ದಿನದ ಸುದ್ದಿ
ಇವರ ವಿವೇಕವಿಲ್ಲದ ವಿದ್ಯೆಗೆ ಬೆಂಕಿ ಬಿತ್ತು….ಛೇ !
- ಹಿರಿಯೂರು ಪ್ರಕಾಶ್
ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಒಂಥರಾ ವೇಸ್ಟ್ ಪೇಪರ್ ಇದ್ದಂತೆ ಕಸದ ಬುಟ್ಟಿಗೂ ಅನ್ ಫ಼ಿಟ್ !
ಈ ವಿಷಯ ಈಗ್ಯಾಕೆ ಬಂತು ಅಂತೀರಾ..??
ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಇಬ್ಬರು ಸುಶಿಕ್ಷಿತ ಭೋಧಕ ದಂಪತಿಗಳು ಪರಾಕಾಷ್ಠೆಯ ಮೂಢನಂಬಿಕೆಗೆ ಮರುಳಾಗಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೇ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಭತ್ಸ ಘಟನೆಯನ್ನು ನೋಡಿದಾಗ ನಾನು ಮೇಲೆ ಉಲ್ಲೇಖಿಸಿರುವ ಮಾತುಗಳ ಸತ್ಯಾಸತ್ಯತೆ ತಿಳಿಯುತ್ತದೆ.
ಎಂತಹಾ ಪರಮ ನೀಚರು ಈ ಜನ ! ತಂದೆಯಾದ ಪುರುಷೋತ್ತಮ್ ನಾಯ್ಡು ಮದನಪಲ್ಲಿಯ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೆಯೇ ತಾಯಿಯಾದ ಪದ್ಮಜಾ ಸಹಾ ಗಣಿತದಲ್ಲಿ ಗೋಲ್ಡ್ ಮೆಡಲ್ ಪಡೆದ ಶಿಕ್ಷಕಿ ಹಾಗೂ ವೈಸ್ ಪ್ರಿನ್ಸಿಪಾಲ್ ಅಂತೆ. ಈ ನರಾಧಮರ ನೀಚ ಕೃತ್ಯಕ್ಕೆ ಕಾರಣವೆಂದರೆ, ಮೊನ್ನೆ ಭಾನುವಾರದಂದು ಕಲಿಯುಗ ಅಂತ್ಯವಾಗಿ ಮಾರನೆಯ ದಿನವೇ ಸತ್ಯಯುಗ ಆರಂಭವಾಗಿ ಆ ದಿನವೇ ತಮ್ಮ ಮಕ್ಕಳು ಮರುಹುಟ್ಟು ಪಡೆಯಲಿದ್ದಾರೆಂದು ಯಾವನೋ ನಫ಼್ತಟಾಲ್ ನಾಲಾಯಕ್ ನನ್ಮಗ ಹೇಳಿದ್ದ ಮೂಢನಂಬಿಕೆಯ ಭವಿಷ್ಯವನ್ನು ನಂಬಿದ ಈ ಅಯೋಗ್ಯ ಪೇರೆಂಟ್ಸ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಮನೆಯ ದೇವರಕೋಣೆಯಲ್ಲಿ ವಿವಸ್ತ್ರಗೊಳಿಸಿ ತ್ರಿಶೂಲದಿಂದ ಹಾಗೂ ಡಂಬಲ್ಸ್ನಿಂದ ಕೊಚ್ಚಿ ಕೊಂದಿದ್ದಾರೆಂದು ಆನಂತರ ಶವಗಳ ಮುಂದೆ ಅವರ ತಾಯಿ ನರ್ತಿಸಿದ್ದಾರೆಂದೂ ವರದಿಯಾಗಿದೆ. ಇಷ್ಟಾದ ಮೇಲೂ ಕಿಂಚಿತ್ತೂ ಪಾಪ ಪ್ರಜ್ಞೆ ಯಿರದ ಈ ಪಾಪಿಗಳು ಪೋಲೀಸರ ಮುಂದೆಯೂ ತಮ್ಮ ಮಕ್ಕಳಿಬ್ಬರೂ ಮರುಹುಟ್ಟು ಪಡೆದು ಬರುತ್ತಾರೆಂದು ಹೇಳಬೇಕಾದರೆ ಹಾಗೂ ಪೋಲೀಸರು ಇನ್ನರ್ಧ ಘಂಟೆ ತಡವಾಗಿ ಬಂದಿದ್ದರೆ ಮಕ್ಕಳು ಬದುಕಿಬರುತ್ತಿದ್ದರೆಂದೂ ತಾನು ಶಿವನ ಅವತಾರವೆಂದೂ ಬಡಬಡಿಸಬೇಕಾದಲ್ಲಿ ಇವರು ಇನ್ನೆಂತಹಾ ಮೂಢನಂಬಿಕೆಯ ಜಗ ಭಂಡರಿರಬಹುದು ?? ಎಲ್ಲಕ್ಕಿಂತ ವಿಪರ್ಯಾಸವೆಂದರೆ ತಂದೆಯಾದವನು ವಿಜ್ಞಾನದ ವಿಷಯ ಭೋದಿಸುವವನಾದರೆ ತಾಯಿ ಗಣಿತದ ಶಿಕ್ಷಕಿ !ಈ ದಂಪತಿಗಳು ಅಲ್ಲಿನ ಆಧ್ಯಾತ್ಮಿಕ ಗುರು ಮೆಹರ್ ಬಾಬಾನ ‘ಅನುನಾಯಿ”ಗಳಂತೆ !
ಈ ಘೋರ ಕೃತ್ಯಕ್ಕೆ ಬಲಿಯಾದ ಅಮಾಯಕ ಹೆಣ್ಣುಮಕ್ಕಳಾದ ಅಲೆಖ್ಯಾ ಹಾಗೂ ಸಾಯಿ ದಿವ್ಯಾ ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿದ್ದರೂ ಲಾಕ್ ಡೌನ್ ಕಾರಣದಿಂದ ತಂದೆ ತಾಯಿ ಜೊತೆಯಲ್ಲಿ ಇರಬೇಕಾಗಿದ್ದೇ ಮುಂದೆ ಅವರ ಹೀನಾಯ ಸಾವಿಗೆ ಕಾರಣವಾಗಬಹುದೆಂಬ ಅರಿವು ಅವರಿಗೆ ಇರಲಿಲ್ಲ ! ಈ ಜನ್ಮದಲ್ಲೇ ಅವರನ್ನು ಸುಖವಾಗಿರಿಸುವಂತಹಾ ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಸಹಜ ಯೋಚನೆ ಬಿಟ್ಟು, ಇಲ್ಲದ ಸತ್ಯಯುಗದ ಹಿಂದೆ ಬಿದ್ದು ಇಂತಹಾ ಬರ್ಬರ ಕೃತ್ಯವೆಸಗಿರುವ ಈ ನರರಕ್ಕಸರ ತಲೆಯೊಳಗೆ ಅವನ್ಯಾವನೋ ಬೇಕೂಫ಼ಾ ಇನ್ನೆಂತಹಾ ನಂಬಿಕೆಯ ವಿಷ ತುಂಬಿದ್ದಿರಬಹುದು..??
ಈಗ ಹೇಳಿ ! ಕಲಿಯುಗದಲ್ಲಿ ಇಂತಹಾ ಘನಕಾರ್ಯ ಮಾಡಿದ ವಿದ್ಯಾವಂತ ದಂಪತಿಗಳನ್ನು ಯಾವ ವರ್ಗಕ್ಕೆ ಸೇರಿಸುತ್ತೀರಿ ?? ಇವರಂತಹಾ ಅವಿವೇಕಿಗಳು, ಮೂಢರು, ದುಷ್ಟರು, ಅಯೋಗ್ಯರು, ಕ್ರೂರಿಗಳು, ನಿಷ್ಕರುಣಿಗಳು, ಪಾಪಿಗಳು, ಸ್ವಾರ್ಥಿಗಳು, ಎಜುಕೇಟೆಡ್ ಫ಼ೂಲ್ ಗಳು, ಪರಮ ಪಾಪಿಷ್ಠರು…. ಮತ್ತಾರಾದರೂ ಇದ್ದಾರೆಯೇ ?? ತಾವೇ ಜನ್ಮಕೊಟ್ಟು ಸಾಕಿ ಬೆಳೆಸಿದ ಮಕ್ಕಳನ್ನು, ಅದರಲ್ಲೂ ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಈ ರೀತಿ ಮೂಢನಂಬಿಕೆಗೆ ಬಲಿಯಾಗಿ ಅಮಾನವೀಯವಾಗಿ ಬಲಿ ತೆಗೆದುಕೊಂಡಿರುವ ಘಟನೆಯನ್ನು ಹಿಂದೆ ಎಂದಾದರೂ ಕೇಳಿದ್ದೀರಾ… ನೋಡಿದ್ದಿರಾ..! ಇದು ನನಗೆ ತಿಳಿದಂತೆ ಇಡೀ ನಾಡಿನಲ್ಲೇ ಅಪರೂಪದಲ್ಲಿ ಅಪರೂಪದ್ದು !
ಇವರ ಮನೆ ಕಾಯ್ ಹೋಗ ! ಕಲಿಯುಗ ಮುಗಿದು ಮತ್ತೇ ಸತ್ಯಯುಗದಲ್ಲಿ ಅದೇ ಮಕ್ಕಳು ಹುಟ್ಟುತ್ತಾರೆಂಬ ಇವರ ಕ್ಷುದ್ರ ನಂಬಿಕೆಯೇ ಅತ್ಯಂತ ಡೆಂಜರಸ್ ! ಹೇಳುವ ಮುಂಡೆಗಂಡರಿಗಂತೂ ಮೂರುಕಾಸಿನ ಬುದ್ದಿ ಇಲ್ಲ. ಕಾಸಿಗಾಗಿ ಏನೆಲ್ಲಾ ಕಥೆ ಹೇಳುತ್ತಾರೆ. ಆದರೆ ಕಾಲೇಜಿನಲ್ಲಿ ಪಾಠ ಮಾಡುವ, ಅದರಲ್ಲೂ ವಿಜ್ಞಾನ ಭೋಧಿಸುವ , ಅತ್ಯಂತ ಸುಶಿಕ್ಷಿತ ವರ್ಗಕ್ಕೆ ಸೇರಿದ ದಂಪತಿಗಳು ಇಂತಹವರ ಮಾತುಗಳನ್ನು ಕೇಳಿ ಈ ರೀತಿಯ ಭೀಭತ್ಸ ಕೃತ್ಯಕ್ಕೆ ಕೈ ಹಾಕುತ್ತಾರೆಂದರೆ ಅದಕ್ಕಿಂತ ದುರಂತ ಮತ್ತೊಂದಿದೆಯೇ ? ಅಲ್ಲಿಗೆ ಕಲಿತ ವಿದ್ಯೆಗೂ ತಲೆಯೊಳಗಿರಬೇಕಾದ ಕನಿಷ್ಠ ವಿವೇಕಕ್ಕೂ ಸಂಬಂಧವೇ ಇಲ್ಲದಂತಾಯಿತು !
ಮರೆಯುವ ಮುನ್ನ
ಮನುಷ್ಯ ಏನೆಲ್ಲಾ ಓದಿರಬಹುದು, ಎಷ್ಟೆಷ್ಟು ಡಿಗ್ರಿಗಳನ್ನು ಮೈಗೆಲ್ಲಾ ಮೆತ್ತಿಕೊಂಡಿರಬಹುದು, ಆಕಾಶದಲ್ಲೇ ಸದಾ ಹಾರಾಡುತ್ತಿರಬಹುದು, ಕರಗದಷ್ಟು ಆಸ್ತಿಯನ್ನೇ ಸಂಪಾದಿಸಿರಬಹುದು ಆದರೆ ಮನುಷ್ಯ ಅಂದಮೇಲೆ ಇರಲೇಬೇಕಾದ ಕಾಮನ್ ಮಿನಿಮಮ್ ಕಾಮನ್ ಸೆನ್ಸ್ ಅವನಲ್ಲಿ ಇಲ್ಲವೆಂದಮೇಲೆ ಅವನ ಓದಿಗೆ ವಿದ್ಯೆಗೆ ಬೆಂಕಿಬಿತ್ತು ! ಹೆತ್ತಮಕ್ಕಳನ್ನೇ ಈ ಲೆವೆಲ್ ನಲ್ಲಿ ಭಯಂಕರವಾಗಿ ಕೊಲೆ ಮಾಡುವ ಮನಸ್ಥಿತಿಯಿರುವವರು ತಮ್ಮ ವಿಧ್ಯಾರ್ಥಿಗಳಿಗೆ ಯಾವ ನೈತಿಕತೆಯ ಪಾಠವನ್ನು ಹೇಳಿಕೊಡಬಲ್ಲರು.? ಓದಿದ ಓದಿಗೂ, ಕಲಿತ ವಿದ್ಯೆಗೂ, ಮಾಡುವ ವೃತ್ತಿಗೂ ಈಗ ಅವರು ಎಸಗಿರುವ ಹೀನ ಕೃತ್ಯಕ್ಕೂ ಏನಾದರೂ ತಾಳೆ ಇದೆಯೇ ? ಇಂತಹಾ ಘಟನೆಗಳನ್ನೆಲ್ಲಾ ನೋಡಿದಾಗ ಮನುಷ್ಯನಷ್ಟು ವಿಷಕಾರಿ ಅಪಾಯಕಾರಿ ಜಂತು ಈ ಭೂಮಿಯಲ್ಲೇ ಇಲ್ಲವೇನೋ ಅನಿಸುತ್ತದೆ.
ಇಂತಹಾ ವಿಕ್ಷಿಪ್ತ ಮನಸ್ಥಿತಿಗೆ ಏನು ಕಾರಣವೋ ಗೊತ್ತಿಲ್ಲ. ಆದರೆ ಯಾವ್ಯಾವುದೋ ಹೆಸರಿನಲ್ಲಿ ಹುದುಗಿರುವ ಅತಿಯಾದ ಮೂಢನಂಬಿಕೆ , ಭ್ರಮಾತ್ಮಕ ಲೋಕ, ಮಾನವೀಯ ಮೌಲ್ಯಗಳ ಬೆಲೆಯರಿಯದ ಬದುಕು,
ಸ್ವಯಂಘೋಷಿತ ದೇವಮಾನವರು, ಬಾಬಾಗಳು , ಮಾಟ ಮಂತ್ರ ಮಾಡುವವರ ಮೇಲಿನ ಕುರುಡು ನಂಬಿಕೆ ಹಾಗೂ ಅಂತಹವರು ಹೇಳಿದ್ದೇ ವೇದವಾಕ್ಯವೆಂದು ನಂಬುವ ಅಜ್ಞಾನ…. ಈ ಎಲ್ಲವೂ ಕೆಲಮಟ್ಟಿಗೆ ಕಾರಣವಿರಲೂಬಹುದು..!
ಏನಾದರೂ ಇರಲಿ ! ಹೆತ್ತವರಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿ ನೆತ್ತರ ಮಡುವಲ್ಲಿ ಕೊನೆಯುಸಿರೆಳೆದ ಆ ಅಮಾಯಕ ಹೆಣ್ಣುಮಕ್ಕಳ ಆತ್ಮಕ್ಕೆ ಶಾಂತಿ ಕೋರುವುದು ಹಾಗೂ ಇಂತಹಾ ದುರ್ಘಟನೆಗಳು ಮತ್ತೇ ನೆಡೆಯದಿರಲಿ ಎಂದು ಪ್ರಾರ್ಥಿಸುವುದೊಂದೇ ಉಳಿದಿರುವ ದಾರಿ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?