ದಿನದ ಸುದ್ದಿ
ನಿರೂಪಕ ಚಂದನ್ ಪತ್ನಿ ಮಗುಕೊಂದು, ಆತ್ಮಹತ್ಯೆಗೆ ಯತ್ನ
ಸುದ್ದಿದಿನ, ಬೆಂಗಳೂರು : ನಿರೂಪಕ ಚಂದನ್ ಅಫಘಾತದಲ್ಲಿ ದುರ್ಮರಣ ಹಿನ್ನೆಲೆ, ಚಂದನ್ ಪತ್ನಿ ವೀಣಾ (38) ಗಂಡನ ಸಾವಿನಿಂದ ಮನನೊಂದು, ತನ್ನ ಮಗುವಿನ ಕತ್ತುಕೊಯ್ದು ಕೊಲೆಮಾಡಿ, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಸೊಮೇಶ್ವರ ಬಡಾವಣೆಯಲ್ಲಿ ಮನೆಯಲ್ಲಿ ಆಸಿಡ್ ಕುಡಿದ
ವೀಣಾ ಸ್ಥೀತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ವತ್ರೆಗೆ ರವಾನೆಮಾಡಲಾಗಿದೆ.
ಕಳೆದ 24 ನೇ ತಾರಿಕು ದಾವಣಗೆರೆ ಬಳಿ ಕಾರು ಅಪಘಾತದಲ್ಲಿ ಸಾವನ್ನಪಿದ್ದ ನಿರೂಪಕ ಚಂದನ್ ಸಾವನ್ನಪ್ಪಿದ್ದರು.
ಸ್ಥಳಕ್ಕೆ ದೊಡ್ಡಬಳ್ಖಾಪುರ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿದ್ದಾರೆ.

ದಿನದ ಸುದ್ದಿ
ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ಇಂದು ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಕೇಂದ್ರಗಳಲ್ಲಿ ತಲಾ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿದಿದರು.
ನಂತರ ಬಜೆಟ್ ಮಂಡಿಸುತ್ತಾ ಅವರು 60,000 ಮಹಿಳೆಯರಿಗೆ ಉದ್ಯೋಗ ನೀಡುವುದು. ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೆ ಸಾಲ ಕೊಡುವುದು.
ನಿರ್ಭಯಾ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನೆಲ್ಲೆಡೆ 7,500 ಸಿಸಿ ಕ್ಯಾಮರಾ ಅಳವಡಿಕೆ ಮಾಡಿಸುವುದಾಗಿ ಹೇಳಿದರು.
ಇದನ್ನೂ ಓದಿ | ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ
ಹಪ್ಪಳ, ಉಪ್ಪಿನ ಕಾಯಿ ತಯಾರಿಸುವವರಿಗೂ ಆನ್ ಲೈನ್ ಮಾರುಕಟ್ಟೆ ಒದಗಿಸಿ, ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ರಿಯಾಯಿತಿಯ ಬಿಎಂಟಿಸಿ ಪಾಸ್ ವಿತರಣೆ ಮಾಡಲಾಗುವುದು ಎಂದು ಮಹಿಳೆಯರಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ವಿಶೇಷ ಕೊಡುಗೆಯನ್ನು ಮಾರ್ಚ್ 8 ವಿಶ್ವ ಮಹಿಳಾ ದಿನಾಚರಣೆಯ ಗಿಫ್ಟ್ ಆಗಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ಸುದ್ದಿದಿನ,ರಾಯಚೂರು: ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು, ಆದರೆ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.
ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದು, ಸೋಮವಾರ 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಇವರು ಶವವಾಗಿ ಪತ್ತೆಯಾಗಿದ್ದಾರೆ.
ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಿಂದ ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಬಾಲಕರು ಮನೆಯ ಹೊರಗಡೆ ಆಟವಾಡುತ್ತಿದ್ದವರು ಏಕಾಏಕಿ ನಾಪತ್ತೆಯಾಗಿದ್ದರು. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು. ಆದರೆ ಮಕ್ಕಳು ಹಳ್ಳದಲ್ಲಿ ಸ್ನಾನ ಮಾಡಲು ಹೋಗಿ ಪ್ರಾಣಕಳೆದುಕೊಂಡಿದ್ದು ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯು ನಡೆದಿದೆ.
ನಾಪತ್ತೆಯಾದ ಬಾಲಕರಿಗಾಗಿ ಭಾನುವಾರ ಪೊಲೀಸರು ಹುಡುಕಾಟ ನಡೆಸಿದ್ದರು. ಸಿರವಾರ ಹಾಗೂ ಕವಿತಾಳ ಠಾಣೆ ಪೊಲೀಸರಿಂದ ಬಾಲಕರಿಗಾಗಿ ಹುಡುಕಾಟ ನಡೆದಿತ್ತು, ಗ್ರಾಮದ ಹಳ್ಳದಲ್ಲೇ ಇಂದು ಬೆಳಗ್ಗೆ ಶವಗಳು ಪತ್ತೆಯಾಗಿವೆ.
ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ

ಸುದ್ದಿದಿನ, ದಾವಣಗೆರೆ-ಚನ್ನಗಿರಿ: ನವಿಲೇಹಾಳ್ ಗ್ರಾಮದಲ್ಲಿ ಮಾ. 07ರ ಭಾನುವಾರ ಮೊಟ್ಟಮೊದಲ ಬಾರಿಗೆ ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭದ ಜೊತೆಗೆ ಕರೋನಾ ವಾರಿಯರ್ಸ್ ಮತ್ತು ‘ಮೋಹದ ಮೋಡಗಳು’ ಚೊಚ್ಚಲ ಕೃತಿಯ ಯುವಕವಿಗೆ ಸನ್ಮಾನ ಕಾರ್ಯಕ್ರಮವನ್ನು ನವಿಲೇಹಾಳಿನ ‘ಸ್ನೇಹ ಬಳಗ’ದ ವತಿಯಿಂದ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಶಾಂತ ಗಂಗಾಧರವರು ಊರಿನ ಪರಂಪರೆ, ಸಾಹಿತ್ಯ, ಸಂಸ್ಕೃತಿ, ಸಹಬಾಳ್ವೆ ಬಗ್ಗೆ ತಿಳಿಸುತ್ತ ನೂತನ ಗ್ರಾಮ ಪಂಚಾಯ್ತಿ ಸದಸ್ಯರುಗಳ ಕೆಲಸ ಕರ್ತವ್ಯಗಳು ಆರೋಗ್ಯಕರವಾಗಿರಬೇಕು ಯಾವುದೇ ತರಹದ ದ್ವೇಷ ಆರೋಪಗಳು ಪೋಲಿಸ್ ಸ್ಟೇಷನ್ ವರೆಗೆ ಹೋಗದಂತೆ ಗ್ರಾಮದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಬೇಕು.ಮತ್ತು ಜಾತಿ ಧರ್ಮಗಳನ್ನ ಬಿಟ್ಟು ಎಲ್ಲರೂ ಒಂದು ಕುಟುಂಬವೆಂದು ಬದುಕಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಮತ್ತೋರ್ವ ಅಥಿತಿಗಳಾದ ಡಾ॥ ಹುಸೇನ್ ಮೀಯ ಅವರು ನೂತನ ಸದಸ್ಯರಿಗೆ ಶುಭ ಹಾರೈಸಿ ಪಂಚಾಯಿತಿ ವ್ಯಾಪ್ತಿಯ ಕೆಲಸಗಳು ಮತ್ತು ಅದರ ಉಪಯೋಗದ ಬಗ್ಗೆ ಗ್ರಾಮಸ್ತರಿಗೆ ಅರಿವು ಮೂಡಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಕೈಗೊಳ್ಳಬೇಕು ಎಂದರು.
ಜತೆಗೆ ನವಿಲೇಹಾಳನ್ನು ಸುವರ್ಣಗ್ರಾಮವನ್ನಾಗಿ ಮಾಡುವ ಕನಸಿಟ್ಟಕೊಂಡು ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಿ ಮಾದರಿ ಗ್ರಾಮವೆನ್ನುವ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳಿಂದ ತೆಗೆದುಕೊಳ್ಳಬೇಕು ಆಗ ನಿಮ್ಮ ಕೆಲಸಕ್ಕೆ ಫಲ ಸಿಕ್ಕಂತಾಗುವುದು ಈ ಎಲ್ಲಾ ರೀತಿಯ ಕೆಲಸಗಳಿಗೂ ನನ್ನ ಪೂರ್ಣಪ್ರಮಾಣದ ಸಹಕಾರ ಬೆಂಬಲ ಎಂದಿಗೂ ಇರುವುದು ಎಂದು ಗ್ರಾಮದವರಲ್ಲಿ ವಿಶ್ವಾಸವನ್ನು ತುಂಬಿದರು.
ಸಭೆಯನ್ನುದ್ದೇಶಿಸಿ ಗಣ್ಯರಾದ ಎಂ. ಶಿವಮೂರ್ತಿ ನಿವೃತ್ತ ಶಿಕ್ಷಕರು ನವಿಲೇಹಾಳ್, ರುದ್ರಪ್ಪ ನಿವೃತ್ತ ಶಿಕ್ಷಕರು ನವಿಲೇಹಾಳ್, ಬಾಲಣ್ಣ ದೊಡ್ಡಘಟ್ಟ, ದಾದಪೀರ್ ನವಿಲೇಹಾಳ್ ಮಾತನಾಡುತ್ತ ಗ್ರಾಮದ ಸಾದಕ ಬಾದಕಗಳಬಗ್ಗೆ ಹೇಳಿದರು.
ಕಾರ್ಯಕ್ರಮದ ಸ್ವಾಗತವನ್ನು ಇಸ್ಮಯಿಲ್ ಕಣದ್ಮನೆ ಅವರು ನಿರ್ವಹಿಸಿದರು. ನಿರೂಪಣೆಯನ್ನು ಜೆ ದಾದಪೀರ್ ನಡೆಸಿಕೊಟ್ಟರು. ಶರ್ಮತ್ ಕಣದಮನಿ, ದೂದ್ ಪೀರ್, ದಾದಪೀರ್, ಬಶೀರ್, ಮೋಸಿಮ್ ಅಕೀಲ್, ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ4 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ಬಹಿರಂಗ6 days ago
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
-
ದಿನದ ಸುದ್ದಿ7 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ದಿನದ ಸುದ್ದಿ4 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಕ್ರೀಡೆ6 days ago
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!