Connect with us

ಭಾವ ಭೈರಾಗಿ

ಸಂಜೆ ಐದರ ಮಳೆ : ಕವಿಯ ಕಿರು ಪರಿಚಯ

Published

on

  • ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ

ನ್ನಡಾಂಬೆಯ ಸಂಪ್ರೀತಿಯ ಮೇರು ವ್ಯಕ್ತಿತ್ವದ ಕವಿ,ತಾಯ ನಿತ್ಯೋತ್ಸವ ಕಟ್ಟಿದ ಸಾಹಿತಿ,ನವ್ಯಕಾವ್ಯ ಚಳುವಳಿಯ ಹರಿಕಾರ,73ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷ,ಹಲವು ಬಹು ಪ್ರಶಸ್ತಿಗಳ ಮುಡಿಗೇರಿಸಿಕೊಂಡ ಧೀಮಂತ,ಸಾರೆ ಜಹಾಸೇ ಕನ್ನಡಕ್ಕೆ ಭಾಷಾಂತರಿಸಿದ ಭಾಷಾಭಿಮಾನಿ,ಶಿಶು ಸಾಹಿತ್ಯದಲ್ಲು ಚಾಪು ಮೂಡಿಸಿದ ಚಾಣಕ್ಷ, ಕನ್ನಡ ತನವನ್ನು ಎತ್ತಿ ಹಿಡಿದ ಪ್ರಗತಿಪರ ಚಿಂತನೆಯ ಸರದಾರ, ನಮ್ಮ ಹೆಮ್ಮೆಯ ನಿತ್ಯೋತ್ಸವ‌ಕವಿ ಕೆ.ಎಸ್.ನಿಸಾರ್ ಅಹ್ಮದ್.

ಮನೆಯ ಮಾತೃಭಾಷೆ ಉರ್ದು ಆದರೂ ಅವರೊಬ್ಬ ಅಪ್ಪಟ ಕನ್ನಡಿಗ. ನಾವಿಂದು ನಮ್ಮ ಹೆಮ್ಮೆಯ ಸಭ್ಯ , ಭಾವೈಕ್ಯ, ಕನ್ನಡದ ನಿತ್ಯೋತ್ಸವದ ನಮ್ಮೆಲ್ಲರ ಪ್ರೀತಿ – ಸ್ನೇಹದ ಕವಿ ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್ ಅವರು, ಅವರ ಕುರಿತು ಬರೆಯುವ ಸಣ್ಣ ಪ್ರಯತ್ನ ಮಾಡಲಾಗಿದೆ.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ರವರು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಷೇಕ್ ಹೈದರ್ ಮತ್ತು ಹಮೀದಾ ಬೇಗಂ ದಂಪತಿಗಳ ಮಗನಾಗಿ ಫೆಬ್ರುವರಿ 5 ,1936ರಲ್ಲಿ ಜನಿಸಿದರು. ಇವರ ತಂದೆ ಸರಕಾರಿ ನೌಕರಿಯಲ್ಲಿದ್ದ ಕಾರಣದಿಂದ ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರಾಗಿದ್ದರು ಹಾಗಾಗಿ ನಿಸಾರರಿಗೂ ಅದೇ ವ್ಯಕ್ತಿತ್ವ ರಕ್ತಗತವಾಗಿತ್ತು. ಅವರ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಾದ ದೇವನಹಳ್ಳಿಯಲ್ಲಿ ಮುಗಿಸಿ ಪ್ರೌಢಶಾಲೆಯನ್ನು ಹೊಸಕೋಟೆಯಲ್ಲಿ ಮುಗಿಸಿದ ನಂತರ ಕಾಲೇಜಿಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಸೇರಿ 1959ರಷ್ಟರಲ್ಲಿ ಭೂಗರ್ಭ (ಭೊವಿಜ್ಞಾನ) ಶಾಸ್ತ್ರದಲ್ಲಿ ಆನರ್ಸ್‌ ಪದವಿ ಪಡೆದಿರುತ್ತಾರೆ ಮತ್ತು ಅದೇ ವಿಷಯದಲ್ಲಿ ಅಂದರೆ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಸಹ ಪಡೆಯುತ್ತಾರೆ.

ತದನಂತರ ಕಾಯಕ ವೃತ್ತಿಯನ್ನು ಭೂವಿಜ್ಞಾನಿಯಾಗಿ ಕಲಬುರ್ಗಿಯಲ್ಲಿ ಕೆಲಸ ಮಾಡಲು ಆರಂಭಿಸಿದರಾದರೂ, ಆ ಕೆಲಸದಲ್ಲಿ ಹೆಚ್ಚು‌ ಆತ್ಮತೃಪ್ತಿ ದೊರೆಯದ ಕಾರಣ ಮತ್ತೆ ಹೆಚ್ಚಿನ ಅಭ್ಯಾಸ ಮಾಡಬೇಕೆಂದು ನಿಶ್ಚಯಿಸಿ ಎಂ.ಎಸ್‌. ಸಿ. ಸೇರಿ ಎಂ.ಎಸ್ಸಿ ಪಡೆಯುತ್ತಾರೆ,ಪಡೆದ ನಂತರ ಅವರು ಓದಿದ ಕಾಲೇಜು ಒಳಗೊಂಡಂತೆ, ಬೆಂಗಳೂರು ಚಿತ್ರದುರ್ಗ, ಶಿವಮೊಗ್ಗ, ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗುವ ಮೂಲಕ ಯಶಸ್ವಿಯಾಗಿ ಸೇವೆ ಸಲ್ಲಿಸಿ 1994ರಲ್ಲಿ ನಿವೃತ್ತರಾಗುತ್ತಾರೆ.

ಸಾಹಿತ್ಯದ ಗೀಳು

ನಿಸಾರ್ ಅಹಮದ್ ರವರ ಸುದೈವವೂ
ಎನೋ, ಅವರು ಓದಿರುವ ಕಾಲೇಜಿನಲ್ಲಿ ಎಲ್. ಗುಂಡಪ್ಪ, ಎಂ.ವಿ. ಸೀತಾರಾಮಯ್ಯ, ಜಿ.ಪಿ. ರಾಜರತ್ನಂ, ವಿ.ಸೀತಾರಾಮಯ್ಯ ಅವರಂತಹ ಮಹಾನ್ ಕನ್ನಡ ಸಾಹಿತ ಅಮರ ಪ್ರೇಮದ ಗುರುಗಳಾಗಿದ್ದರು(ಗುರುಗಳು ಪಡೆದಿದ್ದರು) ಈ ಕಾರಣಗಳಿಂದ‌ ನಿಸಾರರಲ್ಲಿ ಕನ್ನಡ ಸಾಹಿತ್ಯಾಸಕ್ತಿ (ಸಾಹಿತ್ಯಾಬಿರುಚಿ) ಬೆಳೆಯಲು ಕಾರಣಿಭೊತರಾಗುವ ಮೂಲಕ ಪ್ರೋತ್ಸಾಹಕರಾಗುತ್ತಾರೆ. ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ 10ನೇ ವಯಸ್ಸಿನಲ್ಲೇ
ಪ್ರಕಟವಾಗಿ, ಜಲಪಾತ’ದ ಬಗ್ಗೆ ಅವರು ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಪ್ರಕಟಣೆ ಯಾಗುವ ಮೂಲಕ ಇಡೀ ಕರ್ನಾಟಕದಲ್ಲಿ ಇವರ ಹೆಸರು ಮನೆ ಮಾತಾಗಿತ್ತು ಎನ್ನುವುದು ನಾವ್ಯಾರು ಮರೆಯಬಾರದು. ಅಂದಿನಿಂದಲೇ ಅವರು ಕನ್ನಡ ಭಾಷಾ ಪ್ರೇಮದ ಬಗೆ ಅಪಾರವಾದ ಪ್ರೀತಿಯನ್ನು ಹೊಂದಿದರು.

ಹೀಗಾಗಿ‌ ಸಾಹಿತ್ಯದ ಗೀಳನ್ನು ಅವರ ಹೃನ್ಮನದ ಅಂತರಂಗದಲ್ಲಿ ಹಚ್ಚಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಇತಿಹಾಸದ ಪುಟಗಳಲ್ಲಿ ನಾವೆಲ್ಲರೂ ಕಾಣಬಹುದಾಗಿದೆ ಬಂಧುಗಳೆ. ಹಾಗಾಗಿ ಧಾರ್ಮಿಕ ಆಚರಣೆಯಲ್ಲಿ ಅವರು ಇಸ್ಲಾಂ ಆನುಯಾಯಿಯಾದರೂ ಅವರು ಬರೆದ ಅನೇಕ ಕವನಗಳು ಎಲ್ಲಾ ಧಾರ್ಮಿಕಾಭಿಮಾನಿಗಳು ಖುಷಿಯಿಂದ ಸ್ವೀಕರಿಸುವ ಮೂಲಕ ಹಾಡುತ್ತಿದ್ದರು.

ಇಂತಹ ಹಾಡನ್ನು ಒಬ್ಬ ಮುಸ್ಲಿಂ ಕವಿ ಬರೆದಿದ್ದಾರೆ ಎಂದು ಊಹಿಸಲೂ ಅಸಾಧ್ಯವಾಗುವಷ್ಟರ ಮಟ್ಟಿಗಿನ ಭಾವೈಕ್ಯ ಕವಿ ಇವರಾಗಿದರು ಎಂಬುವುದೇ ಹೆಮ್ಮೆ. ಇದೇ ನಿಸಾರರು ಬೆಂಗಳೂರಿನ ರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸೇರಿ ಇನ್ನಿತರ ಧರ್ಮಗಳ
ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಉಪನ್ಯಾಸ ನೀಡುವ ಮೂಲಕ ಅವರೊಬ್ಬ ಪ್ರಗತಿಪರ ಚಿಂತಕರಾಗಿ,ಸರ್ವ ಧರ್ಮಗಳ ಪ್ರೀತಿಯ
ಸಮಾತವಾದಿಯಾಗಿ ನಮ್ಮೆಗೆಲ್ಲರಿಗೂ ಎದ್ದು ಕಾಣುತ್ತಿದ್ದರು. ಕಳೆದ ಐದು ದಶಕಗಳಲ್ಲಿ ಸುಮಾರು 25 ಅಧಿಕ ಕೃತಿಗಳನ್ನು ರಚಿಸಿದ್ದಾರೆ.

ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಅತ್ಯಂತ ಜನಪ್ರಿಯ ಕವನ ಸಂಕಲನಗಳಾಗಿವೆ.ನೆನದವರ ಮನದಲ್ಲಿ, ನಾನೆಂಬ ಪರಕೀಯ, ಅನಾಮಿಕ ಆಂಗ್ಲರು, ಸುಮಹೂರ್ತ, ಸಂಜೆ ಐದರ ಮಳೆ, ಸ್ವಯಂ ಸೇವೆಯ ಗಿಳಿಗಳು ಮುಂತಾದ ಕವನ ಸಂಕಲನಗಳೆಂದರೇ, ಅಚ್ಚುಮೆಚ್ಚು, ಇದು ಬರಿ ಬೆಡಗಲ್ಲೊ ಅಣ್ಣ, ಷೇಕ್ಸ್ ಪಿಯರ್ ಮುಂತಾದ ಗದ್ಯವನ್ನೂ ರಚಿಸುವ ಜೊತೆಯಲ್ಲಿ ಒಥೆಲ್ಲೊ ಮತ್ತು ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಇನ್ನು ಕನ್ನಡದ ಪ್ರಪ್ರಥಮ ಧ್ವನಿಸುರಳಿಯಾದ ನಿತ್ಯೋತ್ಸವ ಕವಿತೆಗಳ ಬಗ್ಗೆ ಹೇಳುತ್ತಾ ಹೋದರೆ ಇಡೀ ದಿನವೇ ಬೇಕಾಗಬಹುದೇನೋ? ಹಾಗಾಗಿ ಅದರಲ್ಲೂ ಜೋಗದ ಸಿರಿಬೆಳಕಿನಲ್ಲಿ ಹಾಡನ್ನು ಹಾಡಿಕೊಂಡಾಗಲೆಲ್ಲಾ ಮೈ ರೋಮಾಂಚನಗೊಳ್ಳುತ್ತದೆ ಎನ್ನುವುದಂತು ಸತ್ಯ. ಮಲೆನಾಡಿನ, ಸಹ್ಯಾದ್ರಿಯ ತಪ್ಪಲಲ್ಲಿರುವ ಜೋಗದ ಜಲಪಾತ ಮತ್ತು ಅವರ ಸುತ್ತಮುತ್ತಲಿನ ಪರಿಸರವನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುವಾಗ, ಅವರೊಳಗಿರುವ ಪರಿಸರ ಪ್ರೇಮಿಯ ಅನಾವರಣವಾಗಿತ್ತದೆ ಎಂದರೆ ತಪ್ಪಾಗಲಾರದು.ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಸಾರಸ್ವತಃ ಲೋಕಕ್ಕೆ ಅಮೂಲ್ಯ ಕೊಡುಗೆಗೆಳು ನೀಡಿದ್ದಾರೆ.

ಅವರ ಗೌರವ ಕವನ ಸಂಕಲನಗಳು

  • ಮನಸು ಗಾಂಧಿ ಬಜಾರು (1960), ನೆನೆದವರ ಮನದಲ್ಲಿ (1964), ಸುಮಹೂರ್ತ (1967), ಸಂಜೆ ಐದರ ಮಳೆ (1970), ನಾನೆಂಬ ಪರಕೀಯ (1974), ಆಯ್ದ ಕವಿತೆಗಳು (1974), ನಿತ್ಯೋತ್ಸವ (1976), ಸ್ವಯಂ ಸೇವೆಯ ಗಿಳಿಗಳು (1977), ಅನಾಮಿಕ ಆಂಗ್ಲರು (1982), ಬಹಿರಂತರ (1990), ಸಮಗ್ರ ಕವಿತೆಗಳು (1991), ನವೋಲ್ಲಾಸ (1994), ಆಕಾಶಕ್ಕೆ ಸರಹದ್ದುಗಳಿಲ್ಲ (1998), ಅರವತ್ತೈದರ ಐಸಿರಿ (2001), ಸಮಗ್ರ ಭಾವಗೀತೆಗಳು (2001, ಪ್ರಾತಿನಿಧಿಕ ಕವನಗಳು (2002) ಇವರ ಕವನ ಸಂಕಲನಗಳಾಗಿವೆ.

ಅವರ ಗೌರವ ಗದ್ಯ ಸಾಹಿತ್ಯ ಕೃತಿಗಳು

ಅಚ್ಚುಮೆಚ್ಚು, ಇದು ಬರಿ ಬೆಡಗಲ್ಲೊ ಅಣ್ಣ ಷೇಕ್ಸ್ ಪಿಯರ್ನ‌ನ ಒಥೆಲ್ಲೊದ ಕನ್ನಡಾನುವಾದ, ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್ ಕೃತಿಯ ಕನ್ನಡಾನುವಾದ. ಅಮ್ಮ ಆಚಾರ ಮತ್ತು ನಾನು – ಇವುಗಳು ನಿಸಾರ್ ಅಹಮದ್ ರವರ ಗದ್ಯ ಕೃತಿಗಳಾಗಿವೆ.

ಸರಳ ಶಿಸ್ತಿನ ಕವಿ

ಕೆ.ಎಸ್. ನಿಸಾರ್ ಅಹಮದ್
ಅವರು ಸೇವೆಯಿಂದ ನಿವೃತ್ತರಾಗಿದ್ದರೂ ಶಿಸ್ತಿನ ಸಿಪಾಯಿಯಂತೆ ಸದಾ ಕಾಲವೂ ಸೂಟೂಬೂಟುಧಾರಿಯಾಗಿಯೇ ನಮಗೆ ಕಾಣುತ್ತಿದ್ದರು. ಅವರ ಅಚ್ಚು ಮೆಚ್ಚಿನ ಗಾಂಧೀಬಜಾರಿನ, ವಿಧ್ಯಾರ್ಥಿ ಭವನ ಅಥವಾ ಡಿವಿಜಿ ರಸ್ತೆಯಲ್ಲಿ ಯಾವುದೇ ಹಮ್ಮು ಬಿಮ್ಮಿಲ್ಲದೆ ನಿಗರ್ವಿಯಾಗಿ ಸಾಧಾರಣ ನಾಗರೀಕರ ಹಾಗೆಯೇ ಅವರನ್ನು ನೋಡಬಹುದಾಗಿತ್ತು ಸ್ನೇಹಿತರೆ.

ಯಾವುದೇ ಸಭೆ ಸಮಾರಂಭಗಳಿಗೆ, ಪುಸ್ತಕ ಬಿಡುಗಡೆಯ ಸಮಾರಂಭಗಳಿಗೆ ಅವರನ್ನು ಆಹ್ವಾನಿಸಿದರೆ, ಅವರು ಬಿಡುವಾಗಿದ್ದಲ್ಲಿ ಖಂಡಿತವಾಗಿಯೂ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದು ಸಭಿಕರೊಂದಿಗೆ ಅವರ ಅನುಭವಗಳನ್ನು ಹಂಚಿಕೊಳ್ಳುವ ಒಬ್ಬ ಸರಳ ಸಜ್ಜನಿಕೆಯ ಕವಿಯಾಗಿ ನಮ್ಮೆಗೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿದ್ದರು.ಕನ್ನಡದ ನೆಲ, ಜಲವನ್ನು ಕಣ್ಣಿಗೆ ಕಟ್ಟುವಂತೆ ಕವನಗಳ ಮೂಲಕ ಮೂಡಿಸಿ, ಕನ್ನಡ ಪ್ರೇಮವನ್ನು ಉದ್ದೀಪನಗೊಳಿಸಿದ ಕನ್ನಡಿಗರ ಪ್ರೀತಿಯ ಕವಿ ನಿಸಾರ್ ಅಹಮ್ಮದ್. ಜೋಗದ ಸಿರಿ ಬೆಳಕಿನಲ್ಲಿ ಹಾಡಿನ ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು. ಆವರೊಬ್ಬ ನಮ್ಮ ಹೆಮ್ಮೆಯ ಕನ್ನಡದ ಮೇಧಾವಿ ಅಪ್ರತಿಮ ಸಾಹಿತಿ .

ಇವರ ಬಹುಮುಖ ಪ್ರತಿಭೆಯ ವ್ಯಕ್ತಿತ್ವಕ್ಕೆ ಸಂದ ಗೌರವ ಪ್ರಶಸ್ತಿ ಪುರಸ್ಕಾರಗಳು

  • 1981 ರ ರಾಜ್ಯೋತ್ಸವ ಪ್ರಶಸ್ತಿ, 2003 ರ ನಾಡೋಜ ಪ್ರಶಸ್ತಿ,2006 ರ ಮಾಸ್ತಿ ಪ್ರಶಸ್ತಿ,2006 ರ ಅರಸು ಪ್ರಶಸ್ತಿ, 2006 ಡಿಸೆಂಬರಿನಲ್ಲಿ ಶಿವಮೊಗ್ಗದಲ್ಲಿ ನಡೆದ, 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 2008 ಪದ್ಮಶ್ರೀ ಪ್ರಶಸ್ತಿಯ ಹೊರತಾಗಿಯೂ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಭಕ್ತಿಯ ನಮನಗಳು

ಕನ್ನಡ ಸಾರಸ್ವತ ಲೋಕದ ಕೊಂಡಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಕೆ.ಎಸ್.ನಿಸಾರ್ ಅಹ್ಮದ ತಮ್ಮ ಬದುಕಿನ ಪಯಣ ಮುಗಿಸಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.ಈ ಸಾವು ಕನ್ನಡಿಗರ,ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ನಿತ್ಯೋತ್ಸವ ಕವಿಗೆ ನಮ್ಮ ಭಕ್ತಿಯ ಭಾವಪೂರ್ಣ ಶೃದ್ಧಾಂಜಲಿಯ ನಮನಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮಣ್ಣ ಮಕ್ಕಳು

Published

on

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ
  • ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ

ಮಣ್ಣ ಮಕ್ಕಳು ನಾವು
ಹಗಳಿರುಳೆನ್ನದೆ ಬೆವರು ಬಸಿದು
ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು
ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ
ಕಸುಬಿಗೆ ಆಳಾದವರು ಸವಳು ನೀರಲಿ ಮೈತೊಳೆದು
ಚಿಂದಿ ಅಂಗಿಯಲಿ ಶಾಲೆಗೆ ದಾಖಲಾದವರು.

ಬರಿಗಾಲಲಿ ಕಾಡು ದಾರಿಯಲಿ ಮೈಲು ದೂರ ನಡೆದು
ನೆಗ್ಗಿಲ ಮುಳ್ಳು ತುಳಿದವರು ; ನಿಬ್ಬು ನೆಗ್ಗಿದ ಪೆನ್ನಿನಲಿ
ಹೆಸರು ಬರೆಯಲು ಕಲಿತವರು ಹರಿದ ಪಠ್ಯದಲಿ ಅಕ್ಷರ ಹುಡುಕಿ ಒಡೆದ ಪ್ಲೇಟಿನಲಿ ಬರೆದವರು.

ತೂತು ಬಿದ್ದ ಸೂರಿನಲಿ ಇಣುಕಿದ ಚುಕ್ಕಿ ಚಂದ್ರಮರ ನೋಡಿ
ವಿದ್ಯುತ್ ದೀಪದ ಕನಸು ಕಂಡವರು
ಮೋಸ ವಂಚನೆಗೆ ಬಗ್ಗದೆ ಶೋಷಣೆಗೆ ಸಿಡಿದವರು
ಮಣ್ಣ ಮಕ್ಕಳು ನಾವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending