Connect with us

ದಿನದ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ‌ ಮುಖಂಡ ರಾಘು ದೊಡ್ಡಮನಿ ಬಿಡುಗಡೆ

Published

on

ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.

ಘಟನೆ ಹಿನ್ನೆಲೆ

ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್  ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.

ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ ಪೋಸ್ಟ್ ಗಳು

ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.

1.       “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.

ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.     ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.

ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.


ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ‌ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”‌.

| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ


ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ

https://www.facebook.com/raghu.doddamani.948

ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…

Posted by Shaik Abidali Bavikatte on Wednesday, 20 May 2020

https://m.facebook.com/story.php?story_fbid=1174728689533045&id=100009877756258

https://m.facebook.com/story.php?story_fbid=3307387082613038&id=100000253368436

https://m.facebook.com/story.php?story_fbid=3221777811218777&id=100001597687948

https://m.facebook.com/story.php?story_fbid=2692513617520342&id=100002851899686

https://m.facebook.com/photo.php?fbid=2677375149214971&id=100008275358091&set=a.1788597198092775

https://m.facebook.com/story.php?story_fbid=1410836952434351&id=100005241791811

https://m.facebook.com/story.php?story_fbid=1410836952434351&id=100005241791811

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending