Connect with us

ಬಹಿರಂಗ

ಬೌದ್ಧ ಧರ್ಮ ಮತ್ತು ಅಂಬೇಡ್ಕರ್ ಯಾನ

Published

on

ಚಿತ್ರಕಲೆ : ಹಾದಿಮನಿ

ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ. 1.ಹೀನಯಾನ 2.ಮಹಾಯಾನ. ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು ಕರೆಯಲಾಗುತ್ತದೆ. ಆದರೆ ಶೋಷಿತರು ಹಳೆಯ ಬೌದ್ಧರು. ಯಾಕೆಂದರೆ ಅಂಬೇಡ್ಕರರೇ ಒಂದೆಡೆ ಹೇಳಿದ್ದಾರೆ “ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು ನಾವು” ಎಂದು. ಈ ದಿಸೆಯಲ್ಲಿ ಸದ್ಯ “ಯಾನ” ಎಂದರೇನು? ಎಂಬುದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿದೆ.

“ಯಾನ” ಎಂದರೆ ಪಯಣ ಎಂದರ್ಥ. ಅಂದರೆ ಬೌದ್ಧ ಪಯಣ ಎಂದರ್ಥ. Its way of life ಎನ್ನಬಹುದು. ಹಾಗಿದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ರು ಬೌದ್ಧ ಧರ್ಮ ಸ್ವೀಕರಿಸಿದಾಗ ಆಗ ಅಸ್ತಿತ್ವದಲ್ಲಿದ್ದ ಬೌದ್ಧ ಧರ್ಮವನ್ನು ಯಥಾವತ್ ಸ್ವೀಕರಿಸಿದರೆ? ಊಹ್ಞೂಂ. ನಿಜ ಹೇಳಬೇಕೆಂದರೆ ಬುದ್ಧ ಅರಮನೆ ತೊರೆದು ಪರಿವ್ರಾಜಕನಾಗಲು ಸಂಬಂಧಿಸಿದ ಮೂಲ ಕತೆಯಾದ, ಪ್ರಸಿದ್ಧ ಕತೆಯಾದ ಆತ ರೋಗಿಯೊಬ್ಬನನ್ನು ನೋಡಿದ, ವೃದ್ಧನೊಬ್ಬನನ್ನು ನೋಡಿದ, ಸತ್ತ ಮನುಷ್ಯನೊಬ್ಬನನ್ನು ನೋಡಿದ ಎಂಬ ಆ very basic ಸಾಂಪ್ರದಾಯಿಕ ಕತೆಯನ್ನೇ ಅಂಬೇಡ್ಕರರು ನಿರಾಕರಿಸಿದರು. ಇದಕ್ಕೆ ಅವರು ಕೊಡುವ ಕಾರಣ “ಪರಿವ್ರಾಜಕ(ಸನ್ಯಾಸ)ವನ್ನು ಬುದ್ಧ ಸ್ವೀಕರಿಸಿದ್ದು ಆತನ 29ನೇ ವಯಸ್ಸಿನಲ್ಲಿ. ಆ ಮೂರು ದೃಶ್ಯಗಳನ್ನು(ರೋಗಿ, ವೃದ್ಧ, ಸತ್ತ ಮನುಷ್ಯ) ನೋಡಿ ಆತ ಸನ್ಯಾಸ ಸ್ವೀಕರಿಸಿದನೆನ್ನುವುದಾದರೆ ಅದಕ್ಕೂ ಮೊದಲು ಅಂದರೆ ಆತನ 29ನೇ ವಯಸ್ಸಿಗೂ ಮೊದಲು ಆ ಮೂರು ದೃಶ್ಯಗಳನ್ನು ಅತ ನೋಡಿಯೇ ಇರಲಿಲ್ಲ ಎನ್ನುವುದು ಅದು ಹೇಗೆ ಸಾಧ್ಯ?” ಎಂದು (Buddha and his Dhamma, by Ambedkar. Introduction page). ಮುಂದುವರೆದು ಅವರು “ಮುಪ್ಪು, ರೋಗ, ಸಾವು ಇವು ದಿನಾಲೂ ನೂರಾರು ಸಂಖ್ಯೆಯಲ್ಲಿ ಸಂಭವಿಸುವ ಘಟನೆಗಳಾಗಿದ್ದು ಬುದ್ಧ ಅವುಗಳನ್ನು ನೋಡಿಯೇ ನೋಡಿರುತ್ತಾನೆ.

ಆದ್ದರಿಂದ ಇವುಗಳನ್ನೆಲ್ಲ ಮೊದಲು ನೋಡಿ ಆತ ಪರಿವ್ರಾಜಕನಾದ ಎಂಬ ಸಾಂಪ್ರದಾಯಿಕ ವಿವರಣೆಯನ್ನು ಸ್ವೀಕರಿಸಲು ಸಾಧ್ಯವೇ ಇಲ್ಲ. ಈ ನಿಟ್ಟಿನಲ್ಲಿ ಈ ವಿವರಣೆ ತೋರಿಕೆಯದ್ದಾಗಿದ್ದು, ಯಾರಾದರೂ ಪ್ರಶ್ನಿಸಿದಾಗ ಅವರಿಗೆ ಈ ವಿವರಣೆ ಅಕ್ಷರಶಃ ಒಪ್ಪಿಗೆಯಾಗುವಂಥದ್ದಲ್ಲ. ಹೀಗಿರುವಾಗ ಬುದ್ಧ ಅರಮನೆ ತೊರೆದು ಸನ್ಯಾಸ ಸ್ವೀಕರಿಸಲು ಇದು ಉತ್ತರ ಅಲ್ಲವಾದರೆ ನಿಜವಾದ ಉತ್ತರವಾದರು ಏನು?” ಎಂದು ಪ್ರಶ್ನಿಸುತ್ತಾರೆ. ಹಾಗೆಯೇ ಉತ್ತರವನ್ನು ಕಂಡುಕೊಳ್ಳುತ್ತಾರೆ.

ಒಟ್ಟಾರೆ ಅರ್ಥವಾಗುವುದು ಬುದ್ಧ ರೋಗಿಯೊಬ್ಬನನ್ನು, ವೃದ್ಧನೊಬ್ಬನನ್ನು, ಸತ್ತ ವ್ಯಕ್ತಿಯೊಬ್ಬನನ್ನು ನೋಡಿ ಅರಮನೆ ತೊರೆದ ಎಂಬ ಮೂಲ ಕತೆಯನ್ನೇ ಅಂಬೇಡ್ಕರ್ ರು ಒಪ್ಪಲಿಲ್ಲ. ಅದನ್ನು ಸಕಾರಣದ ಮೂಲಕ ಪ್ರಶ್ನಿಸಿ ಬೇರೆ ವಿವರಣೆ ಇರಬಹುದಾ ಎಂದು ಹುಡುಕಿದರು ಎಂಬುದು. ಇದಕ್ಕಾಗಿ ಅಂಬೇಡ್ಕರರು ಕಂಡುಕೊಂಡ ಉತ್ತರ, ಆ ಕಾಲದಲ್ಲಿ “ಶಾಕ್ಯರು ಮತ್ತು ಕೋಲೀಯ ಎಂಬ ರಾಜ್ಯಗಳ ನಡುವೆ ರೋಹಿಣಿ ನದಿ ನೀರಿನ ಹಂಚಿಕೆ ವಿಚಾರವಾಗಿ ಸಂಘರ್ಷ ನಡೆಯುತ್ತದೆ. ಆ ಸಂಘರ್ಷದಲ್ಲಿ ಬುದ್ಧ ಪ್ರತಿನಿಧಿಸುವ ಶಾಕ್ಯನ್ನರ ಶಾಕ್ಯ ಸಂಘ ಕೋಲೀಯರ ಮೇಲೆ ಯುದ್ಧ ಸಾರುವ ಬಹುಮತದ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಸಂಘಧ ಸದಸ್ಯನಾದ ರಾಜಕುಮಾರ ಸಿದ್ಧಾರ್ಥ(ಬುದ್ಧ) ಹಿಂಸೆಯ ಅಂಶ ಮುದ್ದೊಡ್ಡಿ ಸಂಘ ಕೈಗೊಂಡ ಈ ಯುದ್ಧದ ತೀರ್ಮಾನವನ್ನು ವಿರೋಧಿಸುತ್ತಾನೆ. ಪರಿಣಾಮ ಸಂಘದ ನಿಯಮ ಉಲ್ಲಂಘಿಸಿದ ರಾಜಕುಮಾರ ಸಿದ್ಧಾರ್ಥ ಶಾಕ್ಯ ಸಂಘದ ನಿಯಮದಂತೆ ಸಂಘದಿಂದ ಶಿಕ್ಷೆಗೊಳಗಾಗುವ ಎಚ್ಚರಿಕೆ ಎದುರಿಸಬೇಕಾಗುತ್ತದೆ. ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಕೂಡ. ಇದರಂತೆ ಸಿದ್ಧಾರ್ಥನಿಗೆ ಮೂರು ಆಯ್ಕೆಗಳನ್ನು ನೀಡಲಾಗುತ್ತದೆ.

  1. ಶಾಕ್ಯ ಸಂಘದ ನಿಯಮವನ್ನು ಕಡೆ ಗಳಿಗೆಯಲ್ಲಾದರೂ ಒಪ್ಪಿ ಕೋಲೀಯರ ವಿರುದ್ಧದ ಯುದ್ಧದಲ್ಲಿ ಭಾಗವಹಿಸುವುದು.
  2. ಶಿಕ್ಷೆ ಅನುಭವಿಸಲು ಒಪ್ಪಿ ನೇಣು ಅಥವಾ ದೇಶಭ್ರಷ್ಟನಾಗಿ ಗಡಿಪಾರು ಶಿಕ್ಷೆ ಅನುಭವಿಸುವುದು.
  3. ಆತನ ಕುಟುಂಬದ ವಿರುದ್ಧ ಸಾಮಾಜಿಕ ಬಹಿಷ್ಕಾರ ಹಾಕಲು ಮತ್ತು ‌ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಂಘಕ್ಕೆ ಅನುಮತಿ ನೀಡುವುದು.

ಅಂದಹಾಗೆ ಶಾಂತಿ ಧೂತ ಬುದ್ಧ ಮೊದಲನೆಯ ತೀರ್ಮಾನ ಅಂದರೆ ಖಡಾಖಂಡಿತವಾಗಿ ಕೋಲೀಯರ ವಿರುದ್ಧ ಯುದ್ಧದಲ್ಲಿ
ಭಾಗವಹಿಸಲು ನಿರಾಕರಿಸುತ್ತಾನೆ. ಮೂರನೆಯ ತೀರ್ಮಾನ ಅಂದರೆ ತನ್ನ ಕುಟುಂಬದ ಸದಸ್ಯರಿಗೆ ತನ್ನಿಂದ ತೊಂದರೆಯಾಗುವುದನ್ನು ಆತ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ತಪ್ಪು ತನ್ನದಾಗಿರುವುದರಿಂದ ಶಿಕ್ಷೆ ತನಗೆ ಮಾತ್ರ ಸಲ್ಲಬೇಕು ಎಂದು ನೇಣು ಶಿಕ್ಷೆಗೆ ಅಥವಾ ರಾಜ್ಯದಿಂದ ಗಡಿಪಾರು ಶಿಕ್ಷೆಗೆ ತನ್ನನ್ನು ಒಳಪಡಿಸಬಹುದು ಎಂದು ಆತ ಶಾಕ್ಯ ಸಂಘಕ್ಕೆ ಹೇಳುತ್ತಾನೆ. ಅದರಂತೆ ಶಾಕ್ಯಸಂಘ ರಾಜಕುಮಾರ ಸಿದ್ಧಾರ್ಥನಿಗೆ ಗಡಿಪಾರು ಶಿಕ್ಷೆ ವಿಧಿಸುತ್ತದೆ, ಸಿದ್ಧಾರ್ಥ ರಾಜ್ಯ ತೊರೆಯುತ್ತಾನೆ.

ಅಂಬೇಡ್ಕರ್ ರು ಕೊಡುವ ಈ ವಿವರಣೆಯಲ್ಲಿ ಖಂಡಿತ ಅವಾಸ್ತವಿಕವಾದ ಅಂಶ ಕಿಂಚಿತ್ತು ಇಲ್ಲ. ನಿಜ, ಇಲ್ಲಿ ರೋಚಕತೆ ಇಲ್ಲದಿರಬಹುದು ಆದರೆ ರಾಜ್ಯ ತೊರೆಯಲು ಪ್ರಮುಖ ಕಾರಣವಂತು ಇದೇ ಆಗುತ್ತದೆ ಮತ್ತು ಇದನ್ನು ಯಾರೂ ಕೂಡ ಪ್ರಶ್ನಿಸಲಾರರು. ಹಾಗಿದ್ದರೆ ಇದಕ್ಕೆ ಆಕರ ಗ್ರಂಥವಾಗಿ ಅಂಬೇಡ್ಕರ್ ರು ಯಾವ ಗ್ರಂಥ ಬಳಸುತ್ತಾರೆ? ಅದಕ್ಕೂ ಕೂಡ ಉತ್ತರ ಇದೆ. ಅದೆಂದರೆ ಅಂಬೇಡ್ಕರ್ ರವರು ಮೆಟ್ರಿಕ್ಯುಲೇಷನ್ ಪರೀಕ್ಷೆ ಪಾಸು ಮಾಡಿದಾಗ ಸನ್ಮಾನ ಸಮಾರಂಭವೊಂದರಲ್ಲಿ ಅತಿಥಿಯೊಬ್ಬರು ತಾವೇ ಬರೆದ ಗೌತಮ ಬುದ್ಧರ ಜೀವನ ಚರಿತ್ರೆಯ ಪುಸ್ತಕವನ್ನು ಬಾಲಕ ಅಂಬೇಡ್ಕರ್ ಗೆ ಕೊಡುತ್ತಾರೆ ಎಂಬ ವಿಚಾರ ಎಲ್ಲರಿಗೂ ಗೊತ್ತು. ಮರಾಠಿಯಲ್ಲಿ ಬುದ್ಧನ ಆ ಜೀವನ ಚರಿತ್ರೆ ಬರೆದು(ಬರೆದ ವರ್ಷ 1898) ಬಾಲಕ ಅಂಬೇಡ್ಕರರಿಗೆ ಕೊಡುಗೆ ಇತ್ತವರು ಅಂದಿನ ಸಮಾಜ ಸುಧಾರಕರಾದ ಬಾಂಬೆಯ ವಿಲ್ಸನ್ ಹೈಸ್ಕೂಲ್ ನ ಮಾಜಿ ಪ್ರಾಂಶುಪಾಲರಾದ ಕೃಷ್ಣಾಜಿ ಅರ್ಜುನ್ ಕೆಲೂಸ್ಕರ್ ರವರು. ಈ ನಿಟ್ಟಿನಲ್ಲಿ ರೋಹಿಣಿ ನದಿಯ ನೀರಿನ ವಿಚಾರವಾಗಿ ಸಿದ್ಧಾರ್ಥನು ರಾಜ್ಯ ತೊರೆದ ಪ್ರಸಂಗವನ್ನು ಅಂಬೇಡ್ಕರರು ತಾವು ಪಡೆದದ್ದು ಕೆಲೂಸ್ಕರ್ ರ ಆ ಕೃತಿಯಲ್ಲೇ!

ನಾಲ್ಕು ಆರ್ಯ ಸತ್ಯಗಳನ್ನು ಒಪ್ಪದ ಅಂಬೇಡ್ಕರರು

ಬೌದ್ಧ ಧರ್ಮದಲ್ಲಿ ನಾಲ್ಕು ಆರ್ಯ ಸತ್ಯಗಳು ಎಂಬ ಪ್ರಮುಖ ಅಂಶ ಬರುತ್ತದೆ. ಸಾಮಾನ್ಯವಾಗಿ ಮಹಾಬೋಧಿ ಸೊಸೈಟಿ ಪ್ರಕಟಿಸುವ ಕೃತಿಗಳನ್ನು ಓದಿದ ಬೌದ್ಧರಿಗೆ ಅವು ಯಾವುವು ಎಂದು ತಿಳಿದಿರುತ್ತವೆ. ಅವುಗಳೆಂದರೆ 1.ದುಃಖ ಸತ್ಯ. 2.ದುಃಖಕ್ಕೆ ಮೂಲ ಇದೆ ಎಂಬ ಸತ್ಯ. 3.ದುಃಖವನ್ನು ಕೊನೆಗಾಣಿಸಬಹುದು ಎಂಬ ಸತ್ಯ. 4.ಆ ದುಃಖವನ್ನು ಕೊನೆಗಾಣಿಸುವ ಮಾರ್ಗ ಯಾವುದೆಂಬ ಸತ್ಯ.

ಆಶ್ಚರ್ಯವೆಂದರೆ ಬಾಬಾಸಾಹೇಬ್ ಅಂಬೇಡ್ಕರ್ ರವರು ಈ ನಾಲ್ಕು ಆರ್ಯ ಸತ್ಯಗಳನ್ನು ಒಪ್ಪುವುದಿಲ್ಲ. ಅವರು ಹೇಳುವುದು “ಈ ಆರ್ಯ ಸತ್ಯಗಳ ಸೂತ್ರ ಬೌದ್ಧ ಧರ್ಮದ ಮೂಲ ಬೇರನ್ನೇ ಕತ್ತರಿಸುತ್ತದೆ” ಎಂದು. ಏಕೆಂದರೆ ಅವರು ಹೇಳುವುದು “ಆರ್ಯ ಸತ್ಯಗಳ ಪ್ರಕಾರ ಈ ಜೀವನ ದುಃಖ, ಸಾವು ಕೂಡ ದುಃಖ, ಪುನರ್ಜನ್ಮ ಕೂಡ ದುಃಖ, ಆದ್ದರಿಂದ ಪ್ರತಿಯೊಂದಕ್ಕೂ ಕೊನೆ ಎಂಬುದಿದೆ ಎಂದಾದರೆ ತತ್ವಜ್ಞಾನವಿರಲಿ ಅಥವಾ ಧರ್ಮವಿರಲಿ ಯಾವುದೂ ಕೂಡ ಈ ಪ್ರಪಂಚದಲ್ಲಿ ಮನುಷ್ಯ ಸಂತಸದಿಂದಿರಲು ಸಹಾಯ ಮಾಡುವುದಿಲ್ಲ. ಏಕೆಂದರೆ ದುಃಖದಿಂದ ತಪ್ಪಿಸಿಕೊಳ್ಳಲು ಸಾಧ್ಯ ಇಲ್ಲ ಎನ್ನುವುದಾದರೆ ಜೀವನದಲ್ಲಿ ಸಹಜವಾಗಿ ಅಂತರ್ಗತವಾಗಿರುವ ಆ ದುಃಖದಿಂದ ಮನುಷ್ಯನನ್ನು ತಪ್ಪಿಸಲು ಬುದ್ಧನಾದರೂ ಏನು ಮಾಡಲು ಸಾಧ್ಯ? ಧರ್ಮವಾದರೂ ಏನು ಮಾಡಲು ಸಾಧ್ಯ?

ಆದ್ದರಿಂದ ನಾಲ್ಕು ಆರ್ಯ ಸತ್ಯಗಳು ಮನುಷ್ಯನಿಗೆ ಭರವಸೆಯನ್ನು ನಿರಾಕರಿಸುತ್ತವೆ. ಈ ನಿಟ್ಟಿನಲ್ಲಿ ಆ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಗಳನ್ನು ನಿರಾಶವಾದದ ಬೋಧನೆಗಳನ್ನಾಗಿ ಮಾಡುತ್ತವೆ” ಎನ್ನುತ್ತಾರೆ. ಅದರಲ್ಲೂ ಅವರು ಹೇಳುವುದು “ಬೌದ್ಧರಲ್ಲದವರಿಗೆ ಬೌದ್ಧ ಧರ್ಮದ ಬೋಧನೆಗಳನ್ನು ಒಪ್ಪಲು ಈ ನಾಲ್ಕು ಆರ್ಯಸತ್ಯಗಳು ಬಹುದೊಡ್ಡ ತಡೆಯಾಗಿವೆ” ಎಂದು. ಈ ಹಿನ್ನೆಲೆಯಲ್ಲಿ ಅವರು ಅನುಮಾನ ವ್ಯಕ್ತಪಡಿಸುವುದು ಇವು ಈ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಯ ಮೂಲ ತಿರುಳಾಗಿತ್ತೇ ಅಥವಾ ಇವು ಭಿಕ್ಕುಗಳು ನಂತರ ಸೇರಿಸಿದ ಅಂಶಗಳಾಗಿರಬಹುದೇ ಎಂದು.

ಮುಂದುವರಿದು ಅಂಬೇಡ್ಕರರು “ಭಿಕ್ಕುಗಳನ್ನು ಬುದ್ಧ ಸೃಷ್ಟಿಸಿದ್ದೇತಕೆ?” ಎಂಬ ಪ್ರಶ್ನೆಯನ್ನೂ ಕೇಳುತ್ತಾರೆ. ಅದಕ್ಕೆ ಅವರು ಹೇಳುವುದು “ಬುದ್ಧ, ಭಿಕ್ಕು ಗಣವನ್ನು ಅವರು ಪರಿಪೂರ್ಣ ಮನುಷ್ಯರಾಗಲಿ ಎಂದು ಸೃಷ್ಟಿಸಿದನೇ ಅಥವಾ ಸಮಾಜ ಸೇವಕರಾಗಿ ಜನತೆಗೆ ಸ್ನೇಹಿತರಾಗಿ, ಮಾರ್ಗದರ್ಶಕರಾಗಿ, ತತ್ವಜ್ಞಾನಿಗಳಾಗಿ ಜನರಿಗಾಗಿ ತಮ್ಮ ಜೀವನ ಮುಡಿಪಿಡಲಿ ಎಂದು ಸೃಷ್ಟಿಸಿದನೇ? ಈ ದಿಸೆಯಲ್ಲಿ ಭಿಕ್ಕು ಪರಿಪೂರ್ಣ ಮನುಷ್ಯನಾದರೆ ಧಮ್ಮದ ಬೆಳವಣಿಗೆಯ ಹಿನ್ನೆಲೆಯಲ್ಲಿ ಆತ ಉಪಯೋಗಕ್ಕೆ ಬರುವುದಿಲ್ಲ. ಏಕೆಂದರೆ ಮನುಷ್ಯ ಪರಿಪೂರ್ಣನಾದರೂ ಆತ ಸ್ವಾರ್ಥಿಯಾಗಿರುತ್ತಾನೆ. ಆದರೆ ಭಿಕ್ಕು ಸಮಾಜ ಸೇವಕನಾದರೆ ಖಂಡಿತ ಬೌದ್ಧ ಧರ್ಮಕ್ಕೆ ಆತ ಬಹು ದೊಡ್ಡ ಭರವಸೆಯಾಗುತ್ತಾನೆ” ಎನ್ನುತ್ತಾರೆ.(ಆಧಾರ: Buddha and His Dhamma, Ambedkar writings and speeches, Vol.11, introduction part).

ಖಂಡಿತ, ಬುದ್ಧ ಪರಿವ್ರಾಜಕ(ಸನ್ಯಾಸ) ಸ್ವೀಕರಿಸಲು ಬಾಬಾಸಾಹೇಬ್ ಅಂಬೇಡ್ಕರ್ ರವರು ಹೇಳುವ ಈ ಕತೆ, ನಾಲ್ಕು ಆರ್ಯ ಸತ್ಯಗಳನ್ನು ಅವರು ಒಪ್ಪದಿರುವುದು, ಹಾಗೆ ಭಿಕ್ಕುಗಳನ್ನು ಸಮಾಜ ಸೇವಕರು ಎನ್ನುವ ಅವರ ವ್ಯಾಖ್ಯೆ ಅಕ್ಷರಶಃ ಬೌದ್ಧ ಧರ್ಮಕ್ಕೆ ಹೊಸ ರೂಪ ಕೊಡುತ್ತದೆ. ಈ ನಿಟ್ಟಿನಲ್ಲಿ ಆ ರೂಪವನ್ನು ನಾವು ನಿಸ್ಸಂಶಯವಾಗಿ ಅಂಬೇಡ್ಕರ್ ಹಾದಿ ಎನ್ನಬಹುದು, ಹೀನಯಾನ ಮತ್ತು ಮಹಾಯಾನದಂತೆ “ಅಂಬೇಡ್ಕರ್ ಯಾನ” ಎನ್ನಬಹುದು. ಬುದ್ಧನ ಹಾದಿಯಲ್ಲಿಂದು ಕೋಟ್ಯಂತರ ಜನರು ಸಾಗುತ್ತಿದ್ದಾರೆ. ಅದರಲ್ಲೂ ಶೋಷಿತ ಸಮುದಾಯಗಳ ಬಂಧುಗಳು ಬುದ್ಧನೆಡೆ ದಿಟ್ಟಹೆಜ್ಜೆ ಇಟ್ಟಿದ್ದಾರೆ. ಖಂಡಿತ, ಅಂತಹವರೆಲ್ಲರಿಗೆ ಅಂಬೇಡ್ಕರ್ ಯಾನ ಹೊಸ ಮಾರ್ಗ ಆಗಲಿದೆ ಹೊಸ ಬೆಳಕು ಆಗಲಿದೆ.

ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ1 week ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ1 week ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending