ರಾಜಕೀಯ
ಪತ್ರಿಕೆ ಸಂಪಾದಕರೊಬ್ಬರ ಮುಖವಾಡ ಕಳಚಿದ ಕೋಬ್ರಾ ಪೋಸ್ಟ್ !

ಸುದ್ದಿದಿನ ವಿಶೇಷ: ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಹಾಗೂ ಇತರೆ ವಿಷಯಗಳ ಮೂಲಕ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರುವ ಪತ್ರಿಕಾ ಸಂಪಾದಕರ ಮುಖವಾಡವನ್ನು ಕೋಬ್ರಾ ಪೋಸ್ಟ್ ಆನ್ಲೈನ್ ಪತ್ರಿಕೆ ತನ್ನ ಸ್ಟಿಂಗ್ ಆಪರೇಷನ್ ನಲ್ಲಿ ಬಯಲು ಮಾಡಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದುತ್ವ ಅಜೆಂಡಾ, ಅಮಿತ್ ಷಾ ತಂತ್ರಗಾರಿಕೆ, ಬಿಜೆಪಿಯ ಬೆನ್ನಿಗೆ ನಿಂತು ಕೆಲಸ ಮಾಡಿರುವುದರ ಕುರಿತು ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಹಾಗೂ ಅವರ ಆಡಳಿತ ಮಂಡಳಿಯ ಇತರೆ ಸದಸ್ಯರು ಸ್ಟಿಂಗ್ ಅಪರೇಷನ್ ನಲ್ಲಿ ಬಾಯಿಬಿಟ್ಟಿದ್ದಾರೆ.
ಸ್ಟಿಂಗ್ ಅಪರೇಷನ್ ನಲ್ಲಿ ಕೋಬ್ರಾ ಪೋಸ್ಟ್ ವರದಿಗಾರ ‘ಹಿಂದುತ್ವ’ ಕುರಿತು ಪತ್ರಿಕೆ ಹೆಚ್ಚು ಪ್ರಚಾರ ಮಾಡಬೇಕೆಂದು ಕೇಳುತ್ತಾನೆ. ಇದಕ್ಕೆ ಕನ್ನಡಪ್ರಭ ಪತ್ರಿಕೆ ಸಂಪಾದಕ ರವಿ ಹೆಗಡೆ ಅವರು ನಾವು ಅದನ್ನೇ ತಾನೇ ಈಗಲೂ ಮಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅಮಿತ್ ಅವರ ಸಂದರ್ಶನ ಪ್ರಕಟಿಸಿದ್ದು ನಾವು ಎಂದು ಹೇಳುತ್ತಾರೆ. ಹೀಗೆ ಸಂಭಾಷಣೆ ಸಾಗುತ್ತದೆ. ರವಿ ಹೆಗಡೆ ಅವರು ಪತ್ರಿಕೆ ಮೂಲಕ ಬಿಜೆಪಿ ಪರ ಕೆಲಸ ಮಾಡುವ ಕುರಿತು ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ.
ಈ ಕುರಿತು ಸೋಷಿಯಲ್ ಮಿಡಿಯಾ ಗಳಲ್ಲಿ ಟೀಕೆ ವ್ಯಕ್ತವಾಗಿದೆ. ‘ಹಿಂದುತ್ವ ಎನ್ನುವುದು ಪತ್ರಿಕಾಧರ್ಮವಲ್ಲ ಅದೊಂದು ರಾಜಕಾರಣ. ಪತ್ರಿಕೆ, ಸುದ್ದಿ ಚಾನೆಲ್ ಗಳು ಹೀಗೆ ಒಂದು ಪಕ್ಷದ ಪರವಾಗಿ ಅಜೆಂಡಾಗಳನ್ನು ಪ್ರಚಾರ ಮಾಡಲು ನಿಂತಿವೆ ಅನ್ನುವುದು ಈಗ ಪುರಾವೆ ಸಮೇತ ಸಾಬೀತಾಯಿತು ಎಂದು ರಾಜೇಂದ್ರ ಪ್ರಸಾದ್ ಎಂಬುವರು ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡದ ಬಹುತೇಕ ಮಾಧ್ಯಮಗಳು ಒಂದು ಪಕ್ಷದ ಜನಪ್ರತಿನಿಧಿಗಳ ಶೇರಿನಿಂದ ನಡೆಯುತ್ತಿದ್ದ, ಅವು ಆ ಪಕ್ಷದ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡವ ರೀತಿಯಲ್ಲಿ ಸುದ್ದಿ ಪ್ರಕಟಿಸುತ್ತಿವೆ. ಇದಕ್ಕೆ ಪೂರಕವಾಗಿದೆ ಹಿಂದುತ್ವದ ಅಜೆಂಡ ಮೂಲಕ ತಮ್ಮ ರಾಜಕೀಯದ ಕಾರ್ಯ ಸಾಧನೆ ಮಾಡುತ್ತಿವೆ. ಇವು ಪ್ರಜ್ಞಾವಂತ ನಾಗರಿಕರಿಗೆ ಗೋಚರಿಸುತ್ತಿವೆಯಾದರೂ ಸಾಮಾನ್ಯ ಜನರ ಅರಿವಿಗೆ ಬರುತ್ತಿಲ್ಲ. ಸದ್ಯ ಕೋಬ್ರಾ ಪೋಸ್ಟ್ ಕೆಲವು ಸಂಪಾದಕರ ಮುಖವಾಡ ಕಳಚುವ ಕಾರ್ಯ ಮಾಡಿದೆ.
ಏನಿದು ಕೋಬ್ರಾ ಪೋಸ್ಟ್
ಅನಿರುದ್ಧ ಬೆಹಲ್ ಎಂಬುವವರು ಆರಂಭಿಸಿದ ಆನ್ಲೈನ್ ಸುದ್ದಿ ಪತ್ರಿಕೆ ಈ ‘ಕೋಬ್ರಾ ಪೋಸ್ಟ್’. ಕಳೆದ ಹದಿನೈದು ವರ್ಷಗಳಲ್ಲಿ ಹಲವು ಪ್ರಮುಖ ಕುಟುಕು ಕಾರ್ಯಾಚರಣೆ ನಡೆಸಿದ್ದು, ಅನೇಕ ಸತ್ಯ ಸಂಗತಿಗಳನ್ನು ಹೊರಗೆಡವಿದೆ ಈಗ ಮತ್ತೊಂದು ಕಾರ್ಯಾಚರಣೆ ಮೂಲಕ ಮಾಧ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದೆ.

ದಿನದ ಸುದ್ದಿ
ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು

- ಆರ್.ಟಿ.ವಿಠ್ಠಲಮೂರ್ತಿ
ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಹಲ ಸಚಿವರು ಕೂಡಾ ತಮ್ಮ ಸುತ್ತ ಇಂತಹ ವಿವಾದಗಳು ಸುತ್ತಿಕೊಳ್ಳಬಹುದು ಎಂಬ ಆತಂಕದಿಂದ ನ್ಯಾಯಾಲಯದ ಕಟಕಟೆ ಏರಿದ್ದಾರೆ.
ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ.ಇದು ಬ್ಲಾಕ್ ಮೇಲ್ ಎಂಬುದರಿಂದ ಹಿಡಿದು ಮಹಿಳೆಯ ಜತೆಗಿನ ಸಂಬಂಧ ಪರಸ್ಪರ ಸಮ್ಮತಿಯದೇ ಹೊರತು ಕಿರುಕುಳ ಅಲ್ಲ ಎಂಬಲ್ಲಿಯವರೆಗೆ ಚರ್ಚೆ ಸಾಗಿದೆ. ಆದರೆ ಪ್ರಶ್ನೆ ಇರುವುದು ನೈತಿಕತೆಯದು.
ಯಾಕೆಂದರೆ ಅವರಿಗೆ ಧರ್ಮಪತ್ನಿ ಇದ್ದಾರೆ.ಧರ್ಮಪತ್ನಿ ಇರುವಾಗ ಈ ರೀತಿಯ ಸಂಬಂಧ ಸಾಧಿತವಾಗುವುದು ಸರಿಯೇ?ಎಂಬುದರಲ್ಲಿ. ಅದೇನೇ ಇರಲಿ,ಇವತ್ತು ರಮೇಶ್ ಜಾರಕಿಹೊಳಿ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಒಂದು ವಿಷಯವನ್ನು ಸ್ಪಷ್ಟವಾಗಿ ಎತ್ತಿ ತೋರಿಸಿವೆ.ಅದೆಂದರೆ ನೈತಿಕತೆಯ ಚೌಕಟ್ಟನ್ನು ವ್ಯವಸ್ಥೆಯೇ ಸಡಿಲಿಸುತ್ತಾ ಬಂದಿರುವುದು.
ವಾಸ್ತವವಾಗಿ,ಇಂತಹದೊಂದು ಪ್ರಕರಣ ನಡೆದಿದೆ ಎಂಬುದು ಗೊತ್ತಾದ ಕೂಡಲೇ ನಮ್ಮ ವ್ಯವಸ್ಥೆ ರಮೇಶ್ ಜಾರಕಿಹೊಳಿ ಮಾಡಿದ್ದು ತಪ್ಪು ಎಂದು ಸ್ಪಷ್ಟವಾಗಿ ಹೇಳಬೇಕಿತ್ತು.
ಆದರೆ ರಮೇಶ್ ಜಾರಕಿಹೊಳಿ ಅವರು ಮಾಡಿದ್ದು ತಪ್ಪು ಎನ್ನುವ ಕೂಗು ಎದ್ದಾಗಲೇ,ಇದು ಕೆಲವರ ಷಡ್ಯಂತ್ರ ಎಂಬ ಅಪಸ್ವರ ಕೇಳಿ ಬಂತು.ಹಾಗೆಯೇ ಇದು ಪರಸ್ಪರ ಸಮ್ಮತಿಯ ಸಂಬಂಧ ಎಂಬ ಕೂಗು ತೇಲಿ ಬಂತು.
ಅದು ನಿಜವೂ ಇರಬಹುದು.ಆದರೆ ಪ್ರಶ್ನೆ ಇದ್ದುದು ಅಲ್ಲಲ್ಲ,ಜವಾಬ್ದಾರಿಯುತ ಸ್ಥಾನದಲ್ಲಿದ್ದ ರಮೇಶ್ ಜಾರಕಿಹೊಳಿ ಮಾಡಿದ್ದು ಸರಿಯೇ?ಎಂಬಲ್ಲಿ. ಈ ಪ್ರಶ್ನೆಯನ್ನು ಮುಂದಿಟ್ಟುಕೊಂಡರೆ ಸಮಾಜದ ನೈತಿಕತೆಯ ಬೇರುಗಳು ಹೇಗೆ ಸಡಿಲವಾಗುತ್ತಾ ನಡೆದಿವೆ?ಎಂಬುದು ಸ್ಪಷ್ಟವಾಗುತ್ತದೆ.
ಕೆಂಗಲ್ ಹನುಮಂತಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಟಿ.ಸಿದ್ಧಲಿಂಗಯ್ಯ ಮಂತ್ರಿಯಾಗಿದ್ದರು.ಒಂದು ಸಂದರ್ಭದಲ್ಲಿ ಅವರ ಸಹೋದರನಿಗೆ ವಿದ್ಯುತ್ ಇಲಾಖೆಯ ಗುತ್ತಿಗೆಯೊಂದು ಸಿಕ್ಕಿತು.
ಇದನ್ನೂ ಓದಿ | ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ
ಇದು ಗೊತ್ತಾಗುತ್ತಿದ್ದಂತೆಯೇ ಸಿದ್ಧಲಿಂಗಯ್ಯ ಅವರು ಕೆಂಗಲ್ ಹನುಮಂತಯ್ಯ ಅವರನ್ನು ನೋಡಲು ಹೋದರು.ಅವರನ್ನು ನೋಡುತ್ತಲೇ ಕೆಂಗಲ್ ಹನುಮಂತಯ್ಯ ಅವರು:ನೀವು ಬಂದೇ ಬರುತ್ತೀರಿ ಎಂದು ನನಗೆ ಗೊತ್ತಿತ್ತು ಎಂದರು. ಸಿದ್ಧಲಿಂಗಯ್ಯ ಅವರು ಮರುಮಾತನಾಡದೆ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು.ವಸ್ತುಸ್ಥಿತಿ ಎಂದರೆ ತಮ್ಮ ಸಹೋದರನಿಗೆ ಇಂತಹ ಕಾಂಟ್ರಾಕ್ಟು ಕೊಡಿ ಎಂದು ಸಿದ್ಧಲಿಂಗಯ್ಯನವರು ಹೇಳಿರಲೇ ಇಲ್ಲ.
ಹಾಗಂತ ಹೇಳಿ ಕೆಂಗಲ್ ಹನುಮಂತಯ್ಯನವರು:ನಿಮ್ಮ ರಾಜೀನಾಮೆಯ ಅಗತ್ಯವಿಲ್ಲ ಎಂದರಾದರೂ ಸಿದ್ದಲಿಂಗಯ್ಯನವರು ಒಪ್ಪಲಿಲ್ಲ.ಬದಲಿಗೆ:ನಿಮಗೆ ಇದು ಗೊತ್ತಿದೆ.ಆದರೆ ಜನರಿಗೆ ಗೊತ್ತಾಗುವುದು ಹೇಗೆ?ಇದರ ನೈತಿಕ ಹೊಣೆ ಹೊರದೆ ಬೇರೆ ದಾರಿಯೇ ಇಲ್ಲ ಎಂದು ಹೇಳಿ ಬಂದರು.
ನಿಜಲಿಂಗಪ್ಪ ಅವರು ಮೊದಲು 1956 ರಲ್ಲಿ ಮುಖ್ಯಮಂತ್ರಿಯಾದರಲ್ಲ?ಆ ಸಂದರ್ಭದಲ್ಲಿ ತಮ್ಮ ಸಚಿವ ಸಂಪುಟಕ್ಕೆ ಸೇರುವಂತೆ ಅವರು ಶ್ರೀಮತಿ ಯಶೋದರಮ್ಮ ತುಳಸೀದಾಸಪ್ಪ ಅವರನ್ನು ಕೋರಿದ್ದರು.ಆಗವರು:ನೀವು ಪಾನ ನಿಷೇಧ ಮಾಡಲು ಒಪ್ಪಿಕೊಂಡರೆ ನಿಮ್ಮ ಸಂಪುಟ ಸೇರುತ್ತೇನೆ ಎಂದರು.
ಪಾನ ನಿಷೇಧ ಮಾಡುವ ವಿಷಯದಲ್ಲಿ ನಿಜಲಿಂಗಪ್ಪನವರಿಗೂ ಒಲವಿತ್ತು.ಹಾಗಂತಲೇ:ಖಂಡಿತ ಮಾಡೋಣ.ನೀವು ಮಂತ್ರಿ ಮಂಡಲಕ್ಕೆ ಸೇರಿ ಎಂದರು.ಆದರೆ ಮುಂದೆ ಪಾನ ನಿಷೇಧದ ಮಾತು ಬಂದಾಗ ನಿಜಲಿಂಗಪ್ಪ ಸಂಪುಟದ ಬಹುತೇಕ ಸಚಿವರು ಅಪಸ್ವರ ತೆಗೆದರು.
ಸರ್ಕಾರದ ಪ್ರಮುಖ ಆದಾಯ ಮೂಲ ಅದು.ಹೀಗಿರುವಾಗಿ ಪಾನನಿಷೇಧ ಮಾಡಿ ಸರ್ಕಾರವನ್ನು ಹೇಗೆ ನಡೆಸುತ್ತೀರಿ?ಏಂದು ಪ್ರಶ್ನಿಸಿದರು.ಆಗ ನಿಜಲಿಂಗಪ್ಪ ಅಸಹಾಯಕರಾಗಬೇಕಾಯಿತು.
ಆದರೆ ಇದನ್ನು ಒಪ್ಪದ ಶ್ರೀಮತಿ ಯಶೋದರಮ್ಮ ದಾಸಪ್ಪ ಅವರು ಮಂತ್ರಿ ಪದವಿಗೆ ರಾಜೀನಾಮೆ ನೀಡಿ ಹೊರಬಂದರು.
ಇದೇ ರೀತಿ ಮುಂದೆ ನಿಜಲಿಂಗಪ್ಪ ಅವರ ಸಚಿವ ಸಂಪುಟದಲ್ಲಿ ಎಂ.ವಿ.ರಾಮರಾವ್ ಅವರು ಗೃಹ ಸಚಿವರಾಗಿದ್ದಾಗ ಒಂದು ಘಟನೆ ನಡೆಯಿತು.
ಅವತ್ತು ಪೋಲೀಸ್ ಠಾಣೆಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ನಡೆದು ಆಕೆ ಅನಾಹುತ ಮಾಡಿಕೊಂಡಿದ್ದಳು.ಈ ವಿಷಯ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.
ಪ್ರತಿಪಕ್ಷದ ನಾಯಕರೊಬ್ಬರು:ಗೃಹ ಸಚಿವರೇ ಈ ವಿಷಯದ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ.ಆ ನೊಂದ ಹೆಣ್ಣು ಮಗಳ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ ನೀವೇನು ಮಾಡುತ್ತಿದ್ದಿರಿ?ಎಂದು ಪ್ರಶ್ನಿಸಿದರು.
ಅವರ ಪ್ರಶ್ನೆ ಕೇಳಿ ಅರೆಕ್ಷಣ ಸ್ತಂಭೀಭೂತರಾದ ರಾಮರಾವ್ ಅವರು:ನೀವು ಹೇಳಿದ್ದು ನನ್ನ ಮನಸ್ಸು ಮುಟ್ಟಿದೆ ಎಂದು ಹೇಳಿದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಇದೇ ರೀತಿ ನಿಜಲಿಂಗಪ್ಪ ಅವರ ಕಾಲದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ರಾಮಕೃಷ್ಣ ಹೆಗಡೆ ಅವರು ಪಂಚಾಯ್ತ್ ಮಸೂದೆಯೊಂದನ್ನು ತಂದರು.ಅದನ್ನು ವಿಧಾನಮಂಡಲದಲ್ಲಿಟ್ಟು ಅಂಗೀಕಾರ ಪಡೆಯುವ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿದರು.
ಆಗೆಲ್ಲ ಒಂದು ಕಾಯ್ದೆಯನ್ನು ತರುವ ಮುನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಸಂಪ್ರದಾಯವಿತ್ತು.ಅದರನುಸಾರ ಹೆಗಡೆ ಕೂಡಾ ಆ ಮಸೂದೆಯನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಮಂಡಿಸಿದ್ದರು.
ಆದರೆ ಒಂದೇ ಮತದ ಅಂತರದಲ್ಲಿ ಹೆಗಡೆ ಅವರು ಶಾಸಕಾಂಗ ಸಭೆಯಲ್ಲಿ ಮಂಡಿಸಿದ ಮಸೂದೆಗೆ ಸೋಲಾಯಿತು.
ಇದರಿಂದ ನೊಂದ ಹೆಗಡೆ:ಇನ್ನು ಗ್ರಾಮೀಣಾಭಿವೃದ್ಧಿ ಸಚಿವನಾಗಿ ಮುಂದುವರಿಯುವುದು ನೈತಿಕತೆಯಲ್ಲ ಎಂದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ಇದೇ ರೀತಿ ದೇವರಾಜ ಅರಸರ ಕಾಲದಲ್ಲಿ ಸಚಿವರಾಗಿದ್ದ ಆರ್.ಡಿ.ಕಿತ್ತೂರು ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ನಾಪತ್ತೆಯಾದರು.ವಿಷಯ ಭಾರೀ ಕೋಲಾಹಲಕ್ಕೆ ಕಾರಣವಾಯಿತು.
ಆ ಸಂದರ್ಭದಲ್ಲಿ ಹಲವು ರೀತಿಯ ಮಾತುಗಳು ಕೇಳಿ ಬಂದವು.ಪರಿಣಾಮ?ಆರ್.ಡಿ.ಕಿತ್ತೂರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಆ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರೇ:ಬಾಳೇ ಹಣ್ಣು ತಿಂದವರು ಯಾರೋ?ಆದರೆ ಸಿಪ್ಪೆ ಹಿಡಿದುಕೊಂಡಿದ್ದ ಕಾರಣಕ್ಕಾಗಿ ಅರ್.ಡಿ.ಕಿತ್ತೂರ್ ರಾಜೀನಾಮೆ ಕೊಡಬೇಕಾಯಿತು ಎಂದು ಮಾತನಾಡಿಕೊಂಡರು.
ಮುಂದೆ ತಾವೇ ಮುಖ್ಯಮಂತ್ರಿಯಾದ ಕಾಲದಲ್ಲಿ ಬಾಟ್ಲಿಂಗ್ ಹಗರಣ ಮತ್ತು ಟೆಲಿಫೋನ್ ಟ್ಯಾಪಿಂಗ್ ಹಗರಣ ನಡೆದಾಗ ಹೆಗಡೆ ರಾಜೀನಾಮೆ ನೀಡಿದರು.
ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅಂಬೇಡ್ಕರ್ ಪ್ರತಿಮೆಗೆ ತಮ್ಮ ಪುತ್ರ ಮಧ್ಯಾಭಿಷೇಕ ಮಾಡಿದ ಆರೋಪ ಕೇಳಿ ಬಂದಾಗ ಸಚಿವರಾಗಿದ್ದ ಬಿ.ಟಿ.ಲಲಿತಾನಾಯಕ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಆದರೆ ಇಂತಹ ಸತ್ಸಂಪ್ರದಾಯಗಳು ಕ್ರಮೇಣ ಮರೆಯಾಗುತ್ತಾ ಹೋಗಿ ಈಗ ಯಾವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರೆ ತಪ್ಪು ಮಾಡಿದವರನ್ನೂ ಸಮರ್ಥನೆ ಮಾಡುವ ದೊಡ್ಡ ಜನಸಮೂಹ ಬೆಳೆದುನಿಂತಿದೆ.
ವಿಪರ್ಯಾಸವೆಂದರೆ ಮಾಡಿದ ತಪ್ಪು ಕಣ್ಣೆದುರಿಗಿದ್ದರೂ ತಪ್ಪು ಮಾಡಿದವರೇ ಸ್ವಾತಂತ್ರ್ಯ ಹೋರಾಟಗಾರರ ಫೋಜು ಕೊಡುತ್ತಾ ತಮ್ಮ ಕೈನ ಎರಡೂ ಬೆರಳುಗಳನ್ನು ಎತ್ತಿ ತೋರಿಸುತ್ತಾ,ವಿಜಯೋತ್ಸವ ಆಚರಿಸುತ್ತಾರೆ.
ಅಂದ ಹಾಗೆ ಆರೋಪಗಳಿಗೆ ನಾನಾ ಮುಖಗಳಿರಬಹುದು.
ಯಾರದೋ ಷಡ್ಯಂತ್ರವೂ ಇದಕ್ಕೆ ಕಾರಣವಾಗಿರಬಹುದು,ಆದರೆ ನಡೆದಿದ್ದು ತಪ್ಪು ಎಂಬುದು ಸ್ಪಷ್ಟವಾದಾಗ ಶಿಕ್ಷೆಯನ್ನು ಸ್ವೀಕರಿಸುವ ಮತ್ತು ತನಿಖೆಯನ್ನು ಎದುರಿಸುವ ಗುಣ ಇರಬೇಕು.ಇಂತಹ ವಾತಾವರಣ ಸೃಷ್ಟಿಗೆ ವ್ಯವಸ್ಥೆಯೂ ಬಲ ನೀಡಬೇಕು. ಆದರೆ ರಮೇಶ್ ಜಾರಕಿಹೊಳಿ ಪ್ರಕರಣ ಅಂತಹ ವಾತಾವರಣ ಸೃಷ್ಟಿಸಲು ವ್ಯವಸ್ಥೆಯೇ ತಯಾರಿಲ್ಲ ಎಂಬುದನ್ನು ಸಾಬೀತುಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ಇಂದು ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಕೇಂದ್ರಗಳಲ್ಲಿ ತಲಾ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿದಿದರು.
ನಂತರ ಬಜೆಟ್ ಮಂಡಿಸುತ್ತಾ ಅವರು 60,000 ಮಹಿಳೆಯರಿಗೆ ಉದ್ಯೋಗ ನೀಡುವುದು. ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೆ ಸಾಲ ಕೊಡುವುದು.
ನಿರ್ಭಯಾ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನೆಲ್ಲೆಡೆ 7,500 ಸಿಸಿ ಕ್ಯಾಮರಾ ಅಳವಡಿಕೆ ಮಾಡಿಸುವುದಾಗಿ ಹೇಳಿದರು.
ಇದನ್ನೂ ಓದಿ | ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ
ಹಪ್ಪಳ, ಉಪ್ಪಿನ ಕಾಯಿ ತಯಾರಿಸುವವರಿಗೂ ಆನ್ ಲೈನ್ ಮಾರುಕಟ್ಟೆ ಒದಗಿಸಿ, ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ರಿಯಾಯಿತಿಯ ಬಿಎಂಟಿಸಿ ಪಾಸ್ ವಿತರಣೆ ಮಾಡಲಾಗುವುದು ಎಂದು ಮಹಿಳೆಯರಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ವಿಶೇಷ ಕೊಡುಗೆಯನ್ನು ಮಾರ್ಚ್ 8 ವಿಶ್ವ ಮಹಿಳಾ ದಿನಾಚರಣೆಯ ಗಿಫ್ಟ್ ಆಗಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ

ಸುದ್ದಿದಿನ, ಕೋಲ್ಕತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥರು “ಒಂದೇ ಭತಿಜಾ” ಹಿತದೃಷ್ಟಿಯಿಂದ ಮತ್ತು ಬಂಗಾಳದ ಯುವಜನರಿಗಾಗಿ ಕೆಲಸ ಮಾಡಿದ್ದಾರೆ. ಮಮತಾ ಬ್ಯಾನರ್ಜಿ ಅವರು “ಕಾಂಗ್ರೆಸ್ಸಿನಂತೆ” ವಂಶದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಬಿಜೆಪಿಯ ಮೆಗಾ ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಬಂಗಾಳದಲ್ಲಿ ಬಿಜೆಪಿ ಬಲಿಷ್ಠವಾಗಲು ಕಾರಣ “ಮಮತಾ ಅವರ ಪಕ್ಷದ ಭ್ರಷ್ಟಾಚಾರ ಮತ್ತು ಅವರ ಕೆಟ್ಟ ರಾಜಕೀಯ” ಎಂದು ಪ್ರಧಾನಿ ಹೇಳಿದರು.
Landed in Kolkata. On my way to the massive party rally. Looking forward to being among Party Karyakartas and the wonderful people of West Bengal.
— Narendra Modi (@narendramodi) March 7, 2021
“ಬಂಗಾಳದ ಜನರು ತಮ್ಮನ್ನು ದೀದಿ ಎಂಬ ನಿಮ್ಮ ಮೇಲಿನ ನಂಬಿಕೆಯಿಂದಾಗಿ ಅವರು ನಿಮ್ಮನ್ನು ಅಧಿಕಾರಕ್ಕೆ ಮತ ಹಾಕಿದ್ದಾರೆ. ಆದರೆ ಒಂದೇ ಭತಿಜಾ (ಸೋದರಳಿಯ) ಅವರ ‘ಬುವಾ’ (ಚಿಕ್ಕಮ್ಮ) ಪಾತ್ರಕ್ಕೆ ನೀವು ಯಾಕೆ ಸೀಮಿತರಾಗಿದ್ದೀರಿ? ಬಂಗಾಳದಲ್ಲಿ ಲಕ್ಷಾಂತರ ‘ಭತಿಜಾ’ಗಳ ಕನಸುಗಳನ್ನು ಈಡೇರಿಸುವ ಬದಲು, ನೀವು ಒಬ್ಬ‘ ಭತಿಜಾ ’ದುರಾಶೆಯನ್ನು ತೃಪ್ತಿಪಡಿಸುವತ್ತ ಮುಳುಗಿದ್ದೀರಿ,” ಎಂದು ಮೋದಿ ಹೇಳಿದರು.
ಮಮತಾ ಕಾಂಗ್ರೆಸ್ನ ‘ಬುವಾ-ಭತಿಜಾವಾಡ್’ ಸಂಪ್ರದಾಯದಿಂದ ಹೊರಬರಲು ಸಾಧ್ಯವಿಲ್ಲ.ಟಿಎಂಸಿ ಮುಖ್ಯಸ್ಥರು ಬಂಗಾಳದಲ್ಲಿ ಕೇಂದ್ರ ಯೋಜನೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಿದ ಪ್ರಧಾನಿ, “ದೀದಿ ಜನರಿಗಾಗಿ ಕೆಲಸ ಮಾಡದಿರಲು ನಿರ್ಧರಿಸಿದ್ದಾರೆ ಮತ್ತು ಬೇರೆ ಯಾರಿಗೂ ಕೆಲಸ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.
ಭಬಾನಿಪುರದ ತನ್ನ ಪ್ರಸ್ತುತ ಕ್ಷೇತ್ರದ ಬದಲು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮಮತಾ ಅವರ ನಿರ್ಧಾರವನ್ನು ಅಗೆದು ತೆಗೆದುಕೊಂಡ ಪ್ರಧಾನಿ, ಭಬಾನಿಪುರಕ್ಕೆ ತೆರಳುವ ಬದಲು, ಅವರ “ಸ್ಕೂಟಿ ಇದ್ದಕ್ಕಿದ್ದಂತೆ ನಂದಿಗ್ರಾಮ್ ಕಡೆಗೆ ತಿರುಗಿತು” ಎಂದು ಹೇಳಿದರು.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ
“’ ಭಬಾನಿಪುರಕ್ಕೆ ಹೋಗುವ ಬದಲು, ನಿಮ್ಮ ಸ್ಕೂಟಿ ಇದ್ದಕ್ಕಿದ್ದಂತೆ ನಂದಿಗ್ರಾಮ್ ಕಡೆಗೆ ತಿರುಗಿತು. ಯಾರಿಗೂ ತೊಂದರೆ ಆಗುವುದನ್ನು ನಾನು ಬಯಸುವುದಿಲ್ಲ. ಆದರೆ ನಂದಿಗ್ರಾಮ್ನಲ್ಲಿ ಸ್ಕೂಟಿ ಉರುಳುತ್ತದೆ ಎಂದು ನಿರ್ಧರಿಸಲಾಗಿರುವುದರಿಂದ ನಾನು ಏನು ಮಾಡಬಹುದು? ”ಎಂದು ಮೋದಿ ಹೇಳಿದರು.
Addressing a massive BJP rally in Kolkata. https://t.co/VqWeGkKY9H
— Narendra Modi (@narendramodi) March 7, 2021
ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಪಿಲಿಯನ್ ಸವಾರಿ ಮಾಡುವ ರಾಜ್ಯ ಸಚಿವಾಲಯಕ್ಕೆ ಹೋಗುವ ಮೂಲಕ ಇಂಧನ ಬೆಲೆ ಏರಿಕೆಯನ್ನು ವಿರೋಧಿಸುವ ಮಮತಾ ಅವರ ಇತ್ತೀಚಿನ ಕ್ರಮವನ್ನು ಅವರು ವಿರೋಧಿಸುತ್ತಿದ್ದರು.
“ಎಟೊ ರಾಗ್ ಕೆನೊ ದೀದಿ? (ನೀವು ಯಾಕೆ ಕೋಪಗೊಂಡಿದ್ದೀರಿ ದಿದಿ?) ಬಂಗಾಳದಲ್ಲಿ ಕಮಲ ಅರಳುತ್ತಿದ್ದರೆ ಅದು ನಿಮ್ಮ ಪಕ್ಷದ ಅತಿರೇಕದ ಭ್ರಷ್ಟಾಚಾರದಿಂದ ಸೃಷ್ಟಿಯಾದ ಮಣ್ಣಿನಿಂದಾಗಿ ”ಎಂದು ಮೋದಿ ಹೇಳಿದರು.
Thank you Kolkata!
Thank you West Bengal.
BJP is the state’s preferred choice. pic.twitter.com/5C9Fzvv5CF
— Narendra Modi (@narendramodi) March 7, 2021
ಟಿಎಂಸಿ ನಾಯಕರು ಅನೇಕ ಹಗರಣಗಳನ್ನು ಆಶ್ರಯಿಸಿದ್ದಾರೆ ಮತ್ತು ಅವರ ಮೇಲೆ “ಭ್ರಷ್ಟಾಚಾರ ಒಲಿಂಪಿಕ್” ನಡೆಯಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ4 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ಬಹಿರಂಗ6 days ago
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
-
ದಿನದ ಸುದ್ದಿ7 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ದಿನದ ಸುದ್ದಿ4 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ಕ್ರೀಡೆ6 days ago
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!