ದಿನದ ಸುದ್ದಿ
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ರಾಜೀನಾಮೆ: ಅರುಣ್ ಜೇಟ್ಲಿ

ಸುದ್ದಿದಿನ ಡೆಸ್ಕ್: ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್ ಕೌಟುಂಬಿಕ ಕಾರಣಗಳಿಂದಾಗಿ ರಾಜೀನಾಮೆ ಸಲ್ಲಿಸಿದ್ದು, ಅಮೆರಿಕಾದಲ್ಲಿರುವ ಕುಟುಂಬ ಸೇರಲು ಅಮೆರಿಕಾಕ್ಕೆ ಹಿಂದಿರಗಲಿದ್ದಾರೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಬುಧವಾರ ತಿಳಿಸಿದ್ದಾರೆ.
ಚೀಫ್ ಎಕಾನಾಮಿಕ್ ಅಡ್ವೈಸರ್ (ಸಿಇಎ) ಅರವಿಂದ್ ಸುಬ್ರಮಣಿಯನ್ ರಾಜೀನಾಮೆಗೆ ನೀಡಿರುವ ಕಾರಣ ವೈಯಕ್ತಿಕ ಮತ್ತು ಅವರಿಗೆ ಅದು ಅತ್ಯಂತ ಮುಖ್ಯವಾದುದು. ನನಗೆ ಯಾವುದೇ ಅವಕಾಶ ನೀಡದೇ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಒಪ್ಪಿಗೆ ಸೂಚಿಸಬೇಕಾಗಿದೆ.
ಸುಬ್ರಮಣಿಯನ್ 2014ರ ಅಕ್ಟೋಬರ್ 16ರಂದು ಮೂವರು ವರ್ಷಗಳ ಅವಧಿಗೆ ಚೀಫ್ ಎಕಾನಾಮಿಕ್ ಅಡ್ವೈಸರ್ ನೇಮಕಗೊಂಡಿದ್ದರು. ಈ ಅವಧಿ ಮುಕ್ತಾಯವಾದ ಬಳಿಕ ಸ್ವತಃ ಅವರೇ ಒಂದು ವರ್ಷದ ಅವಧಿಗೆ ಮುಂದುವರಿಸುವಂತೆ ಮನವಿ ಮಾಡಿದ್ದರಿಂದ ಅವಕಾಶ ನೀಡಲಾಗಿತ್ತು. ಇದು 2018ರ ಅಕ್ಟೋಬರ್ ಪೂರ್ಣಗೊಳ್ಳುತ್ತಿತ್ತು.
ಸುಬ್ರಮಣಿಯನ್ ತನ್ನ ಕುಟುಂಬದೊಂದಿಗೆ ದೂರವಿದ್ದು, ನೊಂದ್ದಿದೇನೆ ಎಂದು ಹೇಳಿಕೊಂಡಿದ್ದರು. ಆದರೆ, ಅವರು ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಜೇಟ್ಲಿ ತಿಳಿಸಿದ್ದಾರೆ.
ವೈಯಕ್ತಿಕವಾಗಿ ನಾನು ಅವರ ಸ್ಫೂರ್ತಿ, ಬುದ್ದಿವಂತಿಕೆ, ಆಲೋಚನೆ, ಚೈತನ್ಯ, ಬೆಂಬಲ ಸಿಗದಿರಬಹುದು. ಪ್ರತಿದಿನವೂ ಅನೇಕ ನನ್ನ ಕೊಠಡಿಗೆ ಬಂದು ’ಮಿನಿಸ್ಟರ್ ಎಂದು ಕರೆಯುತ್ತಾ ಅನೇಕ ವಿಷಯಗಳನ್ನು ಹೇಳುತ್ತಿದ್ದರು. ಈಗ ಅವರನ್ನು ಭಾರವಾದ ಮನಸ್ಸಿನಿಂದ ಕಳುಹಿಸಿಕೊಡಬೇಕಿದೆ. ನನಗೆ ಗೊತ್ತು ಅವರ ಮನಸ್ಸು ಇಲ್ಲಿಯೇ ಇರುತ್ತದೆ. ಅವರು ಎಲ್ಲಿಯೇ ಇದ್ದರೂ ನನಗೆ ಸಲಹೆ, ಸಹಕಾರ. ವಿಶ್ಲೇಷಣೆ ನೀಡುತ್ತಾರೆ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ರೋಟರಿ ಆಶ್ರಯದಲ್ಲಿ ನೋಟು-ನಾಣ್ಯಗಳ “ಅಪೂರ್ವ ಸಂಗ್ರಹ” ಪ್ರದರ್ಶನ : ಭಾನುವಾರ ಕಡೆ ದಿನ

ಸುದ್ದಿದಿನ,ದಾವಣಗೆರೆ : ನೋಟುಗಳು – ನಾಣ್ಯಗಳು, ಇಂದಿನ ಕಾಲದ – ಹಿಂದಿನ ಕಾಲದ, ದೇಶದ – ವಿದೇಶದ ಅಪೂರ್ವ ಸಂಗ್ರಹವನ್ನು ನೋಡುವ ಅಪರೂಪದ ಅವಕಾಶ ನಗರದ ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಒದಗಲಿದೆ.
ದಾವಣಗೆರೆ ರೋಟರಿ ಸಂಸ್ಥೆ ಬರುವ ಶನಿವಾರ ಮಾರ್ಚ್ 6 ಮತ್ತು ಭಾನುವಾರ ಮಾ.7ರಂದು ಎಂ.ಸಿ.ಸಿ ಎ ಬ್ಲಾಕಿನಲ್ಲಿರುವ ದಾವಣಗೆರೆ ಹರಿಹರ-ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಲಿದೆ.
ಬೆಳಗಾವಿಯ ಈರಪ್ಪ ಗುರುಲಿಂಗ ಪರಮಶೆಟ್ಟಿ ಕಳೆದ ಐದು ದಶಕಗಳಿಂದ ಸಂಗ್ರಹಿಸಿರುವ ಅಪರೂಪದ ನೋಟುಗಳು-ನಾಣ್ಯಗಳು ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳನ್ನು ಕಂಡಿವೆ. ಬ್ರಿಟೀಷ್ ಆಡಳಿತದ, ಮರಾಠಾ, ಪೇಶ್ವೇ, ಮೊಘಲರು ನಿಜಾಮರ ಹಾಗೂ ಟಿಪ್ಪು ಆಡಳಿತದ ನಾಣ್ಯಗಳ ಪ್ರದರ್ಶನ ವಿಶೇಷವಾದದ್ದು.
ಒಂದರಿಂದ ಸಾವಿರ ರೂಗಳ ಹಳೆಯ ಬೆಳ್ಳಿಯ ನಾಣ್ಯಗಳು ಇಲ್ಲಿ ಕಾಣ ಸಿಗುತ್ತವೆ. ಒಂದೇ ಮೌಲ್ಯದ ನೂರ ಐವತ್ತಕ್ಕೂ ಹೆಚ್ಚು ವಿವಿಧ ನೋಟುಗಳ ನೋಟ ಅಪರೂಪದ ಆಕರ್ಷಣೆಯಾಗಲಿದೆ.ಇವರ ಸಂಗ್ರಹ “ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ 1997ರಿಂದ ಸತತವಾಗಿ ಮೂರು ವರ್ಷಗಳ ಕಾಲ ನಮೂದಿಸಲ್ಪಟ್ಟಿದೆ.
ಮಾರ್ಚ್ ಆರು ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ದಾವಣಗೆರೆಯ ಪ್ರಥಮ ಪೌರರಾದ ಎಸ್.ಟಿ. ವೀರೇಶ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಆರ್.ಟಿ. ಮೃತ್ಯುಂಜಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಡಿಡಿಪಿಐ ಪರಮೇಶ್ವರಪ್ಪ ತಹಶೀಲ್ದಾರ್ ಗಿರೀಶ್ ಮುಂತಾದವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಅಪರೂಪದ ನೋಟು-ನಾಣ್ಯಗಳ ಪ್ರದರ್ಶನ ಮಾರ್ಚ್ ಆರು ಮತ್ತು ಏಳರ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂದುವಾಡ ಕೆರೆ ಅಭಿವೃದ್ದಿ ಕಾಮಗಾರಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. 1.2 ಕಿ.ಮೀ ಏರಿಯನ್ನು ಎತ್ತರಿಸಿ ಗಟ್ಟಿಗೊಳಿಸಲಾಗಿದ್ದು, ಕಲ್ಲುಗಳ ಹೊದಿಕೆಯ ಕೆಲಸವು ಪ್ರಗತಿಯಲ್ಲಿದೆ.
ಉಳಿದಂತೆ 3.7 ಕಿ.ಮೀ ನಲ್ಲಿ ಮುಳ್ಳು ಗಂಟೆ ಪೊದೆ ಮತ್ತು ಹಳೆಯ ಕಲ್ಲುಗಳ ಹೊದಿಕೆಯ ತೆರವುಗೊಳಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ ಎಂದು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮಲ್ಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯುತ್ ಬಿಲ್ ಪಾವತಿ ವಂಚನೆ ಬಗ್ಗೆ ಜಾಗೃತಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನ ಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿ ಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವ ಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿರುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಕೆಳಕಂಡ ಕೆಲವು ಸೂಚನೆಗಳನ್ನು ಪಾಲಿಸಲು ಕೋರಲಾಗಿದೆ.
ವಿದ್ಯುತ್ ಬಿಲ್ಲನ್ನು ಬೆ.ವಿ.ಕಂ ನ ಅಧಿಕೃತ ಕೌಂಟರ್ಗಳಲ್ಲಿಯೇ ಪಾವತಿಸಬೇಕು. ಬೆ.ವಿ.ಕಂ. ನಿಂದ ಕೆಲಸ ನಿರ್ವಹಣೆಗಾಗಿ ಸಿಬ್ಬಂದಿ ತಮ್ಮಲ್ಲಿಗೆ ಬಂದಾಗ ಗುರುತಿನ ಚೀಟಿಯನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
ವಿದ್ಯುತ್ ಬಿಲ್ಲನ್ನು ಆನ್ಲೈನ್ನಲ್ಲಿ ಪಾವತಿಸುವುದರ ಮೂಲಕ ಈ ತರಹದ ವಂಚನೆಗಳನ್ನು ತಪ್ಪಿಸಬಹುದು. ಪೇ-ಟಿಎಮ್, ಗೂಗಲ್ ಪೇ ಹಾಗೂ ಬೆವಿಕಂ.ನ “ಬೆಸ್ಕಾಂ ಮಿತ್ರ” ಆ್ಯಪ್ ನ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಕ್ಷೇಮಕರ.
ಯಾರಾದರೂ ಅನುಮಾನಾಸ್ಪದವಾಗಿ ವರ್ತಸಿದಲ್ಲಿ ಕೂಡಲೇ ಬೆ.ವಿ.ಕಂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 08912-250210 ಹಾಗೂ ಮೊಬೈಲ್ ನಂ. 9483549210 ಗೆ ತಿಳಿಸಬೇಕೆಂದು ಬೆಸ್ಕಾಂ ನಗರ ಉಪ ವಿಭಾಗ-1 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರಪ್ಪ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?
-
ಸಿನಿ ಸುದ್ದಿ7 days ago
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!
-
ಭಾವ ಭೈರಾಗಿ7 days ago
ಕವಿತೆ | ಕಾಮಧೇನು
-
ನಿತ್ಯ ಭವಿಷ್ಯ6 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ6 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ದಿನದ ಸುದ್ದಿ7 days ago
ಹಾವೇರಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
-
ನಿತ್ಯ ಭವಿಷ್ಯ5 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ