ರಾಜಕೀಯ
ಬ್ರೇಕಿಂಗ್ | ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ ; ವಿಧಾನ ಸೌಧದಲ್ಲಿ ಕಮೀಷನ್ ದಂಧೆ ನಡೀತಿದೆ : ಬಿ.ಎಸ್.ವೈ ಕಿಡಿ
ಸುದ್ದಿದಿನ, ಬಾಗಲಕೋಟೆ : ಸಿಎಂ ಎಚ್ ಡಿ ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದ್ದು, ಸರ್ಕಾರಿ ನೌಕರರಿಗೆ ಸಂಬಳ ಕೊಡಲಿಕ್ಕೂ ಆಗದಂತಹ ಸ್ಥಿತಿ ನಿರ್ಮಾಣಮಾಡಿದ್ದಾರೆ. ರಾಜ್ಯ ದ ಜನತೆಗೆ ನಾವು ವಾಸ್ತವ ಸ್ಥಿತಿ ತಿಳಿಸ್ತಿದ್ದೇವೆ. ಹಾಗೇ ಯಾವುದೇ ಗುತ್ತಿಗೆದಾರರು ಸರ್ಕಾರದ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಸಿಎಂ ಎಚ್ ಡಿಕೆ ಕುಮಾರಸ್ವಾಮಿ ವಿರುದ್ಧ ಬಾಗಲಕೋಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಮೈತ್ರಿ ಸರ್ಕಾರದ ಕಚ್ಚಾಟ ಧಾರಾವಾಹಿಯಂತೆ
ಸಚಿವ ರಮೇಶ್ ಜಾರಕಿಹೊಳಿ 12 ಶಾಸಕರೊಂದಿಗೆ ಬಿಜೆಪಿಗೆ ಸೇರುವ ವಿಚಾರವಾಗಿ ಮಾತನಾಡಿದ ಅವರು”ಈ ಬಗ್ಗೆ ನನಗೇನು ಗೊತ್ತಿಲ್ಲ. ನಿಮ್ಮಿಂದ ಈ ವಿಚಾರ ಈಗ ನನಗೆ ತಿಳಿದಿದೆ ಎಂದರು”. ಒಂದು ವೇಳೆ ರಮೇಶ್ ಜಾರಕಿಹೊಳಿ & ಟೀಮ್ ಬಂದ್ರೆ ನಿಮ್ಮ ನಿಲುವೇನು ಎನ್ನುವ ಪ್ರಶ್ನೆಗೆ ಬಿಎಸ್ವೈ ಪ್ರತಿಕ್ರಿಯೆ ನೀಡಿದ ಬಿ.ಎಸ್.ವೈ “ಈಗಲೇ ಆ ನಿರ್ಧಾರ ಹೇಳಲಿಕ್ಕೆ ಆಗೋಲ್ಲ. ಮೈತ್ರಿ ಸರ್ಕಾರದಲ್ಲಿ ಪರಸ್ಪರ ಕಚ್ಚಾಟ, ಗುದ್ದಾಟ ಇರುವುದಂತೂ ಸತ್ಯ. ಮೈತ್ರಿ ಸರ್ಕಾರ ದ ಕಚ್ಚಾಟ ಧಾರಾವಾಹಿ ಯಂತೆ ದೃಶ್ಯ,ಮುದ್ರಣ ಮಾಧ್ಯಮ ದಲ್ಲಿ ಬರ್ತಿದೆ. ಕಾಂಗ್ರೆಸ್ ಸಭೆಯ ವಾಸ್ತವ ಸ್ಥಿತಿ ನನಗೆ ಗೊತ್ತಿಲ್ಲ. ಈ ಸಮಯದಲ್ಲಿ ನಾನು ಟೀಕೆ ಟಿಪ್ಪಣಿ ಮಾಡಿದ್ರೆ ತಪ್ಪಾಗುತ್ತೆ. ಅವರು ಏನು ನಿರ್ಧಾರ ತಗೆದುಕೊಳ್ತಾರೆ ಅನ್ನೋದು ಕಾದುನೋಡೋಣ” ಎಂದರು.
ವಿಧಾನಸೌಧದಲ್ಲಿ ಕಮೀಷನ್ ದಂಧೆ
ವರ್ಗಾವಣೆ ದಂಧೆ ಬಿಎಸ್ವೈ ಆರೋಪಕ್ಕೆ ಸಚಿವ ಎಚ್ ಡಿ ರೇವಣ್ಣ ಹೇಳಿಕೆ ವಿಚಾರವಾಗಿ ಮಾತನಾಡುತ್ತಾ “ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ನಾನು ಹೇಳುತ್ತಿಲ್ಲ. ಮಾಧ್ಯಮಗಳಲ್ಲೇ ಈ ಬಗ್ಗೆ ಬಂದಿದೆ.ವಾಸ್ತವ ಸತ್ಯಾಂಶ ನನಗೂ ಗೊತ್ತಿದೆ, ಮಾಧ್ಯಮದವರಿಗೂ ಗೊತ್ತಿದೆ. ಯಡಿಯೂರಪ್ಪ ಆರೋಪ ಮಾಡೋದಲ್ಲ ಅದು ಎಂದರು.” ಹಾಗೇ ವಿಧಾನಸೌಧದಲ್ಲಿ ಕಮೀಶನ್ ದಂಧೆ ನಡೆಯುತ್ತಿದೆ ಎಂಬ ಬಾಂಬ್ ಸಿಡಿಸಿದ ಬಿ.ಎಸ್.ವೈ “ವಿರೋಧಪಕ್ಷದ ನಾಯಕನಾಗಿ ಹೇಳುತ್ತಿದ್ದೇನೆ. ನಾನು ಸಂಪರ್ಕ ಮಾಡುವ ಅಧಿಕಾರಿಗಳು ಹೇಳ್ತಿದ್ದಾರೆ. ವರ್ಗಾವಣೆ ದಂಧೆ,ಹಾಗೂ ಕಮೀಶನ್ ಕೊಡದೆ ವಿಧಾನಸೌಧದಲ್ಲಿ ಯಾವುದೇ ಕೆಲಸವಾಗ್ತಿಲ್ಲ ಎಂದರು’. ರೆಫೆಲ್ ಯುದ್ಧ ಹಗರಣ ಕುರಿತು ಕೆ.ಸಿ. ವೇಣುಗೋಪಾಲ ಪ್ರತಿಭಟನೆ ಮಾಡುವ ಹೇಳಿಕೆ ವಿಚಾರ. ಅವರಿಗೆ ಬೇರೆ ಕೆಲಸವಿಲ್ಲ. ಅದಕ್ಕೆ ಪ್ರತಿಭಟನೆ ಮಾಡ್ತಾರೆ ಎಂದು ಗುಡುಗಿದರು.
ಸಿ.ಎಂ ಬೆಂಗಳೂರಲ್ಲಷ್ಟೇ ರಾಜಕಾರಣ
ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಭೇಟಿ ನೀಡಿಲ್ಲ. ರಾಜಕೀಯ ಜಂಜಾಟದಲ್ಲಿ ಸಿಎಂ ಮುಳುಗಿದ್ದಾರೆ. ರಾಹುಲ್ ಗಾಂಧಿ ದೇಶದಲ್ಲಿ ಏನು ಕೆಲ್ಸ ವಾಗಿಲ್ಲ ವೆಂದು ಮಾತನಾಡುತ್ತಿದ್ದಾರೆ. ಆದ್ರೆ ಮೋದಿ ಸರ್ಕಾರ ಹಿಂದಿನ ಸರ್ಕಾರ ಕ್ಕಿಂತ ದೇಶ ಅಭಿವೃದ್ಧಿ ಕಾಣ್ತಿದೆ. ಮನಮೋಹನ್ ಸರ್ಕಾರ ಕ್ಕಿಂತಲೂ ನಮ್ಮ ಸರ್ಕಾರ ಸಾಧನೆ ಮಾಡಿದೆ.ಜಿಡಿಪಿ ದರದಲ್ಲೂ ಮುಂದಿದೆ. ಸಿಎಂ
ನೀರಾವರಿಗೆ ಆದ್ಯತೆ ಕೊಟ್ಟಿಲ್ಲ.ರಾಜ್ಯ ದಲ್ಲಿ ಹಿಂದೆಂದೂ ಕಾಣದ ಸರ್ಕಾರವಿದೆ. ಕೇವಲ ಬೆಂಗಳೂರಲ್ಲಿ ಸಿಎಂ ರಾಜಕಾರಣ ಮಾಡುತ್ತಿದ್ದಾರೆ. ಜಿಲ್ಲೆಗಳಕಡೆ ಗಮನ ಹರಿಸುತ್ತಿಲ್ಲ. ಜಿಲ್ಲಾಮಂತ್ರಿಗಳು ಜಿಲ್ಲಾಮಟ್ಟಕ್ಕೆ ಹೋಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243