ದಿನದ ಸುದ್ದಿ
ಇಂದಿನ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ : ಹೃದಯಾಘಾತ ತಡೆಯಲು ಹೀಗೆ ಮಾಡಿ
- ಸಂಗಮೇಶ ಎನ್ ಜವಾದಿ, ಕೊಡಂಬಲ
ಭಾರತ ದೇಶದ ಇಂದಿನ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ಕಳವಳ ವಿಷಯವಾಗಿದೆ. ಹೃದಯಾಘಾತದ ಪ್ರಕರಣಗಳು ದಿನನಿತ್ಯ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಯುವಕರು ಸೇರಿದಂತೆ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳು ಕಾಣುತ್ತಿದ್ದೇವೆ.
ಇದರ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಸದೃಢ ಆರೋಗ್ಯ
ಭವಿಷ್ಯದ ಭಾರತ ನಿರ್ಮಾಣ ಮಾಡುವ ಅನಿವಾರ್ಯತೆ ಸಧ್ಯ ಎದುರಾಗಿದೆ ಎನ್ನುವುದು ಸುಳ್ಳಲ್ಲ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ.
ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ ಹಾಗೂ
18 ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ. 18 ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ ಎನ್ನುವುದಂತು ಸತ್ಯ.
ಇತ್ತೀಚಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಆರೋಗ್ಯಕ್ಕೆ ಅಪಾಯಕಾರಿಯಾಗುವ ಜೀವನ ಶೈಲಿಯ ನಡುವಳಿಕೆಗಳಿಗಳನ್ನು ಅಳುವಡಿಸಿ ಕೊಳ್ಳುತ್ತಿದ್ದಾರೆ ಎಂದರೆ ತಪ್ಪಾಗಲಾರದು. ಇಂದಿನ ದಿನಗಳಲ್ಲಿ ಅಂದರೆ, ಶೇ. 20ರಷ್ಟು ಜನರಿಗೆ ಹೃದ್ರೋಗ ವಂಶವಾಹಿಯಾಗಿದೆ ಎಂದು ಆರೋಗ್ಯ ಸಮೀಕ್ಷೆ ತಿಳಿಸಿದ್ದು, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ ಮತ್ತು ಹೆಚ್ಚಿಸುತ್ತಿದೆ.
ಸಧ್ಯ ಭಾರತದಲ್ಲಿ ಹೃದಯಾಘಾತ ಸಂಭವದ ವಯೋಮಿತಿಯು 40 ರಿಂದ 20 ವರ್ಷಕ್ಕೆ ಇಳಿದಿದೆ ಎನ್ನುವುದು ಆತಂಕದ ವಿಷಯ ಬಂಧುಗಳೆ.
ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ)ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರಪಂಚದ ನಂಬರ್ ಒನ್ ಕಿಲ್ಲರ್ ಹೃದಯಾಘಾತ.ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ಧೂಮಪಾನ, ಮದ್ಯಪಾನ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ ಸಂಭವ ಹೆಚ್ಚಲು ಪ್ರಮುಖ ಕಾರಣಾಗಿದೆ ಎನ್ನುತ್ತಿದೆ.
ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಹೃದಯಘಾತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಆ ದೇಶಗಳಲ್ಲಿನ ಜನ ಸಾಮಾನ್ಯರಲ್ಲಿ ಹೆಚ್ಚಿದ ಜಾಗೃತಿ ಹಾಗೂ ಆರಂಭದ ವರ್ಷಗಳಲ್ಲೇ ಕೈಗೊಂಡ ಮುನ್ನೆಚ್ಚರಿಕೆಗಳ ಫಲವಾಗಿ ಹಾರ್ಟ್ ಆಟ್ಯಾಕ್ ಹತೋಟಿಗೆ ಬಂದಿವೆ ಎನ್ನಬಹುದು.
ಹೃದಯಾಘಾತದ ಸಾಮಾನ್ಯ ಲಕ್ಷಣಗಳು
- ಎದೆನೋವು, ಹೃದಯ ಭಾರವಾಗುವಿಕೆ
- ಉಸಿರಾಟದಲ್ಲಿ ತೊಂದರೆ, ಕೆಮ್ಮು , ವ್ಹಿಜಿಂಗ್
- ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು
- ಹೊಟ್ಟೆ ,ಹೆಗಲು, ಕುತ್ತಿಗೆ ,ಭುಜ ,ಕೈ ಅಥವಾ ದವಡೆ ನೋವು
- ಅಸ್ವಸ್ಥತೆ, ಸುಸ್ತು
- ಕಡಿಮೆ ನಾಡಿಮಿಡಿತ
- ಅತಿಯಾಗಿ ಬೆವರುವಿಕೆ
- ವಾಂತಿ, ಅಸಿಡಿಟಿ
- ತಲೆಸುತ್ತುವಿಕೆ/ಶಿರೋಭ್ರಮಣೆ/ ಜ್ಞಾನ
ತಪ್ಪುವುದು ಇವುಗಳೆಲ್ಲ ಹೃದಯಾಘಾತ ಕಾರಣವಾಗಬಹುದು ಅಲ್ಲದೆ
ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ಕೆಲವೊಮ್ಮೆ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್ಗಳು
- ತಂಬಾಕು ಸೇವನೆ/ಧೂಮಪಾನ
- ಅಧಿಕ ಕೊಲೆಸ್ಟರಾಲ್
- ಅಧಿಕ ಎಲ್ಡಿಎಲ್ ಕೊಲೆಸ್ಟರಾಲ್
- ಕಡಿಮೆ ಎಚ್ಡಿಎಲ್ ಕೊಲೆಸ್ಟರಾಲ್
- ಅಧಿಕ ಬ್ಲಡ್ ಷುಗರ್/ಡಯಾಬಿಟಿಸ್
- ಅಧಿಕ ರಕ್ತದೊತ್ತಡ
- ಅಧಿಕ ತೂಕ
- ದೈಹಿಕ ಶ್ರಮವಿಲ್ಲದ ಜೀವನ
- ಐಷಾರಾಮಿ ಅಭ್ಯಾಸಗಳು/ಸೇಡೆಂಟರಿ ಲೈಫ್ ಸ್ಟೈಲ್
- ಉದ್ವೇಗ ಮಾನಸಿಕ, ಒತ್ತಡಗಳು ಮತ್ತು ಆಯಾಸ
- ಸಂಸ್ಕರಿಸಿದ ಆಹಾರ/ಜಂಕ್ ಫುಡ್ /ಅತಿಯಾದ ಜಿಡ್ಡು ಪದಾರ್ಥ ಸೇವನೆ
- ಪರಿಸರ / ಗಾಳಿ ಮಾಲಿನ್ಯ
- ಅನುವಂಶಿಯ ಅಂಶಗಳು
ಇವು ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳು.
ಒತ್ತಡಕ್ಕೆ ಸಂಬಂಧಿಸಿದ ಹೃದ್ರೋಗ ತಡೆಗಟ್ಟಲು ಜೀವನಶೈಲಿ ಬದಲಾವಣೆಯೂ ಅಗತ್ಯವಾಗಿದೆ ಈ ಹಿನ್ನಲೆಯಲ್ಲಿ ಕೆಲ ಪ್ರಮುಖ ವಿಚಾರಗಳು ತಮ್ಮಲ್ಲಿ ಹಂಚುತ್ತಿರುವೆ.
ಧೂಮಪಾನ ತೇಜಿಸಿ
ಧೂಮಪಾನ ದುಶ್ಚಟದಿಂದ ದೂರವಿರಿ. ಧೂಮಪಾನ ತೇಜಿಸಲು ನಿರ್ಧರಿಸಿದ ತಕ್ಷಣ ಸಿಗರೇಟ್ಗಳು, ಆ್ಯಷ್ಟ್ರೇ ಮತ್ತು ಲೈಟರ್ನನ್ನು ಹೊರಗೆ ಎಸೆಯಿರಿ.ನಿಮ್ಮ ವೈದ್ಯರೊಂದಿಗೆ ಈ ಕುರಿತು ಮುಕ್ತ ವಾಗಿ ಚರ್ಚೆ ಮಾಡಿ. ಧೂಮಪಾನ ತೇಜಿಸಿದ ನಂತರ ನಿಮ್ಮ ದೇಹದಲ್ಲಿ ಕೆಲವು ಪ್ರತಿಕ್ರಿಯೆಗಳು ಕಂಡುಬಂದರೆ ಔಷಧಿ ನೀಡಬೇಕಾಗುತ್ತದೆ.
ನಿಮಗೆ ನಿಕೋಟಿನ್ ಪರ್ಯಾಯದ ಅಗತ್ಯವಿದಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇದು ಗಮ್, ಇನ್ಹೇಲರ್ ಮೊದಲಾದ ರೂಪದಲ್ಲಿ ಬರುತ್ತದೆ. ಯಾವುದೇ ರೀತಿಯ ತಂಬಾಕು ಸೇವನೆ ಗುಟ್ಕಾ , ಪಾನ್ ಬೀಡಾ , ನಸ್ಯ (snuff) ಚಟಗಳನ್ನು ಬೀಡಬೇಕು,ಬೀಡುವುದು ಅವಶ್ಯಕತೆ ಇದೆ.
ಆರೋಗ್ಯಕರ ಆಹಾರ
ಆರೋಗ್ಯ ರಕ್ಷಣೆ ಹಾಗೂ ದೈಹಿಕ-ಮಾನಸಿಕ ಆರೋಗ್ಯ ಹೆಚ್ಚಳದಲ್ಲಿ ಉತ್ತಮ ಆಹಾರ ಮಹತ್ವದ ಪಾತ್ರ ವಹಿಸುತ್ತದೆ. ಹಸಿರು ತಾಜಾ ತರಕಾರಿ , ಹಣ್ಣು ಹಂಪಲ , ಡ್ರೈ ಫ್ರುಟ್ಸ್ ,ಪೂರ್ತಿ ಕಾಳು ಆರೋಗ್ಯಕರವಾದ ಸಂತುಲಿತ ಮತ್ತು ಪ್ರೊಟೀನ್ ಯುಕ್ತ ಪೌಷ್ಟಿಕ ಆಹಾರ ದೇಹವನ್ನು ಸಮತೋಲನದಲ್ಲಿ ಇಡುತ್ತದೆ. ಆದರೆ ಸಕಾಲದಲ್ಲಿ ಸೇವನೆ ಮತ್ತು ಸೂಕ್ತ ಪ್ರಮಾಣದಲ್ಲಿ ಆಹಾರ ಸೇವನೆ ಮುಖ್ಯ. ಆದಷ್ಟು ಬಿಳಿ ಪೂರ್ಣ ಪಾಲಿಶ್ ಮಾಡಿದ ಅಕ್ಕಿ ಅನ್ನದ ಬದಲಾಗಿ ಕುಶಲಕ್ಕಿ , ಬಾಯಿಲ್ಡ್ ಅಕ್ಕ್ಕಿ , ಅನ್ ಪಾಲಿಶ್/ಕುಟ್ಟಿದ ಅಕ್ಕಿ ಬಳಸುವುದು ಒಳ್ಳೆಯದು .
ಉತ್ತಮ ನಿದ್ರೆ
ಮನುಷ್ಯನ ಆರೋಗ್ಯ ಸ್ಥಿತಿಗೆ ಸೂಕ್ತ ನಿದ್ರೆಯೂ ಅತ್ಯಗತ್ಯ. ಸಾಕಷ್ಟು ನಿದ್ರೆಯ ಮಹತ್ವದ ಬಗ್ಗೆ ಜನರಲ್ಲಿ ಅನೇಕ ತಪ್ಪು ತಿಳುವಳಿಕೆ ಇದೆ. ಸೂಕ್ತ ಸಮಯದಲ್ಲಿ ನಿದ್ರೆ ಮಾಡುವುದು ಒಳ್ಳೆಯದು. ಬೇಗನೆ ಮಲಗಿ ಬೇಗನೆ ಏಳುವುದು ಉತ್ತಮ ಅಭ್ಯಾಸ. ಆದಾಗ್ಯೂ ಸಾಕಷ್ಟು ನಿದ್ರೆ ಇಲ್ಲದಿದ್ದರೆ ಕೆಲವೊಂದು ತೊಂದರೆಗಳಿಗೆ ಕಾರಣವಾಗುತ್ತದೆ. ಅನಿದ್ರತೆ, ತಲೆನೋವು, ನಿರುತ್ಸಾಹ, ಮಂಕು ಇತ್ಯಾದಿ.
ಕೆಲವೊಮ್ಮೆ ಇದು ಬೊಜ್ಜು, ಅಜೀರ್ಣ, ಜ್ಞಾಪಕ ಶಕ್ತಿ ನಷ್ಟದಂಥ ಗಂಭೀರ ಸಮಸ್ಯೆಗಳಿಗೂ ಎಡೆ ಮಾಡಿಕೊಡಬಹುದು ಜೊತೆಗೆ
ನಿರಂತರ ನಿಯಮಿತ ವ್ಯಾಯಾಮ
ಕನಿಷ್ಠ ದಿನಕ್ಕೆ 60 ನಿಮಿಷ ಏರೋಬಿಕ್ ಎಕ್ಸರ್ಸೈಜ್ , ವಾರಕ್ಕೆ 3-4 ಸಾವಿರ ಕ್ಯಾಲೋರಿಸ್ ದೈಹಿಕ ಶ್ರಮದ ಮುಖಾಂತರ ವ್ಯಯಿಸಬೇಕು.
ಇದಲ್ಲದೆ ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ನಡೆಯುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಾವೆಲ್ಲರೂ ನಿಯಂತ್ರಿಸಬಹುದು.ಹಾಗೂ ವೈದ್ಯರು ತಿಳಿಸುವ ಸಲಹೆ – ಸೊಚನೆಗಳನ್ನು ತಪ್ಪದೇ ಪಾಲಿಸಬೇಕು.
ಕೊನೆಯ ಮಾತು
ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಮೂಲಕ ಹೃದಯಾಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು ಅನ್ನುವುದು ನಾವೆಲ್ಲರೂ ಮರೆಯುವಂತಿಲ್ಲ.
ನಮ್ಮ ದೇಶದಲ್ಲಿ ತುರ್ತಾಗಿ ಈ ಕುರಿತು ಜನ ಜಾಗೃತಿ ಮತ್ತು ಅರಿವಿನ ಕಾರ್ಯಕ್ರಮಗಳು ಅಗತ್ಯವಿದೆ. ಯಾಕೆಂದರೆ ಹಣ ಸಂಪಾದನೆಯು ಗರಿಷ್ಠ ಮಟ್ಟದಲ್ಲಿದ್ದಾಗ ಬಹುತೇಕ ಮಂದಿ ಹೃದಯಘಾತಕ್ಕೆ ತುತ್ತಾಗುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅದಕ್ಕಾಗಿ ನೆಮ್ಮದಿಯ ಜೀವನ,ಶ್ರಮಜೀವಿ ಜೀವನವನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243