Connect with us

ಬಹಿರಂಗ

ಬುದ್ಧನೋ..? ಕಾರ್ಲ್ ಮಾರ್ಕ್ಸೊ ..?

Published

on

  • ಅಂಬೇಡ್ಕರರು ಮೇಲಿನ ಹೆಸರಿನ ತಮ್ಮ ಲೇಖನದಲ್ಲಿ ಒಂದು ಮಹತ್ವದ ಸಂಶ್ಲೇಷಣೆಗೆ ಪ್ರಯತ್ನಪಟ್ಟರು. 20ನೇ-ಶತಮಾನದ ಚಾರಿತ್ರಿಕ ಸನ್ನಿವೇಶದಲ್ಲಿ ಮಾರ್ಕ್ಸ್ ವಾದ ಮತ್ತು ಬೌದ್ಧಧರ್ಮ ಪರಸ್ಪರ ವಿರುದ್ಧವೆಂಬಂತೆ ಕಾಣಿಸಿಕೊಂಡರೂ, ಅವುಗಳೊಳಗಿನ ಸಾಮ್ಯವನ್ನು ಹೊರಗೆಳೆಯಲು ಅಂಬೇಡ್ಕರ್ ಪ್ರಯತ್ನ ನಡೆಸಿದರು. ಈ ಲೇಖನದಲ್ಲಿ ವ್ಯಕ್ತಿ ಸಮಾಜಗಳೆರಡರ ಅಗತ್ಯಗಳನ್ನು ಒಳಗೊಳ್ಳುವ ಹೊಸ ವಿಚಾರಧಾರೆಯನ್ನು ನಿರ್ಮಿಸುವ ಒಳನೋಟವನ್ನು ಅಂಬೇಡ್ಕರ್ ನೀಡಲು ಪ್ರಯತ್ನಿಸುತ್ತಾರೆ. ಹೀಗಾಗಿ, ಅಂಬೇಡ್ಕರರ ಇಡೀ ವಿಚಾರಧಾರೆಯಲ್ಲಿ ಈ ಲೇಖನ ತುಂಬಾ ಮುಖ್ಯವಾದದು.

ಅನುವಾದ : ವಿ.ಎಸ್.ಬಾಬು

ಕಾರ್ಲ್ ಮಾರ್ಕ್ಸ್ ಮತ್ತು ಬುದ್ಧರ ನಡುವಣ ಹೋಲಿಕೆಯೇ ಒಂದು ತಮಾಷೆಯಾಗಿ ಕಾಣಲು ಸಾಧ್ಯವಿದೆ. ಮಾರ್ಕ್ಸ್ ಮತ್ತು ಬುದ್ಧರ ನಡುವೆ 2381 ವರ್ಷಗಳಷ್ಟು ಅಂತರವಿದೆ. ಕ್ರಿ.ಪೂ. 563 ರಲ್ಲಿ ಬುದ್ಧ ಹುಟ್ಟದ್ದು, ಮಾರ್ಕ್ಸ್ 1818 ಎ.ಡಿ. ನಲ್ಲಿ ಹುಟ್ಟದ್ದು. ಹೊಸ ಆರ್ಥಿಕ ವ್ಯವಸ್ಥೆಯೊಂದರ ಪ್ರವಾದಿ ಮಾರ್ಕ್ಸ್. ಬುದ್ಧ ರಾಜಕೀಯ ಅಥವಾ ಅರ್ಥಶಾಸ್ತ್ರಕ್ಕೆ ಸಂಬಂಧವಿರದ ಹೊಸ ಧರ್ಮದ ಸ್ಥಾಪಕ ಎಂದು ಹೇಳಲಾಗಿದೆ. ಹೀಗಾಗಿ, ಈ ಹೋಲಿಕೆಯ ಪ್ರಯತ್ನವೇ ವಿಚಿತ್ರವಾಗಿ ಕಾಣಲು ಸಾಧ್ಯ. ಮಾರ್ಕ್ಸ್ ವಾದಿಗಳು ಈ ವಿಚಾರದ ಬಗ್ಗೆ ಗೇಲಿಮಾಡಿ ನಗಬಹುದು. ಆದರೆ, ಅವರು ತಮ್ಮ ಧೋರಣೆ ಬದಲಾಯಿಸಿ, ಗಂಭೀರವಾಗಿ ಗಮನಕೊಟ್ಟರೆ ಮಾರ್ಕ್ಸ್ ವಾದಿಗಳ ಧೋರಣೆಯೇ ಬದಲಾಗಲು ಸಾಧ್ಯವಿದೆ.

ಬುದ್ಧನ ವಿಚಾರಸಾರ

ಅಹಿಂಸೆಯ ಜೊತೆಗೆ ಬುದ್ಧನ ಹೆಸರನ್ನು ಸಾಮಾನ್ಯವಾಗಿ ಸೇರಿಸಲಾಗುತ್ತದೆ. ಅದೇ ಮೊದಲು ಮತ್ತು ಕೊನೆ ಎಂಬಂತೆಯೂ ಹೇಳಲಾಗಿದೆ. ಆದರೆ, ಬುದ್ಧ ಗುರುವಿನ ವಿಚಾರ ಬರೀ ಅಷ್ಟೇ ಅಲ್ಲ. ತ್ರಿಪಿಟಕ ದಲ್ಲಿನ ಬುದ್ಧನ ವಿಚಾರ ಹಾಗೂ ಮೌಲ್ಯಗಳನ್ನು ಮುಂದೆ
ಸಂಗ್ರಹಿಸಿದ್ದೇನೆ.

  1. ಮುಕ್ತ ಸಮಾಜದಲ್ಲಿ ಧರ್ಮದ ಅವಶ್ಯಕತೆಯಿದೆ.
  2. ಎಲ್ಲ ಧರ್ಮಗಳು ಅನುಸರಿಸಲು ಅರ್ಹವಲ್ಲ.
  3. ಧರ್ಮವೆನ್ನುವುದು ಜೀವನದ ಸತ್ಯ ಸಂಗತಿಗಳಿಗೆ ಸಂಬಂಧಿಸಿರಬೇಕು.ದೇವರ ಬಗೆಗಿನ ಸಿದ್ಧಾಂತ ಮತ್ತು ತತ್ವಗಳಿಗೆ ಅಲ್ಲ ; ಅಥವಾ ಆತ್ಮ ಸ್ವರ್ಗಗಳ ಬಗೆಗೂ ಅಲ್ಲ.
  4. ದೇವರನ್ನು ಧರ್ಮದ ಕೇಂದ್ರನೆಲೆ ಮಾಡುವುದು ಸರಿಯಲ್ಲ.
  5. ಪ್ರಾಣಿಬಲಿಯನ್ನು ಧರ್ಮದ ಕೇಂದ್ರವನ್ನಾಗಿ ನೋಡುವುದು ತಪ್ಪು.
  6. ನಿಜವಾದ ಧರ್ಮ ಮನುಷ್ಯನ ಹೃದಯದಲ್ಲಿರುತ್ತದೇ ಶಾಸ್ತ್ರಗಳಲ್ಲ.
  7. ಮನುಷ್ಯ ಮತ್ತು ನೈತಿಕತೆಯೇ ಧರ್ಮದ ಕೇಂದ್ರವಾಗಿರಬೇಕು ಅದಿಲ್ಲದಿದ್ದರೆ, ಧರ್ಮ ಕ್ರೂರ ಮೂಢನಂಬಿಕೆಯಾಗಿಬಿಡುತ್ತದೆ.
  8. ನೈತಿಕತೆ ಎನ್ನುವುದು ಜೀವನದ ಆದರ್ಶವಾಗಿದ್ದಾರೆ ಮಾತ್ರ ಸಾಲದು. ದೇವರಿಲ್ಲದ ಕಾರಣ ಅದು ಜೀವನದ ನಿಯಮ, ಕಾನೂನು ಕೂಡ ಆಗಬೇಕು.
  9. ಈ ಜಗತ್ತಿನಲ್ಲಿ ದುಃಖವೆನ್ನುವುದು ವಿವಿಧ ಆಸಕ್ತಿಗಳ ಘರ್ಷಣೆಯ ಕಾರಣಕ್ಕಾಗಿ, ಅದನ್ನು ಪರಿಹರಿಸಲು ಇರುವ ದಾರಿಯೆಂದರೆ ಅಷ್ಟಾಂಗ ಮಾರ್ಗ ಮಾತ್ರ.
  10. ಆಸ್ತಿಯ ಕಾಸಿಗೆ ಒಡೆತನ ಒಂದು ವರ್ಗಕ್ಕೆ ಶಕ್ತಿಯನ್ನೂ, ಇನ್ನೊಂದು ವರ್ಗಕ್ಕೆ ದುಃಖವನ್ನೂ ತರುತ್ತದೆ.
  11. ಸಮಾಜದ ಒಳಿತಿಗಾಗಿ ಈ ದುಃಖದ ಮೂಲ ಕಾರಣ ಆಸ್ತಿಯನ್ನೇ ಇಲ್ಲವಾಗಿಸಬೇಕು.
  12. ಎಲ್ಲ ಮಾನವರೂ ಸಮಾನರು.
  13. ಹುಟ್ಟಿನಿಂದ ಮನುಷ್ಯ ದೊಡ್ಡವನಾಗುವುದಿಲ್ಲ. ಗುಣದಿಂದ ಆಗುತ್ತಾರೆ.
  14. ಒಳ್ಳೆಯ ವಂಶದ ಹುಟ್ಟು ಮುಖ್ಯವಲ್ಲ. ಉನ್ನತಾರ್ದಶಗಳು ಮುಖ್ಯ.
  15. ಎಲ್ಲರ ಬಗೆಗೆ ಮೈತ್ರಿಯೇ ಮುಖ್ಯ. ಶತ್ರುವಿಗೂ ಕೂಡ ಅದು ಸಲ್ಲಬೇಕು.
  16. ಪ್ರತಿಯೊಬ್ಬನಿಗೂ ಕಲಿಯುವ ಹಕ್ಕಿದೆ. ಜ್ಞಾನವೆನ್ನುವುದು ಅನ್ನದಷ್ಟೇ ಮುಖ್ಯ.
  17. ಚಾರಿತ್ರ್ಯವಿಲ್ಲದ ಜ್ಞಾನ ಅಪಾಯಕಾರಿ.
  18. ಯಾವುದೂ ಶಾಶ್ವತವಲ್ಲ. ಪ್ರತಿಯೊಂದು ಕೂಡ ವಿಮರ್ಶೆಗೆ, ವಿಶ್ಲೇಷಣೆಗೆ ಒಳಗಾಗಬೇಕು.
  19. ಯಾವುದೂ ಅಂತಿಮವಲ್ಲ.
  20. ಎಲ್ಲವೂ ಕಾರ್ಯ–ಕಾರಣ ಸಂಬಂಧಕ್ಕೆ ಬದ್ಧ.
  21. ಪ್ರತಿಯೊಂದು ಪರಿವರ್ತನಶೀಲವೇ.
  22. ಸತ್ಯ ಮತ್ತು ಅಹಿಂಸೆಗಳಿಲ್ಲದಿದ್ದರೆ ಯುದ್ಧ ತಪ್ಪು.
  23. ಗೆದ್ದವನಿಗೆ ಸೋತವರ ಬಗೆಗೂ ಜವಾಬ್ದಾರಿ ಇರುತ್ತದೆ.

ಇದೆ ಬುದ್ಧ ವಿಚಾರ ಸಾರ ! ಎಷ್ಟು ಹಳೆಯದಾದರೂ ಎಷ್ಟೊಂದು ಹೊಸದಾಗಿ ಕಾಣುತ್ತದೆ !

ಮಾರ್ಕ್ಸ್ ನ ವಿಚಾರಗಳ ಸಾರ

  1. ತತ್ವಜ್ಞಾನದ ಗುರಿ ಜಗತ್ತಿನ ಮೂಲ ಸ್ವರೂಪವನ್ನು ವಿವರಿಸುವುದಲ್ಲ, ಬದಲಾಗಿ ಜಗತ್ತನ್ನು ಪುನರ್ ರಚಿಸುವುದು.
  2. ಚರಿತ್ರೆಯನ್ನು ರೂಪಿಸುವ ಶಕ್ತಿಗಳು ಪ್ರಧಾನವಾಗಿ ಆರ್ಥಿಕ ಶಕ್ತಿಗಳು
  3. ಸಮಾಜ ಯಾವಾಗಲೂ ಮಾಲೀಕರು ಮತ್ತು ಆಳುಗಳೆಂಬ ಎರಡು ವರ್ಗಗಳಾಗಿ ವಿಭಜನೆಯಾಗಿರುತ್ತದೆ. ಅವರುಗಳ ನಡುವೆ ಯಾವಾಗಲೂ ಘರ್ಷಣೆ ಸಾಗಿರುತ್ತದೆ.
  4. ಕೂಲಿಗಳ ದುಡಿಮೆಗಳ ಫಲವಾದ ಹೆಚ್ಚಳ ಮೌಲ್ಯವನ್ನು ಮಾಲೀಕರು ಯಾವಾಗಲೂ ಕಬಳಿಸುತ್ತಾರೆ.
  5. ಖಾಸಗಿ ಆಸ್ತಿಯ ರದ್ಧತಿ ಅಥವಾ ಉತ್ಪಾದನಾ ಸಾಧನಗಳ ರಾಷ್ಟ್ರೀಕರಣದಿಂದ ಮಾತ್ರ ಈ ಶೋಷಣೆ ನಿಲ್ಲುತ್ತದೆ.
  6. ಈ ಬಡತನ ಕಾರ್ಮಿಕರಲ್ಲಿ ಕ್ರಾಂತಿಕಾರಿ ಚೈತನ್ಯ ತುಂಬಿ ವರ್ಗಗಳ ಘರ್ಷಣೆವರ್ಗಯುದ್ಧವಾಗಿ ಮಾರ್ಪಾಡಾಗುತ್ತದೆ.
  7. ಕೂಲಿಕಾರರು ಮಾಲೀಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ, ಅವರು ಪ್ರಭುತ್ವವನ್ನು ವಶಪಡಿಸಿಕೊಂಡು ತಮ್ಮದೇ ಆದ ರಾಜ್ಯವನ್ನು ಸ್ಥಾಪಿಸುತ್ತಾರೆ. ಇದನ್ನೇ ಮಾರ್ಕ್ಸ್ ದುಡಿಮೆಗಾರರ ಸರ್ವಾಧಿಕಾರತ್ವ ಎಂದು ಕರೆಯುತ್ತಾನೆ,

ಈ ವಿದ್ಯಮಾನಗಳನ್ನು ಪಡೆಯಲಾಗುವುದಿಲ್ಲ. ಹೀಗಾಗಿ ಸಮಾಜವಾದ ಅನಿವಾರ್ಯ.

ಮಾರ್ಕ್ಸ್ ಸಿದ್ಧಾಂತದಲ್ಲಿ ಉಳಿಯುವುದೇನು..?

ಮಾರ್ಕ್ಸ್–ಬುದ್ಧರ ಹೋಲಿಕೆಗೆ ಮುಂಚೆ ಮಾರ್ಕ್ಸ್ ಸಿದ್ಧಾಂತದ ಮೂಲ ವಿಚಾರಗಳು ಎಷ್ಟರಮಟ್ಟಿಗೆ ಉಳಿದುಬಂದಿವೆ ಎಂದು ನೋಡಬೇಕು. 19ನೇ ಶತಮಾನದಲ್ಲಿ ಹುಟ್ಟಿದ ಈ ವಿಚಾರ ದಾರಿಯಲ್ಲಿ ಈಗ ಎಷ್ಟು ಉಳಿದಿದೆ ಎಂಬುದನ್ನು ನೋಡಬೇಕು. 1917 ರಲ್ಲಿ ರಷ್ಯದಲ್ಲಿ ಮಾತ್ರ ಕ್ರಾಂತಿಯಾಯಿತು. ಅಲ್ಲಿ ಸಾಕಷ್ಟು ಹಿಂಸೆ ರಕ್ತಪಾತವೂ ಆಯಿತು. ಜಗತ್ತಿನ ಇನ್ನೂ ಬಹಳಷ್ಟು ಭಾಗ ಕ್ರಾಂತಿಗಾಗಿ ಕಾಯುತ್ತಲೇ ಇದೆ. ಮಾರ್ಕ್ಸ್ ನ ವಿಚಾರಗಳಲ್ಲಿ ಸಾಕಷ್ಟನ್ನು ಚರಿತ್ರೆ ಮತ್ತು ಅನುಭವ ತಳ್ಳಿಹಾಕಿದೆ. ಆರ್ಥಿಕ ಸಿದ್ಧಾಂತವೇ ಪರಿಪೂರ್ಣ ಎಂದು ಈಗ ಯಾರೂ ಒಪ್ಪುವುದಿಲ್ಲ. ಕಾರ್ಮಿಕ ವರ್ಗ ದಿನೇ ದಿನೇ ಬಡವಾಗುತ್ತಿದೆ ಎಂಬ ಸಿದ್ಧಾಂತವನ್ನು ಕೂಡ ಈಗ ಯಾರೂ ಒಪ್ಪುವುದಿಲ್ಲ.

ಹೀಗಾಗಿ, ಮಾರ್ಕ್ಸ್ ನ ವಿಚಾರಗಳಲ್ಲಿ ಈಗ ಒಂದು ಚಿಕ್ಕ ಚಿಂತೆ ಆದರೆ ತುಂಬಾ ಪ್ರಬಲವಾದ ಚಿಂತೆ ಉಳಿದಿದೆ. ಅವು ನಾಲ್ಕು :

  1. ತತ್ವಜ್ಞಾನದ ಕೆಲಸ ಜಗತ್ತನ್ನು ಪುನರ್ ರಚಿಸುವುದು, ಬರೀ ವಿವರಣೆ ಅಲ್ಲ.
  2. ವರ್ಗಗಳ ನಡುವೆ ಆಕರ್ಷಣೆ ಇರುತ್ತದೆ.
  3. ಖಾಸಗಿ ಆಸ್ತಿ ಒಂದು ವರ್ಗಕ್ಕೆ ಶಕ್ತಿಯನ್ನು, ಇನ್ನೊಂದಕ್ಕೆ ದುಃಖವನ್ನು ತರುತ್ತದೆ.
  4. ಖಾಸಗಿ ಆಸ್ತಿಯ ನಿರ್ಮೂಲನದಿಂದ ಈ ದುಃಖ ನಿವಾರಣೆಯ ಅಗತ್ಯವಿದೆ.

ಇಲ್ಲಿಯ ಮೊದಲ ವಿಚಾರದ ಮಟ್ಟಿಗೆ ಬುದ್ಧ ಮತ್ತು ಮಾರ್ಕ್ಸ್ ರಲ್ಲಿ ಸಂಪೂರ್ಣ ಒಪ್ಪಿಗೆ ಇದೆ. ಎರಡನೆಯದರ ಬಗೆಗೂ ಒಪ್ಪಿಗೆ ಇದೆ ಎಂದೇ ಹೇಳಬೇಕು. ಬುದ್ಧನ ಅಷ್ಟಾಂಗ ಮಾರ್ಗವೇ ಇದಕ್ಕೆ ಸಾಕ್ಷಿ. ಬಳಸಿದ ಭಾಷೆ ಬೇರೆಯಾದರೂ ಅರ್ಥ ಒಂದೇ. ಖಾಸಗಿ ಆಸ್ತಿಯ ಬಗ್ಗೆಯೂ ಅಷ್ಟೇ, ಪರಸ್ಪರ ಒಪ್ಪಿಗೆ ಇದೆ. ಇನ್ನು ನಾಲ್ಕನೇ ಅಂಶದ ಬಗೆಗೆ ಬೇರೆ ಸಾಕ್ಷ್ಯದ ಅಗತ್ಯವೇ ಇಲ್ಲ. ಬಿಕ್ಷು ಸಂಘದ ನಿಯಮಗಳೇ ಅದನ್ನು ಸ್ಪಷ್ಟಪಡಿಸುತ್ತವೆ.

ಭಿಕ್ಷು ಸಂಘದ ನಿಯಮದ ಪ್ರಕಾರ ಒಬ್ಬ ಬೌದ್ಧ ಭಿಕ್ಷುಕನಿಗೆ 8 ವಸ್ತುಗಳು ಮಾತ್ರ ಇರಬೇಕು. ಅವುಗಳು ಹೀಗಿವೆ :

1,2,3,– ಮೂರು ತುಂಡುಬಟ್ಟೆ
4 – ಒಂದು ಲಂಗೋಟ
5. ಭಿಕ್ಷಾ ಪಾತ್ರೆ
6. ಒಂದು ಕತ್ತಿ
7. ಒಂದು ಸೂಜಿ
8. ನೀರಿನ ಪಾತ್ರೆ

ಚಿನ್ನ ಬೆಳ್ಳಿಯನ್ನು ಭಿಕ್ಷೆಯಾಗಿ ಸ್ವೀಕರಿಸಲೇಬಾರದು.ರಷ್ಯಾದ ನಿಯಮಗಳಿಗಿಂತ ಇವು ಹೆಚ್ಚು ನಿಷ್ಠುರ.

ಸಾಧನದ ಬಗ್ಗೆ

ತನ್ನ ಕಲ್ಪನೆಯ ಸಮತಾವಾದವನ್ನು ತರುವಲ್ಲಿ ಬುದ್ಧನ ವಿಚಾರಗಳು ನಿರ್ದಿಷ್ಟವಾಗಿ ಇದ್ದವು. ಅದನ್ನು ಒಂದೇ ಮಾತಿನಲ್ಲಿ ಹೇಳುವುದಾದರೆ, ಒಬ್ಬ ಮನುಷ್ಯನನ್ನು ನೈತಿಕ ಮಾರ್ಗ ಬಳಸಿ ಬದಲಾಯಿಸಬೇಕು. ಕಮ್ಯುನಿಸ್ಟರ ಸಾಧನ ಕೂಡ ಸ್ಪಷ್ಟ–ಹಿಂಸೆ ಮತ್ತು ಕಾರ್ಮಿಕ ವರ್ಗದ ಸರ್ವಾಧಿಕಾರತ್ವ. ಇದರಿಂದ ಸ್ಪಷ್ಟವಾಗುವುದೇನೆಂದರೆ, ಬುದ್ಧ ಮತ್ತು ಮಾರ್ಕ್ಸ್ ರ ಅಂತಿಮ ಗುರಿ ಒಂದೇ ಆದರೂ, ದಾರಿಗಳು ಮಾತ್ರ ಬೇರೆ. ಬುದ್ಧ ಮಾರ್ಗದ ಪರಮಗುರಿ ಎಂದರೆ ನೈತಿಕ ಶಕ್ತಿಯನ್ನು ಯಾವುದೇ ರೀತಿಯ ಮೃಗೀಯ ಶಕ್ತಿ ತಳ್ಳಿಹಾಕಬಾರದು ಎಂದು. ಪ್ರತಿಯೊಬ್ಬ ಮನುಷ್ಯನೂ ಉತ್ತಮ ರಾಜ್ಯದ ಸಾಧನವಾಗಬೇಕು ಎಂದು.

ಪ್ರಭುತ್ವದ ನಿರ್ನಾಮದ ಪ್ರಶ್ನೆ

ತಮ್ಮ ರಾಜಕೀಯ ತತ್ವಜ್ಞಾನದ ಪ್ರಮುಖ ದೋಷವೆಂದರೆ ಕಾರ್ಮಿಕರ ಶಾಶ್ವತ ಸರ್ವಾಧಿಕಾರತ್ವದ ಪರಿಕಲ್ಪನೆ ಎಂದು ಕಮ್ಯುನಿಸ್ಟರು ಕೂಡ ಒಪ್ಪಿಕೊಳ್ಳುತ್ತಾರೆ. ಅಂತಿಮವಾಗಿ ಪ್ರಭುತ್ವ ಶಿಥಿಲವಾಗಿ ಉದುರಿಹೋಗುತ್ತದೆ ಎಂಬ ವಾದದ ಅಡಿಯಲ್ಲಿ ಅವರು ರಕ್ಷಣೆ ಪಡೆಯಲು ಯತ್ನಿಸುತ್ತಾರೆ. ಆದರೆ ಯಾವಾಗ ಅದು ನಿರ್ನಾಮವಾಗುತ್ತದೆ? ನಿರ್ದಿಷ್ಟ ಕಾಲಾವಧಿ ಕೊಡಲು ಮಾರ್ಕ್ಸ್ ವಿಫಲರಾಗುತ್ತಾರೆ. ಈ ರೀತಿಯ ಕಾರ್ಮಿಕ ಸರ್ವಾಧಿಕಾರತ್ವ ಅಲ್ಪಕಾಲಾವಧಿಗೆ ಒಳ್ಳೆಯದು; ಮತ್ತು ಅಗತ್ಯವೂ ಇರುತ್ತದೆ.

ತನ್ನ ಕೆಲಸ ಮುಗಿದ ನಂತರ ಕಾರ್ಮಿಕ ವರ್ಗದ ಸರ್ವಾಧಿಕಾರತ್ವ ಯಾಕೆ ಬೇರೆಯದಕ್ಕೆ ಮಾಡಿಕೊಳ್ಳಬಾರದು ?

ಅಶೋಕನದೇ ಸ್ವತಃ ಆ ರೀತಿಯ ಉದಾಹರಣೆ ಇದೆಯಲ್ಲ ! ಅಶೋಕ ಕಳಿಂಗ ಯುದ್ಧದ ನಂತರ ಅಪೂರ್ಣ ಅಹಿಂಸೆಯನ್ನೇ ಸ್ವೀಕರಿಸಿದನಲ್ಲ. ಈ ರೀತಿ ಪ್ರಭುತ್ವ ವಾಪಸಾದ ಮೇಲೆ ಅದರ ಜಾಗವನ್ನು ಯಾವುದು ತುಂಬುತ್ತದೆ ? ಧರ್ಮ ಮಾತ್ರ. ಆದರೆ, ಧರ್ಮ ಎಂದರೇನೆ ಕಮ್ಯುನಿಸ್ಟರಿಗೆ ಅಸಹ್ಯ.

ಸ್ವಾತಂತ್ರ್ಯ ಸಮಾನತೆ, ಸೋದರತೆಗಳ ಜತೆಗೆ ಮಾನವನ ಬೌದ್ಧಿಕ ಸುಖ, ಸಂಪತ್ತಿನ ಅಗತ್ಯವನ್ನೂ ಮೇಳೈಸಬಲ್ಲ ಏಕೈಕ ಧರ್ಮವೆಂದರೆ ಬೌದ್ಧಧರ್ಮ ಮಾತ್ರ. ಕಮ್ಯುನಿಸಂ ಒಂದನ್ನು ಮಾತ್ರ ಕೊಡಬಲ್ಲದು ಉಳಿದವನಲ್ಲ.

ಆಕರ ಗ್ರಂಥಗಳು

  • ಅಂಬೇಡ್ಕರ್ ವಿಚಾರ ಸಂಗ್ರಹಮಾಲೆ 2 ಧಾರ್ಮಿಕ ಚಿಂತನೆ
  • The Buddha and His Dhamma – B. R. Ambedkar

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending