ದಿನದ ಸುದ್ದಿ
ಜಿ ಎಸ್ ಟಿ ವಿರೋಧಿಸಿ ಸಿಎಐಟಿ ಫೆ. 26ರಂದು ಭಾರತ್ ಬಂದ್ ಗೆ ಕರೆ : ಎಐಟಿಡಬ್ಲ್ಯುಎ ಬೆಂಬಲ
ಸುದ್ದಿದಿನ, ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಈ ತಿಂಗಳ 26ರಂದು ಕರೆ ನೀಡಿರುವ ಭಾರತ ಬಂದ್ಗೆ ಭಾರತದ ರಸ್ತೆ ಸಾರಿಗೆ ವಲಯದ ಅತ್ಯುನ್ನತ ಸಂಸ್ಥೆಗಳಲ್ಲೊಂದಾದ ಆಲ್ ಇಂಡಿಯಾ ಟ್ರಾನ್ಸ್ಪೋರ್ಟರ್ಸ್ ವೆಲ್ಫೇರ್ ಅಸೋಸಿಯೇಶನ್ (ಎಐಟಿಡಬ್ಲ್ಯುಎ) ಬೆಂಬಲ ಫೋಷಿಸಿದೆ. ಅದೇ ದಿನ ಛಕ್ಕಾ ಜಾಮ್ ಅಥವಾ ರಸ್ತೆ ತಡೆ ನಡೆಸಲು ನಿರ್ಧರಿಸಲಾಗಿದೆ.
“ಇಂಧನ ದರ ಏರಿಕೆ ಮತ್ತು ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಇ-ವೇ ಬಿಲ್ ಕಾನೂನುಗಳ ವಿರುದ್ಧ ಎಐಟಿಡಬ್ಲ್ಯುಎ ಕರೆ ನೀಡಿರುವ ಒಂದು ದಿನದ ಸಾರಿಗೆ ಅಸಹಕಾರಕ್ಕೆ ಎಲ್ಲ ರಾಜ್ಯಮಟ್ಟದ ಸಾರಿಗೆ ಸಂಘಗಳು ಬೆಂಬಲ ದೃಢಪಡಿಸಿವೆ. ಪ್ರತಿಭಟನೆಯ ಸ್ವರೂಪ ಎಲ್ಲ ಬುಕ್ಕಿಂಗ್ ತಿರಸ್ಕರಿಸುವುದು ಮತ್ತು ಇ-ಬಿಲ್ ಕೇಂದ್ರಿತ ಸರಕುಗಳ ಸಾಗಾಣಿಕೆಯನ್ನು ಒಂದು ದಿನ ತಿರಸ್ಕರಿಸುವುದ್ದಾಗಿರುತ್ತದೆ.
ಎಲ್ಲ ಸಾರಿಗೆ ಕಂಪನಿಗಳು ಸಾಂಕೇತಿಕ ಪ್ರತಿಭಟನಾರ್ಥವಾಗಿ ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಟ್ರಕ್ಗಳನ್ನು ನಿಲ್ಲಿಸಲು ಕೋರಲಾಗಿದೆ. ಎಲ್ಲ ಸಾರಿಗೆ ಗೋದಾಮುಗಳು ಪ್ರತಿಭಟನೆ ಬ್ಯಾನರ್ಗಳನ್ನು ಪ್ರದರ್ಶಿಸಲಿವೆ. 2021ರ ಫೆಬ್ರುವರಿ 26ರಂದು ಯಾವುದೇ ಸರಕು ಸಾಗಾಣಿಕೆ ಬುಕ್ಕಿಂಗ್ ಮಾಡದಂತೆ ಅಥವಾ ಲೋಡ್ ಮಾಡದಂತೆ ಎಲ್ಲ ಗ್ರಾಹಕರಿಗೆ ಸಾರಿಗೆ ಕಂಪನಿಗಳು ಮನವಿ ಮಾಡಿಕೊಳ್ಳಲಿವೆ” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಪ್ರಕಟಣೆಯಲ್ಲಿ ಹೇಳಿದ್ದಾರೆ.
ದೇಶಾದ್ಯಂತ ಸರಕು ಸಾಗಾಣಿಕೆದಾರರು ಇತ್ತೀಚೆಗೆ ತಿದ್ದುಪಡಿ ತಂದಿರುವ ಜಿಎಸ್ಟಿ ಕಾನೂನುಗಳನ್ನು ಬಳಸುತ್ತಾ ಬಂದಿದ್ದರೆ. ಇದು ಅಂತರ ರಾಜ್ಯ ಮತ್ತು ರಾಜ್ಯದೊಳಗೆ ಸರಕು ಸಾಗಾಣಿಕೆಗೆ ಇರುವ ಇ-ವೇ ಬಿಲ್ಗಳ ಮಾನ್ಯತೆಯನ್ನು ದಿನಕ್ಕೆ 200 ಕಿಲೋಮೀಟರ್ಗಳಿಂದ 100 ಕಿಲೋಮೀಟರ್ಗೆ ಅರ್ಧ ಮಾಡಿದೆ. ಸಿಜಿಎಸ್ಟಿ ಕಾಯ್ದೆ-2017ರ ಸೆಕ್ಷನ್ 129ರ ಅನ್ವಯ ಅವಧಿ ಮೀರಿದ ಇ-ವೇ ಬಿಲ್ಗಳನ್ನು ಹೊಂದಿ, ಸರಕು ಸಾಗಾಣಿಕೆ ಮಾಡುವ ಟ್ರಕ್ಗಳಿಗೆ ವಿಧಿಸುವ ದಂಡ ಅಥವಾ ದೋಷಪೂರಿತ ಇ-ವೇ ಬಿಲ್ ಮೊತ್ತವಿರುವ ಪ್ರಕರಣಗಳಲ್ಲಿ ವಿಧಿಸುವ ದಂಡವನ್ನು ತೆರಿಗೆ ಮೊತ್ತದ ಪ್ರತಿಶತ 200 ಅಥವಾ ಇನ್ವೈಸ್ ಮೌಲ್ಯದ ಶೇಕಡ 100ರಷ್ಟು ಆಗಿರುತ್ತದೆ.
ಸಣ್ಣ ಹಾಗೂ ಮಧ್ಯಮ ಪ್ರಮಾಣದ ಸಾರಿಗೆದಾರರು ಅದರಲ್ಲೂ ಮುಖ್ಯವಾಗಿ ಸರಕುಗಳ ಭಾಗಶಃ ಲೋಡ್ ಸಾಗಾಣಿಕೆ ಮಾಡುವ ಸಾಗಾಣಿಕೆದಾರರು ಅಥವಾ ಚಿಲ್ಲರೆ ಸಾಗಾಣಿಕೆದಾರರು ಹೊಸ ನಿಯಮಾವಳಿಗೆ ಬದ್ಧರಾದಲ್ಲಿ, ಅವರ ಮೇಲಿನ ಬದ್ಧತೆಯ ಹೊರೆ ಅಧಿಕ ಹಾಗೂ ದುಬಾರಿಯಾಗಲಿದೆ. ಪರಿಸ್ಥಿತಿಗೆ ಅನುಗುಣವಾದ ವಿಳಂಬಕ್ಕೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಇದು ಇಡೀ ವಹಿವಾಟು ಮುಚ್ಚಲು ಕಾರಣವಾಗಲಿದೆ.
ಸಾರಿಗೆ ಉದ್ಯಮದ ವಿವಿಧ ಸಮಸ್ಯೆಗಳ ವಿಚಾರದಲ್ಲಿ ಎಐಟಿಡಬ್ಲ್ಯುಎ ಭಾರತ ಸರ್ಕಾರಕ್ಕೆ ಪತ್ರಗಳನ್ನು ಬರೆದಿದೆ. ಮುಖ್ಯವಾಗಿ ಜಿಎಸ್ಟಿಯಡಿಯಲ್ಲಿ ಕಾರ್ಯಸಾಧುವಲ್ಲದ ಇ-ವೇ ಬಿಲ್ ಮತ್ತು ಡೀಸೆಲ್ ಬೆಲೆ ನೀತಿಯ ವಿರುದ್ಧ ಧ್ವನಿ ಎತ್ತಿದೆ. “ಜಿಎಸ್ಟಿಯಡಿ ಇ-ವೇ ಬಿಇಲ್ ನಿಯಮವಳಿಯನ್ನು ರದ್ದುಪಡಿಸುವಂತೆ ಎಐಟಿಡಬ್ಲ್ಯುಎ ಆಗ್ರಹಿಸುತ್ತದೆ.
ಏಕೆಂದರೆ ಹೊಸದಾಗಿ ಜಾರಿಗೆ ತಂದಿರುವ ಇ-ಇನ್ವೈಸ್, ತೆರಿಗೆ ಕಳ್ಳತನವನ್ನು ತಪ್ಪಿಸಲು ಸಕಾಗುತ್ತದೆ. ಫಾಸ್ಟ್ಯಾಗ್ ಸಂಪರ್ಕವನ್ನು ಇ-ಇನ್ವೈಸ್ ಜತೆಗೆ ಜೋಡಿಸುವ ಮೂಲಕ ಸರ್ಕಾರ ವಾಹನಗಳ ಚಲನೆಯ ಮೇಲೆ ನಿಗಾ ಇಡಬಹುದು. ಆವುದೇ ಸಮಯ ಆಧರಿತ ಬದ್ಧತೆ ಗುರಿಗಳ ವಿಚಾರದಲ್ಲಿ ಸರ್ಕಾರದ ದಂಡಗಳಿಗೆ ಸಾಗಾಣಿಕೆದಾರರು ಗುರಿಯಾಗಬಾರದು.
ಡೀಸೆಲ್ ಬೆಲೆಗಳನ್ನು ಉಳಿಸಬೇಕು ಹಾಗೂ ಇದಕ್ಕೆ ಅಗತ್ಯವಾದ ಕಾರ್ಯವಿಧಾನವನ್ನು ಚರ್ಚಿಸಬೇಕು. ಭವಿಷ್ಯದ ನಿಯಂತ್ರಣಕ್ಕಾಗಿ ಸಾರಿಗೆ ಉದ್ಯಮದ ಜತೆ ಚರ್ಚಿಸಿ ನೀತಿ ರೂಪಿಸಬೇಕು. ದೇಶದ ಉದ್ದಗಲಕ್ಕೂ ಏಕರೂಪದ ಡೀಸೆಲ್ ಬೆಲೆ ನಿಗದಿಪಡಿಸಬೇಕು” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಒತ್ತಾಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು