ದಿನದ ಸುದ್ದಿ
ಮಹೇಂದ್ರ ಎಂಬ ಅಂಗುಲಿಮಾಲ
- ಯೋಗೇಶ್ ಮಾಸ್ಟರ್
ಯಾವ ಶಕ್ತಿಗಳು ರಾಷ್ಟ್ರ, ಸಂಸ್ಕೃತಿ, ಧರ್ಮ ಎಂದು ದೇಶದ ಏಕತೆ ಮತ್ತು ಸೌಹಾರ್ದತೆಯ ಮೇಲೆ ದಾಳಿ ಮಾಡುತ್ತಿದ್ದವೋ, ಅದೇ ಶಕ್ತಿಗಳ ಭಾಗವಾಗಿದ್ದ ತನ್ನ ಈ ಶಕ್ತಿ ವಿಧ್ವಂಸಕವಾಗಕೂಡದು ಮತ್ತು ರಚನಾತ್ಮಕವಾಗಬೇಕು ಎಂಬ ಜ್ಞಾನೋದಯ ಪಡೆದುಕೊಂಡ ವ್ಯಕ್ತಿ ಮಹೇಂದ್ರ ಕುಮಾರ್. ಆ ಜ್ಞಾನೋದಯವನ್ನು ಮತ್ತು ತನ್ನದಂತೆಯೇ ಇತರರದೂ ಜೀವ ಎಂದು ಪ್ರಜ್ಞೆ ಪಡೆದುಕೊಂಡ ವ್ಯಕ್ತಿ ಆ ಪ್ರಜ್ಞೆಯನ್ನು ತನ್ನ ಸಹಜೀವಿಗಳಿಗೆ ಹಂಚಿಕೊಳ್ಳುತ್ತಾ ಶಕ್ತಿಯು ನಕಾರಾತ್ಮಕವಾಗುವ ಬದಲು ರಚನಾತ್ಮಕವಾಗಿ ಸಮಾಜದಲ್ಲಿ ಬಳಕೆಯಾಗಬೇಕು ಎಂದು ಬಯಸುತ್ತಾ, ಕೆಲಸ ಮಾಡುತ್ತಿದ್ದರು. ಇಂತಹ ಪ್ರಜ್ಞಾವಂತ ಜೀವಿ ಇಷ್ಟುಬೇಗ ಬದುಕಿನಿಂದ ವಿಮುಖವಾಗಿದ್ದು ನಿಜಕ್ಕೂ ಜನಪರ ಹೋರಾಟಕ್ಕೆ ಆದ ಅನ್ಯಾಯವೇ.
ಬಜರಂಗದಳದ ತಂಡದಿಂದ ತನ್ನ ಅರಿವಿನಿಂದ ಹೊರಗೆ ಬಂದ ಈ ಅಂಗುಲಿಮಾಲ ಶರಣಾಗಿದ್ದು ಮನುಷ್ಯ ಪ್ರೀತಿಗೆ. ಇಂಥಾ ಸಮಯದಲ್ಲಿ ನಮಗೆ ಪೂರಕ ಶಕ್ತಿಯಾಗುವಂತೆ ಇದ್ದ ಮಹೇಂದ್ರ ಕುಮಾರ್ ಇನ್ನಿಲ್ಲ ಎಂಬುದನ್ನು ಅರಿಗಿಸಿಕೊಳ್ಳಲು ಕಷ್ಟವಾದರೂ ನಿಜ. ಮಹೇಂದ್ರ ಕುಮಾರ್ ಇನ್ನಿಲ್ಲ ಎಂಬ ಆಘಾತಕರ ಸುದ್ಧಿಯನ್ನು ನಾನು ನಂಬಲಾಗದೇ ಅವರಿವರಿಗೆ ಫೋನ್ ಮಾಡಿ ನಿಜವೆಂದು ಹೇಳಿದರು. ಆದರೆ ನಂಬಲು ಈಗಲೂ ಸಿದ್ಧನಿಲ್ಲ.
ಯುವಶಕ್ತಿಯನ್ನು ಜೀವಪರವಾದ ಮತ್ತು ಸಮಾಜಮುಖಿಯಾದ ದಾರಿಯಲ್ಲಿ ನಡೆಸುತ್ತಾ ಮನುಷ್ಯಪ್ರೇಮದ ಗುರಿಗೆ ಒಯ್ಯಲು ಸಾಂಘಿಕವಾಗಿ ಶ್ರಮಿಸುತ್ತಿದ್ದ ಮಹೆಂದ್ರಕುಮಾರ್ ಗೆ ಬಹಳ ಸಂಕಟದಿಂದ ಅಂತಿಮ ವಿದಾಯಗಳನ್ನು ಹೇಳುತ್ತಿದ್ದೇನೆ. ಮಹೇಂದ್ರ ಕುಮಾರ್ ನನಗೆ ಇತ್ತೀಚೆಗೆ ತಿಮ್ಮಿಯ ಬಗ್ಗೆ ಮಾಡಿದ್ದ ಕರೆ ಕೊನೆಯದಾಗಬಹುದೆಂದು ನಾನು ಹೇಗೆ ಕಲ್ಪಿಸಿಕೊಳ್ಳಲು ಸಾಧ್ಯ?
ತಿಮ್ಮಿಯ ಮೇಲಿನ ನಮ್ಮ ಪ್ರೀತಿಯನ್ನು ಮತ್ತು ನಮ್ಮ ಕುಟುಂಬದಲ್ಲಿ ಅದು ಪಡೆದುಕೊಂಡಿರುವ ಸ್ಥಾನವನ್ನು ಅದು ಬಂದ ಪ್ರಾರಂಭದ ದಿನಗಳಲ್ಲೇ ಗಮನಿಸಿದ್ದ ಮಹೇಂದ್ರ ಕುಮಾರ್ “ಒಬ್ಬರು ಒಂದು ಪ್ರಾಣಿಯನ್ನು ತಮ್ಮ ಪ್ರೀತಿಯ ಜೀವ ಎಂದು ಮನೆಯಲ್ಲಿ ಸಾಕುತ್ತಿರುವಾಗ, ಮುದ್ದಿಸುತ್ತಿರುವಾಗ ಅದನ್ನು ಕೊಯ್ಯುವ ತಿನ್ನುವ ಬಗ್ಗೆಯೇ ನಾವು ಪೋಸ್ಟ್ ಮಾಡುತ್ತಿದ್ದರೆ ಅದೆಷ್ಟು ಕ್ರೂರ.
ಅದನ್ನು ಮುದ್ದಿನ ಪ್ರಾಣಿ ಮತ್ತು ಮನೆಯ ಸದಸ್ಯರನ್ನಾಗಿ ಮಾಡಿಕೊಂಡಿರುವ ಮನಸ್ಸಿಗೆ ಅದೆಷ್ಟು ನೋವಾಗುವುದಿಲ್ಲ! ಇದು ತಮಾಷೆ ಅಲ್ಲ ಮೇಷ್ಟೇ. ತಮಾಷೆಗೆ ನಿಮ್ಮ ಮನೆ ಸದಸ್ಯನ ಕುಯ್ದುಕೊಂಡು ತಿಂತೀನಿ ಅಂತ ಹೇಳ್ತಾರಾ? ಇವರಿಗೇನು ಇಷ್ಟು ಮಾತ್ರ ಗೊತ್ತಾಗುವುದಿಲ್ಲವಾ? ಅವರ ಪ್ರೀತಿಯ ಮತ್ತು ಮನೆಯ ಸದಸ್ಯರಲ್ಲಿ ಒಂದಾಗಿರುವ ಜೀವವನ್ನು ಕೊಲ್ಲುವ, ಮಸಾಲೆ ಅರೆಯುವ, ತಿನ್ನುವ ಮಾತಾಡಿದರೆ ನಿಮ್ಮ ಮನಸಿಗೆ ಅದೆಷ್ಟು ನೋವಾಗುವುದಿಲ್ಲ?” ಎಂದು ನನಗೆ ಫೋನ್ ಮಾಡಿಯೇ ಮಾತಾಡಿದ್ದರು. ಇದೇ ನನಗೆ ಅವರು ಮಾಡಿದ್ದ ಕೊನೆಯ ಕರೆ.
ಜೀವಕ್ಕೆ ಮತ್ತು ಜೀವನಕ್ಕೆ ಬೆಲೆಯಿಲ್ಲದಂತೆ ವರ್ತಿಸುವ, ಪ್ರೀತಿ ಪ್ರೇಮವನ್ನು ಲವ್ ಜಿಹಾದ್ ಎಂದು ದಾಳಿ ಮಾಡುವ ಮತೋನ್ಮತ್ತ ಸಂಘಗಳ ಹಿನ್ನೆಲೆಯಿಂದಲೇ ಬಂದ ವ್ಯಕ್ತಿ ಒಂದು ಕೋಳಿಯ ಜೀವಕ್ಕೂ ಮರುಗುವಷ್ಟು, ಅದರೊಂದಿಗೆ ಸಂಬಂಧಹೊಂದಿರುವವರ ಪ್ರೀತಿಯನ್ನು ಆದರಿಸುವಷ್ಟು ಕಾಳಜಿಯನ್ನು ತೋರುತ್ತಿದ್ದರೆಂದರೆ, ಅವರು ತಮ್ಮ ಜೊತೆಗೆ ಇದ್ದ ಯುವಕರಲ್ಲಿ ಇನ್ನೆಷ್ಟರ ಮಟ್ಟಿಗೆ ಜೀವಪರ ಸಂವೇದನೆಯನ್ನು ಪ್ರೇರೇಪಿಸುತ್ತಿದ್ದರು ಎಂದು ಆಲೋಚಿಸುತ್ತಿದ್ದೆ.
ನಮ್ಮ ಧ್ವನಿ ಎಂದು ತನ್ನ ಜೀವಪರ ದನಿಗೆ ಸಾಂಸ್ಥಿಕ ರೂಪಕೊಟ್ಟು ಯುವಕರಿಗೆ ಸಮಾಜಮುಖಿಯಾಗುವಂತಹ ತರಬೇತಿಗಳನ್ನು ಕೊಡುತ್ತಿದ್ದರು. ಈ ತರಬೇತಿ ಶಿಬಿರಗಳಲ್ಲಿ ಪರಿಣಿತರಿಂದ, ಪ್ರಸಿದ್ಧರಿಂದ ಹೋರಾಟಗಾರರಿಗೆ ನೈತಿಕತೆ, ತಾತ್ವಿಕತೆ ಮತ್ತು ತಾಂತ್ರಿಕತೆಗಳ ಶಿಕ್ಷಣ ಕೊಡಿಸುವ ಕೆಲಸವಾಗುತ್ತಿತ್ತು. ನಮ್ಮ ಧ್ವನಿಯಲ್ಲಿ ಅನುಯಾಯಿಗಳನ್ನು ಬೆನ್ನಿಗಿಟ್ಟುಕೊಳ್ಳುವ ಇರಾದೆ ಇಲ್ಲದೇ ನಾಯಕರನ್ನು ತಯಾರುಮಾಡುವ, ಜನರನ್ನು ಮುನ್ನಡೆಸಲು ಮುಂದಾಳುಗಳನ್ನು ರೂಪಿಸುವ ಆಶಯವನ್ನು ಒಬ್ಬ ಸಂಪನ್ಮೂಲ ವ್ಯಕ್ತಿಯಾಗಿ ಹತ್ತಿರದಿಂದ ಬಲ್ಲೆ.
ಮತ್ತೆ ಸಿಗೋಣ ಎಂದು ಕೊಟ್ಟ ಮಾತನ್ನು ಮುರಿದಿದ್ದು ಅಕ್ಷಮ್ಯ ಮತ್ತು ಸಂಕಟ. ವಿದಾಯ ಹೇಳುವ ಮನಸ್ಸಿಲ್ಲ ಮಹೇಂದ್ರ. ನೀವು ನನ್ನ ಭರವಸೆಗಳನ್ನು ಈಡೇರಿಸದೇ, ನೀವು ಕಂಡ ಸಮಸಮಾಜದ ಕನಸನ್ನು ಸಂಘಾಂತರವಾಗಿ ಬರುವ ಮನಸುಗಳಿಗೆ ಧಾರೆಯೆರೆಯದೇ ಮತ್ತು ಈ ಯುವಸಮಾಜಕ್ಕಾಗಿ ಕೊಟ್ಟ ಹಲವು ಮಾತುಗಳನ್ನು ಪೂರೈಸದೇ ಹೋಗುವುದನ್ನು ಹೇಗೆ ಭರಿಸಲಿ?
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು