ನೆಲದನಿ
ಮಹಾಡ್: ದಲಿತರ ಚಾರಿತ್ರಿಕ ದಂಗೆಯ ಕಥನ
- ನಟರಾಜ್ ಹುಳಿಯಾರ್
ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ. ‘ಇಂಡಿಯಾದ ದಲಿತ ಚಳವಳಿಯ ಜಾನಪದವೇ ಆಗಿಹೋಗಿರುವ’ 20 ಮಾರ್ಚ್ 1927ರ ಮಹಾಡ್ ಸಮ್ಮೇಳನವನ್ನು ಆನಂದ್ ‘ಜಗತ್ತಿನ ಮೊದಲ ಮುಖ್ಯ ನಾಗರಿಕ ಹಕ್ಕುಗಳ ಹೋರಾಟಗಳಲ್ಲಿ ಒಂದು’ ಎನ್ನುತ್ತಾರೆ.
ಆನಂತರ 25 ಡಿಸೆಂಬರ್ 1927ರಂದು ಬೃಹತ್ ಮಹಾಡ್ ಸತ್ಯಾಗ್ರಹವನ್ನು ಏರ್ಪಡಿಸಿದ ಅಂಬೇಡ್ಕರ್ ಅಲ್ಲಿ ಮನುಸ್ಮೃತಿಯನ್ನು ಸುಟ್ಟರು. ಈ ಎರಡು ಚಾರಿತ್ರಿಕ ಸಮ್ಮೇಳನಗಳನ್ನು ಕುರಿತು ಮರಾಠಿಯಲ್ಲಿರುವ ಅನೇಕ ದಾಖಲೆಗಳು, ವಸಾಹತು ಆಡಳಿತದ ಟಿಪ್ಪಣಿಗಳು, ಅಂಬೇಡ್ಕರರ ‘ಬಹಿಷ್ಕೃತ ಭಾರತ’ ಪತ್ರಿಕೆಯ ಸಂಪಾದಕೀಯಗಳನ್ನು ಆನಂದ್ ಮಂಡಿಸಿದ್ದಾರೆ; ಆಳವಾಗಿ ವಿಶ್ಲೇಷಿಸಿದ್ದಾರೆ.
ಮೊದಲ ಮಹಾಡ್ ಸಮ್ಮೇಳನದ ಮುಂಚೂಣಿ ಸಂಘಟಕರಾದ ರಾಮಚಂದ್ರ ಬಾಬಾಜಿ ಮೋರೆಯವರ ನಿರೂಪಣೆಯೂ ಇಲ್ಲಿದೆ. ಕೊಂಚ ಅನುಕೂಲಸ್ಥ ಮನೆತನದಿಂದ ಬಂದ ಬಾಲಕ ಮೋರೆ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಪ್ರೈಮರಿ ವಿದ್ಯಾಭ್ಯಾಸ ಮುಗಿಸಿ ಸ್ಕಾಲರ್ಶಿಪ್ ಪಡೆದಿದ್ದರೂ ಮಹರ್ ಎಂಬ ಕಾರಣಕ್ಕೆ ಅವನನ್ನು ಮಹಾಡ್ ಹೈಸ್ಕೂಲಿಗೆ ಸೇರಿಸಿಕೊಳ್ಳಲಿಲ್ಲ.
ಹನ್ನೊಂದರ ಹರೆಯದ ಮೋರೆ ಈ ಅನ್ಯಾಯದ ವಿರುದ್ಧ ಸರ್ಕಾರಕ್ಕೆ ಬಹಿರಂಗ ಪತ್ರವೊಂದನ್ನು ಬರೆದು ದಿನಪತ್ರಿಕೆಯೊಂದರಲ್ಲಿ ಪ್ರಕಟಿಸಿದ. ಸರ್ಕಾರದ ಅನುದಾನ ಕಳೆದುಕೊಂಡೇವೆಂಬ ಭಯಕ್ಕೆ ಸ್ಕೂಲಿನವರು ಮೋರೆಯನ್ನು ಸೇರಿಸಿಕೊಂಡರೂ ಅವನನ್ನು ತರಗತಿಯ ಹೊರಗೆ ಕೂರಿಸುತ್ತಿದ್ದರು. ಮುಂದೆ ಇಂಥ ಅವಮಾನಗಳ ವಿರುದ್ಧ ಬಂಡೆದ್ದ ತರುಣ ಮೋರೆ ದಲಿತ ಸಮುದಾಯವನ್ನು ಎಚ್ಚರಿಸುತ್ತಾ, ಅವರಿಗೆ ಆಗುತ್ತಿದ್ದ ಅವಮಾನಗಳ ವಿರುದ್ಧ ಹೋರಾಡತೊಡಗಿದರು.
ಆ ಹೊತ್ತಿಗಾಗಲೇ ಲಂಡನ್ ಹಾಗೂ ಕೊಲಂಬಿಯಾದಿಂದ ಎರಡು ಡಾಕ್ಟರೇಟ್ ಹಾಗೂ ಬಾರ್ ಅಟ್ ಲಾ ಪದವಿ ಪಡೆದು ಹಿಂದಿರುಗಿದ್ದ ಅಂಬೇಡ್ಕರ್ ಸಾಧನೆಯ ಬಗ್ಗೆ ಮೋರೆಗೆ ಅಪಾರ ಹೆಮ್ಮೆ ಹಾಗೂ ಗೌರವವಿತ್ತು. ಅಂಬೇಡ್ಕರರನ್ನು ಮಹಾಡ್ಗೆ ಕರೆಸಿ ಸನ್ಮಾನ ಮಾಡಿ, ದಲಿತ ಮಕ್ಕಳು ಅವರಂತೆ ಸಾಧನೆ ಮಾಡಲು ಸ್ಫೂರ್ತಿ ತುಂಬಬೇಕು; ದಲಿತರನ್ನು ಹೀನಾಯವಾಗಿ ಕಾಣುವ ಸವರ್ಣೀಯರು ಅಂಬೇಡ್ಕರ್ ಸಾಧನೆ ಕಂಡು ನಾಚಿಕೊಳ್ಳುವಂತೆ ಮಾಡಬೇಕು ಎಂಬ ಆಸೆಯಿಂದ ಅಂಬೇಡ್ಕರರನ್ನು ಕಂಡ ಮೋರೆ ಮಹಾಡಿನಲ್ಲಿ ದಲಿತ ಸಮ್ಮೇಳನದ ಅಧ್ಯಕ್ಷತೆ ವಹಿಸುವಂತೆ ಕೋರುತ್ತಾರೆ.
ತರುಣ ಮೋರೆಯ ಉತ್ಸಾಹ ಕಂಡ ಅಂಬೇಡ್ಕರ್ ಕೆಲವು ತಿಂಗಳ ನಂತರ ಮಹಾಡ್ನ ‘ಡಿಪ್ರೆಸ್ಡ್ ಕ್ಲಾಸಸ್ ಕಾನ್ಫರೆನ್ಸ್’ ಸಿದ್ಧತೆಗಳನ್ನು ಪರಿಶೀಲಿಸಲು ತಮ್ಮ ಸಂಗಾತಿಗಳನ್ನು ಕಳಿಸುತ್ತಾರೆ. ಮುಂಬೈಯಲ್ಲಿಯೂ ಈ ಕುರಿತ ಸಭೆಗಳು ನಡೆಯುತ್ತವೆ. ಅಂಬೇಡ್ಕರ್ ಸಮ್ಮೇಳನಾಧ್ಯಕ್ಷರ ಭಾಷಣವನ್ನು ತರುಣ ಸಿ.ಬಿ. ಖೈರ್ಮೋಡೆಯವರಿಗೆ ಹೇಳಿ ಬರೆಸತೊಡಗುತ್ತಾರೆ (ಖೈರ್ಮೋಡೆ ಮುಂದೆ ಮರಾಠಿಯಲ್ಲಿ ಅಂಬೇಡ್ಕರ್ ಜೀವನಚರಿತ್ರೆಯ 12 ಸಂಪುಟಗಳನ್ನು ಬರೆದರು. ಮೊದಲ ಸಂಪುಟವನ್ನು ಅಂಬೇಡ್ಕರ್ ನೋಡಿದ್ದರು).
ಈ ಸಮ್ಮೇಳನ ನಡೆಸಲು ತಕ್ಕ ಜಾಗವೇ ಸಿಗದೆ, ಕೊನೆಗೂ ತಮಾಷಾ ನಾಟಕ ನಡೆಸುವ ಸ್ಥಳವೊಂದು ಸಿಕ್ಕುತ್ತದೆ. 1927ರ ಮಾರ್ಚ್ 19ರ ಹೊತ್ತಿಗೆ ಮಹಾರಾಷ್ಟ್ರದ ಅನೇಕ ದಿಕ್ಕುಗಳಿಂದ ತಮ್ಮ ಜಾತಿಯ ಸಂಕೇತವಾದ ಲಾಠಿ ಹಿಡಿದು ಮಹರ್ ಸಮುದಾಯದವರು ಅಲ್ಲಿ ಸೇರುತ್ತಾರೆ. ಅಂಬೇಡ್ಕರ್ ತಮ್ಮ ಭಾಷಣದಲ್ಲಿ ಆ ಸುತ್ತಲಿನ ಅಸ್ಪೃಶ್ಯ ಸಮುದಾಯದವರು 19ನೆಯ ಶತಮಾನದಲ್ಲಿ ಮಿಲಿಟರಿ ಸೇರಿ ಉತ್ತಮ ಸ್ಥಿತಿಯಲ್ಲಿದ್ದುದನ್ನು, ಅವರ ಮಕ್ಕಳು ಮಿಲಿಟರಿ ಶಾಲೆಗಳಲ್ಲಿ ಕಲಿತು ವಿದ್ಯಾವಂತರಾಗುತ್ತಿದ್ದ ಕಾಲವನ್ನು ನೆನೆಸಿಕೊಳ್ಳುತ್ತಾರೆ.
ನಂತರ ಕೆಲವರ ಚಿತಾವಣೆಯಿಂದಾಗಿ ಮಿಲಿಟರಿ ಸೇವೆಯ ಬಾಗಿಲು ಮುಚ್ಚಿ, ದಲಿತರ ಪ್ರಗತಿ ಕುಸಿಯಿತು; ಆದ್ದರಿಂದ ಸರ್ಕಾರಿ ಸೇವೆಗೆ ತಕ್ಕ ಶಿಕ್ಷಣ ಹಾಗೂ ಕೃಷಿ ಎರಡನ್ನೂ ದಲಿತರು ಯುದ್ಧೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕೆಂದು ಅಂಬೇಡ್ಕರ್ ಹೇಳುತ್ತಾರೆ. ಆನಂತರ ದಲಿತರನ್ನು ಬೆಂಬಲಿಸಿ ಮಾತಾಡಿದ ಸವರ್ಣೀಯ ಹಿಂದೂ ನಾಯಕ ಶೇಟ್ ‘ಮಹಾಡ್ ಮುನಿಸಿಪಾಲಿಟಿ ಈಚೆಗೆ ಚವ್ದಾರ್ (ಸಿಹಿನೀರು) ಕೆರೆಯ ನೀರನ್ನು ಅಸ್ಪೃಶ್ಯರೂ ಸೇರಿದಂತೆ ಎಲ್ಲರೂ ಬಳಸಿಕೊಳ್ಳಬಹುದು ಎಂಬ ನಿರ್ಣಯ ಮಾಡಿದೆ’ ಎಂಬುದನ್ನು ಸಭೆಯ ಗಮನಕ್ಕೆ ತರುತ್ತಾರೆ.
ಮಾರನೆಯ ದಿನ ಸಮ್ಮೇಳನದ ಬೆಂಬಲಿಗರಾದ ಟಿಪ್ನಿಸ್ ಮನೆಯಲ್ಲಿ ಅಂಬೇಡ್ಕರ್ ಮತ್ತು ಸಂಗಾತಿಗಳು ಈ ಕುರಿತು ಮಾತಾಡುತ್ತಿರುವಾಗ, ಅವತ್ತಿನ ಸಮಾವೇಶದ ನಂತರ ಎಲ್ಲರೂ ಚವ್ದಾರ್ ಕೆರೆಗೆ ಹೋಗಿ ಮುನಿಸಿಪಾಲಿಟಿ ನಿರ್ಣಯವನ್ನು ಜಾರಿಗೆ ತರಲು ತೀರ್ಮಾನಿಸಿದರು. ಸಮಾವೇಶದ ಕೊನೆಯಲ್ಲಿ ಸಂಘಟಕರಾದ ಭಾಯಿಚಿತ್ರೆ ಮುನಿಸಿಪಾಲಿಟಿಯ ನಿರ್ಣಯದಂತೆ ಚವ್ದಾರ್ ಕೆರೆಯ ನೀರನ್ನು ಕುಡಿಯಲು ಸಮ್ಮೇಳನಾಧ್ಯಕ್ಷರೊಂದಿಗೆ ಎಲ್ಲರೂ ಕೆರೆಯತ್ತ ನಡೆಯಬೇಕೆಂದು ಇದ್ದಕ್ಕಿದ್ದಂತೆ ಘೋಷಿಸಿದಾಗ ಸಭೆ ರೋಮಾಂಚನಗೊಂಡಿತು.
ಅಲ್ಲಿದ್ದ ಜನಸಮುದಾಯದ ಜೊತೆ ಚವ್ದಾರ್ ಕೆರೆಯತ್ತ ಹೆಜ್ಜೆ ಹಾಕಿದ ಅಂಬೇಡ್ಕರ್ ಬೊಗಸೆಯಲ್ಲಿ ಕೆರೆಯ ಸಿಹಿನೀರು ಕುಡಿದರು. ಸಾವಿರಾರು ವರ್ಷಗಳಿಂದ ಮಲೆತುಹೋಗಿದ್ದ ಇಂಡಿಯಾದ ಚರಿತ್ರೆ ಇದ್ದಕ್ಕಿದ್ದಂತೆ ಚಲಿಸಿತ್ತು. ಸಮಾವೇಶ ಮುಗಿಸಿ ಊರಿಗೆ ಹೊರಡುವ ಮುನ್ನ ಪ್ರತಿನಿಧಿಗಳು ಊಟ ಮಾಡತೊಡಗಿದರು. ಭದ್ರತೆಯ ಕಾರಣಕ್ಕಾಗಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿದ್ದ ಅಂಬೇಡ್ಕರ್ ಮತ್ತಿತರರು ಅಲ್ಲಿಗೆ ಮರಳಿದರು.
ಎರಡು ಗಂಟೆಯ ಹೊತ್ತಿಗೆ ವೀರೇಶ್ವರ ದೇವಾಲಯದ ಪೂಜಾರಿ ‘ಅಸ್ಪೃಶ್ಯರು ದೇವಾಲಯ ಪ್ರವೇಶಿಸುತ್ತಿದ್ದಾರೆ; ಕಾಪಾಡಿ, ಕಾಪಾಡಿ’ ಎಂದು ಊರ ತುಂಬಾ ಕೂಗುತ್ತಾ ಓಡತೊಡಗಿದ. ಇನ್ನು ಕೆಲವರು ‘ಮಹರ್ ಜನ ಚವ್ದಾರ್ ಕೆರೆಯ ನೀರನ್ನು ಅಪವಿತ್ರಗೊಳಿಸಿ ನಿಮ್ಮ ದೇವಾಲಯಗಳಿಗೆ ಹೋಗಲು ತಯಾರಾಗುತ್ತಿದ್ದಾರೆ’ ಎಂದು ಕುಣಬಿ ಸಮುದಾಯದವರನ್ನು ರೊಚ್ಚಿಗೆಬ್ಬಿಸಿದರು.
ಸವರ್ಣೀಯರು ಲಾಠಿ ಹಿಡಿದು ವೀರೇಶ್ವರ ದೇವಸ್ಥಾನದ ಬಳಿ ಬಂದು ಸೇರಿದರು. ಈ ನಡುವೆ ತಮ್ಮನ್ನು ಕಂಡ ಪೊಲೀಸ್ ಅಧಿಕಾರಿಗೆ ಅಂಬೇಡ್ಕರ್ ತಮ್ಮವರಿಗೆ ದೇವಾಲಯ ಪ್ರವೇಶಿಸುವ ಇರಾದೆಯೇ ಇಲ್ಲ ಎಂದು ಹೇಳಿದರು. ಅತ್ತ ಊರಿಗೆ ಹೊರಟ ದಲಿತರ ಮೇಲೆ ಸವರ್ಣೀಯ ಗೂಂಡಾಗಳು ಹಲ್ಲೆ ಮಾಡಿದರು. ಸಮ್ಮೇಳನದ ಅಡುಗೆಮನೆಗೆ ನುಗ್ಗಿ ಅಲ್ಲಿದ್ದ ಹೆಂಗಸರು ಮಕ್ಕಳನ್ನೂ ಹೊಡೆದರು. ಗೂಂಡಾಗಳಿಂದ ತಪ್ಪಿಸಿಕೊಂಡು ಓಡುತ್ತಾ ಆಸರೆ ಬೇಡುತ್ತಿದ್ದ ದಲಿತರನ್ನು ಮೇಲುಜಾತಿಯ ಬಹುತೇಕರು ಮನೆಯೊಳಕ್ಕೆ ಬಿಟ್ಟುಕೊಳ್ಳಲಿಲ್ಲ.
ಮುಸಲ್ಮಾನರು ಅವರ ರಕ್ಷಣೆಗೆ ಬರದಿದ್ದರೆ ಅವರ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿರುತ್ತಿತ್ತು. ಮುಸಲ್ಮಾನರು ಮತ್ತು ಕಾಯಸ್ಥ ಜಾತಿಯವರು ಮಾತ್ರ ಅವರ ನೆರವಿಗೆ ಬಂದರು. ಜನರನ್ನು ಸಂತೈಸುತ್ತಾ, ‘ಏನೇ ಆಗಲಿ ಶಾಂತಿಯಿಂದ ಇರಿ’ ಎಂದು ಅಂಬೇಡ್ಕರ್ ಕೇಳಿಕೊಂಡರು. ಅಲ್ಲಿ ಸೇರಿದ್ದ, ಮಿಲಿಟರಿ ಸೇವೆಯಿಂದ ನಿವೃತ್ತರಾಗಿದ್ದ ದೃಢಕಾಯ ದಲಿತರಿಗೇನಾದರೂ ಅಂಬೇಡ್ಕರ್ ‘ಹೂಂ’ ಎಂದಿದ್ದರೆ ಕತೆಯೇ ಬೇರೆಯಾಗುತ್ತಿತ್ತು ಎಂದು ತೇಳ್ತುಂಬ್ಡೆ ಬರೆಯುತ್ತಾರೆ. ಆನಂತರ ಕೆರೆಯ ಸಿಹಿನೀರನ್ನು ಪುರೋಹಿತರು ಸಗಣಿ, ಗಂಜಲ ಹಾಕಿ ‘ಶುದ್ಧಿ’ ಮಾಡಿದ ಕತೆಯೂ ಕೆಲವು ಪುಸ್ತಕಗಳಲ್ಲಿದೆ.
ಮಹಾಡ್ನಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ ಕೆಲವರಿಗೆ ನಂತರ ಶಿಕ್ಷೆಯಾಯಿತು. ಅದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಪೂರ್ಣ ಪ್ರಮಾಣದ ಮಹಾಡ್ ಸತ್ಯಾಗ್ರಹಕ್ಕಾಗಿ ಅಂಬೇಡ್ಕರ್ ವ್ಯಾಪಕ ಸಿದ್ಧತೆ ಶುರು ಮಾಡಿದರು. ಇದೆಲ್ಲದರ ಮಧ್ಯೆ, ತಾವೂ ಮಹಾಡ್ ಸತ್ಯಾಗ್ರಹವನ್ನು ಬೆಂಬಲಿಸುತ್ತೇವೆಂದು ಬಂದ ದಲಿತ ಸಾಧುಗಳು ಅಂಬೇಡ್ಕರ್ ‘ಅರೆ ರುದ್ರಾವತಾರಿ’ ಎಂದು ಪ್ರತಿಪಾದಿಸತೊಡಗಿದರು! ಇದನ್ನು ಕೇಳಿ ಮೊದಲು ನಕ್ಕ ಅಂಬೇಡ್ಕರ್, ನಂತರ ಗಂಭೀರವಾಗಿ ಹೇಳಿದರು: ‘ಇಂಥ ಕಲ್ಪನೆಗಳಿಂದಲೇ ಬ್ರಾಹ್ಮಣರು ಸಮಾಜವನ್ನು ನಾಶ ಮಾಡಿರುವುದು. ಇಂಥದ್ದನ್ನೆಲ್ಲಾ ಎಂದೂ ಸಮುದಾಯದಲ್ಲಿ ಹಬ್ಬಿಸಬಾರದು’.
ಈ ಸಮ್ಮೇಳನದ ಸಿದ್ಧತೆಗಳು ನಡೆಯುತ್ತಿರುವಾಗಲೇ ಮಹಾಡ್ ಮುನಿಸಿಪಾಲಿಟಿ ಚವ್ದಾರ್ ಕೆರೆಯ ನೀರನ್ನು ಎಲ್ಲರೂ ಬಳಸಬಹುದು ಎಂಬ ನಿರ್ಣಯವನ್ನು ವಾಪಸ್ ತೆಗೆದುಕೊಂಡಿತು. ದಲಿತರು ಈ ಕೆರೆಯ ನೀರನ್ನು ಬಳಸಬಾರದೆಂದು ಸವರ್ಣೀಯರು ಕೋರ್ಟಿನಿಂದ ತಡೆಯಾಜ್ಞೆ ತಂದರು; ಸಮ್ಮೇಳನಕ್ಕೆ ಜಾಗವೇ ಸಿಗದಂತೆ ಮಾಡಿದ್ದೇವೆಂದು ಗುಜಾರ್ ಬ್ರಾಹ್ಮಣರು ಹಿಗ್ಗಿನಲ್ಲಿದ್ದರು.
ಆದರೆ ಫತೇಹ್ ಖಾನ್ ಎಂಬಾತ ಸಂತೋಷದಿಂದ ಸಮ್ಮೇಳನಕ್ಕೆ ಜಾಗ ಕೊಟ್ಟ. ಗುಜಾರ್ ಬ್ರಾಹ್ಮಣರ ಒತ್ತಡಕ್ಕೆ ಫತೇಹ್ ಖಾನ್ ಮಣಿಯಲಿಲ್ಲ; ಅವನ ಹೊಲದಲ್ಲಿ ಹಾಕಿದ ದೊಡ್ಡ ಪೆಂಡಾಲಿನಲ್ಲಿ, 25 ಡಿಸೆಂಬರ್ 1927ರಂದು ಹತ್ತು ಸಾವಿರ ಪ್ರತಿನಿಧಿಗಳ ಸತ್ಯಾಗ್ರಹ ಸಮ್ಮೇಳನ ಶುರುವಾಯಿತು. ಕೆಲವು ದಲಿತೇತರ ನಾಯಕರೂ ಸಮ್ಮೇಳನದಲ್ಲಿ ಮಾತಾಡಿದರು.
ಅಂಬೇಡ್ಕರರ ಚಾರಿತ್ರಿಕ ಭಾಷಣದ ನಂತರ ಜಾತಿಪದ್ಧತಿಯ ಬೇರುಗಳಿಗೆ ಮಾರಣಾಂತಿಕ ಹೊಡೆತ ಕೊಡಲು ಮನುಸ್ಮೃತಿಯನ್ನು ಸುಡಲಾಯಿತು. ಚವ್ದಾರ್ ಕೆರೆಯ ನೀರನ್ನು ಬಳಸುವ ವಿಚಾರದಲ್ಲಿ ಮುಂದೊಮ್ಮೆ ಕಾನೂನಿನ ಸಮರವನ್ನು ಗೆಲ್ಲುವ ಛಲದಿಂದ ಅಂಬೇಡ್ಕರ್ ಸಾವಿರಾರು ಅನುಯಾಯಿಗಳೊಡನೆ ಮಹಾಡಿನ ಬೀದಿಗಳಲ್ಲಿ ಮೆರವಣಿಗೆ ಹೊರಟು ನಾಲ್ಕೂ ದಿಕ್ಕುಗಳಿಂದ ಕೆರೆಯ ಸುತ್ತ ಸೇರಿ ಕಾರ್ಯಕ್ರಮ ಮುಗಿಸಿದರು.
ಮರುದಿನ ಚಮ್ಮಾರರ ಸಭೆಗಳನ್ನು ಉದ್ದೇಶಿಸಿ ಅಂಬೇಡ್ಕರ್ ಮಾತಾಡಿದರು. ಈ ನಡುವೆ ಅಕ್ಕಪಕ್ಕದ ಊರುಗಳಿಂದ ಆತಂಕಗೊಂಡು ಮಹಾಡಿಗೆ ಓಡಿ ಬಂದ ಹೆಂಗಸರು ಬಾಬಾಸಾಹೇಬರನ್ನು ನೋಡಿ ನೆಮ್ಮದಿಗೊಂಡರು; ಕಾರಣ, ಅಂಬೇಡ್ಕರರ ಹತ್ಯೆಯಾಗಿದೆಯೆಂದು ಪುಕಾರು ಹಬ್ಬಿತ್ತು. ಮಹರ್ ಮಹಿಳೆಯರು ಬಟ್ಟೆ ತೊಡುವ ಕ್ರಮದಲ್ಲಿ ಇದ್ದ ಜಾತಿದೈನ್ಯತೆಯನ್ನು ಮೊದಲು ಬಿಡಬೇಕೆಂದು ಅಂಬೇಡ್ಕರ್ ಹೇಳಿದರು. ಸಮ್ಮೇಳನದ ನಂತರ ಊರಿಗೆ ಹೊರಟ ಮಹಿಳೆಯರು ತಮ್ಮ ಉಡುಪಿನ ಶೈಲಿಯನ್ನು ಬದಲಿಸಿಕೊಂಡಿದ್ದರು.
ಮಹಾಡ್ ಮುನಿಸಿಪಾಲಿಟಿಯ ಸ್ವೀಪರುಗಳು ತಮ್ಮ ಕೆಲಸಕ್ಕೆ ರಾಜಿನಾಮೆ ಕೊಟ್ಟಿದ್ದರು. ಮಹಾಡ್ ಸಮ್ಮೇಳನಗಳ ಅನುಭವ ಬಾಬಾಸಾಹೇಬರಿಗೆ ದಲಿತರ ಸಂಘಟನೆ-ಹೋರಾಟದ ಸಾಧ್ಯತೆಗಳ ಬಗ್ಗೆ ಅಪಾರ ಭರವಸೆ ಮೂಡಿಸಿತು. ಮಹಾಡ್ ತೋರಿದ ಹಕ್ಕಿನ ಪ್ರತಿಪಾದನೆಯ ಅರ್ಥಪೂರ್ಣತೆಯನ್ನು ಇವತ್ತಿಗೂ ದಲಿತ ಸಂಘಟನೆಗಳು ನೆನೆಯುತ್ತವೆ. ಅಂಬೇಡ್ಕರ್ ಬದುಕಿರುವವರೆಗೂ ಮನುಸ್ಮೃತಿ ಸುಟ್ಟ ದಿನವನ್ನು ಆಚರಿಸುತ್ತಿದ್ದರು.
ಮಹಾರಾಷ್ಟ್ರ ಹಾಗೂ ಇನ್ನಿತರ ಕಡೆಗಳಲ್ಲಿ ಈ ಆಚರಣೆ ಇವತ್ತಿಗೂ ಮುಂದುವರಿದಿದೆ. ಸ್ವಾತಂತ್ರ್ಯಾನಂತರ ಮಹಾಡ್ ಹೋರಾಟ ಚರಿತ್ರೆಗೆ ಸಂದಿದೆಯೆಂದು ಭಾವಿಸಲಾಗದು; ಕಳೆದ ವರ್ಷವಷ್ಟೇ ಚೆನ್ನರಾಯಪಟ್ಟಣದ ಕುರುವಂಕದಲ್ಲಿ ಕಲ್ಯಾಣಿಯೊಂದರ ನೀರು ಬಳಸಲು ದಲಿತರು ಹೋರಾಡಬೇಕಾಗಿ ಬಂದಿತ್ತು. ಆದ್ದರಿಂದಲೇ ಮಹಾಡ್ ಇವತ್ತಿಗೂ ದಲಿತರ ನಿರಂತರ ಹೋರಾಟದ ದಿಟ್ಟ ಸಂಕೇತದಂತಿದೆ.
ಕೊನೆ ಟಿಪ್ಪಣಿ: ಸಿಹಿನೀರಿಗಾಗಿ ಸುದೀರ್ಘ ಹೋರಾಟ
‘ಚವ್ದಾರ್ ಕೆರೆ ಸಾರ್ವಜನಿಕ ಕೆರೆಯಲ್ಲ; ಅದು ‘ಚೌಧರಿ’ ಎಂಬುವವರು ಕಟ್ಟಿಸಿದ ಖಾಸಗಿ ಕೆರೆ’ ಎಂದು ಸವರ್ಣೀಯರು ಸುಳ್ಳುವಾದ ಹೂಡಿ, ದಲಿತರು ಕೆರೆಯ ನೀರನ್ನು ಮುಟ್ಟದಂತೆ ಕೋರ್ಟಿನಿಂದ ತಡೆಯಾಜ್ಞೆತಂದಿದ್ದರು.
‘ಚವ್ದಾರ್ ಕೆರೆಯ ನೀರನ್ನು ಮುಟ್ಟಿ ನಾನು ಜೈಲಿಗೆ ಹೋಗಲು ಸಿದ್ಧ; ನಿಮ್ಮಲ್ಲಿ ಎಷ್ಟು ಜನ ಜೈಲಿಗೆ ಹೋಗಲು ಸಿದ್ಧರಿದ್ದೀರಿ, ಹೆಸರು ಕೊಡಿ’ ಎಂದು ಅಂಬೇಡ್ಕರ್ ಸತ್ಯಾಗ್ರಹ ಸಮ್ಮೇಳನದಲ್ಲಿ ಕೇಳಿದರು; ಹೆಸರು ಬರೆಸಿದವರ ಸಂಖ್ಯೆ ಮೂರು ಸಾವಿರ ದಾಟತೊಡಗಿತು; ಸಮ್ಮೇಳನದಲ್ಲಿದ್ದ ಬಹುತೇಕರು ಜೈಲಿಗೆ ಹೋಗಲು ಸಿದ್ಧರಿದ್ದರು.
ಸತ್ಯಾಗ್ರಹಕ್ಕೆ ಹೊರಡುವ ಕೆಲವು ಮಹರ್ ಗಂಡಸರು ತಮ್ಮ ಹೆಂಡತಿಯರ ಕುಂಕುಮವನ್ನು ಅಳಿಸಿ ಯುದ್ಧಭೂಮಿಗೆ ಹೊರಡುವಂತೆ ಮಹಾಡಿಗೆ ಬಂದಿದ್ದರು. ಅವರು ಹಿಂದೆ ಸರಿವ ಪ್ರಶ್ನೆಯೇ ಇರಲಿಲ್ಲ. ಮುಂದೆ ಕೋರ್ಟಿನಿಂದ ಕೋರ್ಟಿಗೆ ದಾಟಿದ ಈ ಕೇಸನ್ನು ಅಂಬೇಡ್ಕರ್ ಗೆದ್ದದ್ದು 1937ರಲ್ಲಿ. ಆದರೆ ಅಂಬೇಡ್ಕರ್ ಅಷ್ಟುಹೊತ್ತಿಗಾಗಲೇ ದಲಿತರನ್ನು ಬಹುದೂರ ಕರೆದೊಯ್ದಿದ್ದರು. ಜೊತೆಗೆ, ದಲಿತರ ಬಿಡುಗಡೆಗೆ ಕಾನೂನು ಹಾಗೂ ಹೋರಾಟಗಳೆರಡೂ ಮುಖ್ಯವೆಂಬುದನ್ನೂ ತೋರಿಸಿದ್ದರು.
ಕೃಪೆ: –ಪ್ರಜಾವಾಣಿಯ ‘ಕನ್ನಡಿ’ ಅಂಕಣದಲ್ಲಿ ಪ್ರಕಟಗೊಂಡಿದ್ದ ಬರಹ (ಮಾರ್ಚ್ 16, 2016)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ
- ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ
ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.
ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.
ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು
ಬದುಕಿಸುವುದು ಇತ್ಯಾದಿ..
ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.
ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.
ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;
“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”
ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.
ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.
ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;
“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”
ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;
“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”
ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;
“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”
ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;
“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”
ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ನೆಲದನಿ
ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ
- ಡಾ. ಸಿ ಬಿ ಅನ್ನಪೂರ್ಣ ಜೋಗೇಶ್, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.
ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.
ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.
ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.
ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.
ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.
ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.
ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.
ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.
ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.
ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ
-
ದಿನದ ಸುದ್ದಿ7 days ago
ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್
-
ದಿನದ ಸುದ್ದಿ5 days ago
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
-
ದಿನದ ಸುದ್ದಿ12 hours ago
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ13 hours ago
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ