Connect with us

ದಿನದ ಸುದ್ದಿ

ಶಿವಮೊಗ್ಗದ‌ ‘ಸೆಂಟ್ರಲ್ ಜೈಲ್’ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

Published

on

ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹ

 

  • ಸಂಧ್ಯಾ ಸಿಹಿಮೊಗೆ

ಒಂದೂವರೆ ಶತಮಾನಗಳ ಕಾಲ ಮಲೆನಾಡಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ರೈತರನ್ನು ಕೊಡಿಟ್ಟು ಗೆಲ್ಲಿಗೇರಿಸಿದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಶಿವಮೊಗ್ಗ ನಗರ ಜಿಲ್ಲಾ ಕೇಂದ್ರ ಕಾರಾಗೃಹವು ಈಗ ಶಾಶ್ವತವಾಗಿ ಇತಿಹಾಸ ಪುಟ ಸೇರಿದೆ.

ಜಿಲ್ಲಾ ಕೇಂದ್ರ ಕಾರಾಗೃಹ ಕಟ್ಟಡವು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರಕೊಂಡಿದೆ. ಜಿಲ್ಲಾ ಕಾರಾಗೃಹವು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿದ್ದು ರಾಜ್ಯದಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಒಳಗೊಂಡ ಕಾರಾಗೃಹ ಎನಿಸಿಕೊಂಡಿದೆ.

ನಗರದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಹಿಂಬದಿಯಲ್ಲಿ ಓತಿಘಟ್ಟದ ಬಳಿ 62.02 ಎಕರೆ ಪ್ರದೇಶದಲ್ಲಿ 83 ಕೋಟಿ ರೂ ವೆಚ್ಚದಲ್ಲಿ ದಕ್ಷಿಣ ಕೊರಿಯಾ ಮಾದರಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಕಾರಾಗೃಹವನ್ನು ನಿರ್ಮಿಸಲಾಗಿದೆ. ಕಾರಾಗೃಹದಲ್ಲಿ ಸುಮಾರು 460 ಕೈದಿಗಳಿದ್ದಾರೆ.

ಕಣ್ಗಾವಲಿಗೆ ಎಂದೇ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳ ಅಳವಡಿಕೆ ಜೊತೆಗೆ ಬಂಧಿಖಾನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಸೈರನ್ ಹೊಡೆಯಲು ಆರಂಭಿಸುತ್ತದೆ.

ಕಾರಾಗೃಹದಲ್ಲಿ ಇರುವಂತಹ ಕೈದಿಗಳಿಗೆ ಗ್ರಂಥಾಲಯ ವ್ಯವಸ್ಥೆ ಹಾಗೂ ಊದುಬತ್ತಿ ತಯಾರಿಸುವ ಉದ್ಯೋಗ ಕಲ್ಪಿಸುವುದರ ಜೊತೆಗೆ ಅವರು ಮಾಡಿದ ಕೆಲಸಕ್ಕೆ ಇಂತಿಷ್ಟು ವೇತನವೆಂದು ನಿಗಧಿಪಡಿಸಿದೆ. ಬಂಧಿಖಾನೆಯಲ್ಲಿ ಇರುವ ಕೈದಿಗಳಿಗೆ ದಿನಕ್ಕೆ ಮೂರು ಹೊತ್ತು ಊಟದ ಜೊತೆಗೆ ವಾರದಲ್ಲಿ ಒಂದು ದಿನ ಮಾಂಸದೂಟವೂ ನೀಡಲಾಗುತ್ತದೆ. ಹಾಗೂ ಕೈದಿಗಳು 2,000 ರೂ. ನೀಡಿದರೆ ಟಿವಿ ಮತ್ತು 500 ರೂ. ನೀಡಿದರೆ ಕೇರಂ ಬೋರ್ಡ್ ಸೇರಿದಂತೆ ಅವರಿಗೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಒದಗಿಸಲಾಗುವುದು.

ಸಮಾಜದ ನಡುವೆ ಇರುವ ಕಂದಕ ಕಡಿಮೆ ಮಾಡುವ ಉದ್ದೇಶದಿಂದ ಇವರಿಗೆ ಶಿಕ್ಷೆ ನೀಡುವ ಬದಲು ಮನಃಪರಿವರ್ತನೆಗೆ ಹೆಚ್ಚು ಒತ್ತು ನೀಡಲಾಗಿದೆ. ಹೀಗಾಗಿ ಪ್ರತಿವಾರವೂ ಒಂದೊಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿರುವ ಸಜಾಬಂದಿಗಳಲ್ಲಿ ಸಾಕಷ್ಟು ಜನ ಪ್ರತಿಭಾವಂತರಿದ್ದಾರೆ. ಎಸ್‍ಎಸ್‍ಎಲ್‍ಸಿಯಿಂದ ಪದವಿ ಓದಿದವರೂ ಇದ್ದಾರೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ನಾಟಕ, ಹಾಡುಗಾರಿಕೆ ಸೇರಿದಂತೆ ಶಿಕ್ಷಣ, ಕಲೆ, ಸಾಂಸ್ಕøತಿಕ ಕಾರ್ಯಕ್ರಗಳನ್ನು ನಡೆಸಲಾಗುತ್ತಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ನಟ ಪುನೀತ್ ರಾಜ್‍ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಮಾದರಿಯೆಲ್ಲೇ ಕಾರಾಗೃಹದ ಸಜಾಬಂದಿಗಳಿಗೆ “ಸಾವಿರ ರೂಪಾಯಿ ಸರದಾರ” ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ನೀಡುವ ಸಜಾಬಂದಿಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ ಸುಮಾರು ನಾಲಕೈದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾಮಾನ್ಯವಾಗಿ ಜೈಲು ಎಂದರೆ ಸಜಾಬಂದಿಗಳು ಪಾಲಿನ ಸೆರಮನೆ. ಹೀಗಾಗಿ ತಪ್ಪು ಮಾಡಿ ಜೈಲು ಸೇರಿದವರಿಗೆ ಅಲ್ಲಿ ಶಿಕ್ಷೆ ತಪ್ಪಿದಲ್ಲ ಅನ್ನೋ ಮಾತುಗಳಿವೆ. ಆದರಿಂದ ಶಿವಮೊಗ್ಗದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯು ಸಜಾಬಂದಿಗಳ ಮನಃಪರಿರ್ವತನೆ ಮಾಡುವ ನಿಟ್ಟಿನಲ್ಲಿ ಕಾರ್ಯಗಳನ್ನು ನಡೆಸುತ್ತಿದೆ.

ಶಿವಮೊಗ್ಗದ “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ”ಯು ಕೇಂದ್ರ ಕಾರಾಗೃಹದ ಜೈಲು ನಿವಾಸಿಗಳಲ್ಲಿ ಜಾಗೃತಿಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಬದಲಾದ ಬದುಕು”ಎಂಬ ಶೀರ್ಷಿಕೆಯಡಿಯಲ್ಲಿ ಬೀದಿನಾಟಕ ಹಾಗೂ ಜನಪದ ಗೀತೆಗಳ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಲ್ಲಿ ಇರುವ ದ್ಷೇಷದ ಮನೋಭಾವನೆಯು ದೂರವಾಗುವಂತೆ ಮಾಡುವ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಈ ರೀತಿ ಕೈದಿಗಳ ಮನಃಪರಿವರ್ತನೆ ಮಾಡುವ ಕಾರ್ಯ ನಡೆಯಬೇಕಿದೆ.

ಹೀಗೆ ಪ್ರತಿಯೊಬ್ಬರ ಜೀವನದಲ್ಲಿಯೂ ಇಂತಹದೊಂದು ಅನುಭವದ ಪಾಠ ಎಲ್ಲರಿಗೂ ಆಗಿರುತ್ತದೆ. ಆ ಅನುಭವದಿಂದ ಕಲಿತ ಪಾಠ ಬಹಳಷ್ಟು ಇರುತ್ತದೆ. “ಅಪರಾಧಗಳ ವೈಭವೀಕರಣ ಬೇಡ, ಕಾನೂನಿನ ದುರುಪಯೋಗಕ್ಕೆ ಅವರಣ ಕೂಡದೇ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕು. ಇದೆಲ್ಲಕ್ಕೂ ಸಾರ್ವಜನಿಕ ಜಾಗ್ರತಿಯೂ ಬೇಕು. ಮಾನವ ಹಕ್ಕು ತಿಳಿಯಿರಿ, ಕರ್ತವ್ಯವನ್ನು ಪಾಲಿಸಿರಿ”. ಆಗ ಮಾತ್ರ ಸಮಾಜದಲ್ಲಿ ಒಬ್ಬ ಉತ್ತಮ ಮಾನುಷ್ಯನಾಗಿ ಬದುಕುವುದಕ್ಕೆ ಸ್ಯಾಧ್ಯವಾಗುವುದು.

ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡಿಯೇ ಇರುತ್ತಾನೆ. ಅವನು ಹುಟ್ಟುತ್ತ ಎಷ್ಟೇ ಒಳ್ಳೆಯವನಾದರೂ ಬೆಳೆಯುತ್ತಾ ಹೋದಂತೆ ಸುತ್ತ ಮುತ್ತಲ ಪರಿಸರ, ಸ್ನೇಹಿತರ ಬಳಗ ಬೀರುವ ಪರಿಣಾಮ ತಪ್ಪು ಮಾಡುವಂತೆ ಪ್ರೇರೆಪಿಸುತ್ತದೆ. ಆತ/ಆಕೆ ತನ್ನ ನಿಯಂತ್ರಣಕ್ಕೂ ಮೀರಿದ ಮನಸ್ಥಿತಿ ಹೊಂದುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದೋ ಅರಿಯದಷ್ಟೂ ಕೆಲವೂಮ್ಮೆ ಮುಂದುವರೆಯುತ್ತಾರೆ. ಒಮ್ಮೆ ಅದು ತಪ್ಪೆಂದು ತಿಳಿದರೆ ತಿದ್ದಿಕೊಳ್ಳುವ ಜಾಣರು ಹಲವರಾದರೆ ಆ ತಪ್ಪು ದಾರಿಯೇ ಒಳ್ಳೆಯದೆಂದು ಆರಿಸಿಕೊಳ್ಳುವವರು ಕೆಲವರು ಆದರಿಂದಲೇ ಬುದ್ಧಿ ಕಲಿಯುವವರು ಹಲವರು.

ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಡುವ ಕೆಲಸ ಬೇಡ…! ಯುವಕರು ಸಮಾಜದಲ್ಲಿ ತೆಲೆ ಎತ್ತಿ ನಡೆಯುವ ಸತ್ಕಾರ್ಯಗಳ ಮೂಲಕ ಮಾರ್ಗದರ್ಶಿ ಜೀವನ ವಿಧಾನಗಳನ್ನು ಅಳವಡಿಸಿಕೊಂಡು ಬದುಕುವ ಮಾರ್ಗವನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಒಳ್ಳೆ ಹೆಸರು ಪಡೆದುಕೊಳ್ಳುವುಕ್ಕೆ ಹಾಗೂ ಬದುಕನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಇಲ್ಲವಾದರೆ ಸಮಾಜ ನಮ್ಮನ್ನು ನೋಡುವ ದೃಷ್ಠಿಕೋನವೇ ಬದಲಾಗುತ್ತದೆ.

ಅಪರಾಧಿಗಳ ಮನಪರಿವರ್ತನೆ: ದ್ವೇಷ-ಉದ್ರೇಕ ಭಾವನೆಗಳನ್ನು ನಾಶಪಡಿಸಿ ಅಪರಾಧಿಗಳ ಮನಪರಿವರ್ತನೆ ಮಾಡುವುದರ ಮೂಲಕ ಸಮಾಜದಲ್ಲಿ ಮೊದಲಿನ ಸ್ಥಿತಿಯನ್ನು ಏರ್ಪಡಿಸುವುದಕೋಸ್ಕರ ಕ್ಷಮಾದಾನವನ್ನು ನೀಡುವ ಸಂಪ್ರದಾಯ ಎಲ್ಲಾ ಕಡೆಗಳಲ್ಲೂ ಆಚರಣೆಯಲ್ಲಿವೆ.

ಕೃಪೆ : ಶಿವಮೊಗ್ಗ ವಾರ್ತಾಭವನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending