ಬಹಿರಂಗ
ಕೆ.ಆರ್.ಎಸ್.ನಿರ್ಮಾಣ : ಮತ್ತಷ್ಟು ಇತಿಹಾಸ
- ರಘೋತ್ತಮ ಹೊ.ಬ
ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜಒಡೆಯರ್ರವರು.
ಬ್ರಿಟಿಷರೊಂದಿಗೆ ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್ ವಿದ್ಯುತ್ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!
ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್ರಿಗೆ ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು.
ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನಿರಂತರ ನೀರು ಸರಬರಾಜು ಮಾಡಲು ಶಿವನಸಮುದ್ರದ ಹತ್ತಿರ ತೋರೆಕಾಡನಹಳ್ಳಿ ಎಂಬಲ್ಲಿ ಚೆಕ್ಡ್ಯಾಂ ನಿರ್ಮಿಸಲು ಕೂಡ ಒಡೆಯರ್ರವರು ಆಲೋಚಿಸಿದರು. ಹಾಗೆಯೇ ಅದರ ನಿರ್ಮಾಣ ಕೂಡ ಆಯಿತು ಆದರೆ ಕೆಲವೇ ಅಡಿಗಳಷ್ಟಿದ್ದ ಚೆಕ್ಡ್ಯಾಂ ನೀರು ಏನೇನಕ್ಕು ಸಾಲುತ್ತಿರಲಿಲ್ಲ. ಕಡೆಗೆ ಚಿನ್ನದ ಗಣಿಗೆ ವಿದ್ಯುತ್ ಪೂರೈಕೆ ಮಾಡಲೇಬೇಕಾದ ಒತ್ತಡಕ್ಕೆ ಸಿಲುಕಿದ ಅವರು 1904 ರಲ್ಲಿ ಜೋಗ್ ಬಳಿ ವಿದ್ಯುತ್ ಉತ್ಪಾದನೆ ಮಾಡಲು ಅನುಮತಿ ಕೋರಿ ಅಂದಿನ ಬ್ರೀಟಿಷ್ ವೈಸ್ ರಾಯ್ ಲಾರ್ಡ ಕರ್ಜನ್ರವರಿಗೆ ಪತ್ರ ಕೂಡ ಬರೆದರು.
ಆದರೆ ಪರಿಸರದ ನೆಪ ಒಡ್ಡಿ ಕರ್ಜನ್ ಅದಕ್ಕೆ ಅನುಮತಿ ನೀಡಲಿಲ್ಲ. ಕಡೆಗೆ ಬೇರಾವ ದಾರಿ ಕಾಣದೆ ಒಡೆಯರ್ರವರು ಜೋಗ್ನಲ್ಲಿ ವಿದ್ಯುತ್ ಉತ್ಪತ್ತಿ ಮಾಡುವ ಆಲೋಚನೆ ಕೈಬಿಟ್ಟು ಶಿವನಸಮುದ್ರಕ್ಕೆ ನಿರಂತರ ನೀರು ಒದಗಿಸುವ ದಿಕ್ಕಿನಲಿ ಮತ್ತೆ ಆಲೋಚನೆಗಿಳಿದರು. ಈ ಸಂಧರ್ಭದಲ್ಲಿ ಅವರ ಆ ಆಲೋಚನೆಗೆ ಆಗ ಕೈ ಜೋಡಿಸಿದ್ದು ಆಗಿನ ಮೈಸೂರು ಪ್ರಾಂತ್ಯದ ಮುಖ್ಯ ಇಂಜಿನಿಯರ್ ಆಗಿದ್ದ ಮ್ಯಾಕ್ ಹಚ್ರವರು.
ಅಂದಹಾಗೆ ಮಹಾರಾಜರ ಆ ಆಲೋಚನೆಗೆ ಇಂಬು ಕೊಡಲೆಂಬಂತೆ 120 ವರ್ಷಗಳ ಹಿಂದೆ ಟಿಪ್ಪು ಸುಲ್ತಾನ್ ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಿಸಲು ಯೋಜನೆ ರೂಪಿಸಿ ಶಂಕು ಸ್ಥಾಪನೆಗೈದಿರುವ ಹಳೆ ಕಡತವೊಂದು ಅವರ ಕಣ್ಣಿಗೆ ಬಿತ್ತು.
ಈ ನಿಟ್ಟಿನಲ್ಲಿ ಶಿವನಸಮುದ್ರದ ವಿದ್ಯುತ್ ಕೇಂದ್ರಕ್ಕೆ ತಕ್ಷಣ ಮತ್ತು ಶಾಶ್ವತ ಪರಿಹಾರವಾಗಿ, ನಿರಂತರ ನೀರು ಒದಗಿಸಲು ಇದೇ ತಕ್ಕ ಯೋಜನೆ ಎಂದು ಪರಿಗಣಿಸಿದ ಅವರು ಟಿಪ್ಪು ಸುಲ್ತಾನನ ಕನಸಿನ ಯೋಜನೆಗೆ ಮರು ಜೀವ ನೀಡಲು ತಮ್ಮ ಇಂಜಿನಿಯರ್ಗಳ ತಂಡಕ್ಕೆ ಸೂಚಿಸಿದರು. ಅಂದಹಾಗೆ ಅಣೆಕಟ್ಟು ಕಟ್ಟಲು ಒಡೆಯರ್ರವರು ಸೂಚನೆ ನೀಡಿದ(1906) ಇಂಜಿನಿಯರ್ಗಳ ಆ ತಂಡದಲ್ಲಿ ವಿಶ್ವೇಶ್ವರಯ್ಯನವರಿರಲಿಲ್ಲ! ಅಥವಾ ಮೈಸೂರು ಸಂಸ್ಥಾನಕ್ಕೆ ವಿಶ್ವೇಶ್ವರಯ್ಯನವರ ಆಗಮನ ಇನ್ನು ಆಗೇ ಇರಲಿಲ್ಲ!
ಇರಲಿ, ಕನ್ನಂಬಾಡಿಯಲ್ಲಿ ಅಣೆಕಟ್ಟೆಯನ್ನೇನೊ ಕಟ್ಟಲು ಮಹಾರಾಜರು ನಿರ್ಧರಿಸಿದರು. ಆದರೆ ಬ್ರಿಟಿಷ್ ರೆಸಿಡೆಂಟರಿಂದ ಅವರಿಗೆ ಸಿಕ್ಕಿದ್ದು ಕೇವಲ 70 ಅಡಿ ಎತ್ತರ ಕಟ್ಟಲು ಹಾಗೂ 60ಅಡಿ ನೀರು ಸಂಗ್ರಹಿಸಲು ಮಾತ್ರ. ಈ ನಿಟ್ಟಿನಲಿ ಬ್ರೀಟಿಷರ ನಿಲುವನ್ನು ಮಹಾರಾಜರು ಸುತಾರಾಂ ತಿರಸ್ಕರಿಸಿದರು.
ಈ ನಡುವೆ ಬ್ರೀಟಿಷರು ಮತ್ತೊಂದು ಕಂಡೀಷನ್ ಹಾಕಿದರು. ಅದೇನೆಂದರೆ ಕೆ.ಆರ್.ಎಸ್ ನೀರನ್ನು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಸಬೇಕು, ಹಾಗೆಯೇ ಹಾಗೆ ಉತ್ಪತ್ತಿಯಾದ ವಿದ್ಯುತ್ತಿನಲ್ಲಿ ಚಿನ್ನದಗಣಿಗೆ ಸಾಗಿಸಿ ಉಳಿದ ವಿದ್ಯುತ್ತನ್ನು ತಮ್ಮ ನೇರ ಆಳ್ವಿಕೆಗೆ ಒಳಪಟ್ಟಿದ್ದ ಮದ್ರಾಸ್ ಮತ್ತು ಕೊಯಮತ್ತೂರಿಗೆ ಒದಗಿಸಬೇಕು ಎಂಬುದೇ ಆ ಕಂಡೀಷನ್. ಆದರೆ ಈ ಕಂಡೀಷನ್ಗೆ ಸಹ ಒಡೆಯರ್ ಜಗ್ಗಲಿಲ್ಲ. ಬದಲಿಗೆ ಕೃಷಿಗೆ ವಿದ್ಯುತ್ ಮತ್ತು ನೀರು ಒದಗಿಸುವ ತಮ್ಮ ನಿಲುವಿಗೆ ಅವರು ಕಟಿಬದ್ಧರಾದರು.
ಅಂತಿಮವಾಗಿ ಮಹಾರಾಜರ ಈ ನಿಲುವಿಗೆ ಬ್ರಿಟೀಷರು ತಲೆಬಾಗಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಸಮ್ಮತಿಸಿದರು. 90ಅಡಿ ಎತ್ತರ ಮತ್ತು 80ಅಡಿ ನೀರು ಸಂಗ್ರಹಿಸಲು ಮತ್ತು ಮುಂದೆ ವಿಸ್ತರಿಸಬಹುದಾದ ಅವಕಾಶ ನೀಡಿ ಒಪ್ಪಿಗೆ ನೀಡಿದರು. ಈ ಸಂಧರ್ಭದಲ್ಲಿ ಬ್ರಿಟಿಷ್ ರೆಸಿಡೆಂಟರಿಂದ ಒಪ್ಪಿಗೆ ಸಿಕ್ಕಿದ್ದೆ ತಡ ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಮತ್ತವರ ತಂಡ ಜಲಾಶಯದ ನಿರ್ಮಾಣಕ್ಕೆ ಕಾರ್ಯೋನ್ಮುಖವಾಯಿತು. ಅಂದಹಾಗೆ ಜಲಾಶಯ ನಿರ್ಮಾಣದ ಪ್ರಾಥಮಿಕ ತಯಾರಿ ನಡೆದ ಈ ಸಂಧರ್ಭದಲ್ಲಿಯೂ ಕೂಡ ವಿಶ್ವೇಶ್ವರಯ್ಯನವರಿರಲಿಲ್ಲ!
ಇನ್ನು ಅದು 1908ರ ಅಂತ್ಯದ ಸಮಯ. ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಸೇವೆಯಿಂದ ನಿವೃತ್ತರಾದರು. ಸ್ವಾಭಾವಿಕವಾಗಿ ತೆರವುಗೊಂಡ ಆ ಸ್ಥಾನಕ್ಕೆ ಕ್ಯಾಪ್ಟನ್ ಡೇವಿಸ್ರವರು ಮುಖ್ಯ ಇಂಜಿನಿಯರಾಗಿ ನೇಮಕಗೊಂಡರು ಹಾಗೆಯೆ ಕನ್ನಂಬಾಡಿ ಬಳಿ ನದಿಗೆ ಅಡ್ಡಲಾಗಿ ಮರಳು ಮೂಟೆಗಳನ್ನಿಟ್ಟು ಅದರ ಪಾತ್ರವನ್ನು ಬದಲಿಸುª ಹಚ್ರವರ ಕಾಮಗಾರಿಯನ್ನು ಡೇವಿಸ್ರವರು ಮುಂದುವರೆಸಿದರು.
ದುರಂತವೆದಂರೆ 1909ರ ಮೇ-ಜೂನ್ ಮುಂಗಾರಿನ ತಿಂಗಳು. ನದಿಯ ಪ್ರವಾಹ ಉಕ್ಕಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಮರಳು ಮೂಟೆಗಳೆಲ್ಲವು ಪ್ರವಾಹಕ್ಕೆ ಕೊಚ್ಚಿ ಹೋದವು. ಇದನ್ನು ತಡೆಯುವ ನಿಟ್ಟಿನಲ್ಲಿ ರಾತ್ರೋರಾತ್ರಿ ತೆಪ್ಪಗಳೊಂದಿಗೆ ಕಾರ್ಮಿಕರ ಜೊತೆ ಕಾರ್ಯಾಚರಣೆಗೆ ಇಳಿದ ಕ್ಯಾ.ಡೇವಿಸ್ ತನ್ನ ಸಹಪಾಠಿ ಕಾರ್ಮಿಕನೋರ್ವನನ್ನು ಉಳಿಸಲು ಹೋಗಿ ನದಿಯ ಪ್ರವಾಹದಲ್ಲಿ ಕೋಚ್ಚಿಹೋದ. ಘಟನೆಯಲ್ಲಿ ಕ್ಯಾ.ಡೇವಿಸ್ ಹಠಾತ್ ಸಾವಿಗೀಡಾದ. ಈ ಕಾರಣದಿಂದಾಗಿ ಮೈಸೂರು ಸಂಸ್ಥಾನದ ಮುಖ್ಯ ಇಂಜಿನಿಯರ್ ಹುದ್ದೆ ಖಾಲಿಬಿದ್ದಿತು.
ಇದೇ ಸಂಧರ್ಭದಲ್ಲಿ ಮೈಸೂರು ಸಂಸ್ಥಾನದಲ್ಲಿ ಒಳಗೊಳಗೆ ಮತ್ತೊಂದು ಹೋರಾಟ ಪ್ರಾರಂಭವಾಗಿತ್ತು. ಅದು ಮೈಸೂರು ಮೈಸೂರಿಗರಿಗೆ ಎಂಬ ಹೋರಾಟ. ಅಂದರೆ ಮೈಸೂರು ಪ್ರಾಂತ್ಯದಲ್ಲಿದ್ದ ಮದ್ರಾಸಿ ಅಧಿಕಾರಿಗಳನ್ನು ಓಡಿಸುವ ಹೋರಾಟವದು. ಈ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದಂತೆ ಇದನ್ನು ಶಮನಮಾಡುವ ನಿಟ್ಟಿನಲಿ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ರವರು ಚಿಂತನೆಗಿಳಿದರು ಹಾಗೆಯೇ ಅದೇ ಸಮಯದಲ್ಲಿ ಖಾಲಿಯಾದ ಮುಖ್ಯ ಇಂಜಿನಿಯರ್ ಹುದ್ದೆಗೆ ಬೇರೋಬ್ಬರನ್ನು ನೇಮಿಸಬೇಕಾದ ಅನಿವಾರ್ಯತೆ ಕೂಡ ಅವರಿಗೆ ಎದುರಾಯಿತು.
ಇಂಜಿನಿಯರ್ ನೇಮಕ ಮತ್ತು ಮೈಸೂರು ಮೈಸೂರಿಗರಿಗೆ ಎಂಬ ಎರಡೂ ಬೇಡಿಕೆಯ ಹಿನ್ನೆಲೆಯಲ್ಲಿ ಮಹಾರಾಜರು ದೂರದ ಮುಂಬಯಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಸಂಸ್ಥಾನದವರೆ ಆದ ವಿಶ್ವೇಶ್ವರಯ್ಯರವರನ್ನು ಮುಖ್ಯ ಇಂಜಿನಿಯರ ಹುದ್ದೆಗೆ ನೇಮಿಸಿಕೊಂಡರು. ಈ ನಿಟ್ಟಿನಲಿ ಮಹಾರಾಜರ ಆದೇಶದ ಮೇರೆಗೆ 1909ರ ಅಂತ್ಯದಲ್ಲಿ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದುಕೊಂಡರು!
ಅಂದಹಾಗೆ ಅವರು ಹಾಗೆ ಸಂಸ್ಥಾನಕ್ಕೆ ಸೇವೆಗೆ ಪ್ರವೇಶಪಡೆಯುತ್ತಿದ್ದಂತೆ ಇಂಜಿನಿಯರರಾದ ಅವರ ಹೆಗಲ ಮೇಲೆ ಸಂಸ್ಥಾನದ ಎಲ್ಲ ನಿರ್ಮಾಣದ ಕಾಮಗಾರಿಗಳ ಹೊರೆಯು ಬಿತ್ತು. ಹಾಗೆಯೆ ಕೆ.ಆರ್.ಎಸ್ ನಿರ್ಮಾಣ ಕಾಮಗಾರಿ ಕೂಡ. ಯಾಕೆಂದರೆ ಮೊದಲೇ ತಿಳಿಸಿದ ಹಾಗೆ ಅದಾಗಲೆ ಜಲಾಶಯ ನಿರ್ಮಾಣದ ಪ್ರಾಥಮಿಕ ಕಾರ್ಯಗಳು ಜಾರಿಯಲ್ಲಿತ್ತು. ಈ ನಿಟ್ಟಿನಲಿ ಇದಕ್ಕೆ ಸಾಕ್ಷಿ ಬೇಕೆನ್ನುವವರು ಸ್ವತಃ ವಿಶ್ವೇಶ್ವರಯ್ಯನವರೆ ತಮ್ಮ ಆತ್ಮಕಥೆ “ನನ್ನ ವೃತ್ತಿ ಜೀವನದ ನೆನಪುಗಳು “ ಕೃತಿಯಲ್ಲಿ ನಾನು ಬರುವುದಕ್ಕೆ ಮೊದಲೆ ಶ್ರೀರಂಗಪಟ್ಟಣದಿಂದ 10 ಮೈಲು ದೂರದಲ್ಲಿ ಕಾವೇರಿ ನದಿಯ ಪಶ್ಚಿಮ ದಂಡೆ ಮೇಲೆ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಾಣದ ಕಾಮಗಾರಿ ನೆಡೆದಿತ್ತು. ಎಂದು ಬರೆದಿರುವುದನ್ನು ಗಮನಿಸಬಹುದು.
ಆ ಮೂಲಕ ಪ್ರಾಮಾಣಿಕವಾಗಿ ಸ್ವತಃ ಸರ್.ಎಂ.ವಿ.ರವರೆ ಜಲಾಶಯದ ನಿರ್ಮಾಣದ ಕಾಮಗಾರಿ ತನ್ನ ಆಗಮನಕ್ಕೂ ಮೊದಲೇ ಪ್ರಾರಂಭಗೊಂಡಿತ್ತೆಂಬುದನ್ನು ಸೂಚಿಸಿದ್ದಾರೆ. ಒಟ್ಟಾರೆ ಈ ನಿಟ್ಟಿನಲಿ ಹೇಳುವುದಾದರೆ ಕೆ.ಆರ್.ಎಸ್ ವಿಶ್ವೇಶ್ವರಯ್ಯನವರ ಕನಸಿನ ಕೂಸಂತು ಅಲ್ಲ. ಟಿಪ್ಪು ಕನಸಿದ್ದನ್ನು ನಾಲ್ವಡಿರವರು ಕಾರ್ಯರೂಪಕ್ಕೆ ತಂದ ಸಂದರ್ಭದಲ್ಲಿ ಮಧ್ಯ ಇಂಜಿನಿಯರರಾಗಿ ನೇಮಕಗೊಂಡು ಅವರು ಕೆಲಸ ಮುಂದುವರೆಸಿದ್ದಾರೆ ಅಷ್ಟೆ!
ಈ ನಿಟ್ಟಿನಲ್ಲಿ ಇಂಜಿನಿಯರ್ ಕ್ಯಾ.ಡೇವಿಸ್ ಏನಾದರು ಸಾಯದಿದ್ದರೆ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಬರುತ್ತಿರಲೇ ಇರಲಿಲ್ಲ. ಹಾಗೆಯೇ ಕೆ.ಆರ್.ಎಸ್ ನಿರ್ಮಾಣದ ಶ್ರೇಯಸ್ಸು ಅವರ ಹೆಸರಿಗೆ ಹೈಜಾಕ್ ಆಗುವುದು ಕೂಡ ನೆಡೆಯುತ್ತಿರಲಿಲ್ಲ. ಕ್ಯಾ.ಡೇವಿಸ್ ಸದ್ದಿಲ್ಲದೆ ಸಂಬಳಪಡೆದು ಕಾಮಗಾರಿ ಮುಗಿಸುತ್ತಿದ್ದ!
ಇರಲಿ, ಈ ನಡುವೆ ಮಹಾರಾಜರ ವಿಶ್ವಾಸ ಸಂಪಾದಿಸಿದ ವಿಶ್ವೇಶ್ವರಯ್ಯನವರು ಮೈಸೂರು ಮೈಸೂರಿಗರಿಗೆ ಎಂಬ ತತ್ವದ ಅಡಿಯಲ್ಲಿ ದಿವಾನ ಹುದ್ದೆಗೂ ಕೂಡ ನೇಮಿಸಲ್ಪಟ್ಟರು. ಅಂದಹಾಗೆ ಆಗ ತೆರವಾದÀ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಿಸಲ್ಪಟ್ಟವರು ಯಾರು? ಯಾರು ಯಾಕೆ ಅವರ ಹೆಸರು ಹೇಳುವುದಿಲ್ಲ? ಕೆ.ಆರ್.ಎಸ್ ಇತಿಹಾಸದ ದ್ವಂದ್ವವೆಂದರೆ ಇದೇ!
ಇರಲಿ, 1911ರಲ್ಲಿ ನದಿ ಪ್ರವಾಹ ಬದಲಿಸುವ ಕಾರ್ಯ ಮುಗಿದು ಜಲಾಶಯದ ಕಟ್ಟಡ ಕಾಮಗಾರಿ ಪ್ರಾರಂಭ ವಾಯಿತು. ಈನಿಟ್ಟಿನಲ್ಲಿ 2ಕೋಟಿ 70ಲಕ್ಷ ಬಜೆಟ್ಟಿನ ಈ ಯೋಜನೆ ಹಣದ ಕೊರತೆಯನ್ನೆದುರಿಸಿತು. ಯಾಕೆಂದರೆ ಮೈಸೂರು ರಾಜ್ಯದ ಅಂದಿನ ಒಟ್ಟು ಬಜೆಟ್ಟೆ 2ಕೋಟಿ 30ಲಕ್ಷ. ಹೀಗಿರುವಾಗ ಜಲಾಶಯಕ್ಕಾಗಿ 2ಕೋಟಿ 70ಲಕ್ಷ ತರುವುದು?
ಅಂದಹಾಗೆ ಈ ಸಂಧರ್ಭದಲ್ಲಿ ಧೃತಿಗೆಡದ ಮಹಾರಾಜ ನಾಲ್ವಡಿಯವರು ತಮ್ಮ ತಾಯಿ ಮತ್ತು ತಮ್ಮ ಧರ್ಮಪತ್ನಿಯವರಿಗೆ ಸೇರಿದ 4 ಮೂಟೆ ವಜ್ರಾಭರಣಗಳನ್ನು ಮುಂಬೈ ಚಿನಿವಾರ ಪೇಟೆಯಲ್ಲಿ ಮಾರಾಟ ಮಾಡಿ ಹಣ ಒದಗಿಸಿದರು. ಅಂದಹಾಗೆ ಅಣೆಕಟ್ಟು ನಿರ್ಮಾಣಕ್ಕೆ ಮಹಾರಾಜರು ಒದಗಿಸಿದ ಆ 2ಕೋಟಿ 70ಲಕ್ಷ ರೂಗಳಲ್ಲಿ ಮುಖ್ಯ ಇಂಜಿನಿಯರ್ ವಿಶ್ವೇಶ್ವರಯ್ಯನವರ ಸಂಬಳವೂ ಕೂಡ ಸೇರಿತ್ತು!
ಇರಲಿ, ಮೊದಲೆ ಹೇಳಿದಹಾಗೆ ವಿಶ್ವೇಶ್ವರಯ್ಯನವರು ದಿವಾನರಾದ ನಂತರ ಬೇರೊಬ್ಬರು ಮುಖ್ಯ ಇಂಜಿನಿಯರರಾಗಿ ನೇಮಕಗೊಂಡರು. ಬಳಿಕ ಆ ಹೊಸ ಇಂಜಿನಿಯರ್ ಕೆ.ಆರ್. ಎಸ್ ನಿರ್ಮಾಣದ ಕಾಮಗಾರಿ ಮುಂದುವರೆಸಿದರು. ಅಂದಹಾಗೆ ಜಲಾಶಯದಲ್ಲಿ ಈಗಲೂ ಕೆ.ಆರ್.ಎಸ್. ನಿರ್ಮಾಣದಲ್ಲಿ ಕಾರ್ಯನಿರ್ವಹಿಸಿದ 50ಕ್ಕೂ ಹೆಚ್ಚು ಇಂಜಿನಿಯರ್ಗಳ ಹೆಸರನ್ನೊಳಗೊಂಡ ನಾಮಫಲಕವಿದೆ. ಅದರಲ್ಲಿ ವಿಶ್ವೇಶ್ವರಯ್ಯ ಒಬ್ಬರಷ್ಟೆ. ಬರೀ ವಿಶ್ವೇರಯ್ಯರವರೊಬ್ಬರೇ ಅಲ್ಲ!
ಅಂದಹಾಗೆ ಕೆಆರ್ಎಸ್ನ ಕಾಮಗಾರಿ ಹೀಗೆ ಮುಂದುವರಿದಿರಬೇಕಾದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವುದನ್ನು ವಿರೋಧಿಸುವ ನಿಟ್ಟಿನಲ್ಲಿ ವಿಶ್ವೇಶ್ವರಯ್ಯನವರು ಮಹಾರಾಜರ ಜೊತೆ ವಿಶ್ವಾಸಕೆಡಿಸಿಕೊಂಡರು. ಯಾಕೆಂದರೆ ಮೀಸಲಾತಿ ನೀಡುವುದರಿಂದ ಪ್ರತಿಭೆಗಳಿಗೆ ಮೊಸವಾಗುತ್ತದೆ ಎಂಬ ತಮ್ಮನಿಲುವಿಗೆ ಅಂಟಿಕೊಂಡ ವಿಶ್ವೇಶ್ವರಯ್ಯನವರು ಒಬಿಸಿ ಮೀಸಲಾತಿಗೆ ಕಟಿಬದ್ಧರಾದ ಮಹಾರಾಜರ ಕೆಂಗಣ್ಣಿಗೆ ಗುರಿಯಾದರು. ತತ್ಪರಿಣಾಮವಾಗಿ ಅವರು ದಿವಾನ ಹುದ್ದೆಗೆ ರಾಜೀನಾಮೆ ಕೊಡಬೇಕಾಗಿ ಬಂತು ಮತ್ತು ಆಗ ಇಸವಿ 1918!
ಹೌದು, ಕೆ.ಆರ್.ಎಸ್. ಕಟ್ಟಡ ಕಾಮಗಾರಿ ಪ್ರಾರಂಭ ವಾದದ್ದು 1911ರಲ್ಲಿ, ಮತ್ತೆ ಅದು ಹಾಗೆಯೇ ಮುಂದುವರೆದಿತ್ತು. ಪ್ರಶ್ನೆಯೇನೆಂದರೆ 1918ರಲ್ಲಿ ಸರ್.ಎಂ.ವಿ.ರವರು ರಾಜೀನಾಮೆ ಇತ್ತಾಕ್ಷಣ ಕಾಮಗಾರಿ ನಿಂತು ಹೋಯಿತೆ ಎಂಬುದು? ಖಂಡಿತ ಇಲ್ಲ! ಯಾಕೆಂದರೆ ಅದರ ನಿಜವಾದ ನಿರ್ಮಾತೃ ನಾಲ್ವಡಿಕೃಷ್ಣರಾಜ ಒಡೆಯರ್ರವರು ಅದಕ್ಕಾಗಿ ಉಸಿರು ಹಿಡಿದುಕೊಂಡು ಇದ್ದರಲ್ಲ!
ಈ ಸಂಧರ್ಭದಲಿ ಮತ್ತೊಂದು ಆಕ್ಷೇಪಣೆ ಅದೇನೆಂದರೆ ಕೆ.ಆರ್.ಎಸ್ ನಿರ್ಮಾಣವೇ ವಿಶ್ವೇಶ್ವರಯ್ಯನ್ನವರ ಧ್ಯೇಯವಾಗಿದ್ದರೆ ಅವರು ರಾಜೀನಾಮೆ ನೀಡಬಾರದಿತ್ತು! ಕೆ.ಆರ್.ಎಸ್ ಕಟ್ಟಿಯೇ ನಾನು ಹೋಗುವುದು ಎಂದು ಅವರು ಹೇಳಬೇಕಿತ್ತು! ಊಹ್ಞೂಂ, ಅದ್ಯಾವುದೂ ನಡೆದಿಲ್ಲ! ವಿಶ್ವೇಶ್ವರಯ್ಯನವರು ರಾಜೀನಾಮೆ ಇತ್ತು ಹೋದರು ಜಲಾಶಯದ ಕಾಮಗಾರಿ ಅದರ ಪಾಡಿಗೆ ಅದು ನಡೆದಿತ್ತು!
ಈ ನಿಟ್ಟಿನಲಿ ವಿಶ್ವೇಶ್ವರಯ್ಯನವರ ರಾಜೀನಾಮೆಯ ನಂತರ ಅವರು ನಂತರದ ದಿವಾನರುಗಳಿಗೆ ಸಹಾಯಕರಾದದ್ದಾಗಲಿ ಸಲಹೆಗಾರರಾದದ್ದಾಗಲಿ ಎಂಥದ್ದು ಇಲ್ಲ! ಕಡೆ ಪಕ್ಷ ಅಲ್ಲಿ ಗಾರೆ ಕೆಲಸ ಮಾಡುತ್ತಿದ್ದವರಿಗೆ ಮೇಸ್ತ್ರಿಯಾಗಿಯಾದರೂ ಅವರಿದ್ದರೆ? ಉಹ್ಞೂಂ, ಅದೂ ಇಲ್ಲ! ಹಾಗಿದ್ದರೆ ಅದರ ನಿರ್ಮಾಣದ ಶ್ರೇಯಸ್ಸು ಅವರಿಗ್ಹೇಗೆ ಸಂದಿತು ಎಂಬುದು? ಯಾಕೆಂದರೆ ಅವರು ರಾಜೀನಾಮೆ ನೀಡಿದ 14 ವರ್ಷಗಳ ನಂತರ ಅಂದರೆ 1932 ರಲ್ಲಿ ಕಾಮಗಾರಿ ಮುಗಿದದ್ದು. ಅಂದಹಾಗೆ ಅಗಲೂ ಕೂಡ ನಾಲ್ವಡಿಯವರು ರಾಜರಾಗಿ ಮುಂದುವರಿದಿದ್ದರು ಮತ್ತು ತಾವು ಪ್ರಾರಂಭಿಸಿದ ಯೋಜನೆಯನ್ನು ತಾವೇ ತಮ್ಮ ಕೈಯಾರ ಉದ್ಘಾಟಿಸಿದರು.
ದುರಂತವೆಂದರೆ ಅದರ ಶ್ರೇಯಸ್ಸು ಅವರಿಗೆ ಸಲ್ಲಲಿಲ್ಲ! ಅವರ ಕೈ ಕೆಳಗೆ ವೇತನಕ್ಕಾಗಿ ದುಡಿದವರೊಬ್ಬರಿಗೆ ಅದು ಸಂದಿತು! ಸತ್ಯ ಹೀಗಿರುವಾಗ, ಇತಿಹಾಸದಲ್ಲಿ ನಾಲ್ವಡಿಯವರಿಗೆ ಘಟಿಸಿರುವ ಇಂತಹ ಘೋರತೆಗೆ ಯಾರು ಹೊಣೆ? ನಮ್ಮ ಕಣ್ಣೆದುರೇ ಒಬ್ಬ ಶ್ರೇಷ್ಠ ರಾಜನಿಗೆ ಅವನ ಸಾಧನೆಯ ಶ್ರೇಷ್ಠತೆ ಧಕ್ಕಲಿಲ್ಲವೆಂದರೆ? ಹಾಗಿದ್ದರೆ ತನ್ನ ತನು ಮನ ಧನವನ್ನೆಲ್ಲ ಧಾರೆ ಎರೆದು ಆತ ಮಾಡಿದ ತ್ಯಾಗಕ್ಕೆ ಬೆಲೆಯಾದರೂ ಎಲ್ಲಿದೆ? ನಾಲ್ವಡಿಯವರಿಗೆ ಯಾರು ಇಂಥ ದ್ರೋಹ ಎಸಗಿದ್ದು? ವಿಶ್ವೇಶ್ವರಯ್ಯನವರಂತು ಖಂಡಿತ ಅಲ್ಲ. ಕಪೋಲಕಲ್ಪಿತ ಕಥೆ ಕಟ್ಟಿದ ಅವರ ಅನುಯಾಯಿಗಳು. ಹಾಗೆ ಬಂಗಾರ ಮನುಷ್ಯ ಚಿತ್ರದಲ್ಲಿ “ಕಾವೇರಿಯನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮಪಡದಿದ್ದರೆ..” ಎಂಬ ಅಂತಹದ್ದೊಂದು ಆಘಾತಕಾರಿ ಸಾಹಿತ್ಯ ಬರೆಸಿದ ಆ ನಿರ್ಮಾಪಕ ಹಾಗು ಬರೆದ ಆ ಕವಿ!
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ1 day ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ