Connect with us

ದಿನದ ಸುದ್ದಿ

ಅಸಲಿಗೆ ಭಾರತಕ್ಕೆ ಕೊರೋನಾ ಎಂಟ್ರಿ ಆಗಿದ್ದು ಹೇಗೆ..!?

Published

on

  • ಬಿಂದು ಶ್ರೀ‌ ಗೌಡ

COVID ಅನ್ನುವ ಮಾರಿ December ತಿಂಗಳಲ್ಲಿ ಚೈನಾ ದೇಶದಲ್ಲಿ ಕಾಣಿಸಿಕೊಂಡಾಗ ಎಚ್ಚೆತ್ತುಕೊಳ್ಳದ ನಮ್ಮ ಭಾರತ ಹಲವಾರು ಸಾವಿರಾರು ಜನ ಸೇರುವ ಕಾರ್ಯಕ್ರಮಗಳನ್ನು ಮಾಡಿದೆ ಮಾಡ್ತಾ ಇತ್ತು ಅದರ ಸಂಪೂರ್ಣ ಮಾಹಿತಿ ಮತ್ತು ಪಟ್ಟಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು ಕೂಡ. covid ಅನ್ನು ಗಂಭೀರವಾಗಿ ಪರಿಗಣಿಸದೆ ಟ್ರಂಪ್ ಕಾರ್ಯಕ್ರಮದ ಜೊತೆ ಜೊತೆಗೆ ಫ್ಲೈಟ್ ನಲ್ಲಿ ಬಂದಂತ ವಿದೇಶಿಗರು ಸೇರಿದಂತೆ ನಮ್ಮದೇ ದೇಶದ ಪ್ರಜೆಗಳು ಅಲ್ಲಿಂದ ಇಲ್ಲಿಗೆ ಬರುವಾಗ ಸರಿಯಾದ ತಪಾಸಣೆ ಮಾಡದೇ ಅವರನ್ನು ಸರ್ಕಾರಿ ಕ್ವಾರಂಟೇನ್ ಮಾಡದೇ ಮನೆಗೆ ಕಳುಹಿಸಿ ಮತ್ತೊಂದು ತಪ್ಪು ಮಾಡಿಬಿಟ್ಟರು.

ಇಷ್ಟೆಲ್ಲಾ ಆಗುವ ಹೊತ್ತಿಗೆ ಮಾರ್ಚ್ ತಿಂಗಳು ಬಂದೆ ಬಿಟ್ಟಿತ್ತು December ಇಂದ ಫೆಬ್ರವರಿ ತನಕ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕ ಶ್ರಿ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಚ್ಚರಿಸಿದರು ಕ್ಯಾರೇ ಅನ್ನದ ಕೇಂದ್ರ ಸರ್ಕಾರ ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಕುತ್ತಿಗೆಗೆ ಬಂದಾಗ ತತ್ ಕ್ಷಣಕ್ಕೆ ಅಂದರೆ ನಾಲಕ್ಕೆ ನಾಲ್ಕು ಘಂಟೆಗೆ ದೇಶ ಲಾಕ್ ಡೌನ್ ಆಗುತ್ತದೆ ಎಂಬ ಬಾಂಬ್ ಸಿಡಿಸಿದ್ದು ನಿಜವಾಗಿಯೂ ಒಂದು ದೇಶದ ಪರಿಸ್ಥಿತಿ ಅರಿಯದೆ ಆರ್ಥಿಕ ಪರಿಸ್ಥಿತಿ ಅರಿಯದೆ ತೆಗೆದುಕೊಂಡ ಮೂರ್ಖ ನಿರ್ಧಾವಾಗಿದ್ದು ಸುಳ್ಳಲ್ಲ.

ಇನ್ನುಳಿದ ಹಾಗೆ ವಾರಕ್ಕೊಂದು ಟಾಸ್ಕ್ ಕೊಟ್ಟು ಹೋದ ದೇಶದ ಪ್ರಧಾನಿಯವರು ಇದರ ಮುಂದಿನ ಭಾಗ ಏನಾಗುತ್ತದೆ ಎಂಬ ಊಹೆಯೂ ಇಲ್ಲದೆ ಚಪ್ಪಾಳೆ ತಟ್ಟಿ ಅಂದರು ಅದನ್ನು ತಪ್ಪಾಗಿ ಅರ್ಥೈಸಿಕೊಂಡ ನಮ್ಮ ದೇಶದ ಕೆಲವು ಪ್ರಜ್ಜೆಗಳು ಮಹಾ ಯುದ್ದ ಗೆದ್ದವರಂತೆ ತಟ್ಟೆ ಲೋಟ ಜೊತೆ ಜಾಗಟೆ ಬಾರಿಸಿಕೊಂಡು ನೂರು ನೂರು ಜನ ಗುಂಪು ಕಟ್ಟಿ ಬೀದಿಗೆ ಬಂದದ್ದು ಇಡಿ ಪ್ರಪಂಚವೇ ಕೇಕೆ ಹಾಕುವಂತೆ ಇತ್ತು.

ಇಷ್ಟೆಲ್ಲಾ ಆಗುವುದರೊಳಗೆ covid ಅದಾಗಲೇ ದೇಶವ್ಯಾಪಿ ಹರಡಿತ್ತು ಅನ್ನುವ ಸತ್ಯ ಎಲ್ಲರಿಗೂ ತಿಳಿದಿದ್ದರೂ ಕೇಂದ್ರ ಸರ್ಕಾರ ಬೇಜವಾಬ್ದಾರಿ ತನವನ್ನ ಜನರು ವಿರೋಧಿಸಲು ಟೀಕಿಸಲು ಆರಂಭಿಸುತ್ತಿದ್ದಂತೆ ಕೆಲವೊಂದಷ್ಟು ಮಾಧ್ಯಮಗಳು (ಅರ್ಥ ಮಾಡಿಕೊಳ್ಳಿ ) ಪೇಯ್ಡ್ ಮೀಡಿಯಾಗಳು ಜನರ ಗಮನವನ್ನು ಬೇರೆಡೆ ಸೆಳೆಯಲು ಉಪಯೋಗಿಸಿದ ಅಸ್ತ್ರವೆ ತಬ್ಲಿಗ್ ಜಮಾತ್ ನ ಕಾರ್ಯಕ್ರಮ ಮಾಧ್ಯಮಗಳು ಹೇಗೆ ಬಿಂಬಿಸಿದವು ಎಂದರೆ covid ಚೈನಾ ಇಂದ ಬಂದದ್ದು ಎನ್ನುವುದನ್ನೇ ಭಾರತದ ಜನ ಮರೆಯುವಂತೆ ಮಾಡಿಬಿಟ್ಟರು.

ಈ ಸುದ್ದಿಯನ್ನು ಕೇಳಿದಂತೆ ಜನರು ಧರ್ಮವನ್ನು ಧರ್ಮದ ಜನರನ್ನು ದ್ವೇಷಿಸುವ ರೀತಿ ಮಾಡಿಬಿಟ್ಟಿತು. ಈ ರೀತಿ ಕೇಂದ್ರದ ಬೇಜವಾಬ್ದಾರಿ ತನ. ವೈಫಲ್ಯವನ್ನು ಪ್ರಶ್ನಿಸುವ ಧೈರ್ಯ ತೋರದ ಮಾಧ್ಯಮಗಳು ಒಂದು ಸಮುದಾಯವನ್ನು ಇದಕ್ಕೆ ಬಲಿ ಕೊಡಲು ಎತ್ನಿಸಿದ್ದು ಇಡಿ ಪತ್ರಿಕೋದ್ಯಮ ಮತ್ತು ಮಾಧ್ಯಮ ತಲೆ ತಗ್ಗಿಸುವಂತದ್ದು ಎಂದು ಹೇಳಲು ಯಾವುದೇ ಅಂಜಿಕೆಯೂ ಇಲ್ಲ.ಹಾಗೊಂದು ವೇಳೆ ಈ ಕಾರ್ಯಕ್ರಮದಿಂದ covid ಬಂದಿದ್ದೆ ಆದಲ್ಲಿ ಇದಕ್ಕೆ ಮುಂಚೆ ಆದಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದವರು ಹೊಣೆಯಾಗುವುದಿಲ್ಲವೆ ಎಂಬುದನ್ನು ಪ್ರಜ್ಞಾವಂತರು ಪ್ರಶ್ನಿಸಬೇಕಾಗುತ್ತದೆ.

December ನಲ್ಲಿ ಕಾಣಿಸಿಕೊಂಡ covid ಹೀಗಿದ್ದೂ ತಬ್ಲಿಗ್ ಜಮಾತ್ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು..? ಕೊಟ್ಟ ನಂತರ ತಪಾಸಣೆ ಮಾಡದೇ ಅವರನ್ನು ಒಳಗಡೆ ಬಿಟ್ಟುಕೊಂಡದ್ದು ಯಾರು ಮತ್ತು ಯಾಕೆ ಅನ್ನುವ ಹಲವಾರು ಪ್ರಶ್ನೆಗಳು ಇಂದಿಗೂ ಉತ್ತರಕ್ಕಾಗಿ ಕಾಯುತ್ತಿದೆ ಇಂತಹ ಪ್ರಶ್ನೆಗಳನ್ನು ಮಾಡಬೇಕಾದ ಮಾಧ್ಯಮದವರು ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವರ ಮೇಲೆ ದ್ವೇಷ ಹುಟ್ಟುವಂತ ಸುದ್ದಿ ಪ್ರಸಾರ ಮಾಡಿದ್ದು ಅಕ್ಷಮ್ಯ ಅಪರಾಧ.

ಇದೇ ರೀತಿ ಮಧ್ಯಪ್ರದೇಶದ IAS ಅಧಿಕಾರಿಣಿ ಪಲ್ಲವಿ ಜೈನ್ ಅವರು, ವಿದೇಶದಿಂದ ಮರಳಿದ್ದ ತಮ್ಮ ಮಗನಿಗೆ ಕೊರೋನಾ ಸೋಂಕು ಇರುವ ನಿಜವನ್ನು ಮುಚ್ಚಿಟ್ಟು ಆತ ಕ್ವಾರಂಟೈನ್ ಅನುಭವಿಸುವುದನ್ನು ತಪ್ಪಿಸಲು ಸುಳ್ಳು ಹೇಳಿ ಆತನನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆತನಿಂದ ಇವರಿಗೂ ಸೋಂಕು ತಗುಲಿದರೂ ಸೆಲ್ಫ್ ಕ್ವಾರಂಟೈನ್ ಗೆ ಒಳಪಡದೆ ಒಂದು ಸಭೆ ನಡೆಸಿ ಆ ಸಭೆಯಲ್ಲಿ ನೆರೆದಿದ್ದ ಸುಮಾರು 100 ಜನ ಅಧಿಕಾರಿಗಳಿಗೆ ಸೋಂಕು ಹರಡಲು ಕಾರಣರಾಗಿದ್ದಾರೆ.ಈಗ ಅವರೆಲ್ಲರೂ ಕ್ವಾರಂಟೈನ್ ನಲ್ಲಿ ಇದ್ದಾರೆ. ಈ ವಿಷಯವನ್ನು ಯಾಕೆ ಮಾಧ್ಯಮ ಸುದ್ದಿ ಮಾಡಲಿಲ್ಲ , ಸುದ್ದಿ ಮಾಡಿದ್ರೂ ಇದಕ್ಕೆ ಯಾಕೆ ಧರ್ಮದ ಬಣ್ಣ ಬಳಿಯಲಿಲ್ಲ ಅನ್ನೋದನ್ನ ಯೋಚನೆ ಮಾಡಬೇಕಾಗುತ್ತದೆ.

  • ನೆನಪಿರಲಿ ತಬ್ಲಿಗ್ ಜಮಾತ್ ವಿರುದ್ಧ ಸುಳ್ಳು ಸುದ್ದಿ ಮಾಡಿದ ಝೀ ನ್ಯೂಸ್ ಕ್ಷಮೆ ಯಾಚಿಸಿದೆ.
  • ನೆನಪಿರಲಿ ತಬ್ಲಿಗ್ ಜಮಾತ್ ಕಾರ್ಯಕ್ರಮ ಹಾಜರಾಗಿದ್ದ 100 ಜನ ಕಾಶ್ಮೀರ್ ಪ್ರಜೆಗಳಲ್ಲಿ 100 ಕೂಡ ನೆಗಟಿವ್ report ಬಂದಿದೆ.
  • ನೆನಪಿರಲಿ covid ಭಾರತಕ್ಕೆ ಬರಲು ಅನುವು ಮಾಡಿಕೊಟ್ಟಿದ್ದು ಕೇಂದ್ರ ಸರ್ಕಾರದ ಬೇಜಾವಾಬ್ದಾರಿ, ಅಸಡ್ಡೆ , ವಿಶೇಷ ವಿಮಾನಗಳ ಪ್ರಜೆಗಳು, ಏರ್ಪೋರ್ಟ್ ನಲ್ಲಿ ಸರಿಯಾದ ತಪಾಸಣೆ ಮಾಡದಿರುವುದು ಮತ್ತು ಕ್ವಾರಂಟೈನ್ ನಲ್ಲಿ ಇರಿಸಿಕೊಳ್ಳಬೇಕಾದವರನ್ನು ಕೇವಲ ಸೀಲ್ ಹೊಡೆದು ಮನೆಗೆ ಕಳುಹಿಸಿದ್ದು , ಸೀಲ್ ಹೊಡೆಸಿಕೊಂಡವರು ಮನೆಯಲ್ಲಿ ಕೂರದೆ ಬೀದಿ ಬೀದಿ ಸುತ್ತಿದ್ದು ಇದರಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ ಎಲ್ಲರೂ ಇದ್ದಾರೆ ಅನ್ನೋದನ್ನ ಮಾಧ್ಯಮ ಅರಿತುಕೊಳ್ಳಬೇಕು.
    ಮತ್ತು ತಪ್ಪು ಯಾರೇ ಮಾಡಿದ್ರೂ ತಪ್ಪೇ ಅದನ್ನ ಕೇವಲ ಧರ್ಮಾಧಾರಿತವಾಗಿ ಬಿಂಬಿಸುವುದು , ಅಥವಾ ಒಬ್ಬರು ಇಬ್ಬರು ಮಾಡಿದ ತಪ್ಪಿಗೆ ಐಡಿ ಸಮುದಾಯವನ್ನು ದೂಷಿಸುವುದು ತಪ್ಪು.

ಕೊನೆಯದಾಗಿ covid ದೇಶಕ್ಕೆ ಕಾಲಿಡಲು ಮೊದಲ ಕಾರಣ ಕೇಂದ್ರ ಸರ್ಕಾರದ ಬೇಜವಾಬ್ದಾರಿ ಅನ್ನೋದಂತು ಸುಳ್ಳಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending