ಸಿನಿ ಸುದ್ದಿ
‘ಜೂನಿಯರ್ ರಾಜ್ ಕುಮಾರ್’ ಜಯಕುಮಾರ್ ಆಸ್ಪತ್ರೆ ಖರ್ಚಿಗೆ ನೆರವಾಗಿ ; ಪತ್ನಿ ಪದ್ಮಾವತಿ ಅಳಲು
ಅವರೊಬ್ಬ ರಂಗಭೂಮಿಯ ಅಭಿಜಾತ ಕಲಾವಿದ. ಅವರೊಳಗೆ ವರನಟ ಡಾ. ರಾಜಕುಮಾರ್ ಅವರ ಪರಕಾಯ ಪ್ರವೇಶ. ಮತ್ತೆ ಮತ್ತೆ ರಾಜಕುಮಾರ್ ನಮ್ಮೆದುರು ಪ್ರತ್ಯಕ್ಷವಾಗಿಸುವ ಅಭಿನಯ ಚತುರತೆ ಅವರದು. ನಾಟಕ ಯಾವುದೇ ಇರಲಿ ಈ ಕಲಾವಿದನಿಗೆ ಹೀರೋ ಪಾತ್ರ ಮುಡಿಪು. ಅಲ್ಲಿ ಡಾ. ರಾಜ್ ಛಾಪು. ನೋಡಲು ವರನಟನ ತದ್ರೂಪು. ಹಾಗೆಂದು ಅನುಕರಣೀಯ ಪ್ರತಿಭೆ ಮಾತ್ರವಲ್ಲ, ಅವರೊಬ್ಬ ಅಪ್ರತಿಮನಟ. ಹೆಸರು ಜಯಕುಮಾರ್, ಊರು ಕೊಡಗನೂರು.
ಗುಬ್ಬಿ ಕಂಪನಿ ಸೇರಿದಂತೆ ಗುಡಗೇರಿ, ಕುಮಾರಸ್ವಾಮಿ, ಚಿಂದೋಡಿ… ಹೀಗೆ ಇಪ್ಪತ್ತಕ್ಕೂ ಹೆಚ್ಚು ನಾಟಕ ಕಂಪನಿಗಳಲ್ಲಿ ಕಳೆದ ಐವತ್ತು ವರ್ಷಗಳ ಕಾಲ ವೃತ್ತಿ ರಂಗಭೂಮಿಯ ನಿರಂತರ ರಂಗಸೇವೆ. ಈಗ್ಗೆ ತಿಂಗಳ ಹಿಂದೆಯಷ್ಟೇ ಕಲಬುರ್ಗಿಯಲ್ಲಿ ಖಾಯಂ ಮೊಕ್ಕಾಂ ಮಾಡಿರುವ ನಾಟಕ ಕಂಪನಿಯೊಂದರಲ್ಲಿ ಅಭಿನಯಿಸುತ್ತಿರುವಾಗ ಲಘು ಹೃದಯಾಘಾತ. ಸಕ್ಕರೆ ಕಾಯಿಲೆ ಆತನನ್ನು ಯಾಮಾರಿಸಿದೆ. ಎರಡನೇ ಬಾರಿಗೆ ಆದಾಗ, ಸೂಕ್ಷ್ಮವಾಗಿ ತಿಳಿದು ದಾವಣಗೆರೆಗೆ ಧಾವಿಸಿ ತಜ್ಞ ವೈದ್ಯಕೀಯ ಚಿಕಿತ್ಸೆ ಪಡೆದು ಹೃದಯ ನಾಳಗಳಿಗೆ ಎರಡು ಸ್ಟಂಟ್ ಅಳವಡಿಕೆ. ಆ ಸಂದರ್ಭದಲ್ಲಿ ಶಿವಸಂಚಾರದ ಶ್ರೀ ಪಂಡಿತಾರಾಧ್ಯಶ್ರೀಗಳು ಸಂಬಂಧಿಸಿದ ವೈದ್ಯರಿಗೆ ಫೋನ್ ಮೂಲಕ ಹೇಳಿ ನೆರವಾದರು. ಇನ್ನೇನು ಮನೆಗೆ ಕಳಿಸಬೇಕೆನ್ನುವಾಗ ಎರಡೂ ಕಿಡ್ನಿಗಳು ಕೈ ಕೊಡುವ ಸೂಚನೆಗಳು ಎದುರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರೋಗಿಯ ಸ್ಥಳಾಂತರ.
ಕಳೆದ ಹದಿನೈದು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖ ಆಗುವ ಎಲ್ಲ ಲಕ್ಷಣಗಳಿವೆ ಎಂದು ತಜ್ಞ ವೈದ್ಯರ ಅಂಬೋಣ. ಹೆಲ್ತ್ ಕಾರ್ಡಿನ ಸೌಲಭ್ಯಗಳು ಹೃದಯದ ರಕ್ತನಾಳಗಳಿಗೆ ಅಳವಡಿಸಿದ ಸ್ಟಂಟಗಳಿಗೆ ಕೊನೆಗೊಂಡಿತು. ಈಗ ಮಣಿಪಾಲ್ ಆಸ್ಪತ್ರೆಯಲ್ಲಿ ದೊರಕುವ ಎಲ್ಲ ಚಿಕಿತ್ಸೆಗೂ ಹಣ ಕಟ್ಟಲೇ ಬೇಕಿದೆ. ಒಂದು ಲಕ್ಷ ರುಪಾಯಿ ಮಿಕ್ಕ ಖರ್ಚು. ಕಲಾವಿದ ಜಯಕುಮಾರರ ಬಳಿ ಇರುವ ಹಣವೆಲ್ಲ ಖರ್ಚಾಗಿದೆ. ಆಸ್ಪತ್ರೆಯಲ್ಲಿರುವ ಜಯಕುಮಾರರ ಜತೆ ಅವರ ಪತ್ನಿ ಪದ್ಮಾವತಿ ಮಗ ಮಾರುತಿ ಇದ್ದಾರೆ.
ಶಿವಣ್ಣನ ಜನುಮದ ಜೋಡಿ ಸೇರಿದಂತೆ, ಅಂಬರೀಶ್, ವಿಷ್ಣುವರ್ಧನ್, ದೇವರಾಜ್, ದರ್ಶನ್ ಅಂತಹ ಹೆಸರಾಂತ ನಟರ ಜತೆ, (ಬರಗೂರರ ನಾಕೈದು ಚಿತ್ರ ) ನೂರೈವತ್ತಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಜಯಕುಮಾರ ನಟಿಸಿದ್ದಾರೆ. ಆತ ಅಭಿನಯಿಸಿದ ಕಿರುತೆರೆ ದಾರಾವಾಹಿಗಳು ಲೆಕ್ಕವಿಲ್ಲದಷ್ಟು. ಅಷ್ಟೇ ಪ್ರಮಾಣದ ವೃತ್ತಿ ರಂಗನಾಟಕಗಳು. ಹೀಗೆ ಅವಿರತವಾಗಿ ದುಡಿದ ಬಣ್ಣದಜೀವ ಹಾಸಿಗೆ ಹಿಡಿದಿದೆ. ಈಗ ಅಕ್ಷರಶಃ ಸಂಕಷ್ಟದಲ್ಲಿರುವ ಕೊಡಗನೂರು ಜಯಕುಮಾರರ ನೆರವಿಗಾಗಿ ಅವರ ಪತ್ನಿ ಶ್ರೀಮತಿ ಪದ್ಮಾವತಿ ಹಾಗೂ ಅವರ ಮಗ ಮಾರುತಿ ಮನವಿ ಮಾಡಿಕೊಂಡಿದ್ದಾರೆ.
ಜಯಕುಮಾರ್ ಅವರ ಬ್ಯಾಂಕ್ ಖಾತೆ ವಿವರ ಹೀಗಿದೆ
ಸಿಂಡಿಕೇಟ್ ಬ್ಯಾಂಕ್
ಮಲ್ಲೇಶ್ವರಮ್
ಕೆ.ಸಿ. ಜನರಲ್ ಆಸ್ಪತ್ರೆ ಶಾಖೆ :ಬೆಂ.
A/C : 04492010022368
IFSC code : SYNB 0000449
ಕಲಾವಿದನ ನೆರವಿನ ನಿರೀಕ್ಷೆ ಯಲ್ಲಿ
ಪದ್ಮಾವತಿ w/o ಜಯಕುಮಾರ
ಮಣಿಪಾಲ್ ಆಸ್ಪತ್ರೆ, ಮಣಿಪಾಲ್
ಮೊ: 99023 89044

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಮಿಳು ನಟ ವಿಜಯ್ ಸೈಕಲ್ ನಲ್ಲಿ ಬಂದು ಓಟ್ ಮಾಡಿದ್ದೇಕೆ..? ನಟನ ಆಪ್ತರು ಹೇಳಿದ್ದೇನು ಗೊತ್ತಾ..?

ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಟ ಇಳಯದಳಪತಿ ವಿಜಯ್ ಅವರು ಸೈಕಲ್ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ನಟ ವಿಜಯ್ ಅವರ ಜೊತೆಯಲ್ಲಿ ಸೆಲ್ಫೀ, ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡರು. ಈ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಮಂಗಳವಾರ ಸಖತ್ ವೈರಲ್ ಆಗಿದ್ದಾವೆ.
ನಟ ವಿಜಯ್ ಅಭಿಮಾನಿಗಳು ರಸ್ತೆ ಮಧ್ಯದಲ್ಲಿ ಅವರನ್ನು ಸುತ್ತವರಿದ ಕಾರಣ ಅವರು ಮತಗಟ್ಟೆಗೆ ಸೈಕಲ್ ನಲ್ಲಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ನಂತರ ನಟ ವಿಜಯ್ ತಮ್ಮ ಸಿಬ್ಬಂದಿಯವರ ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತು ಮತಗಟ್ಟೆಗೆ ಹೋದರು. ಮತಗಟ್ಟೆಯ ಬಳಿ ಹಲವಾರು ಅಭಿಮಾನಿಗಳು ನಟ ವಿಜಯ್ ನೋಡಲು ನೆರೆದಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್ ಕೂಡ ಮಾಡಬೇಕಾಯಿತು.
ಇಳಯ ದಳಪತಿ ವಿಜಯ್ ಅವರು ಮಾಸ್ಕ್ ಧರಿಸಿಕೊಂಡು ಸೈಕಲ್ನಲ್ಲಿ ಮತಗಟ್ಟೆಗೆ ಬಂದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದರು. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಲು ವಿಜಯ್ ಸೈಕಲ್ನಲ್ಲಿ ಬಂದಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಬಾರೀ ಚರ್ಚೆ ನಡೆಯಿತು.
ಸೈಕಲ್ ನಟ ವಿಜಯ್ ಬಂದಿದ್ದೇಕೆ..?
ಕಾರ್ ಪಾರ್ಕಿಂಗ್ ಸಮಸ್ಯೆಯನ್ನು ತಪ್ಪಿಸಲು ನಟ ವಿಜಯ್ ಅವರು ಸೈಕಲ್ ನಲ್ಲಿ ಬಂದು ಮತ ಚಲಾಯಿಸಿದರು. ಆದರೆ ಮತಗಟ್ಟೆ ಇರುವ ಕಿರಿದಾದ ಬೀದಿಯಲ್ಲಿ ಪಾರ್ಕಿಂಗ್ ತೊಂದರೆ ತಪ್ಪಿಸಲು ವಿಜಯ್ ಸೈಕಲ್ ನಲ್ಲಿ ಬಂದರು ಎಂದು ಅವರ ಪಿ ಆರ್ ಓ ಸ್ಪಷ್ಟಪಡಿಸಿದ್ದಾರೆ.
“ತಲಪತಿ ವಿಜಯ್ ಅವರು ಕಾರನ್ನು ಬಳಸುವ ಬದಲು ಸೈಕಲ್ನಲ್ಲಿ ಹೋಗಲು ನಿರ್ಧರಿಸಿದರು ಏಕೆಂದರೆ ಮತದಾನ ಕೇಂದ್ರವು ಅವರ ನಿವಾಸದ ಪಕ್ಕದಲ್ಲಿಯೇ ಇತ್ತು ಮತ್ತು ಕಾರಿನಲ್ಲಿ ಹೋಗುವುದರಿಂದ ರಸ್ತೆಯಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಬಹುದು. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿರಲಿಲ್ಲ!” – ರಿಯಾಜ್ ಕೆ ಅಹ್ಮದ್ ಟ್ವೀಟ್ ಮಾಡಿದ್ದಾರೆ.
#TNElection #TNElections2021 #TNElection2021 #TNAssemblyElections2021 #tnelectionday #Election2021 #Elections2021 #Thalapathy #Vijay #thalapathyfansteam #Thalapathy @actorvijay @Jagadishbliss @BussyAnand @V4umedia_ pic.twitter.com/H6XVkAkKJm
— RIAZ K AHMED (@RIAZtheboss) April 6, 2021
#ThalapathyVijay arrives in cycle to cast his vote in #TamilNaduElections 👍#Thalapathy #Vijay @actorvijay pic.twitter.com/Y0MfcbNUSn
— Suresh Kondi (@V6_Suresh) April 6, 2021
It's not easy to breath wearing mask, driving cycle under the extreme summer heat. But he did it in style ❤️😊
Its not just a ride. Its a Statement. 🔥🔥💥.
Always proud of you @actorvijay sir.🙏🙏#TamilNaduElections2021#Govote#Thalapathy pic.twitter.com/irMBw789qc
— Rathna kumar (@MrRathna) April 6, 2021
No one wudve expected this!#ThalapathyVijay cycling his way to the booth to cast his vote#TNElection #TNElection2021 #Thalapathy pic.twitter.com/hEgwhSBRqR
— Kaushik LM (@LMKMovieManiac) April 6, 2021
Exclusive Video of #Thalapathy @actorvijay a Polling Booth ! #Master #TamilNaduElections2021
pic.twitter.com/CYmpvvzFSW— THALAPATHY FANS KERALA (@TFK_OfficiaI) April 6, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಕಿಚ್ಚ ಸುದೀಪ..!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದರು. ಕೇವಲ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗಿದ್ದು, ಇತ್ತೀಚೆಗೆ, ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿದ ಸಂಭ್ರಮಾಚರಣೆ ವೇಳೆ ಸಿಎಂ ಯಡಿಯೂರಪ್ಪ ಸುದೀಪ್ ಅವರನ್ನು ಸನ್ಮಾನಿಸಿದ್ದರು.
ಇದನ್ನೂ ಓದಿ | ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು
ಈ ಹಿನ್ನೆಲೆ ಇಂದು (ಗುರುವಾರ) ಕಿಚ್ಚ ಸ್ವತಃ ಯಡಿಯೂರಪ್ಪ ಅವರ ಮನೆಗೆ ಬಂದು ಅಭಿನಂದನೆ ತಿಳಿಸಿ, ಕೆಲ ಕಾಲ ಮಾತುಕತೆ ನಡೆಸಿದ ಅವರು ಸಿಎಂ ಬಿಎಸ್ ಯಡಿಯೂರಪ್ಪಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ7 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ6 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್4 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021