Connect with us

ದಿನದ ಸುದ್ದಿ

ಹಿಮೋಫಿಲಿಯಾ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರ ಬಂದಿದ್ದೇನೆ : ನಟ ಚೇತನ್

Published

on

ಸುದ್ದಿದಿನ,ದಾವಣಗೆರೆ: ಹಿಮೋಫಿಲಿಯಾಕ್ಕೆ ತುತ್ತಾಗಿರುವ ಮಕ್ಕಳಲ್ಲಿ  ಆತ್ಮವಿಶ್ವಾಸ ತುಂಬುವುದಕ್ಕೋಸ್ಕರವೆಂದೇ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಟ ಚೇತನ್‌ ಹೇಳಿದರು.

ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆ ಅಂಗವಾಗಿ ನಡೆದ ಸಮಾರಂಭವನ್ನು ಹಿಮೋಫಿಲಿಯಾ ಮಕ್ಕಳ ಜೊತೆ ಬಲೂನ್‌ ಹಾರಿ ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಸಿನಿಮಾ ರಂಗದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಹಿಮೋಫಿಲಿಯಾ ಜತೆ ದೇವದಾಸಿ ಪದ್ದತಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರಲ್ಲಿಯೂ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇನೆ. ಇನ್ನು ಸರಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಹಿಮೋಫಿಲಿಯಾದ ರೋಗಿಗಳ ಬಗ್ಗೆ ಗಮನ ಹರಿಸಿ ಸಹಾಯ ಮಾಡುವುದರ ಜತೆ ಈ ರೋಗಿಗಳ ಬಗ್ಗೆ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.

ಔಷಧಿ ತೆಗೆದುಕೋಳ್ಳಲು ಜನಸಾಮಾನ್ಯರಿಗೆ ಬಲುಕಷ್ಟ

ವಿಜ್ಞಾನ ಮುಂದುವರೆದಿದ್ದು, ಈ ಕಾಯಿಲೆಗೆ ಔಷಧಿ ಕಂಡುಹಿಡಿಯಲಾಗಿದೆ. ಆದರೆ ಈ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿದೆ. ಆದ್ದರಿಂದ ಮಧ್ಯಮ ಮತ್ತು ಬಡಕುಟುಂಬದ ಜನರು ಇಷ್ಟು ಹಣ ಹೊಂದಿಸುವುದು ಕಷ್ಟವಾಗಿದೆ. ಮಾನವೀಯತೆ ನೆಲೆಯಲ್ಲಿ ನಿಂತು ನಾವು ರೋಗಿಗಳನ್ನು ನೋಡಬೇಕಿದೆ. ಕಷ್ಟದಲ್ಲಿರುವವರ ಪರವಾಗಿ ಎಲ್ಲರು ಸಹಾಯಹಸ್ತ ಚಾಚಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಸರಕಾರಗಳು ಕೂಡ ಇಂಥಹ ಸಾಮಾಜಿಕ ಸೇವಾ ಕಾರ್ಯವನ್ನು ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದರು. ಇನ್ನು ಹಿಮೋಫಿಲಿಯಾ ಬಾಧಿತರೊಂದಿಗೆ ಕೆಲ ಸಮಯ ವಿನಿಯೋಗಿಸಿದ ನಟ ಚೇತನ್‌ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.

ಖ್ಯಾತ ವೈದ್ಯ ಸುರೇಶ್‌ ಹನಗವಾಡಿ ಮಾತನಾಡಿ, ಏ.17ಕ್ಕೆ ವಿಶ್ವ ಹಿಮೊಫಿಲಿಯಾ ದಿನಾಚರಣೆ ಇದ್ದು, ಇದರ ನಿಮಿತ್ತ ಸಾರ್ವಜನಿಕರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಮೊಫಿಲಿಯಾ ಫೆಡರೇಷನ್‌ನ್ನು  1963ರಲ್ಲಿ ಕೆನಡಾ ದೇಶದ ಮಾಂಟ್ರಿಯಲ್‌ನಲ್ಲಿ  ವ್ಯಾಪಾರಿ ಫ್ರಾಂಕ್‌ ಶಾನ್‌ ಬೆಲ್‌ ಹುಟ್ಟು ಹಾಕಿದ್ದು, ಆ ನಿಮಿತ್ತ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಈ ಕಾಯಿಲೆ 10,000 ಜನರಲ್ಲಿ ಒಬ್ಬರಿಗೆ ಬರಲಿದ್ದು, ರಕ್ತದಲ್ಲಿ ಪ್ರೋಟಿನ್‌ಗಳು ಕಡಿಮೆಯಾದಾಗ ರಕ್ತಸ್ರಾವ ಆಗುತ್ತದೆ. ಈ ಕಾಯಿಲೆ ಜೀವನ ಪರ್ಯಂತ ಇರುತ್ತದೆ. ಇಂಜೆಕ್ಷನ್‌ ಮೂಲಕ ಪ್ರೋಟಿನ್‌ಗಳನ್ನು ಕೊಡುವ ಮುಖಾಂತರ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ಆದರೆ ಈ ಇಂಜೆಕ್ಷನ್‌ ಹೆಚ್ಚು ಬೆಲೆವುಳ್ಳದಾಗಿದ್ದು, ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಸಿಗುತ್ತದೆ.

ದಾವಣಗೆರೆ ಜಿಲ್ಲೆಯಲ್ಲಿ 126 ರೋಗಿಗಳು

27ವರ್ಷದಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಈ ರೋಗಕ್ಕೆ ತುತ್ತಾಗಿದ್ದಾರೆ. ದಾವಣಗೆರೆಯಲ್ಲಿ 126 ಹಿಮೋಫಿಲಿಯಾ ರೋಗಿಗಳಿದ್ದು, ರಾಜ್ಯದಲ್ಲಿ 6,000 ರೋಗಿಗಳಿದ್ದಾರೆ. ಅದರಲ್ಲಿ 2,000 ರೋಗಿಗಳು ಮಾತ್ರ ನೋಂದಣಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶ, ಸ್ಲಂ ಸೇರಿದಂತೆ ಇತರೆಡೆ ಈ ಬಗ್ಗೆ ಜಾಗೃತಿ ಇಲ್ಲದ ಕಾರಣ ಇನ್ನೂ 4,000 ರೋಗಿಗಳು ನೋಂದಣಿಯಾಗಿಲ್ಲ.

ಲೋಕಸಭೆಯಲ್ಲಿ ಅಂಗೀಕಾರ: ಇನ್ನು ಶಾಶ್ವತ ವಿಕಲಚೇತನರ ಪಟ್ಟಿಗೆ ಇವರನ್ನು ಸೇರಿಸಲು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಹಿಂದೆ ಸರಕಾರ ಹಿಮೋಫಿಲಿಯಾ ಬಂದವರಿಗೆ ಕೀಲು, ಮೂಳೆ ನೋವು ಬಂದ ನಂತರ ಅವರನ್ನು ವಿಕಲಚೇತನರ ಸರ್ಟೀಫಿಕೇಟ್‌ ಕೊಡಲಾಗುತ್ತಿತ್ತು. ಆದರೆ ಈಗ ಆ್ಯಕ್ಟ್ನಲ್ಲಿ ಸೇರಿಸುವುದರಿಂದ ಅವರಿಗೆ ವಿಕಲಚೇತನರ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಸರಕಾರ, ನಾನಾ ವೈದ್ಯರ ತಂಡ ಈ ರೋಗಿಗಳಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಇನ್ನೂ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ನಮ್ಮ ಸಂಸ್ಥೆಗೆ ಮಹಾಪೋಷಕರಾಗಿ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಹಾಡುಗಳನ್ನು ಹೇಳುತ್ತಾರೆ. ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ  ದಾನಿಗಳಾದ ಕಿರುವಾಡಿ ಗಿರಿಜಮ್ಮ, ಸೊಸೈಟಿ ಅಧ್ಯಕ್ಷ  ಡಾ. ಸುರೇಶ್‌ ಹನಗವಾಡಿ, ಹೈಕೋರ್ಟ್‌ವಕೀಲ ಅನಂತ ನಾಯ್ಕ, ಮೀರಾ ಹನಗವಾಡಿ ಸೇರಿದಂತೆ ಇತರರು ಇದ್ದರು.

ರಷ್ಯಾ ದೊರೆಗೆ ಮತ್ತು ಕ್ಲಿಯೋಪಾತ್ರಗೂ ಇತ್ತು ಹಿಮೋಫಿಲಿಯಾ

ಹಿಮೋಫಿಲಿಯಾ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಹೆಚ್ಚು ಆಸಕ್ತಿ ಇತ್ತು. ಈ ಕಾಯಿಲೆ ಬಗ್ಗೆ ಇತಿಹಾಸದಲ್ಲಿಯೇ ದಾಖಲೆಗಳಿವೆ. ರಷ್ಯಾ ದೊರೆ ನಿಕೋಸಲ್‌ನ ಎರಡನೇ ಮಗನಿಗೆ ಈ ಖಾಯಿಲೆ ಇತ್ತು. ಈ ಸಂದರ್ಭದಲ್ಲಿ ಆ ರಾಜಮನೆತನದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದರ ನಂತರ ನಡೆದ ಸಾಮಾಜಿಕ ಬೆವಳಣಿಗೆಗಳು ನನ್ನ ಕುತೂಹಲಕ್ಕೆ ಕಾರಣವಾಯಿತು ಎಂದು ನಟ ಚೇತನ ಹೇಳಿದರು.

ಸುದ್ದಿಗಾಗಿ ಸುದ್ದಿದಿನ.ಕಾಂ 9986715401

ದಿನದ ಸುದ್ದಿ

‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್‌ ನಟನೆ

Published

on

ಸುದ್ದಿದಿನ ಡೆಸ್ಕ್ : ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.

ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ ಅವರ ಎಂಟ್ರಿಯೂ ಆಗಿದೆ.

ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ‍್‍ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.

ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.

ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ ಡಿಗ್ರಿ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ

Published

on

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡುವುದರ ಮೂಲಕ ಬಸವ ಜಯಂತಿಯನ್ನು ಇಂದು ಬೆಳಗ್ಗೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿಜಿ ಅಮೃತೇಶ್ವರ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್‌ ನಟನೆ

ಸುದ್ದಿದಿನ ಡೆಸ್ಕ್ : ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್. ಈಗಾಗಲೇ ಅಕ್ಷಯ್‌ ಕುಮಾರ್‌,...

ದಿನದ ಸುದ್ದಿ13 hours ago

ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ

ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ...

ದಿನದ ಸುದ್ದಿ18 hours ago

ಚನ್ನಗಿರಿ ಡಿಗ್ರಿ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡುವುದರ ಮೂಲಕ ಬಸವ...

ದಿನದ ಸುದ್ದಿ2 days ago

‘ಪ್ರಧಾನಿ ಮೋದಿ ಹೇಳಿದ ಸುಳ್ಳುಗಳ’ ಪಟ್ಟಿ ನೀಡಿದ ಸಿಎಂ ಸಿದ್ದರಾಮಯ್ಯ ; ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಸುದ್ದಿದಿನ ಡೆಸ್ಕ್ : ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು...

ದಿನದ ಸುದ್ದಿ3 days ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ, ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳು...

ದಿನದ ಸುದ್ದಿ3 days ago

ಲೋಕಸಭಾ ಚುನಾವಣೆ | ದಾವಣಗೆರೆ ಕ್ಷೇತ್ರದಲ್ಲಿ ಶೇ 76.98 ಮತದಾನ ; ಮಾಯಕೊಂಡ ಗರಿಷ್ಠ ಸಂಖ್ಯೆಯಲ್ಲಿ ಹಕ್ಕು ಚಲಾವಣೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸುದ್ದಿದಿನ,ದಾವಣಗೆರೆ : 18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆದ ಮತದಾನದಲ್ಲಿ ಶೇ 76.98 ರಷ್ಟು ಮತದಾನವಾಗಿದ್ದು ಈವರೆಗೂ...

ದಿನದ ಸುದ್ದಿ3 days ago

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಉತ್ತಮ ಮತದಾನ; ಚಿಕ್ಕೋಡಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹಕ್ಕು ಚಲಾವಣೆ

ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ನಿನ್ನೆ ಸುಗಮ ಮತದಾನವಾಗಿದ್ದು, ಶೇಕಡ 70.41ರಷ್ಟು ಮತದಾನವಾಗಿದೆ. ಬಾಗಲಕೋಟೆಯಲ್ಲಿ ಶೇಕಡ 70.10 ರಷ್ಟು, ಬೆಳಗಾವಿಯಲ್ಲಿ ಶೇಕಡ 71.00, ಬಳ್ಳಾರಿ 72.35, ಬೀದರ್...

ದಿನದ ಸುದ್ದಿ3 days ago

ದೇಶದ 93 ಲೋಕಸಭಾ ಕ್ಷೇತ್ರಗಳಿಗೆ ಸುಗಮ ಚುನಾವಣೆ; ಒಟ್ಟಾರೆ ಶೇಕಡ 64.58ರಷ್ಟು ಮತದಾನ

ಸುದ್ದಿದಿನ ಡೆಸ್ಕ್ : ದೇಶದ 93 ಲೋಕಸಭಾ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ. ಕರ್ನಾಟಕದ 14, ಗುಜರಾತ್‌ನ 25, ಮಹಾರಾಷ್ಟ್ರ 11, ಉತ್ತರಪ್ರದೇಶ 10, ಮಧ್ಯಪ್ರದೇಶ 9,...

ದಿನದ ಸುದ್ದಿ3 days ago

ದಾವಣಗೆರೆ | ಲೋಕಸಭಾ ಚುನಾವಣೆ ; ಅಂದಾಜು ಶೇ 77 ರಷ್ಟು ಮತದಾನ

ಸುದ್ದಿದಿನ, ದಾವಣಗೆರೆ : ಇಂದು ನಡೆದ ಎರಡನೇ ಹಂತದ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಶೇ 77 ರಷ್ಟು ಮತದಾನ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ....

ದಿನದ ಸುದ್ದಿ4 days ago

ಮತಗಟ್ಟೆ ಸಿಬ್ಬಂದಿಗಳಿಗೆ ಹಬ್ಬದೂಟ

ಸುದ್ದಿದಿನ,ದಾವಣಗೆರೆ : ಮತದಾನ ಸಿಬ್ಬಂದಿಗೆ ಹಬ್ಬದೂಟ, ಹೋಳಿಗೆ, ಕರಿಗಡಬು ಊಟವನ್ನು ಮತಗಟ್ಟೆ ಸಿಬ್ಬಂದಿಗಳಿಗೆ ಸಿದ್ದಪಡಿಸಲಾಗಿದೆ. ಮತ್ತು ಮತಗಟ್ಟೆಗಳಲ್ಲಿ ನೀರಿನ ಕೊರತೆಯಾಗಬಾರದು, ಮತದಾರರಿಗೂ ಕುಡಿಯುವ ನೀರು ಸೇರಿದಂತೆ ನೆರಳು...

Trending