ಸಿನಿ ಸುದ್ದಿ
ಬುರ್ಜ್ ಖಲೀಫಾದ ಮೇಲೆ ಕನ್ನಡ ಬಾವುಟ; ‘ವಿಕ್ರಾಂತ್ ರೋಣ’ ಕಿಚ್ಚನ 25ರ ಸಿನಿ ಸಂಭ್ರಮ..!
ಸುದ್ದಿದಿನ,ದುಬೈ: ಭಾರತೀಯ ಚಿತ್ರರಂಗವಷ್ಟೇ ಅಲ್ಲ, ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಕ್ಷಣವದು. ವಿಶ್ವದ ಅತಿದೊಡ್ಡ ಕಟ್ಟಡದ ಬುರ್ಜ್ ಖಲೀಫಾದ ಮೇಲೆ ಕಿಚ್ಚ ಅಭಿನಯದ “ವಿಕ್ರಾಂತ್ ರೋಣ” ಸಿನೆಮಾದ ಟೈಟಲ್ ಲೋಗೋ ಲೋಕಾರ್ಪಣೆ ಗೊಂಡಿತು.
ಕಿಚ್ಚನ ಅಭಿಮಾನಿಗಳಲ್ಲಿ ಭಾರೀ ಕುತೂಹಲ- ನಿರೀಕ್ಷೆ ಮೂಡಿಸಿದ್ದ ‘ವಿಕ್ರಾಂತ್ ರೋಣ’ ಸಿನಿಮಾದ ಟೈಟಲ್ ಲೋಗೋ ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ್ ಮೇಲೆ ಬಿಡುಗಡೆಯಾಯಿತು. ಜತೆಗೆ ಸಿನಿಮಾ ರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರ ಕಟೌಟ್ ಕೂಡ ಪ್ರದರ್ಶನ ಕಂಡಿತು.
ಕಿಚ್ಚ ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಯಿತು. ಕಿಚ್ಚ ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ಸಿನಿರಂಗದಲ್ಲಿ 25 ವರ್ಷ ನಡೆದು ಬಂದ ಹಾದಿಯನ್ನು ಟೀಸರ್ ನ ಮೂಲಕ ಬಿತ್ತರಿಸಲಾಯಿತು. ಇವೆಲ್ಲದರ ನಡುವೆ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಕನ್ನಡದ ಬಾವುಟ ರಾರಾಜಿಸಿದ್ದು, ಕೋಟ್ಯಾಂತರ ಕನ್ನಡಿಗರ ಹಿರಿಮೆ ಹೆಚ್ಚಿಸಿತು. ಅಭಿಮಾನಿಗಳು ಈ ಸಂಭ್ರಮವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿಕ್ರಾಂತ್ ರೋಣ ಟೀಸರ್ ಕೂಡ ರಿಲೀಸ್ ಆಯಿತು. ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಪ್ರಕಟಿಸಿತು. ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದು, ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ ಘಳಿಗೆಗೆ ಕಿಚ್ಚ ಅಭಿಮಾನಿಗಳಿಗೆ ವಂದನೆತಿಳಿಸಿದರು. ದುಬೈನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿರ್ಮಾಪಕ ಜ್ಯಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ, ನಟ ನಿರೂಪ್ ಭಂಡಾರಿ, ಪ್ರಿಯಾ ಸುದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
Thanks @BurjKhalifa fr personally sending me this video .. thanks #Dubai for hosting us soo well.
Mch luv 🙏🏼.Wil be posting a HD video of the same wth a greater sound quality n a grander view, tomorrow.
Thanking all u frnzz once again fr the unconditional luv,,thru & thru.
🤗🥂 pic.twitter.com/XLFIbrxp2h— Kichcha Sudeepa (@KicchaSudeep) January 31, 2021
ಜಗತ್ತಿನ ಅತೀ ಎತ್ತರದ ಕಟ್ಟಡ 'ಬುರ್ಜ್ ಖಲೀಫಾ' ಮೇಲೆ ನಮ್ಮ ಕನ್ನಡದ ಬಾವುಟ ಹಾರಿದ ಕ್ಷಣ ರೋಮಾಂಚನ. Best wishes to @KicchaSudeep sir and team #vikrant_rona. pic.twitter.com/eKPyIzJ742
— Sanchari Vijay (@SanchariVijay) January 31, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ1 day ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ