ದಿನದ ಸುದ್ದಿ
ವಿಡಿಯೋ | ಮಹಿಳೆಯರ ಮೇಲೆ ಎಎಸ್ಐ ಹಲ್ಲೆ ಪ್ರಕರಣ : ಎಎಸ್ಐ ಸಸ್ಪೆಡ್
ಸುದ್ದಿದಿನ,ಬೆಂಗಳೂರು : ಜನವರಿ 20 ರಂದು ಕಾಟೇರಮ್ಮ ಅನ್ನೊ ಯುವತಿ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಕೆಎಸ್ ಲೇಔಟ್ ನ ಹೋಟೆಲ್ ಒಂದರಲ್ಲಿ ಗಲಾಟೆ ನಡೀತಿದೆ ಬನ್ನಿ ಅಂತ ಹೇಳಿದ್ದರು.
ಸ್ಥಳಕ್ಕೆ ಪೊಲೀಸ್ರು ಹೋದಾಗ ಹೋಟೆಲ್ ಬಳಿ ಯುವತಿಯ ಸಂಬಂಧಿಕರು ಗಲಾಟೆ ಮಾಡ್ತಿದ್ರು.
ಕಾಟೇರಮ್ಮನಿಗೆ 11 ವರ್ಷ ಇದ್ದಾಗಲೇ ಪೋಷಕರು ಮದುವೆ ಮಾಡಿದ್ರು.ಹೀಗಾಗಿ ಆ ಹುಡುಗಿ ಆಂದ್ರದಿಂದ ಬಂದು ಬೆಂಗಳೂರಲ್ಲಿ ವಾಸ ಮಾಡ್ತಿದ್ಲು. ಹೋಟೆಲ್ ಬಳಿ ಹೋಗಿ ಆ ಹುಡುಗಿಯನ್ನ ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನ ಮಾಡಿದ್ರು.
ತಾಯಿ ಜೊತೆ ಕಳಿಸಬೇಡಿ ಅಂತಾ ಆ ಯುವತಿ ಗೋಗರೆದಿದ್ರು. ಯುವತಿಯನ್ನ ರಕ್ಷಣೆ ಮಾಡಿ ಸ್ಟೇಷನ್ ಗೆ ಕರೆತಂದು ರಕ್ಷಣೆ ಕೊಡಲಾಗಿತ್ತು.ಈ ವೇಳೆ ಯುವತಿಯ ತಾಯಿ ಮತ್ತು ಕೆಲ ಸಂಬಂಧಿಕರು ಸ್ಟೇಷನ್ ನಲ್ಲಿ ಗಲಾಟೆ ಮಾಡಲು ಯತ್ನಿಸಿದ್ರು. ಪೊಲೀಸ್ರು ಕಾಟೇರಮ್ಮನಿಗೆ ರಕ್ಷಣೆ ನೀಡುವ ಸಲುವಾಗಿ ಪೋಷಕರನ್ನ ಠಾಣೆಯಿಂದ ಹೊರಗಡೆ ಕಳುಹಿಸುವ ಸಮಯದಲ್ಲಿ ಈ ಘಟನೆ ನಡೆದಿದೆ.
ಯುವತಿಯ ತಾಯಿ ಮತ್ತು ಸಂಬಂಧಿಕರು ಬಲವಂತವಾಗಿ ಸ್ಟೇಷನ್ ನಿಂದ ಯುವತಿಯನ್ನ ಎಳೆದೊಯ್ಯಲು ಪ್ರಯತ್ನಿಸಿದ್ರು. ಕಳಿಸದಿದ್ರೆ ಇಲ್ಲೇ ಆತ್ಮಹತ್ಯೆ ಕೂಡ ಮಾಡಿಕೊಳ್ತೀವಿ ಅಂತಾ ಬೆದರಿಕೆ ಹಾಕಿದ್ರು. ಈ ವೇಳೆ ಎಎಸ್ ಐ ರೇಣುಕಯ್ಯ ಮಹಿಳೆ ಮತ್ತು ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದಾರೆ.
ಆ ಕಾರಣ ಈ ಕೂಡಲೇ ಎಎಸ್ ಐ ರೇಣುಕಯ್ಯರನ್ನ ಸಸ್ಪೆಂಡ್ ಮಾಡಲಾಗಿದೆ. ಪೊಲೀಸ್ರು ಈ ತರಹದ ಕೆಲಸ ಮಾಡಬಾರದಿತ್ತು. ಅಲ್ಲದೇ ಇಲಾಖಾ ತನಿಕೆಗೂ ಕೂಡ ಆದೇಶ ನೀಡಲಾಗಿದೆ. ಬಾಲ್ಯ ವಿವಾಹ ಆಗಿರೊ ಬಗ್ಗೆ ಆಂದ್ರ ಪೊಲೀಸ್ರಿಗೂ ಕೂಡ ಮಾಹಿತಿ ನೀಡಲಾಗಿದೆ ಎಂದು ಡಿಸಿಪಿ ಅಣಾಮಲೈ ಹೇಳಿದ್ದರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243