ದಿನದ ಸುದ್ದಿ
ಅಲೆಮಾರಿ ಸಮುದಾಯಗಳ ಅಸ್ಮಿತೆ ಉಳಿಸುವಲ್ಲಿ ಆಳುವ ಸರ್ಕಾರಗಳು ವಿಫಲ : ಬರಗೂರು ರಾಮಚಂದ್ರಪ್ಪ ಕಳವಳ

ಸುದ್ದಿದಿನ, ಬೆಂಗಳೂರು :ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಮನ್ವಯ ಸಮಿತಿಯ ಮೂಲಕ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯಲ್ಲಿ ಭಾನುವಾರ ನಿರ್ಧಾರ ಮಾಡಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಅರೆಅಲೆಮಾರಿ ಸಮುದಾಯಗಳ ಚಿಂತನ ಮಂಥನ ಸಭೆಯನ್ನು ಚಿತ್ರನಟರು ಸಮಾಜ ಸೇವಕರು ಚೇತನ್ ಅಹಿಂಸಾ ಅವರು ಆಯೋಜಿಸಿದ್ದರು.
ಸಭೆಯಲ್ಲಿ ಪ್ರಗತಿಪರ ಚಿಂತಕರು ಬರಗೂರು ರಾಮಚಂದ್ರ ಅವರು ಭಾಗವಹಿಸಿ ಮಾತನಾಡುತ್ತಾ ಭಾರತದ ಬಹು ಸಂಸ್ಕೃತಿಯ ಉಳಿವಿಗಾಗಿ ನೆಲ ಮತ್ತು ನೆಲೆಯೇ ಇಲ್ಲದ ಅಲೆಮಾರಿಗಳ ಕೊಡುಗೆ ಅಪಾರವಾಗಿದ್ದು.ಆದರೆ ಈ ಸಮುದಾಯಗಳ ಅಸ್ಮಿತೆಯನ್ನು ಉಳಿಸುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಾಹಿತ್ಯ ಮತ್ತು ಪ್ರಗತಿಪರ ವಲಯದಲ್ಲಿ ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿಕೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿದರು.
ನಂತರ ಅಲೆಮಾರಿ ಸಮುದಾಯಗಳನ್ನು ಉದ್ದೇಶಿಸಿ ಮಾಜಿ ಸಚಿವರು ಸಾಹಿತಿಗಳು ಆದ ಶ್ರೀಮತಿ ಬಿಟಿ ಲಲಿತ್ ನಾಯಕರವರು ಮಾತನಾಡುತ್ತಾ ಎಪ್ಪತ್ತರ ದಶಕದಲ್ಲಿ ದಲಿತ ವರ್ಗಗಳಿಗೆ ಮೂಡಿದ ಸಾಮಾಜಿಕ ಪ್ರಜ್ಞೆ ಅಲೆಮಾರಿ ಸಮುದಾಯಗಳಿಗೆ ಮೂಡಲಿಲ್ಲ.ಆದ್ದರಿಂದ ಇಂದಿಗೂ ಈ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಆದರೆ ನಮ್ಮನ್ನಾಳಿದ ಸರ್ಕಾರಗಳು
ಇದುವರೆಗೂ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ತೋರಿ ಸಿಲ್ಲದಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದರು.
ಈಗಿನ ಮೈತ್ರಿ ಸರ್ಕಾರದಲ್ಲಿಯೂ ಸಹ ಕಳೆದ ಬಜೆಟ್ನಲ್ಲಿ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲದಿರುವ ಮಲತಾಯಿ ಧೋರಣೆಯನ್ನು ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಎಲ್ಲ ಪ್ರಗತಿಪರ ಚಿಂತಕರನ್ನು ಒಳಗೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿ ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಅದೇ ರೀತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊಫೆಸರ್ ಎಸ್ ಜಿ ಸಿದ್ದರಾಮಯ್ಯನವರು ಮಾತನಾಡುತ್ತಾ ದೇಶದಲ್ಲಿ ಅಸಂಘಟಿತ 749 ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸುಮಾರು 11 ಕೋಟಿ ಜನರ ಬದುಕು ಮೂರಾಬಟ್ಟೆಯಾಗಿ ಅವರು ಇಂದಿಗೂ ಬೀದಿಯಲ್ಲಿ ಬಿದ್ದಿದ್ದಾರೆ ಕಾರಣ ಇದುವರೆಗೂ ಆಳಿದ ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಇಚ್ಛಾಶಕ್ತಿಯ ಕೊರತೆಯಿಂದ ಬಹುಸಂಖ್ಯಾತ ಮೂಲನಿವಾಸಿಗಳು ಇಂದಿಗೂ ಅವಕಾಶ ವಂಚಿತರಾಗಿ ಅಲೆಮಾರಿಗಳಾಗಿದ್ದಾರೆ ಎಂದರು.
ಆದ್ದರಿಂದ ಎಲ್ಲ ಅಲೆಮಾರಿ ನಾಯಕರು ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಮುಂದಿನ ಹೋರಾಟವನ್ನು ರೂಪಿಸಲು ಶೀಘ್ರವೇ ಎಲ್ಲ ಪ್ರಗತಿಪರ ಚಿಂತಕರು ಬುದ್ಧಿಜೀವಿಗಳು ಹಿರಿಯ ಸಾಹಿತಿಗಳನ್ನು ಒಳಗೊಂಡಂತೆ ಅಲೆಮಾರಿಗಳ ಅಭಿವೃದ್ಧಿಗಾಗಿ ಅಲೆಮಾರಿ ಸಮುದಾಯಗಳ ಹೋರಾಟ ಸಮನ್ವಯ ಸಮಿತಿಯನ್ನು ರಚಿಸಿ ಹೋರಾಟ ರೂಪಿಸುವುದಾಗಿ ತಿಳಿಸುತ್ತಾ ಮೈತ್ರಿ ಸರ್ಕಾರದ ಜೊತೆಯಲ್ಲಿ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಯ ಬಗ್ಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ಸಭೆಯನ್ನು ಆಯೋಜಿಸಿದ ಚಿತ್ರನಟರಾದ ಚೇತನ್ ಅಹಿಂಸ ಅವರು ಮಾತನಾಡುತ್ತಾ ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಅಲೆಮಾರಿ ಸಮುದಾಯಗಳಿಗೆ ವಸತಿ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ದಕ್ಕಿಸಿಕೊಡಲು ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಅಲೆಮಾರಿ ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ದಾಸ್ ಎಕ್ಕಾರು, ಅಲೆಮಾರಿ ಬುಡಕಟ್ಟು ಮಹಾಸಭಾದ ಮುಖಂಡರು ಹಾಗೂ ಚಿಂತಕರು ಆದ ಡಾ. ಬಾಲಗುರುಮೂರ್ತಿ, ಡಾ. ಗೋವಿಂದಸ್ವಾಮಿ ,ಶೇಷಪ್ಪ, ರಂಗಪ್ಪ ಹಾಗೂ BAMCEF ಸುಭಾಷ್ ಶೀಲವಂತ ಅಜೀಜ್ ಪಿಂಡಾರಿ ಡಾಕ್ಟರ್ ಭಾನುಪ್ರಕಾಶ್ ಹಾಗೂ ಸುಮಾರು 51 ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಸಮುದಾಯಗಳ ಮುಖಂಡರಾದ ಬಿ.ಎಸ್. ಅನಂದ್ ಕುಮಾರ್ ಏಕಲವ್ಯ, ಬಿ.ಎಚ್. ಮಂಜುನಾಥ್, ಎಸ್,ಗೋವಿಂದು, ಕಿರಣ್ ಕುಮಾರ್ ಕೊತ್ತಿಗೆರೆ,
ಲೋಹಿತಾಕ್ಷ,ಬಿ.ಟಿ. ದಾಸರ್ ಮಹೇಂದ್ರರಾವ್ ಸಾಸ್ನಕ್ ಮತ್ತಿತರೆ ಅಲೆಮಾರಿ ಸಮುದಾಯಗಳ ನೂರಾರು ಮುಖಂಡರು ಈ ಒಂದು ಅಲೆಮಾರಿ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in : [email protected] ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]
ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.
ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..
ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.
ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ6 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ಅಂತರಂಗ6 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಭಾವ ಭೈರಾಗಿ6 days ago
ಕವಿತೆ | ಯುಗಾದಿ ಪುರುಷ
-
ಲೈಫ್ ಸ್ಟೈಲ್5 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ7 days ago
ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021
-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
-
ನಿತ್ಯ ಭವಿಷ್ಯ5 days ago
ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021