Connect with us

ಸಿನಿ ಸುದ್ದಿ

ಕಾಲಿವುಡ್ ನಟರಿಗೆ ಕೋಟಿ ಕೋಟಿ ಸಂಭಾವನೆ? ಯಾರಿಗೆ ಎಷ್ಟು ಅಂತಾ ಗೊತ್ತ?

Published

on

ಸುದ್ದಿದಿನ ಡೆಸ್ಕ್: ಬಾಲುವುಡ್ ನಂತೆ ಕಾಲಿವುಡ್ ನಟರೂ ಅತ್ಯಧಿಕ ಮೊತ್ತದ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಬಜೆಟ್ ನ ಅರ್ಧದಷ್ಟು ಆಗುತ್ತದೆ. ಇದು ನಿರ್ಮಾಪಕರಿಗೆ ದೊಡ್ಡ ತಲೆಬೀಸಿಯಾಗಿ ಪರಿಣಮಿಸಿದೆ. ಸಂಭಾವನೆ ಪರಿಷ್ಕರಣೆ ಮಾಡಿಕೊಳ್ಳುವಂತೆ ಆಗ್ರಹಿಸಿ ಕಾಲಿವುಡ್ ನಿರ್ಮಾಪಕರು 48 ದಿನ ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿ ಪ್ರತಿಭಟನೆ ನಡೆಸಿದೆ.

ನೂರು ಕೋಟಿ ಮೊತ್ತದ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುವ ತೆಲುಗು ನಟ 15ಕೋಟಿ ಸಂಭಾವನೆ ಕೇಳುತ್ತಾನೆ. ತೆಲುಗು ಚಿತ್ರರಂಗದ ಹಿರೋಗಳು ರಿಜನಬಲ್ ಸಂಭಾವನೆ ಪಡೆಯುತ್ತಾರೆ. ಆದರೆ, ಕಾಲಿವುಡ್ ನಲ್ಲಿ ನೂರು ಕೋಟಿ ಬಂಡವಾಳದ ಸಿನಿಮಾದಲ್ಲಿ ನಟಿಸಲು 50ಕೋಟಿ ವರೆಗೂ ಸಂಭಾವನೆ ಬೇಡಿಕೆ ಇಡುತ್ತಾರೆ. ಕಳೆದ ಎರಡು ವರ್ಷಗಳಿಂದ ಕಾಲಿವುಡ್ ನಿರ್ಮಾಪಕರಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಟಾಪ್ ನಟರ ಏರಿಸಬಾರದು ಎಂದು ಅನೇಕ ನಿರ್ಮಾಪಕರು ಒತ್ತಾಯಿಸಿದ್ದರು.

ಚಲನಚಿತ್ರ ಮಂಡಳಿಯು ಟಿಕೆಟ್ ಕಂಪ್ಯೂಟರೈಜ್ ಮಾಡಿರುವುದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ ಪಾರದರ್ಶಕವಾಗಿದೆ. ಚಿತ್ರ ಗಳಿಕೆ ಆಧರಿಸಿ ನಟ ತನ್ನ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾನೆ. ಆದರೆ ಇದು ನಿರ್ಮಾಪಕನಿಗೆ ಸಮಸ್ಯೆ ಆಗಿ ಪರಿಣಮಿಸಲಿದೆ.

ಇಲ್ಲಿದೆ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ

ರಜನಿಕಾಂತ್

ಏಷ್ಯಾದಲ್ಲಿ ಜಾಕಿ ಚಾನ್‌ ಹೊರತುಪಡಿಸಿದರೆ ರಜನಿಕಾಂತ್ ಅತ್ಯಧಿಕ ಸಂಭಾವನೆ ಪಡೆಯುವ ನಟ.
70 ದಶಕದಿಂದ ಇಂದಿನವರೆಗೂ ರಜನಿಕಾಂತ್ ಕಾಲಿವುಡ್ ಆಳುತ್ತಿದ್ದಾರೆ. 2007ರಲ್ಲಿ ತೆರೆಕಂಡ ಶಿವಾಜಿ ಚಿತ್ರದಲ್ಲಿ ನಟಿಸಿದ್ದಕ್ಕೆ 55ಕೋಟಿ ರೂ. ಪಡೆದರೆ ಕಬಾಲಿ ಚಿತ್ರಕ್ಕೆ 80ಕೋಟಿ ರೂ.ಗೆ ತಮ್ಮ ಸಂಭಾವನೆ ಏರಿಸಿಕೊಂಡಿದ್ದಾರೆ. ಬಹುತೇಕ ಎಲ್ಲಾ ಚಿತ್ರಗಳಿಗೆ 60ಕೋಟಿ ಪಡೆದಿದ್ದಾರೆ.

ಕಮಲ್ ಹಾಸನ್

ಕಮಲ್ ಹಾಸನ್ ಚಿತ್ರ ನಿರ್ಮಾಪಕರಿಗೆ ಆರ್ಥಿಕ ಹೊರೆ ಉಂಟು ಮಾಡದ, ರಿಜನಬಲ್ ಸಂಭಾವನೆ ಪಡೆಯುವ ಜನಪ್ರಿಯ ನಟ. ಕಮಲ್ ಹಾಸನ್ ಒಂದು ಚಿತ್ರಕ್ಕೆ 15ರಿಂದ 30 ಸಂಭಾವನೆ ಪಡೆಯುತ್ತಾರೆ. ಆದರೆ, ಬೇರೆ ಕೆಲಸ ವಹಿಸಿಕೊಂಡರೆ ಅದಕ್ಕೆ ಹೆಚ್ಚುವರಿ ವೇತನ ಪಡೆಯುತ್ತಾರೆ.

ದಳಪತಿ ವಿಜಯ್

ದಳಪತಿ ವಿಜಯ್ ಸದ್ಯ ಯುವ ನಟರಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟ. ಹತ್ತಿರ ಹತ್ತಿರ ರಜನಿಕಾಂತ್ ಅಷ್ಟೆ ವೇತನ ಗಳಿಸುತ್ತಾರೆ. ಚಿಂಬುದೇವನ್ ಅವರ ಫ್ಯಾಂಟಸಿ ಅಡ್ವೆಂಚರ್‌ ಸಿನಿಮಾ *ಪುಲಿ* ಸಿನಿಮಾಗೆ 30ಕೋಟಿ ಪಡೆದಿದ್ದಾರೆ.
130 ಕೋಟಿ ಬಜೆಟ್ ಸಿನಿಮಾ *ಮಾರ್ಷಲ್* ನಲ್ಲಿ ತಮ್ಮ ಸಂಬಳ ಹೆಚ್ಚಿಸಿಕೊಂಡಿದ್ದಾರೆ.

ಅಜಿತ್

ಅಜಿತ್ ನಟನೆಯ ವಿವೇಕಂ ಚಿತ್ರವು ಭಾರಿ ಮೊತ್ತ ಹಣ ಬಾಜಿಕೊಂಡಿತು. ಇದು ಸಿನಿಮಾ ಕರೀಯರ್ ನಲ್ಲಿ ಹೆಚ್ಚು ಮೊತ್ತ ಗಳಿಸಿದ ಚಿತ್ರ. ಇವರು ಸಾಮಾನ್ಯವಾಗಿ 25ರಿಂದ 40 ಕೋಟಿ ಸಂಭಾವನೆ ಪಡೆಯುತ್ತಾರೆ. ಮುಂದೆ ತಮ್ಮ ವೇತನ ಹೆಚ್ಚಿಸಿಕೊಳ್ಳಬಹುದು.

ಸೂರ್ಯ

ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹೆಚ್ವು ಅಭಿಮಾನಿಗಳನ್ನು ಹೊಂದಿರುವ ನಟ ಸೂರ್ಯ. ಸೂರ್ಯ ನಟಿಸಿದ ಸಿನಿಮಾಗಳು ಬೇರೆ ಡಬ್ ಆದರೂ ದೊಡ್ಡ ಲಾಭ ತಂದುಕೊಡುತ್ತವೆ. ಹಾಗಾಗಿ, ಸೂರ್ಯ ತಮಿಳು ಸಿನಿಮಾಗೆ 18ರಿಂದ 25 ಕೋಟಿ ಪಡೆದರೆ, ಡಬ್ ಸಿನೆಮಾಗಳಿಗೆ 10ಕೋಟಿ ಗಳಿಸುತ್ತಾರೆ.

ವಿಕ್ರಂ

ಪಾತ್ರಕ್ಕೆ ಜೀವ ತುಂಬುವಂತೆ ಪಕ್ವ ನಟನೆಯ ಹೀರೋ ವಿಕ್ರಂ. ಚಿತ್ರ ಪಾತ್ರ ನ್ಯಾಯ ಒದಗಿಸಲು ವಿಕ್ರಂ ತಮ್ಮ ದೇಹ ತೂಕವನ್ನು 20ಕೆಜಿ ಇಳಿಸಿಕೊಂಡಿದ್ದರು. ಸಾಮಾನ್ಯವಾಗಿ ವಿಕ್ರಂ 15ರಿಂದ 20 ಕೋಟಿ ರೂ. ಗಳಿಸುತ್ತಾರೆ.

ಧನುಷ್

ಧನುಷ್ ಅವರ ಸಿನಿಮಾ ಪಯಣ ಯುವ ಪ್ರತಿಭೆಗಳಿಗೆ ಪ್ರೇರಣೆ. ಹೀರೋ ಆಗಿ ಕಾಣಿಸಿಕೊಳ್ಳುವ ಲೂಕ್ ಆಗಲಿ, ಪರ್ಸನಾಲಿಟಿ ಇಲ್ಲ. ಅವರ ಕಾಯಕ ಶ್ರದ್ಧೆ ತಮ್ಮ ಮೈನಸ್ ಪಾಯಿಂಟ್ ನ್ನು ಮೀರಿ ನಿಂತು ಹಾಲಿವುಡ್ ಹೀರೋ ಆಗಿದ್ದಾರೆ.

ಧನುಷ್ ಕೂಡ ಒಬ್ಬ ಪ್ರಡ್ಯುಜರ್ ಆಗಿದ್ದು, ಒಂದು ಸಿನಿಮಾಕ್ಕೆ 20ಕೋಟಿ ಸಂಭಾವನೆ ಗಳಿಸುತ್ತಾರೆ. ಪ್ರಡಕ್ಷನ್ ಕಂಪನಿಗೆ ತಕ್ಕಂತೆ ವೇತನ ಹೆಚ್ಚಿಸಿಕೊಳ್ಳುತ್ತಾರೆ, ಕಡಿಮೆಯೂ ಮಾಡಿಕೊಳ್ಳುತ್ತಾರೆ.

ಸಿಂಬು ಅಕ ಎಸ್.ಟಿ.ಆರ್.

ಧನುಷ್ ಅವರಂತೆ ಬಹುಮುಖ ಪ್ರತಿಭಾ ನಟ *ಸಿಂಬು ಅಕ ಎಸ್.ಟಿ.ಆರ್*. *ಮನ್ಮಥನ್*, *ವಲ್ಲವನ್* ಚಿತ್ರಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಆದರೆ, ಸೆಟ್‌ಗಳಲ್ಲಿ ಅವರ ಅನ್ ಪ್ರೊಫೆಷನಲ್ ಬಿಹೆವಿಯರ್ ಬಗ್ಗೆ ಫಿಲ್ಮ್ ಮೇಕರ್ ಗಳಲ್ಲಿ ಅಸಮಾಧಾನವಿದೆ. ಆದರೂ, ಅವರ ಫ್ಯಾನ್ಸ್ ಮಾತ್ರ ಪ್ರೋತ್ಸಾಹಿಸುತ್ತಾರೆ. ಇವರು ಒಂದು ಸಿನಿಮಾಗೆ 10ಕೋಟಿ ವೇತನ ತೆಗೆಕೊಳ್ಳುತ್ತಾರೆ.

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ1 week ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending