ದಿನದ ಸುದ್ದಿ
ಗ್ರಾಹಕರಿಗೆ ಆನ್ಲೈನ್ ಪಯಣವನ್ನು ಹೆಚ್ಚು ಸುರಕ್ಷಿತವಾಗಿಸಲು ಕ್ಯಾಸ್ಪರ್ಸ್ಕೈ ಜತೆ ಕೈಜೋಡಿಸಿದ ಏರ್ಟೆಲ್
ಸುದ್ದಿದಿನ,ಬೆಂಗಳೂರು : ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಭಾರತದ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರತದ ಪ್ರಮುಖ ಸಂವಹನ ಪರಿಹಾರ ಪೂರೈಕೆದಾರ ಕಂಪನಿಯಾದ ಭಾರ್ತಿ ಏರ್ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ.
ಎರಡು ಕಂಪನಿಗಳ ನಡುವಿನ ಸಹಯೋಗವು ಏರ್ಟೆಲ್ ಗ್ರಾಹಕರಿಗೆ ಕ್ಯಾಸ್ಪರ್ಸ್ಕೈನ ಒಟ್ಟು ಭದ್ರತಾ ಪರಿಹಾರವನ್ನು ಏರ್ಟೆಲ್ ಥ್ಯಾಂಕ್ಸ್ ಆ್ಯಪ್ನಿಂದ ನೇರವಾಗಿ ಕೆಲವು ಕ್ಲಿಕ್ಗಳಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ಅಂತರ್ಜಾಲ ಬಳಕೆದಾರರಲ್ಲಿ ಸೈಬರ್ ಸುರಕ್ಷತೆಯ ಅರಿವನ್ನು ಹೆಚ್ಚಿಸುವ ಮತ್ತು ಸೈಬರ್ ಬೆದರಿಕೆಗಳ ಹಿನ್ನೆಲೆಯಲ್ಲಿ ಸೈಬರ್ ಸುರಕ್ಷತೆಯನ್ನು ಅಭ್ಯಾಸ ಮಾಡಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ಒಕ್ಕೂಟವನ್ನು ರಚಿಸಲಾಗಿದೆ.
ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021 ರ ಮೊದಲ ತ್ರೈಮಾಸಿPದಲ್ಲಿ ಕ್ಯಾಸ್ಪರ್ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ, ಏಕೆಂದರೆ ಸೈಬರ್ ಅಪರಾಧಿಗಳು ನಿರಂತರವಾಗಿ ಹಣಕಾಸಿನ ಲಾಭಕ್ಕಾಗಿ ಮತ್ತು ಪ್ರಮುಖ ಖಾಸಗಿ ಡೇಟಾವನ್ನು ಪಡೆಯಲು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಭಾರತದಲ್ಲಿ ಮೊಬೈಲ್ ಬೆದರಿಕೆಗಳು 2019 ರಿಂದ ತೀವ್ರವಾಗಿ ಹೆಚ್ಚಾಗಿದೆ ಮತ್ತು ಈ ಬಗೆಯ ಗುರಿ ಹೆಚ್ಚು ಅತ್ಯಾಧುನಿಕ ಸ್ವರೂಪದ್ದಾಗುತ್ತಿದೆ. 2020 ರಲ್ಲಿ ಮೊಬೈಲ್ ಬೆದರಿಕೆಗಳಿಂದ ದಾಳಿಗೊಳಗಾದ ದೇಶಗಳಲ್ಲಿ ಭಾರತ 7ನೇ ಸ್ಥಾನದಲ್ಲಿದೆ.
ಜಾಗತಿಕವಾಗಿ ಸ್ಮಾರ್ಟ್ ಫೋನ್ ಬಳಕೆದಾರರನ್ನು ಪ್ರಮುಖ ಮೊಬೈಲ್ ಬೆದರಿಕೆಗಳು ಗುರಿ ಮಾಡಿದ್ದು, ಆ್ಯಡ್ವೇರ್ 57% (3,254,387 ಪತ್ತೆ) ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇತರ ಅಪಾಯಗಳ ಬಗ್ಗೆ ಮಾತನಾಡುತ್ತಾ, ಬ್ಯಾಕ್ಡೋರ್ಸ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2019ರಲ್ಲಿ 28,889 ಇದ್ದುದು 2020 ರಲ್ಲಿ 84,495 ಕ್ಕೆ ಹೆಚ್ಚಿದೆ.
ಪತ್ತೆಯಾದ ಆಂಡ್ರಾಯ್ಡ್ ಶೋಷಣೆಗಳ ಸಂಖ್ಯೆ ಹದಿನೇಳು ಪಟ್ಟು ಹೆಚ್ಚಾಗಿದೆ ಮತ್ತು ಟ್ರೋಜನ್-ಪ್ರಾಕ್ಸಿ ಬೆದರಿಕೆಗಳ ಸಂಖ್ಯೆ ಹನ್ನೆರಡು ಪಟ್ಟು ಹೆಚ್ಚಾಗಿದೆ. ಕ್ಯಾಸ್ಪರ್ಸ್ಕೈ ಪರಿಹಾರಗಳು 2020 ರಲ್ಲಿ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್ಗಳಿಗಾಗಿ 156,710 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ಪತ್ತೆ ಮಾಡಿವೆ, ಇದು 2019 ರಲ್ಲಿ ಪತ್ತೆಯಾದ ದಾಳಿಗಳ ಎರಡು ಪಟ್ಟು ಅಧಿಕ. ಆದಾಗ್ಯೂ, 2020 ರಲ್ಲಿ ರ್ಯಾನ್ಸಮ್ವೇರ್ ಟ್ರೋಜನ್ಗಳಿಗಾಗಿ 20,708 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ನಾವು ಕಂಡುಕೊಂಡಿದ್ದರಿಂದ ಹಿಂದಿನ ವರ್ಷಕ್ಕೆ ಹೋಲಿಸಿದರೆ ರ್ಯಾನ್ಸಮ್ವೇರ್ ಟ್ರೋಜನ್ಗಳು 3.5 ಪಟ್ಟು ಕುಸಿತ ಕಂಡಿವೆ.
ಕ್ಯಾಸ್ಪರ್ಸ್ಕೈ ಸಿಇಒ ಯುಜೀನ್ ಕಾಸ್ಪರ್ಸ್ಕೈ ಈ ಬಗ್ಗೆ ಮಾತನಾಡಿ, “ತಮ್ಮ ಗ್ರಾಹಕರಿಗೆ ಸುರಕ್ಷೆ ಒದಗಿಸುವ ಸಲುವಾಗಿ ಪ್ರಮುಖ ಜಾಗತಿಕ ದೂರಸಂಪರ್ಕ ಕಂಪನಿ ಮತ್ತು ಅತಿದೊಡ್ಡ ಮೊಬೈಲ್ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರ್ತಿ ಏರ್ಟೆಲ್ ಜತೆಗೆ ಹೆಚ್ಚು ಸುರಕ್ಷಿತ ಇಂಟರ್ನೆಟ್ ಅನ್ನು ಸೃಷ್ಟಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ, ಮತ್ತು ಕ್ಯಾಸಪರ್ಸ್ಕೈಯೊಂದಿಗೆ ಸುರಕ್ಷಿತ ಡಿಜಿಟಲ್ ಜಗತ್ತನ್ನು ನಿರ್ಮಿಸುವ ಮೂಲಕ ಈ ಪಾಲುದಾರಿಕೆಯು ಏರ್ಟೆಲ್ ಅನ್ನು ಹೊಸತನದ ಪ್ರವರ್ತಕ ಮತ್ತು ಅದರ ಉದ್ಯಮದಲ್ಲಿ ನಾಯಕನಾಗಿ ಸ್ಥಾಪಿಸಲು ಮತ್ತಷ್ಟು ಕೊಡುಗೆ ನೀಡುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.
ಭಾರ್ತಿ ಏರ್ಟೆಲ್ ಸಿಇಓ ಪ್ರದೀಪ್ ಕಪೂರ್ ಮಾತನಾಡಿ, “ಗ್ರಾಹಕರ ಜೀವನ ಶೈಲಿಯು ಡಿಜಿಟಲ್ ಪ್ಲಾಟ್ಫಾರ್ಮ್ಗಳೊಂದಿಗೆ ಹೆಚ್ಚು ಸಂಯೋಜಿತವಾಗುತ್ತಿದ್ದಂತೆ, ಈ ಪಯಣವನ್ನು ಸರಿಯಾದ ಪರಿಹಾರಗಳೊಂದಿಗೆ ಭದ್ರಪಡಿಸುವುದು ನಮಗೆಲ್ಲರಿಗೂ ಅತಿಮುಖ್ಯವಾಗಿದೆ. ಏರ್ಟೆಲ್ ಜಾಗತಿಕ ಮಟ್ಟದ ಮೂಲಸೌಕರ್ಯ ಮತ್ತು ಪಾಲುದಾರಿಕೆಗಳ ಮೂಲಕ ಸುರಕ್ಷಿತ ನೆಟ್ವರ್ಕ್ ಅನುಭವವನ್ನು ನೀಡಲು ಹಗಲಿರುಳೂ ಕೆಲಸ ಮಾಡುತ್ತಿದೆ.
ಕ್ಯಾಸ್ಪರ್ಸ್ಕೈಯೊಂದಿಗೆ ಪಾಲುದಾರಿಕೆ ಹೊಂದಲು ಮತ್ತು ಅವರ ಪರಿಹಾರಗಳನ್ನು ಏರ್ಟೆಲ್ ಗ್ರಾಹಕರಿಗೆ ಸುಲಭವಾಗಿ ತಲುಪುವಂತೆ ಮಾಡಲು ನಾವು ಸಂತೋಷಪಡುತ್ತೇವೆ, ಅವರು ಇದನ್ನು ಕೆಲವೇ ನಿಮಿಷಗಳಲ್ಲಿ ಖರೀದಿಸಬಹುದು ಮತ್ತು ಸ್ಥಾಪಿಸಬಹುದು ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸಬಹುದು” ಎಂದು ಬಣ್ಣಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?