Connect with us

ದಿನದ ಸುದ್ದಿ

ಹರಿಹರ | ಶೇರಾಪುರ ವಸತಿ ಯೋಜನೆ ಪ್ರಗತಿ-ಇನ್ನಾರು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ವಿ.ಸೋಮಣ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 49.11 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ವಸತಿ ಯೋಜನೆ ಕಾಮಗಾರಿ ಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಭಾನುವಾರ ಹರಿಹರ ತಾಲ್ಲೂಕಿನ ಶೇರಾಪುರ ಪ್ರದೇಶದಲ್ಲಿ ನಡೆಯುತ್ತಿರುವ ನಿವೇಶನ ಕಾಮಗಾರಿಯನ್ನು ಸಂಸದರು, ಶಾಸಕರೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದ ಅವರು ಶೇರಾಪುರದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ಲೇಔಟ್ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು ಸಂಸದರು, ಶಾಸಕರ ಸಮ್ಮುಖದಲ್ಲಿ ಉದ್ಘಾಟಿಸಲಾಗುವುದು ಎಂದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಸುಮಾರು 49 ಎಕರೆ 11 ಗುಂಟೆ ವಿಸ್ತೀರ್ಣದಲ್ಲಿ ನಿವೇಶನ ಮತ್ತು ವಸತಿ ಸಮುಚ್ಚಯ ನಿರ್ಮಿಸಲು ಲೇಔಟ್ ಅಭಿವೃದ್ದಿಪಡಿಸಲಾಗುತ್ತಿದೆ. ಮೈಸೂರಿನ ಮೆ|| ಕೆ.ವಿ.ಸಿ.ಹೆಚ್.ಎಸ್.ಆರ್ ಎಂಬ ಗುತ್ತಿಗೆದಾರರು ಸುಮಾರು ರೂ.25.05 ಕೋಟಿ ಮೊತ್ತದಲ್ಲಿ 2021 ರ ಜನವರಿ 18 ರಿಂದ ಈ ನಿವೇಶನಗಳನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಡಿಸೆಂಬರ್ ವೇಳೆಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ.

ಈ ಪ್ರದೇಶದಲ್ಲಿ 20*30, 30*40, 60*40 ವಿಸ್ತೀರ್ಣದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವವರು, ಸ್ಥಳೀಯರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ 20*30 ರ ನಿವೇಶನಗಳನ್ನು ಅರ್ಧ ದರಕ್ಕೆ ಹಂಚಿಕೆ ಮಾಡಲಾಗುವುದು. ಸೇವಾ ಉದ್ದೇಶದಿಂದ ನಿವೇಶನ ಅಭಿವೃದ್ದಿಸಲಾಗುತ್ತಿದ್ದು 24*7 ಕುಡಿಯುವ ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು. ಇದೊಂದು ಪ್ರತಿಷ್ಟಿತ ಬಡಾವಣೆಯಾಗಲಿದ್ದು ಒಟ್ಟು 650 ನಿವೇಶನಗಳನ್ನು ಮಾಡಲಾಗುವುದು. ಆದರೆ ಈಗಾಗಲೇ 33 ಸಾವಿರ ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದರು.

ಕಾನೂನು ಚೌಕಟ್ಟಿನಲ್ಲೇ ನಿಯಮಾನುಸಾರ ಲೇಔಟ್ ಅಭಿವೃದ್ದಿಪಡಿಸಲಾಗುತ್ತಿದೆ. ಆದರೆ ಅಕ್ಕಪಕ್ಕದ ಕೆಲ ರೈತರು ತಮ್ಮ ತೋಟ ಮತ್ತು ಹೊಲಗಳಿಗೆ ಲೇಔಟ್ ಎತ್ತರವಾಗುವ ಕಾರಣ ತಮ್ಮ ಜಮೀನಿನಲ್ಲಿ ಮಳೆ ನೀರು ನಿಂತು ಶೀತಬಾಧೆ ಕಾಡಲಿದೆ. ಆದ ಕಾರಣ ಕಾಲುವೆ ನಿರ್ಮಿಸಿ ನೀರು ಹೋಗುವಂತೆ ವ್ಯವಸ್ಥೆ ಮಾಡಿಕೊಡಲು ಮನವಿ ಮಾಡಿದ್ದಾರೆ. ಆ ಪ್ರಕಾರವೇ ಅಕ್ಕಪಕ್ಕದ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಹಾಗೂ ಲೇಔಟ್ ವ್ಯಾಪ್ತಿಯಲ್ಲಿ ರಸ್ತೆ, ಪಾರ್ಕುಗಳು, ಅಂಗನವಾಡಿ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಶಾಲೆಯನ್ನೂ ತೆರೆÀಯಲು ಕ್ರಮ ವಹಿಸಲು ಸೂಚಿಸಿದ್ದೇನೆ ಎಂದ ಅವರು ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ಆವಾಸ್ ಯೋಜನೆ, ಕೊಳಚೆ ಅಭವೃದ್ದಿ ಮಂಡಳಿಯಡಿ ವಸತಿ ಯೋಜನೆಗಳಿಗೆ ಚಾಲನೆ ಸಿಕ್ಕಿದ್ದು ಕೆಲಸಗಳು ಆಗುತ್ತಿವೆ ಎಂದರು.

ನಿರ್ಬಂಧದ ಬಗ್ಗೆ ಜೂ.7 ರ ನಂತರ ನಿರ್ಧಾರ

ಜೂನ್ 7 ರವರೆಗೆ ಈಗ ಇರುವ ನಿರ್ಬಂಧಗಳು ಚಾಲ್ತಿಯಲ್ಲಿರುತ್ತವೆ. ಪ್ರಸ್ತುತ ಶೇ.10 ರಷ್ಟು ಕೋವಿಡ್ ಪ್ರಕರಣ ಕಡಿಮೆ ಆಗಿದೆ. ಇನ್ನೂ ಕಡಿಮೆ ಆಗಬೇಕು. ಮಾನ್ಯ ಮುಖ್ಯಮಂತ್ರಿಯವರು ಜೂನ್ 7 ರ ನಂತರ ನಿರ್ಬಂಧಗಳನ್ನು ಮುಂದುವರೆಸಬೇಕಾ ಅಥವಾ ಬೇಡವಾ ಎಂಬ ಬಗ್ಗೆ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುವರು. ಎಲ್ಲರೂ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಶ್ರಮಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ವಾರ ಕಾಲ ಮನೆಯಲ್ಲಿಯೇ ಇರಿ. ಪ್ರಕರಣ ಇಳಿಮುಖವಾದರೆ ನಿರ್ಬಂಧ ಸಡಿಲಿಕೆ ಆಗಬಹುದು. ಆದ ಕಾರಣ ಜನರು ಸಮಸ್ಯೆ ಅರಿತು ಸಹಕರಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಕ್ಷೇತ್ರದ ಶಾಸಕರಾದ ರಾಮಪ್ಪ, ಮಾಜಿ ಶಾಸಕ ಬಿ.ಪಿ.ಹರೀಶ್, ಕರ್ನಾಟಕ ಗೃಹ ಮಂಡಳಿಯ ಮುಖ್ಯ ಅಭಿಯಂತರ ನಂಜುಂಡಸ್ವಾಮಿ ಟಿ.ಡಿ, ಕಾರ್ಯಪಾಲಕ ಅಭಿಯಂತರ ರವೀಂದ್ರ ಎಸ್.ಎನ್, ಜ್ಯೂನಿಯರ್ ಇಂಜಿನಿಯರ್ ಪ್ರಿಯಾ.ಕೆ.ಎ, ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending