ದಿನದ ಸುದ್ದಿ
‘ಏರ್ ಸ್ಟ್ರೈಕ್’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು
ಸುದ್ದಿದಿನ ಡೆಸ್ಕ್ : ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ಮೂಡಿದ್ದು, 300 ಉಗ್ರರು ಸತ್ತಿದ್ದಾರೆ ಎಂದು ಹೇಳಿದವರಾರು? ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಯಾವುದೇ ಹಾನಿ ಉಂಟಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.ಹೀಗಿರುವಾಗ 300-350 ಜನ ಸತ್ತಿದ್ದಾರೆ ಎನ್ನುವ ಲೆಕ್ಕ ಹೇಳಿದವರಾರು? ಎಂದು ಗುಡುಗಿದ್ದಾರೆ.
ದಿಗ್ವಿಜಯ್ ಸಿಂಗ್
ಏರ್ ಸ್ಟ್ರೈಕ್ ಪುರಾವೆ ಎಲ್ಲಿ? ಉಗ್ರರ ಮೇಲಿನ ದಾಳಿಯ ಬಗ್ಗೆ ಪ್ರತಿಪಕ್ಷಗಳು ಪುರಾವೆ ಕೇಳ್ತಿವೆ ಎಂದು ಕೇಂದ್ರ ಸರ್ಕಾರಕ್ಕೆ ‘ಏರ್ ಸ್ಟ್ರೈಕ್’ ಸಾಕ್ಷಿ ಕೇಳಿದ್ದಾರೆ ದಿಗ್ವಿಜಯ್ ಸಿಂಗ್. ಬಿನ್ ಲಾಡೆನ್ ಹತ್ಯೆಗೈದ ಅಮೆರಿಕಾ ಜಗತ್ತಿನ ಮುಂದೆ ಸಾಕ್ಷಿ ಇಟ್ಟಿತ್ತು,ನಾವು ಕೂಡಾ ದಾಳಿಯ ಬಗ್ಗೆ ಜಗತ್ತಿಗೆ ಸಾಕ್ಷಿ ತೋರಿಸಬೇಕು ಎಂದಿದ್ದಾರೆ.
ನವಜೋತ್ ಸಿಂಗ್ ಸಿದ್ದು
ನೆಲಸಮ ಮಾಡಿದ್ದು ಉಗ್ರರನ್ನೋ? ಮರಗಳನ್ನೋ? ನೀವು ನೆಲಸಮ ಮಾಡಿರುವುದು ಉಗ್ರರನ್ನೋ ಅಥವಾ ಮರಗಳನ್ನೋ? ದಾಳಿಯಲ್ಲಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಕೇಂದ್ರ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇದರ ಉದ್ದೇಶವೇನು? ಇದು ಚುನಾವಣಾ ಗಿಮಿಕ್ ಅಲ್ಲವೇ? ಶತ್ರುಗಳ ವಿರುದ್ಧ ಹೋರಾಡುವಲ್ಲಿ ನಮ್ಮ ನಾಡಿಗೆ ಮೋಸವಾಗಿದೆ. ಸೈನ್ಯವನ್ನು ರಾಜಕೀಯಕ್ಕೆ ಒಳಪಡಿಸುವುದನ್ನು ನಿಲ್ಲಿಸಿ.ಸಿದ್ದು ಟ್ವೀಟ್ ನಲ್ಲಿ ಯಡಿಯೂರಪ್ಪ, ಅಹ್ಲುವಾಲಿಯಾ ಹೇಳಿಕೆ ಪ್ರಸ್ತಾಪಿಸಿದ್ದಾರೆ.
300 terrorist dead, Yes or No?
What was the purpose then? Were you uprooting terrorist or trees? Was it an election gimmick?
Deceit possesses our land in guise of fighting a foreign enemy.
Stop politicising the army, it is as sacred as the state.
ऊंची दुकान फीका पकवान| pic.twitter.com/HiPILADIuW
— Navjot Singh Sidhu (@sherryontopp) March 4, 2019
ಕಪಿಲ್ ಸಿಬಲ್
ವೆಬ್ ಸೈಟ್ ಗಳು ಸುಳ್ಳು ಹೇಳ್ತಾವಾ?
ಉಗ್ರಗಾಮಿ ಸತ್ತಿಲ್ಲ ಎಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿದ್ದು,ಉಗ್ರರು ಸತ್ತಿರುವ ಯಾವುದೇ ಪುರಾವೆ ಇಲ್ಲವೆಂದು ಹೇಳಿವೆ.
ಅಂತರಾಷ್ಟ್ರೀಯ ವೆಬ್ ಸೈಟ್ ಸುಳ್ಳು ಹೇಳುತ್ತವೆಯೆ? ಎಂದು ಸಾಕ್ಷಿ ಕೇಳಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್.
ನೀವು ಭಯೋತ್ಪಾದನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೀರಿ. ಉಗ್ರರ ಸಾವಿನ ಪುರಾವೆ ನೀಡುವಂತೆ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.
Modiji :
Is international media :
1) New York Times
2) London based Jane's Information Group
3) Washinton Post
4) Daily Telegraph
5) The Guardian
6) Reutersreporting no proof of militant losses at Balakot pro-Pakistan ?
You are guilty of politicising terror ?
— Kapil Sibal (@KapilSibal) March 4, 2019
ಮನೋಜ್ ತಿವಾರಿ
ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಅಮಿತ್ ಶಾ ಸಾವಿನ ಸಂಖ್ಯೆ 250 ಅಂತಾ ಹೇಳಿದ್ದಾರೆ.ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?ಕಾಂಗ್ರೆಸ್ ಮುಖಂಡ ಮನೋಜ್ ತಿವಾರಿ ಪ್ರಶ್ನೆ
ಬಿಜೆಪಿ ರಾಷ್ಟ್ರಧ್ಯಕ್ಷರು ಈ ಬಗ್ಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ
ಎಲ್ಲಿ,ಎಷ್ಟು ಬಾಂಬ್ಗಳನ್ನು ಹಾಕಲಾಗಿದೆ?
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡುವಂತೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ? ಎಷ್ಟು ಬಾಂಬ್ಗಳನ್ನು ಉಗ್ರರ ಮೇಲೆ ಹಾಕಲಾಗಿದೆ? ಏರ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ? ವಿದೇಶಿ ಮಾಧ್ಯಮಗಳಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಎಂದಿದ್ದಾರೆ ಮಮತಾ ಬ್ಯಾನರ್ಜಿ.
ಮೆಹಬೂಬ
ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ ಮಾಹಿತಿ ಕೊಡಿ. ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು. ಏರ್ಸ್ಟ್ರೈಕ್ ಮಾಹಿತಿ ನೀಡಿ ಎಂದಿದ್ದಾರೆ ಮುಫ್ತಿ ,ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ.
ಗುಂಡೂರಾವ್
ಸೂಕ್ಷ್ಮತಾ ವಿಚಾರಗಳನ್ನು ಬಿಟ್ಟು ಉಳಿದ ವಿಷಯ ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ನಮ್ಮ ಸೈನಿಕರ ಕಾರ್ಯ ವೈಖರಿ ಬಗ್ಗೆ ಹೆಮ್ಮೆಯಿದೆ,ಗೌರವವಿದೆ.ಏರ್ ಸ್ಟ್ರೈಕ್ ಕುರಿತು ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ಎದ್ದಿವೆ.
ಉಗ್ರರ ಮೇಲಿನ ದಾಳಿ ಬಗ್ಗೆ ಪ್ರಶ್ನೆ ಕೇಳುವುದರಲ್ಲಿ ತಪ್ಪಿಲ್ಲ.ಕುತೂಹಲದಿಂದ ಈ ಪ್ರಶ್ನೆ ಕೇಳಲಾಗುತ್ತಿದೆ ಎಂದಿದ್ದಾರೆ.
ಈ ಎಲ್ಲ ವಿದ್ಯಾಮಾನಗಳ ಹಿನ್ನೆಲೆಯಲ್ಲಿ, ನಾವು ನಮ್ಮ ಗುರಿ ತಲುಪಿದ್ದೀವಿ.ನಿಗದಿ ಪಡಿಸಿದ್ದ ಗುರಿಗಳ ಮೇಲೆ ನಾವು ನಿಖರವಾಗಿ ದಾಳಿ ಮಾಡಿದ್ದೇವೆ ಎಂದು
ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಸ್ಪಷ್ಟನೆ ನೀಡಿದೆ.
ಸಾವು-ನೋವುಗಳ ಲೆಕ್ಕಾಚಾರ ನಮ್ಮ ಕೆಲಸವಲ್ಲ. ಸಾವು-ನೋವುಗಳ ಲೆಕ್ಕಾಚಾರ ಕೇಂದ್ರ ಸರ್ಕಾರ ನೀಡುತ್ತದೆ. ಅರಣ್ಯದ ಖಾಲಿ ಜಾಗದಲ್ಲಿ ಬಾಂಬ್ ಹಾಕಿಲ್ಲ. ಖಾಲಿ ಜಾಗದಲ್ಲಿ ಬಾಂಬ್ ಹಾಕಿದ್ದರೆ ಅವರೇಕೆ ಇಷ್ಟು ಗಂಭೀರವಾಗುತ್ತಿದ್ರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243