಾಸಾಹೇಬ್ ಕಾನ್ಸಿರಾಂ’ ಪರಿನಿಬ್ಬಾಣದ ಸ್ಮರಣೆ

Published

on

ಭಾರತದ ಬಹುಜನ ರಾಜಕಾರಣ ಕಟ್ಟಿ ಯಶಸ್ವಿಯಾದ ರಾಜಕೀಯ ಸಾಮಾಜಿಕ ವಿಜ್ಞಾನಿ ‘ದಾದಾಸಾಹೇಬ್ ಕಾನ್ಸಿರಾಂ ಜೀ’ ಅವರನ್ನು ‘ಪೊಲಿಟಿಕಲ್ ಲೆಜೆಂಡ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ. ರಾಜಕಾರಣ ಎಂದರೆ ನಮಗೆ ಬೇಡವೇ ಬೇಡ ಎನ್ನುವ ಅಸಮರ್ಥ ಅಸಹಾಯಕ ಸಮುದಾಯದ ಎದೆಯೊಳಗೆ ಅರಸೊತ್ತಿಗೆಯ ಕನಸು ಬಿತ್ತಿದ ಮಹಾನ್ ಚೇತನ ಕಾನ್ಸಿರಾಮ್ ಜಿ.

ಭಾರತದಲ್ಲಿ ಯಾವುದಾದರೂ ಒಂದು ಹಿಂದೂಳಿದ ವರ್ಗ ದಲಿತ,ಅಲ್ಪಸಂಖ್ಯಾತ, ಎಂದು ಬಹುಜನ ಪರಿವರ್ತನಾ ಚಳವಳಿ ಯಶಸ್ವೀ ಆಗಿದೆ ಅಧಿಕಾರ ಇಡಿದ ರಾಜಕಾರಣ ಮಾದರಿ ಇದ್ದರೆ ಅದೊಂದು BSP ಎಂದು ಹೇಳಬಹುದು. ಭಾರತಾದ್ಯಂತ ಕಾನ್ಸಿರಾಂ ಜೀ ರಾಜಕಾರಣ ವಿದ್ಯೆ ಬಳಸಿಕೊಂಡು ಇಂದಿಗೂ ರಾಜಕಾರಣ ಮಾಡಿ ಕಡಿಮೆ ಸಂಖ್ಯೆಯ ಶಾಸಕರು ಆಯ್ಕೆಯಾದರು ಮುಖ್ಯಮಂತ್ರಿ ಪದವಿ ಪಡೆಯಬಹುದು ಎಂದು ತೋರಿಸಿಕೊಟ್ಟರು.

ಇಂದಿಗೂ ಭಾರತದಲ್ಲಿ ಬ್ರಾಹ್ಮಣಶಾಹಿ ವ್ಯವಸ್ಥೆ ಅಡಿಯಲ್ಲಿ ಹುಟ್ಟಿದ ಪಕ್ಷಗಳಾದ CONGRESS,BJP, ಅಂತಹ ಪಕ್ಷಗಳು ಪರ್ಯಾಯವಾಗಿ ರಾಜಕಾರಣ ಮಾಡಬಹುದು ಮತ್ತು ಅತಿ ಕಡಿಮೆ ಸಮಯದಲ್ಲಿ BSP ರಾಷ್ಟ್ರದ ಮೂರನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಹಿಂದೂಳಿದ ವರ್ಗದ ಮಹಾತ್ಮರ ಬಗ್ಗೆ ಸಂಶೋಧನೆ ನಡೆಸಿ ಇವತ್ತಿಗೂ ಸಂತ ರವಿದಾಸ್, ಜ್ಯೋತಿ ಬಾಹುಪುಲೆ ದಂಪತಿಗಳ ಶಾಹುಮಹರಾಜ್,ಸಯ್ಯಾಜಿ ಗಾಯಕವಾಡ,ನಾಲ್ವಡಿ ಕೃಷ್ಣರಾಜ ಒಡೆಯರ್,ಪೆರಿಯಾರ್ ನಾರಯಣಗುರು,ಬುದ್ದ ಬಸವ ಬಾಬಾಸಾಹೇಬ್ ಸಂವಿಧಾನವನ್ನು ಅಂತಹ ಮಹನೀಯರು ವಿಚಾರಧಾರೆ ತನ್ನ ಮೊದಲ ತತ್ವ ಸಿದ್ದಾಂತ ಚಳವಳಿಯನ್ನು ಮುನ್ನಡೆಗೆ ಕಾರಣವಾದ ಬಹುಜನ ಚಳವಳಿ ಒಂದು ಪರಿವರ್ತನಾ ಹಾದಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ಬಹುಶಃ ಭಾರತದಲ್ಲಿ ಕಾಂಗ್ರೆಸ್ ಬಿಜೆಪಿ ಹೊರತುಪಡಿಸಿ ಶೋಷಿತ ವರ್ಗದ ಜನರು ಕೂಡ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿಯಬಹುದು ಎಂದು ತೊರೊಸಿಕೊಟ್ಟ ರಾಜಕೀಯ ನಿಪುಣ ಕಾನ್ಸಿರಾಮ್ ಜೀ.

ದಲಿತ,ಅಲ್ಪಸಂಖ್ಯಾತ, ಹಿಂದೂಳಿದ ವರ್ಗಗಳು ಅಧಿಕಾರ ವಂಚಿತ ಸಣ್ಣಪುಟ್ಟ ಸಮುದಾಯದವರು ನಾವು ಕೂಡ ಸ್ವಂತ ಪವರ್ ಪಾಲಿಟಿಕ್ಸ್ ಮಾಡಬೇಕು ಅದನ್ನು ತಮ್ಮ ಜೀವಿತಾವಧಿಯಲ್ಲಿ ನೋಡಲೇಬೇಕು ಎಂದು ಪಣತೊಟ್ಟ ದಾದಾಸಾಹೇಬ್ ಕಾನ್ಸಿರಾಮ್ ದೇಶ ಬಹುದೊಡ್ಡ ಪ್ರಮಾಣದ ಜನಸಂಖ್ಯೆಯುಳ್ಳ ಉತ್ತರ ಪ್ರದೇಶದಲ್ಲಿ ಕುಮಾರಿ ಮಾಯಾವತಿ ಮೇಡಂ ಅವರಿಗೆ ನಾಲ್ಕು ಸಾರಿ ಮುಖ್ಯಮಂತ್ರಿ ಮಾಡೋದು ಎಂದರೆ ಸಾಮಾನ್ಯ ಕಾರ್ಯವಲ್ಲ.

ಬಹುತೇಕ ಇತ್ತೀಚೆನ ವರ್ಷಗಳ ರಾಜಕಾರಣದಲ್ಲಿ ಕಾನ್ಸಿರಾಮ್ ಜೀ ಅವರ ರಾಜಕೀಯ ಲೆಕ್ಕಾಚಾರ ಮಾದರಿ ಬಳಸಿಕೊಂಡು ಇಪ್ಪತ್ತೈದು ಶಾಸಕರನ್ನು ಹೊಂದಿರುವ ಪಕ್ಷಗಳು ಕೂಡ ಮುಖ್ಯಮಂತ್ರಿ ನಾನೆ ಆಗುವೆ ಎಂದು ಆತ್ಮವಿಶ್ವಾಸದಿಂದ ಹೇಳಬಹುದು ಎಂದರೆ ಆದರ ಮೂಲಪುರುಷ ಕಾನ್ಸಿರಾಮ್ ರಾಜಕಾರಣ ಮಾದರಿ ಕೊನೆಗೆ ಉ.ಪ್ರ.ಬಿಹಾರ್,ಕರ್ನಾಟಕದ ಜೆಡಿಎಸ್ ಪಕ್ಷ ಕೂಡ ಅಲ್ಪಸ್ವಲ್ಪ ಶಾಸಕರು ಹೊಂದಿದ್ದರೂ ಕೂಡ ಮುಖ್ಯಮಂತ್ರಿ ಗಾದಿಯನ್ನು ಅನುಭವಿಸಲು ಸಾಧ್ಯವಾಗಿದೆ ಎಂದರೆ ಕಾನ್ಸಿರಾಮ್ ರಾಜಕಾರಣ ತಂತ್ರ ನೀತಿಗಳನ್ನು ಇವೆಲ್ಲವೂ ಪಕ್ಷಗಳು ಅವರು ನಾಯಕರು ಅನುಸರಿಸಿ ಅಧಿಕಾರ ಪಡೆದುಕೊಂಡರು.

ಕರ್ನಾಟಕದಲ್ಲಿ ಒಂದೂವರೆ ಕೋಟಿಗೂ ಅಧಿಕ
ಜನಸಂಖ್ಯೆ ಅಸ್ಪೃಶ್ಯರಾದ ದಲಿತ ವರ್ಗದವರು
ಇದ್ದಾರೆ ಹಾಗೂ ವಾಲ್ಮೀಕಿ, ಅಲ್ಪಸಂಖ್ಯಾತ,ಗೊಲ್ಲರ ಸಮುದಾಯ,ಮಡಿವಾಳ,ಉಪ್ಪಾರ,ಸವಿತಾ,ಇನ್ನಿತರ ಸಣ್ಣಪುಟ್ಟ ಸಮುದಾಯದವರು ಕೂಡಿಕೊಂಡು ಬಹುಜನ ಸಮಾಜದ ಚಳುವಳಿ ಮುನ್ನಡೆಸಿದರೆ ಕೇವಲ ಹತ್ತು ವರ್ಷಗಳಲ್ಲಿ ಒಬ್ಬ ಮುಖ್ಯಮಂತ್ರಿಯಾದರು ಆಗಬಹುದು.

ಆದರೆ ಈ ಸಮುದಾಯದವರು ಕೇವಲ ಹಲವು ಪಕ್ಷಗಳಿಗೆ ಮತಬ್ಯಾಂಕ್ ಆಗಿವೆ ಸ್ವಂತ ಅಧಿಕಾರ ಗದ್ದುಗೆ ಹಿಡಿಯಬಹುದು ಎನ್ನುವ ಆಶಭಾವನೆ ಕಳಕೊಂಡು ಕಮರಿ ಹೋಗಿವೆ ಆದರೆ ನಮ್ಮ ಮುಂದೆ ಇರುವ ಒಕ್ಕಲಿಗರ ಸಮುದಾಯದವರು ತಮ್ಮದೆ ಜಾತಿ ಜನಸಂಖ್ಯೆ ಇಟ್ಟುಕೊಂಡು ಪಕ್ಷ ಕಟ್ಟಿ ಎರಡು ಬಾರಿ ಮುಖ್ಯಮಂತ್ರಿ, ಒಂದು ಬಾರಿ ದೇಶದ ಪ್ರಧಾನಿ ಆದರೂ ಇದೇ ರೀತಿ ಸಂಘಪರಿವಾರದ ಪೋಷಕ ಪಾತ್ರದಲ್ಲಿ ವಹಿಸಿಕೊಂಡ ಲಿಂಗಾಯತರು ಸತತ ಮುಖ್ಯಮಂತ್ರಿ ಗಾದಿ ಅನುಭವಿಸುತ್ತಲೇ ಇದ್ದಾರೆ ಆದರೆ ಜನಸಂಖ್ಯೆನೆ ಇಲ್ಲದ ಬ್ರಾಹ್ಮಣರು ಎಲ್ಲಾ ಸಚಿವ ಸಂಪುಟದಲ್ಲಿ ನಾಲ್ಕು ಖಾತೆಯನ್ನು ಹೊಂದಬಹುದು.

ಈ ದಲಿತರಲ್ಲೆ ಬಲಾಡ್ಯ ಸಮುದಾಯಗಳಾದ,ವಾಲ್ಮಿಕಿ,ಮಾದಿಗರು,ಹೊಲೆಯರು, ಗಳು,ಮುಸ್ಲಿಂರು,ಸದಾಕಾಲವೂ BJP,CONG,ಪಕ್ಷಗಳು ಕಾಲಕೆಳಗೆ ಅಧಿಕಾರ ಪಡೆದು ತನ್ನದೆ ಸಮುದಾಯದ ಜನರ ಮೇಲೆ ದಿನ ನಿತ್ಯ ನಡೆಯುವ ದೌರ್ಜನ್ಯ ಹಿಂಸೆ ಕೊಲೆ ಅತ್ಯಾಚಾರ ಮಾಡುವುದನ್ನು ಕನಿಷ್ಟ ವಿರೋಧ ವ್ಯಕ್ತಪಡಿಸದಷ್ಟು ನಿಷ್ಪ್ರಯೋಜಕ ಅಸಹಾಯಕ ಜೀವಂತ ಸಮಾಧಿ ಆಗಿದ್ದಾರೆ.

ಕರ್ನಾಟಕದಲ್ಲಿ ಬಹುಸಂಖ್ಯಾತರಾದ ದಲಿತ,
ಅತಿ ಹಿಂದೂಳಿದ ವರ್ಗ,ಅಲ್ಪಸಂಖ್ಯಾತರು ಈ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅಧಿಕಾರದಿಂದ ವಂಚಿತ ಈ ಸಮುದಾಯಗಳು ಅಧಿಕಾರವನ್ನು ಹಿಡಿಯಬಹುದು ಏಕೆಂದರೆ ಈ ಚಳವಳಿ ಮರೆಮಾಚಿದ ಇತಿಹಾಸವನ್ನು ಪೂರ್ವಿಕರು ಬಗ್ಗೆ ತನ್ನ ಚಳವಳಿ ಭಾಗವಾಗಿ ತೆಗೆದುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಬಹುಜನ ಚಳುವಳಿ ನೇತೃತ್ವವನ್ನು ಅಹಿಂದ ವರ್ಗಕ್ಕೆ ಕೈಗೆ ಕೊಟ್ಟು ತ್ಯಾಗ ಮನೋಭಾವ ಇಟ್ಟುಕೊಂಡು ರಾಜಕಾರಣ ಯುದ್ಧನೀತಿ ನಿರೂಪಿಸಿದರೆ ಅನೇಕ ಸಣ್ಣಪುಟ್ಟ ಅಧಿಕಾರ ವಂಚಿತ ಸಮುದಾಯಗಳು ಅಧಿಕಾರ ವಹಿಸಿಕೊಳ್ಳಲು ಅವಕಾಶ ಮಾಡಿಕೊಟ್ಟರೆ
ಈ ರಾಜ್ಯದ ಸುಧಾರಣೆ ಕಾಣಲು ಸಾದ್ಯ ಜೊತೆಗೆ ಕಾನ್ಸಿರಾಂ ಜೀ ಅವರ ರಾಜಕೀಯ ವಿಚಾರಧಾರೆ ಪ್ರಸ್ತುತ ರಾಜಕಾರಣದಲ್ಲಿ ಸಮೀಕರಣವನ್ನು ಬಳಸಿಕೊಂಡು ಒಂದು ಅದ್ಭುತ ಯಶಸ್ಸನ್ನು ದಾಖಲಿಸಬಹುದು ಸಕ್ಸಸ್ ಮಾದರಿ ರಾಜಕಾರಣ ಬಗ್ಗೆ ಹೆಚ್ಚು ಗಮನ ಹರಿಸಿದರೆ ಈ ಮಾದರಿ ರಾಜಕಾರಣ ಸಕ್ಸಸ್ ಆಗಬಹುದು.

-ಹನುಮೇಶ್ ಗುಂಡೂರು, ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending