ದಿನದ ಸುದ್ದಿ
ದಾವಣಗೆರೆ | ಸೆ.17 ಕ್ಕೆ ಬೃಹತ್ ಲಸಿಕಾ ಮೇಳ, 1 ಲಕ್ಷ ಡೋಸ್ ಗುರಿ : ಜಿಲ್ಲಾಧಿಕಾರಿ ಮಹಾತೇಶ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ಲಸಿಕಾ ಮೇಳ ನಡೆಯಲಿದ್ದು 1 ಲಕ್ಷ ಜನರಿಗೆ ಕೊರೊನ ವ್ಯಾಕ್ಸಿನ್ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು
ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಲಸಿಕೆ ನೀಡುವ ಸಂಬಂಧ ನಡೆದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿದ ಅವರು ನೂರು ಆರೋಗ್ಯ ಸಂಸ್ಥೆಗಳ ಮೂಲಕ ಲಸಿಕೆ ನೀಡಲಾಗುತ್ತಿದ್ದು ಪಿ.ಹೆಚ್.ಸಿ.ಸಿ ಹೆಚ್ ಸಿ.ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ,ಇಎಸ್ಐ,ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ದಿನದಲ್ಲಿ 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಅಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ಲಸಿಕೆ ಮೇಳದಲ್ಲಿ ಪ್ರತಿ 2 ಗಂಟೆಗೊಮ್ಮೆ ಮಾಹಿತಿ ತೆಗೆದುಕೊಳ್ಳಲಾಗುವುದು. ಹರಿಹರ ದ 31 ವಾರ್ಡಗಳಲ್ಲಿ 31 ತಂಡಗಳು ಕಾರ್ಯ ನಿರ್ವಹಿಸಲಿದ್ದು ದಾವಣಗೆರೆ ನಗರದ 45 ವಾರ್ಡಗಳಲ್ಲಿ 45 ತಂಡಗಳು ಕಾರ್ಯ ನಿರ್ವಹಿಸಲಿವೆ.
ಜಿಲ್ಲೆಯ 195 ಗ್ರಾ.ಪಂ ಗಳ ಕೇಂದ್ರ ಸ್ಥಾನಗಳಲ್ಲಿ 1 ತಂಡ ಕನಿಷ್ಠ 200 ಜನರಿಗೆ ಲಸಿಕೆ ನೀಡಲಿದೆ,ಈ ಸಂಬಂಧ ಈಗಾಗಲೇ ಎಲ್ಲಾ ತಹಶೀಲ್ದಾರ್,ಇಓಗಳು ,ಟಿ.ಹೆಚ್. ಓ,ಸಿಡಿಪಿಓ ಗಳಿಗೆ ತರಬೇತಿ ನೀಡಲಾಗಿದೆ.
ನಾಳೆ ತಾಲೂಕು ಮಟ್ಟದ ತರಬೇತಿ ನಡೆಯಲಿದ್ದು ಎಲ್ಲಾ ಬಿ.ಎಲ್.ಓ.ಗಳು ತಮ್ಮ ವ್ಯಾಪ್ತಿಯಲ್ಲಿ ಲಸಿಕೆ ಪಡೆದುಕೊಂಡಿಲ್ಲದವರ ಪಟ್ಟಿ ತಯಾರಿಸಲಿದ್ದಾರೆ.
ಗ್ರಾ.ಪಂ. ಮಟ್ಟದಲ್ಲಿ ಆಟೋ ಪ್ರಚಾರ ನಗರದಲ್ಲಿ ಕಸದ ಗಾಡಿಗಳಲ್ಲಿ ಪ್ರಚಾರ ವ್ಯವಸ್ಥೆ ಮಾಡಲಾಗುವುದು ಹಾಗೂ ಹಳ್ಳಿಗಳಲ್ಲಿ ಡಂಗೂರ ಬಾರಿಸಲು ಸೂಚಿಸಲಾಗಿದೆ ಎಂದರು
ವಿಶೇಷವಾಗಿ ದುಡಿಯುವ ಜನರಿರುವ ಪ್ರದೇಶಗಳಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಹಾಗೂ ಬಡ ಜನರು ವಾಸಿಸುವ ಕಡೆ ಕಾರ್ಮಿಕ ಇಲಾಖೆ ವತಿಯಿಂದ ಹೆಚ್ಚಿನ ಪ್ರಚಾರ ನಡೆಸಲಾಗುವುದೆಂದರು. ಈ ಹಿಂದೆ ವ್ಯಾಕ್ಸಿನ್ ಗೆ ವಿರೋಧ ಮಾಡಿದ್ದ ಜಾಗಗಳಲ್ಲಿ ಜನರ ಮನವೊಲಿಸಲಾಗುವುದೆಂದರು.
ತಾಲ್ಲೂಕು ಹಂತದಲ್ಲಿ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಲಾಟರಿ,ಲಯನ್ಸ್,ರೆಡ್ ಕ್ರಾಸ್ ನಂತಹ ಸಂಸ್ಥೆಗಳು ಕೈ ಜೋಡಿಸಲಿವೆ. ಒಂದು ರೀತಿ ಚುನಾವಣೆ ನಡೆಸಿದ ರೀತಿಯಲ್ಲಿಯೇ ವ್ಯಾಕ್ಸಿನ್ ಮೇಳ ಯಶಸ್ವಿಗೊಳಿಸಲಾಗುವುದು ಎಂದರು
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್,ಜಿ.ಪಂ.ಸಿಇಓ ವಿಜಯ ಮಹಾಂತೇಶ ದಾನಮ್ಮನವರ್,ಡಿ.ಹೆಚ್.ಓ, ನಾಗರಾಜ್,ಆರ್ ಸಿ.ಹೆಚ್ ಅಧಿಕಾರಿ ಡಾ ಮೀನಾಕ್ಷಿ ,ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243