Connect with us

ಬಹಿರಂಗ

ಸಂವಿಧಾನ ‘ಜೈ ಶ್ರೀರಾಮ್’ ನಂತೆ‌ ‘ಅಲ್ಲಾ ಹು ಅಕ್ಬರ್’ ಎಂದು ಹೇಳುವ ಹಕ್ಕನ್ನೂ ನೀಡಿದೆ..!

Published

on

  • ಹರ್ಷ ಕುಮಾರ್ ಕುಗ್ವೆ

ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು NRC ವಿರುದ್ಧ ದೇಶದೆಲ್ಲೆಡೆ ವಿದ್ಯಾರ್ಥಿಗಳು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಗೆ ಇಳಿದ ಮುಸ್ಲಿಮರು ಸಾಮಾನ್ಯವಾಗಿ ಭಾರತದ ತ್ರಿವರ್ಣ ಬಾವುಟಗಳನ್ನು ಮತ್ತು ಪ್ರತಿಭಟನೆಯ ಮುಂದಾಳತ್ವ ವಹಿಸುವ ಸಂಘಟನೆಗಳ ಬಾವುಟಗಳನ್ನು ಹಿಡಿದು ಬರುತ್ತಿದ್ದಾರೆ. ಅದೇ ರೀತಿಯಲ್ಲಿ ಮುಸ್ಲಿಂ ಯುವಕರು ಈ ಪ್ರತಿಭಟನೆಗಳಲ್ಲಿ NRC, CAA ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಹುತಾತ್ಮ ಭಗತ್ ಸಿಂಗ್ ಪ್ರಚುರ ಪಡಿಸಿದ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆಯಿಂದ ಹಿಡಿದು ಕನ್ಹಯ್ಯ ಕುಮಾರನ ಲೇಕೆ ರಹೇಂಗೇ ಆಜಾದೀ” ವರೆಗೆ ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ನೀತಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇವುಗಳ ನಡುವೆಯೇ ಆಗಾಗ “ಅಲ್ಲಾ ಹು ಅಕ್ಬರ್” “ಇನ್ಶಾ ಅಲ್ಲಾಹ್” ಎಂಬ ಘೋಷಣೆಗಳನ್ನು ಸಹ ಮುಸ್ಲಿಂ ಯುವಕರು ಹಾಕುತ್ತಿದ್ದಾರೆ. ಇಷ್ಟಕ್ಕೆ ಕೆಲವರು ಕ್ಯಾತೆ ತೆಗೆಯುತ್ತಿದ್ದಾರೆ. ‘ಈ ಪ್ರತಿಭಟನೆಗಳನ್ನು ಮುಸ್ಲಿಮರು ಇತರರೊಂದಿಗೆ ಸೇರಿ ನಡೆಸಬೇಕು, ಯಾವುದೇ ಧರ್ಮದ ಗುರುತುಗಳನ್ನು ತೋರಿಸಬಾರದು’ ಎಂದು, ಟೋಪಿ, ಬುರ್ಖಾಗಳನ್ನು ಸಹ ತೊಟ್ಟು ಬರಬಾರದು ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಹೀಗೆ ಯೋಚಿಸುವವರ ಉದ್ದೇಶ ಒಳ್ಳೆಯದೋ ಕೆಟ್ಟದೋ ಗೊತ್ತಿಲ್ಲ ಆದರೆ ಇದೊಂದು ಅಸಂಬದ್ಧ ಆಲೋಚನೆ ಎಂದು ಹೇಳದೇ ವಿಧಿಯಿಲ್ಲ.

ನಾನೇನೂ ಮುಸ್ಲಿಮನಲ್ಲ, ಕುರಾನ್, ಬೈಬಲ್, ಭಗವದ್ಗೀತೆ ಸೇರಿದಂತೆ ಯಾವುದೇ ಧರ್ಮಗ್ರಂಥಗಳ ಪಾಲಕನೂ ಅಲ್ಲ ಆರಾಧಕನೂ ಅಲ್ಲ. ಈ ದೇಶದ ಸಂವಿಧಾನವೊಂದೇ ನಾನು ನಂಬಿರುವ, ನಡೆದುಕೊಳ್ಳುವ ಗ್ರಂಥ. ಆದರೆ ನಾನು ನಂಬುವ ಪಾಲಿಸುವ ನನ್ನ ದೇಶದ ಸಂವಿಧಾನ ವೈದಿಕ ಧರ್ಮ ಪಾಲಿಸುವ ವ್ಯಕ್ತಿಯೊಬ್ಬನಿಗೆಎ “ಜೈ ಶ್ರೀ ರಾಮ” ಎಂದು ಹೇಳುವ ಅವಕಾಶವನ್ನು ಹೇಗೆ ನೀಡಿದೆಯೋ ಹಾಗೆಯೇ “ಅಲ್ಲಾ ಹು ಅಕ್ಬರ್” ಎಂದು ಹೇಳುವ ಅವಕಾಶ ಮತ್ತು ಹಕ್ಕನ್ನು ನೀಡಿದೆ.

ಆಯಾ ಧರ್ಮೀಯರು ತಮ್ಮ ತಮ್ಮ ಧರ್ಮದ ಅಥವಾ ನಂಬಿಕೆಗಳ ಗುರುತುಗಳನ್ನು ಅನುಸರಿಸುವ ಅವಕಾಶವನ್ನೂ ಅದು ನೀಡಿದೆ.ಆದರೆ ಇಂದು ಚರ್ಚೆಯಲ್ಲಿರುವ NRC ಮತ್ತು CAAಗಳು ನೇರವಾಗಿ ದಾಳಿ ಮಾಡುತ್ತಿರುವುದು ಮುಸ್ಲಿಮರಾದವರ ಈ ಧಾರ್ಮಿಕ ಗುರುತುಗಳ ಮೇಲೆಯೇ ಅಲ್ಲವೇ? ಒಬ್ಬ ವ್ಯಕ್ತಿ “ಅಲ್ಲಾ ಹು ಅಕ್ಬರ್” ಎಂದು ಪ್ರಾರ್ಥಿಸುತ್ತಾ ಇಸ್ಲಾಂ ಧರ್ಮ ಪಾಲಿಸುತ್ತಿರುವ ಒಂದೇ ಕಾರಣದಿಂದ ಅವನ ಪೌರತ್ವವನ್ನೇ ನಾಶ ಮಾಡುವ ಮತ್ತು ಈ ದೇಶದಲ್ಲಿ ಅವನ ಸಕಲ ಪೌರ ಹಕ್ಕುಗಳನ್ನು ಬಲವಂತವಾಗಿ ಕಿತ್ತುಕೊಳ್ಳುವ ಪ್ರಯತ್ನ ಈ ಕಾನೂನುಗಳ ಮೂಲಕ ನಡೆಯುತ್ತಿದೆ.

ಇಂತಹ ಸಂದರ್ಭದಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯ ಸಹಜ ಪ್ರತಿಕ್ರಿಯೆ “ಮುಸ್ಲಿಂ” ಆಗಿಯೇ ಪ್ರತಿಕ್ರಿಯಿಸುವುದೇ ಆಗಿರುತ್ತದೆ. ಇದರಲ್ಲಿ ದೋಷವೆನೂ ಇಲ್ಲ. ಹಿಂದೂ, ಕ್ರೈಸ್ತ, ಬೌದ್ಧ, ಪಾರ್ಸಿ, ಸಿಖ್ಖರಿಗೆಲ್ಲರಿಗೂ ಭಾರತ ಹೇಗೆ ಅವರ ದೇಶವೋ ಒಬ್ಬ ಮುಸ್ಲಿಮನಿಗೂ ಭಾರತ ಅವನ ದೇಶವೇ. ಹೀಗಿರುವಾಗ ಕಾನೂನೊಂದನ್ನು ತಂದು ಇದು ನಿನ್ನ ದೇಶವೇ ಅಲ್ಲ ಎನ್ನುವ ಹಕ್ಕು ಯಾರಿಗೂ ಇಲ್ಲ. ಆದರೂ ಅಮಿತ್ ಶಾ, ಮೋದಿಗಳು ಹಾಗೆ ಹೇಳುತ್ತಾರೆ ಎಂದರೆ ಆಗ ಮುಸ್ಲಿಮನೊಬ್ಬ ಮುಸ್ಲಿಮನಾಗಿಯೇ ಪ್ರತಿಕ್ರಿಯಿಸುತ್ತಾನೆಯೇ ಹೊರತು “ಜಾತ್ಯತೀತರರಲ್ಲಿ ಲೀನವಾಗಿಯೇ ಪ್ರತಿಭಟಿಸಬೇಕು” ಎಂದು ಫತ್ವಾ ಹೊರಡಿಸುವ ದಾಟಿಯಲ್ಲಿ ಯಾರೂ ಮಾತಾಡಬಾರದು.

ಬಾಂಗ್ಲಾದಿಂದಲೋ, ಪಾಕಿಸ್ತಾನದೊಂದಲೋ ಯಾರೋ ಅಕ್ರಮವಾಗಿ ವಲಸೆ ಬಂದು ಭಾರತದಲ್ಲಿ ನೆಲೆಸಿದ್ದರೆ ಅವರನ್ನು ಗುರುತಿಸಿ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಕೆಲಸ.ಅದನ್ನು ಮಾಡಲಾಗದ ಸರ್ಕರದ ಅಸಮರ್ಥತೆಗೆ ತಲೆತಲಾಂತರಿಂದ ಈ ಭಾರತ ನೆಲದಲ್ಲೇ ಹುಟ್ಟಿ ಬೆಳೆದ ಮುಸ್ಲಿಮರಾಗಲೀ, ಯಾರೇ ಆಗಲೀ ಯಾಕೆ ಬೆಲೆ ತೆರಬೇಕು? ಅವರು ತಮ್ಮ ಪೌರತ್ವವನ್ನು ಸಾಬೀತುಪಡಿಸುವ ಅಗತ್ಯವಾದರೂ ಏನು? ಒಂದು ಮರ್ಯಾದೆಯಿಲ್ಲದ, ಹೀನಾತಿಹೀನ ಮನಸ್ಸುಗಳೇ ತುಂಬಿರುವ ನೀಚ ಸರ್ಕಾರವೊಂದು ಮಾತ್ರ ಇಂತಹ ಸ್ಥಿತಿಯನ್ನು ದೇಶದ ಪ್ರಜೆಗಳಿಗೆ ತಂದೊಡ್ಡಬಲ್ಲದು.

ಈ ನಡುವೆ CAA ಜಾರಿಗೆ ಬಂದರೆ ಭಾರತದ ಮುಸ್ಲಿಮರಿಗೆ ತೊಂದರೆಯೇನಿಲ್ಲ, ಬೇರೆ ದೇಶದ ಮುಸ್ಲಿಮರಿಗೆ ಮಾತ್ರ ತೊಂದರೆ ಎಂದು ಕೆಲವು ಮುಸ್ಲಿಮರೂ ನಂಬಿಕೊಂಡಿದ್ದರೆ, ಇದು ಮುಸ್ಲಿಮರ ಸಮಸ್ಯೆಯೇ ವಿನಃ ಹಿಂದೂಗಳಿಗೇನೂ ತೊಂದರೆಯಿಲ್ಲ ಎಂದು ಅನೇಕ ಮುಸ್ಲಿಮೇತರರು ನಂಬಿಕೊಂಡಿದ್ದಾರೆ. ಈ ಎರಡು ನಂಬಿಕೆಗಳೂ ತಪ್ಪು ಎಂಬುದನ್ನು ಅಸ್ಸಾಮಿನ ಮೂರು ಕೋಟಿ ಜನರ ಅನುಭವವೇ ಹೇಳುತ್ತಿದೆ.

ಇಂದು ಅಸ್ಸಾಮಿನಲ್ಲಿ ತಾವು ಭಾರತದ ನಾಗರಿಕರೇ ಅಲ್ಲ ಎಂದು ಘೋಷಿಸಲ್ಪಟ್ಟವರಲ್ಲಿ 6 ಲಕ್ಷ ಮುಸ್ಲಿಮರಿದ್ದರೆ 12 ಲಕ್ಷ ಜನರು ಹಿಂದೂಗಳೇ! ಹಾಗೆಂದ ಮಾತ್ರಕ್ಕೆ ಇವರೆಲ್ಲರೂ ಬಾಂಗ್ಲಾದಿಂದ ವಲಸೆ ಬಂದವರೂ ಅಲ್ಲ. 1971ಕ್ಕೂ ಮುಂಚೆ ಭಾರತದಲ್ಲಿ ವಾಸವಾಗಿದ್ದಕ್ಕೆ, ಇಲ್ಲಿ ಹುಟ್ಟಿದ್ದಕ್ಕೆ ದಾಖಲೆ ಪತ್ರಗಳು ಇಲ್ಲದ ಏಕೈಕ ಕಾರಣದಿಂದ ಈ ಲಕ್ಷಾಂತರ ನಾಗರಿಕರನ್ನು ರಾತ್ರೋ ರಾತ್ರಿ ಈ ದೇಶದವರೇ ಅಲ್ಲ ಎಂದು ಘೋಷಿಸಲಾಗಿದೆ. ಇಂದು CAA ಜಾರಿಯಾದ ದಿನದಿಂದ ಇಡೀ ಅಸ್ಸಾಂ ಹೊತ್ತಿ ಉರಿಯುತ್ತಿರುವುದು ಇದೇ ಕಾರಣಕ್ಕೆ.

ದೇಶದ ಗೃಹಮಂತ್ರಿ ಅಮಿತ್ ಶಾ ಅವರು NRCಯನ್ನು ಇಡೀ ದೇಶದಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಿರುವ ಹಿನ್ನೆಲೆಯಲ್ಲಿ ನೋಡುವುದಾದರೆ ದೇಶದ 130 ಕೋಟಿ ಜನರಲ್ಲಿ ಕನಿಷ್ಠ 60 ಕೋಟಿ ಜನರು ರಾತ್ರೋ ರಾತ್ರಿ ದೇಶದ ‘ಅಕ್ರಮ ವಲಸಿಗ”ರಾಗಲಿದ್ದಾರೆ. (Illegal Immigrants). ಯಾಕೆಂದರೆ ಅಧಿಕೃತ ಅಂಕಿ ಅಂಶಗಳ ಮೂಲದ ದೇಶದ ಶೇಕಡಾ 40 ಜನರ (ಎಲ್ಲಾ ಧರ್ಮದವರು) ಬಳಿ 50 ವರ್ಷಗಳ ಹಿಂದೆ ತಾವು ಈ ದೇಶದಲ್ಲಿ ಹುಟ್ಟಿದ್ದಕ್ಕೆ, ಜೀವಿಸಿದ್ದಕ್ಕೆ ಯಾವುದೇ ದಾಖಲೆಗಳಿಲ್ಲ. ಆದರೆ ಇವರಲ್ಲಿ ಮುಸ್ಲಿಮರಲ್ಲದವರಿಗೆ ಪೌರತ್ವವನ್ನು ಉಳಿಸಿಕೊಳ್ಳಲು ಸರ್ಕಾರವು CAA ಕಾಯ್ದೆ ಮೂಲಕ ನೀಡುವ ಅವಕಾಶವೇನೆಂದರೆ ಅವರು ತಾವು ಪಾಕಿಸ್ತಾನ, ಬಾಂಗ್ಲಾದೇಶ ಇಲ್ಲವೇ ಅಫಘಾನಿಸ್ತಾನದಿಂದ ವಲಸೆ ಬಂದಿರುವ ಅಲ್ಪಸಂಖ್ಯಾತ ಮುಸ್ಲಿಮೇತರರು ಎಂದು ದಾಖಲೆ ನೀಡಿ ಸಾಬೀತುಪಡಿಸಬೇಕು! ಇನ್ನು ಮುಸ್ಲಿಮರಿಗಂತೂ ಆ ಅವಕಾಶವೂ ಇಲ್ಲದೇ ಅವರು ತಮ್ಮ ಪೌರತ್ವವನ್ನು ಸಂಪೂರ್ಣ ಕಳೆದುಕೊಂಡು ಸರ್ಕಾರಗಳು ನಿರ್ಮಿಸುವ ಜೈಲುಗಳಲ್ಲಿ/detention ಶಿಬಿರಗಳಲ್ಲಿ ಜೀವನ ಕಳೆಯಬೇಕಾಗುತ್ತದೆ.

ಯಾವುದೋ ಒಂದೂರಿನ ‘ಕಮಲಮ್ಮ’ ಎಂಬ 60 ವರ್ಷದ ಅನಕ್ಷರಸ್ತ ಮಹಿಳೆ ತಾನು 1987ಕ್ಕೆ ಮೊದಲು ಹುಟ್ಟಿದ್ದಕ್ಕೆ ದಾಖಲೆಗಳನ್ನು ಇಟ್ಟುಕೊಂಡಿರದಿದ್ದರೆ, ಅಥವಾ ನೀಡುವ ಎರಡು ದಾಖಲೆಗಳಲ್ಲಿ ಹೆಸರುಗಳು ತಪ್ಪಾಗಿ ನಮೂದಾಗಿದ್ದರೆ ಅಥವಾ ಆಕೆ ತನ್ನನ್ನು ತಾನು ಬಾಂಗ್ಲಾ, ಪಾಕಿಸ್ತಾನ ಅಥವಾ ಅಫಘಾನಿಸ್ತಾನದಿಂದ ವಲಸೆ ಬಂದಿರುವ ಮುಸ್ಲಿಮೇತರಳು ಎಂದೂ ಸಾಬೀತು ಪಡಿಸಲು ದಾಖಲೆ ನೀಡದಿದ್ದರೆ ಆಕೆಯ ಪೌರತ್ವವೂ ಇಲ್ಲದಂತಾಗಿ ಅವಳೂ ಜೈಲು ಸೇರಬೇಕಾಗುತ್ತದೆ. ನೆರೆಯ ಪಾಕಿಸ್ತಾನ, ಬಾಂಗ್ಲಾ ಅಥವಾ ಅಫಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾದ ಅಲ್ಪಸಂಖ್ಯಾತ ಮುಸ್ಲಿಮೇತರರು ಎಂದು ಕಮಲಮ್ಮನೇ ಸಾಬೀತುಪಡಿಸಬೇಕು.

ಅಯ್ಯೋ ಅದೆಂಗಾಯ್ತದೆ ಸ್ವಾಮಿ, ನಾನು ತಲೆತಲಾಂತರದಿಂದ ಬದ್ಕಿರದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅಂದರೆ ಮೋದಿ-ಶಾರ ಕಾನೂನು ಅದನ್ನು ಕೇಳುವುದಿಲ್ಲ. ನಿಮ್ಮ ಅಜ್ಜಿಯ ಅಥವಾ ಅಜ್ಜನ ಬಳಿ ಈ ದೇಶದಲ್ಲಿ ಹುಟ್ಟಿದ ದಾಖಲೆ ಪತ್ರ ಇಲ್ಲ ಅಂದರೆ ಅವರು ಕಡ್ಡಾಯವಾಗಿ ಬಾಂಗ್ಲಾ, ಪಾಕಿಸ್ತಾನದಲ್ಲಿ ಇಲ್ಲವೇ ಅಫಘಾನಿಸ್ತಾನದಲ್ಲಿ ಬದುಕಿದ ದಾಖಲೆ ಕೊಡಬೇಕು, ಆಗ ಮಾತ್ರ ಈ ದೇಶದ ಪೌರರಾಗಬಹುದು. ಅಲ್ಲಿಯವರೆಗೆ ಆ ನಿಮ್ಮ ಅಜ್ಜ ಅಜ್ಜಿ ಅಕ್ರಮ ವಲಸಿಗರು ಎಂದೇ ಪರಿಗಣಿಸಲ್ಪಡುತ್ತಾರೆ.

ಇಂದು ಅಸ್ಸಾಮಿನಲ್ಲಿ ಇಂತಹ ಸಾವಿರಾರು ಕಮಲಮ್ಮ, ರೇಣುಕಮ್ಮಗಳು, ದ್ಯಾವಪ್ಪ, ಚೋಮಪ್ಪಗಳು ಜೈಲು ಸೇರುವಂತಾಗಿದೆ.
ಅಂದರೆ ಈಗ ಸಂಸತ್ತಿನಲ್ಲಿ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಂಡು, ಅದರ ಬೆನ್ನಲ್ಲೇ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯೂ ಆರಂಭಗೊಂಡರೆ ಈ ದೇಶದ 130 ಕೋಟಿ ಜನರೂ ಮುಂದಿನ ಹಲವಾರು ವರ್ಷಗಳ ವರೆಗೆ ತಮ್ಮ ಕುಟುಂಬಗಳ ಪ್ರತಿಯೊಬ್ಬರ ದಾಖಲೆಗಳನ್ನು ಹಾಜರುಪಡಿಸಿ, ತಮ್ಮ ಪೌರತ್ವ ಉಳಿಸಿಕೊಳ್ಳುವ ತಲೆಬಿಸಿಯಲ್ಲಿ ಇಲ್ಲವೇ ಪೌರತ್ವ ಕಳೆದುಕೊಳ್ಳುವ ಆತಂಕದಲ್ಲೇ ಬದುಕುವ ದುಸ್ಥಿತಿ ಸೃಷ್ಟಿಯಾಗಲಿದೆ.

ಈ ಸಂದರ್ಭದಲ್ಲಿ ಈರುಳ್ಳಿ 500 ರೂಪಾಯಿ ಆಗಲಿ, ದೇಶದ ಜಿಡಿಪಿ 1%ಗೆ ಕುಸಿದು ಬೀಳಲಿ, ನಿರುದ್ಯೋಗ 200% ಹೆಚ್ಚಲಿ, ಏನೇ ಆಗಲಿ ಯಾವುದೂ ಮುಖ್ಯವಾಗುವುದಿಲ್ಲ.
ಬಿಜೆಪಿ ಹೇಳುವ ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿಸಿ ಬಹುಸಂಖ್ಯಾತ ಹಿಂದೂಗಳನ್ನು, ಮತ್ತು ಇತರರನ್ನು ಶಾಶ್ವತವಾಗಿ ಆತಂಕದಲ್ಲಿ ಬದುಕುವಂತೆ ಮಾಡಿ ಒಂದು ವರ್ಗ ಥೈ ಥೈ ಎಂದು ಕುಣಿಯುವುದೇ ಆಗಿದೆ. ಇವರ ಹಿಂದೂ ರಾಷ್ಟ್ರದಲ್ಲಿ ಹಿಂದೂಗಳೂ ಸುಖವಾಗಿರುವುದಿಲ್ಲ, ಮುಸ್ಲಿಮರು ಪ್ರಜೆಗಳಾಗಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಮೊದಲಿನ ಪ್ರಶ್ನೆಗೆ ಮತ್ತೆ ಬರುವುದಾದರೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು NRC ವಿರುದ್ಧದ ಪ್ರತಿಭಟನೆಗಳಲ್ಲಿ “ಅಲ್ಲಾ ಹು ಅಕ್ಬರ್” ಎಂದು ಮುಸ್ಲಿಂ ಯುವಕರು ಹೇಳುವುದು ಒಂದು ಸಮಸ್ಯೆಯಲ್ಲ.

ಅವರೊಂದಿಗೆ “ಜೈ ಹನುಮಾನ್” “ಜೈ ಭೀಮ್” ಜೈ ಗಣೇಶ” “ಜೈ ಉಚ್ಚಂಗಮ್ಮ” “ಉಘೇ ಉಘೇ ಮಾದೆಶ್ವರ” ಎಂದು ಹೇಳುವ ಜನರೂ ಹೆಚ್ಚೆಚ್ಚು ಸಂಖ್ಯೆಯಲ್ಲಿ ಸೇರಿಕೊಳ್ಳದಿರುವುದೇ ಸಮಸ್ಯೆ. ಈಗ ಆಗಬೇಕಿರುವುದು ಅದೇ. ಆದರೆ ಈ ಕರಾಳ ಕಾನೂನುಗಳ ಪರಿಣಾಮ ಸ್ವತಃ ಮುಸ್ಲಿಮರಿಗೇ ಇನ್ನೂ ತಿಳಿದಿಲ್ಲದಿರುವಾಗ ಮುಸ್ಲಿಮೇತರರು ಎಚ್ಚೆತ್ತುಕೊಳ್ಳುವ ಹೊತ್ತಿಗೆ ಎಲ್ಲಾ ಮುಗಿದೇ ಹೋಗಿರುತ್ತದೆ.

CAA ಮತ್ತು NRCಗಳನ್ನು ದಾಖಲೆಗಳಿಲ್ಲದ ಕಾರಣಕ್ಕೆ ಪೌರತ್ವ ಕಳೆದುಕೊಳ್ಳಲಿರುವ ಮುಸ್ಲಿಮರೂ, ಅಕ್ರಮ ವಲಸಿಗರಾಗಲಿರುವ ಕೋಟ್ಯಾನುಕೋಟು ಮುಸ್ಲಿಮೇತರರೂ ಸೇರಿಯೇ ಹಿಮ್ಮೆಟ್ಟಿಸಬೇಕಾಗಿದೆ. ಅಮಿತ್ ಶಾ ಬರಲಿ, ಅವನ ಅಪ್ಪನೇ ಬರಲಿ ಜಾಮಿಯಾ ಮಿಲಿಯಾ ಯೂನಿವರ್ಸಿಟಿಯ ವಿದ್ಯಾರ್ಥಿನಿಯರಾರ ಲಿದಾಯ ಮತ್ತು ಆಯೆಶಾ ಹೇಗೆ ಪೊಲೀಸರಿಗೆ ಮಾತಿನಿಂದಲೇ ಬೆದರಿಸಿ ಹಿಮ್ಮೆಟ್ಟಿಸಿದರೋ ಹಾಗೆಯೇ ಧೈರ್ಯದಿಂದ “Get lost” ಎಂದು ಹಿಮ್ಮೆಟ್ಟಿಸಬೇಕಾಗಿದೆ. ಈ ಹೋರಾಟ ಹೆಚ್ಚು ಹೆಚ್ಚು ಜನರನ್ನು ಒಳಗೊಳ್ಳುವ ಮೂಲಕ ಅಹಿಂಸಾತ್ಮಕವಾಗಿಯೇ ತೀವ್ರಗೊಳ್ಳಬೇಕೇ ವಿನಃ ಸಣ್ಣ ಹಿಂಸಾತ್ಮಕ ಘಟನೆಗಳಿಗೂ ಅವಕಾಶವಾಗದ ರೀತಿಯಲ್ಲಿ ಎಚ್ಚರ ವಹಿಸುವುದು ಸಹ ಮುಖ್ಯವಾಗಿದೆ.

ಇದೇ ಹೊತ್ತಿಗೆ ದೆಹಲಿಯಲ್ಲಿ ನಡೆದಂತೆ ‘ಅಗೋಚರ’ ಗುಂಪುಗಳು ತಾವೇ ಹಿಂಸೆಯನ್ನು ಆರಂಭಿಸಿ, ಬೆಂಕಿ ಹಚ್ಚಿ, ವಾಹನಗಳನ್ನು ಒಡೆದು ಹಾಕಿ ಹೋರಾಟಗಾರರ ಮೇಲೆ ಗೂಬೆ ಕೂರಿಸುವ ಪ್ರಯತ್ನಗಳು ಸಹ ನಡೆಯಲಿವೆ. ಇಂತಹ ಅಗೋಚರ ಗುಂಪುಗಳ ಬಗ್ಗೆ ಎಚ್ಚರ ವಹಿಸಿಕೊಕೊಂಡೇ ದೇಶವನ್ನು ವಿನಾಶಕ್ಕೆ ಕೊಂಡೊಯ್ಯುತ್ತಿರುವ ದುಷ್ಟ ಬಿಜೆಪಿ ಸರ್ಕಾರಕ್ಕೆ ಛೀಮಾರಿ ಹಾಕಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending