ರಾಜಕೀಯ
ಗೌಡರ ‘ಗಿಮಿಕ್ ಪಾಲಿಟಿಕ್ಸ್’

ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಾವು ಬೇಸಿಗೆಯ ಬಿರು ಬಿಸಿಲಿಗಿಂತ ಹೆಚ್ಚಾಗಿ ಕಾವೇರಿದೆ. ರಾಜ್ಯದ ದಿಗ್ಗಜ ರಾಜಕೀಯ ನಾಯಕರು ಈ ಬಾರಿ ಚುನಾವಣೆಯಲ್ಲಿ ಗೆಲ್ಲಲೆ ಬೇಕೆಂದು ಪಣ ತೊಟ್ಟು ಚುನಾವಣಾ ಅಖಾಡಕ್ಕೆ ಧುಮುಕ್ಕಿದ್ದಾರೆ. ಈಬಾರಿಯ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ರಾಮನಗರ ರಾಜಕೀಯ ಚುನಾವಣೆಗೂ ಮುಂಚೆಯೇ ಪರೋಕ್ಷ ಫಲಿತಾಂಶ ಹರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ
ಕುಮಾರ ಸ್ವಾಮಿ ಹಾಗೂ ಇಂಧನ ಸಚಿವ ಡಿ.ಕೆ ಶಿವಕುಮಾರ್ ಈ ಬಾರಿ ರಾಜಕೀಯ ಚದುರಂಗಕ್ಕೆ ಗೋಲಿ ಹೋಡೆದಿದ್ದಾರೆ. ರಾಮನಗರದಲ್ಲಿ ಈ ಬಾರಿ ಜಿದ್ದಾ ಜಿದ್ದಿ ಎಲೆಕ್ಷನ್ ನಡೆಯುತ್ತದೆ ಎಂದು ಭಾವಿಸಿದವರು ಬಾಯ್ಮುಚ್ಚಿ ಕುಳಿತ್ತಿದ್ದಾರೆ. ರಾಜಕೀಯ ಬದ್ದ ವೈರಿಗಳೆಂದೆ ಭಾವಿಸಿದ್ದ ಈ ನಾಯಕರು ಸದ್ದಿಲ್ಲದೆ ಒಳ ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾತು ರಾಮನಗರ ರಾಜಕೀಯದಲ್ಲಿ ಕೇಳಿಬರುತ್ತಿದೆ.
ಇದಕ್ಕೆ ಪೂರಕವೆಂಬತೆ ಕನಕಪುರದಲ್ಲಿ ನಾಮಕಾವಸ್ಥೆಗೆ ಜೆಡಿಎಸ್ ಆಭ್ಯಥಿಯನ್ನಾಗಿ ನಾರಯಣಗೌಡರನ್ನು ಕಣಕ್ಕಿಳಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಅಲ್ಲದೆ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಅವರನ್ನು ಕಣಕಿಳಿಸಿದ್ದಾರೆ ಡಿಕೆಶಿ ಎರಡು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಲ್ಲಿ ತಮ್ಮ ಡಮ್ಮಿ ಅಭ್ಯರ್ಥಿಗಳ ಮುಂದೆ ರಾಜಕೀಯ ಮಾಡುತ್ತಿದ್ದಾರೆ. ಇನ್ನೂ ಚನ್ನ ಪಟ್ಟಣದ ವಿಚಾರಕ್ಕೆ ಬಂದರೆ ಕಾಂಗ್ರೆಸ್ನಿಂದ ಸಾರಿಗೆ ಸಚಿವ ಎಚ್ ಎಮ್ ರೇವಣ್ಣ ಅವರನ್ನು ಅಭ್ಯರ್ಥಿಯಾಗಿ ಮಾಡಿ ಬಲಿಪಶುವಮಾಡಿದ್ದಾರೆ. ಏಕೆಂದರೆ ಈ ಭಾರಿ ಶತಾಯಗತಾಯ. ಚನ್ನಪಟ್ಟಣದಲ್ಲಿ ಸಿಪಿ ಯೋಗೆಶ್ವರ್ ಅವರನ್ನು ಸೋಲಿಸಲೇ ಬೇಕೆಂದು ಡಿಕೆ ಶಿವಕುಮಾರ್ ಹಾಗೂ ಕುಮಾರಸ್ವಾಮಿ ತೆರೆಮರೆಯಲ್ಲಿ ಆಟವಾಡುತ್ತಿದ್ದಾರೆ. ಸ್ವಹಿತ ರಾಜಕೀಯಕ್ಕೆ ಇಬ್ಬರು ನಾಯಕರು ರಾಮನಗರದ ಜನರನ್ನು ಮೂರ್ಖರನ್ನಗಿ ಮಾಡುತ್ತಿದ್ದಾರೆ. ಈ ಇಬ್ಬರು ನಾಯಕರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು ರಾಜ್ಯದಲ್ಲಿ ಪ್ರಬಲ ಒಕ್ಕಲಿಗ ನಾಯಕರಾಗಿದ್ದಾರೆ. ಇನ್ನೂ ಯೋಗೇಶ್ವರ್ ಸಹ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು ಇವರು ಪ್ರಬಲಾಗದಂತೆ ಮಾಡುವುದೆ ಇವರ ಉದ್ದೇಶವಾಗಿದೆ.
ರಾಮನಗರದಲ್ಲಿ ಇದುವರೆಗೂ ಬೇರೆ ನಾಯಕರು ಬೆಳೆಯದ ಹಾಗೆ ನೋಡಿ ಕೊಂಡಿರು ಎಚ್ಡಿಕೆ ಮುಂದಿನ ದಿನಗಳಲ್ಲಿ ರಾಮನಗರವನ್ನು ತನ್ನ ಕುಟುಂಬ ರಾಜಕೀಯಕ್ಕೆ ಕೇಂದ್ರವಾಗಿ ಮಾಡಿಕೋಳ್ಳೊ ಸಾಧ್ಯತೆಯನ್ನು ತಳ್ಳಿ ಹಾಕುವ ಹಾಗಿಲ್ಲ. ಇನ್ನೂ ಕನಕಪುರದಲ್ಲಿಯು ಸಹ ಇದುವರೆಗೂ ಯಾವ ನಾಯಕರು ಬೆಳೆಯದಂತೆ ನೋಡಿಕೊಂಡಿರು ಡಿಕೆಶಿ ಅಧಿಕಾರವನ್ನು ತನ್ನ ಕುಟುಂಬದಲ್ಲೇ ಹಿಡಿತದಲ್ಲೆ ಇಟ್ಟುಕೊಂಡಿದ್ದಾರೆ. ಕನಕಪುರದ ಜನ ಇವರ ಅಧಿಕಾರದ ದರ್ಪಕ್ಕೆ ಹೆದರಿ ಇವರ ವಿರುದ್ದ ತಿರುಗಿಬೀಳುವ ಸಾಹಸಕ್ಕೆ ಕೈಹಾಕಿಲ್ಲ. ಅಭಿವೃದ್ಧಿ ಹೆಸರಲ್ಲಿ ಕನಕಪುರದ ಎಲ್ಲಾ ಸರ್ಕಾರಿ ಕಾಮಗಾರಿಗಳ ಗುತ್ತಿಗೆಗಳನ್ನು ತನ್ನ ಚೇಲಾಗಳಿಗೆ ಮೀಸಲಿಟ್ಟಿರುವ ಡಿಕೆಶಿ ಸರ್ಕಾರದ ಕೆಲಸಗಳನ್ನು ತನ್ನ ಸಂಭಂದಿಗಳಿಗೆ ಮಿಸ್ ಅಗದ ಹಾಗೇ ನೋಡಿಕೊಂಡಿದ್ದಾರೆ. ತನಗೆ ಬೇಕಾದ ಅಧಿಕಾರಿಗಳನ್ನೆ ಕನಕಪುರದಲ್ಲಿ ಹಾಕಿಸಿಕೊಂಡು ಕನಕಾಸುರನಾಗಿ ಮೆರೆಯುತ್ತಿರುವ ಡಿಕೆಶಿಗೆ ಅಲ್ಲಿನ ಜನ ತಿರುಗಿ ಬೀಳದೆ ಇದ್ದರೆ ಕೋಟಿಗಟ್ಟಲೆ ಸಂಪಾದಿಸಿ ಮುಂದಿನ ಚುನಾವಣೆ ವೇಳೆಗೆ 5000 ಸಾವಿರ ಕೋಟಿಯ ಆಸ್ತಿಯನ್ನು ಘೋಷಿಸಿದರು ಆಶ್ಚರ್ಯ ಪಡಬೇಕಾಗಿಲ್ಲ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ದಿನದ ಸುದ್ದಿ7 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ7 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್7 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ6 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ಲೈಫ್ ಸ್ಟೈಲ್5 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ6 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು
-
ರಾಜಕೀಯ4 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು