Connect with us

ದಿನದ ಸುದ್ದಿ

ಯಾರು ಪ್ರಗತಿಪರರು? : ದಿನೇಶ್ ಅಮಿನ್ ಮಟ್ಟು

Published

on

ನಾನು ಮುಸುಕಿನ ಗುದ್ದಾಟ ನಡೆಸಲು ಹೋಗುವುದಿಲ್ಲ, ಯಾರದೋ ಹೆಗಲ ಮೇಲೆ ಬಂದೂಕು ಇಡುವುದೂ ಇಲ್ಲ, ನನ್ನ ಅಭಿಪ್ರಾಯ ಮಂಡಿಸಲು ಥಿಯರಿಗಳ ಮೂಟೆಗಳನ್ನು ಉರುಳಿಸಿ ಯಾರನ್ನೂ ಗೊಂದಲಕ್ಕೀಡುಮಾಡುವುದೂ ಇಲ್ಲ. ನೇರವಾಗಿ ವಿಷಯಕ್ಕೆ ಬರ್ತೇನೆ.

ಪ್ರಗತಿಪರರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಬೇಕಲ್ಲಾ? ಮುಸುಕು ತೆಗೆದಿದ್ದೇನೆ, ಹೆಸರು ಬರ್ಕೊಳ್ಳಿ: ದೊರೆಸ್ವಾಮಿ, ದೇವನೂರ,ಚಂಪಾ, ಸುಬ್ಬಯ್ಯ ಬರಗೂರು, ಮರುಳಸಿದ್ದಪ್ಪ, ಸಿದ್ದರಾಮಯ್ಯ,ಗೋವಿಂದರಾವ್, , ಬಿಳಿಮಲೆ, ಅಸ್ಸಾದಿ, ಚೆನ್ನಿ, ಸಿದ್ದಯ್ಯ, ಕಾಳೇಗೌಡ, ಇಂಧೂಧರ, ಬಂಜಗೆರೆ, ರಹಮತ್, ಹುಳಿಯಾರ್, ರವಿವರ್ಮಕುಮಾರ್, ಗಣೇಶ್ ದೇವಿ, ವಿಜಯಮ್ಮ, ಮಾಲಗತ್ತಿ…ಪಟ್ಟಿ ಉದ್ದ ಇದೆ.

ಇವರ ಜತೆ ಜನನುಡಿ, ಮೇ ಸಾಹಿತ್ಯಮೇಳ, ನಾವು ನಮ್ಮಲ್ಲಿ, ಉಡುಪಿ-ಗುಬ್ಬಿ-ಗುಡಿಬಂಡೆ ಚಲೋ, ದಿಡ್ಡಳ್ಳಿ ಚಲೋ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಕನಸುಕಂಗಳ ಸಾವಿರಾರು ಯುವಕ-ಯುವತಿಯರಿದ್ದಾರೆ. ಈ ಪಟ್ಟಿಯಲ್ಲಿ ಎಡಪಕ್ಷಗಳ ಸದಸ್ಯರಾಗಿರುವವರನ್ನು ನಾನು ಸೇರಿಸಿಲ್ಲ. ಸದ್ಯ ಇಷ್ಟಕ್ಕೆ ನಿಲ್ಲಿಸ್ತೇನೆ.
ಮೊದಲನೆಯದಾಗಿ, ಇವರು ಜಾತ್ಯತೀತತೆಯ ರಕ್ಷಣೆಯ ಸೈದ್ಧಾಂತಿಕ ಗುತ್ತಿಗೆಯನ್ನು ಪಡೆದಿರುವುದು ಬಸವಣ್ಣ, ಗಾಂಧೀಜಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಅವರಿಂದ ಹೊರತು ಕಾಂಗ್ರೆಸ್ ಪಕ್ಷದಿಂದ ಅಲ್ಲ.

ಇವರಲ್ಲಿ ಬಹುತೇಕ ಮಂದಿ 75-77ರ ಕಾಲದಲ್ಲಿ ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿಯನ್ನು ವಿರೋಧಿಸಿದವರು, 1989ರಲ್ಲಿ ರಾಜೀವ್ ಗಾಂಧಿಯವರ ವಿರುದ್ಧ ಸಿಡಿದೆದ್ದಿದ್ದ ಮತ್ತು ಮಂಡಲ್ ವರದಿ ಜಾರಿಗೆ ತಂದಿದ್ದ ವಿ.ಪಿ.ಸಿಂಗ್ ಪರವಾಗಿ ನಿಂತವರು. ಈ ಎರಡೂ ಸಂದರ್ಭಗಳಲ್ಲಿ ಜನಸಂಘ-ಬಿಜೆಪಿ ಕಾರ್ಯಕರ್ತರು ಇವರ ಜತೆಗಿದ್ದರು. ಆಗ ಯಾರೂ ಇವರಿಗೆ ಕೇಸರಿ ಬಣ್ಣ ಬಳಿಯಲಿಲ್ಲ, ಚಡ್ಡಿ ಹಾಕಲಿಲ್ಲ, ಗಂಜಿ ಗಿರಾಕಿ ಅನ್ನಲಿಲ್ಲ.

ಎರಡನೆಯದಾಗಿ, ಹಿಂದಿನ ಇತಿಹಾಸ ಬೇಡ, ಕಳೆದ ಐದು ವರ್ಷಗಳ ಅವಧಿಯಲ್ಲಿ ಇವರೆಲ್ಲರೂ ರಾಜ್ಯದಲ್ಲಿ ಕೋಮುವಾದದ ವಿರುದ್ಧದ ಮತ್ತು, ಜಾತ್ಯತೀತತೆಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಬಿಜೆಪಿ ವಿರುದ್ಧ ಮಾತ್ರವಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಮಾತನಾಡಿದ್ದಾರೆ. ಹೌದು, ಸಿದ್ದರಾಮಯ್ಯನವರ ವಿಷಯದಲ್ಲಿ ಸಕಾರಣವಾಗಿ ಮೆದುವಾಗಿದ್ದರು.

ಈ ಮೆದು ಧೋರಣೆಯಿಂದ ಇವರು ಪಡೆದ ಲಾಭಗಳೇನು? ಐದು ವರ್ಷಗಳ ಅವಧಿಯಲ್ಲಿ ಇವರಲ್ಲಿ ಎಷ್ಟು ಮಂದಿಯ ಆದಾಯ ದುಪ್ಪಟ್ಟಾಯಿತು? ಎಷ್ಟುಮಂದಿ ಸರ್ಕಾರಿ ಮನೆ-ಸೈಟು ತೆಗೆದುಕೊಂಡರು? ಎಷ್ಟುಮಂದಿ ವಿಧಾನಪರಿಷತ್ ಗೆ ನಾಮಕರಣಗೊಂಡರು? ಎಷ್ಟುಮಂದಿ ತಮ್ಮ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಸ್ಪರ್ಧೆಗೆ ಟಿಕೆಟ್ ಕೊಡಿಸಿದರು? ಇವರನ್ನು ಕಾಂಗ್ರೆಸ್ ಪಕ್ಷದ ಜತೆ ಜೋಡಿಸಿ ಗೇಲಿ ಮಾಡುತ್ತಿರುವವರು ದಯವಿಟ್ಟು ಇವರು ಸರ್ಕಾರದಿಂದ ಪಡೆದಿರುವ ಲಾಭಗಳೇನು ಎನ್ನುವುದನ್ನು ತಿಳಿಸಿ.

ತಮ್ಮ ವಯಸ್ಸು-ಆರೋಗ್ಯವನ್ನು ಮರೆತು ಕೋಮುವಾದದ ವಿರುದ್ಧ ಏಕಾಂಗಿಗಳಾಗಿ ಹೋರಾಟಕ್ಕಿಳಿದಿರುವ ಒಬ್ಬ ಶ್ರೀನಿವಾಸ ಕಾರ್ಕಳ, ಒಬ್ಬ ಸುರೇಶ್ ಭಟ್ ಬಾಕ್ರಬೈಲ್, ಒಬ್ಬ ಸನತ್ ಕುಮಾರ ಬೆಳಗಲಿ ಸರ್ಕಾರದಿಂದ ಪಡೆದ ಲಾಭಗಳೇನು? ತನ್ನ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಪುರುಷೋತ್ತಮ ಬಿಳಿಮಲೆಯವರು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ದುಡ್ಡು ಬೇಡ ಎಂದವರು ಗೊತ್ತಾ?

ಹೌದು, ಇವರಲ್ಲಿ ಹೆಚ್ಚಿನವರು ಅಕಾಡೆಮಿ-ಪ್ರಾಧಿಕಾರದ ಪದಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದಾಗ ವಿಶಾಲ ಅರ್ಥದಲ್ಲಿ ಸೈದ್ಧಾಂತಿಕ ಸಹಮತ ಹೊಂದಿರುವವರನ್ನು ಸಾಹಿತ್ಯ-ಸಾಂಸ್ಕೃತಿಕ ಸಂಘಟನೆಗಳಿಗೆ ನೇಮಕಮಾಡುತ್ತದೆ ಮತ್ತು ಆ ರೀತಿಯೇ ನೇಮಕ ಮಾಡಬೇಕು. ಇವರನ್ನು ಬಿಟ್ಟು ಭೈರಪ್ಪ, ಚಿದಾನಂದ ಮೂರ್ತಿ, ದೊಡ್ಡರಂಗೇಗೌಡರನ್ನು ನೇಮಕಮಾಡೋಕ್ಕಾಗುತ್ತಾ?

ಈ ರೀತಿ ನೇಮಕಗೊಂಡವರಲ್ಲಿ ಯಾರಾದರೂ ತಮ್ಮ ಸೈದ್ಧಾಂತಿಕ ಬದ್ದತೆಯಲ್ಲಿ ರಾಜಿ ಮಾಡಿಕೊಂಡ ಉದಾಹರಣೆಗಳಿದ್ದರೆ ತಿಳಿಸಿ. ಇವರಲ್ಲಿ ಯಾರಾದರೂ ತಮ್ಮ ಅರ್ಹತೆಯನ್ನು ಮೀರಿ ಸ್ಥಾನಮಾನ ಗಳಿಸಿದ್ದರೆ ಅದನ್ನೂ ತಿಳಿಸಿ.

ಪ್ರಗತಿಪರರು ಯಾರು ಎನ್ನುವ ವ್ಯಾಖ್ಯಾನದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಸ್ವಾಮಿ. ಬಹಳ ಸರಳವಾಗಿದೆ. ಪ್ರಗತಿವಿರೋಧಿಗಳಲ್ಲದವರೆಲ್ಲರೂ ಪ್ರಗತಿಪರರೇ ಆಗಿರುತ್ತಾರೆ. ಪ್ರಗತಿ ಎಂದರೆ ಏನು ಎನ್ನುವ ಉಡಾಫೆ ಪ್ರಶ್ನೆ ಕೇಳಿದರೆ ಅದಕ್ಕೆ ನನ್ನ ಉತ್ತರ: ಬಸವ,ಗಾಂಧಿ,ಅಂಬೇಡ್ಕರ್, ಲೋಹಿಯಾ ಹೇಳಿರುವ ಪ್ರಗತಿ.

ಪ್ರಗತಿಪರರು ಪರಿಪೂರ್ಣರೇ? ಖಂಡಿತ ಅಲ್ಲ, ಮನುಷ್ಯ ಮಾತ್ರರಾದ ಅವರಲ್ಲಿಯೂ ಸಣ್ಣಪುಟ್ಟ ಆಸೆ, ಲೋಭ, ಸ್ವಾರ್ಥ, ಅಸೂಯೆಗಳಿರಬಹುದು. ಇವರ ನಡುವೆ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳೂ ಇರಬಹುದು. ಹೀಗಿದ್ದರೂ ಫ್ಯಾಸಿಸಮ್, ಸರ್ವಾಧಿಕಾರ ಮತ್ತು ಕೋಮುವಾದದ ಪ್ರಶ್ನೆಗಳು ಎದುರಾದಾಗ ಭಿನ್ನತೆಗಳನ್ನೆಲ್ಲವನ್ನೂ ಮರೆತು ಒಂದಾಗಿ ಇವರು ಕೈಕೈ ಹಿಡಿದು ಬೀದಿಗಿಳಿದಿದ್ದಾರೆ. ದೇಶ-ಕಾಲದ ಕರೆಗೆ ತಕ್ಕ ಹಾಗೆ ತಮ್ಮ ಶತ್ರುಗಳನ್ನು ಅವರು ಬದಲಾಯಿಸಿಕೊಂಡಿದ್ದಾರೆ, ಅಷ್ಟೆ.

ಕಾಲದ ಚಕ್ರ ಒಂದು ಸುತ್ತು ಮುಗಿಸಿದೆ. ಕಾಂಗ್ರೆಸ್ ಜಾಗದಲ್ಲಿ ಬಿಜೆಪಿ ಬಂದು ನಿಂತಿದೆ. ಹಳೆಯ ಸರ್ವಾಧಿಕಾರಿ ಇಂದಿರಾಗಾಂಧಿಯ ಸ್ಥಾನದಲ್ಲಿ ಕೋಮುವಾದದ ವಿಷಯೇರಿಸಿಕೊಂಡ ಹೊಸ ಸರ್ವಾಧಿಕಾರಿ ಅಬ್ಬರಿಸುತ್ತಿದ್ದಾರೆ.ಸರ್ವಾಧಿಕಾರಕ್ಕೆ ಬಲಿಯಾದವರೇ ಸರ್ವಾಧಿಕಾರಿಯ ಭಕ್ತರಾಗಿರುವ ವಿಚಿತ್ರ ಪರಿಸ್ಥಿತಿಯಲ್ಲಿ ‘’ಮೆದುಳು ತೊಳೆಯಲು’’ ನಮಗೆ ಇನ್ನಷ್ಟು ಸಂಖ್ಯೆಯ ಪ್ರಗತಿಪರರು ಬೇಕು. ಸಾಧ್ಯವಾದರೆ ಈ ಪ್ರಯತ್ನಕ್ಕೆ ಇದಕ್ಕೆ ಕೈಜೋಡಿಸಿ. ಅದು ಬಿಟ್ಟು ಅಡ್ಡಗೋಡೆಯ ಮೇಲೆ ಕೂತು ಅವರತ್ತ ಕಲ್ಲೆಸೆದು, ಅವರ ಬಗ್ಗೆ ಇನ್ನಷ್ಟು ಸಂಶಯಗಳನ್ನು ಹುಟ್ಟುಹಾಕಿ ನೈತಿಕವಾಗಿ ಅವರು ಕುಸಿಯುವಂತೆ ಮಾಡುವ ಜನದ್ರೋಹದ ಕೆಲಸ ಮಾಡಬೇಡಿ

ಪ್ರಗತಿಪರರನ್ನು ಹಂಗಿಸಿ, ನಿಂದಿಸಿ ಮೂಲೆಗೆ ತಳ್ಳುವ ಈ ಹುನ್ನಾರ ಪ್ರಾರಂಭಿಸಿದವರು ಬಲಪಂಥೀಯ ಪಡೆ. ಈಗ ನಮ್ಮವರೇ ಕೆಲವರು ಆ ಖೆಡ್ಡಾದಲ್ಲಿ ಬಿದ್ದಿದ್ದಾರೆ. ಅರಿವಿಲ್ಲದೆ ಖೆಡ್ಡಾದಲ್ಲಿ ಬಿದ್ದಿದ್ದರೆ ಅವರನ್ನೂ ಎತ್ತಿ ನಮ್ಮೊಂದಿಗೆ ಕರೆದೊಯ್ಯೋಣ. ಎಲ್ಲವೂ ಅರಿವಿದ್ದು ಆ ಕಡೆಯಿಂದ ಸುಫಾ ರಿ ಪಡೆದಿದ್ದರೆ ಅವರವರ ಕರ್ಮ ನಾವೇನು ಮಾಡಲಾಗದು. ನಾವು ಅಂಪೈರ್ ಗಳಲ್ಲ, ಆಟಗಾರರು. ಗೆಲುವು ನಮ್ಮದೇ.

(ಇಷ್ಟು ಬರೆಯಲು ಸ್ಪೂರ್ತಿ ನೀಡಿದ N A Mahamad Ismail ಪೋಸ್ಟ್ ಗೆ ಋಣಿಯಾಗಿದ್ದೇನೆ)

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ7 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending