Connect with us

ದಿನದ ಸುದ್ದಿ

ಟಿಕ್ ಟಾಕ್ ಹಾಡಿಗೆ ದಾವಣಗೆರೆ ಕಾರ್ಪೊರೇಟರ್ ಡ್ಯಾನ್ಸ್ ವಿಡಿಯೋ ವೈರಲ್ : ಲಾಕ್ ಡೌನ್ ವೇಳೆ ಇದೆಲ್ಲಾ ಬೇಕಿತ್ತಾ ? ನೆಟ್ಟಿಗರ ಆಕ್ರೋಶ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ನಿಂದ‌ ಇಡೀ ದೇಶ ಭಯದ ವಾತಾವರಣದಲ್ಲಿದೆ. ಪ್ರಧಾನಿಗಳ ಆದೇಶದಂತೆ ದೇಶವೇ ಲಾಕ್ ಡೌನ್ ಆಗಿದ್ದು, ಕೊರೊನಾ ವೈರಸ್ ಅನ್ನು ಹೇಗೆಲ್ಲಾ ತಡೆಯಬೇಕು ಎಂಬ ಕುರಿತು ಎಲ್ಲೆಲ್ಲೂ ಜಾಗೃತಿಯ ಸಂದೇಶಗಳನ್ನು ರವಾನಿಸಲಾಗುತ್ತಿದೆ.ಆದ ಕಾರಣ ಜನರು ಮನೆಯಲ್ಲೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂತಹ ದುರಿತ ಕಾಲದಲ್ಲಿ ಯಾರೇ ಆಗರಲಿ ಅವರು ಮನೆಯಲ್ಲೇ ಇರಬೇಕು ಎಂಬುದು ಆದೇಶ. ಗುಜರಾತ್,ಮಹಾರಾಷ್ಟ್ರ, ಕರ್ನಾಟಕದಲ್ಲಿನ ನಗರಗಳಲ್ಲಿ ಜೀವನ ನಡೆಸುತ್ತಿದ್ದ ಬಡ ಜನ ಗಂಟು ಮೂಟೆ ಕಟ್ಟಿಕೊಂಡು ಮಕ್ಕಳೊಂದಿಗೆ ನಡೆದೇ ಊರು ಸೇರ ಬಯಸಿದ್ದಾರೆ. ವಿದೇಶದಲ್ಲಿದ್ದ ಭಾರತೀಯರನ್ನು ಕೊರೋನಾದಿಂದ ರಕ್ಷಿಸಲು ಸರ್ಕಾರ ಅವರಿಗೆ ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿ ದೇಶಕ್ಕೆ ಕರೆತಂದಿತು. ಆದರೆ ಬಡ ಜನತೆ ಸಾಗರೋಪಾದಿಯಲ್ಲೇ ನಡೆದುಕೊಂಡು ಬರುತ್ತಿದ್ದರೂ ಅವರಿಗೆ ಯಾವ ವ್ಯವಸ್ಥೆಯನ್ನೂ ಮಾಡದೆ ಕೈಚೆಲ್ಲಿ ಕೂತಿದೆ.

ಇಂತದೊಂದು ಕೇಡುಗಾಲ್ಲಿ ಜನಪ್ರತಿನಿದ್ಇಯಾದ ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಲಿ ಸದಸ್ಯ, ವಿರೋಧ ಪಕ್ಷದ ನಾಯಕ ಎಚ್.ಎಸ್. ನಾಗರಾಜ್ ಹಾಗೂ ಪಾಲಿಕೆ ಕಾಂಗ್ರೆಸ್ ಮಾಜಿ ಮೇಯರ್ ದಂಪತಿ ಟಿಕ್ ಟಾಕ್ ಡ್ಯಾನ್ಸ್ ಮಾಡಿರುವುದು ಇದೀಗ ವೈರಲ್ ಆಗಿದೆ.

ಪತಿ ಹಾಲಿ ಕಾಂಗ್ರೆಸ್ ಕಾರ್ಪೊರೇಟರ್, ಪತ್ನಿ ಮಾಜಿ ಮೇಯರ್ ರಾಜಕೀಯ ಕುಟುಂಬ ಸಮಾಜಕ್ಕೆ ಮಾದರಿಯಾಗುವಂತೆ ಕೆಲಸ ಮಾಡುವುದು ಅವರ ಆದ್ಯ ಕರ್ತವ್ಯವಾಗಿತ್ತು. ಅದನ್ನ ಬಿಟ್ಟು ಈ ರೀತಿ ನೃತ್ಯ ಮಾಡಿದ್ದು ಅಕ್ಷರಶಃ ಅಪರಾಧ. ಇಡೀ ದೇಶವೇ ಕೊರೊನಾ ಭೀತಿಯಿಂದ ಸಂಕಷ್ಟದಲ್ಲಿದ್ದು, ಈ ಸಮಯದಲ್ಲಿ ಜನಪ್ರತಿನಿಧಿಗಳು ಸಮಾಜಕ್ಕೆ ಮಾದರಿಯಾಗುವ ಅಥವಾ ಕೊರೊನಾ ಬಗ್ಗೆ ಜಾಗೃತಿಗೊಳ್ಳುವ ಸಂದೇಶವುಳ್ಳ ವಿಡಿಯೋ ಮಾಡಬಹುದಿತ್ತು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending