Connect with us

ದಿನದ ಸುದ್ದಿ

ಆತ್ಮೀಯ ಮುಸ್ಲಿಂ ಗೆಳೆಯರಿಗಾಗಿ, ಗೌರವಪೂರ್ವಕವಾಗಿ..!

Published

on

  • ವಿವೇಕಾನಂದ. ಹೆಚ್.ಕೆ.

ಹೌದು, ನಿಮಗೆ ತ್ರಿವಳಿ ತಲ್ಲಾಖ್ ವಿಷಯದಲ್ಲಿ, ಬಾಬರಿ ಮಸೀದಿ ವಿವಾದದ ತೀರ್ಪಿನ ವಿಷಯದಲ್ಲಿ, ಗೋ ಮಾಂಸ ನಿಷೇಧದ ವಿಚಾರದಲ್ಲಿ, ಸಿಎಎ – ಎನ್ ಆರ್ ಸಿ ತಿದ್ದುಪಡಿಯಲ್ಲಿ ಒಟ್ಟಾರೆಯಾಗಿ ಭಾರತದ ಈಗಿನ ಸರ್ಕಾರದ ಧೋರಣೆಯ ಬಗ್ಗೆ ಅಸಮಾಧಾನ ಇರಬಹುದು ಅಥವಾ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅದರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಸಹ ಇತ್ತೀಚಿನ ವರೆಗೂ ನಡೆಯುತ್ತಿತ್ತು. ಅದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕು.

ಆದರೆ ಈ ನಡುವೆ ಅನಿರೀಕ್ಷಿತವಾಗಿ ಕೊರೋನಾ ವೈರಸ್ ಇಡೀ ದೇಶವನ್ನು ಆಕ್ರಮಿಸಿ ಜೀವ ಉಳಿಸಿಕೊಳ್ಳುವುದೇ ಒಂದು ದೊಡ್ಡ ಸಾಹಸವಾಗಿದೆ. ಜಾತಿ ಧರ್ಮ ಭಾಷೆ ಪಕ್ಷ ಪಂಥ ದೇವರು ಎಲ್ಲವೂ ಹಿನ್ನೆಲೆಗೆ ಸರಿದಿದೆ ಮತ್ತು ಸರಿಯಲೇಬೇಕು.

ಮಾಧ್ಯಮಗಳಲ್ಲಿ ಸ್ವಲ್ಪ ಪಕ್ಷಪಾತ, ದುಡುಕುತನ, ಅತಿರಂಜಿತ ವರದಿಗಳು ಇದೆ ಎಂದೇ ಭಾವಿಸಿದರೂ,ಇತರೆ ಧರ್ಮದ ಕೆಲವು ಕಾರ್ಯಕ್ರಮಗಳು ಸಹ ನಡೆದವು ಎಂಬುದು ನಿಜವಾದರೂ ಇಲ್ಲಿ ಯಾವುದೇ ನೆಪ ಹೇಳದೆ, ಯಾವುದೇ ಕಾರಣ ನೀಡದೆ ವೈದ್ಯಕೀಯ ಕ್ಷೇತ್ರದ ಸಲಹೆಯಂತೆ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳನ್ನು ಸಂಪೂರ್ಣ ಬೆಂಬಲಿಸುವ ಕರ್ತವ್ಯ ಮತ್ತು ಜವಾಬ್ದಾರಿ ಎಲ್ಲರಿಗೂ ಇದೆ.

ವಿರೋಧಿ ಗುಂಪಿನವರು ಒಂದಷ್ಟು ರಾಜಕೀಯ ಗೊಳಿಸುವುದು, ಪ್ರಚೋದಿಸುವುದು ಇದ್ದರೂ ಅದಕ್ಕೆ ಈಗ ಹೆಚ್ಚಿನ ಮಹತ್ವ ಕೊಡಬಾರದು. ಈ ದೇಶದ ಹಕ್ಕು ಮತ್ತು ಕರ್ತವ್ಯಗಳು ನಿಮಗೂ ಸಹ ಸಮ ಪ್ರಮಾಣದಲ್ಲಿ ಇದೆ. ಇದನ್ನು ಈಗ ಏಕೆ ಹೇಳಬೇಕಾಯಿತೆಂದರೆ ಮಸೀದಿಗಳಲ್ಲಿ ಈಗಲೂ ಸಾಮೂಹಿಕ ಪ್ರಾರ್ಥನೆಯ‌ ವರದಿಗಳು ಅಲ್ಲಲ್ಲಿ‌ ಕೇಳಿ ಬರುತ್ತಿರುವುದರಿಂದ.

ಇದು ಸಾವು ಬದುಕಿನ ಮತ್ತು ಹಸಿವು ಅಸ್ತಿತ್ವದ ಪ್ರಶ್ನೆ. ಇಡೀ ಭಾರತೀಯ ಜನ ಸಮುದಾಯ ಆತಂಕದಿಂದ ಇದ್ದು ಪ್ರತಿ ಕ್ಷಣವನ್ನೂ ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದೆ. ಈಗ ಇಡುವ ಪ್ರತಿ ಹೆಜ್ಜೆಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತದೆ ಮತ್ತು ಜನರ ಮನಸ್ಸಿನಲ್ಲಿ ಉಳಿಯುತ್ತದೆ.

ಈಗಾಗಲೇ ಮನಸ್ಸುಗಳು ಒಡೆದಿವೆ. ಎರಡೂ ಕಡೆ ಪ್ರಚೋದನಾತ್ಮಕ ಮಾತುಗಳು ಪರಿಸ್ಥಿತಿ ಕೈ ಮೀರುವಂತೆ ಮಾಡಿದೆ. ಧರ್ಮ, ರಾಜಕೀಯ ಮನೆಯೊಳಗೆ ಮನಸ್ಸುಗಳೊಳಗೆ ಬಂದಾಗಿದೆ. ಧರ್ಮಾಂಧತೆ ದೇಶವನ್ನು ಆಕ್ರಮಿಸಿಕೊಂಡಿದೆ. ಮೊದಲಿನಿಂದಲೂ ಇದ್ದ ಹಿಂದೂ ಮುಸ್ಲಿಂ ವೈಮನಸ್ಯ ಈಗ ಇನ್ನೂ ದೊಡ್ಡದಾಗಿದೆ.

ಮುಸ್ಲಿಂ ಭಾಂಧವರೆ ನಿಮ್ಮ ಆತ್ಮಾವಲೋಕನಕ್ಕಾಗಿ ಇತ್ತೀಚಿನ ಒಂದು ವರದಿ

38.40 ಲಕ್ಷ ಜನರ ಸಾವು. ಕೇವಲ 9 ವರ್ಷಗಳಲ್ಲಿ.2011 ರಿಂದ ಇಲ್ಲಿಯವರೆಗೆ.ಸಿರಿಯಾ ದೇಶದ ಆಂತರಿಕ ಯುದ್ಧದಿಂದಾಗಿ.ಗಂಡಸರೆಷ್ಟೋ, ಹೆಂಗಸರೆಷ್ಟೋ, ಮಕ್ಕಳೆಷ್ಟೋ,.ಯಾವ ಯಾವ ಭೀಕರ ರೀತಿಯಲ್ಲಿ ಯಾತನೆ ಅನುಭವಿಸಿ ಸತ್ತರೋ. ಬಹುತೇಕ ತಮ್ಮ ಅರ್ಧ ಆಯಸ್ಸನ್ನೂ ಮುಗಿಸದೇ ತೀರಿ ಹೋದರು.ಅವರನ್ನು ಅಲ್ಲಾ ಎಂಬ ದೇವರು ಸೃಷ್ಟಿಸಿದ್ದರು, ಇಸ್ಲಾಂ ಎಂಬ ಧರ್ಮ ಬೆಳೆಸಿತ್ತು, ಷಿಯಾ ಸುನ್ನಿ ಖುರ್ದ್ ಎಂಬ ಹೆಸರುಗಳು ವಿಭಜಿಸಿದ್ದವು ಎಂದು ನಂಬಲಾಗುತ್ತದೆ. ಆದರೆ ಯಾವುದೂ ಅವರ ರಕ್ಷಣೆಗೆ ಬರಲಿಲ್ಲ, ಕೇವಲ ಸುಮಾರು 1.80 ಕೋಟಿ ಜನಸಂಖ್ಯೆಯ ದೇಶದಲ್ಲಿ ಘರ್ಷಣೆಗೆ ಸತ್ತವರು 38.40 ಲಕ್ಷ ಜನರು.

ನನಗವರು ಮನುಷ್ಯರು ಮಾತ್ರ

ಸೃಷ್ಟಿಯಲ್ಲಿ ಗಂಡು ಹೆಣ್ಣಿನ ಮಿಲನದಿಂದ ಮತ್ತೊಂದು ಜೀವ ಜನ್ಮ ತಾಳುತ್ತದೆ.‌ಸಿರಿಯಾದಲ್ಲಿ ಮಗು ಜನಸಿದರೆ ಮುಸ್ಲಿಂ ಎನ್ನುತ್ತಾರೆ. ಇಂಗ್ಲೆಂಡ್ ನಲ್ಲಿ ಜನಸಿದರೆ ಕ್ರಿಶ್ಚಿಯನ್, ಇಸ್ರೇಲ್ ನಲ್ಲಿ ಯಹೂದಿ, ಜಪಾನ್ ನಲ್ಲಿ ಬೌದ್ದ, ಭಾರತದಲ್ಲಿ ಹಿಂದೂ ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ .ಈ ವ್ಯತ್ಯಾಸಗಳೇ ಮಾನವ ಕುಲಕ್ಕೆ ಶಾಪವಾಗಿ ಪರಿಣಮಿಸಿದೆ.

ಹಿಂದೆ ಕ್ರಿಶ್ಚಿಯನ್ ಧರ್ಮದ ಯೂರೋಪಿಯನ್ ದೇಶಗಳಲ್ಲೂ ಇದಕ್ಕಿಂತ ಭಯಂಕರ ಮಾನವ ಹತ್ಯಾಕಾಂಡಗಳು ನಡೆದಿವೆ.ಫ್ರೆಂಚ್‌ ಕ್ರಾಂತಿಯ ರಕ್ತಪಾತ, ಎರಡು ಮಹಾಯುದ್ಧಗಳು, ಇಟಲಿ ದಂಗೆ, ಹಿಟ್ಲರನ ಸಾವಿನ ಶಿಬಿರಗಳು, ರಷ್ಯಾ ದೌರ್ಜನ್ಯ ಎಲ್ಲವೂ ಇತಿಹಾಸದಲ್ಲಿ ದಾಖಲಾಗಿದೆ.

ಹಾಗೆಯೇ ಹಿಂದೂ ಜೀವನಶೈಲಿಯ ಭಾರತದಲ್ಲೂ ಹಿಂಸೆಯ ಪ್ರಮಾಣ ಕಡಿಮೆ ಏನಿಲ್ಲ. ಕ್ರಿಸ್ತ ಪೂರ್ವದಲ್ಲೇ ಬುದ್ದ ಮಹಾವೀರರು ಅಹಿಂಸೆಯ ಬಗ್ಗೆ ಗಂಭೀರವಾಗಿ ಮಾತನಾಡಿದ್ದಾರೆ ಎಂದರೆ ಆಗಲೇ ಹಿಂಸೆಯ ಪ್ರಮಾಣ ಎಷ್ಟಿತ್ತು ಎಂದು ಊಹಿಸಬಹುದು.

ಕಾರಣಗಳು ಏನೇ ಇರಲಿ
ಈ ಕ್ಷಣದಲ್ಲಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಆಪ್ಘನಿಸ್ತಾನ, ಯೆಮೆನ್, ಟರ್ಕಿ ಮುಂತಾದ ಇಸ್ಲಾಮಿಕ್ ದೇಶಗಳೇ ಹೆಚ್ಚು ಸಾವು ನೋವಿಗೆ, ಆಂತರಿಕ ಕಲಹಗಳಿಗೆ ತುತ್ತಾಗುತ್ತಿವೆ.

ಈಗ ಗಂಭೀರವಾಗಿ ಯೋಚಿಸುವ ಸಮಯ ಬಂದಿದೆ. ಎಲ್ಲಾ ಧರ್ಮಗಳ ಮೂಲ ಆಶಯ ಮೂಲೆಗುಂಪಾಗಿ ಕೇವಲ ಆಚರಣೆಗಳು ಮಾತ್ರ ಜಾರಿಯಲ್ಲಿವೆ. ಇದಕ್ಕೆ ಇಸ್ಲಾಂ ಸಹ ಹೊರತಲ್ಲ.

ಹೌದು, ಭಾರತೀಯ ಮುಸ್ಲಿಮರಲ್ಲಿ ಬಡತನ ಅಜ್ಞಾನ ಗಾಢ ಧಾರ್ಮಿಕ ನಂಬಿಕೆಗಳು ಮನೆ ಮಾಡಿವೆ. ಧರ್ಮ ಗುರುಗಳ ಮಾತಿಗೆ ಅತಿ ಹೆಚ್ಚಿನ ಮಹತ್ವ ನೀಡುತ್ತಾರೆ. ಪ್ರಚೋದನಕಾರಿಯಾಗಿ ಮಾತನಾಡುವ ಹಿಂದೂಗಳು ಸಹ ಇದನ್ನು ಗಮನಿಸಬೇಕು. ಆತಂಕದಿಂದ ಎಲ್ಲಾ ತಪ್ಪುಗಳನ್ನು ಒಂದು ಸಮುದಾಯದ ತಲೆಗೆ ಕಟ್ಟಬಾರದು. ಸಂಯಮ ಅಗತ್ಯ.

ವಿವೇಚನೆ ಅಗತ್ಯ. ಕರೋನ ಬಂದಿದೆ ಎಂಬ ಒಂದೇ ಕಾರಣದಿಂದ ದಿನ ಬೆಳಗಾಗುವುದರಲ್ಲಿ ಎಲ್ಲರಲ್ಲೂ ದಿಡೀರನೇ ಪ್ರಬುದ್ದತೆ ನಿರೀಕ್ಷಿಸಲಾಗುವುದಿಲ್ಲ. ಸಬ್ ಕಾ ಸಾಥ್ ಸಬ್ ವಿಕಾಸ್ ಕೇವಲ ಘೋಷಣೆಯಾಗಬಾರದು. ಅದು ನಡವಳಿಕೆಯಾಗಬೇಕು. ಮಾಧ್ಯಮಗಳಂತೆ ವಿವೇಚನಾರಹಿತವಾಗಿ ಕೂಗಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಬಾರದು. ಅದರಿಂದ ದೇಶಕ್ಕೆ ಅಪಾಯವೇ ಹೆಚ್ಚು.

ಎಲ್ಲಾ ಅಲ್ಪಸಂಖ್ಯಾತರಿಗೆ ಇರುವ ಅಭದ್ರತೆಯ ನಡುವೆಯೂ, ಮುಸ್ಲಿಂ ಸಮುದಾಯದಲ್ಲಿ ಪ್ರಗತಿಪರ ಚಿಂತನೆಗಳು ಸಮೂಹ ಪ್ರಜ್ಞೆಯಾಗಿ ಜಾಗೃತವಾಗಬೇಕು. ಧರ್ಮದ ಮೇಲಿನ ಅವಲಂಬಿನೆ ಕಡಿಮೆಯಾಗಬೇಕಿದೆ. ಅದಕ್ಕೆ ಹಿಂದೂಗಳು ಸಹ ಪ್ರೇರಣೆಯಾಗಬೇಕೆ ಹೊರತು ಪ್ರಚೋದಕರಾಗಬಾರದು. ಸುಮಾರು 18 ಕೋಟಿ ಜನಸಂಖ್ಯೆಯ ಒಂದು ಸಮುದಾಯವನ್ನು ಅಭದ್ರತೆಗೆ ತಳ್ಳಿ ದೇಶದ ಅಭಿವೃದ್ಧಿ ಶಾಂತಿ ಸಾಧ್ಯವೇ ಇಲ್ಲ.

ಎರಡೂ ಧರ್ಮಗಳಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ಪ್ರಚೋದನಾತ್ಮಕವಾಗಿದ್ದು ಇದೇ ಕಾರಣದಿಂದ ಧೈರ್ಯವಾಗಿ ಮಾತನಾಡುವ ಖಂಡಿಸುವ ಸತ್ಯವನ್ನು ಬಯಲಿಗೆ ಎಳೆಯುವ ಜನರು ಕಡಿಮೆಯಾಗಿದ್ದಾರೆ. ಧರ್ಮ ಒಂದು ಸೂಕ್ಷ್ಮ ವಿಷಯ ಎಂಬ ನೆಪದಿಂದ ಮಾತನಾಡಲು ಹೆದರುತ್ತಾರೆ. ತಮ್ಮ ತಮ್ಮ ‌ಧರ್ಮ ದೇವರು ಗ್ರಂಥಗಳಲ್ಲಿ ಅಡಗಿರುವವರನ್ನು ನಾಗರಿಕ ಪ್ರಜ್ಞೆಗೆ ಎಳೆದು ತರಬೇಕಿದೆ. ಇದು ತುಂಬಾ ಕಷ್ಟ. ಆದರೂ ಮನುಷ್ಯನ ಉಳಿವಿಗಾಗಿ ನಿಂತ ನೀರಾಗಿ ಕೊಳೆತು ನಾರುತ್ತಿರುವ ಧಾರ್ಮಿಕತೆಯನ್ನು ಬಯಲಿಗೆ ಎಳೆಯಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಭಯಂಕರ ಸ್ಥಿತಿ ತಲುಪುತ್ತದೆ. ಬಲವೇ ನ್ಯಾಯ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending