ಬಹಿರಂಗ
ರೈತ ಪ್ರತಿಭಟನೆಯ ಜಾಗತಿಕ ಆಯಾಮ
- ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ
ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ದೇಶದ ರೈತರು ನಡೆಸುತ್ತಿರುವ ಆಂದೋಲನ ಎರಡನೆ ತಿಂಗಳಿಗೆ ಕಾಲಿಟ್ಟಿದೆ. ರೈತರ ಈ ಆಂದೋಲನ ಚಾರಿತ್ರಿಕ ಮಹತ್ವ ಪಡೆದಿದೆ.
ರೈತಾಪಿಯ ಈ ಮುಷ್ಕರ ಕೇವಲ ಕನಿಷ್ಠ ಬೆಂಬಲ ಬೆಲೆಗೆ ಸೀಮಿತವಾದದ್ದಲ್ಲ. ಸಾರ್ವಜನಿಕ ಆಹಾರ ಧಾನ್ಯಗಳ ಸಾರ್ವಜನಿಕ ಸಂಗ್ರಹಣೆ ಮತ್ತು ವಿತರಣೆಯ ವ್ಯವಸ್ಥೆಯ ಉಳಿವಿಗೂ ಈ ಹೋರಾಟ ನಿರ್ಣಾಯಕವಾಗಿದೆ. ಭಾರತದ ಆಹಾರ ಕಣಜ ಎಂದೇ ಹೇಳಬಹುದಾದ ಉತ್ತರ ಭಾರತದ ಆಹಾರ ಧಾನ್ಯ ಉತ್ಪಾದನೆಯ ಆರ್ಥಿಕ ಸಕ್ಷಮತೆಯನ್ನು ಕಾಪಾಡದೆ ಹೋದಲ್ಲಿ ಇಡೀ ದೇಶದ ಸಾರ್ವಜನಿಕ ಆಹಾರ ಸಂಗ್ರಹಣೆ ವಿತರಣೆಯ ಪ್ರಕ್ರಿಯೆ ದುರ್ಬಲವಾಗುತ್ತದೆ. ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಏನೇ ಕೊರತೆ, ಲೋಪದೋಷಗಳಿದ್ದರೂ ಇದು ದೇಶದ ಬಹುಸಂಖ್ಯೆಯ ಜನರಿಗೆ ಜೀವನಾಧಾರ ಒದಗಿಸುತ್ತಿರುವುದನ್ನು ಇಲ್ಲಿ ಗಮನಿಸಬೇಕಿದೆ.
ವಸಾಹತುಕಾಲ ಸ್ಥಿತಿಯ ಮರುನಿರ್ಮಾಣ
ಉತ್ತರದ ಔದ್ಯಮಿಕ ದೇಶಗಳಾದ ಅಮೆರಿಕ, ಕೆನಡಾ ಮತ್ತು ಐರೋಪ್ಯ ಸಂಘಟನೆಯ ರಾಷ್ಟ್ರಗಳಲ್ಲಿ ಅಲ್ಲಿನ ಗ್ರಾಹಕರಿಂದಲೇ ಹೆಚ್ಚಿನ ಬೇಡಿಕೆ ಇರುವ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುವುದಿಲ್ಲ. ಆದರೆ ಈ ದೇಶಗಳ ಹವಾಮಾನಕ್ಕೆ ಅನುಗುಣವಾಗಿ ಅಲ್ಲಿನ ಏಕ ಬೆಳೆಯ ಭೂಮಿಯಲ್ಲಿ ಬೆಳೆಯಲಾಗುವ ಆಹಾರ ಧಾನ್ಯಗಳು ಮತ್ತು ಹೈನು ಉತ್ಪನ್ನಗಳು ಹೇರಳವಾಗಿ ಸಂಗ್ರಹವಾಗಿರುತ್ತವೆ.
ಈ ಧಾನ್ಯಗಳಿಗೆ ಮತ್ತು ಉತ್ಪನ್ನಗಳಿಗೆ ರಫ್ತು ಮಾರುಕಟ್ಟೆಯನ್ನು ಕಂಡುಕೊಳ್ಳುವುದು ಈ ದೇಶಗಳಿಗೆ ಅನಿವಾರ್ಯವಾಗಿರುತ್ತದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಶ್ರೀಮಂತ ರಾಷ್ಟ್ರಗಳು ಭಾರತ ಮತ್ತಿತರ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಒತ್ತಡ ಹೇರುತ್ತಿದ್ದು ಆಹಾರ ಧಾನ್ಯ ಸಂಗ್ರಹಣೆಯ ಪದ್ಧತಿಯನ್ನು ಕೈಬಿಡುವಂತೆ ಒತ್ತಾಯಿಸುತ್ತಿವೆ.
ಬದಲಾಗಿ ಈ ರಾಷ್ಟ್ರಗಳು ಶ್ರೀಮಂತ ರಾಷ್ಟ್ರಗಳಿಂದ ಆಹಾರಧಾನ್ಯಗಳನ್ನು ಆಮದು ಮಾಡಿಕೊಂಡು,ಇಲ್ಲಿನ ಆಹಾರ ಧಾನ್ಯ ಬೆಳೆಯುವ ಭೂಮಿಯನ್ನು ಗುತ್ತಿಗೆ ಕೃಷಿ ಪದ್ಧತಿಗೆ ಒಳಪಡಿಸಿ ರಫ್ತು ಬೆಳೆಗಳನ್ನು ಬೆಳೆಯುವಂತೆ ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಒತ್ತಡಕ್ಕೆ ಕಾರಣವೇನೆಂದರೆ ಈ ಔದ್ಯಮಿಕ ರಾಷ್ಟ್ರಗಳಲ್ಲಿ ಭಾರತದಲ್ಲಿ ಬೆಳೆಯುವಂತಹ ಆಹಾರ ಧಾನ್ಯಗಳನ್ನು ಬೆಳೆಯಲಾಗುವುದಿಲ್ಲ. ಅಂದರೆ ವಸಾಹತು ಕಾಲಘಟ್ಟದ ಆರ್ಥಿಕ ಸನ್ನಿವೇಶವನ್ನು ಪುನರ್ ಸೃಷ್ಟಿಸುವತ್ತ ಔದ್ಯಮಿಕ ರಾಷ್ಟ್ರಗಳು ಮುನ್ನಡೆದಿವೆ.
1990ರ ದಶಕದಲ್ಲಿ ಫಿಲಿಪೈನ್ಸ್ ಮತ್ತು ಹತ್ತು ವರ್ಷಗಳ ನಂತರ ಆಫ್ರಿಕಾ ಖಂಡದ ಬೋಸ್ಟ್ವಾನಾ ದೇಶಗಳು ಈ ರೀತಿಯ ಒತ್ತಡಕ್ಕೆ ಬಲಿಯಾಗಿದ್ದವು. ಈ ಸಂದರ್ಭದಲ್ಲೇ ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಧಾನ್ಯಗಳ ಬೆಳೆಯನ್ನು ಎಥನಾಲ್ ಉತ್ಪಾದನೆಗೆ ಬಳಸಲು ಆರಂಭಿಸಿದ್ದರ ಪರಿಣಾಮವಾಗಿ 2007ರ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆಗಳು ಗಗನಕ್ಕೇರಿದವು. ಆಹಾರ ಧಾನ್ಯಗಳಿಗಾಗಿ ಆಮದು ಪದಾರ್ಥಗಳನ್ನೇ ಅವಲಂಬಿಸಿದ್ದ 37 ದೇಶಗಳಲ್ಲಿ ಹಾಹಾಕಾರ ಉಂಟಾಗಿದ್ದು, ಆಹಾರಕ್ಕಾಗಿ ದಂಗೆಗಳು ಉಂಟಾಗಿದ್ದವು. ನಗರ ಪ್ರದೇಶದ ಜನರು ಹೆಚ್ಚಿನ ಬಡತನಕ್ಕೆ ನೂಕಲ್ಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಆಹಾರ ಭದ್ರತೆ ಅತ್ಯಂತ ಮಹತ್ವದ ಸಂಗತಿಯಾಗಿದ್ದು ಇದನ್ನು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಪ್ಪಿಸುವುದು ಅಪಾಯಕಾರಿಯಾಗುತ್ತದೆ. ಆದಾಗ್ಯೂ ಆಹಾರ ಭದ್ರತೆಯನ್ನು ಸಾಧಿಸಲು ಈ ದೇಶಗಳ ಸಾರ್ವಜನಿಕ ಆಹಾರ ಸಂಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ. ಒಂದು ದಶಕದ ಹಿಂದೆಯಷ್ಟೇ ಭಾರತ ಈ ನಿಟ್ಟಿನಲ್ಲಿ ಜಾಗೃತವಾಗಿ ತನ್ನ ಆಹಾರ ಸಂಗ್ರಹವನ್ನು ಸಂರಕ್ಷಿಸಲು ಯಶಸ್ವಿಯಾಗಿತ್ತು.
2008ರ ಬೆಲೆ ಏರಿಕೆಗೂ ಮುನ್ನ ಆರು ವರ್ಷಗಳ ಕಾಲ ತಟಸ್ಥವಾಗಿದ್ದ ಬೆಂಬಲ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆರ್ಥಿಕ ಪುನಶ್ಚೇತನದ ಪರಿಣಾಮ ಪಂಜಾಬ್ ನಲ್ಲಿ ಜಡಗಟ್ಟಿದ್ದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಿತ್ತು. ಆದರೆ ಬಹುಸಂಖ್ಯೆಯ ಬಡಜನತೆಯನ್ನು “ ಬಡತನ ರೇಖೆಯ ಕೆಳಗಿರುವ ” ಪಡಿತರ ವ್ಯವಸ್ಥೆಯಿಂದ ಹೊರಗುಳಿಯುವಂತೆ ಮಾಡಿದ ಪರಿಣಾಮ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಲಿಲ್ಲ. 2016ರ ನೋಟು ರದ್ದತಿಯಿಂದ ಉಂಟಾದ ನಿರುದ್ಯೋಗ ಮತ್ತು 2020ರ ಕೋವಿದ್ ಪರಿಣಾಮದಿಂದ ಸೃಷ್ಟಿಯಾದ ಉದ್ಯೋಗ ಕೊರತೆ ಆಹಾರ ಧಾನ್ಯಗಳ ಒಟ್ಟಾರೆ ಬೇಡಿಕೆಯ ಪ್ರಮಾಣ ಚಾರಿತ್ರಿಕ ಕುಸಿತ ಕಾಣುವಂತೆ ಮಾಡಿವೆ.
ಭಾರತದ ರೈತಾಪಿ ಯಾವುದೇ ತರ್ಕಬದ್ಧ ಕಾರಣಗಳೇ ಇಲ್ಲದೆ ಅಪ್ರಾಮಾಣಿಕ ವ್ಯಾಪಾರದ ತಂತ್ರಗಾರಿಕೆಗಳಿಗೆ ಬಲಿಯಾಗಬೇಕಾಯಿತು. ಜಾಗತಿಕ ಬೆಲೆಗಳ ಏರುಪೇರುಗಳ ಪರಿಣಾಮ ಭಾರತದ ರೈತರು ತೀವ್ರ ಸಾಲದ ಹೊರೆಗೆ ಸಿಲುಕಿ ಸಂಕಷ್ಟಕ್ಕೀಡಾಗಬೇಕಾಯಿತು. ಪಂಜಾಬ್ ನ ಒಂದು ಗ್ರಾಮದಲ್ಲಿ ಆತ್ಮಹತ್ಯೆಯಿಂದ ತಮ್ಮ ಗಂಡಂದಿರನ್ನು ಕಳೆದುಕೊಂಡ 59 ವಿಧವೆಯರಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳೊಡನೆ ಭಾರತ ಪೈಪೋಟಿ ನಡೆಸುವುದು ತರವಲ್ಲ. ಏಕೆಂದರೆ 1990ರ ದಶಕದಲ್ಲಿ ಈ ಶ್ರೀಮಂತ ರಾಷ್ಟ್ರಗಳು ತಮ್ಮ ಬೆಂಬಲ ಬೆಲೆ ಪದ್ಧತಿಯನ್ನು ಪರಿಷ್ಕರಿಸುವ ಮೂಲಕ ಅಲ್ಲಿನ ರೈತರಿಗೆ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲು ಆರಂಭಿಸಿದ್ದವು.
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಯ ಸಹಾಯಧನವನ್ನು ಕಡಿಮೆ ಮಾಡುವ ಒಪ್ಪಂದದ ಅನುಸಾರ ಈ ರೀತಿ ನೇರ ನಗದು ನೀಡುವುದು ನಿಯಮಗಳ ಉಲ್ಲಂಘನೆಯಾಗಿದ್ದರೂ, ಇದು ಒಡಂಬಡಿಕೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳದಂತೆ ಈ ದೇಶಗಳು ಎಚ್ಚರವಹಿಸಿದ್ದವು. ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಗಮನಿಸದೆಯೇ ಭಾರತ ಮತ್ತಿತರ ರಾಷ್ಟ್ರಗಳು ಈ ಒಡಂಬಡಿಕೆಗೆ ಸಹಿ ಹಾಕಿದ್ದವು.
ಅಮೆರಿಕದ 20 ಲಕ್ಷ ರೈತರಿಗೆ ನೀಡುವ ನೇರ ನಗದು ಸಹಾಯಧನದ ಪ್ರಮಾಣ ಆ ದೇಶದ ಒಟ್ಟು ಕೃಷಿ ಉತ್ಪನ್ನದ ಮೌಲ್ಯದಲ್ಲಿ ಅರ್ಧದಷ್ಟಾಗುತ್ತದೆ. ಇದಕ್ಕೆ ಅಮೆರಿಕದ ಬಜೆಟ್ ನ ಶೇ 1ರಷ್ಟು ನಿದಿ ಬಳಕೆಯಾಗುತ್ತದೆ. ಭಾರತದಲ್ಲಿ ಇದೇ ರೀತಿ ಒಟ್ಟು ಕೃಷಿ ಉತ್ಪಾದನಾ ಮೌಲ್ಯದ ಶೇ 25ರಷ್ಟು ಪ್ರಮಾಣವನ್ನು ಒಂದು ಕೋಟಿ 20 ಲಕ್ಷ ರೈತರಿಗೆ ಸಹಾಯಧನದ ರೂಪದಲ್ಲಿ ನೀಡಿದರೂ ಕೇಂದ್ರ ಬಜೆಟ್ ನಲ್ಲಿ ಶೇ 50ರಷ್ಟು ನಿಧಿಯ ಬಳಕೆಯಾಗುತ್ತದೆ. ಇದು ಆರ್ಥಿಕವಾಗಿ ಅಸಾಧ್ಯವಾಗಿದ್ದು ಆಡಳಿತ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತದೆ.
ಸಮರ್ಪಕ ಬೆಲೆಯ ನಿಷ್ಕರ್ಷೆ
ತಮಗೆ ಅಲ್ಪ ಪ್ರಮಾಣದ ನಗದು ಪಾವತಿ ಮಾಡುವುದನ್ನು ಭಾರತದ ರೈತರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇಶದ ಸಮಸ್ತ ಜನತೆಗಾಗಿ ತಾವು ಬೆಳೆಯುವ ಆಹಾರ ಧಾನ್ಯಗಳಿಗೆ ಸಮರ್ಪಕವಾದ, ತರ್ಕಬದ್ಧವಾದ ಬೆಲೆ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಹಾಗಾದಲ್ಲಿ ಮಾತ್ರ ರೈತರು ತಮ್ಮ ಬೇಸಾಯದ ವೆಚ್ಚವನ್ನು ಸರಿದೂಗಿಸಿ ಸಾಧಾರಣ ಬದುಕು ನಡೆಸಲು ಸಾಧ್ಯವಾಗುತ್ತದೆ.
ಭಾರತದ ಸಂದರ್ಭದಲ್ಲಿ ಬೆಂಬಲ ಬೆಲೆ ಪದ್ಧತಿಯೊಂದೇ ನ್ಯಾಯಯುತವಾಗಿ ಕಾಣುತ್ತದೆ. ಪಂಜಾಬ್ ನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕಕಾರಿ ವಿಷಯವೇ ಆದರೂ ಇಲ್ಲಿ ನೂತನ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸುವುದು ಮುಖ್ಯವಾಗುತ್ತದೆ. ಕಡಿಮೆ ನೀರು ಬಳಕೆಯಾಗುವಂತಹ ಮಾದರಿಗಳನ್ನು ಬಳಸಬೇಕಾಗುತ್ತದೆ. ( ಕೃಷಿ ವಿಜ್ಞಾನಿಗಳು ಕಂಡುಹಿಡಿದಿರುವ Rice Intensification ಪದ್ಧತಿಯಲ್ಲಿ ಭತ್ತ ಬೆಳೆಯಲು ಹೆಚ್ಚಿನ ಸಾವಯವ ಗೊಬ್ಬರವನ್ನು ಬಳಸುವುದು ಮತ್ತು ಹೆಚ್ಚಿನ ಅಂತರದಲ್ಲಿ ಭತ್ತದ ನಾಟಿ ಮಾಡುವುದು, ಚೌಕಾಕಾರದಲ್ಲಿ ನಾಟಿ ಮಾಡುವುದರ ಮೂಲಕ ನಡುವೆ ಹೆಚ್ಚಿನ ಜಲಸಾಂದ್ರತೆಯನ್ನು ತಡೆಗಟ್ಟಿ, ತೇವಾಂಶವನ್ನು ಉಳಿಸಿಕೊಳ್ಳುವುದು, ಅಂತರ್ಜಲ ಸಂರಕ್ಷಣೆಯ ಒಂದು ವಿಧಾನವಾಗಿದೆ-ಅನುವಾದಕ)
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಗಳಲ್ಲಿ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳು ಅಸಂಬದ್ಧ ರೀತಿಯಲ್ಲಿ, ನಿಷ್ಪ್ರಮಾಣವಾದ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳ ಅಡಿಯಲ್ಲೇ ಆಹಾರ ಧಾನ್ಯಗಳ ಬೆಂಬಲ ಬೆಲೆ ನಿರ್ಧರಿಸುವುದನ್ನೂ ಅಳವಡಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಒಂದು ನಿಯಮವಾಗಿದೆ.
2018ರಲ್ಲಿ ವಿಶ್ವ ವಾಣಿಜ್ಯ ಸಂಸ್ಥೆಗೆ ಭಾರತದ ವಿರುದ್ಧ ದೂರು ಸಲ್ಲಿಸಿದ್ದ ಅಮೆರಿಕ ಸರ್ಕಾರ, ಭಾರತದಲ್ಲಿ 1986-88ರ ಮೂಲ ಬೆಲೆಯನ್ನೇ ಆಧಾರವಾಗಿಟ್ಟುಕೊಂಡು, ಅಂದಿನ ಡಾಲರ್ ಮೌಲ್ 12.5 ರೂಗಳಿಗೆ ಅನುಗುಣವಾಗಿ ಭಾರತ 2013-14ರಲ್ಲಿ ಭತ್ತ ಮತ್ತು ಗೋಧಿಗೆ ಒಂದು ಕ್ವಿಂಟಾಲಿಗೆ ಕ್ರಮವಾಗಿ 235 ರೂ ಮತ್ತು 354 ರೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು. ಆದರೆ ಭಾರತದಲ್ಲಿ ಈ ವೇಳೆಗೆ ಬೆಂಬಲ ಬೆಲೆ ಕ್ರಮವಾಗಿ 1348 ರೂ ಮತ್ತು 1386 ರೂಗಳಷ್ಟಿತ್ತು.
ಕ್ವಿಂಟಲ್ಗೆ ಒಂದು ಸಾವಿರ ರೂ ಹೆಚ್ಚಾಗಿತ್ತು. ಇದನ್ನು 2013-14ರ ಭತ್ತ ಮತ್ತು ಗೋಧಿ ಉತ್ಪನ್ನದ ಒಟ್ಟು ಮೌಲ್ಯದೊಡನೆ ಗುಣಾಕಾರ ಮಾಡಿದರೆ ಇದು ಒಟ್ಟು ಉತ್ಪಾದನೆಯ ಶೇ 77 ಮತ್ತು ಶೇ 67ರಷ್ಟಾಗುತ್ತದೆ. ಈ ಲೆಕ್ಕಾಚಾರವನ್ನು ವಿಶ್ವ ವಾಣಿಜ್ಯ ಸಂಸ್ಥೆಯ ಮುಂದಿರಿಸಿದ್ದ ಅಮೆರಿಕ ಸರ್ಕಾರ , ಭಾರತದ ಈ ನೀತಿ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ನಿಗದಿಪಡಿಸಿರುವ ಗರಿಷ್ಟ ಶೇ 10ರಷ್ಟು ಬೆಂಬಲ ನೀಡುವ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.
ಎರಡು ತಿಂಗಳ ಹಿಂದೆ ಅಮೆರಿಕ ಭಾರತಕ್ಕೆ ಮತ್ತಷ್ಟು ಹೊಸ ಸವಾಲುಗಳನ್ನು ಹಾಕಿದೆ. ದುರ್ಬಲ ಅಭಿವೃದ್ಧಿಶೀಲ ದೇಶಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಕೃಷಿ ಒಡಂಬಡಿಕೆಯಲ್ಲಿ ಅಪ್ರಮಾಣಿಕವಾದ, ಅಸಂಬದ್ಧ ನಿಯಮಗಳನ್ನು ಅಳವಡಿಸಲಾಗಿದೆ.
ಭಾರತದ ರೈತರು ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದಲ್ಲಿ ಆಹಾರ ಉತ್ಪನ್ನ ಮಾಡುತ್ತಿದ್ದು 2013-14ರಲ್ಲಿ 60.5ರಷ್ಟಿದ್ದ ಡಾಲರ್ ಮೌಲ್ಯಕ್ಕೆ ತುಲನೆ ಮಾಡಿದರೆ ಭಾರತ ನೀಡುತ್ತಿರುವ ಬೆಂಬಲ ಬೆಲೆ ಜಾಗತಿಕ ಬೆಲೆಗಳಿಗಿಂತಲೂ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಅಂದರೆ ವಾಸ್ತವವಾಗಿ ಬೆಂಬಲ ಬೆಲೆ ನಕಾರಾತ್ಮಕವಾಗಿಯೇ ಕಂಡುಬರುತ್ತದೆ.
ಪ್ರಸ್ತುತ ಸಂದರ್ಭದಲ್ಲಿ ಜಾಗತಿಕ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ನೋಡಿದಾಗ ಭತ್ತ ಮತ್ತು ಗೋಧಿಯ ಬೆಲೆಗಳು ಚಾರಿತ್ರಿಕ ಕುಸಿತ ಕಂಡಿವೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ಶ್ರೀಮಂತ ದೇಶಗಳಲ್ಲಿ ಕೃಷಿ ಸಹಾಯಧನ ತೀವ್ರ ಹೆಚ್ಚಳ ಕಂಡಿದೆ. ಈ ಹಿನ್ನೆಲೆಯಲ್ಲೇ ಈ ದೇಶಗಳು ತಮ್ಮ ಕೃಷಿ ಉತ್ಪನ್ನಗಳನ್ನು ಭಾರತದಂತಹ ದೇಶಗಳ ಮಾರುಕಟ್ಟೆಗಳಲ್ಲಿ ತಂದು ಸುರಿಯಲು ಹತಾಶರಾಗಿವೆ.
ಈ ದೃಷ್ಟಿಯಿಂದ ನೋಡಿದಾಗ ಭಾರತದ ರೈತ ಸಂಘಟನೆಗಳು ತಾವು ವಿರೋಧಿಸುತ್ತಿರುವ ಮೂರು ಕೃಷಿ ಮಸೂದೆಗಳಿಂದ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಲಾಭವಾಗುತ್ತದೆ ಎನ್ನುವುದನ್ನು ಸರಿಯಾಗಿ ಗುರುತಿಸಿದ್ದು, ವಿದೇಶಿ ಕೃಷಿ ಉದ್ದಿಮೆಗಳು ಭಾರತದ ಕೃಷಿ ವ್ಯವಸ್ಥೆಗೆ ಮಾರಕವಾಗುವುದನ್ನೂ ಸಮರ್ಪಕವಾಗಿ ಗುರುತಿಸಿವೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ರೈತರು ವಿದೇಶಿ ಕೃಷಿ ಉದ್ದಿಮೆಗಳೊಡನೆ ಗುತ್ತಿಗೆ ಕೃಷಿಯನ್ನು ನಡೆಸಿ ಅದರ ದುಷ್ಪರಿಣಾಮಗಳನ್ನು ಎದುರಿಸಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಬೆಲೆ ಮತ್ತು ಗುಣಮಟ್ಟದ ಬಗ್ಗೆ ಒಪ್ಪಿತ ನಿಯಮಗಳನ್ನೂ ಉಲ್ಲಂಘಿಸುವ ಮೂಲಕ ರೈತರಿಗೆ ವಂಚಿಸುವ ಈ ಅಗೋಚರ ಖಾಸಗಿ ಕಾರ್ಪೋರೇಟ್ ಉದ್ದಿಮೆಗಳೊಡನೆ ತಾವು ಯಾವುದೇ ರೀತಿಯಲ್ಲೂ ವ್ಯವಹರಿಸಲು ಸಿದ್ಧರಾಗಿಲ್ಲ ಎಂದು ರೈತ ಸಮುದಾಯ ಸ್ಪಷ್ಟವಾಗಿ ಹೇಳಿದೆ.
ಎಷ್ಟೇ ಅದಕ್ಷತೆ ಇದ್ದರೂ, ಹಣ ಪಾವತಿಯಲ್ಲಿ ವಿಳಂಬ ಉಂಟಾದರೂ, ತಮ್ಮ ಉತ್ಪನ್ನಗಳನ್ನು ಸರ್ಕಾರಿ ಏಜೆಂಟರಿಗೆ ನಿಗದಿತ ಬೆಂಬಲ ಬೆಲೆಗೆ ಮಾರಾಟ ಮಾಡಲು ರೈತರು ಸಿದ್ಧರಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳ ಅನುಸಾರ ಮಾರುಕಟ್ಟೆ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದರೆ ಕೃಷಿ ಕ್ಷೇತ್ರದಲ್ಲಿ ಸ್ಥಳೀಯ ಉದ್ದಿಮೆಗಳೊಡನೆ ವಿದೇಶಿ ಕೃಷಿ ಉದ್ದಿಮೆಗಳೂ ಪ್ರವೇಶಿಸುತ್ತವೆ, ಇದರಿಂದ ಕನಿಷ್ಟ ಬೆಂಬಲ ಬೆಲೆ ಪದ್ಧತಿಗೂ ಪೆಟ್ಟಾಗುವುದಲ್ಲದೆ, ಸಾರ್ವಜನಿಕ ಸಂಗ್ರಹಣೆಯ ಪದ್ಧತಿಯೂ ಇಲ್ಲವಾಗುತ್ತದೆ ಎನ್ನುವ ರೈತರ ಆತಂಕ ನ್ಯಾಯಯುತವಾಗಿದೆ.
ಸಹಾಯಧನ ಪಡೆಯುವ ವಿದೇಶಿ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರಿಂದ ಭಾರತದಲ್ಲಿನ ಬಡ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹಲವು ಕೃಷಿ ವಿಶ್ಲೇಷಕರು ಪ್ರತಿಪಾದಿಸುತ್ತಾರೆ. ಆದರೆ ಈ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳಲ್ಲಿ ಹಸಿರು ಇಂಧನ ಬಳಕೆಯ ಆಗ್ರಹ ಹೆಚ್ಚಾಗುತ್ತಿದ್ದು ಹೆಚ್ಚಿನ ಪ್ರಮಾಣದ ಆಹಾರ ಧಾನ್ಯಗಳನ್ನು ಎಥನಾಲ್ ಉತ್ಪಾದನೆಗೆ ಬಳಕೆಯಾಗುತ್ತದೆ ಎನ್ನುವ ವಾಸ್ತವಾಂಶವನ್ನು ಈ ತಜ್ಞರು ಮರೆಮಾಚುತ್ತಿದ್ದಾರೆ.
ಹಾಗಾಗಿ ಇಂದು ಕಡಿಮೆ ಬೆಲೆಯ ಆಹಾರ ಧಾನ್ಯಗಳ ಆಮದು ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂಬರುವ ದಿನಗಳಲ್ಲಿ ಇದರಿಂದ ಭಾರತದ ರೈತರು ವಿನಾಶದ ಅಂಚಿಗೆ ತಲುಪುವುದೇ ಅಲ್ಲದೆ, ಬೆಲೆ ಏರಿಕೆ ತೀವ್ರವಾಗಿ ಈ ಹಿಂದೆ ಕೆಲವು ಅಭಿವೃದ್ಧಿಶೀಲ ದೇಶಗಳು ಎದುರಿಸಿದ್ದ ಸಂಕಷ್ಟಗಳನ್ನೇ ಭಾರತವೂ ಎದುರಿಸಬೇಕಾಗುತ್ತದೆ. ತಮ್ಮ ಬೆವರು ಹರಿಸಿ ವ್ಯವಸಾಯದಲ್ಲಿ ತೊಡಗಿರುವ ಭಾರತದ ರೈತಾಪಿಯ ಬಗ್ಗೆ ಕಾಳಜಿ ಇರುವ ಯಾರೇ ಆದರೂ ಈ ಕೃಷಿ ಮಸೂದೆಗಳನ್ನು ವಿರೋಧಿಸುವುದೇ ಅಲ್ಲದೆ, ಸ್ಥಳೀಯ ಮತ್ತು ವಿದೇಶಿ ಉದ್ಯಮಿಗಳ ಕುತಂತ್ರಗಳ ವಿರುದ್ಧ ದನಿ ಎತ್ತಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243