Connect with us

ಬಹಿರಂಗ

ಆರೆಸ್ಸೆಸ್ ಗೆ ಅಂಬೇಡ್ಕರ್ ಕೃತಿಗಳನ್ನು ಓದಿಸುವ ಧೈರ್ಯವಿದೆಯಾ?

Published

on

  • ಹರ್ಷಕುಮಾರ್ ಕುಗ್ವೆ

ದೇಶದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಸಮಾಜದ ಜಾತಿ- ಲಿಂಗ ತಾರತಮ್ಯವನ್ನು ಹೋಗಲಾಡಿಸಲು ಬುದ್ಧ, ಬಸವ, ಫುಲೆ, ಶಾಹು, ಅಂಬೇಡ್ಕರ್ ಪೆರಿಯಾರ್ ಹೀಗೆ ಅದೆಷ್ಟೋ ದಾರ್ಶನಿಕರು ತಮ್ಮ ಬದುಕುಗಳನ್ನೇ ಸಮರ್ಪಿಸಿದ್ದಾರೆ. ಆದರೂ ಈ ದೇಶದ ವೈದಿಕಶಾಹಿಯನ್ನು ಸೋಲಿಸಲು ಸಾಧ್ಯವಾಗದೇ ಅದು ಮತ್ತಷ್ಟು ಬಲಗೊಳ್ಳುತ್ತಲೇ ಹೋಗಿದೆ, ಅದು ತನ್ನ ಕಬಂಧ ಬಾಹುಗಳನ್ನು ಮೈಲುದ್ದಕ್ಕೆ ಬೆಳೆಸಿಕೊಂಡು ಚಾಚಿಕೊಳ್ಳುತ್ತಾ ಎಲ್ಲವನ್ನೂ ತೆಕ್ಕೆಗೆ ತೆಗೆದುಕೊಳ್ಳುತ್ತಲೇ ಇದೆ. ಇದಕ್ಕೆ ವೈದಿಕಶಾಹಿ ಎಲ್ಲಾ ಕಾಲದಲ್ಲಿ ದಮನದ ತಂತ್ರವನ್ನು ಬಳಸಿದ್ದರೆ ಸಾಧ್ಯವಾಗುತ್ತಿರಲಿಲ್ಲ. ಬದಲಿಗೆ ಅದು ವಂಚನೆ-ನಯವಂಚನೆಯ ತಂತ್ರಗಳನ್ನು ಬಳಸಿರುವುದು ಪ್ರಮುಖ ಕಾರಣ ಎನಿಸುತ್ತದೆ. ಕೌಟಿಲ್ಲ ಹೇಳಿದ್ದ ರಾಜನೀತಿಯ ಚತುರೋಪಾಯಗಳಾದ ಸಾಮ, ದಾನ, ಭೇದ ಮತ್ತು ದಂಡ ಇವುಗಳನ್ನು ಪ್ರತಿ ಹಂತದಲ್ಲಿಯೂ ಅತ್ಯಂತ ಪರಿಣಾಮಕಾರಿಯಾಗಿ ವೈದಿಕಶಾಹಿ ಬಳಸಿಕೊಂಡಿರುವುದರಲ್ಲೇ ಅದರ ಯಶಸ್ಸನ್ನು ಕಾಣಬಹುದು.

ಮೊನ್ನೆ ನವೆಂಬರ್ 24ರಂದು ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಬಿಜೆಪಿ ಆಚರಿಸಿದ ಸಂವಿಧಾನ ದಿನಾಚರಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಬಿ ಎಲ್ ಸಂತೋಷ್ ಆಡಿರುವ ಮಾತುಗಳನ್ನು ಮತ್ತು ಕೆಲ ದಲಿತ ಬಂಧುಗಳು ಆ ಮಾತುಗಳನ್ನು ಸೆಲೆಬ್ರೇಟ್ ಮಾಡಿರುವುದನ್ನು ನೋಡಿದಾಗ ವೈದಿಕಶಾಹಿ ನಡೆಸುವ ಈ ಕುಟಿಲ ಚಾಣಾಕ್ಷತನದ ಬಗ್ಗೆ ಯೋಚಿಸುವಂತಾಯಿತು.

ಬಿ ಎಲ್ ಸಂತೋ಼ಷ್ ಆಡಿರುವ ಮಾತುಗಳನ್ನು ಕೇಳಿದರೆ ಸಹಜವಾಗಿ ಈ ದೇಶದ ಸಂವಿಧಾನದ ಬಗ್ಗೆ ಮತ್ತು ಅಂಬೇಡ್ಕರ್ ಬಗ್ಗೆ ಅಭಿಮಾನ ಇರುವ ಯಾರೇ ಆದರೂ ಕ್ಲೀನ್ ಬೋಲ್ಡ್ ಆಗಿಬಿಡುತ್ತಾರೆ. ವಾಹ್ ಎಂತಾ realization! ಅದೂ ಆರೆಸ್ಸೆಸ್ಸಿಗನ ಬಾಯಿಯಲ್ಲಿ ಅಂಬೇಡ್ಕರ್ ಕೊಂಡಾಟದ ಮಾತುಗಳು! ಎನಿಸಿಬಿಡುತ್ತವೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು, ಅವರ ಆಶಯ ಕನಸುಗಳನ್ನು ಅರ್ಥ ಮಾಡಿಕೊಂಡ ಯಾರಿಗೇ ಈ ವೈದಿಕಶಾಹಿ ಸಂತೋ಼ಷನ ಮಾತುಗಳು ಖುಷಿಗೊಳಿಸುವುದಿಲ್ಲ, ಆಕ್ರೋಶ ತರಿಸುತ್ತವೆ. ಕಾರಣವೇನೆಂದರೆ, ಯಾವ ವೈದಿಕಶಾಹಿಯನ್ನು ಹಿಮ್ಮೆಟ್ಟಿಸಲು ಬಾಬಾಸಾಹೇಬರು ತಮ್ಮ ಬದುಕಿನುದ್ದಕ್ಕೂ ಶ್ರಮಪಟ್ಟರೋ; ಯಾವ ವೈದಿಕಶಾಹಿಯ ಹುನ್ನಾರಗಳನ್ನು ತಮ್ಮ ಬರೆಹಗಳಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟರೋ; ಯಾವ ವೈದಿಕಶಾಹಿಯ ಹತಾರಗಳನ್ನು ಕಾಂಗ್ರೆಸ್ ಮತ್ತು ಮಹಾತ್ಮ ಗಾಂಧಿಯಲ್ಲೂ ಕಂಡು ಅಂಬೇಡ್ಕರ್ ಕೆಂಡಾಮಂಡಲವಾಗಿದ್ದರೋ; ಯಾವ ವೈದಿಕಶಾಹಿಯ ಹಿಡಿತದಿಂದ ತನ್ನ ಸಮುದಾಯವನ್ನು ಮಾತ್ರವಲ್ಲ ಇಡೀ ಭರತಖಂಡವನ್ನು ಬಿಡುಗಡೆಗೊಳಿಸಲು ಇಚ್ಚಿಸಿದ್ದರೋ: ಯಾವ ವೈದಿಕಶಾಹಿಯ ಹಿಡಿತದಿಂದ ಜನರನ್ನು ತಪ್ಪಿಸಲು ವೈದಿಕ ಹಿಂದೂ ಧರ್ಮವನ್ನು ತ್ಯಜಿಸಿ ಸಮತೆಯ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೋ; ಯಾವ ವೈದಿಕಶಾಹಿಯನ್ನು ಎದುರಿಸಲು ತನ್ನ ಅನುಯಾಯಿಗಳಿಗೆ “ಹಿಂದೂ ದೇವರುಗಳಾದ ರಾಮ, ವಿಷ್ಣು, ಮೊದಲಾದ ದೇವರುಗಳನ್ನು ನಾನು ಪೂಜಿಸುವುದಿಲ್ಲ” ಎಂಬ ಪ್ರತಿಜ್ಞೆಯನ್ನು ಬೋಧಿಸಿದ್ದರೋ; ಯಾವ ವೈದಿಕಶಾಹಿಯ ಸಂಪೂರ್ಣ ನಾಶವನ್ನು ಅಂಬೇಡ್ಕರ್ ಬಯಸಿದ್ದರೋ ಅದೇ ವೈದಿಕಶಾಹಿಯು ಅಂಬೇಡ್ಕರ್ ಅವರನ್ನು ದಿಢೀರನೆ ಇನ್ನಿಲ್ಲದಂತೆ ಹೊಗಳಲು, ಕೊಂಡಾಡಲು ಶುರುಮಾಡಿದೆ! ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಮತ್ತು ಅವರು ರಚಿಸಿದ ಸಂವಿಧಾನವನ್ನು ನರನಾಡಿಗಳಲ್ಲಿ ವೈದಿಕಶಾಹಿ ಚಿಂತನೆ ಮತ್ತು ಹುನ್ನಾರಗಳನ್ನೇ ಹೊಂದಿರುವ ಬಿ ಎಲ್ ಸಂತೋ಼ಷ್ ಕೊಂಡಾಡಿದ್ದನ್ನು ಕಂಡು “ಓ ವೈದಿಕಶಾಹಿಯ ಮನಪರಿವರ್ತನೆ ಆಗುತ್ತಿದೆ” ಎಂದುಕೊಳ್ಳೋಣವೇ? “ಅಂಬೇಡ್ಕರ್ ಕುರಿತು ಆರೆಸ್ಸೆಸ್ ತನ್ನ ಅಭಿಪ್ರಾಯ ಬದಲಿಸಿಕೊಳ್ಳುತ್ತಿದೆ” ಎಂದು ಭ್ರಮಿಸಿ ಸಂಭ್ರಮ ಪಡೋಣವೇ?

ಹಲವರುಷಗಳ ಹಿಂದೆ ಇದೇ ಆರೆಸ್ಸೆಸ್ ಪಾಳಯದಲ್ಲಿ ಬೆಳೆದ ಅರುಣ್ ಶೌರಿ ಎಂಬಾತ ತನ್ನ “Worshipping false gods” ಕೃತಿಯಲ್ಲಿ ಅಂಬೇಡ್ಕರ್ ಒಬ್ಬ ಪೊಳ್ಳು ದೇವರು ಎಂದು ಜರಿದು ಅಪಮಾನಿಸಿದ್ದ. ಒಂದೆರಡು ವರ್ಷಗಳ ಹಿಂದೆ ಜರ್ಮನಿಯ ಯೂನಿವರ್ಸಿಟಿಯೊಂದರಲ್ಲಿರುವ ಬಾಲಗಂಗಾಧರ ಎಂಬ ಅವಿವೇಕಿಯಂತೂ ಅಂಬೇಡ್ಕರ್ ಒಬ್ಬ ಈಡಿಯಟ್ ಎಂದು ಹೇಳಿ ಬೆತ್ತಲಾಗಿದ್ದ, ಎರಡೇ ವರ್ಷದ ಹಿಂದೆ ಉತ್ತರ ಕನ್ನಡವನ್ನು ಪ್ರತಿನಿಧಿಸುವ ಆರೆಸ್ಸೆಸ್ ಚಿಂತನೆಯ ಮುಠ‍್ಠಾಳ ಸಂಸದನೊಬ್ಬ ಸಂವಿಧಾನವನ್ನೇ ಬದಲಿಸುತ್ತೇನೆ ಎಂದು ಹೇಳಿ ಕೊನೆಗೆ ಸಂಸತ್ತಿನಲ್ಲೇ ಕ್ಷಮಾಪಣೆ ಕೇಳಿದ್ದ. ಅರೆ, ಇವರೆಲ್ಲರೂ ಈ ಕ್ಷಣದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಆರೆಸ್ಸೆಸ್ಸಿನ ನಿಕಟವರ್ತಿಗಳೇ. ಈಗ ಅದೇ ಆರೆಸ್ಸೆಸ್ಸಿನ ಬಿ ಎಲ್ ಸಂತೋ಼ಷ ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡರೇನೇ ಸಂವಿಧಾನ ಅರ್ಥಮಾಡಿಕೊಳ‍್ಳಲು ಸಾಧ್ಯ ಎನ್ನುತ್ತಾನೆ! ಮಾತ್ರವಲ್ಲ “ಸಂವಿಧಾನ ಕೊಟ್ಟಿರುವ ಮೀಸಲಾತಿ ಇದೆಯಲ್ಲಾ ಅದು ನಾವು ಕೊಟ್ಟಿರುವ ಕೊಡುಗೆಯಲ್ಲ ಬದಲಿಗೆ ದಲಿತರನ್ನು ವಂಚಿಸಿದ ದೊಡ್ಡ ವರ್ಗವೊಂದು ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ್ತ ಎನ್ನುತ್ತಾನೆ! ಎಂತಹಾ ದಾರ್ಶನಿಕ ಮಾತು!! ಇದರಲ್ಲಿನ ತರ್ಕವೇನೋ ಸರಿಯಾಗಿದೆ. ಆದರೆ ಆತ ಮುಂದುವರಿದು ‘ದಲಿತರನ್ನು ಶೂದ್ರರನ್ನು ಈ ದೇಶದಲ್ಲಿ ವಂಚಿಸಿರುವುದು ಬಹುದೊಡ್ಡ ವರ್ಗ ಎಂಬ ಹಸಿಹಸಿ ಸುಳ್ಳು ಹೇಳುತ್ತಾನೆ. ವಾಸ್ತವದಲ್ಲಿ ಇಡೀ ದೇಶದ ಬಹುದೊಡ್ಡ ವರ್ಗವನ್ನು ಅವಕಾಶಗಳನ್ನು ಚಾರಿತ್ರಿಕವಾಗಿ ವಂಚಿಸಿಕೊಂಡು ಬಂದಿದ್ದು ಈ ದೇಶ ಜನಸಂಖ್ಯೆ ಕೇವಲ 3-4 % ಇರುವ ಜನವರ್ಗ ಎಂಬ ಕಟು ಸತ್ಯವನ್ನು ಬೇಕೆಂದೇ ಮರೆಮಾಚುತ್ತಾನೆ.

ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಆಯೋಗದ ಅನುಸಾರವಾಗಿ ದಲಿತ-ಹಿಂದುಳಿತ ವರ್ಗಗಳ ಬಹುಸಂಖ್ಯಾತರಿಗೆ ಮೀಸಲಾತಿ ನೀಡಿದಾಗ ಅಂಡುಸುಟ್ಟ ಬೆಕ್ಕಿನಂತೆ ಆಡಿದ ಜನವರ್ಗ ಯಾವುದಾಗಿತ್ತು? ಅದು ಬಹದೊಡ್ಡ ವರ್ಗವೋ ಕೇವಲ ಬ್ರಾಹ್ಮಣ ಜಾತಿಯೋ? ಇದೇ ಕಾರಣಕ್ಕೆ ರಾಜೀನಾಮೆ ನೀಡಿದ್ದ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯ ಅವರ ತಲೆಯಲ್ಲಿದ್ದ ಜಾತಿಭೂತ ಯಾವುದಾಗಿತ್ತು? ಆದರೆ ಅತ್ಯಾಶ್ಚರ್ಯ ಎಂಬಂತೆ ಈಗ ಈ ಆರೆಸ್ಸೆಸ್ಸಿಗ ಮೀಸಲಾತಿಯ ಸಮರ್ಥನೆಗೆ ನಿಂತಿದ್ದಾನೆ ಎಂದರೆ ಅದು ಮನಪರಿವರ್ತನೆ? ಈಗ ನೋಡಿ. ಮೀಸಲಾತಿ ವಿರುದ್ಧವಾಗಿ ಇಡೀ ದೇಶವನ್ನು ಎತ್ತಿ ಕಟ್ಟುತ್ತಿದ ಶೇಕಡಾ ಮೂರ್ನಾಲ್ಕು ಶೇಕಡಾ ಇರುವ ಜನರಿಗೆ ಕಳೆದ ವರ್ಷದಿಂದ 10% ಮೀಸಲಾತಿ ಸಿಗತೊಡಗಿದೆ. ಇಷ್ಟೂ ವರ್ಷಗಳ ಕಾಲ ಮೀಸಲಾತಿ ಎಂದರೇ ಉರಿದು ಬೀಳುತ್ತಿದ್ದವರು ಈಗ ತಮ್ಮ ಜನಸಂಖ್ಯೆಗಿಂತಲೂ ಎರಡು ಮೂರು ಪಟ್ಟು ಮೀಸಲಾತಿ ಪಡೆದುಕೊಳ್ಳುತ್ತಿದ್ದಂತೆ ಮೀಸಲಾತಿಯನ್ನು ಕೊಂಡಾಡತೊಡಗಿದ್ದಾರೆ! ತಿಳಿಯಿತಲ್ಲ ಈ ಮನಪರಿವರ್ತನೆಯ ಹಿಂದಿನ ಹಕೀಕತ್ತು? ದೇಶದಲ್ಲಿ ನಡೆಯುವ ಮನಪರಿವರ್ತನೆಗಳ ಹಿಂದೆ ಅಡಗಿರುವ ಸ್ವಾರ್ಥವೇನು ಎಂದು ಅರಿಯದೇ ಹೋದರೆ ವೈದಿಕಶಾಹಿ ತೋಡುವ ಖೆಡ್ಡಾದಲ್ಲಿ ಬಿದ್ದು ಹೊರಳಾಡಬೇಕಾಗುತ್ತದೆ ಅಷ್ಟೇ.

ಈಗ ಮೀಸಲಾತಿಯನ್ನೂ, ಅಂಬೇಡ್ಕರ್ ಅವರನ್ನೂ ಹಾಡಿ ಹೊಗಳುತ್ತಿರುವ ಬಿ ಎಲ್ ಸಂತೋ಼ಷ್ ಮತ್ತು ಅವನ ಚೇಲಾ ಬಾಲಾಗಳಿಗೆ ನಾವು ಕೆಲವೊಂದಿಷ್ಟು ಪ್ರಶ್ನೆಗಳನ್ನು ಕೇಳೋಣ. ಉತ್ತರಿಸುವ ಪ್ರಾಮಾಣಿಕತೆ ತೋರುತ್ತಾರೋ ನೋಡೋಣ.

  1. ನವೆಂಬರ್ 24ರಂದು ನೀವು ಹಮ್ಮಿಕೊಂಡ ಸಂವಿಧಾನ ದಿನಾಚರಣೆಯ ವಾರದ ಮೊದಲು ನೀವು ಪ್ರಚುರಪಡಿಸಿದ ಭಿತ್ತಿಪತ್ರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿತ್ರ ಇರಲಿಲ್ಲ. ಬದಲಾಗಿ ಸಂವಿಧಾನಕ್ಕೆ ಸಂಬಂಧವೇ ಇಲ್ಲದ ಶ್ಯಾಮ್ ಪ್ರಸಾದ್ ಮುಖರ್ಜಿಯ ಫೋಟೋ ಇತ್ತು. ಅಂಬೇಡ್ಕರ್ ವಾದಿಗಳು ನೀವು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನದ ಬಗ್ಗೆ ಆಕ್ಷೇಪ ಎತ್ತಿದ ಕೂಡಲೇ ಬದಲಿಸಿದಿರಿ. ಈ ಮೊದಲು ಬಾಬಾಸಾಹೇಬರಿಗೆ ನೀವು ಮಾಡಿದ ಅಪಮಾನಕ್ಕೆ ನಿಜವಾದ ಕಾರಣ ಏನು?
  2. 1991ರಲ್ಲಿ ಮಂಡಲ್ ಆಯೋಗದ ವರದಿಯನ್ನು ವಿ ಪಿ ಸಿಂಗ್ ಜಾರಿಗೊಳಿಸಲು ಯತ್ನಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ನಂತರ ವಿ ಪಿ ಸಿಂಗ್ ಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂತೆಗೆದುಕೊಂಡಿತ್ತು. ನಂತರ ಇಡೀ ದೇಶದಾದ್ಯಂತ ಎಬಿವಿಪಿ ಮೂಲಕ ಮಂಡಲ್-ಕಮಂಡಲ್ ಎಂದು ಘೋಷಿಸಿ ವ್ಯಾಪಕ ಹಿಂಸೆಯನ್ನು ಬಿಜೆಪಿ ನಡೆಸಿತ್ತು. ಮೀಸಲಾತಿ ಎಂದರೆ ಮೇಲ್ಜಾತಿಗಳ ಪ್ರಾಯಶ್ಚಿತ್ತ ಎನ್ನುತ್ತಿರುವ ನೀವು ಈ ಹಿಂದೆ ನಡೆಸಿರುವ ಮೀಸಲಾತಿ ವಿರೋಧಿ ಹಿಂಸೆಗೂ ಪ್ರಾಯಶ್ಚಿತ್ತ ಪಟ್ಟುಕೊಳ್ಳುವಿರಾ?
  3. ಮೋಹನ್ ಭಾಗ್ವತ್ ಮೊನ್ನೆ ಮೊನ್ನೆಯಷ್ಟೇ ಮೀಸಲಾತಿ ಬಗ್ಗೆ ಚರ್ಚೆಯಾಗಬೇಕು ಎಂದ. ಎಲ್ಲಿಯವರೆಗೆ ಈ ದೇಶದಲ್ಲಿ ಅಸಮಾನತೆ, ವಂಚನೆ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿಯ ಬೇಕೇ ಬೇಡವೇ ಎಂಬ ಚರ್ಚೆ ಅನಗತ್ಯ. ಆದರೆ ಚರ್ಚೆ ಬೇಕು ಎನ್ನುವು ಆರೆಸ್ಸೆಸ್ ಮುಖಂಡರಿಗೆ ಯಾವ ಪ್ರಾಯಶ್ಚಿತ್ತ ಮಾಡುತ್ತೀರಿ?
  4. ಮೀಸಲಾತಿ ಎಂಬುದು ಅಂಬೇಡ್ಕರ್ ತಮಗಾದ ಅಪಮಾನದ ಕಾರಣಕ್ಕೆ ಸಂವಿಧಾನದಲ್ಲಿ ಸೇರಿಸಿದ್ದು ಎಂದಿದ್ದೀರಿ. ಇದಕ್ಕಿಂತ ಅಸಂಬದ್ಧವಾದ ಬೇರಿಲ್ಲ. ಈ ದೇಶದ ಇತಿಹಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ದೇಶದ ನಾನಾ ಜಾತಿ ವರ್ಗಗಳ ವಿಕಾಸವನ್ನು, ಅವು ತುಳಿತಕ್ಕೊಳಗಾದ ಬಗೆಯನ್ನು ದಾಖಲಿಸಿದ ಬೆರಳೆಣಿಕೆಯಷ್ಟು ವಿದ್ವಾಂಸರಲ್ಲಿ ಅಂಬೇಡ್ಕರ್ ಕೂಡಾ ಒಬ್ಬರು. ಸಂವಿಧಾನದಲ್ಲಿ ಮೀಸಲಾತಿ ಸೇರಿಸಲು ಸಮಾಜದ ಬಗ್ಗೆ ಅಂಬೇಡ್ಕರ್ ಅವರಿಗೆ ಇದ್ದ ಸಮಾಜದ ಮತ್ತು ಚರಿತ್ರೆಯ ಅವಗಾಹನೆ ಹಾಗೂ ಈ ದೇಶವನ್ನು ಸಮಾಜವಾದಿ ಹಾದಿಯಲ್ಲಿ ಕಟ್ಟಬೇಕು ಈ ಮೂಲಕ ಎಲ್ಲಾ ವಂಚಿತ ಸಮುದಾಯಗಳು ನ್ಯಾಯ ಪಡೆಯಬೇಕು ಎಂಬ ಅದಮ್ಯ ಆಶೆಯೇ ಪ್ರಮುಖ ಕಾರಣ. ಇದನ್ನು ಬೇಕೆಂದೇ ಮರೆಮಾಚುವ ಪ್ರಯತ್ನ ಮಾಡುತ್ತಿದ್ದೀರಲ್ಲವೇ?
  5. ಮೇಲ್ಜಾತಿಗಳಿಗೆ 10% ಮೀಸಲಾತಿ ಸಿಕ್ಕಿದ ಮೇಲೆ ಮೀಸಲಾತಿಯ ಬಗ್ಗೆ ವರಸೆಯನ್ನೇ ಬದಲಿಸಿಕೊಳ್ಳುತ್ತಿರುವ ನೀವು ದೇಶದ ಪ್ರಮುಖ ಉದ್ಯೋಗ ಕ್ಷೇತ್ರವಾದ ಖಾಸಗಿ ಕ್ಷೇತ್ರಕ್ಕೆ ಮೀಸಲಾತಿ ವಿಸ್ತರಣೆ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಹೇಳಿ. ಖಾಸಗಿ ಕ್ಷೇತ್ರ ಹೇಗೂ ಪ್ರಮುಖವಾಗಿ ಮೇಲ್ಜಾತಿ “ಪ್ರತಿಭೆಗಳ” ಹಿಡಿತದಲ್ಲೇ ಇರೋದರಿಂದ ಅಲ್ಲಿ ಮೀಸಲಾತಿ ಬೇಡ ಎಂದು ನಿಮ್ಮ ಅಭಿಪ್ರಾಯವಾಗಿದ್ದರೆ ಸ್ಪಷ್ಟಪಡಿಸಿ. ಹೀಗಲ್ಲಾ ಖಾಸಗಿ ಕ್ಷೇತ್ರದಲ್ಲಿಯೂ ಮೇಲ್ಜಾತಿ ಜನರಿಗೆ ಪ್ರಾಯಶ‍್ಚಿತ್ತ ಬೇಕು ಎಂದು ನೀವು ಪ್ರಾಮಾಣಿಕವಾಗಿ ಒಪ್ಪುವುದೇ ಆದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತಿರುವ ಒತ್ತಾಯವನ್ನು ಯಾವಾಗ ಹಾಕುತ್ತೀರಿ ತಿಳಿಸಿ.
  6. ಅಂಬೇಡ್ಕರ್ ಅವರನ್ನು ನೀವು ಅರ್ಥ ಮಾಡಿಕೊಳ್ಳಲು ಶುರು ಮಾಡಿದ್ದು ತೀರಾ ಇತ್ತೀಚೆಗೆ ಎಂದು ಹೇಳಿದ್ದೀರಿ. ಸಂತೋಷ. ಅಂಬೇಡ್ಕರ್ ಅವರು ಹಿಂದೂ ಧರ್ಮದ ಕುರಿತು ಖಚಿತ ನಿರ್ಧಾರಗಳಿಗೆ ಬಂದಿದ್ದರು. ಉದಾಹರಣೆಗೆ ಹಿಂದೂ ಧರ್ಮದಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವಿಲ್ಲ. ಹಿಂದೂ ಧರ್ಮ ಜಾತಿಗಳಿಂದ ನಿರ್ಮಿಲ್ಪಟ್ಟ ಮೆಟ್ಟಿಲುಗಳಿಲ್ಲ ಉಪ್ಪರಿಗೆ ಮನೆ ಎಂದು ಹೇಳಿದ್ದರು. ಇಲ್ಲಿ ಜಾತಿಜಾತಿಗಳ ನಡುವೆ ಸಹೋದರತೆಗೆ ಅವಕಾಶವಿಲ್ಲ, ಸ್ವಾತಂತ್ರ್ಯ, ಸಮಾನತೆಗಳೂ ಇಲ್ಲ. ಹೀಗಾಗಿ ಹಿಂದೂ ಧರ್ಮದ ಈ ಚೌಕಟ್ಟಿನಿಂದ ಹೊರಬರದೇ ತಳಸಮುದಾಯಗಳಿಗೆ ಬಿಡುಗಡೆ ಇಲ್ಲ ಎಂದು ಖಚಿತವಾಗಿ ಹೇಳಿದ್ದರು. ಫಿಲಾಸಫಿ ಆಫ್ ಹಿಂದೂಯಿಸಂ ನಲ್ಲಿ ಹಿಂದೂ ಧರ್ಮ ಯಾವುದರ ತಳಹದಿಯ ಮೇಲೆ ನಿಂತಿದೆ ಎಂದು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ ಅಂಬೇಡ್ಕರ್. ಹಿಂದೂ ಧರ್ಮದ ಕುರಿತ ಅಂಬೇಡ್ಕರ್ ಅವರ ಈ ಖಚಿತ ಮತ್ತು ದಿಟ್ಟ ಅಭಿಪ್ರಾಯಗಳ ಕುರಿತು ನಿಮ್ಮ ಖಚಿತ ಅಭಿಪ್ರಾಯವೇನು?
  7. ಹಿಂದೂ ರಾಷ್ಟ್ರದ ಸ್ಥಾಪನೆ ಈ ದೇಶದ ದಲಿತರಿಗೆ-ಶೂದ್ರರಿಗೆ, ಬಹುಜನರ ಪಾಲಿಗೆ ಕಟ್ಟುವ ಸಮಾಧಿ ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ನೀವಿದನ್ನು ಒಪ್ಪುತ್ತೀರಾ?
  8. ಕಾಶ್ಮೀರದ ಕುರಿತಂತೆ ಅಂಬೇಡ್ಕರ್ 1951ರಲ್ಲಿ ಸ್ಪಷ್ಟವಾಗಿ ತಿಳಿಸುತ್ತಾ, ಕಾಶ್ಮೀರಿಗಳ ಜನಾಭಿಪ್ರಾಯ ಸಂಗ್ರಹಿಸುವುದೇ ಏಕೈಕ ಪರಿಹಾರ ಮಾರ್ಗ ಎಂದು ಹೇಳಿದ್ದರು. ಅಂಬೇಡ್ಕರ್ ಅವರು ಎಲ್ಲಿಯೂ ಆರ್ಟಿಕಲ್ 370 ರದ್ದಾಗಬೇಕು ಎಂದು ಹೇಳಿದ ದಾಖಲೆ ಇಲ್ಲ ಕಾಶ್ಮೀರ ಸಮಸ್ಯೆಗೆ ಅಂಬೇಡ್ಕರ್ ತಿಳಿಸಿದ್ದ ಪರಿಹಾರ ಮಾರ್ಗವನ್ನು ನೀವು ಒಪ್ಪಿಕೊಳ್ಳುತ್ತೀರಾ? ಸಾಧ್ಯವಿಲ್ಲ ಅಲ್ಲವೇ?
  9. ನಿಮ್ಮ ಆರೆಸ್ಸೆಸ್- ಬಿಜೆಪಿ ಕಾರ್ಯಕರ್ತರಿಗೆ ಅಂಬೇಡ್ಕರ್ ಅವರ “ಫಿಲಾಸಫಿ ಆಫ್ ಹಿಂದೂಯಿಸಂ” “ಆನ್ಹಿಲೇಶನ್ ಆಫ್ ಕ್ಯಾಸ್ಟ್” “ಬುದ್ಧ ಅಂಡ್ ಹಿಸ್ ದಮ್ಮ” ಇವುಗಳನ್ನು ಓದಿಸುವ ಧೈರ್ಯ ನಿಮಗಿದೆಯೇ? ಅಥವಾ ಕಾಂಗ್ರೆಸ್ ಬಗ್ಗೆ ಅಂಬೇಡ್ಕರ್ ಅವರಿಗಿದ್ದ ಅಸಮಾಧನವನ್ನು ಮಾತ್ರ ಸೆಲೆಕ್ಟಿವ್ ಆಗಿ ಉಣಬಡಿಸುತ್ತಾ ನಿಮ್ಮ ಅಜೆಂಡಾವನ್ನಷ್ಟೇ ಈಡೇರಿಸಿಕೊಳ್ಳುತ್ತೀರೋ?
    ಈ ಪ್ರಶ್ನೆಗಳಿಗೆ ಬಿ ಎಲ್ ಸಂತೋ಼ಷ್ ಆಗಲೀ, ಕಾರ್ಪೊರೇಟ್ ಚೆಡ್ಡಿ ಮೋಹನ್ ದಾಸ್ ಪೈ ಆಗಲೀ ಇನ್ನಾರೇ ಆರೆಸ್ಸೆಸ್ ಪಂಡಿತರಾಗಲೀ ಪ್ರಾಮಾಣಿಕವಾಗಿ ಉತ್ತರಿಸುತ್ತಾರೆ ಎಂಬ ಭ್ರಮೆ ಇಲ್ಲ. ಆದರೆ ಇವರ ಬಂಡವಾಳ ಬಯಲು ಮಾಡಲು ಈ ಪ್ರಶ್ನೆಗಳ ಜೊತೆಗೆ ಇನ್ನಷ್ಟು ಇಂತದೇ ಪ್ರಶ್ನೆಗಳು ಇವರ ಮುಖಕ್ಕೆ ಹಿಡಿಯಬೇಕು.

ಒಂದು ಕಡೆಯಲ್ಲಿ ಮುಂದೊಮ್ಮೆ ಬಾಬಾಸಾಹೇಬರಂತೆಯೇ ನೊಂದು ಬೆಂದು ಛಲದಿಂದ ಓದುತ್ತಿದ್ದ, ಬದುಕಿದ್ದರೆ ಮುಂದೆ ಪ್ರಕಾಶಮಾನವಾಗಿದ್ದ ಬೆಳಗಲಿದ್ದ ರೋಹಿತ್ ವೇಮುಲನಂಹವರನ್ನು ಆತ್ಮಹ್ಯತ್ಯೆಗೆ ತಳ್ಳುವುದು, ನಂತರ ಅವನು ಭಯೋತ್ಪಾದಕ ಎಂಬಂತೆ ಬಿಂಬಿಸುವುದು ಹಾಗೆಯೇ ಡಾ. ಆನಂದ್ ತೇಲ್ತುಂಬ್ಡೆ, ಡಾ. ಸತ್ಯನಾರಾಯಣ ಅವರಂತಹ ಅಂಬೇಡ್ಕರ್ ವಾದಿ ವಿದ್ವಾಂಸರನ್ನು ಸುಳ್ಳು ಕೇಸುಗಳಲ್ಲಿ ಫಿಟ್ ಮಾಡುವುದು, ಅವರನ್ನು ಅರ್ಬನ್ ನಕ್ಸಲ್ ಎಂದು ಹಣೆಪಟ್ಟಿ ಹಚ್ಚುವುದು, ಈ ಮೂಲಕ ಇಂತಹ ಅಂಬೇಡ್ಕರ್ ವಾದಿ ಮೇಧಾವಿಗಳು ದೇಶದ ತಳಸಮುದಾಯಗಳಲ್ಲಿ ಅಂಬೇಡ್ಕರ್ ಚಿಂತನೆಗಳನ್ನು ಬಿತ್ತುತ್ತಿರುವುದನ್ನು ತಡೆಯುವ, ಧ್ವನಿಗಳನ್ನು ಹತ್ತಿಕ್ಕುವ ದಂಡೋಪಾಯವನ್ನು ಬಳಸುತ್ತಲೇ ಮತ್ತೊಂದು ಕಡೆಯಲ್ಲಿ ಉಪಾಯದಿಂದ, ನಯವಂಚಕತನದಿಂದ, ದುಡ್ಡು ಮತ್ತು ಹುದ್ದೆಗಳ ಆಮಿಷದ ಮೂಲಕ ದಲಿತ ಮುಖಂಡರನ್ನು ಆಪೋಶನ ತೆಗೆದುಕೊಳ್ಳುವ “ಸಾಮ-ದಾನ” ಇಲ್ಲವೇ ತಳಸಮುದಾಯಗಳನ್ನು ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟಿ ನಡೆಡಸುವ “ಭೇದ” ನೀತಿಯನ್ನು ಪ್ರಯೋಗಿಸಿ ವೈದಿಕ ಹಿತಾಸಕ್ತಿ ಕಾಪಾಡುವುದು… ಇದೇ ಈ ದೇಶ ಸಾವಿರಾರು ವರ್ಷಗಳಿಂದ ಮತ್ತೆ ಮತ್ತೆ ಮೋಸಹೋಗಲು ಕಾರಣವಾಗಿರುವುದು.

ಹೀಗಾಗಿಯೇ ಅಂಬೇಡ್ಕರ್ ಅವರನ್ನೇ ಆಪೋಶನ ತೆಗೆದುಕೊಳ್ಳುತ್ತಿರುವಾಗ ಅಂಬೇಡ್ಕರ್ ಅವರ ಮೇಲಿನ ಅಭಿಮಾನ ಪ್ರೀತಿ ಮಾತ್ರ ಸಾಲುವುದಿಲ್ಲ. ವಂಚಕ ಜಾಲಗಳು ಹೊಂಚು ಹಾಕುತ್ತಿರುವಾಗ ಅಂಬೇಡ್ಕರ್ ರಥವನ್ನು ಮುಂದಕ್ಕೆ ಒಯ್ಯುವುದು ಮತ್ತೂ ಕಠಿಣವಾಗಿದೆ ಎಂಬ ಅರಿವಿನಲ್ಲಿ ಅಂಬೇಡ್ಕರ್ ಅವರು ಕನಸಿದ್ದ ಭಾರತವನ್ನು ನಾವೂ ಕನಸಬೇಕಿದೆ, ಅಂಬೇಡ್ಕರ್ ಆಶಿಸಿದ್ದ ಸಮತೆ-ಕರುಣೆ-ಪ್ರಜ್ಞೆಗಳು ನಮ್ಮೊಳಗೆ ಇಳಿಯಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending