ದಿನದ ಸುದ್ದಿ
ದಾವಣಗೆರೆಯಲ್ಲಿ ಕೊರೋನಾ ಸೃಷ್ಟಿಸಿದ ಆತಂಕ; ‘ಹಸಿರು ಸಂಭ್ರಮ’ ಕಳೆಯಲು ಜಿಲ್ಲಾಡಳಿತ ಕಾರಣವಾಯಿತೆ ?
ಸುದ್ದಿದಿನ ವಿಶೇಷ, ದಾವಣಗೆರೆ: ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಜನರಲ್ಲಿದ್ದ ನಿರಾಳತೆ, ಸಂಭ್ರಮ ಈಗ ಮಾಯವಾಗಿದೆ. ಸದ್ಯ ದಾವಣಗೆರೆಯಲ್ಲಿ ಮತ್ತೆ ಬರೊಬ್ಬರಿ ಎಂಟು ಕೊರೋನಾದ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ಕರೋನಾ ಪೀಡಿತ ವೃದ್ಧ ಮೃತಪಟ್ಟಿದ್ದಾನೆ. ಈ ಸನ್ನಿವೇಶಗಳ ಸೃಷ್ಟಿಗೆ ಜಿಲ್ಲಾಡಳಿತವೇ ಕಾರಣವಾಯಿತೇ ಎಂಬ ಅನುಮಾನ ಜನರಲ್ಲಿ ಮೂಡಿವೆ.
ಲಾಕ್ ಡೌನ್ ಆರಂಭದಲ್ಲಿ ಜಿಲ್ಲೆಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದ್ದರೂ ಅದು ತನ್ನ ಕಬಂದಬಾಹು ಚಾಚದಂತೆ ನೋಡಿಕೊಳ್ಳುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿತ್ತು. ಬರೋಬ್ಬರಿ 28 ದಿನ ಪೂರೈಸುವ ಮೂಲಕ ಹಸಿರು ವಲಯಕ್ಕೆ ಎಂಟ್ರಿ ಕೊಟ್ಟಿತ್ತು. ಈ ಕಾರಣಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರ ಕಾರ್ಯಕ್ಕೆ ಶ್ಲಾಘನೆ ಕೂಡ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಅಧಿಕಾರಿಗಳ ಕಾರ್ಯದ ಬಗ್ಗೆ ಜಿಲ್ಲೆಯ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಸಂಭ್ರಮ ಹೆಚ್ಚು ದಿನ ಉಳಿಯಲಿಲ್ಲ !
ದಾವಣಗೆರೆ ಜಿಲ್ಲೆ ಹಸಿರು ವಲಯಕ್ಕೆ ಸೇರಿದ ಕೂಡಲೇ ಜಿಲ್ಲೆಯ ಜನ ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದರು. ಆದರೆ ಆ ಸಂಭ್ರಮ ಒಂದು ದಿನವೂ ಉಳಿಯಲಿಲ್ಲ. ಸರ್ಕಾರಿ ಆಸ್ಪತ್ರೆಯೊಂದರ ನರ್ಸ್ ಒಬ್ಬೊರಿಗೆ ಕೊರೋನ ಇರುವುದು ದೃಢಪಡುವ ಮೂಲಕ ಸಂಭ್ರಮ ಮಾಯವಾಯಿತು. ನಂತರ 69 ವರ್ಷದ ವೃದ್ಧರಲ್ಲಿ ಸೋಂಕು ಪತ್ತೆಯಾಯಿತು. ಅದಾದ ನಂತರ ಒಂದೇ ದಿನ ಒಂದೇ ಕುಟುಂಬದ 6 ಜನರಲ್ಲಿ ಮಹಾಮಾರಿ ಕರೋನಾ ಸೋಂಕು ಕಾಣಿಸಿಕೊಡ್ಡಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿತು.
ಜನ ಸಮುದಾಯಕ್ಕೆ ಹರಡಿತೇ ಮಹಾಮಾರಿ ಕರೋನಾ ?
ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಜನ ಸಮುದಾಯಕ್ಕೆ ಹರಡಿಯೇ ಎಂಬ ಆತಂಕ ಮೂಡಿಸಿದೆ. ಶುಕ್ರವಾರ ಮೃತಪಟ್ಟ ವೃದ್ಧರಿಗೆ ಕರೋನಾ ಹೇಗೆ ಬಂತು ಎಂಬುದನ್ನು ಪತ್ತೆಹಚ್ಚುವಲ್ಲಿ ಜಿಲ್ಲಾಡಳಿತ ಹೆಚ್ಚು ತಲೆಕೆಡಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕರೋನಾದಿಂದ ಮೃತಪಟ್ಟ ವೃದ್ಧ ಬೇರೆ ಪ್ರದೇಶದಿಂದ ಬಂದಿರಲಿಲ್ಲ. ಆತ ವ್ಯಾಪಾರಿಯಾಗಿದ್ದು, ಇಲ್ಲೇ ಇದ್ದ ಎಂದು ಹೇಳಲಾಗುತ್ತಿದೆ. ಅಂದರೆ ಆತನಿಗೆ ಹೇಗೆ ಹರಡಿತು ಸೋಂಕು ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.
ಜಿಲ್ಲಾಡಳಿತ ಕೊನೆಯಲ್ಲಿ ಹಾದಿ ತಪ್ಪಿತೇ ?
ಲಾಕ್ ಡೌನ್ ಆರಂಭದಲ್ಲಿ ಕೈಗೊಂಡಿದ್ದ ಬಿಗಿ ಭದ್ರತೆ ಕೊನೆಯಲ್ಲಿ ಕಾಣೆಯಾಯಿತು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಜಿಲ್ಲೆಯ ಕೆಲವು ಜನರು ಕೂಡ ಆಡಳಿತ ವ್ಯವಸ್ಥೆಗೆ ಸಹಕಾರ ನೀಡದೇ ಬೇಕಾಬಿಟ್ಟಿಯಾಗಿ ಹೊರಗಡೆ ಸಂಚರಿಸುದ್ದು ಸಂಷ್ಟದ ಪರಿಸ್ಥಿತಿಗೆ ಕಾರಣವಾಯಿತು ಎಂಬ ಅಪವಾದದ ಮಾತು ಕೇಳಿ ಬರುತ್ತಿವೆ. ಹೊರಗಡೆಯಿಂದ ಬರುವ ಚೆಕ್ ಪೋಸ್ಟ್ ಗಳಲ್ಲಿ ಆರಂಭದಲ್ಲಿ ತೆಗೆದುಕೊಂಡಿದ್ದ ಕಠಿಣ ನಿಲುವನ್ನು ಜಿಲ್ಲಾಡಳಿತ ಸಡಿಲಿಸಬಾರದಿತ್ತು. ಜೊತೆಗೆ ಜಿಲ್ಲೆಯ ಜನರು ಕೂಡಾ ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಬೇಕಿತ್ತು ಎಂದು ಪ್ರಜ್ಞಾವಂತ ನಾಗಕರಿಕರು ಹೇಳುತ್ತಿದ್ದಾರೆ.
ಜಿಲ್ಲೆಯಲ್ಲಿ ಈ ವರೆಗಿನ ಕೊರೊನಾ ಸ್ಥಿತಿಗತಿ
- ಪಿ-556 ರಿಂದ ಈ ದಿನ ಹೊಸ ಪಿ-580, ಪಿ-581, ಪಿ-582, ಪಿ-583, ಪಿ-584 ಪ್ರಾಥಮಿಕ ಸಂಪರ್ಕದಿಂದ 5 ಪ್ರಕರಣಗಳು ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುತ್ತಾರೆ. (ಪಿ-556 ಶುಕ್ರವಾರ ಮೃತ ಪಟ್ಟಿದ್ದಾರೆ.)
- ಪಿ-556 ಪ್ರಕರಣದಿಂದ ಒಟ್ಟು 12 ಪ್ರಾಥಮಿಕ ಸಂಪರ್ಕ ಮತ್ತು 17 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ.
- ಪಿ-533 ರಿಂದ ಪಿ-585 ಈ ದಿನ ಹೊಸ ಪ್ರಕರಣವು ಪ್ರಾಥಮಿಕ ಸಂಪರ್ಕದಿಂದ ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಪಿ-533 ಪ್ರಕರಣದಿಂದ ಒಟ್ಟು 25 ಪ್ರಾಥಮಿಕ ಸಂಪರ್ಕ ಮತ್ತು 45 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ.
- ಪಿ-533 ಮತ್ತು ಪಿ-556 ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರ ಗಂಟಲು ದ್ರವದ ಮಾದರಿಗಳನ್ನು ತೆಗೆದುಕೊಂಡಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಘೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
- ಜಾಲಿನಗರ ಹಾಗೂಬಾಷಾ ನಗರ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ. ಸುತ್ತಲಿನ 5 ಕಿ.ಮೀ ಪ್ರದೇಶವನ್ನು ಬಫರ್ ಝೋನ್ ಎಂದು ಪರಿಗಣಿಸಿ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ವಯ ಸರ್ವೇ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ.
- ಖಚಿತಪಟ್ಟ ಪ್ರಕರಣಗಳು ಬಂದಿರುವ ಬಾಷಾನಗರ ಎಪಿಸೆಂಟರ್ ಕಂಟೈನ್ಮೆಂಟ್ ಝೋನ್ನಲ್ಲಿ ಈ ದಿನ 909 ಮನೆಗಳಿಂದ 4553 ಜನರನ್ನು ಸಂದರ್ಶಿಸಿ ಫ್ಲೂ (IಐI) ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ 28 ತಂಡಗಳಿಂದ ನಡೆಸಲಾಯಿತು. ಈ ದಿನ ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಇರುವುದಿಲ್ಲ. ಸಂಚಿತ ಮನೆಗಳು : 909, ಜನಸಂಖ್ಯೆ : 4553, ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಕಂಡುಬಂದಿರುವುದಿಲ್ಲ.
- ಖಚಿತಪಟ್ಟ ಪ್ರಕರಣಗಳು ಬಂದಿರುವ ಜಾಲಿನಗರ ಎಪಿಸೆಂಟರ್ನ ಕಂಟೈನ್ಮೆಂಟ್ ಝೋನ್ನಲ್ಲಿ ಈ ದಿನ 1023 ಮನೆಗಳಿಂದ 4142 ಜನರನ್ನು ಸಂದರ್ಶಿಸಿ ಫ್ಲೂ (IಐI) ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ 28 ತಂಡಗಳಿಂದ ನಡೆಸಲಾಯಿತು. ಈ ದಿನ ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಇರುವುದಿಲ್ಲ. ಸಂಚಿತ ಮನೆಗಳು : 1023, ಜನಸಂಖ್ಯೆ : 4142, ಲಕ್ಷಣಗಳು ಇರುವ ಯಾವುದೇ ವ್ಯಕ್ತಿಗಳು ಕಂಡುಬಂದಿರುವುದಿಲ್ಲ.
- ದುರ್ಬಲ ಆರೋಗ್ಯವಿರುವವರ ಸಮೀಕ್ಷೆಯನ್ನು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯವರಿಂದ ನಡೆಸಿ ಫ್ಲೂ ಲಕ್ಷಣಗಳು ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ, ಬಿಸಿಗಾಳಿ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ
-
ದಿನದ ಸುದ್ದಿ7 days ago
ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ
-
ದಿನದ ಸುದ್ದಿ7 days ago
ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್
-
ದಿನದ ಸುದ್ದಿ6 days ago
ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ
-
ದಿನದ ಸುದ್ದಿ6 days ago
ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
-
ದಿನದ ಸುದ್ದಿ6 days ago
ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ
-
ದಿನದ ಸುದ್ದಿ6 days ago
ಇಂದು ಚುನಾವಣಾ ಆಯೋಗ ಸಮಾವೇಶ
-
ದಿನದ ಸುದ್ದಿ5 days ago
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ