ರಾಜಕೀಯ
ಮೋದಿಯನ್ನು ಕಾಡುತ್ತಿದೆ ಮೈತ್ರಿಕೂಟ ಭೀತಿ
- ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಕೂಟ ರೂಪುಗೊಳ್ಳಲಿದೆ ಎಂಬ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮದ ಆಧಾರದಲ್ಲಿ ರಚನೆಗೊಳ್ಳುತ್ತದೆ. ಇಂತಹ ಒಂದು ಮೈತ್ರಿ ತನ್ನ ಜಾಗದಲ್ಲಿ ಅಧಿಕಾರಕ್ಕೆ ಬರಬಹುದು ಎಂಬ ಭೀತಿಯನ್ನೇ ಮೋದಿ ಮೈತ್ರಿಗಳ ವಿರುದ್ಧ ತನ್ನ ಆರ್ಭಟಗಳ ಮೂಲಕ ಪ್ರದರ್ಶಿಸುತ್ತಿದ್ದಾರೆ. ಆ ಭೀತಿಯ ಭೂತೋಚ್ಛಾಟನೆಗೆ ಅವರು ಪ್ರಯತ್ನಿಸುತ್ತಿದ್ದಾರೆ.
ಈ ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಮಹಾಗಟ್ಬಂಧನ್ ಅಥವ ಪ್ರತಿಪಕ್ಷಗಳ ಮೈತ್ರಿಯನ್ನು ಮಹಾಮಿಲಾವಟ್(ಮಹಾ ಕಲಸುಮೇಲೋಗರ) ಎಂದು ಅದರ ಮೇಲೆ ದಾಳಿ ನಡೆಸದ ದಿನವೇ ಇಲ್ಲ. ಪ್ರತಿಪಕ್ಷಗಳ ಮುಖಂಡರುಗಳು ಅಧಿಕಾರದಾಹ ತುಂಬಿದ ಸಮಯಸಾಧಕರ ಒಂದು ಪಡೆ ಎಂದು ವರ್ಣಿಸದ ದಿನವೇ ಇಲ್ಲ.
ಪ್ರಚಾರದ ಆರಂಭದಿಂದಲೂ, ಮೋದಿಯವರ ಭಾಷಣಗಳಲ್ಲಿ, ಮಹಾಮಿಲಾವಟ್ ಸರಕಾರ ಹೇಗೆ ಅಭಿವೃದ್ಧಿಗೆ ಕಂಟಕವಾಗುತ್ತದೆ, ರಾಷ್ಟ್ರೀಯ ಭದ್ರತೆಯನ್ನು ಖಾತ್ರಿಪಡಿಸಲಾರದ ಒಂದು ದುರ್ಬಲ ಸರಕಾರವಾಗುತ್ತದೆ, ಹೇಗೆ ಉತ್ತರ ಪ್ರದೇಶ ಮತ್ತು ಇತರೆಡೆಗಳಲ್ಲಿನ ಪ್ರತಿಪಕ್ಷಗಳ ಮೈತ್ರಿ ಮುಖಂಡರ ವೈಯಕ್ತಿಕ ಹಿತಗಳಿಗಾಗಿ ಅಧಿಕಾರವನ್ನು ಬಾಚಿಕೊಳ್ಳುವ ಒಂದು ನೀತಿವಿಹೀನ, ಸಮಯಸಾಧಕರ ಗುಂಪಷ್ಟೇ ಆಗಿದೆ, ಎಂಬುದೇ ನಿರಂತರವಾದ ರಾಗಾಲಾಪ.
ಪ್ರತಿಪಕ್ಷಗಳ ಮೈತ್ರಿಯ ಮೇಲೆ ಇಂತಹ ಒಂದು ಸತತ ದಾಳಿ, ತನ್ನ ಆಳ್ವಿಕೆ ಹೋಗಿ ಒಂದು ಮೈತ್ರಿ ಸರಕಾರ ಬರುವ ಸಂಭವವಿದೆ ಎಂಬ ನಿಜವಾದ ಭೀತಿಯನ್ನು ಮೋದಿ ಹೊಂದಿದ್ದಾರೆ ಎಂಬುದನ್ನು ಪ್ರಕಟಪಡಿಸುತ್ತದೆ.
1977ರಿಂದೀಚೆಗೆ, ಕೆಲವು ಅಪವಾದಗಳನ್ನು ಬಿಟ್ಟರೆ, ಮೈತ್ರಿ ಸರಕಾರಗಳು ಒಂದು ಸಾಮಾನ್ಯ ಸಂಗತಿಯಾಗಿ ಬಿಟ್ಟಿದೆ. ಮೋದಿ ವರ್ಣನೆಗೆ ತದ್ವಿರುದ್ಧವಾಗಿ ಮೈತ್ರಿ ಸರಕಾರಗಳು ಸ್ಥಿರ ಸರಕಾರಗಳನ್ನು ಕೊಟ್ಟಿವೆ ಮತ್ತು ಅಭಿವೃದ್ಧಿ ಕುರಿತಂತೆ ಅವುಗಳ ದಾಖಲೆ ಬೇರೆ ಸರಕಾರಗಳಿಗಿಂತ ಭಿನ್ನವಾಗಿಯೇನೂ ಇಲ್ಲ, ಎಲ್ಲವೂ ಬಂಡವಾಳಶಾಹಿ ಅಭಿವೃದ್ಧಿಯ ಚೌಕಟ್ಟಿನಲ್ಲೇ ಇವೆ. ನಿಜಸಂಗತಿಯೆಂದರೆ, 1999-2004ರ ವಾಜಪೇಯಿ ನೇತೃತ್ವದ ಮೈತ್ರಿ ಸರಕಾರವನ್ನು ಬಿಜೆಪಿಯೇ ಪ್ರಕಾಶಮಾನ ಭಾರತದ ಒಂದು ಮಾದರಿ ಎಂದು ಹೇಳುತ್ತಿತ್ತು.
ಮೋದಿ ಏನೇ ಹೇಳಿಕೊಳ್ಳಲಿ, ಒಂದು ಸಮಾನ ಕನಿಷ್ಟ ಕಾರ್ಯಕ್ರಮವನ್ನು ಆಧರಿಸಿದ ಒಂದು ಚುನಾವಣೋತ್ತರ ಮೈತ್ರಿಯು ಸ್ಥಿರ ಸರಕಾರವೊಂದರ ರಚನೆಗೆ ಆಧಾರವಾಗುವುದಿಲ್ಲ ಎಂದು ನಂಬಲು ಕಾರಣಗಳೇನೂ ಇಲ್ಲ. 2004ರ ಚುನಾವಣೆಗಳ ನಂತರ ಯುಪಿಎ ರಚನೆಗೊಂಡು ಒಂದು ಸಮಾನ ಕನಿಷ್ಟ ಕಾರ್ಯಕ್ರಮ ಅಂಗೀಕಾರವಾಯಿತು ತಾನೇ. ಬಿಜೆಪಿಯ ಅನುಭವವೂ ಇದೇ. 1998 ರಲ್ಲಿ ಮತ್ತು 1999ರಲ್ಲಿ ಚುನಾವಣೆಗಳ ನಂತರ ಎನ್ಡಿಎ ಮೈತಿಕೂಟ ರಚಿಸಲು ಅದು ಆಳ್ವಿಕೆಯ ಅಜೆಂಡಾ ಎಂಬುದನ್ನು ರೂಪಿಸಿತು. ಆ ಸಮಯದಲ್ಲಿ ಬಿಜೆಪಿ ಇಂತಹ ಒಂದು ಸರಕಾರದ ರಚನೆಗಾಗಿ, 370ನೇ ವಿಧಿಯ ರದ್ಧತಿ, ರಾಮಮಂದಿರ ನಿರ್ಮಾಣ ಮತ್ತು ಸಮಾನ ನಾಗರಿಕ ಸಂಹಿತೆಯ ತನ್ನ ಮೂಲ ಬೇಡಿಕೆಗಳನ್ನು ಬದಿಗಿಟ್ಟಿತ್ತು. ಮೋದಿ ಈಗ ಇಂತಹ ಮೈತ್ರಿ ಸರಕಾರಗಳನ್ನು ದೂಷಿಸುವುದೆಂದರೆ, ತನ್ನದೇ ಪಕ್ಷದ ಸರಕಾರಗಳನ್ನೂ ಖಂಡಿಸಿದಂತೆಯೇ ಸರಿ.
ಇಂತಹ ಮಹಾಮಿಲಾವಟ್ ಗ್ಯಾಂಗ್ ಸರಕಾರದಲ್ಲಿ ಇದ್ದಾಗ ಮಾವೋವಾದಿ ಚಟುವಟಿಕೆಗಳು ಭುಗಿಲೆದ್ದವು ಎಂದು ದೂಷಿಸಿರುವುದು, ಮತ್ತು ತನ್ನ ಸರಕಾರ ಬಂದ ಮೇಲೆ ಅವನ್ನು ಪರಿಣಾಮಕಾರಿ ಭದ್ರತಾ ಕಾರ್ಯಾಚರಣೆಗಳ ಮೂಲಕ ಮೆಟ್ಟಿ ಹಾಕಲಾಯಿತು ಎಂದಿರುವುದು ಕೂಡ ಮೋದಿಯ ಅಸಂಬದ್ಧ ಹೇಳಿಕೆ. ಮೋದಿಯ ಈ ಸುಳ್ಳು, ಪ್ರಸಕ್ತ ಚುನಾವಣಾ ಪ್ರಚಾರದ ವೇಳೆಯಲ್ಲೇ ಬಯಲಿಗೆ ಬಂದಿದೆ. ಗದ್ಚಿರೊಲಿಯಲ್ಲಿ ಒಂದು ಮಾವೋವಾದಿ ದಾಳಿಯಲ್ಲಿ 15 ಭದ್ರತಾ ಸಿಬ್ಬಂದಿಯ ಪ್ರಾಣ ಹೋದವು, ಮತ್ತು ಛತ್ತಿಸ್ಗಡ್ನ ದಾಂತೆವಾಡದಲ್ಲಿ ಒಂದು ಸ್ಫೋಟಕ ಉಪಕರಣದಿಂದ ಉಂಟಾದ ಕಾರ್ ಸ್ಫೋಟದಲ್ಲಿ ಆ ಕಾರಿನಲ್ಲಿದ್ದ ಒಬ್ಬ ಬಿಜೆಪಿ ಶಾಸಕ ಮತ್ತು ನಾಲ್ವರು ಭದ್ರತಾ ಸಿಬ್ಬಂದಿ ಕೊಲ್ಲಲ್ಪಟ್ಟರು.
ಈ ಪರಿಶುದ್ಧ ಮೋದಿ ಸರಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸನ್ನಿವೇಶ ಹೇಗೆ ಹದಗೆಟ್ಟಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಲ್ಲಿ 2014ರಿಂದ 2019ರ ನಡುವೆ ಭಯೋತ್ಪಾದಕ ದಾಳಿಗಳ ಸಂಖ್ಯೆ 109ರಿಂದ 626ಕ್ಕೆ ಏರಿದೆ ಮತ್ತು ಕೊಲ್ಲಲ್ಪಟ್ಟ ಭದ್ರತಾ ಸಿಬ್ಬಂದಿಯ ಸಂಖ್ಯೆ 130ರಿಂದ 483ಕ್ಕೇರಿದೆ.
ಹೀಗೆ ಇಲ್ಲಿರುವ ಪ್ರಶ್ನೆ ಒಂದು ಏಕ ಪಕ್ಷ ಬಹುಮತದ ಸರಕಾರ ಇದೆಯೇ ಅಥವ ಒಂದು ಮೈತ್ರಿಕೂಟದ ಸರಕಾರ ಇದೆಯೇ ಎಂಬುದಲ್ಲ. ಆ ಸರಕಾರ ಯಾವ ಧೋರಣೆಗಳನ್ನು ಮತ್ತು ಕಾರ್ಯಕ್ರಮವನ್ನು ಅನುಸರಿಸುತ್ತಿದೆ ಎಂಬುದೇ ಪ್ರಶ್ನೆ.
ನೋಟುರದ್ಧತಿಯ ಕರಾಳ ಧೋರಣೆಯನ್ನು ಹೇರಿದ್ದು ಲೋಕಸಭೆಯಲ್ಲಿ ಬಹುಮತ ಹೊಂದಿದ್ದ ಬಿಜೆಪಿಯ ನೇತೃತ್ವದ ಒಂದು ನಿರ್ಣಾಯಕ ಸರಕಾರವೇ ತಾನೇ? ಈ ವಿಧ್ವಂಸಕಾರಿ ಹೆಜ್ಜೆಗೆ ಯಾರನ್ನೂ ಹೊಣೆ ಮಾಡಲಾಗಿಲ್ಲ.
ಮಹಾಗಟ್ಬಂಧನ್ ರಚಿಸಿಕೊಂಡಿರುವ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಪಕ್ಷಗಳು ಮೋದಿಯವರ ಪ್ರಧಾನ ಗುರಿ, ಏಕೆಂದರೆ, ಈ ಮೈತ್ರಿಕೂಟ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಒಂದು ನಿರ್ಣಾಯಕ ಸೋಲು ಉಣ್ಣಿಸುವ ಬೆದರಿಕೆ ಒಡ್ಡಿದೆ. ಆದರೆ ಪ್ರತಿಪಕ್ಷಗಳ ಮೈತ್ರಿಗಳ ಮೇಲೆ ದಾಳಿ ಮಾಡುವ ಭರದಲ್ಲಿ ಎನ್ಡಿಎ 40 ಪಕ್ಷಗಳ ಒಂದು ಮಹಾಗಟ್ಬಂಧನ್ ಎಂಬುದನ್ನು ಮೋದಿ ಮರೆತಿದ್ದಾರೆ.
ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಯ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮ.
(ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು